Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಡಚಣ: ಮಾ.೧೮ ಬುಧುವಾರ ದಿವಸ ಸಾಯಂಕಾಲ 6:30 ಗಂಟೆಗೆ ಬಳ್ಳೂಳ್ಳಿಯ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲಾ ಆವರಣದಲ್ಲಿ ಅಧ್ಯಕ್ಷರು ಜ್ಞಾನ ಯೋಗಾಶ್ರಮ ವಿಜಯಪುರ ಬಸವಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಬಳ್ಳೊಳ್ಳಿ ಗ್ರಾಮ ದೇವರು ಶ್ರೀ. ವೀರಭದ್ರದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ 21ದಿನಗಳ ಪರ್ಯಂತ ಹಮ್ಮಿಕೊಂಡ ಬಬಲಾದಿ ಸದಾಶಿವಯೋಗಿಗಳ ಪುರಾಣ ಮುಕ್ತಾಯ ಸಮಾರಂಭ ಹಮ್ಮಿಕೊಂಡಿದ್ದು, ಎಲ್ಲಾ ಭಕ್ತಾದಿಗಳು, ಗ್ರಾಮಸ್ಥರು ಪುರಾಣ ಮುಕ್ತಾಯ ಸಮಾರಂಭದಲ್ಲಿ ಭಾಗಿಯಾಗಿ ಕಾರ್ಯಕ್ರಮಕ್ಕೆ ಶೋಭೆ ತರಬೇಕೆಂದು ಸೇವಾ ಸಮಿತಿ ಅಧ್ಯಕ್ಷರು, ಮಾಜಿ ಸಚಿವರು ಅಪ್ಪಾಸಾಹೇಬ ಪಟ್ಟಣಶೆಟ್ಟಿ ಪ್ರಕಟಣೆಗೆ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸಕ್ತ ಸಂದರ್ಭದಲ್ಲಿ ಜನರು ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸುತ್ತಿದ್ದು, ವಿಷಮುಕ್ತ ಆಹಾರ ಸೇವನೆಯತ್ತ ವಾಲಿದ್ದಾರೆ. ಹೀಗಾಗಿ ಸಾವಯವ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದ್ದು, ಕಬ್ಬು ಬೆಳೆಗಾರರು ಕೂಡ ವಿಷಮುಕ್ತ ಬೆಲ್ಲ ತಯಾರಿಕೆಗೆ ಆದ್ಯತೆ ನೀಡಲಿ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಸಲಹೆ ನೀಡಿದರು.ತಾವು ಪ್ರತಿನಿಧಿಸುವ ಬಸವನಬಾಗೇವಾಡಿ ಕ್ಷೇತ್ರದ ಮನಗೂಳಿಯ ಸಾವಯವ ಕೃಷಿಕರಾದ ಅಶ್ವಿನಿ ಚಂದ್ರಶೇಖರ ರೆಡ್ಡಿ ಅವರು ಪುಣ್ಯಕೋಟಿ ಫಾರ್ಮನಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆದ ಕಬ್ಬು ಬಳಸಿ ತಯಾರಿಸಿದ ಬಕೇಟ್ ಬೆಲ್ಲ , ಬೆಲ್ಲದ ಅಚ್ಚು, ಬೆಲ್ಲದ ಪಾಕ ಹಾಗೂ ಬೆಲ್ಲದ ಪುಡಿ ಉತ್ಪನ್ನಗಳನ್ನು ಸೋಮವಾರ ಬಿಡುಗಡೆಮಾಡಿ ಮಾತನಾಡಿದ ಸಚಿವರು, ನನ್ನ ಕ್ಷೇತ್ರದಲ್ಲಿ ಕಬ್ಬು ಬೆಳೆಯುವ ರೈತರಲ್ಲಿ ಬಹುತೇಕರು ಪ್ರಗತಿಪರರು, ಸಾವಯವ ಪದ್ಧತಿ ಅನುಸರಿಸುವವರ ಸಂಖ್ಯೆ ಹೆಚ್ಚುತ್ತಿದ್ದು, ಆಶಾದಾಯಕ ಹಾಗೂ ಮುಂದಿನ ಪೀಳಿಗೆಗೆ ಸ್ಪೂರ್ತಿದಾಯಕವಾಗಿದೆ ಎಂದರು.ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಮನಗೂಳಿಯ ರಿಷಬ್ ಫಾರ್ಮನಲ್ಲಿ ಸಾವಯವ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿ ಮುಂದೆ ಬಂದಿದ್ದಾರೆ. ಸಮಾಜದಲ್ಲಿ ಅವರ ಪಾತ್ರ ತುಂಬಾ ಮಹತ್ವದಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ಧೈರ್ಯದಿಂದ ಮುಂದೆ ಬರಬೇಕು ಎಂದು ಜಮಖಂಡಿಯ ಸಿಡಿಪಿಒ ಆನಂದ ಪಿ. ಹೇಳಿದರು.ನಗರದ ಅಂಜುಮನ್ ಶಾದಿ ಮಹಲ್ ಗಲಗಲಿ ಆರ್ಸಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಮೆಲ್ ಆಶಿಷ ಚಾರಿಟೇಬಲ್ ಟ್ರಸ್ಟ್ ಅಡಕುರು ಶಾಖೆ, ಜಮಖಂಡಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾಯವಾದಿ ಫಾ. ಸುಮನ್ ಬಾಲೂ ಮಾತನಾಡಿ, ಮಹಿಳೆಯರು ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸುವುದರ ಜೊತೆಗೆ ಸಮಾಜದಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಿದ್ದಾರೆ ಎಂದು ಹೇಳಿದರು.ಫಾ.ಪೀಟರ್ ಆಶೀರ್ವಾದ ಮಾತನಾಡಿ, ಮಹಿಳಾ ಸ್ವಸಹಾಯ ಗುಂಪುಗಳು ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಯನ್ನು ಸಾಧಿಸುತ್ತಿರುವುದನ್ನು ಕಂಡು ಮೆಚ್ಚುಗೆಯ ಮಾತುಗಳನ್ನು ಆಡಿದರು, ವೇದಿಕೆಯ ಮೇಲಿದ್ದ ಅತಿಥಿಗಳು ಮಹಿಳಾ ಸಬಲೀಕರಣದ ಕುರಿತು ಮಾತನಾಡಿದರು.ಜಮಖಂಡಿ ತಾಲೂಕಿನ ವಿವಿಧ ಗ್ರಾಮಗಳ 54 ಸ್ವಸಹಾಯ ಗುಂಪುಗಳ ಪ್ರತಿನಿಧಿಗಳು, ಸದಸ್ಯರು ಸೇರಿ ಸುಮಾರು 500 ಹೆಚ್ಚು ಮಹಿಳೆಯರು ಭಾಗವಹಿಸಿದರು.ಮಹಿಳೆಯರ ಸಾಂಸ್ಕೃತಿಕ ನೃತ್ಯ…

Read More

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಬಾನಗರ ಬಳಿ ಎರಡೂವರೆ ವರ್ಷದಲ್ಲಿ ಡ್ಯಾಂ ನಿರ್ಮಾಣವಾಗಲಿದ್ದು, ಇದರಿಂದ ತಿಕೋಟಾ ಭಾಗದ ರೈತರಿಗೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಮುಸ್ಸಂಜೆ ತಿಕೋಟಾ ಪಟ್ಟಣದಲ್ಲಿ ಬಾಬಾನಗರ ಬಳಿ ಡ್ಯಾಂ‌ ನಿರ್ಮಾಣಕ್ಕೆ ಕಾರಣರಾದ ಹಿನ್ನೆಲೆಯಲ್ಲಿ ಸಚಿವ ಎಂ. ಬಿ. ಪಾಟೀಲ‌ ಅವರನ್ನು ರೈತರು ಅಭಿನಂದನೆ ಕಾರ್ಯಕ್ರಮ ಆಯೋಜಿಸಿ ಮಣುಕ(ಒಣದ್ರಾಕ್ಷಿ) ಹಾರದಿಂದ ಸನ್ಮಾನಿಸಿ ತಾವು ಬೆಳೆದ ತೋಟಗಾರಿಕೆ ಉತ್ಪನ್ನಗಳ‌ನ್ನು ಸಮರ್ಪಿಸಿ ಕೃತಜ್ಞತೆ ಸಲ್ಲಿಸಿದರು.ರೈತರಿಂದ ಅಭಿನಂದನೆ ಸ್ವೀಕರಿಸಿ ಮಾತಮಾಡಿದ ಸಚಿವರು, ತಾವು ಜಲಸಂಪನ್ಮೂಲ‌ ಸಚಿವರಾದ ನಂತರ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳಿಗಾಗಿ ಕೈಗೊಂಡ ಕ್ರಮಗಳು, ಎದುರಿಸಿದ ಸವಾಲುಗಳು, ಅಸಾಧ್ಯವಾದುದುನ್ನು ಸಾಧಿಸಿದ ಬಳಿಕ ರೈತರಿಗೆ ಆದ ಸಂತಸದ ಕುರಿತು ಅನುಭವ ಹಂಚಿಕೊಂಡರು.ಆದರೂ, ಬೇಸಿಗೆಯಲ್ಲಿ ತಿಕೋಟಾ ತಾಲೂಕಿನಲ್ಲಿ ನೀರಿನ ಸಮಸ್ಯೆ ಎದುರಾಗುತ್ತಿತ್ತು. ‌ನೀರಾವರಿ ಆಗಿರುವ ಹಿನ್ನೆಲೆಯಲ್ಲಿ ರೈತರ ಜಮೀನು…

