Author: editor.udayarashmi@gmail.com

ಕೊಲ್ಹಾರ: ಅಸಂಖ್ಯಾತ ಕರಸೇವಕರ ಭಕ್ತರ ತಪಸ್ಸು ತ್ಯಾಗ ಬಲಿದಾನಕ್ಕೆ ತಕ್ಕ ಪ್ರತಿಫಲವಾಗಿ ಭಾರತೀಯರ ಮರ್ಯಾದಾ ಪುರುಷೋತ್ತಮ ಶ್ರೀರಾಮ ದೇವರ ಬಾಲರಾಮನ ಮೂರ್ತಿಯು ಅಯೋಧ್ಯೆಯ ರಾಮಲಲ್ಲಾ ಮಂದಿರದಲ್ಲಿ ಸೋಮವಾರ ಪ್ರತಿಷ್ಠಾಪನೆಗೊಂಡಿದ್ದು ವಿಶ್ವವೇ ಬೆರಗಾಗುವಂತೆ ಮಾಡಿದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.ಸೋಮವಾರ ಪಟ್ಟಣದ ಸಮೀಪವಿರುವ ಕೃಷ್ಣಾ ನದಿಯಲ್ಲಿ ಬೆಳಗಿನಜಾವ ಕಾರ್ಯಕರ್ತರೊಂದಿಗೆ ಸ್ನಾನವನ್ನು ಮುಗಿಸಿ ಪುಣ್ಯತೀರ್ಥವನ್ನು ಹೊತ್ತುಕೊಂಡು ಕೊಲ್ಹಾರ ಪುರದಲ್ಲಿರುವ ಸಕಲ ದೇವಾನು ದೇವತೆಗಳ ದೇವಸ್ಥಾನಕ್ಕೆ ತೆರಳಿ ಜಲವನ್ನು ಸಮರ್ಪಿಸಿದರು.ರಾಮಮಂದಿರದ ಉದ್ಘಾಟನೆ ನಿಮಿತ್ಯವಾಗಿ ಪಟ್ಟಣವೂ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿರುವ ವಿವಿಧ ಸಮಾಜಗಳ ಮಂದಿರಗಳು ಏಕತಾ ಮನೋಭಾವದಿಂದ ಶುಬ್ರವಾಗಿ ಕಂಗೊಳಿಸುತ್ತಿದ್ದವು. ಧರ್ಮಗುರುಗಳ ಮಠಾಧೀಶರ ವೇದ ಮಂತ್ರಗಳ ಪಠಣದೊಂದಿಗೆ ರುದ್ರಾಭೀಷೇಕ ಹೋಮ ಹವನ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಿದವು.ಪ್ರಧಾನಿ ಮೋದಿಯವರ ಕರೆಯಂತೆ ಎಲ್ಲ ಗ್ರಾಮಗಳು ವಿಶೇಷವಾಗಿ ಕೊಲ್ಹಾರ ಪಟ್ಟಣ ಕೇಸರಿಮಯವಾಗಿ ಕಂಗೊಳಿಸಿ ಹಬ್ಬದ ವಾತಾವರಣ ಸೃಷ್ಟಿಯಾಗಿ ಎಲ್ಲೆಡೆ ರಂಗೋಲಿ ಚಿತ್ತಾರ ಬಿಡಿಸಿ ಜೈಶ್ರೀರಾಮ್ ಘೋಷಣೆ ಹಾಕುತ್ತಾ ಶ್ವೇತ ವರ್ಣದ ಪೋಶಾಕುಗಳನ್ನು ತೊಟ್ಟ ಕಾರ್ಯಕರ್ತರ ಸಂಬ್ರಮ ಮುಗಿಲು…

