Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಿಜೆಪಿಗೆ ಜೈ ಕಾಂಗ್ರೆಸ್ ಗೆ ಗುಡ್ ಬೈ ಎಂದ ಶೆಟ್ಟರ್ | ದೆಹಲಿಯಲ್ಲಿ ಪಕ್ಷ ಸೇರ್ಪಡೆ | ಕಾಂಗ್ರೆಸ್ಗೆ ಶಾಕ್! ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಯ ಆಪರೇಷನ್ ಸಕ್ಸಸ್ ಆಗಿದೆ. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಮಾತೃ ಪಕ್ಷ ಭಾರತೀಯ ಜನತಾ ಪಕ್ಷಕ್ಕೆ ವಾಪಸಾಗಿದ್ದಾರೆ.ಗುರುವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರನಾಯಕರನ್ನು ಭೇಟಿ ಮಾಡಿದ ನಂತರ ಬಿಜೆಪಿಗೆ ಮತ್ತೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ ಶೆಟ್ಟರ್ ಮನವೊಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್ ಪಕ್ಷ ಸೇರ್ಪಡೆಗೂ ಮುನ್ನ ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್ಸಿ…
ವಿಜಯಪುರ: ಇಂಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಡೆಸಿರುವ ಭ್ರಷ್ಟಾಚಾರದ ಕುರಿತು ತನಿಖೆ ಕೈಗೊಂಡು ಅವರನ್ನು ಅಮಾನತ್ತುಗೊಳಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಉಪ ನಿರ್ದೇಶಕರು, ಸಾ.ಶಿ.ಇ. ವಿಜಯಪುರ ಮುಖಾಂತರ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಧಾರವಾಡ ಇವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಮಹೇಶ ನಾಯಕ ಮಾತನಾಡಿ, ಡಿ.ಬಿ.ಇ. ಪ್ರೌಢಶಾಲಾ ನಿಂಬಾಳ ಎಲ್.ಟಿಗೆ ಸಂಬಂಧಿಸಿದಂತೆ ಅಕ್ರಮವಾಗಿ ನಡೆಯುತ್ತಿರುವ ಶಾಲೆಗೆ ಶಿಸ್ತು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು. ಅದಕ್ಕೆ ತಾವು ಇಂಡಿ ಕ್ಷೇತ್ರ ಶಿಕ್ಷಣ ಅಧಿಕಾರಿಗಳಿಗೆ ವಿಚಾರಣೆ ನಡೆಸಿ ಶಿಸ್ತಿನ ಕ್ರಮ ಕೈಗೊಳ್ಳಲು ಆದಶಿಸಿದ್ದಿರಿ. ಆದರೆ ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ತನಿಖೆ ನಡೆಸಿ, ಸ್ವಂತ ಜಾಗವಿಲ್ಲದ ಸರ್ಕಾರದ ಜಾಗದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಸಂಸ್ಥೆ ಎಂದು ಸ್ಪಷ್ಟವಾಗಿ ಕಂಡು ಬಂದ ಕಾರಣ ಅವರ ವೇತನ ಅನುದಾನವನ್ನು ಸಹ ಎರಡು ತಿಂಗಳು ತಡೆ ಹಿಡಿಯಲಾಗಿತ್ತು. ಆದರೆ ಈಗ ವೇತನ ಅನುದಾನ ಬಿಡುಗಡೆ ಮಾಡಿರುವದರಿಂದ ಇಲ್ಲಿ ಸ್ಪಷ್ಟವಾಗಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಕಂಡುಬರುತ್ತದೆ.ಆದ್ದರಿಂದ ಕೂಡಲೇ…
