Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರು ಪ್ರಧಾನಿ ಮೋದಿ ಅವರ ಉಪವಾಸವನ್ನು ಲೇವಡಿ ಮಾಡಿರುವುದು ಹಾಗೂ ಸಚಿವ ಪ್ರಿಯಾಂಕ ಖರ್ಗೆ ಅವರ ರಾಮ ಮಂದಿರ ಕುರಿತ ಹೇಳಿಕೆಯನ್ನು ಬಿಜೆಪಿ ಮುಖಂಡ ಡಾ.ಗೌತಮ್ ಆರ್.ಚೌಧರಿ ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಮಲಲ್ಲಾ ಪ್ರಾಣಪ್ರತಿಷ್ಠೆಯು ಅಯೋಧ್ಯೆಯಲ್ಲಿ ಸರಾಗವಾಗಿ ಸಂಪನ್ನವಾಗುವ ಮೂಲಕ ಕೋಟಿ ಕೋಟಿ ಹಿಂದೂಗಳ ಕನಸು ನೆರವೇರಿದೆ. ಇದನ್ನು ಸಂಭ್ರಮಿಸುವುದು ಬಿಟ್ಟು, ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರು ಮೋದಿ ಅವರ 11ದಿನದ ಉಪವಾಸ ವೃತವನ್ನು ಲೇವಡಿ ಮಾಡಿರುವುದು ಖಂಡನೀಯ. ಪ್ರಧಾನಿ ಮೋದಿಯವರು ಉಪವಾಸ ಮಾಡಿರುವುದು ಡೌಟ್ ಅಂತ ಹೇಳಿದ್ದಿರಲ್ಲಾ, ನಿಮ್ಮ ಪಕ್ಷದವರು ಯಾಕೆ ಅಯೋಧ್ಯೆ ರಾಮಮಂದಿರಕ್ಕೆ ಹೋಗಿ ಮೋದಿ ಏನು ಮಾಡುತ್ತಿದ್ದಾರೆ ಪರಿಶೀಲಿಸಲಿಲ್ಲ. ರಾಮಮಂದಿರದಲ್ಲಿ ರಾಜಕೀಯ ತರುವುದು ನಿಮಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಶೋಭೆ ತರುವುದಿಲ್ಲ. ಸಾಧಿಸುವ ಛಲ ಹಾಗೂ ಧೃಡ ಸಂಕಲ್ಪ ಇದ್ದರೆ, 11 ದಿನ ಉಪವಾಸ ಮಾಡುವುದು ಅಸಾಧ್ಯವೇನಲ್ಲ ಎಂಬುದು…
ಆದಿಶೇಷ ಸಂಸ್ಥಾನ ಹಿರೇಮಠದ ಜಾತ್ರಾ ಮಹೋತ್ಸವ-ಧರ್ಮಸಭೆ ಕಾರ್ಯಕ್ರಮ ಸಿಂದಗಿ: ಧರ್ಮಕ್ಷೇತ್ರಗಳು ಬೆಳೆದುಕೊಂಡು ಬಂದರೆ ಆರೋಗ್ಯ ಪೂರ್ಣ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಬಾಳೆಹೊನ್ನೂರು ರಂಬಾಪೂರಿ ಪೀಠದ ಶ್ರೀಮದ್ರಂಬಾಪುರಿ ವೀರಸಿಂಹಾಸನಾಧೀಶ್ವರ ಜಗದ್ಗುರು ಪ್ರಸನ್ನರೇಣುಕಾ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರು ಹೇಳಿದರು.ಮಂಗಳವಾರದಂದು ಪಟ್ಟಣದ ಬಸ್ಡಿಪೋ ಬಳಿಯಿರುವ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದಲ್ಲಿ ೨೮ನೆಯ ಜಾತ್ರಾ ಮಹೋತ್ಸವ-ಧರ್ಮಸಭೆ ಕಾರ್ಯಕ್ರಮ ಹಾಗೂ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಪುರಾಣ ಪ್ರವಚನ ಮಹಾ ಮಂಗಲೋತ್ಸವ ಕಾರ್ಯಕ್ರಮದ ದಿವು ಸಾನಿಧ್ಯ ವಹಿಸಿ ಮಾತನಾಡಿದ ಅವರು, ಧರ್ಮ ಎಂದರೆ ಹೇಳುವಂತಹದಲ್ಲ, ನಡೆದು ತೊರಿಸುವಂತಹದ್ದು ನಿಜವಾದ ಧರ್ಮ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಸಂಸ್ಕೃತಿ ಭಾರತ ದೇಶದ್ದು. ಈ ದೇಶದಲ್ಲಿ ಹಲವಾರು ಧರ್ಮ ಮತ್ತು ಆಚರಣೆಗಳು ಬೆಳೆದುಕೊಂಡು ಬಂದಿವೆ. ಧರ್ಮ ಬೇರೆ ಬೇರೆಯಾದರೂ ಆಚರಣೆ ಬೇರೆಯಾದರೂ ಎಲ್ಲ ಧರ್ಮಗಳ ಕೊನೆಯ ಗುರಿ ಮಾನವನ ಕಲ್ಯಾಣವನ್ನು ಬಯಸುತ್ತದೆ. ತಾಲೂಕಿನ ಜನತೆಯಲ್ಲಿ ಮಾನವ ಧರ್ಮ ಹಿರಿದಾಗಿದ್ದು, ಎಲ್ಲವನ್ನೂ ಗಮನಿಸಿ ಸಿಂದಗಿ ನಗರವು ಉತ್ತಮ ಧಾರ್ಮಿಕ ವಾತವರಣವನ್ನುಂಟು ಮಾಡುವ…
ದೇವರಹಿಪ್ಪರಗಿ: ಶೋಷಿತರ ಜಾಗೃತಿ ಸಮಾವೇಶದ ಅಂಗವಾಗಿ ವಿವಿಧ ಸಮುದಾಯಗಳ ಪ್ರಮುಖರ ಪೂರ್ವಭಾವಿ ಸಭೆ ಜರುಗಿತು.ಪಟ್ಟಣದ ಪ್ರವಾಸಿಮಂದಿರದಲ್ಲಿ ಮಂಗಳವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಧುರೀಣ ಎಸ್.ಎಮ್.ಪಾಟೀಲ(ಗಣಿಯಾರ) ಮಾತನಾಡಿ, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟಗಳ ಅಡಿಯಲ್ಲಿ ಚಿತ್ರದುರ್ಗದಲ್ಲಿ ಇದೇ ದಿ:೨೮ ಭಾನುವಾರದಂದು ಏರ್ಪಡಿಸಲಾಗಿರುವ ಸಮಾವೇಶದ ಕುರಿತು ಮಾಹಿತಿ ನೀಡಿ, ತಾಲ್ಲೂಕಿನ ಶೋಷಿತ ಸಮುದಾಯಗಳ ಪ್ರಮುಖರು ಅದರಲ್ಲೂ ದಲಿತ, ಹಿಂದುಳಿದ, ಅಲೆಮಾರಿ, ಅರೆಅಲೆಮಾರಿ, ಆದಿವಾಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಜನಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.ಕಾಂಗ್ರೆಸ್ ಪಕ್ಷದ ಪ್ರಮುಖರಾದ ಗೌರಮ್ಮ ಮುತ್ತತ್ತಿ, ಸೋಮನಾಥ ಕಳ್ಳಿಮನಿ, ರಾಜಶ್ರೀ ಯರನಾಳ, ನಾಗರಾಜು ಲಂಬು, ಪ್ರಕಾಶ ಗುಡಿಮನಿ ಮಾತನಾಡಿದರು.ಸಭೆಯಲ್ಲಿ ಮಾನವ ಬಂಧುತ್ವ ವೇದಿಕೆಯ ಪ್ರಭುಗೌಡ ಪಾಟೀಲ, ಜಕ್ಕಪ್ಪ ಅಡವಿ, ರಾಜೇಶ ತೊರವಿ, ದೇವಾನಂದ ಲಚ್ಯಾಣ, ರಾಜಕುಮಾರ ಸಿಂದಗೇರಿ, ಮಹೇಶ ಮುರಾಳ, ಬಸವರಾಜ ಇಂಗಳಗಿ, ಶಿವು ವಾಲೀಕಾರ, ಹೂಯೋಗಿ ತಳ್ಳೋಳ್ಳಿ, ಭೀರು ಹಳ್ಳಿ,…
