Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತ ಸಾಮಾಜಿಕ ಭದ್ರತಾ ಯೋಜನೆಯಡಿಯ ಜಿಲ್ಲೆಯ ೧೪ ಗ್ರಾಮಗಳಲ್ಲಿ ಫೆ.೦೩ ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಫೆ.೩ರ ಬೆಳಿಗ್ಗೆ ೧೧ ಗಂಟೆಗೆ ಬ.ಬಾಗೇವಾಡಿ ತಾಲೂಕಿನ ನಂದಿಹಾಳ ಪಿ.ಯು ಗ್ರಾಮದ ಛತ್ರಿಕಟ್ಟಿಯಲ್ಲಿ ವಿಜಯಪುರದ ಉಪ ವಿಭಾಗಾಧಿಕಾರಿಗಳು ಮತ್ತು ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಗ್ರಾಮ ಪಂಚಾಯತಿಯ ಆವರಣದಲ್ಲಿ, ಇಂಡಿ ಉಪ ವಿಭಾಗಾಧಿಕಾರಿಗಳು ಪಿಂಚಣಿ ಅದಾಲತ್ ನಡೆಸಲಿದ್ದಾರೆ.ವಿಜಯಪುರ ಗ್ರೇಡ್-೨ ತಹಶೀಲ್ದಾರ ಅವರು ಕುಮಟಗಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ, ಬಬಲೇಶ್ವರ ತಹಶೀಲ್ದಾರ ಗ್ರೇಡ್-೨ ಅವರು, ಕುಮಠೆ ಗ್ರಾಮದ ಶ್ರೀ ಕರಿಸಿದ್ಧೇಶ್ವರ ದೇವಸ್ಥಾನದಲ್ಲಿ ಹಾಗೂ ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು ತಾಜಪೂರ ಎಚ್ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.ಬಸವನ ಬಾಗೇವಾಡಿ ಗ್ರೇಡ್-೨ ತಹಶೀಲ್ದಾರ ಅವರು, ಅಗಸಬಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ ಹಾಗೂ ನಿಡಗುಂದಿ ಗ್ರೇಡ್-೨ ತಹಶೀಲ್ದಾರ ಅವರು ಕೊಡಗಾನೂರ…
ವಿಜಯಪುರ: ಅಲಮಟ್ಟಿಯ ಜವಾಹರ ನವೋದಯ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ಭೇಟಿ ನೀಡಿ ಶೈಕ್ಷಣಿಕ ಗುಣಮಟ್ಟ, ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು.ವಿದ್ಯಾಲಯದ ಸಲಹಾ ಸಮಿತಿ ಸಭೆ ನಡೆಸಿದ ಅವರು, ವಿದ್ಯಾಲಯದ ಬೋಧನಾ ಗುಣಮಟ್ಟವನ್ನು ಹೆಚ್ಚಿಸಿ ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ಬೆಳವಣಿಗೆ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ, ಮಕ್ಕಳ ಕೌಶಲ್ಯತೆಯನ್ನು ಹೆಚ್ಚಿಸಲು ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಸಾಮಾಜಿಕ ಸೇವೆಯಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಎನ್.ಸಿ.