Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಅವರು ಮತದಾನದ ಮಹತ್ವದ ಕುರಿತು ಮಾತನಾಡಿದರು. ಮಹಾವಿದ್ಯಾಲಯದ ಐಕ್ಯೂಎಸಿ ವಿಭಾಗದ ಸಂಯೋಜಕ, ರಾಜ್ಯಶಾಸ್ತ್ರದ ಪ್ರಾಧ್ಯಾಪಕ ದೀಲಿಪಕುಮಾರ ಕೆ. ಅವರು ಮತದಾನಕ್ಕಿಂತ ಇನ್ನೊಂದಿಲ್ಲ. ನಾನು ಖಚಿತವಾಗಿ ಮತದಾನ ಮಾಡುವ ಎಂಬ ಧ್ಯೇಯ ವಾಕ್ಯ ಹೇಳುವದರೊಂದಿಗೆ ನಾನು ಯಾವುದೇ ಸಂದರ್ಭದಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೇ ಪ್ರಾಮಾಣಿಕವಾಗಿ ಮತದಾನವನ್ನು ಮಾಡುವುದಾಗಿ ಎಂಬ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ರವೀಂದ್ರಗೌಡ ಕೆ., ಡಾ.ವೈ.ಬಿ.ನಾಯಕ, ಪ್ರೊ.ಡಿ.ಎಸ್.ಲಗಳಿ, ಪ್ರೊ.ಸಿ.ಪಿ.ದಡೇಕರ ಇತರರು ಇದ್ದರು.
ಮುದ್ದೇಬಿಹಾಳ: ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಎನ್ಪಿಎಸ್ ನೌಕರ ಸಂಘದ ತಾಲೂಕಾ ಘಟಕದ ವತಿಯಿಂದ ಶಾಸಕ ಸಿ.ಎಸ್.ನಾಡಗೌಡ ಗೆ ಮನವಿ ಪತ್ರ ಸಲ್ಲಿಸಲಾಯಿತು.ಈ ವೇಳೆ ಎನ್.ಪಿ.ಎಸ್ ನೌಕರರ ಸಂಘದ ಖಜಾಂಚಿ ಸಂಗಮೇಶ ನವಲಿ ಮಾತನಾಡಿ, ತಮ್ಮ ಸರಕಾರ ಚುನಾವಣೆಯ ಪ್ರಣಾಳಿಕೆಯಲ್ಲಿ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವ ಕುರಿತು ಹೆಳಿತ್ತು. ಅದರಂತೆ ರಾಜ್ಯದ ೨.೫ ಲಕ್ಷ ಸರಕಾರಿ ನೌಕರರು ಹಾಗೂ ೨.೫ ಲಕ್ಷ ನಿಗಮ ಮಂಡಳಿ ಅನುದಾನಿತ ಹಾಗೂ ಸ್ವಾಯತ್ತ ಸಂಸ್ಥೆಗಳ ನೌಕರರು ತಮ್ಮ ಕುಟುಂಬದೊಂದಿಗೆ ವೋಟ್ ಫಾರ್ ಓಪಿಎಸ್ ಕಾರ್ಯಕ್ರಮ (ಹಳೆ ಪಿಂಚಣಿ ನೀಡುವವರಿಗೆ ಮತ ನೀಡಿ) ಮಾಡುವುದರ ಮೂಲಕ ತಮ್ಮ ಸರಕಾರವನ್ನು ಬೆಂಬಲಿಸಿದೆ. ಈಗಾಗಲೇ ತಮ್ಮ ಸರಕಾರ ಐದು ಜನಪರ ಭರವಸೆಗಳನ್ನು ಅನುಷ್ಠಾನಗೊಳಿಸಿದೆ. ಆರನೇ ಭರವಸೆಯಾದ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಡ ತರಬೇಕೆಂದು ವಿನಂತಿಸಿಕೊಂಡರು.ಮನವಿಗೆ ಪ್ರತಿಕ್ರಿಸಿದ ಶಾಸಕರು…