ದೇವರಹಿಪ್ಪರಗಿ: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಪಡಗಾನೂರ ಗ್ರಾಮದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಮೆರವಣಿಗೆ ಮಾಡಲಾಯಿತು.ತಾಲ್ಲೂಕಿನ ಪಡಗಾನೂರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಸೋಮೇಶ್ವರ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲಾಯಿತು. ನಂತರ ಶ್ರೀರಾಮನ ಭಾವಚಿತ್ರಕ್ಕೆ ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಿ ನಂತರ ಟ್ರಾö್ಯಕ್ಟರ್ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗಿಸಲಾಯಿತು.ಗ್ರಾಮ ಪಂಚಾಯಿತಿ ಸದಸ್ಯ ಭೀರು ಹಳ್ಳಿ, ಆಕಾಶ ಕಬ್ಬಿನ, ಸಿದ್ಧು ಪಾಟೀಲ, ಪ್ರವೀಣ ಕಬ್ಬಿನ, ಸಿದ್ಧು ಹದರಿ, ಸಂತೋಷ ಧೋತ್ರೆ, ವಿನಾಯಕ ಹಿರೇಮಠ, ಪ್ರದೀಪ್ ಬಾಗೇವಾಡಿ, ಸೋಮು ಹುಗ್ಗಿ, ಸಂಗಮೇಶ ವಡಗೇರಿ ಭಾಗವಹಿಸಿದ್ದರು.
ದೇವರಹಿಪ್ಪರಗಿ: ಜೀವನದಲ್ಲಿ ಯಶಸ್ಸಿನ ಸಾಧನೆಗೆ ಮುಂದೆ ಗುರಿ, ಹಿಂದೆ ಗುರು ಇರಬೇಕು ಎಂದು ಕುಮಸಗಿ ಶ್ರೀಕಲ್ಲಾಲಿಂಗೇಶ್ವರ ಮಠದ ಶಿವಾನಂದ ಶ್ರೀಗಳು ಹೇಳಿದರು.ತಾಲ್ಲೂಕಿನ ಗಂಗನಳ್ಳಿ ಗ್ರಾಮದಲ್ಲಿ ಮಂಗಳವಾರ ಜರುಗಿದ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಜಯಂತ್ಯುತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.೧೨ನೇ ಶತಮಾನದ ವಚನ ಚಳುವಳಿಯು ಧಾರ್ಮಿಕ ಚಳುವಳಿಯಂತೆ ಕಂಡು ಬಂದರು ಅದೊಂದು ಜಾತಿ ಕುಲಗಳ ಎಲ್ಲೆ ಮೀರಿದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಮಹಾ ಕ್ರಾಂತಿಯಾಗಿ ಇತಿಹಾಸದಲ್ಲಿ ಗುರುತಿಸಲ್ಪಟ್ಟಿದೆ. ಹಾಗೆಯೇ ಈ ಚಾರಿತ್ರಿಕ ಮಹಾ ಆಂದೋಲನದ ರೂವಾರಿ ಅಣ್ಣ ಬಸವಣ್ಣನೊಂದಿಗೆ ನೂರಾರು ಶರಣರು ಹೆಗಲಿಗೆ ಹೆಗಲಾಗಿ ದುಡಿದರು ಅಂತಹ ಶರಣರ ಪೈಕಿ ಅಂಬಿಗರ ಚೌಡಯ್ಯನವರು ಪ್ರಮುಖರು ಎಂದರು.ಕಾರ್ಯಕ್ರಮದಲ್ಲಿ ಸುರೇಶಗೌಡ ಪಾಟೀಲ(ಸಾಸನೂರ), ಮಲ್ಲಪ್ಪ ದುದ್ದಗಿ, ದಯಾನಂದ ದೊಡಮನಿ, ಮಲ್ಲಪ್ಪ ಬೇನೂರ, ರಾಮ ಸೊನ್ನಳ್ಳಿ, ಪರಶುರಾಮ ಟಕ್ಕಳಕಿ, ಸಿದ್ರಾಮಯ್ಯ ಮಠ, ಮಲ್ಲನಗೌಡ ಪಾಟೀಲ, ಸಂಘದ ಅಧ್ಯಕ್ಷ ಚಿದಾನಂದ ಕನ್ನೋಳ್ಳಿ, ಈರಣ್ಣ ಶಾಸ್ತ್ರಿ ( ಚಿಕ್ಕರೂಗಿ), ಸದಾಶಿವ ದೇಶಪಾಂಡೆ, ಬಸವರಾಜ ಈಶ್ವರಪ್ಪಗೋಳ, ರಾಜಶೇಖರ ನಾಯಕ ಈರಣ್ಣ…