Read More

*ಉದಯರಶ್ಮಿ ದಿನಪತ್ರಿಕೆ* ಸರಗೂರು: 2028ಕ್ಕೆ ರಾಜ್ಯದಲ್ಲಿ NDA ಅಧಿಕಾರಕ್ಕೆ ಬರುತ್ತೆ. ಮೊದಲ ಎರಡೂವರೆ ವರ್ಷ ವಿ. ಸೋಮಣ್ಣ ಮುಖ್ಯಮಂತ್ರಿ ಆಗ್ತಾರೆ, ಬಾಕಿ ಎರಡೂವರೆ ವರ್ಷ ಬಿ.ವೈ. ವಿಜಯೇಂದ್ರ ಮುಖ್ಯಮಂತ್ರಿ ಆಗ್ತಾರೆ. ನನ್ನ ಭವಿಷ್ಯವಾಣಿ ಯಾವುದೇ ಕಾರಣಕ್ಕೂ ಸುಳ್ಳಾಗಲ್ಲ ಎಂದು ನಂಜನಾಥಪುರದ ಸಿಂಗಪಟ್ಟಣ ಶ್ರೀ ಮಾರಮ್ಮ ದೇವಸ್ಥಾನದ ಪೂಜಾರಿ ಪುಟ್ಟಸ್ವಾಮಿ ಭವಿಷ್ಯ ನುಡಿದಿದ್ದಾರೆ.ತಾಲೂಕಿನ ನಂಜನಾಥಪುರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಉದ್ಭವಮೂರ್ತಿ ಸಿಂಗಪಟ್ಟಣ ಶ್ರೀ ಮಾರಮ್ಮ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. 2028ಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂದೆ ನಿಂತು ಪ್ರಚಾರ ಮಾಡಿದ್ರೆ, ಬಿಜೆಪಿ ಸುಲಭವಾಗಿ ಅಧಿಕಾರಕ್ಕೆ ಬರುತ್ತೆ. ಏಕಾಂಗಿಯಾಗಿ ಸ್ಪರ್ಧೆ ಮಾಡಿದ್ರೆ 117 ಸ್ಥಾನ ಗೆಲ್ಲುತ್ತೆ. ಒಂದು ವೇಳೆ ಜೆಡಿಎಸ್ ಜೊತೆಗೂಡಿ ಚುನಾವಣೆ ಎದುರಿಸಿದರೆ 135 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೆ. ಮೊದಲ ಎರಡೂವರೆ ವರ್ಷ ಅವಧಿಗೆ ಹೈಕಮಾಂಡ್ ನಾಯಕರ ಕೃಪಾಕಟಾಕ್ಷದಿಂದ ವಿ. ಸೋಮಣ್ಣ ಮುಖ್ಯಮಂತ್ರಿ ಆಗ್ತಾರೆ. ಉಳಿದ…