Read More

ವಿಜಯಪುರ: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅಂಗವಾಗಿ ಸರಕಾರದ ಸುತ್ತೋಲೆಯಂತೆ ಬಬಲೇಶ್ವರ ಮತಕ್ಷೇತ್ರದ ನಾನಾ ಗ್ರಾಮಗಳಲ್ಲಿ ರಾಮ- ಹನುಮಂತದೇವರ ಗುಡಿಗಳು ಹಾಗೂ ಗ್ರಾಮದೇವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ- ಪ್ರಾರ್ಥನೆ ನೆರವೇರಿಸಲಾಯಿತು.ಅದರಂತೆ ಎಂ. ಬಿ. ಪಾಟೀಲ ಅವರ ಅಭಿಮಾನಿಗಳ ಬಳಗದವರು ಕೂಡಾ ಬಬಲೇಶ್ವರ ಮತಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿ ರಾಮ, ಹನುಮಂತ ಮತ್ತು ಗ್ರಾಮದೇವತೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ಬೆಳಿಗ್ಗೆ ತಮ್ಮೂರಿನ ದೇವಸ್ಥಾನಗಳಿಗೆ ತೆರಳಿದ ಎಂ. ಬಿ. ಪಾಟೀಲ ಅವರ ಅಭಿಮಾನಿಗಳ ಬಳಗದ ಕಾರ್ಯಕರ್ತರು ಪೂಜೆ ಸಲ್ಲಿಸಿದರು. ಅಲ್ಲದೇ, ದೇವರ ಮೂರ್ತಿಗಳಿಗೆ ನೈವೇದ್ಯ ಅರ್ಪಿಸಿ ನಮನ ಸಲ್ಲಿಸಿದರು. ನಾಡಿನಾದ್ಯಂತ ಸುಖ, ಶಾಂತಿ, ಸಮೃದ್ಧಿ ನೆಲಸಲಿ ಎಂದು ಪ್ರಾರ್ಥಿಸಿದರು. ಅಲ್ಲದೇ, ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ಹಂಚಿದರು. ಅಲ್ಲದೇ, ಶ್ರೀರಾಮನ ಪರ ಜಯಘೋಷ ಹಾಕಿದರು.

Read More

ವಿಜಯಪುರ: ನಗರದ ಯುವ ಭಾರತ ಸಮಿತಿ ವತಿಯಿಂದ ಶ್ರೀ ರಾಮಮಂದಿರ ಲೋಕಾರ್ಪಣೆಯನ್ನು ಸೋಮವಾರ ಅರ್ಥಪೂರ್ಣವಾಗಿ ಸಂಭ್ರಮಿಸಲಾಯಿತು.ಕಿರಾಣಾ ಮಾರುಕಟ್ಟೆಯಲ್ಲಿ ಚಿನ್ನದ ವರ್ಣದಲ್ಲಿ ಭವ್ಯ ಮಂಟಪ ನಿರ್ಮಿಸಿ ಅಲ್ಲಿ ಅಯೋಧ್ಯೆಯಲ್ಲಿರುವ ಶ್ರೀ ರಾಮನ ಪವಿತ್ರ ಪ್ರತಿಮೆಯ ಪ್ರತಿರೂಪವನ್ನು ಇರಿಸಲಾಗಿತ್ತು. ಸಾಕ್ಷಾತ್ ಅಯೋಧ್ಯೆಯ ರಾಮಮಂದಿರ ಪ್ರತಿಮೆಯನ್ನೇ ನೋಡುವಂತೆ ಆಪ್ತವಾಗಿರುವ ಮೂರ್ತಿ ಇರಿಸಿ ಭಕ್ತಿಭಾವದಿಂದ ಪೂಜೆ ಸಲ್ಲಿಸಲಾಯಿತು. ಚಿನ್ನದ ವರ್ಣದ ಬೃಹತ್ ಮಂಟಪದಲ್ಲಿ ಭವ್ಯ ಶ್ರೀರಾಮ ಮಂದಿರ, ಅದಕ್ಕೆ ಹೊಂದಿಕೊಂಡಂತೆ ಧನುರ್ಧಾರಿ ಶ್ರೀರಾಮನ ಪ್ರತಿಕೃತಿ ಹಾಗೂ ಹೃದಯ ಮಂದಿರದಲ್ಲಿ ಶ್ರೀರಾಮ ಸೀತೆಯನ್ನು ಇರಿಸಿದ ಹನುಮಂತನ ದೃಶ್ಯದ ಪ್ರತಿರೂಪ ಭಕ್ತಿಭಾವಕ್ಕೆ ಸಾಕ್ಷಿಯಾಯಿತು.ಯುವ ಭಾರತ ಸಂಸ್ಥೆಯ ಅಧ್ಯಕ್ಷ ಉಮೇಶ ಕಾರಜೋಳ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿ, ಇಂದು ಸಮಸ್ತ ಭಾರತೀಯರ ಕನಸು ನನಸಾಗಿದೆ, ಇಂದು ಇಡೀ ದೇಶವೇ ಹೆಮ್ಮೆಪಡುವ ಹಬ್ಬದ ದಿನ, ಅನೇಕ ಜನರ ತ್ಯಾಗದ ಫಲವಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕನಸು ನನಸಾಗಿದೆ ಎಂದರು.ಈ‌ ಸಂದರ್ಬದಲ್ಲಿ ಸತೀಶ ಬಾಗಿ, ವಿರೇಶ ಗೋಬ್ಬೂರ, ಸಂತೋಷಗೌಡ ಪಾಟೀಲ, ಕಲ್ಮೇಶ ಅಮರಾವತಿ,…