– ಚೇತನ ಶಿವಶಿಂಪಿಮುದ್ದೇಬಿಹಾಳ: ಸರಿಸುಮಾರು ೫ ದಶಕಗಳ ನಂತರ ಅಯೋಧ್ಯೆ ನಗರಿಯಲ್ಲಿ ನಿರ್ಮಾಣವಾದ ರಾಮ ಮಂದಿರದಲ್ಲಿ ಶ್ರೀ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ತಾಲೂಕಿನಲ್ಲಿ ಹಬ್ಬದ ವಾತಾವರಣ ಸೃಷ್ಠಿಯಾಗಿತ್ತು.ಪಟ್ಟಣದ ಪ್ರಮುಖ ರಸ್ತೆಗಳ ಬೀದಿ ದೀಪಗಳು ಕೇಸರಿ ಬಟ್ಟೆಯಿಂದ ಅಲಂಕೃತಗೊಂಡಿದ್ದವು. ಎಲ್ಲ ದೇವಸ್ಥಾನಗಳಲ್ಲಿ ಶ್ರೀರಾಮರಿಗೆ ವಿಶೇಷ ಪೂಜೆ, ಭಜನೆ ಸೇರಿದಂತೆ ಹಲವು ಕಾರ್ಯಕ್ರಮಗಳು ಜರುಗಿದವು. ವ್ಯಾಪಾರಸ್ಥರು ತಮ್ಮ ಅಂಗಡಿ ಮುಂಗಟ್ಟುಗಳ ಮುಂದೆ ಶ್ರೀ ರಾಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಿಹಿ, ಪಾನಕ ಹಂಚಿ ಭಕ್ತಿ ಸಮರ್ಪಿಸಿದರು. ಕೆಲವರು ತಮ್ಮ ಮಕ್ಕಳಿಗೆ ಶ್ರೀ ರಾಮರ ಹಾಗೂ ಸೀತಾ ಮಾತೆಯ ಉಡುಗೆ ತೊಡಿಸುವ ಮೂಲಕ ಶ್ರೀ ರಾಮಚಂದ್ರನ ದರ್ಶನ ಪಡೆದರು. ಯುವಕರು ಶುಭ್ರವಾದ ಬಿಳಿ ಬಟ್ಟೆ ತೊಟ್ಟು ಕೊರಳಿಗೆ ಕೇಸರಿ ಶಾಲು ಹಾಕಿ ತಮ್ಮ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳಿಗೆ ಶ್ರೀರಾಮನಿರುವ ಕೇಸರಿ ಬಾವುಟವನ್ನು ಅಂಟಿಸಿ ಜೈ ಶ್ರೀರಾಮ ಜೈರಾಮ ಅಂತಾ ಜಯಘೋಷ ಹಾಕುತ್ತ ಊರೆಲ್ಲ ಸುತ್ತಿದರು. ಒಟ್ಟಾರೆ ಸೋಮುವಾರದಂದು ಪಟ್ಟಣ…
ವಿಜಯಪುರ: ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ಪ್ರಸ್ತಾವನೆಯಂತೆ, ವಿಜಯಪುರ ತಾಲ್ಲೂಕಿನ ಭೂ ನ್ಯಾಯ ಮಂಡಳಿಗೆ ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರ್ಕಾರ ಆದೇಶಿಸಿದೆ.ವಿಜಯಪುರ ನಗರ ಮತಕ್ಷೇತ್ರ ವ್ಯಾಪ್ತಿಯ ದಾದಾಸಾಹೇಬ ಸಿದ್ದಪ್ಪ ಬಾಗಾಯತ (ಪರಿಶಿಷ್ಟ ಜಾತಿ), ಗುರುರಾಜ ಚೆನ್ನಪ್ಪ ಯಡವಣ್ಣವರ, ಶರಣಪ್ಪ ಬಸಪ್ಪ ಕಾಖಂಡಕಿ, ಬಸವರಾಜ ಷಡಕ್ಷರಪ್ಪಾ ಹೆರಲಗಿ (ಸಾಮಾನ್ಯ ವರ್ಗ) ಅವರನ್ನು ನೇಮಕ ಮಾಡಲಾಗಿದೆ.