ಮುದ್ದೇಬಿಹಾಳ: ತಾಲೂಕಿನ ಕೊಳೂರ ಗ್ರಾಮದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ೧೧೦/೧೧ಕೆವಿ ಉಪಕೇಂದ್ರಕ್ಕೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಹಿರೇಮುರಾಳ ೧೧೦ಕೆವಿ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಹೊಂದುವ ಎಲ್ಲ ಪಂಪಸೆಟ್ ಹಾಗೂ ನಿರಂತರ ಜ್ಯೋತಿ ಮಾರ್ಗಗಳಿಗೆ ಜ.೨೯ ರಂದು ಬೆಳಿಗ್ಗೆ ೭ಗಂಟೆಯಿಂದ ೧೦ರವರೆಗೆ ವಿದ್ಯತ್ ಪೂರೈಕೆ ಇರುವದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಷನ್ ನಿಯೋಗ ರಾಷ್ಟ್ರೀಯ ಶಿಕ್ಷಣ ನೀತಿ (NEP)-2020 ನ್ನು ಕರ್ನಾಟಕದಲ್ಲಿ ಮುಂದುವರೆಸುವಂತೆ ರಾಜ್ಯದಾಂತ ಸಹಿ ಸಂಗ್ರಹ ಅಭಿಯಾನ ನಡೆದಿದ್ದು, ಈ ಜನಾಭಿಪ್ರಾಯದ ವರದಿಯನ್ನು ಜ.24 ಬುಧವಾರ ರಾಜಭವನ ಬೆಂಗಳೂರಿನಲ್ಲಿ ಗೌರವಾನ್ವಿತ ರಾಜ್ಯಪಾಲರನ್ನು ಬೇಟಿಯಾಗಿ ಚರ್ಚಿಸಲಾಯಿತು.ಕರ್ನಾಟಕದ 34 ಶೈಕ್ಷಣಿಕ ಜಿಲ್ಲೆಗಳ 168 ತಾಲ್ಲೂಕುಗಳಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಮತ್ತು ವಿದ್ಯಾರ್ಥಿಗಳಿಂದ NEP ಪರವಾಗಿ ಒಟ್ಟು 10,16,080 ಸಹಿ ಆಗಿದ್ದು, ಇದರ ವಿಸ್ತೃತ ವರದಿಯನ್ನು ಘನವೆತ್ತ ರಾಜ್ಯಪಾಲರಿಗೆ ಸಲ್ಲಿಸಲಾಯಿತು.ಈ ನಿಯೋಗದಲ್ಲಿ ಶಿಕ್ಷಣ ತಜ್ಞ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ, ಪ್ರೊ. ರವೀಂದ್ರ ರೇಶ್ಮಿ, ಮಾಜಿ ಸಚಿವ ಬಿ ಸಿ ನಾಗೇಶ, ಮಾಜಿ ಎಂಎಲ್ಸಿ ಅರುಣ ಶಹಾಪುರ, ಪ್ರೊ.ನಂದಿನಿ ಲಕ್ಷ್ಮೀಕಾಂತ, ಪ್ರೊ.ವೀರೇಶ ಬಾಳಿಕಾಯಿ, ಸಂದೀಪ ಬೂದಿಹಾಳ, ಡಾ ಗಿರೀಶ ತೆಗ್ಗಿನಮಠ ಭಾಗವಹಿಸಿದ್ದರು.
ಆಲಮೇಲ: ಪಟ್ಟಣದ ಶ್ರೀ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು , ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಪುತ್ರ ಕಿರನಳ್ಳಿ ರವರಿಗೆ 2024 ನೇ ಸಾಲಿನ ಜ್ಯೋತಿಬಾ ಫುಲೆ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಇತ್ತೀಚೆಗೆ ವಿಜಯಪುರದ ಕಂದಗಲ್ ಹನಮಂತ್ರಾಯ ರಂಗಮಂದಿರದಲ್ಲಿ ನಡೆದ ಮಾತೆ ಸಾವಿತ್ರಿಬಾಯಿ ಫುಲೆ ರವರ ಜಯಂತ್ಯೋತ್ಸವ ಸಮಾರಂಭದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಮಹಾಪೌರ ರಾದ ಮಹೇಜಬಿನ್ ಹೋರ್ತಿ ಪ್ರಶಸ್ತಿ ನೀಡಿ ಗೌರವಿಸಿದರು.
-ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ – ಗದಗ್ 1947ರಲ್ಲಿ ನಮ್ಮ ಭಾರತ ದೇಶವು ಬ್ರಿಟಿಷರ ಆಳ್ವಿಕೆಯಿಂದ ಸ್ವತಂತ್ರವಾಯಿತಷ್ಟೇ, ಆದರೆ ನಮಗೆ ನಮ್ಮದೇ ಆದ ಸಂವಿಧಾನ ಇಲ್ಲದೆ ಇರುವುದರಿಂದ ಸ್ವತಂತ್ರದ ನಂತರವೂ ಕೂಡ ಭಾರತ ದೇಶವು ತನ್ನದೇ ಆದ ಸಂವಿಧಾನವನ್ನು ಹೊಂದುವವರೆಗೆ ಕಿಂಗ್ ಜಾರ್ಜ್ ರ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿತ್ತು. 1929 ರಲ್ಲಿ ಲಾಹೋರ್ನಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಸಭೆಯಲ್ಲಿ ಸಂಪೂರ್ಣ ಸ್ವತಂತ್ರ ಭಾರತ ದೇಶವನ್ನು ಪಡೆಯುವ ಒಕ್ಕೊರಲಿನ ಧ್ವನಿ ಹೊಮ್ಮಿತು. ಇದರ ಪರಿಣಾಮವಾಗಿ 1930ರ ಜನವರಿ 26ರಂದು ಭಾರತ ದೇಶವನ್ನು ಪೂರ್ಣ ಸ್ವರಾಜ್ ದೇಶ ಎಂದು ಘೋಷಿಸಲಾಯಿತು. ಭಾರತದ ಸ್ವಾತಂತ್ರ್ಯದ ಇತಿಹಾಸದಲ್ಲಿ ಜನವರಿ 26ರ ಈ ದಿನ ಅತ್ಯಂತ ಮಹತ್ವಪೂರ್ಣ ಎನಿಸಿತ್ತು. 1945ರಲ್ಲಿ ದ್ವಿತೀಯ ಮಹಾಯುದ್ಧ ಮುಗಿದ ನಂತರ ಭಾರತದ ಸ್ವಾತಂತ್ರ್ಯದ ಕೂಗು ಮತ್ತಷ್ಟು ಜೋರಾಯಿತು. ಇನ್ನು ತಮಗೆ ಭಾರತದಲ್ಲಿ ಉಳಿಗಾಲವಿಲ್ಲ ಎಂದು ಅರಿತ ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡುವ ಮುನ್ನ ಮೂರು ಜನ ಬ್ರಿಟನ್ ಸದಸ್ಯರ…
Udayarashmi kannada daily newspaper
ಈ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ | TMC ಮತ್ತು AAP ಏಕಾಂಗಿ ಸ್ಪರ್ಧೆಯ ಘೋಷಣೆ | ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂತರ ಪಂಜಾಬ್ ಸಿಎಂ ಭಗವಂತ್ ಮಾನ್ ಅವರು INDIA ಮೈತ್ರಿಕೂಟಕ್ಕೆ ದೊಡ್ಡ ಶಾಕ್ ನೀಡಿದ್ದಾರೆ. ಈ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಭಗವಂತ್ ಮಾನ್ ಘೋಷಿಸಿದ್ದಾರೆ.ಪಂಜಾಬ್ನ 13 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಭಗವಂತ್ ಮಾನ್ ಹೇಳಿದ್ದಾರೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಂಜಾಬ್ನ 13 ಸ್ಥಾನಗಳಲ್ಲಿ ಆಪ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಮಮತಾ ಬ್ಯಾನರ್ಜಿ ತಮ್ಮದೇ ಆದ ನಿರ್ಧಾರವನ್ನು ಹೊಂದಿದ್ದಾರೆ. ನಮಗೆ ನಮ್ಮದೇ ಆದ ನಿರ್ಧಾರವಿದೆ ಎಂದಿದ್ದಾರೆ.ಮಮತಾ ಅಲ್ಲದೆ, ನಿತೀಶ್ ಕುಮಾರ್ ಮತ್ತು ಅರವಿಂದ್ ಕೇಜ್ರಿವಾಲ್ ಅವರ ಪಕ್ಷ ಎಎಪಿ ಕೂಡ ಗರಿಷ್ಠ ಸ್ಥಾನಗಳ ಮೇಲೆ ಕಣ್ಣಿಟ್ಟಿದೆ. 16ಕ್ಕಿಂತ ಕಡಿಮೆ ಸ್ಥಾನಗಳಲ್ಲಿ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ನಿತೀಶ್ ಅವರ ಪಕ್ಷ ಜೆಡಿಯು ಇತ್ತೀಚೆಗೆ ಹೇಳಿತ್ತು. ಗೆಲ್ಲುವ…