ಮುದ್ದೇಬಿಹಾಳ: ಅರ್ಹತೆ, ಧರ್ಮ, ಲಿಂಗ, ಜಾತಿ, ಜನಾಂಗ, ಶ್ರೀಮಂತ-ಬಡವ ಈ ಯಾವುದೇ ತಾರತಮ್ಯವಿಲ್ಲದೇ ಮತದಾನದ ಹಕ್ಕನ್ನು ಜನತೆಗೆ ಸಮಾನವಾಗಿ ನೀಡಲಾಗಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯ ಈಡೇರಬೇಕಾದರೆ ಮತದಾನದ ಸದ್ಬಳಕೆ ಮಾಡಿಕೊಳ್ಳುವದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ ಎಂದು ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಳಗಿಡದ ಹೇಳಿದರು.ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಶಾ.ಎಸ್.ಪಿ ಓಸ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ತಾಲೂಕು ಕನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಾ.ಎಸ್.ಪಿ.ಓಸ್ವಾಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಇತರ ಎಲ್ಲ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿದ ತಹಶೀಲ್ದಾರ ಬಲರಾಮ ಕಟ್ಟಿಮನಿ,ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಬಿ.ಎಸ್.ಕೊರಬು ವಿಶೇಷ ಉಪನ್ಯಾಸ ನೀಡಿದರು.ಸಹಾಯಕ ಸರಕಾರಿ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರಕಾರಿ ವಕೀಲ ಎಚ್.ಎಲ್.ಸರೂರ, ತಾಲೂಕು ಪಂಚಾಯತ ನ ಸಹಾಯಕ…
ಮುದ್ದೇಬಿಹಾಳ: ಕಲ್ಬುರ್ಗಿ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗೆ ಅಪಮಾನ ಮಾಡಿದವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು, ತಾಲೂಕಿನ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರನ್ನು ವಜಾಗೊಳಿಸಿ ಅವರ ಮೇಲೆ ಪ್ರಕರಣ ದಾಖಲಿಸಬೇಕು ಮತ್ತು ಮಕ್ಕಳ ಸಂಖ್ಯೆ ಹಾಗೂ ಸ್ವಂತ ಕಟ್ಟಡ ಇಲ್ಲದೇ ನಡೆಯುತ್ತಿರುವ ಅನುದಾನಿತ ಬನಶಂಕರಿ ಹಿರಿಯ ಪ್ರಾಥಮಿಕ ಶಾಲೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳು ಗುರುವಾರ ತಹಶೀಲ್ದಾರ ಕಚೇರಿಯವರೆಗೆ ತಮಟೆ ಬಾರಿಸುವ ಮೂಲಕ ಪ್ರತಿಭಟಿಸುತ್ತ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ತಹಶೀಲ್ದಾರ ಕಚೇರಿಯ ಎದುರು ಹೋರಾಟಗಾರರಾದ ಹರೀಶ ನಾಟೆಕಾರ, ಬಸವರಾಜ ಸಿದ್ದಾಪೂರ ಮತ್ತು ರವಿ ನಾಯಕ ಮಾತನಾಡಿ, ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡಿದವರನ್ನು ಗಲ್ಲಿಗೇರಿಸುವಂತೆ ಮತ್ತು ಪಿಎಲ್ಡಿ ಬ್ಯಾಂಕ್ ನ ವ್ಯವಹಾರಗಳ ತನಿಖೆಗಾಗಿ ಮತ್ತು ಬಾಂಕ್ ನ ಅಧ್ಯಕ್ಷರ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಧರಣಿ ನಡೆಸಲಾಗಿತ್ತು. ಬ್ಯಾಂಕ್ ನ ಮೇಲಾಧಿಕಾರಿಗಳು ವಿಜಯಪುರದಿಂದ ಬಂದು ಜ.೨೦ ರ ಒಳಗಾಗಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಗಡುವಿನ ಮೇಲೆ ಇವತ್ತಿಗೆ ೫…