Read More

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಲ್ಲ | ಸುಳ್ಳು ವರದಿ ಸೃಷ್ಟಿ | ಪ್ರಕರಣ ಮುಚ್ಚಿ ಹಾಕಲು ಯತ್ನ ಹುಬ್ಬಳ್ಳಿ: ಅಪರಾಧ ಕೃತ್ಯ ಎಸಗಿದವರಲ್ಲಿ ವೋಟ್ ಬ್ಯಾಂಕ್ ಇದೆ. ಈ ಕಾರಣದಿಂದಲೇ ಕರ್ನಾಟಕ ರಾಜ್ಯ ಸರ್ಕಾರ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರದವರನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಪಾದಿಸಿದರು.ಹಾನಗಲ್‌ನಲ್ಲಿ ಗ್ಯಾಂಗ್ ರೇಪ್ ಪ್ರಕರಣವನ್ನು ಖಂಡಿಸಿ ಶನಿವಾರ ಪ್ರತಿಭಟನೆ ಮಾಡುವ ವೇಳೆ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕ್ರಿಮಿನಲ್‌ಗಳಿಗೆ ಕುಮಕ್ಕು ಸಿಗುತ್ತಿದೆ. ಅಪರಾಧ ಕೃತ್ಯ ಎಸಗಿದವರಲ್ಲಿ ವೋಟ್ ಬ್ಯಾಂಕ್ ಇದೆ ಎಂದು ಅವರು ಕಿಡಿ ಕಾರಿದರು.ಹಾನಗಲ್‌ನಲ್ಲಿ ನಡೆದ ಸಾಮೂಹಿಕ ಅತ್ಯಚಾರದಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಇಷ್ಟಾದರೂ ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಗ್ಯಾಂಗ್ ರೇಪ್ ಪ್ರಕರಣದಲ್ಲಿ ಸರಿಯಾದ ರೀತಿಯಲ್ಲಿ ತನಿಖೆ ನಡೆಯುತ್ತಿದೆ ಎನ್ನುತ್ತಾರೆ. ಹಾಗಾದರೆ ಇಬ್ಬರು ‌ಪೊಲೀಸರನ್ನ ಅಮಾನತು ಮಾಡಿದ್ದು ಏಕೆ..? ಎಂದು ಅವರು ಪ್ರಶ್ನಿಸಿದರು.ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಗೆ…

Read More

ಕೊಲ್ಹಾರ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಪಟ್ಟಣದ ಬನಶಂಕರಿ ದೇವಿ ಪಾದಯಾತ್ರಾ ಕಮೀಟಿಯಿಂದ ಕೊಲ್ಹಾರದಿಂದ ಬದಾಮಿ ಬನಶಂಕರಿ ದೇವಸ್ಥಾನದವರೆಗೆ ೧೪ನೇ ವರ್ಷದ ಪಾದಯಾತ್ರೆಯು ದಿನಾಂಕ ೨೩ ಮಂಗಳವಾರ ಮುಂಜಾನೆ ೭ ಘಂಟೆಗೆ ಸ್ಥಳಿಯ ಬನಶಂಕರಿ ದೇವಸ್ಥಾನದಲ್ಲಿ ಮಹಾಪೂಜೆಯನ್ನು ನೆರವೇರಿಸಿದ ನಂತರ ಪಾದಯಾತ್ರೆಯು ಹೊರಡುವದು.ನೂರಾರು ಭಕ್ತರು ತೆರಳುವ ಪಾದಯಾತ್ರೆಯವರನ್ನು ಸಕಲ ವಾದ್ಯ ಮೇಳದ ಬಾಜಾ ಭಜಂತ್ರಿಯವರೊಂದಿಗೆ ದಿಗಂಬರೇಶ್ವರ ಮಠದವರಗೆ ಬಿಳ್ಕೊಡಲಾಗುವದು.ಯುಕೆಪಿ ಮಾರ್ಗವಾಗಿ ಬಾಡಗಂಡಿ, ಅನಗವಾಡಿ, ಗದ್ದನಕೇರಿ, ಸೀಮಿಕೇರಿ, ಕಗಲಗಂಬ, ಕಟಗೇರಿ, ಕಂಕಣಕೊಪ್ಪ, ಹಲಕುರ್ಕಿ, ಮುಚ್ಚಳಗುಡ್ಡ, ಬದಾಮಿ ರೇಲ್ವೆ ಸ್ಟೇಷನ್ ಮಾರ್ಗದ ಮೂಲಕ ಬನಶಂಕರಿ ದೇವಸ್ಥಾನಕ್ಕೆ ತೆರಳುವರು. ಪಾದಯಾತ್ರಿಕರಿಗೆ ಅಲ್ಪೋಪಹಾರ, ಊಟ, ವಸತಿ ಸೌಕರ್ಯಗಳನ್ನು ಭಕ್ತರು ಒದಗಿಸಿಕೊಡುತ್ತಾರೆ ಎಂದು ಪಾದಯಾತ್ರಾ ಕಮೀಟಿಯ ಈರಣ್ಣ ಬಾಲಗೊಂಡ, ಶ್ರೀಕಾಂತ ಅಮಾಶಿಗೌಡರ, ಬಸವರಾಜ ಯಡಹಳ್ಳಿ, ಬಸವರಾಜ ಚೌಡಪ್ಪಗೋಳ, ಕಲ್ಲಪ್ಪ ಪತಂಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Read More

