Author: editor.udayarashmi@gmail.com

ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋದನಾ ಕೇಂದ್ರದಲ್ಲಿ ಜನೇವರಿ 29 ರಂದು ಉಚಿತ ಪೈಬ್ರೋಸ್ಕ್ಯಾನ್ ಕಾರ್ಯಕ್ರಮ ಆಯೋಜಿಸಲಾಗಿದೆ.ಆಸ್ಪತ್ರೆಯ ಟ್ರಾಮಾ ಕಟ್ಟಡದ ನೆಲಮಹಡಿಯಲ್ಲಿ ಜನೇವರಿ 29 ರಂದು ಸೋಮವಾರ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯ ವರೆಗೆ ಈ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಲಿದ್ದು, ಗ್ಯಾಸ್ಟ್ರೊಎಂಟರಾಲಾಜಿಸ್ಟ್ ಮತ್ತು ಡಯಟೀಸಿಯನ್ ತಜ್ಞರಿಂದ ಉಚಿತ ಸಮಾಲೋಚನೆ ಮತ್ತು ಸಲಹೆ ನಡೆಯಲಿದೆ.ಫ್ಯಾಬ್ರೊಸ್ಕ್ಯಾನ್ ಸರಳವಾದ ಮತ್ತು ನೋವು ರಹಿತ ತಪಾಸಣೆ ವಿಧಾನವಾಗಿದ್ದು, ಯಕೃತ್ತಿನ(ಲೀವರ್) ಆರೋಗ್ಯವನ್ನು ನಿಖರವಾಗಿ ಪತ್ತೆ ಹಚ್ಚಲು ಬಳಕೆಯಾಗುವ ಆರೋಗ್ಯ ತಪಾಸಣೆ ಪದ್ದತಿಯಾಗಿದೆ. ಈ ತಪಾಸಣೆಯಿಂದ ಪಿತ್ತ ಜನಕಾಂಗದ ಕೊಬ್ಬಿನ ಕಾಯಿಲೆ, ಲೀವರ್ ಸಿರೋಸಿಸ್, ಲೀವರ್ ಕ್ಯಾನ್ಸರ್, ಮದ್ಯಪಾನಯುಕ್ತ ಪಿತ್ತಜನಕಾಂಗ ಕಾಯಿಲೆ, ಬೊಜ್ಜು ಮತ್ತು ಇತರೆ ಲೀವರ್ ಸಮಸ್ಯಗಳು, ದೀರ್ಘ ಕಾಲದ ಕಾಮಾಲೆ(ಹೆಪಟೈಟಿಸ್) ಬಿ ಮತ್ತು ಸಿ ಪತ್ತೆಮಾಡಬಹುದಾಗಿದೆ.ನೋಂದಣಿಗಾಗಿ 9591682224 ಮತ್ತು 6366786003 ಸಂಪರ್ಕಿಸಬಹುದಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ…

