Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿ, ಉಪನೋಂದಣಿ ಕಚೇರಿ, ಭೂದಾಖಲೆಗಳ ಕಚೇರಿ, ಪುರಸಭೆ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ಧಿಡೀರ್ ಭೇಟಿ ನೀಡಿ ಪರಿಶೀಲನೆ ಮಾಡಿದರು.ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿ ಬಾಕಿಯಿರುವ ಕಂದಾಯ ಪ್ರಕರಣಗಳ ಬಗ್ಗೆ ತಹಸೀಲ್ದಾರರಿಂದ ಮಾಹಿತಿ ಪಡೆದುಕೊಂಡರು. ನಂತರ ಉಪನೋಂದಣಿಯಾಧಿಕಾರಿ ಕಚೇರಿಗೆ ಭೇಟಿ ನೀಡಿದಾಗ ಹೆಚ್ಚು ಜನರು ಕಂಡು ಎಲ್ಲರೂ ಕಚೇರಿ ಕೆಲಸಕ್ಕೆ ಬಂದವರೋ ಅಥವಾ ಬೇರೆ ಜನರು ಇರುವರೋ ಎಂದು ಸಂದೇಹ ಬಂದು ಎಲ್ಲರ ಗುರುತಿನ ಚೀಟಿಯನ್ನು ಜಿಲ್ಲಾಧಿಕಾರಿಗಳು ಪರಿಶೀಲನೆ ಮಾಡಿದರು.ಉಪನೋಂದಣಾಧಿಕಾರಿ ದ್ಯಾವಪ್ಪ ಅವರಿಗೆ ಕಚೇರಿಯಲ್ಲಿ ಆಸ್ತಿ ಮಾರಾಟಗಾರರು, ಖರೀದಾರರು, ಸಾಕ್ಷಿದಾರರು ಹಾಗೂ ದಾಖಲಾತಿಗೆ ಸಂಬಂಧಿಸಿದವರು ಮಾತ್ರ ಇರುವಂತೆ ನೋಡಿಕೊಳ್ಳಬೇಕು. ಅನಾವಶ್ಯಕವಾಗಿ ಜನರು ಇರದಂತೆ ನೋಡಿಕೊಳ್ಳಬೇಕೆಂದು ಖಡಕ್ಕಾಗಿ ಸೂಚನೆ ನೀಡಿದರು. ಉಪನೋಂದಣಾಧಿಕಾರಿ ಕಚೇರಿಯಲ್ಲಿ ಜನರು ಯಾವ ಮಧ್ಯವರ್ತಿಗಳ ಮೂಲಕ ತಮ್ಮ ಕೆಲಸಗಳನ್ನು ಮಾಡಿಕೊಳ್ಳದೇ ನೇರವಾಗಿ ಅಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಕೆಲಸಗಳನ್ನು ಮಾಡಿಕೊಳ್ಳುವಂತೆ ಜನರಿಗೆ ಜಿಲ್ಲಾಧಿಕಾರಿಗಳು ಜನರಿಗೆ ಹೇಳಿದರು.ಭೂಮಾಪನ ಇಲಾಖೆಯ ಕಚೇರಿಗೆ…
ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಸಂಸ್ಥಾನ ಹಿರೇಮಠದಲ್ಲಿ ನಡೆಯುತ್ತಿರುವ ಕಲಬುರಗಿ ಶರಣಬಸವೇಶ್ವರ ಪುರಾಣದಲ್ಲಿ ಮಂಗಳವಾರ ಸಂಜೆ ಶರಣಬಸವೇಶ್ವರರ ತೊಟ್ಟಿಲೋತ್ಸವ ಸಂಭ್ರಮದಿಂದ ಜರುಗಿತು.ಪಟ್ಟಣದ ಅಕ್ಕನ ಬಳಗ, ತಾಯಂದಿರು ಸಂಪ್ರದಾಯದಂತೆ ಕಲಬುರಗಿ ಶರಣಬಸವೇಶ್ವರರ ತೊಟ್ಟಿಲೋತ್ಸವ ಹಾಗೂ ನಾಮಕರಣ ಶಾಸ್ತ್ರವನ್ನು ನಡೆಸಿಕೊಟ್ಟರು.ಸಾನಿಧ್ಯ ವಹಿಸಿದ್ದ ಶ್ರೀಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.ತೊಟ್ಟಿಲೋತ್ಸವದಲ್ಲಿ ದಾನಮ್ಮ ಬೀರಲದಿನ್ನಿ, ಕಸ್ತೂರಿ ಚಿಮ್ಮಲಗಿ, ಸಾವಿತ್ರಿ ಬಿರಾದಾರ, ದ್ರಾಕ್ಷಾಯಿಣಿ, ಅಶ್ವಿನಿ ಬಿರಾದಾರ, ಸ್ವಪ್ನಾ ಹುಣಸಿಕಟ್ಟಿ, ಶಶಿ ಬೂದಿಹಾಳ, ನೀಲಮ್ಮ ಮಣ್ಣೂರ, ಬಸಮ್ಮ ಕರಲಿಂಗಪ್ಪಗೋಳ, ಸುಮಾ ಸಂಗಾಪುರ, ಶಾರದಾ ಲೇಸಪ್ಪಗೋಳ, ಶಂಕ್ರಮ್ಮ ಬಿರಾದಾರ, ಜ್ಯೋತಿ ಹಿಟ್ನಳ್ಳಿ, ನೀಲಮ್ಮ ತಪಶೆಟ್ಟಿ, ಸ್ನೇಹಾ ಬುದ್ನಿ, ಸವಿತಾ ಉಪ್ಪಾರ, ನೀಲಮ್ಮ ಕುಂಬಾರ ಇತರರು ಭಾಗವಹಿಸಿದ್ದರು.