ವಿಜಯಪುರ: ರಾಜ್ಯದ ಉರ್ದು ಮತ್ತು ಇತರೆ ಭಾಷಾ ಅಲ್ಪ ಸಂಖ್ಯಾತರ ಶಾಲಾ ಅಭಿವೃದ್ಧಿಗಾಗಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ವಿಜಯಪುರ ಜಿಲ್ಲಾ ಉರ್ದು ಶಿಕ್ಷಕರ ಸಂಘದ ಅಧ್ಯಕ್ಷ ಜುಬೇರ ಕೇರೂರ ನೇತೃತ್ವದ ತಂಡವು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಮೂಲಕ ಮನವಿ ಸಲ್ಲಿಸಿದರು.ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯ ಉರ್ದು ಟಿಚರ್ಸ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕರ ಕಾರ್ಯಾಗಾರ ಹಾಗೂ ಪಾತೀಮಾ ಶೇಖ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಅವರು, ರಾಜ್ಯಾಧ್ಯಂತ ಉರ್ದು ಮಾಧ್ಯಮ ಶಾಲೆಗಳಲ್ಲಿ ಆಂಗ್ಲ ಭಾಷಾ ಶಿಕ್ಷಕರ ಹುದ್ದೆ ಹಾಗೂ ದೈಹಿಕ ಶಿಕ್ಷಕರ ಹುದ್ದೆ ನೀಡುವಾಗ ಉರ್ದು ಭಾಷೆ ಬಲ್ಲ ಶಿಕ್ಷಕರಿಗೆ ನಿಯುಕ್ತಿಗೊಳಿಸುವದು. ಏಕೆಂದರೆ ದೈಹಿಕ ವಿಷಯ ಪಠ್ಯ ಪುಸ್ತಕ ಉರ್ದು ಶಾಲೆಯಲ್ಲಿ ಉರ್ದು ಭಾಷೆಯಲ್ಲಿ ಮುದ್ರಿತವಾಗಿರುತ್ತದೆ. ಉರ್ದು ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ರಾಜ್ಯದ…
ಶ್ರೀಮತಿ ಗೀತಾ ತಳಕಲ್ ಸಂಶೋಧನಾ ವಿದ್ಯಾರ್ಥಿನಿ, ಕನ್ನಡ ಅಧ್ಯಯನ ವಿಭಾಗ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ. ಮಕ್ಕಳ ಸಾಹಿತ್ಯ ಆರಂಭದಲ್ಲಿ ಕಿವಿಯ ಮೂಲಕ ಗ್ರಹಿಸುವ ಲಾಲಿ ಹಾಡುಗಳಿಂದಲೇ ಕೂಡಿದ್ದು, ಅನಂತರ ಕಥೆಗಳಿಂದ ಬೆಳೆದು ಬಂದಿರಬಹುದು.. ಹಾಡುವ ಹಾಗೂ ಕಥೆ ಹೇಳುವವರ ಹಾವಭಾವಗಳನ್ನು ನೋಡಿಯೂ ಮಗು ಗ್ರಹಿಸಬಹುದು. ಈ ಕಾರಣದಿಂದ ಮಾನವನ ಸಾಹಿತ್ಯದ ಬುನಾದಿ ಇದಾಗಿದೆ ಎಂದರೆ ತಪ್ಪಾಗಲಾರದು. ಮಕ್ಕಳ ಸಾಹಿತ್ಯದ ಮೂಲ ಆಶಯ ಜಾನಪದವಾಗಿರುವುದು. ಜಗತ್ತಿನಲ್ಲಿ ಇದು ಹೇಗೇ ಪ್ರಾರಂಭವಾಗಿರಲಿ ಮಕ್ಕಳಿಗೆ ಅಗತ್ಯವಾದದ್ದು, ಉಪಯುಕ್ತವಾದದ್ದು