Read More

-ಮನು ಪತ್ತಾರ, ಕಲಕೇರಿ ೧೯೪೫ರಲ್ಲಿ ದ್ವಿತೀಯ ಮಹಾಯುದ್ಧವು ಕೊನೆಗೊಂಡ ನಂತರ ಭಾರತದಲ್ಲಿ ಬ್ರಿಟಿಷರಿಂದ ಸ್ವಾತಂತ್ರ‍್ಯ ಪಡೆದುಕೊಳ್ಳುವ ಪ್ರಶ್ನೆ ಬಹು ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ. ಸ್ವಾತಂತ್ರ‍್ಯವನ್ನು ಹಸ್ತಾಂತರಿಸಲು ಬ್ರಿಟೀಷ ಸರಕಾರ ತನ್ನ ಮಂತ್ರಿಗಳಿಂದ ಕೂಡಿದ ತ್ರಿ-ಸದಸ್ಯರ ಕ್ಯಾಬಿನೆಟ್ ಆಯೋಗವನ್ನು ಭಾರತಕ್ಕೆ ಕಳುಹಿಸಿಕೊಟ್ಟಿತ್ತು. ಅದು ಇಲ್ಲಿಯ ಪರಿಸ್ಥಿತಿಯ ಅಧ್ಯಯನ ನಡೆಸಿ ೧೯೪೬ ಮಾರ್ಚ ೧೬ರಂದು ತನ್ನ ವರದಿಯನ್ನು ಮಂಡಿಸುತ್ತದೆ. ಭಾರತವು ತನ್ನ ಸುಗಮ ಆಡಳಿತದ ನಿರ್ವಹಣೆಗಾಗಿ ಒಂದು ಸಂವಿಧಾನವನ್ನು ರಚಿಸಲು ರಾಜ್ಯಾಂಗ ಸಭೆಯನ್ನು ರಚಿಸಿಕೊಳ್ಳಬೇಕೆಂದು ಆಯೋಗವು ಶಿಫಾರಸ್ಸು ಮಾಡುತ್ತದೆ. ಈ ಶಿಫಾರಸ್ಸಿನಂತೆ ರಾಜ್ಯಾಂಗ ರಚನಾ ಸಭೆಗೆ ಸದಸ್ಯರ ಆಯ್ಕೆಗೆ ಚುನಾವಣೆಗಳು ನಡೆಯುತ್ತವೆ. ಪ್ರಾಂತೀಯ ವಿಧಾನಸಭೆಗಳು ಈ ಚುನಾವಣೆ ನಡೆಸಿ ಸದಸ್ಯರನ್ನು ಆಯ್ಕೆ ಮಾಡಿ, ರಾಜ್ಯಾಂಗ ಸಭೆಗೆ ಕಳುಹಿಸಿಕೊಡುತ್ತವೆ.ಡಾ. ಬಿ. ಆರ್. ಅಂಬೇಡ್ಕರ್ ಅವರು ಬಂಗಾಳ ವಿಧಾನಸಭೆಯಿಂದ ಆಯ್ಕೆಗೊಂಡು ಸಂವಿಧಾನ ರಚನಾ ಸಭಗೆ ಪ್ರವೇಶಿಸುತ್ತಾರೆ. ಸ್ವತಂತ್ರ ಭಾರತದ ಸಂವಿಧಾನ ರಚಿಸಲು ರಾಜ್ಯಾಂಗ ಸಭೆಯು ೧೯೪೬ ಡಿಸೆಂಬರ್ ೯ರಂದು ಆರಂಭಗೊಳ್ಳುತ್ತದೆ. ೨೯೬ ಸದಸ್ಯರ ಪೈಕಿ ೨೦೭ ಸದಸ್ಯರು ಪ್ರಥಮ…

Read More

– ಜಯಶ್ರೀ.ಜೆ.ಅಬ್ಬಿಗೇರಿಉಪನ್ಯಾಸಕರು, ಬೆಳಗಾವಿ೯೪೪೯೨೩೪೧೪೨ ಈಗಿನ ದಾವಂತದ ಬದುಕಿನಲ್ಲಿ ಸಂಬಂಧಗಳನ್ನು ನಿಭಾಯಿಸುವುದೇ ಒಂದು ದೊಡ್ಡ ತಲೆನೋವಾಗಿ ಬಿಟ್ಟಿದೆ. ಪ್ರತಿ ಸಂಬಂಧಗಳ ನಿಭಾವಣೆಯೂ ಹಗ್ಗದ ಮೇಲೆ ನಡೆದಂತೆನಿಸುತ್ತಿದೆ ಎಂಬುದು ಬಹುತೇಕರ ಅಭಿಪ್ರಾಯ.ಮೊದಲೆಲ್ಲ ಸಂಬಂಧಗಳಲ್ಲಿ ಮಧುರತೆಯ ಪರಿಮಳವಿರುತ್ತಿತ್ತು. ನೀನಿಲ್ಲದೇ ನಾನಿಲ್ಲವೆಂಬ ಭಾವ ಎದೆಯ ಬಾಗಿಲಲ್ಲಿ ನೇತಾಡುತ್ತಿತ್ತು. ಸಂಬಂಧ ಯಾವುದೇ ಇರಲಿ ಅದನ್ನು ನಾವು ಸಹನೆಯಿಂದಲೇ ನಿಭಾಯಿಸಬೇಕು. ತಾಳ್ಮೆಯಿಲ್ಲದೇ ಇದ್ದರೆ ನಾವು ಒಬ್ಬರನ್ನು ನೋಯಿಸಿದರೆ ನಮ್ಮನ್ನು ನೋಯಿಸಲು ಮತ್ತೊಬ್ಬರು ಇರುತ್ತಾರೆ. ನಾವು ಯಾವಾಗ ಸಂಬಂಧಗಳನ್ನು ಉಪಯೋಗಿಸಿ ಎಸೆಯುವ ಸರಕುಗಳ ತರಹ ನೋಡಲು ಆರಂಭಿಸಿದೆವೋ ಆಗಿಂದ ಸಿಹಿ ನೀಡುವ ಮಧುರ ಬಂಧಗಳೆಲ್ಲ ಕಹಿ ಅನುಭವಗಳ ಸರಣಿಯನ್ನೇ ಮನ ತುಂಬಿಸ ತೊಡಗಿವೆ. ಈ ಹಿಂದೆ ಗಟ್ಟಿಯಾದ ಬಂಧಗಳು ಇದ್ದವು. ಅವು ಬದುಕಿನ ಒಳಿತಿಗೆ ಮಾತ್ರ ಥಳಕು ಹಾಕಿಕೊಂಡಿದ್ದವು. ಸಂಬಂಧಗಳು ಮನವನ್ನು ಮುದಗೊಳಿಸುತ್ತವೆ. ಬದುಕನ್ನು ಹಸನಾಗಿಸುತ್ತವೆ. ಎಂಬಂಥ ಸಂಗತಿಗಳನ್ನು ನಮ್ಮ ಹಿರಿಯರ ಬದುಕಿನಿಂದ ಕಂಡುಕೊಂಡಾಗಿದೆ. ಹಲವಾರು ಸಂದರ್ಭಗಳಲ್ಲಿ ಕೊಂಡಾಡುವಂತೆಯೂ ಆಗಿದೆ. ಅದಲ್ಲದೇ ಇದು ಸಾವಿರಾರು ವರ್ಷಗಳಿಂದ ಅನೂಚಾನವಾಗಿ ದಾಖಲಾದ ಸಂಗತಿಯೂ ಹೌದು.…