ಬಸವನಬಾಗೇವಾಡಿ: ಚಿತ್ರದುರ್ಗದಲ್ಲಿ ಜ.೨೮ ರಂದು ಹಮ್ಮಿಕೊಂಡಿರುವ ರಾಜ್ಯ ಶೋಷಿತರ ಜಾಗೃತಿ ಸಮಾವೇಶಕ್ಕೆ ತಾಲೂಕಿನ ಶೋಷಿತ ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಅಹಿಂದ ಮುಖಂಡ ಎಸ್.ಎಂ.ಪಾಟೀಲ ಗಣಿಯಾರ ಹೇಳಿದರು.ಪಟ್ಟಣದ ಗಣೇಶ ನಗರದ ಯಲ್ಲಾಲಿಂಗ ಮಠದ ಆವರಣದಲ್ಲಿ ಬುಧವಾರ ಜರುಗಿದ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಸಂಘಟನಾ ಸಭೆಯಲ್ಲಿ ಮಾತನಾಡಿದ ಅವರು, ಶೋಷಿತ ಸಮುದಾಯ ಬಾಂಧವರು ಸಂಘಟಿತರಾಗಿ ತಮ್ಮ ತಮ್ಮ ಸಮುದಾಯಕ್ಕೆ ನ್ಯಾಯ ಸಿಗುವಂತೆ ಮಾಡಿಕೊಳ್ಳಬೇಕು. ಸಮಾವೇಶದಲ್ಲಿ ಸಿಎಂ ಸೇರಿದಂತೆ ಅನೇಕ ಸಚಿವರು, ಶಾಸಕರು ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದರು.ಸಭೆಯಲ್ಲಿ ಚಿತ್ರದುರ್ಗದಲ್ಲಿ ನಡೆಯುವ ಶೋಷಿತರ ಜಾಗೃತಿ ಸಮಾವೇಶದ ಮಹತ್ವ, ಗಂಭೀರತೆ, ಸಮಾವೇಶಕ್ಕೆ ಹೇಗೆ ತೆರಳುವ ವ್ಯವಸ್ಥೆ, ತಾಲೂಕಿನಲ್ಲಿ ಸಮಾವೇಶದ ಕುರಿತು ಪ್ರಚಾರ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.ಸಭೆಯಲ್ಲಿ ಮುಖಂಡರಾದ ಸೋಮನಾಥ ಕಳ್ಳಿಮನಿ, ನಾಗರಾಜ ಲಂಬೂ, ಪ್ರಭುಗೌಡ ಪಾಟೀಲ, ಜಕ್ಕಪ್ಪ ಯಡವೆ, ಬಿ.ಎಸ್.ಗಸ್ತಿ, ರಾಜು ತೊರವಿ, ಕಾಮೇಶ ಉಕ್ಕಲಿ, ಬಸವರಾಜ ತಳವಾರ, ಸಲೀಂ ಸೈಯದ, ಎಸ್.ಎಸ್.ಕುದರಕರ, ಸಂಗಮೇಶ ಓಲೇಕಾರ, ರಾಜು…
ಮುದ್ದೇಬಿಹಾಳ: ತಾಲೂಕಿನ ಢವಳಗಿ ಗ್ರಾಮದ ಬಸ್ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟಗಾ ಆಡುತ್ತಿದ್ದ ಮೂರು ಜನರ ಮೇಲೆ ಇಲ್ಲಿನ ಪಿಎಸ್ಐ ಸಂಜೀವ ತಿಪರೆಡ್ಡಿ ಕರ್ನಾಟಕ ಪೊಲೀಸ್ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.ಆರೋಪಿತರಾದ ಬಸವರಾಜ ಕೋರಿ, ದಾವಲಭಾಷ್ಯಾ ಹಳ್ಳೂರ, ಲಾಳೇಸಾಬ ನಬಿಸಾಬ ಪಿಂಜಾರ ಇವರಿಂದ ಓ.