ವಿಜಯಪುರ: ದೇಶದ ಅಭ್ಯುದಯಕ್ಕೆ ಎಲ್ಲ ಅರ್ಹ ಮತದಾರರು ಮತದಾನದ ಹಕ್ಕನ್ನು ಚಲಾಯಿಸಬೇಕು. ಸಂವಿಧಾನ ಕಲ್ಪಿಸಿದ ಮತದಾನದಿಂದ ಯಾರೂ ವಂಚಿತರಾಗದೇ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ್ ಕರೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಅಭಿವೃದ್ದಿಯಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ೧೮ ವರ್ಷ ಪೂರೈಸಿದ ಮತದಾರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿದ ಪ್ರತಿಯೊಬ್ಬರು ಮತದಾನದಿಂದ ದೂರ ಉಳಿಯದೇ ಮತ ಚಲಾಯಿಸಬೇಕು. ನಗರ ಪ್ರದೇಶದ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚೆಚ್ಚು ಭಾಗವಹಿಸಬೇಕು. ಮತದಾರರಿಗೆ ಅರಿವು ಮೂಡಿಸುವ ಉದ್ದೇಶದಿಂದ ಮತದಾರರ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತಿದ್ದು, ಸ್ವೀಪ್ ಸಮಿತಿ ವತಿಯಿಂದ ಮತದಾನದ ಮಹತ್ವ ಸಾರುವ…
ಕಲಕೇರಿ: ಭಾರತ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ೧೮ ವರ್ಷ ಪೂರೈಸಿದ ಎಲ್ಲರೂ ಇದರಲ್ಲಿ ಭಾಗಿಯಾಗಬೇಕು ಎಂದು ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಬಸವಂತಪ್ಪ ಚನಗೊಂಡ ಕರೆ ನೀಡಿದರು.ಕಲಕೇರಿ ಗ್ರಾಮದ ಎಸ್ಎಂವಿವಿ ಸಂಘದ ಬಸವೇಶ್ವರ ಸಂಯುಕ್ತ ಪಪೂ ಕಾಲೇಜು ಹಾಗೂ ವಿವಿದ ಅಂಗಸಂಸ್ಥೆಗಳ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಭೋದಿಸಿ ಅವರು ಮಾತನಾಡಿದರು.ಪ್ರಾಚಾರ್ಯ ಸಿ ಎಸ್ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಗುರು ಜಗದೀಶ ಗುಮಶೇಟ್ಟಿ, ಇ ಎಎಲ್ ಸಿ ಕ್ಲಬ್ ಚಂಚಾಲಕ ಬಸವರಾಜ್ ಕುಂಬಾರ, ಎಸ್ ಪಿ ರಾಣಗಟ್ಟಿ ಮಾತನಾಡಿರು.ಈ ಸಂದರ್ಭದಲ್ಲಿ ಉಪನ್ಯಾಸಕರಾದ ಡಾ. ಜಿ ಜಿ ಮೇಡೆದಾರ, ಎಸ್ ಎಸ್ ಕಲಶೇಟ್ಟಿ, ರವಿಕುಮಾರ ಗುಮಶೇಟ್ಟಿ, ಸುರೇಶ ಬಿರಾದಾರ, ಜಗದೀಶ ಕಾದಳ್ಳಿ, ರವಿ ಕುಲಕರ್ಣಿ, ಶಿವಾನಂದ ಹರಿಜನ್, ವಿಶ್ವನಾಥ ಸಿಂದಗಿ ಸೇರಿದಂತೆ ಇತರರು ಇದ್ದರು.