Read More

ಉದಯರಶ್ಮಿ ದಿನಪತ್ರಿಕೆ ಸರಗೂರು: 2028ಕ್ಕೆ ರಾಜ್ಯದಲ್ಲಿ NDA ಅಧಿಕಾರಕ್ಕೆ ಬರುತ್ತೆ. ಮೊದಲ ಎರಡೂವರೆ ವರ್ಷ ವಿ. ಸೋಮಣ್ಣ ಮುಖ್ಯಮಂತ್ರಿ ಆಗ್ತಾರೆ, ಬಾಕಿ ಎರಡೂವರೆ ವರ್ಷ ಬಿ.ವೈ. ವಿಜಯೇಂದ್ರ ಮುಖ್ಯಮಂತ್ರಿ ಆಗ್ತಾರೆ. ನನ್ನ ಭವಿಷ್ಯವಾಣಿ ಯಾವುದೇ ಕಾರಣಕ್ಕೂ ಸುಳ್ಳಾಗಲ್ಲ ಎಂದು ನಂಜನಾಥಪುರದ ಸಿಂಗಪಟ್ಟಣ ಶ್ರೀ ಮಾರಮ್ಮ ದೇವಸ್ಥಾನದ ಪೂಜಾರಿ ಪುಟ್ಟಸ್ವಾಮಿ ಭವಿಷ್ಯ ನುಡಿದಿದ್ದಾರೆ. ತಾಲೂಕಿನ ನಂಜನಾಥಪುರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಉದ್ಭವಮೂರ್ತಿ ಸಿಂಗಪಟ್ಟಣ ಶ್ರೀ ಮಾರಮ್ಮ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. 2028ಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂದೆ ನಿಂತು ಪ್ರಚಾರ ಮಾಡಿದ್ರೆ, ಬಿಜೆಪಿ ಸುಲಭವಾಗಿ ಅಧಿಕಾರಕ್ಕೆ ಬರುತ್ತೆ. ಏಕಾಂಗಿಯಾಗಿ ಸ್ಪರ್ಧೆ ಮಾಡಿದ್ರೆ 117 ಸ್ಥಾನ ಗೆಲ್ಲುತ್ತೆ. ಒಂದು ವೇಳೆ ಜೆಡಿಎಸ್ ಜೊತೆಗೂಡಿ ಚುನಾವಣೆ ಎದುರಿಸಿದರೆ 135 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೆ. ಮೊದಲ ಎರಡೂವರೆ ವರ್ಷ ಅವಧಿಗೆ ಹೈಕಮಾಂಡ್ ನಾಯಕರ ಕೃಪಾಕಟಾಕ್ಷದಿಂದ ವಿ. ಸೋಮಣ್ಣ ಮುಖ್ಯಮಂತ್ರಿ ಆಗ್ತಾರೆ.…

