Author: editor.udayarashmi@gmail.com

ವಿಜಯಪುರ: ಕಾಂಗ್ರೆಸ್ ನಾಯಕ, ಸಂಸದ ಸದಸ್ಯ ರಾಹುಲ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯಯಾತ್ರೆಯು ಆಸ್ಸಾಂನಲ್ಲಿ ಪ್ರವೇಶ ಮಾಡಿದಾಗ ಅಲ್ಲಿಯ ಬಿಜೆಪಿ ಸರಕಾರ ಕಾರ್ಯಕರ್ತರನ್ನು ಚೂಬಿಟ್ಟು ರ‍್ಯಾಲಿಯ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿರುವುದನ್ನು ಖಂಡಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಅಬ್ದುಲ್‌ಹಮೀದ ಮುಶ್ರೀಫ್, ಕೇಂದ್ರದ ಬಿಜೆಪಿ ಸರಕಾರ ಜನವಿರೋಧಿಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿ ಎದುರಿಸುತ್ತಿದ್ದು, ಹತಾಶೆ ಮನೋಭಾವದಿಂದ ದ್ವೇಷ ರಾಜಕಾರಣ ಮಾಡಲು ಹೊರಟಿದೆ. ಆಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಖಾಂತರ ಬಿಜೆಪಿಯ ಗೂಂಡಾ ಕಾರ್ಯಕರ್ತರನ್ನು ಬಿಟ್ಟು ಭಾರತ ಜೋಡೋ ನ್ಯಾಯಯಾತ್ರೆಯ ನೇತೃತ್ವ ವಹಿಸಿರುವ ನಮ್ಮ ನಾಯಕ ರಾಹುಲ ಗಾಂಧಿರವರ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಜನ ನಿಮ್ಮ ಮುಖವಾಡವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂಬರುವ ೨೦೨೪ರ ಲೋಕಸಭಾ ಚುನಾವಣೆಯಲ್ಲಿ ತಕ್ಕಪಾಠ ಕಲಿಸಿ…

Read More

ಜಲಜೀವನ ಮಿಶನ್ ಯೋಜನೆ | ಎಂಎಲ್ಸಿ ಸುನೀಲಗೌಡ ಅಧಿಕಾರಿಗಳಿಗೆ ಸೂಚನೆ ವಿಜಯಪುರ: ಜಲಜೀವನ ಮಿಶನ್ ಯೋಜನೆ ಅನುಷ್ಠಾನ ಸಂದರ್ಭದಲ್ಲಿ ಗ್ರಾಮೀಣ ಭಾಗದ ಪ್ರತಿಯೊಂದು ಮನೆಗಳಿಗೂ ನಳಗಳ ಸಂಪರ್ಕ ಒದಗಿಸಬೇಕು. ತಾಂತ್ರಿಕ ನೆಪಹೇಳಿ ಯಾವುದೇ ಕುಟುಂಬವನ್ನು ಕುಡಿಯುವ ನೀರಿನ ಸೌಲಭ್ಯದಿಂದ ವಂಚಿತರನ್ನಾಗಿ ಮಾಡಬಾರದು ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಮಂಗಳವಾರ ವಿಜಯಪುರ ತಾಲೂಕಿನ ಹೊನಗನಹಳ್ಳಿ ಮತ್ತು ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ, ಕಾತ್ರಾಳ ಹಾಗೂ ಅರ್ಜುಣಗಿ ಗ್ರಾಮಗಳಲ್ಲಿ ಜಲಜೀವನ್ ಮಿಶನ್ ಯೋಜನೆಯಡಿ ನಾನಾ ಗ್ರಾಮಗಳ ಮನೆ ಮನೆಗಳಿಗೆ ಕುಡಿಯುವ ನೀರು ಪೂರೈಸುವ ನಳಗಳ ಸಂಪರ್ಕ ಯೋಜನೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಹಲವಾರು ಗ್ರಾಮಗಳಲ್ಲಿ ತಾಂತ್ರಿಕ ಕಾರಣಗಳ ನೆಪವೊಡ್ಡಿ ಅನೇಕ ಮನೆಗಳಿಗೆ ನಳಗಳ ಸಂಪರ್ಕವನ್ನು ನಿರಾಕರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ನಗರ ಪ್ರದೇಶದ ಜನರಿಗೆ ನೀಡಲಾಗುವ ರೀತಿಯಲ್ಲಿ ಗ್ರಾಮೀಣ ಭಾಗದ ಜನರಿಗೂ ಮನೆಮನೆಗಳಿಗೆ ಕುಡಿಯಲು ನೀರು ಪೂರೈಸುವ ಈ ಮಹತ್ವಾಕಾಂಕ್ಷೆ ಯೋಜನೆಯನ್ನು ಸಮರ್ಪಕವಾಗಿ…