Read More

ದಿ.ಕರ್ಪೂರಿ ಠಾಕೂರ್ ಬಿಹಾರದ ಮಾಜಿ ಸಿಎಂ | ಪ್ರಧಾನಿ ಮೋದಿ ಅಭಿನಂದನೆ | ಜೆಡಿಯುದಿಂದ ಮೋದಿ ಸರ್ಕಾರಕ್ಕೆ ಕೃತಜ್ಞತೆ ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಪ್ರತಿಷ್ಠಿತ ‘ಭಾರತ ರತ್ನ’ ಪ್ರಶಸ್ತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಲಾಗುತ್ತಿದೆ. ಬುಧವಾರ ಕರ್ಪೂರಿ ಠಾಕೂರ್ ಅವರ 100ನೇ ಜನ್ಮ ವರ್ಷಾಚರಣೆಗೂ ಮುನ್ನ ಅವರಿಗೆ ಭಾರತ ರತ್ನ ನೀಡಿ ಗೌರವಿಸುವುದಾಗಿ ಘೋಷಿಸಲಾಗಿದೆ.ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಬೇಕೆಂದು ಜನತಾ ದಳ ಯುನೈಟೆಡ್ (ಜೆಡಿಯು) ಒತ್ತಾಯಿಸಿತ್ತು. ಈ ಘೋಷಣೆಯ ನಂತರ ಜೆಡಿಯು ಮೋದಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದೆ.36 ವರ್ಷಗಳ ತಪಸ್ಸಿನ ಫಲ ನಮಗೆ ಸಿಕ್ಕಿದೆ ಎಂದು ಕರ್ಪೂರಿ ಠಾಕೂರ್ ಅವರ ಪುತ್ರ ರಾಮನಾಥ್ ಠಾಕೂರ್ ಹೇಳಿದ್ದಾರೆ. ನನ್ನ ಕುಟುಂಬ ಮತ್ತು ಬಿಹಾರದ 15 ಕೋಟಿ ಜನರ ಪರವಾಗಿ ನಾನು ಸರ್ಕಾರಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.ಕರ್ಪೂರಿ ಠಾಕೂರ್ ಗೆ ಭಾರತ ರತ್ನ ಸಿಕ್ಕಿರುವುದಕ್ಕೆ ಪ್ರಧಾನಿ…

Read More

ಜನಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನಕ್ಕೆ ಡಿಸಿ ಟಿ.ಭೂಬಾಲನ್ ಚಾಲನೆ ವಿಜಯಪುರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಜನಪ್ರಿಯ ಹಾಗೂ ಜನಪರ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಮತ್ತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೀದಿ ನಾಟಕ- ಜಾನಪದ ಕಲಾ ತಂಡಗಳ ಪ್ರದರ್ಶನ ಪರಿಣಾಮಕಾರಿ ಸಂವಹನವಾಗಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ವಾದ್ಯ ನುಡಿಸುವ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕ್ಷೇತ್ರ ಪ್ರಚಾರದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ,ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವ ನಿಧಿ ಯೋಜನೆಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲಾಗುತ್ತಿದ್ದು, ಅರ್ಹ ನೈಜ ಫಲಾನುಭವಿಗಳಿಗೆ ಅವರ ಹಕ್ಕನ್ನು ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಿ ಯೋಜನೆಗಳನ್ನು ಜನರಲ್ಲಿಗೆ…