Read More

ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿಜಮಖಂಡಿ: ಬೇಸಿಗೆ ಕಾಡುತ್ತಿರುವುದನ್ನು ಅರಿತು ಎಲ್ಲೆಡೆ ರಸ್ತೆ ಬದಿಗಳಲ್ಲಿ ಎಳನೀರು ಮಾರಾಟಗಾರರು ಕಳೆದ ವಾರದಿಂದ ಹೆಚ್ಚಾಗಿದ್ದು ತಾಲೂಕಿನ ಗ್ರಾಮೀಣ ಹಾಗೂ ವಿವಿಧೆಡೆಗಳಿಂದ ಎಳನೀರು ತಂದು ಮಾರಾಟ ನಡೆಸುತ್ತಿದ್ದಾರೆ. ಬಿಸಿಲಿನ ಧಗೆಯಿಂದ ರಕ್ಷಿಸಿಕೊಳ್ಳಲು ಎಳನೀರು ಮತ್ತು ಕಲ್ಲಂಗಡಿ ಹಣ್ಣಿಗೆ ಹೆಚ್ಚು ಮೊರೆ ಹೋಗುತ್ತಿದ್ದಾರೆ. ನಗರದ ಬಹುತೇಕ ಹಣ್ಣಿನ ಜ್ಯೂಸ್‌ ಸೆಂಟರ್‌ಗಳಲ್ಲಿಯೂ ವ್ಯಾಪಾರ ಜೋರಾಗಿ ನಡೆಯುತ್ತಿದೆ. ಅನೇಕ ರಸ್ತೆ ಬದಿಗಳಲ್ಲಿ ಎಳನೀರು, ಕಲ್ಲಂಗಡಿ, ಸೌತೆಕಾಯಿ ಮಾರಾಟದ ಭರಾಟೆ ಜೋರಾಗಿ ನಡೆಯುತ್ತಿದೆ. ಬಹುತೇಕ ರಸ್ತೆ ಬದಿಗಳಲ್ಲಿ ಎಳನೀರು ಮತ್ತು ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ಕಂಡು ಬರುತ್ತಿದ್ದಾರೆ.ದಿನೇದಿನೆ ಹೆಚ್ಚುತ್ತಿರುವ ರಣ ಬಿಸಿಲು ಜನರನ್ನು ಕಂಗೆಡಿಸುತ್ತಿದ್ದು, ಇದರಿಂದ ಪಾರಾಗಲು ಎಳನೀರು , ಕಲ್ಲಂಗಡಿ, ಕಬ್ಬಿನ ಹಾಲು, ಮಜ್ಜಿಗೆ ಹಾಗೂ ಹಣ್ಣಿನ ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಜಮಖಂಡಿ ಸೇರಿದಂತೆ ಕೋಟೆನಾಡಿನ ಪ್ರದೇಶಗಳಾದ ಮುಧೋಳˌ ಬೀಳಗಿˌ ಮಹಾಲಿಂಗಪೂರˌ ತೇರದಾಳˌ ರಬಕವಿ-ಬನಹಟ್ಟಿ ಸೇರಿದಂತೆ ಹಲವು ಕಡೆ ಬಿಸಿಲ ಕಾವು ಏರುತ್ತಿದೆ. ಈಗಾಗಲೇ ಬಿಸಿಲ ಹೊಡೆತಕ್ಕೆ ಕಂಗಾಲಾಗಿರುವ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ತಗುಲದಂತೆ ತಡೆಯುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿರುವ ಎಚ್‌ ಪಿವಿ (ಹೂಮನ್ ಪ್ಯಾಪಿಲೋಮ ವೈರಸ್) ಲಸಿಕೆಯನ್ನು ನೀಡಲು ಆರೋಗ್ಯ ಇಲಾಖೆ ಸಜ್ಜಾಗಿದ್ದು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿದೆ.ತಾಲೂಕಿನ ಚಿಕ್ಕಲಕಿ ಕ್ರಾಸ್ ಆರೋಗ್ಯ ಕೇಂದ್ರದಲ್ಲಿ ಸರ್ಕಾರಿ ಶಾಲಾ ಪ್ರೌಢಶಾಲಾ ಬಾಲಕಿಯರಿಗೆ ಲಸಿಕೆ ನೀಡಿ ಮಾತನಾಡಿದ ಮುಖ್ಯ ಆರೋಗ್ಯಧಿಕಾರಿ ಡಾ.ಮುಕುಂದ ಕಾಂಬಳೆ ಬಾಲಕಿಯರಿಗೆ 14ರಿಂದ 15 ವರ್ಷ ವಯೋಮಾನದ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ. ತಾಲೂಕಿನಾದ್ಯಂತ ಈ ವಯೋಮಾನದ ಸುಮಾರು ಐದು ಸಾವಿರಕ್ಕೂ ಅಧಿಕ ಬಾಲಕಿಯರಿದ್ದಾರೆ ಎಂದು ಅಂದಾಜಿಸಲಾಗಿದೆ. ಅಮೆರಿಕದ ಗಾರ್ಡಿಸಿಲ್ ಕಂಪನಿ ಉತ್ಪಾದಿಸಿರುವ ಎಚ್‌ಪಿವಿ ಲಸಿಕೆಯ ಒಂದು ಡೋಸ್ ಮಾತ್ರ. ಪ್ರತಿ ಬಾಲಕಿಗೆ ನೀಡಲಾಗುತ್ತದೆ. ನಮ್ಮ ಆರೋಗ್ಯ ಕೇಂದ್ರಕ್ಕೆ ಮೊದಲ ಹಂತದ ಡೋಸ್ ಪೂರೈಕೆಯಾಗಿದ್ದು, ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ನಮ್ಮ ಚಿಕ್ಕಲಕಿ ಕ್ರಾಸ್ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಲಭ್ಯವಿದೆ. ಶುಷ್ರೂಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ…