Read More

ಕೆಂಭಾವಿ: ಹೋಬಳಿಯ ಕೂಡಲಗಿ ಗ್ರಾಮದಲ್ಲಿ ಪ್ರೊ ಬಿ ಕೃಷ್ಣಪ್ಪನವರು ಸ್ಥಾಪಿಸಿದ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಯಿಂದ ಗ್ರಾಮ ಘಟಕ ಆಯ್ಕೆ ಮಾಡಲಾಯಿತು ,ಈ ಸಂದರ್ಭ ಜಿಲ್ಲಾ ಸಂಚಾಲಕ ನಿಂಗಣ್ಣ ಗೋನಲ್ ಮಾತನಾಡಿ, ಯುವಕರೆಲ್ಲರೂ ಶಿಕ್ಷಣವಂತರಾಗಬೇಕು , ಮೂಢನಂಬಿಕೆಯನ್ನು ತೊಲಗಿಸಬೇಕು, ಅಂಬೇಡ್ಕರ್ ಅವರು ಹಾಕಿಕೊಟ್ಟಂತ ಮಾರ್ಗದಲ್ಲಿ ನಡೆಯಬೇಕು. ಹಾಗೂ ಪ್ರೊ ಬಿ ಕೃಷ್ಣಪ್ಪನವರ ಮಾರ್ಗದಲ್ಲಿ ನಮ್ಮ ಹೋರಾಟ ಮುನ್ನಡೆಸಬೇಕೆಂದು ಕರೆ ನೀಡಿದರು ,ಈ ವೇಳೆ ಸಮಿತಿಯ ಸ ಸಂಚಾಲಕರು ನಾಗರಾಜ್ ಹೋಕುಳಿ, ಧರ್ಮಣ್ಣ ಚಿಂಚೋಳಿ, ಸಾಯಬಣ್ಣ ಕೆಂಭಾವಿ ಹೋಬಳಿ ಸಂಚಾಲಕರು, ಸದಾಶಿವ ಬೊಮ್ಮನಹಳ್ಳಿ, ಭೀಮಣ್ಣ ಅಡ್ಡಡಗಿ ಚಂದಪ್ಪ ತಳಳ್ಳಿ ಇದ್ದರು.ಆಯ್ಕೆಯಾದ ಪದಾಧಿಕಾರಿಗಳುಮಲ್ಲಪ್ಪ ನಡುವಿನಮನಿ ಗ್ರಾಮ ಘಟಕ ಸಂಚಾಲಕರು, ಸಹ ಸಂಚಾಲಕರಾಗಿ ಮಾರುತಿ ದೊಡಮನಿ, ಬಸಪ್ಪ ದೊಡಮನಿ, ಮಾನಪ್ಪ ಅಳಿಗೇರಿ, ನಂದಪ ದೊಡಮನಿ, ಶಿವು ಗುಡಿಮನಿ ಪ್ರಕಾಶ್ ಗುಡಿಮನಿ, ಯಮನಪ್ಪ ಗುಡಿಮನಿ, ಜಟ್ಟಪ್ಪ ರಬ್ನಹಳ್ಳಿ, ಮಾನಪ್ಪ ಗುಡಿಮನಿ, ಧರ್ಮಪ್ಪ ರಬ್ನಳ್ಳಿ ಭೀಮಪ್ಪ ಇತರರಿದ್ದರು.