ಸಿಂದಗಿ: ಪಟ್ಟಣದ ಕೆಎಸ್ಆರ್ ಟಿಸಿ ಬಸ್ಡಿಪೋ ಬಳಿಯಿರುವ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದಲ್ಲಿ ಮಂಗಳವಾರ ಜ.23 ರಂದು ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ೨೮ ನೇ ಜಾತ್ರಾ ಮಹೋತ್ಸವ-ಧರ್ಮಸಭೆ ಕಾರ್ಯಕ್ರಮ ಹಾಗೂ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಪುರಾಣ ಪ್ರವಚನ ಮಹಾ ಮಂಗಲೋತ್ಸವ ಕಾರ್ಯಕ್ರಮದ ಸಮಾರಂಭದಲ್ಲಿ ಮಲಗೊಂಡ ಫಿಲಂ ಪ್ರೊಡಕ್ಷನ್ ಅಡಿಯಲ್ಲಿ ತಯಾರಾದ “ತುಷಾರ್” ಚಲನಚಿತ್ರದ ನಟ, ನಿರ್ದೇಶಕ, ನಿರ್ಮಾಪಕ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಜಗದ್ಗುರು ಪ್ರಸನ್ನರೇಣುಕಾ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರು ಗೌರವಿಸಿ ಸನ್ಮಾನಿಸಿದರು.ಇತ್ತೀಚೆಗೆ “ತುಷಾರ್” ಚಿತ್ರಕ್ಕೆ ಬಾಗಲಕೋಟೆಯಲ್ಲಿ ಜರುಗಿದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಾಮಾಜಿಕ ಕಳಕಳಿ ಹಾಗೂ ಭಾವೈಕ್ಯತೆಯ ಸಂದೇಶ ಸಾರುವ ತುಷಾರ್ ಚಲನಚಿತ್ರ ಅತ್ಯುತ್ತಮ ಚಿತ್ರ ಎಂದು ಘೋಷಿಸಿ ಪ್ರಶಸ್ತಿ ನೀಡಲಾಗಿತ್ತು.ಶಾಸಕ ಅಶೋಕ ಎಮ್ ಮನಗೂಳಿ ಅನೇಕ ಶ್ರೀಗಳು ಹಾಗೂ ರಾಜಕೀಯ ಮುಖಂಡರು ಇದ್ದರು.
ಮುದ್ದೇಬಿಹಾಳ: ಜ.೨೮ ರಂದು ಸಂಜೆ ೫ಗಂಟೆಗೆ ಇಲ್ಲಿನ ವಿಬಿಸಿ ಹೈಸ್ಕೂಲ್ ಹೈಸ್ಕೂಲ್ ಮೈದಾನದಲ್ಲಿರುವ ಶ್ರೀ ಸಿದ್ದೇಶ್ವರ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದರ ೧೬೧ನೇ ಜಯಂತ್ಯೋತ್ಸವದ ಪ್ರಯುಕ್ತ ಸ್ವಾಮಿ ವಿವೇಕಾನಂದ ರಾಷ್ಟ್ರ, ರಾಜ್ಯ ಸದ್ಭಾವನಾ ಪ್ರಶಸ್ತಿ, ಧರ್ಮಯುದ್ಧ ದಿನದರ್ಶಿಕೆ ಲೋಕಾರ್ಪಣೆ ಹಾಗೂ ಸಾಂಸ್ಕೃತಿಕ ಯುವ ವೈಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಪುಂಡಲೀಕ ಮುರಾಳ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾಧನಾ ಮಹಿಳಾ ಒಕ್ಕೂಟ ಹಾಗೂ ಧರ್ಮಯುದ್ಧ ದಿನಪತ್ರಿಕೆ ಬಳಗದ ಸಂಯಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮದ ಸಾನಿಧ್ಯವನ್ನು ಸಿದ್ದನಕೊಳ್ಳದ ಶಿವಕುಮಾರ ಮಹಾಸ್ವಾಮಿಗಳು ವಹಿಸಲಿದ್ದು, ಸಚಿವ ಶಿವರಾಜ ತಂಗಡಗಿ ಉದ್ಘಾಟಿಸುವರು. ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯದ ಕುಲಪತಿ ಟಿ.ಎಂ.ಭಾಸ್ಕರ್ ಪ್ರಶಸ್ತಿ ಪ್ರಧಾನ ಮಾಡಲಿದ್ದು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಬಾಜಪಾ ಮುಖಂಡ ಮಹೇಂದ್ರಕುಮಾರ…