Read More

ಇಂಡಿ: ಮಕ್ಕಳಿಗೆ ಸಂವಿಧಾನ ಬದ್ಧವಾಗಿ ದೊರೆಯಬೇಕಾದ ಸೌಲಭ್ಯಗಳನ್ನು ಕೊಡಿಸಿ, ಸಾಧನೆ ಮಾಡಲು ಅವಕಾಶ ಮಾಡಿಕೊಡುವ ಮೂಲಕ ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಲು ನಾಗರಿಕ ಸಮಾಜದ ಪ್ರತಿಯೊಬ್ಬರು ಮುಂದಾಗಬೇಕು ಎಂದು ಯುವ ಮುಖಂಡ ಪರಶುರಾಮ ಹೊಸಮನಿ ಹೇಳಿದರು.ಅವರು ಮಂಗಳವಾರ ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಜಿಲ್ಲಾ ಆಡಳಿತ,ಜಿಲ್ಲಾ ಪಂಚಾಯಿತಿ ವಿಜಯಪುರ,ತಾಲೂಕು ಪಂಚಾಯತ ಕಾರ್ಯಾಲಯ ಇಂಡಿ, ಸಪ್ತಗಿರಿ ಫೌಂಡೇಶನ್ ವಿಜಯಪುರ ಹಾಗೂ ಗ್ರಾಮ ಪಂಚಾಯಿತಿ ಹಿರೇರೂಗಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಡಾ.ಬಿ ಆರ್ ಅಂಬೇಡ್ಕರ್ ಅವರ ಜೀವನ ಮತ್ತು ವಿಚಾರಧಾರೆಯ ಕಾನೂನು ಅರಿವು ಮೂಡಿಸುವ ನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನಾದರ್ಶಗಳನ್ನು ಮಕ್ಕಳು ಬಾಲ್ಯದಿಂದಲೇ ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನಾದರ್ಶಗಳನ್ನು ಮಕ್ಕಳು ಮೈಗೂಡಿಸಿಕೊಳ್ಳಬೇಕು ಎಂದರು.ಯುವ ಮುಖಂಡ ಸಂತೋಷ ಕೋಟಗೊಂಡ, ಮುಖ್ಯ ಶಿಕ್ಷಕರಾದ ಅನಿಲ ಪತಂಗಿ, ವಿ ವೈ…

Read More

ಇಂಡಿ: ಪಟ್ಟಣದ ಪಟ್ಟಣದ ಆಪಲ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಸೋಮವಾರ ಮಕ್ಕಳಿಗೆ ಶ್ರೀರಾಮ, ಲಕ್ಷ್ಮಣ, ಸೀತೆ, ರಾವಣ ಹನುಮಂತ ವೇಷ ಭೂಷಣ ತೊಡಿಸಿ ರಾಮಾಯಣದ ಕಿರುನಾಟಕ, ನೃತ್ಯ, ಕಥೆ, ಕವನ ಪ್ರಬಂಧ, ಹೀಗೆ ಅನೇಕ ಚಟುವಟಿಕೆಗಳನ್ನು ಮಾಡಿಸಲಾಯಿತುಶ್ರೀ ರಾಮನ ಫೋಟೋ ಪೂಜೆ ಮಾಡಿ ಮಕ್ಕಳಿಗೆ ಶ್ರೀರಾಮನಲ್ಲಿ ಇರುವ ಮೌಲ್ಯಗಳ ಕುರಿತು ತಿಳಿಸಲಾಯಿತು.ಎಸ್.ಆರ್. ಬಗಲೂರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ದಿನಮಾನದಲ್ಲಿ ಮಕ್ಕಳಿಗೆ ನೈತಿಕ ಗುಣಮಟ್ಟ ಕಡಿಮೆ ಆಗುತ್ತಿದ್ದು ಅವರಲ್ಲಿ ತಂದೆ, ತಾಯಿ ಗುರು, ಹಿರಿಯರನ್ನು ಪೂಜಿಸುವ ಗುಣ ಬರಬೇಕಾದರೆ ಹೀಗೆ ಅನೇಕ ಆಚರಣೆಗಳು ಮಾಡಿ ತಿಳಿಸಬೇಕು ಎಂದರು.ಚಿದಾನಂದ ಬಿರಾದಾರ ಮಾತನಾಡಿದರು.ಶಹನವಾಜ ಚಡಚಣಕರ ಉಪಸ್ಥಿತರಿದ್ದರು.ವಿಜಯಕುಮಾರ ಇಮ್ಮನದ ನಿರೂಪಿಸಿದರು, ಸಲ್ಮಾ ಚಿಕ್ಕೇರಿ ವಂದಿಸಿದರು.