Read More

1 ಕೋಟಿ ಮನೆಗಳಿಗೆ ಸೋಲಾರ್ ಪ್ಯಾನೆಲ್ ಅಳವಡಿಕೆ | ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಂತರ ಪ್ರಧಾನಿ ನರೇಂದ್ರ ಮೋದಿ ಘೋಷಣೆ ನವದೆಹಲಿ: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ‘ಸೂರ್ಯೋದಯ ಯೋಜನೆ’ ಘೋಷಿಸಿದ್ದಾರೆ.ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ದೇಶವಾಸಿಗಳು ತಮ್ಮ ಮನೆಗಳ ಮೇಲ್ಛಾವಣಿಯ ಮೇಲೆ ಸೋಲಾರ್ ಪ್ಯಾನಲ್ ಹೊಂದಬೇಕೆಂಬ ಅವರ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಲಾಗಿದೆ ಎಂದು ಅವರು ಹೇಳಿದರು. ಪ್ರಧಾನಿ ಮೋದಿಯವರ ಘೋಷಣೆಯ ಪ್ರಕಾರ, ಯೋಜನೆಯಡಿಯಲ್ಲಿ ಒಂದು ಕೋಟಿ ಮನೆಗಳ ಮೇಲ್ಛಾವಣಿ ಮೇಲೆ ಸೋಲಾರ್ ಅಳವಡಿಸಲಾಗುತ್ತದೆ.ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳ ಮೇಲ್ಛಾವಣಿಯ ಮೇಲೆ ಸೋಲಾರ್ ಅಳವಡಿಸುವ ಗುರಿಯೊಂದಿಗೆ ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ ಪ್ರಾರಂಭಿಸುತ್ತದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ ಇಂಧನ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಲಿದೆ ಎಂದರು.ರಾಮಲಲ್ಲಾ ಪಟ್ಟಾಭಿಷೇಕದ ನಂತರ ಪ್ರಧಾನಿ ಮೋದಿ ಹೇಳಿದ್ದೇನು?ಅಯೋಧ್ಯೆಯ ಭವ್ಯವಾದ ರಾಮಮಂದಿರದಲ್ಲಿ ರಾಮಲಲ್ಲಾನ…

Read More

ಬೆಂಗಳೂರು: ಬಿಜೆಪಿ ಮಖಂಡ ಡಾ.ಗೌತಮ್ ಆರ್. ಚೌಧರಿ ಅವರಿಗೆ ವೈದ್ಯಕೀಯ ಕ್ಷೇತ್ರದಲ್ಲಿನ ಸಾಧಕರಿಗೆ ವಿಜಯಕರ್ನಾಟಕ ಹಾಗು ಬೆಂಗಳೂರು ಮಿರರ್ ಪತ್ರಿಕೆಗಳು ಜಂಟಿಯಾಗಿ ಕೊಡಮಾಡುವ ೨೦೨೪ ರ ’ಹೆಲ್ತ್ ಎಕ್ಸೆಲೆನ್ಸ್’ ಪ್ರಶಸ್ತಿ ಲಭಿಸಿದೆ.ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೊಟೇಲದಲ್ಲಿ ನಡೆದ ಸಮಾರಂಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಡಾ.ಗೌತಮ್ ಆರ್. ಚೌಧರಿ ಅವರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹಾಗೂ ಖ್ಯಾತ ನಟಿ ಸಪ್ತಮಿಗೌಡ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

Read More

ಮಾಜಿ ಸಚಿವ ದಿ.ಎಂ.ಸಿ.ಮನಗೂಳಿ ಪುಣ್ಯ ಸ್ಮರಣೆ ನಿಮಿತ್ಯ ಬೃಹತ್ ಆರೋಗ್ಯ ಶಿಬಿರಕ್ಕೆ ಶಾಸಕ ಅಶೋಕ ಮನಗೂಳಿ ಚಾಲನೆ ಸಿಂದಗಿ: ನಾವೆಲ್ಲ ಉತ್ತಮ ಆರೋಗ್ಯವಂತರಿದ್ದಾಗ ಮಾತ್ರ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ. ಆರೋಗ್ಯದ ಕಡೆಗೆ ಸದಾ ನಾವು ಜಾಗೃತಿ ವಹಿಸಬೇಕಾಗಿರುವುದು ಇಂದು ಅನಿವಾರ್ಯವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಅವರು ಪಟ್ಟಣದ ಮನಗೂಳಿ ಆಸ್ಪತ್ರೆಯಲ್ಲಿ ರವಿವಾರ ಮಾಜಿ ಸಚಿವ ದಿ.ಎಮ್.ಸಿ.ಮನಗೂಳಿ ಅವರ ೩ ನೇ ಪುಣ್ಯ ಸ್ಮರಣೆಯ ನಿಮಿತ್ಯ ಆಯೋಜಿಸಿರುವ ಉಚಿತ ಬೃಹತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.ಇಂದಿನ ವೈಜ್ಞಾನಿಕ ಬದುಕಿನಲ್ಲಿ ನಾವೆಲ್ಲ ಹೆಚ್ಚು ಒತ್ತಡದಲ್ಲಿದ್ದೇವೆ. ನಿರಂತರವಾಗಿ ಎಷ್ಟೇ ಕಾರ್ಯಗಳು ಮಾಡಿದರು ಮೊದಲು ನಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿಕೊಳ್ಳಬೇಕು. ಇಲ್ಲವಾದರೆ ದುಡಿದ ಹಣವನ್ನು ಆಸ್ಪತ್ರೆಗಳಿಗೆ, ರೋಗ ನಿವಾರಣಕ್ಕೆ ಖರ್ಚು ಮಾಡಬೇಕಾಗುತ್ತದೆ. ನಮ್ಮ ತಂದೆ ದಿ.ಎಮ್.ಸಿ.ಮನಗೂಳಿ ಅವರ ಸ್ಮರಣೆಗಾಗಿ ಮನಗೂಳಿ ಆಸ್ಪತ್ರೆಯಲ್ಲಿ ನಮ್ಮ ಕುಟುಂಬದವರು ಸೇರಿ ಅನೇಕರಿಗೆ ಪ್ರಯೋಜನವಾಗಲಿ ಎಂದು ಉಚಿತ ಬೃಹತ ಆರೋಗ್ಯ ತಪಾಸಣಾ ಶಿಬಿರವನ್ನು…