Read More

ಉದಯರಶ್ಮಿ ದಿನಪತ್ರಿಕೆ ಯಾಳವಾರ (ದೇವರಹಿಪ್ಪರಗಿ): ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ ಭವಿಷ್ಯ ರೂಪಿಸುವಲ್ಲಿ ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಗಮನಾರ್ಹವಾಗಿದೆ ಎಂದು ಕಡಕೋಳ ಸಂಸ್ಥಾನಮಠದ ರಾಜಗುರು ಮಹಾಲಿಂಗ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಯಾಳವಾರ ಗ್ರಾಮದ ಸಂಸ್ಕಾರಧಾಮ ಪೂರ್ವ ಹಾಗೂ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಜರುಗಿದ ಸಂಸ್ಕಾರ ಉತ್ಸವ ಹಾಗೂ ೧೪ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಗ್ರಾಮದ ಮಕ್ಕಳಿಗೆ ಸತತ ೧೪ ವರ್ಷಗಳ ಕಾಲ ಸತ್ವಯುತ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುತ್ತಿರುವ ಸಂಸ್ಥೆ ಉತ್ತರೋತ್ತರವಾಗಿ ಬೆಳೆಯಲಿ ಎಂದು ಹಾರೈಸಿದರು.ಪ್ರವಚನಕಾರ ಬಸಯ್ಯ ಸ್ವಾಮೀಜಿ ಮಾತನಾಡಿ, ಮಗುವಿನ ಬೆಳವಣಿಗೆಯಲ್ಲಿ ಪಾಲಕ, ಪೋಷಕ, ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಯಾವುದೇ ಕಾರಣಕ್ಕೂ ಮಗುವಿನ ಶಿಕ್ಷಣದ ಜವಾಬ್ದಾರಿಯಿಂದ ನುಣಚಿಕೊಳ್ಳದೇ ನಾವು ನಮ್ಮ ಕರ್ತವ್ಯ ನಿರ್ವಹಿಸಿ ಅವರನ್ನು ಸತ್ಪçಜೆಗಳನ್ನಾಗಿಸೋಣ ಎಂದರು.ಸಂಸ್ಕಾರರತ್ನ ಪ್ರಶಸ್ತಿ ವಿಜೇತರಾದ ಎಸ್.ಎಸ್.ಸಾತಿಹಾಳ, ಕೆ.ಆರ್.ಕೊಕಟನೂರ, ಮಹಾಂತೇಶ ಸಂಗಮ, ಸಿ.ಕೆ.ಕಿರಣಗಿ ವೈದ್ಯ ವಿದ್ಯಾರ್ಥಿ ಹರೀಶ ನ್ಯಾಮಣ್ಣವರ ಮಾತನಾಡಿದರು.ಸಂಸ್ಥೆಯ ಅಧ್ಯಕ್ಷ ಎಸ್.ಕೆ.ಪಟೇದ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದಲ್ಲಿ ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ತಹಶೀಲ್ದಾರ ನಿಂಗಪ್ಪ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಚೇರಿಗೆ ಶುಕ್ರವಾರ ಆಗಮಿಸಿದ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ತರಕಾರಿ ಮಾರಾಟಗಾರರ ಕುರಿತು ತಹಶೀಲ್ದಾರ ಅವರ ಗಮನ ಸೆಳೆದರು.ಈ ಸಂದರ್ಭದಲ್ಲಿ ರಾಷ್ಟಿçÃಯ ರೈತಸಂಘದ ಕಾರ್ಯದರ್ಶಿ ರೇಣುಕಾ ಪಾಟೀಲ ಮಾತನಾಡಿ, ಪಟ್ಟಣದಲ್ಲಿ ತರಕಾರಿ ಮಾರಾಟಗಾರರು ಬಿಸಿಲು, ಮಳೆ, ಚಳಿಯೇನ್ನದೇ ವರ್ಷದುದ್ದಕ್ಕೂ ವಿಜಯಪುರ-ಕಲಬುರ್ಗಿ ಮಧ್ಯೆದ ರಾಷ್ಟ್ರೀಯ ಹೆದ್ದಾರಿ ೫೦ ರ ಪಕ್ಕದಲ್ಲಿ ಮಾರಾಟ ಮಾಡಲು ಕುಳಿತುಕೊಳ್ಳುತ್ತಾರೆ. ಇವರಿಂದ ವಾಹನ ಸಂಚಾರಕ್ಕೂ ಅಡತಡೆ ಜೊತೆಗೆ ಮಾರಾಟಗಾರರ ಜೀವಕ್ಕೂ ಅಪಾಯಕಾರಿ ಆದ್ದರಿಂದ ಅವರಿಗೆ ಸೂಕ್ತವಾದ ಮಾರುಕಟ್ಟೆ ಪ್ರದೇಶ ಅವಶ್ಯಕವಾಗಿದೆ. ಸ್ಥಳೀಯ ಹಾಗೂ ತಾಲ್ಲೂಕು ಆಡಳಿತ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ನಮ್ಮ ಕರ್ನಾಟಕ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಹಸನ್ ನಧಾಫ್, ರಾಜ್ಯ ರೈತಸಂಘದ ಯುವ ಸಂಚಾಲಕ ಸಿದ್ದನಗೌಡ ಪಾಟೀಲ ಮಾತನಾಡಿ, ರೈತ ಮಾರಾಟಗಾರರಿಗೆ ಅವಶ್ಯವಿರುವ…

Read More