ಕಲಕೇರಿ: ಟೈಲರ್ಗಳಿಗೆ ಕ್ಷೇಮನಿಧಿ, ಟೈಲರ್ ಮಕ್ಕಳಿಗೆ ವಿದ್ಯಾರ್ಥಿವೇತನ, ಹೊಲಿಗೆ ಕೆಲಸಗಾರರಿಗೆ ಮನೆ, ಯಂತ್ರ ಖರೀದಿಸಲು ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ, ಆರೋಗ್ಯ ವಿಮೆ, ವಿವಾಹ ಧನ ಸಹಾಯ ಮತ್ತು ಹೆರಿಗೆ ಭತ್ಯೆ , ಪಿಂಚಣಿ ಸೌಲಭ್ಯ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಎಲ್ಲಾ ಟೈಲರ್ಗಳ ಪರವಾಗಿ ಸರಕಾರದ ಮೇಲೆ ಒತ್ತಡ ಹೇರಲು ರಾಜ್ಯದ ಮೂಲೆ ಮೂಲೆಗಳಿಂದ ಪದಾಧಿಕಾರಿಗಳು ಬೆಂಗಳೂರು ಹೊಗುತ್ತಿರುವುದಾಗಿ ಸಂಘದ ಗೌರವ ಅಧ್ಯಕ್ಷ ಶಾಂತಯ್ಯ ಹಿರೇಮಠ ಹೇಳಿದರು.ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ವಲಯ ಸಮಿತಿ ಕಲಕೇರಿ ವತಿಯಿಂದ ಬೆಂಗಳೂರಿನಲ್ಲಿ ಜ.೩೦ ಮಂಗಳವಾರದಂದು ಶಾಲಿನಿ ಮೈದಾನದಲ್ಲಿ ನಡೆಯುವ ಕೆಎಸ್ಟಿಎ ೨೫ನೇ ವರ್ಷದ ರಜತ ಮಹೋತ್ಸವ ಕುರಿತ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರುಈ ವೇಳೆ ಕಾರ್ಯದರ್ಶಿ ನಬಿಲಾಲ ನಾಯ್ಕೋಡಿ, ಉಪಾಧ್ಯಕ್ಷರಾದ ಮನೋಹರ ಪತ್ತಾರ, ಸದಸ್ಯರಾದ ಸುಜಾತಾ ಅವಟಿ, ಮಡಿವಾಳಪ್ಪ ಜಂಬಗಿ, ಶೋಭಾ ಗದ್ದಗಿಮಠ, ಪೂಜಾ ಬಡಿಗೇರ, ವಿಜಯಲಕ್ಷ್ಮಿ ಬಡಿಗೇರ, ಸಾವಿತ್ರಿ ಬಡಿಗೇರ ಇದ್ದರು
ಕಲಕೇರಿ: ಶಿಶು ಅಭಿವೃದ್ಧಿ ಯೋಜನೆ ಸಿಂದಗಿ ವ್ಯಾಪ್ತಿಯಲ್ಲಿ ಬರುವ ಅಸ್ಕಿ ಗ್ರಾಮ ಪಂಚಾಯತಿಯ ಆವರಣದಲ್ಲಿ ತಾಲೂಕು ಮಟ್ಟದ ಬೇಟಿ ಬಚಾವೋ, ಬೇಟಿ ಪಡಾವೋ ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಸಮೀಪದ ಅಸ್ಕಿ ಗ್ರಾಮದಲ್ಲಿ ಹೆಣ್ಣು ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳಾದ ಹೆಣ್ಣು ಭ್ರೂಣ ಹತ್ಯೆ ನಿಷೇಧ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಕೌಟುಂಬಿಕ ದೌರ್ಜನ್ಯ ನಿಷೇಧ ಕಾಯ್ದೆ, ಕುರಿತು ಕಾರ್ಯಕ್ರಮ ಉದ್ಘಾಟಿಸಿ ಶಂಭುಲಿಂಗ ಎನ್ ಹಿರೇಮಠ ಅವರು ಮಾತನಾಡಿದರು.ಕಾರ್ಯಕ್ರಮದ ಅಂಗವಾಗಿ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ, ನಿಬಂಧ ಸ್ಪರ್ದೆ, ಲಿಂಬು ಸ್ಪೂನ್, ಹಗ್ಗದಾಟ, ಮ್ಯೂಜಿಕಲ್ ಚೇರ್, ಜಾನಪದ ಗೀತೆ, ದೇಶ ಭಕ್ತಿಗೀತೆ ಮುಂತಾದ ಸ್ಪರ್ದೆಗಳನ್ನು ಆಯೋಜಿಸಿ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು ಹಾಗೂ ಅಂಗನವಾಡಿಯ ಹೆಣ್ಣು ಮಕ್ಕಳಿಗೆ ವೇಷ ಭೂಷಣ ತೊಡಿಸಲಾಯಿತು, ಹೆಣ್ಣುಮಕ್ಕಳಿಗೆ ಸುಕನ್ಯಾ ಸಮೃದ್ಧಿ ಪಾಸ್ ಬುಕ್ ವಿತರಣೆ, ಹೆಣ್ಣು ಮಗುವಾದ ತನು, ಆಲಿಶಾ ರವರ…