ಸಿ. ಹಾಗೂ ಎನ್ಎಸ್ಎಸ್ ಚಟುವಟಿಕೆಗಳ ಮೂಲಕ ಪ್ರೇರೆಪಿಸಬೇಕು. ವಿದ್ಯಾಲಯಕ್ಕೆ ಅಗತ್ಯವಿರುವ ಜನರೇಟರ್, ಸೋಲಾರ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದ ಅವರು, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಗಾರ್ಡನ್ ಹಾಗೂ ಆಟದ ಮೈದಾನ ಅಭಿವೃದ್ದಿಪಡಿಸುವಂತೆ ಅವರು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ವಿ.ಶಾಂತಿ, ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳು ಎತ್ತುಗಳನ್ನು ಸಂರಕ್ಷಿಸಲು ಆಧ್ಯಾತ್ಮಿಕ ಸ್ಥಳಗಳಿಗೆ ನಂದಿ ಯಾತ್ರೆ ಕೈಗೊಳ್ಳಬೇಕೆಂಬ ಆಶಯ ಹೊರ ಹಾಕಿದ್ದರು. ಎತ್ತು ಹಾಗೂ ಮಣ್ಣಿನ ಮಹತ್ವದ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಬಿಜ್ಜರಗಿಯ ಸಿದ್ಧೇಶ್ವರ ರೈತಮಿತ್ರ ಸ್ವಯಂ ಸೇವಕರ ಸಂಘದ ನೇತೃತ್ವದಲ್ಲಿ ಜೋಡೆತ್ತು ಬಂಡಿಗಳ ಮೂಲಕ ನಂದಿ ಯಾತ್ರೆ ಆರಂಭಿಸಲಾಗಿದೆ ಎಂದು ಹೇಳಿದರು.ಜಿಲ್ಲೆಯ ಪ್ರಮುಖ 40 ಆಧ್ಯಾತ್ಮಿಕ ಕೇಂದ್ರಗಳಲ್ಲಿ ಸಂಘಗಳನ್ನು ಸ್ಥಾಪಿಸಲಾಗುವುದು. ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ತಾಲೂಕಿನ ಮನಗೂಳಿ, ಯರನಾಳ, ನಂದಿಹಾಳ ಪಿ.ಯು, ಇಂಗಳೇಶ್ವರ ಗ್ರಾಮಗಳಲ್ಲಿ ಸಂಘ ರಚನೆ ಮಾಡಲಾಗಿದೆ ಎಂದು ಹೇಳಿದರು.ಬಸವನಬಾಗೇವಾಡಿ: ಪಟ್ಟಣದಲ್ಲಿ ಎತ್ತುಗಳ ಹಾಗೂ ಮಣ್ಣಿನ ಮಹತ್ವ ಸಾರುವ ಉದ್ದೇಶದಿಂದ ಗುರುವಿಗಾಗಿ ನಡೆ ನಮನ ಸಂದೇಶದೊಂದಿಗೆ ಬಿಜ್ಜರಗಿಯಿಂದ ಆರಂಭವಾದ ಜೋಡೆತ್ತು ಬಂಡಿಗಳ ನಂದಿ ಯಾತ್ರೆಗೆ ಸೋಮವಾರ ಸ್ವಾಗತ ಕೋರಲಾಯಿತು.ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಪಟ್ಟಣದ ವಿರಕ್ತಮಠದಿಂದ ರೈತರು ಜೋಡೆತ್ತು ಬಂಡಿಗಳಲ್ಲಿ ಬಸವೇಶ್ವರ, ಶಿವಯೋಗಿ ಶಿವಲಿಂಗೇಶ್ವರರ ಮೂರ್ತಿ ಹಾಗೂ ಸಿದ್ಧೇಶ್ವರ ಸ್ವಾಮೀಜಿ ಅವರ ಭಾವಚಿತ್ರದ ಮೆರವಣಿಗೆ ಮೂಲಕ ವಿಜಯಪುರ ರಸ್ತೆಯಲ್ಲಿನ ಬಸವ ಭವನ ಮುಂಭಾಗಕ್ಕೆ ಆಗಮಿಸಿದರು.…