Read More

ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯ ಸಂಭ್ರಮಾಚರಣೆ | ದೀಪೋತ್ಸವ | ವಿಶೇಷ ಪೂಜೆ *- ದೇವೇಂದ್ರ ಹೆಳವರ*ವಿಜಯಪುರ: ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆ, ಹಾಗೂ ಶ್ರೀ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತನಗರ ಸೇರಿದಂತೆ ಜಿಲ್ಲೆಯಲ್ಲಿ ಸೋಮವಾರ ಪ್ರಭು ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿ ನಮಿಸುವ ಮೂಲಕ ಭಕ್ತಿ ಭಾವ ಮೆರೆಯಲಾಯಿತು.ನಗರದ ಗಲ್ಲಿ-ಗಲ್ಲಿಗಳಲ್ಲಿ, ವಿವಿಧ ದೇವಸ್ಥಾನಗಳಲ್ಲಿ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.ಬಣ್ಣದ ಬಣ್ಣದ ರಂಗೋಲಿಯ ಚಿತ್ತಾರ ಬಿಡಿಸಿ ಶ್ರೀರಾಮನ ಭಾವಚಿತ್ರವಿಟ್ಟು ಜನರು ಪೂಜೆ ಸಲ್ಲಿಸಿ ಶ್ರದ್ಧಾ ಭಕ್ತಿಯಿಂದ ನಮನ ಸಲ್ಲಿಸಿದರು.ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನ, ಎಂ .ಜಿ. ರಸ್ತೆಯ ಶ್ರೀ ಮಧಲಾ ಮಾರುತಿ ದೇವಸ್ಥಾನ, ವಜ್ರ ಹನುಮಾನ ನಗರ, ರೇಣುಕಾ ನಗರದ ಹನುಮಾನ ದೇವಸ್ಥಾನ, ಇಬ್ರಾಹಿಂಪುರದ ಹಿರೇಮಠ, ಹನುಮಾನ ದೇವಸ್ಥಾನ, ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಶ್ರೀ ಮರಗಮ್ಮ ದೇವಿ ದೇವಸ್ಥಾನ, ಎಂ.ಜಿ ರಸ್ತೆಯ ಶ್ರೀ ಮಧಲಾ ಮಾರುತಿ ದೇವಸ್ಥಾನ, ಮನಗೂಳಿ ಅಗಸಿಯ ಹನುಮಾನ ದೇವಸ್ಥಾನ ಸೇರಿದಂತೆ ನಗರದ ವಿವಿಧ ಬಡಾವಣೆಗಳ…

Read More

ಜಿಲ್ಲೆಯ ೮ ವಿಧಾನಸಭಾ ಕ್ಷೇತ್ರಗಳಲ್ಲಿ ೧೯,೧೯,೦೪೮ ಮತದಾರರು | ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾಹಿತಿ ವಿಜಯಪುರ: ಜಿಲ್ಲೆಯ ೮ ವಿಧಾನ ಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ೨೦೨೪ರ ಜನವರಿ ೨೨ರಂದು ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ೯,೭೬,೦೭೩ ಗಂಡು, ೯,೪೨,೭೫೭ ಹೆಣ್ಣು ಹಾಗೂ ೨೧೮ ಇತರೆ ಸೇರಿದಂತೆ ಒಟ್ಟು ೧೯,೧೯,೦೪೮ ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ಅಂದರೆ, ದಿನಾಂಕ:೨೭-೧೦-೨೦೨೩ ರಿಂದ ೦೯-೧೨-೨೦೨೩ರವರೆಗೆ ಸ್ವೀಕೃತವಾದ ಎಲ್ಲ ಹಕ್ಕು ಮತ್ತು ಆಕ್ಷೇಪಣೆಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಪಡಿಸಲಾಗಿದೆ. ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು ೧೮,೯೯,೨೪೮ ಮತದಾರರಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ ೧೯,೧೯,೦೪೮ ಮತದಾರರಿದ್ದು, ಒಟ್ಟು ೧೯,೮೦೦ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ ಎಂದು ಹೇಳಿದರು.೧೯,೧೯,೦೪೮ ಮತದಾರರು : ಜಿಲ್ಲೆಯ ವಿಧಾನಸಭಾವಾರು ಅಂತಿಮ ಮತದಾರರ ಪಟ್ಟಿಯಲ್ಲಿರುವಂತೆ ೨೬-ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದಲ್ಲಿ ೧,೧೧,೩೩೯ ಗಂಡು, ೧,೦೯,೧೬೬ ಹೆಣ್ಣು ಹಾಗೂ ೨೨ ಇತರೆ ಮತದಾರರು ಸೇರಿದಂತೆ ಒಟ್ಟು…