ಸಿ ನಂಬರ ಬರೆದ ಚೀಟಿ, ಒಂದು ಬಾಲ್ ಪೆನ್ನು ಸಮೇತ ಕೆಲ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಮುದ್ದೇಬಿಹಾಳ: ಇಲ್ಲಿನ ಆಲಮಟ್ಟಿ ರಸ್ತೆಯಲ್ಲಿರುವ ಶಾ.ಸೊಗಮಲ್ ಪೀರಾಜಿ ಓಸ್ವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜ.೨೫ ರಂದು ಬೆಳಿಗ್ಗೆ ೧೦ ಗಂಟೆಗೆ ಮತದಾರರ ದಿನಾಚರಣೆ ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಲಕ್ಷ್ಮೀ ನಿಂಗಪ್ಪ ಗರಗ ಉದ್ಘಾಟಿಸುವರು. ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ಉಪಸ್ಥಿತಿಯಲ್ಲಿ ತಹಶೀಲ್ದಾರ ಬಲರಾಮ ಕಟ್ಟಿಮನಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ಸಹಾಯಕ ಸರಕಾರಿ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ಪ್ರಭಾರ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಯುವರಾಜ ಹನಗಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪ್ರಾಂಶುಪಾಲ ಸಿಕಂದರ ಧನ್ನೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಆಗಮಿಸುವರು. ವಿಜಯಪುರದ ಸ.ಪ್ರ.ದ.ಕಾ ಸಹಾಯಕ ಪ್ರಾಧ್ಯಾಪಕ…
ಮುದ್ದೇಬಿಹಾಳ: ಪ್ರತೀ ವರ್ಷ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಕೊಡಮಾಡುವ ರಾಜ್ಯ ಯುವ ಪ್ರಶಸ್ತಿಗೆ ಭಾಜನರಾದ ತಾಲೂಕಿನ ಯುವ ಕಾಂಗ್ರೆಸ್ ಅಧ್ಯಕ್ಷ ರಫೀಕ ಶಿರೋಳ ಅವರು ಸವಣೂರು ತಾಲೂಕಿನ ಕಡಬ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಸಿಂದಗಿ: ಪಟ್ಟಣದ ಬಸ್ ಡಿಪೋ ಹತ್ತಿರವಿರುವ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ೨೮ನೇ ಜಾತ್ರಾ ಮಹೋತ್ಸವದಲ್ಲಿ ಶ್ರೀ ಆದಿಶೇಷ ಪ್ರೊಡಕ್ಷನ್ಸ್ ಸಂಸ್ಥೆಯಡಿಯಲ್ಲಿ ನಿರ್ಮಾಣಗೊಂಡ ಲಿ.ಸಿದ್ದೇಶ್ವರ ಸ್ವಾಮೀಜಿಯವರ “ಸಾವಿರದ ಸಂತ” ಸಾಕ್ಷ್ಯ ಚಿತ್ರದ ಪೋಸ್ಟರ್ ಹಾಗೂ ಟೀಸರ್ನ್ನು ಬಾಳೆಹೊನ್ನೂರು ರಂಬಾಪೂರಿ ಪೀಠದ ಶ್ರೀಮದ್ರಂಬಾಪುರಿ ವೀರಸಿಂಹಾಸನಾಧೀಶ್ವರ ಜಗದ್ಗುರು ಪ್ರಸನ್ನರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.ಈ ವೇಳೆ ಮಾತನಾಡಿದ ಅವರು, ರೇಣುಕಾಚಾರ್ಯರ, ಲಿಂ.