Read More

: ಫೌಂಡೇಶನ್ ಗಳು ಮತ್ತು ಸಂಘ-ಸಂಸ್ಥೆಗಳು ಸದಾ ಸಮಾಜಮುಖಿ ಕಾರ್ಯಗಳತ್ತ ಮುನ್ನುಗ್ಗುತ್ತಿರಬೇಕು ಎಂದು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು ಹೇಳಿದರು.ಪಟ್ಟಣದ ಹಳೆಯ ತರಕಾರಿ ಮಾರುಕಟ್ಟೆಯಲ್ಲಿರುವ ಶ್ರೀ ಖಾಸ್ಗತೇಶ್ವರ ಮಠದಲ್ಲಿ ತ್ರಿವಿಧ ದಾಸೋಹಿ ಲಿಂ.ಡಾ.ಶಿವಕುಮಾರ ಮಹಾಸ್ವಾಮಿಗಳ ಪುಣ್ಯ ಸ್ಮರಣೆ, ದಿ.ಶರಣು ಬೂದಿಹಾಳ ಫೌಂಡೇಶನ್ ಇವರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ದೇಶದಲ್ಲಿ ಕೆಲವು ಫೌಂಡೇಶನ್‌ಗಳು ಸಮಾಜ ಸುಧಾರಿಸಲು ಸಾಕಷ್ಟು ಶ್ರಮಿಸುತ್ತಿವೆ. ಸಧ್ಯದ ಪರೀಸ್ಥಿತಿಯಲ್ಲಿ ದೇಶದಲ್ಲಿ ಬದಲಾವಣೆ ತರಲು ಅವುಗಳು ಪಾತ್ರ ಬಹಳ ಪ್ರಮುಖವಾಗಿದೆ ಎಂದರು.ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭೂಮಿಯಲ್ಲಿ ಮಾನವರ ಪಯಣ ದೇಹದಲ್ಲಿ ಆತ್ಮವಿರುವವರೆಗೆ ಮಾತ್ರ. ಉಸಿರು ದೇಹವನ್ನು ಬಿಟ್ಟ ನಂತರವೂ ನಮ್ಮ ಹೆಸರು ಶಾಶ್ವತವಾಗಿ ಇರಬೇಕಾದರೆ ತನಗಾಗಿ ಬದುಕದೇ ಇತರರಿಗಾಗಿ ಬದುಕಬೇಕು. ಆ ರೀತಿ ಬದುಕಿದವರು ದಿ.ಶರಣು ಬೂದಿಹಾಳಮಠ ಅವರು ಎಂದರು.ದಿ ಕರ್ನಾಟಕ ಕೋ ಅಪ್ ಬ್ಯಾಂಕ್ ಅಧ್ಯಕ್ಷ ಸತೀಶ…

Read More

ಮುದ್ದೇಬಿಹಾಳ: ಗಣರಾಜ್ಯೋತ್ಸವದ ಪ್ರಯುಕ್ತ ಜ.೨೬ ರಂದು ಬೆಳಿಗ್ಗೆ ೧೦ಗಂಟೆಯಿಂದ ಪಟ್ಟಣದ ತಾಳಿಕೋಟೆ ರಸ್ತೆಯಲ್ಲಿರುವ ಬಸವ ಅಂತರಾಷ್ಟ್ರೀಯ ಶಾಲೆಯಲ್ಲಿ ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆ ವಿಜಯಪುರ, ಬಸವ ಇಂಟರ್ನ್ಯಾಷನಲ್ ಸ್ಕೂಲ್ ಹಾಗೂ ಇನ್ನರ್ ವೀಲ್ ಕ್ಲಬ್ ಮುದ್ದೇಬಿಹಾಳ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ರಕ್ತದಾನ ಮಾಡುವ ಫಲಾನುಭವಿಗಳು ಶಿಬಿರದಲ್ಲಿ ಹೆಸರು ನೊಂದಾಯಿಸಲು ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು. ೭೨೫೯೧೩೮೨೧೦, ೯೪೮೧೬೩೦೯೫೫, ೯೧೧೪೬೪೪೩೪, ೮೧೪೭೧ ೨೮೯೯೭, ೯೬೨೦೭೮೩೭೮೮

Read More