ಬಸವನಬಾಗೇವಾಡಿ: ತಾಲೂಕಿನ ಮಸಬಿನಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ಚುನಾವಣೆ ಜರುಗಿತು. ಈ ಎರಡೂ ಸ್ಥಾನಗಳಿಗೆ ತಲಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಎರಡು ಸ್ಥಾನಗಳಿಗೆ ಅವಿರೋಧ ಆಯ್ಕೆ ಆಯಿತು. ಅಧ್ಯಕ್ಷರಾಗಿ ಈರನಗೌಡ .ಎಂ. ಪಾಟೀಲ , ಉಪಾಧ್ಯಕ್ಷರಾಗಿ ಬಾಬು. ವಿ. ನಾಯ್ಕೋಡಿ ವಿರೋಧವಾಗಿ ಆಯ್ಕೆಯಾದರು.ಸನ್ಮಾನ: ಚುನಾವಣೆ ನಂತರ ಸಿದ್ದರಾಮ ಸ್ವಾಮೀಜಿ ಸಾನಿಧ್ಯದಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ನೂತನ ನಿರ್ದೇಶಕರಾದ ರವಿ ಬೈಚಬಾಳ, ಸಂತೋಷಕುಮಾರ ಕಾರಜೋಳ, ರಾವುತಪ್ಪ ಡೋಣೂರ, ಶಾಂತಪ್ಪ ಗಾಡದ, ಬಂಡೆಪ್ಪ ನಾಟಿಕರ, ಅಶೋಕ ನಂದ್ಯಾಳ, ಅಶೋಕ ನನಿಕೇರಿ, ಸಿದ್ದಪ್ಪ ಗುತ್ತರ್ಗಿ, ಮಹಿಳಾ ನಿರ್ದೇಶಕರಾದ ಪ್ರಭಾವತಿ ಮಡಗೊಂಡ, ವಿಜಯಲಕ್ಷ್ಮಿ ಡೋಣೂರ, ಗ್ರಾಮದ ಹಿರಿಯರಾದ ದಾನಪ್ಪ ತೋಟದ, ಶೇಖಪ್ಪ ಬೈಚಬಾಳ, ಅಪ್ಪಸಾಹೇಬ ಮಡಗೊಂಡ, ಈರಣ್ಣ ಕೌಲಗಿ, ಶಿವಯ್ಯ ಹಿರೇಮಠ, ರವಿ ಕತ್ನಳ್ಳಿ , ಬಸಲಿಂಗಯ್ಯ ಕೂಡಗಿಮಠ, ಸೋಮಶೇಖರ ಕಾರಜೋಳ, ಪರಮಾನಂದ ತೋಟದ, ಮನಯ್ಯ ತೇರದಾಳ, ಸಮೀರ್ ಸೈಯದ್, ಚುನಾವಣೆ…
ವಿಜಯಪುರ: ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಗೋಷ್ಠಿಗಳಿಂದ ಸಮಾಜದ ಮೌಲ್ಯ ಹೆಚ್ಚಿಸುತ್ತವೆ.ಆರೋಗ್ಯಯುತ ಸಮಾಜ ನಿರ್ಮಾಣ ಮಾಡುವಲ್ಲಿ ಸಾಹಿತ್ಯ ಪರಿಷತ್ತು ನಿರಂತರ ಶ್ರಮಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಸಹಕಾರಿ ಧುರೀಣ ರಮೇಶ ಬಿದನೂರ ಅಭಿಪ್ರಾಯ ವ್ಯಕ್ತಪಡಿಸಿದರು.ಬುಧವಾರ ಜಿಲ್ಲಾ , ತಾಲೂಕ ಹಾಗು ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತು ವಿಜಯಪುರ ಸಂಯುಕ್ತ ಆಶ್ರಯದಲ್ಲಿ ಸಾಹಿತ್ಯ ಸಭಾಂಗಣದಲ್ಲಿ ಜರುಗಿದ ದಿ ಶಂಕರಾನಂದ ಕಾಳಪ್ಪ ಉತ್ಲಾಸರ ದತ್ತಿ ದಾನಿಗಳು ಶ್ರೀದೇವಿ ಉತ್ಲಾಸರ. ವಿಷಯ ನಾಣ್ಯ, ಸಂಗೀತ, ಮತ್ತು ಸಾಹಿತ್ಯ ಕುರಿತು .ಮತ್ತು ಶ್ರೀಮತಿ ನಿಂಗಮ್ಮ ಗುರಪ್ಪ ಯಾದವಾಡ (ಬೋಳಶೆಟ್ಟಿ)ದತ್ತು ದಾನಿಗಳು ಮಲ್ಲಪ್ಪ ಗುರಪ್ಪ ಯಾದವಾಡ (ಬೋಳಶೆಟ್ಟಿ )ವಿಷಯ: ಶ್ರೀ ರಾಘವೇಂದ್ರ ಶ್ರೀಗಳು ಹಾಗು ಅಲ್ಲಮಪ್ರಭು ದೇವರ ಕುರಿತು ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಥ೯ಪೂಣ೯ವಾದ ಕಾರ್ಯಕ್ರಮಗಳ ಮೂಲಕ ಪರಿಷತ್ತು ಉಪಯುಕ್ತವಾದ ಚಟುವಟಿಕೆಗಳನ್ನು ಆಯೋಜಿಸುತ್ತಿರುವದು ಹೆಮ್ಮೆಯ ಸಂಗತಿ ಎಂದರು.ಸಾಹಿತಿ ಡಾ: ಮಾಧವರಾವ ಗುಡಿ ಅವರು ಶ್ರೀ ರಾಘವೇಂದ್ರ ಶ್ರೀಗಳು ಹಾಗು ಅಲ್ಲಮಪ್ರಭು ದೇವರ ಕುರಿತು…