ಸಿದ್ದಲಿಂಗ ಜಗದ್ಗುರುಗಳ ಹಾಗೂ ಜಗದ್ಗುರುಗಳಾದ ಗಂಗಾಧರ ಶ್ರೀಗಳ ಜೀವನ ಸಾಧನೆಯ ಸಾಕ್ಷ್ಯ ಚಿತ್ರವನ್ನು ಇದೇ ತಂಡವು ನಿರ್ಮಿಸುವಂತೆ ಹೇಳಿದರು. ಧರ್ಮ ಪೀಠಗಳ ಕಾರ್ಯ ಸಾಧನೆಗಳು ಜನಮಾನಸದಲ್ಲಿ ಅಜರಾಮರವಾಗುವಂತೆ ಈ ತಂಡ ಕಾರ್ಯ ನಿರ್ವಹಿಸಲಿ ಎಂದರು.ಸಾವಿರದ ಸಂತ ಸಾಕ್ಷ್ಯ ಚಿತ್ರವನ್ನು ಶ್ರೀ ಆದಿಶೇಷ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಿಸಲಾಗಿದೆ. ಪರ್ತಕರ್ತ ಹಾಗೂ ಸಾಹಿತಿ ಶಿವಾನಂದ ಹಿರೇಮಠ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ನಟನೆಯ ಜತೆಗೆ ನಿರ್ಮಾಪಕರಾಗಿ ನಿಹಾನ್ ದೇಸಾಯಿ ಹಾಗೂ ಎಂ.ಗುರುರಾಜ ಕಾರ್ಯಕಾರಿ ನಿರ್ಮಾಪಕರಾಗಿ ಪೂಜಾ ವೀರಶೆಟ್ಟಿ ಕಾರ್ಯ ನಿರ್ವಹಣೆ…
ಸಿಂದಗಿ: ವ್ಯಕ್ತಿಯೊಬ್ಬರಿಗೆ ಕ್ಯೂಲೆಕ್ಸ್ ಎಂಬ ಸೊಳ್ಳೆ ಕಚ್ಚಿದರೆ ಏಕಾಏಕಿ ರೋಗ ಬರುವುದಿಲ್ಲ. ಸೊಳ್ಳೆ ಕಚ್ಚಿದ ೫-೬ವರ್ಷಗಳ ನಂತರ ಕಾಲು ಬಾವರೇಲೂ ಪ್ರಾರಂಭವಾಗುತ್ತದೆ. ಕೆಲವು ವರ್ಷಗಳಲ್ಲಿ ಕಾಲು ಊದಿಕೊಂಡು ಆನೆ ಕಾಲಿನಂತಾಗುತ್ತದೆ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಹರಿ ಕುಲಕರ್ಣಿ ಮಾತನಾಡಿದರು.ಪಟ್ಟಣದ ಜಿ.ಪಿ.ಪೋರವಾಲ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಅಡಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಆರೋಗ್ಯ ಅರಿವು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪ್ರತಿ ವ್ಯಕ್ತಿಗೆ ಮೂರು ಡಿಇಸಿ ಮಾತ್ರೆ ನುಂಗಿಸಿ ರೋಗ ಬರದಂತೆ ಮುಂಜಾಗೃತೆ ವಹಿಸಲಾಗಿದೆ. ಆದರೆ ಪರಿಸರದಲ್ಲಿ ನೈರ್ಮಲ್ಯತೆ ಕಾಪಾಡದಿದ್ದರೆ ರೋಗ ಆವರಿಸುವ ಭೀತಿಯಂತೂ ದೂರವಿಲ್ಲ. ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಾತ್ರೆಗಳು ಲಭ್ಯವಿವೆ. ಈವರೆಗೆ ಮಾತ್ರೆ ಸೇವಿಸದವರು ಇಲ್ಲಿ ಮಾತ್ರೆಗಳನ್ನು ಪಡೆಯಬಹುದಾಗಿದೆ. ಆನೆಕಾಲು ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದರೆ ಮಾತ್ರೆಗಳನ್ನು ಸೇವಿಸಬೇಕು. ಜತೆಗೆ ತಮ್ಮ ಮನೆಗಳ ಸುತ್ತಲಿನ ಪರಿಸರದಲ್ಲಿ ಕ್ಯೂಲೆಕ್ಸ್ ಸೊಳ್ಳೆಗಳು ಪಸರಿಸದಂತೆ ಎಚ್ಚರಿಕೆ ವಹಿಸಬೇಕು. ಇದು ಸಾಂಕ್ರಾಮಿಕ ರೋಗವಾದ್ದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಪಸರಿಸುತ್ತದೆ…