ಎನ್ನುವುದಕ್ಕೆ ಎರಡನೇ ಮಾತಿಲ್ಲ. ಹಿರಿಯರೂ ಇದನ್ನು ಸವಿಯಬಹುದು ಎನ್ನುವುದು ಇದರ ಒಂದು ವಿಶೇಷ ಲಕ್ಷಣ. ಮಕ್ಕಳ ಸಾಹಿತ್ಯ ಮಕ್ಕಳಿಗೆ ನಲಿವು, ತಿಳಿವು ಎರಡನ್ನು ಕೊಡಬೇಕು. ಸಂಸ್ಕೃತಿ, ಶಿಕ್ಷಣ, ಕುಟುಂಬ ಮತ್ತು ಪರಿಸರ ಈ ನಾಲ್ಕರ ಪ್ರಭಾವ ಮಕ್ಕಳ ಸಾಹಿತ್ಯದಲ್ಲಿ ಬರಬೇಕು. ಮಕ್ಕಳ ಮಾನಸಿಕ, ಬೌದ್ಧಿಕ, ಸಾಮಾಜಿಕ ಹಾಗೂ ಭಾಷಿಕ ಬೆಳವಣಿಗೆಗೆ ಸಹಾಯಕವಾಗಬೇಕು ಮೊದಲಾದ ಅನೇಕ ಅಭಿಪ್ರಾಯಗಳು ಮಕ್ಕಳ ಸಾಹಿತ್ಯ ಕುರಿತು ವ್ಯಕ್ತವಾಗಿದೆ. ಒಟ್ಟಾರೆ…
ಹೆದ್ದಾರಿ ತಡೆ | ಟೈರುಗಳಿಗೆ ಬೆಂಕಿ | ಸಂಚಾರ ಅಸ್ತವ್ಯಸ್ತ | ರೈತರ ಆಕ್ರೋಶ ಕೊಲ್ಹಾರ: ತಾಲುಕಿನ ಮಟ್ಟಿಹಾಳ ಗ್ರಾಮದಲ್ಲಿರುವ ಕೃಷ್ಣಾ ಭಾಗ್ಯ ಜಲನಿಗಮದ ಕಾರ್ಯಾಲಯಗಳ ಮುಂದೆ ಮುಳವಾಡ ಏತ ನೀರಾವರಿಯ ಯೋಜನೆಯ ಮೂಲಕ ಪಶ್ಚಿಮ ಮತ್ತು ಪೂರ್ವ ಕಾಲುವೆಗಳಿಗೆ ತಕ್ಷಣವೇ ನೀರು ಹರಿಯಬಿಡಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ, ರೈತ ಸಂಘಟನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯವರು ಮಂಗಳವಾರ ಧರಣಿ ಕೈಗೊಂಡರು.ಬೀಳಗಿ ಬಾರಕೇಡ ರಾಜ್ಯ ಹೆದ್ದಾರಿಯ ಮಟ್ಟಿಹಾಳ ವೃತ್ತದಲ್ಲಿ ನೂರಾರು ರೈತರು ಸೇರಿ ಟೈರಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದರು. ಸುಮಾರು ೧೨ಘಂಟೆಯಿಂದ ಸಂಜೆ ೫ ಘಂಟೆಯವರೆಗೆ ಹೆದ್ದಾರಿಯನ್ನು ನಾಲ್ಕು ಕಡೆ ಪೂರ್ಣಪ್ರಮಾಣದಲ್ಲಿ ಬಂದ್ ಮಾಡಿ, ಕಾಲುವೆಗಳಿಗೆ ನೀರು ಹರಿಸುವ ತನಕ ನಾವುಗಳು ಸುಮ್ಮನಿರುವದಿಲ್ಲ, ಅಧಿಕಾರಿಗಳು ಎಚ್ಚೆತ್ತುಕೊಂಡು ನೀರು ಬಿಡುವ ತನಕ ನಮ್ಮ ಹೋರಾಟ ನಿಲ್ಲುವದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ತುಳಸೀಗೇರಿ ಹಗೇದಾಳ ಮಾತನಾಡಿದರು.ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರು ತಮ್ಮ ಮತಕ್ಷೇತ್ರದ ಭಾಗದಲ್ಲಿ…