ವಿಜಯಪುರ: ೧೨ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪನೆ ಮಾಡಿ ವರ್ಗರಹಿತ ವರ್ಣರಹಿತ ಲಿಂಗ ಸಮಾನತೆ ಬೋಧಿಸಿ ಸಮ ಸಮಾಜವನ್ನು ಕಟ್ಟಿದವರು ಬಸವಣ್ಣನವರು. ಹೀಗಾಗಿ ಅಂದಿನ ಅನುಭವ ಮಂಟಪದ ಅನುರೂಪವೇ ಇಂದಿನ ಪಾರ್ಲಿಮೆಂಟು ಅಥವಾ ಸಂಸತ್ತು ಪ್ರಜಾಪ್ರಭುತ್ವದ ನೆಲೆಯಲ್ಲಿ ಸಂವಿಧಾನಿಕ ಚಿಂತನೆಗಳ ಮೂಲಕ ಮೇಲು ಕೀಳು ಅಸ್ಪೃಶ್ಯ ಎಂಬ ಭಾವನೆಯನ್ನು ಹೋಗಲಾಡಿಸಿ, ಎಲ್ಲರನ್ನು ಅಪ್ಪಿಕೊಂಡು ಒಪ್ಪಿಕೊಂಡು ಎಲ್ಲರ ಬಾಳಿಗೆ ಬೆಳಕಾದ ಬಸವಣ್ಣನವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳು ಕರ್ನಾಟಕದ ಸಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿದ್ದಕ್ಕಾಗಿ ತುಂಬ ಹರ್ಷವಾಗಿದೆ ಎಂದು ಕಾಂಗ್ರೆಸ್ಸಿನ ರಾಜ್ಯ ಮಹಿಳಾ ಕಾರ್ಯದರ್ಶಿ ಸ್ನೇಹಲತಾ ಶೆಟ್ಟಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಇಂಡಿ: ಶ್ರೀ ಸದ್ಗುರು ಚಿನ್ಮಯಮೂರ್ತಿ ಮಹಾಶಿವಯೋಗಿಗಳ ೩೦ ನೇ ಪುಣ್ಯಾರಾಧನೆ ನಿಮಿತ್ಯ ಗೋಳಸಾರದ ಶ್ರೀ ಪುಂಡಲಿಂಗೇಶ್ವರ ಮಹಾಶಿವಯೋಗಿಗಳ ಮಠದಲ್ಲಿ ಜ. ೨೯ ರಂದು ಸಾಮೂಹಿಕ ವಿವಾಹ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.ಜ.೨೫ ರಿಂದ ೨೯ ರ ವರೆಗೆ ಪ್ರತಿದಿನ ಮುಂಜಾನೆ ೬ ಗಂಟೆಯಿಂದ ಶ್ರೀ ಸದ್ಗುರು ಚಿನ್ಮಯಮೂರ್ತಿ ತ್ರಿಮೂರ್ತಿ ಮಹಾಶಿವಯೋಗಿಗಳ ಗದ್ದುಗೆಗೆ ರುದ್ರಾಭಿಷೇಕ, ಪುಷ್ಪಾರ್ಚನೆ, ಪ್ರತಿದಿನ ಸಾಯಂಕಾಲ ೬ ಗಂಟೆಯಿಂದ ಆದ್ಯಾತ್ಮ ಪ್ರವಚನ ಜರುಗುವದು.ಜ.೨೫ ರಂದು ಬೆಳಗ್ಗೆ ೯ ಗಂಟೆಗೆ ಡೊಳ್ಳಿನ ಗಾಯನ ಸ್ಪರ್ಧೆ ವಿವಿಧ ಗ್ರಾಮದ ಡೊಳ್ಳಿನ ಕಲಾವಿದರಿಂದ, ೨೬ ರಂದು ರಾತ್ರಿ ೭ ಗಂಟೆಗೆ ಜತೆಗಿರುವನು ಚಂದಿರ ನಾಟಕ ಶಿವಸಂಚಾರ ಕಲಾಬಳಗ ಸಾಣೆಹಳ್ಳಿ ಇವರಿಂದ, ೨೭ ರಂದು ಬೆಳಗ್ಗೆ ಡಾ|| ಮಂಜುನಾಥ ಕೊಟೆನ್ನವರ ಇವರ ನೇತೃತ್ವದಲ್ಲಿ ಬಿಎಲ್ಡಿಈ ಆಸ್ಪತ್ರೆಯ ವಿವಿಧ ತಜ್ಞರಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ನಂತರ ರಾತ್ರಿ ೭ ಗಂಟೆಗೆ ತಾಳಿಯ ತಕರಾರು ನಾಟಕ, ೨೮ ರಂದು ರಾತ್ರಿ ೭ ಗಂಟೆಗೆ…
ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ :ಯಶವಂತ್ರಾಯಗೌಡ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ :ಯಶವಂತ್ರಾಯಗೌಡ ಕೊಲ್ಹಾರ: ಪಟ್ಟಣಕ್ಕೆ ಸಮೀಪದ ಕೃಷ್ಣಾ ನದಿ ದಂಡೆಯಲ್ಲಿ ನಿರ್ಮಾಣವಾಗುತ್ತಿರುವ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯ ಜಾಕ್ವೆಲ್ ಕಾಮಗಾರಿಯನ್ನು ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಸ್ಥಳಕ್ಕೆ ಆಗಮಿಸಿ ಬುಧವಾರ ವೀಕ್ಷಣೆ ಮಾಡಿದರು.ಸರಕಾರಿ ಸ್ವಾಮಿತ್ವದ ಕೃಷ್ಣಾ ಭಾಗ್ಯ ಜಲನಿಗಮದ ಅಡಿಯಲ್ಲಿ ಸುಮಾರು ಎಪ್ಪತ್ತು ಸಾವಿರ ಎಕರೆ ಭೂಮಿಗಳಿಗೆ ನೀರಾವರಿ ಸೌಲಭ್ಯವನ್ನು ದೊರಕಿಸಿಕೊಡಲು ಕೈಗೊಂಡಿರುವ ಮಹತ್ವಾಕಾಂಕ್ಷಿಯ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯು ಇದಾಗಿದ್ದು ಈಗಾಗಲೇ ಪ್ರಾರಂಭಿಸಿರುವ ಜಾಕ್ವೆಲ್ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ಕೊಟ್ಟರು.ಅಖಂಡ ಇಂಡಿ ತಾಲೂಕಿನ ರೈತರ ಬಹುದಿನದ ಕನಸಾಗಿರುವ ಈ ನೀರಾವರಿ ಯೋಜನೆಯ ಕಾಮಗಾರಿಗಳನ್ನು ಗುತ್ತಿಗೆದಾರರು ಗುಣಮಟ್ಟದ ರೀತಿಯಲ್ಲಿ ಕೈಗೊಳ್ಳಲು ಅಧಿಕಾರಿಗಳು ಖುದ್ದಾಗಿ ಪರಿಶೀಲನೆ ಮಾಡಿ ಬಯಲುಸೀಮೆ ಪ್ರದೇಶವಾಗಿರುವ ಇಂಡಿ, ಚಡಚಣ, ನಾಗಠಾಣ, ಭಾಗದ ರೈತರ ಜಮೀನುಗಳಿಗೆ ನೀರು ಹರಿದು ನೀರಾವರಿ ಕ್ಷೇತ್ರವಾಗಿ ಮಾರ್ಪಡಬೇಕು ಎನ್ನುವುದೇ ನನ್ನ…
ವಿಜಯಪುರ: ಎಲ್ಲಾ ಗುತ್ತಿಗೆ ಮುನಸಿಪಲ್ ಕಾರ್ಮಿಕರ ನೇರ ಪಾವತಿ ಅಡಿಯಲ್ಲಿ ಸಮಾನ ವೇತನ ಜಾರಿಗೆ ಒತ್ತಾಯಿಸಿ ವಿಜಯಪುರ ಮಹಾನಗರ ಪಾಲಿಕೆ, ವಾಹನ ಚಾಲಕರ ಮತ್ತು ನಿರ್ವಾಹಕರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಬುಧವಾರ ಮನವಿ ಸಲ್ಲಿಸಲಾಯಿತು.