ರಾಜಕೀಯ ಮುಖಂಡರ ಇಚ್ಚಾಶಕ್ತಿಯ ಕೊರತೆ | ಪಾಳುಬಿದ್ದ ಗೋದಾಮಿನಲ್ಲಿ ಕಾರ್ಯನಿರ್ವಹಣೆ *- ಬಂದೇನವಾಜ್.ಐ.ನಾಲತವಾಡ* ಕೆಂಭಾವಿ: ಸರಕಾರ ಜನಸಾಮಾನ್ಯರ ಒಳಿತಿಗಾಗಿ ತನ್ನ ಅನುದಾನದಿಂದ ಸಾಕಷ್ಟು ಪ್ರಮಾಣದಲ್ಲಿ ಯೋಜನೆಗಳನ್ನು ಬಿಡುಗಡೆ ಮಾಡುತ್ತದೆ. ಆದರೆ ರಾಜಕೀಯ ಮುಖಂಡರ ಇಚ್ಚಾಶಕ್ತಿಯ ಕೊರತೆಯಿಂದ ಕೆಲವು ಯೋಜನೆಗಳು ಹಳ್ಳ ಹಿಡಿದಿವೆ,ಅದರಂತೆಯೇ ಪಟ್ಟಣದಲ್ಲಿ ಶಾಸಕರ ಇಚ್ಚಾಶಯದಂತೆ ಸುಮಾರು 53 ಲಕ್ಷ ರೂ. ವೆಚ್ಚದಲ್ಲಿ ನೂತನ ರೈತ ಸಂಪರ್ಕ ಕೇಂದ್ರದ ಕಟ್ಟಡ ಕಾಮಗಾರಿ ಮುಗಿದು ವರ್ಷ ಕಳೆದರೂ ಇನ್ನೂ ಉದ್ಘಾಟನೆಯ ಭಾಗ್ಯ ಕಾಣದಂತಾಗಿದೆ. ಇದು ಕ್ಷೇತ್ರದ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ.ಕಳೆದ ಹಲವು ವರ್ಷಗಳಿಂದ ಪೊಲೀಸ್ ಠಾಣೆ ಹಿಂಬದಿಯ ಪಾಳುಬಿದ್ದ ಕಾಡಾ ವ್ಯಾಪ್ತಿಯ ಗೋದಾಮಿನಲ್ಲಿ ರೈತ ಸಂಪರ್ಕ ಕೇಂದ್ರ ಸಧ್ಯ ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಹೆಚ್ಚಿನ ಅನುಕೂಲ ರೈತರಿಗೆ ಆಗಲಿ ಎಂಬ ಕಾರಣದಿಂದ ಸರ್ಕಾರ ಈ ಹೊಸ ರೈತ ಸಂಪರ್ಕ ಕೇಂದ್ರ ನಿರ್ಮಿಸಿದೆ. ಆದರೆ ಈವರೆಗೂ ಈ ಕೇಂದ್ರ ಉದ್ಘಾಟನೆಗೊಳ್ಳದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಸರ್ಕಾರದಿಂದ ಬಂದ ಯೋಜನೆಗಳಾದ ಗೊಬ್ಬರ ದಾಸ್ತಾನು ಮಾಡಲು ಮತ್ತು ಕಚೇರಿ…
ದೇವರಹಿಪ್ಪರಗಿ: ಕಲಬುರಗಿ ನಗರದ ಕೋಟನೂರ ಲುಂಬಿಣಿ ಉದ್ಯಾನದಲ್ಲಿ ಡಾ.ಅಂಬೇಡ್ಕರರವರ ಪ್ರತಿಮೆಗೆ ಅವಮಾನಗೊಳಿಸಿದ ಘಟನೆಯನ್ನು ಖಂಡಿಸಿ ಬಂಧಿತ ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮ ಕೈಕೊಳ್ಳಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮೀತಿಯ(ನಾಗಾವಾರ ಬಣ) ಪದಾಧಿಕಾರಿಗಳು ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಚೇರಿ ಆವರಣಕ್ಕೆ ಗುರುವಾರ ಆಗಮಿಸಿದ ದಲಿತ ಸಂಘರ್ಷ ಸಮೀತಿಯ ಸದಸ್ಯರು ಪ್ರತಿಭಟನೆ ಕೈಗೊಂಡರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ದ.ಸಂಸ ತಾಲ್ಲೂಕು ಸಂಚಾಲಕ ಪ್ರಕಾಶ ಗುಡಿಮನಿ ಮಾತನಾಡಿ, ಸಂವಿಧಾನಶಿಲ್ಪಿ ಅಂಬೇಡ್ಕರ ಹಾಗೂ ದೇಶದ ರಾಷ್ಟ್ರೀಯ ನಾಯಕರ ಪ್ರತಿಮೆಗಳ ಮೇಲೆ ಮೇಲಿಂದ ಮೇಲೆ ಅವಮಾನ ಮಾಡಲಾಗುತ್ತಿದೆ. ಇದರಿಂದ ಅವರ ಅನುಯಾಯಿಗಳಿಗೆ ನೋವು ಉಂಟಾಗುತ್ತಿದ್ದು, ಇದರಿಂದಾಗಿ ದೇಶದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗುತ್ತಿದೆ. ಕೂಡಲೇ ಈ ಕೃತ್ಯ ಎಸಗಿ ಬಂಧಿತರಾದ ಅಪರಾಧಿಗಳ ಮೇಲೆ ದೇಶದ್ರೋಹಿ ಕಾಯ್ದೆಯಡಿ ಕಠಿಣ ಕ್ರಮ ಕೈಕೊಳ್ಳಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಪೊಲೀಸ್ ಹಾಗೂ ಗುಪ್ತಚರ ಇಲಾಖೆಗಳು ಕ್ರಮ ವಹಿಸಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಹುಯೋಗಿ ತಳ್ಳೋಳ್ಳಿ, ಲಕ್ಕಪ್ಪ ಬಡಿಗೇರ,…