Read More

ಇಂಡಿ: ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ದೇವರ ಪ್ರತಿಷ್ಠಾಪನೆ ಸಂಭ್ರಮದ ಹಿನ್ನೆಲೆ ಅಂಗವಾಗಿ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಸೋಮವಾರ ಅದ್ದೂರಿ ಶ್ರೀರಾಮ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿತ್ತು.ವಿಹಿಂಪ ಭಜರಂಗದಳ ಮತ್ತು ನಗರದ ಗಣ್ಯರು ಶ್ರೀ ರಾಮನ ಅಪಾರ ಅಭಿಮಾನಿಗಳು ವ್ಯಾಪಾರಸ್ಥರು ಪಾಲ್ಗೊಂಡಿದ್ದರು.ಶಾಂತೇಶ್ವರ ದೇವಸ್ಥಾನದಿಂದ ಶ್ರೀರಾಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶೋಭಾಯಾತ್ರೆ ಪ್ರಾರಂಭಿಸಲಾಯಿತು. ಬಡಿಗೇರ, ಬಿರಾದಾರ ಓಣಿ ಮಾರ್ಗವಾಗಿ ಅಗಸಿ ಹನುಮಾನ ದೇವಾಲಯದಿಂದ ಮಹಾವೀರ ವೃತ್ತ, ಅಂಬೇಡ್ಕರ್ ವೃತ್ತದ ಮುಖಾಂತರ ಹಾದು ಬಸವೇಶ್ವರ ವೃತ್ತದಲ್ಲಿ ಶೋಭಾಯಾತ್ರೆ ಕಾರ‍್ಯಕ್ರಮ ನಡೆಯಿತು.ಶ್ರೀ ಶಾಂತೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಕಾಸುಗೌಡ ಬಿರಾದಾರ ಮಾತನಾಡಿದರು.ಶಿರಶ್ಯಾಡದ ಅಭಿನವ ಮುರಗೇಂದ್ರ ಶಿವಾಚಾರ್ಯರರು, ಪ್ರಕಾಶ ಬಿರಾದಾರ, ಅನೀಲಗೌಡ ಬಿರಾದಾರ, ದೇವೆಂದ್ರ ಕುಂಬಾರ, ನೇತಾಜಿ ಪವಾರ ಮಾತನಾಡಿದರು.ಅಂಬಾಭವಾನಿ ಭಜನಾ ಮಂಡಳಿ ಕುಂಬಾರ ಓಣಿ, ಗುರುಸಾರ್ವಭೌಮ ಭಜನಾ ಮಂಡಳಿಯವರಿಂದ ಶೋಭಾ ಯಾತ್ರೆಯುದ್ದಕ್ಕೂ ರಾಮ ಭಜನೆ ನಡೆಯಿತು.ಸಂಜೆ ಶ್ರೀ ಶಾಂತೇಶ್ವರ ದೇವಸ್ಥಾನ ಸೇರಿದಂತೆ ನಗರದ ಎಲ್ಲ ದೇವಸ್ಥಾನಗಳಲ್ಲಿ ಹಾಗೂ ಗ್ರಾಮೀಣ ಭಾಗದ ಪ್ರತಿ ದೇವಸ್ಥಾನದಲ್ಲಿ ದೀಪೋತ್ಸವ ಕಾರ‍್ಯಕ್ರಮ ಆಯೋಜಿಸಲಾಗಿತ್ತು.ಜಿಆರ್‌ಜಿ ಕಾಲೇಜಿನ ಆವರಣದಲ್ಲಿ…

Read More