ಈ ಸಂದರ್ಭ ಕಾರ್ಮಿಕರ ಸಂಘದ ಪ್ರಮುಖರು ಮಾತನಾಡಿ, ರಾಜ್ಯ ಸರ್ಕಾರವು ಮುನಿಸಿಪಾಲಿಟಿಗಳಲ್ಲಿ ದುಡಿಯುವ ಎಲ್ಲಾ ಗುತ್ತಿಗೆ, ಹೊರ ಗುತ್ತಿಗೆ ಆಧಾರಿತ ಪೌರಕಾರ್ಮಿಕರು, ನೀರು ಸರಬರಾಜು ವಿಭಾಗದ ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್, ಕಸದ ವಾಹನ ಚಾಲಕರು, ಸಹಾಯಕರು ಹಾಗೂ ಪೌರಕಾರ್ಮಿಕರು, ಪಾರ್ಕ, ಸ್ಮಶಾನ, ಶೌಚಾಲಯಗಳಲ್ಲಿ ಘನ ತ್ಯಾಜ್ಯ ಘಟಕ, ಯು.ಜಿ.ಡಿ. ನೀರು ಸಂಸ್ಕರಣಾ ಘಟಕದ ಕಾರ್ಮಿಕರು, ಮೇಲ್ವಿಚಾರಕರು ಎಂಬ ಅಸಂಬದ್ಧ ವಿಗಂಡಣೆಯನ್ನು ಕೈಬಿಟ್ಟು, ಎಲ್ಲಾ ಸ್ವಚ್ಛತಾ ಕಾರ್ಮಿಕರನ್ನು ವಾಹನ ಚಾಲಕರ ಸೇವೆಗಳನ್ನು ಈ ತಕ್ಷಣದಿಂದ ನೇರ ಪಾವತಿಯಡಿಯಲ್ಲಿ ತಂದು ಸಮಾನ ವೇತನ ನೀಡಬೇಕು. ನಂತರದಲ್ಲಿ ಹಂತ ಹಂತವಾಗಿ ಖಾಯಂಗೊಳಿಸಲು ರಾಜ್ಯ ಸರ್ಕಾರ ೨೦೨೪ ರ ಬಜೆಟ್ನಲ್ಲಿ ಕ್ರಮವಹಿಸಬೇಕೆಂದು ಆಗ್ರಹಿಸಿದರು.ಬಳಿಕ ಕಾರ್ಮಿಕರಿಗೆ ಸಿಗಬೇಕಾದ…
ಕೊಲ್ಹಾರ: ಇಂದಿನ ದಿನಮಾನಗಳಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಬಗ್ಗೆ ಅರಿವು ಮೂಡಿಸಲು ಅವರಿಗೆ ಸಮಾನ ಅವಕಾಶ ನೀಡುವದರ ಜೊತೆಗೆ ಪ್ರತಿಯೊಬ್ಬ ಹೆಣ್ಣುಮಗು ಶಿಕ್ಷಣವಂತಳಾಗಿ ಬದುಕಲು ಅವಕಾಶ ಮಾಡಿಕೊಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಸಾಹಿತಿ ಶಿಕ್ಷಕ ಜಗದೀಶ ಸಾಲಹಳ್ಳಿ ಹೇಳಿದರು.ತಾಲೂಕಿನ ಮಸೂತಿ ಗ್ರಾಮದಲ್ಲಿರುವ ಗುರು ಸಂಗನಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆಣ್ಣು ಮಕ್ಕಳು ಸಮಾಜದಲ್ಲಿ ಅನುಭವಿಸುತ್ತಿರುವ ಗೃಹ ಹಿಂಸೆ, ಭೇಧ ಭಾವ, ಬಾಲ್ಯ ವಿವಾಹ ಪದ್ದತಿಗೆ ಅನುವಾಗುವದರ ಮೂಲಕ ಹಲವಾರು ಜ್ವಲಂತ ಸಮಸ್ಯೆಗಳ ಸುಳಿಗೆ ಸಿಲುಕುವ ಹೆಣ್ಣಿನ ಶೋಷಣೆಯ ಕುರಿತು ಜಾಗೃತೆ ಮೂಡಿಸಬೇಕೆಂದು ಕರೆ ಕೊಟ್ಟರು.ಶಿಕ್ಷಕಿ ಎಚ್.ಎಸ್.ತಳವಾರ ಮಾತನಾಡಿದರು.ಮಹಿಳೆಯರ ಕುರಿತು ಜಾಗೃತಿ ಮೂಡಿಸುವ ಕಿರು ನಾಟಕದ ಪ್ರದರ್ಶನ, ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರ ಕುರಿತು ಛದ್ಮವೇಷಗಳಲ್ಲಿ ತೋರಿಸಿಕೊಟ್ಟರು.ಈ ಸಂದರ್ಭದಲ್ಲಿ ಎಮ್.ಎಚ್.ನಾಯಕ, ಎಸ.ಎಸ.ದಂಗಲ, ಪ್ರವೀಣ ಪಾಟೀಲ, ಎಸ್.ಐ.ಅಮರಖೇಡ, ನೀಲಮ್ಮ ಹಿರೇಮಠ ಉಪಸ್ಥಿತರಿದ್ದರು.