ವಿಜಯಪುರ: ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವಲ್ಲಿ ರಾಜ್ಯದ ಅತ್ಯುತ್ತಮ ಆಸ್ಪತ್ರೆಗಳಲ್ಲಿ ಜಿಲ್ಲಾ ಆಸ್ಪತ್ರೆ ವಿಜಯಪುರ ಒಂದಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.ವಿಜಯಪುರ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ಆರೋಗ್ಯ ರಕ್ಷಾ ಸಮಿತಿ ಕಾರ್ಯಕಾರಿಣಿ ಸಭೆ, ಆಸ್ಪತ್ರೆಯ ನೂತನ ಕಣ್ಣಿನ ವಿಭಾಗದ ಉದ್ಘಾಟನೆ ಹಾಗೂ ಸಿಬ್ಬಂದಿಗಳಿಗೆ ಸನ್ಮಾನಿಸಿ ಅವರು ಮಾತನಾಡಿ, ವಿಜಯಪುರ ಸತತ ಎರಡು ಬಾರಿ ಕಾಯಕಲ್ಪ ಪ್ರಶಸ್ತಿ ಪಡೆದು ಎರಡು ಬಾರಿ ರನ್ನರ್ ಅಪ್ ಹಾಗೂ ನ್ಯಾಶನಲ್ ಕ್ವಾಲಿಟಿ ಅಸೂರೆನ್ಸ್ ಗುಣಮಟ್ಟದ ಪ್ರಶಸ್ತಿ ಪಡೆದಿದೆ. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿರುವ ಜಿಲ್ಲಾ ಆಸ್ಪತ್ರೆ ಸಾರ್ವಜನಿಕರಿಗೆ ಯಾವುದೇ ಕೊರತೆಯಾಗದಂತೆ ನಿರಂತರವಾಗಿ ಉತ್ತಮ ಸೇವೆ ಒದಗಿಸುವಂತೆ ಅವರು ತಿಳಿಸಿದರು.ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಎಲ್ಲ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಆಸ್ಪತ್ರೆಯಲ್ಲಿನ ಸ್ವಚ್ಛತೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆ ಶಸ್ತç ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಆರ್.ಎಂ.ಓ ಡಾ.ಸಿ.ವಾಯ್.ರಾಠೋಡ…
ವಿಜಯಪುರ: ವಿಜಯಪುರ ಜಿಲ್ಲೆಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಣಾ ವೇದಿಕೆ ಸಭೆಯನ್ನು ನಗರದ ಮನಗೂಳಿ ರಸ್ತೆಯಲ್ಲಿರುವ ಬಿಡಿಎ ಕಚೇರಿ ಹತ್ತಿರ ಅಧೀಕ್ಷಕ ಅಭಿಯಂತರರು ಕಾರ್ಯ ಮತ್ತು ಪಾಲನೆ ವೃತ್ತ ಕಚೇರಿ ಸಭಾಂಗಣದಲ್ಲಿ ಜನವರಿ ೩೧ ರಂದು ಬೆಳಿಗ್ಗೆ ೧೦-೩೦ಕ್ಕೆ ಆಯೋಜಿಸಲಾಗಿದೆ.ಜಿಲ್ಲೆಯ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು-ಕೊರತೆಗಳನ್ನು ನಿವಾರಿಸಿಕೊಳ್ಳುವಂತೆ ಹೆಸ್ಕಾಂ ಅಧಿಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