ಡಿಎಸ್ಸೆಸ್ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರದಲ್ಲಿ ಹೆಣ್ಣೂರ ಶ್ರೀನಿವಾಸ ಅಭಿಮತ ಆಲಮಟ್ಟಿ: ಒಳಮೀಸಲಾತಿ ಜಾರಿ ಮಾಡುವುದು ಕೇಂದ್ರದ ಕರ್ತವ್ಯ, ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದನ್ನು ತಪ್ಪು ಎನ್ನುತ್ತಿರುವ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಹೇಳಿಕೆ ದಲಿತರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಹೆಣ್ಣೂರ ಶ್ರೀನಿವಾಸ ಹೇಳಿದರು.ಇಲ್ಲಿಯ ಕರ್ನಾಟಕ ಗಾಂದಿ ಮಂಜಪ್ಪ ಹರ್ಡೇಕರ ಸ್ಮಾರಕದಲ್ಲಿ ಶನಿವಾರ ನಡೆದ ಎರಡು ದಿನದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಕೇಂದ್ರ ಸರ್ಕಾರವೇ ಸಂವಿಧಾನದ ೩೪೧(೩) ಕ್ಕೆ ತಿದ್ದುಪಡಿ ತಂದು ಒಳಮೀಸಲಾತಿ ಜಾರಿಗೆ ತಂದರೆ ಅದಕ್ಕೆ ಕಾನೂನು ಮಾನ್ಯತೆ ಸಿಗುತ್ತದೆ, ಇದು ನಮ್ಮ ಹಲವು ದಶಕಗಳ ಬೇಡಿಕೆ ಎಂದರು. ಯಾವುದೇ ಅರ್ಜಿಯನ್ನು ಹಾಕದೇ ಕೇಂದ್ರ ಸರ್ಕಾರ ಶೇ ೧೦ ರಷ್ಟು ಇಡಬ್ಲುಎಸ್ ಮೀಸಲಾತಿ ಜಾರಿಗೆ ತಂದಿತು. ಒಳಮೀಸಲಾತಿಗಾಗಿ ನಿರಂತರ ಹೋರಾಟ ನಡೆಸಿದರೂ…

Read More

ವಿಜಯಪುರ: ರಾಮ ಮಂದಿರ ಉದ್ಘಾಟನೆಯ ಈ ಐತಿಹಾಸಿಕ ಕ್ಷಣವು, ನಮ್ಮೆಲ್ಲರ ಜೀವನದಲ್ಲಿ ಅದೃಷ್ಟವಶಾತ್ ಬಂದಿದೆ. ಈ ಅಮೂಲ್ಯ ಕ್ಷಣಕ್ಕೆ ನಾವೆಲ್ಲ ಸಾಕ್ಷಿಯಾಗಲು, ಪ್ರತಿಯೊಬ್ಬರ ಮನೆಯಲ್ಲಿ ದೀಪ ಬೆಳಗಿಸುವಂತೆ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಕರೆ ನೀಡಿದ್ದು, ನಗರದಲ್ಲಿ ಕನಿಷ್ಠ ಒಂದು ಲಕ್ಷ ದೀಪೋತ್ಸವ ಬೆಳಗಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 500 ವರ್ಷಗಳ ತಪಸ್ಸು, ಕೊಟ್ಯಂತರ ಹಿಂದೂ ಕಾರ್ಯಕರ್ತರು, ಸ್ವಾಮೀಜಿಗಳು, ಸಾಧು-ಸಂತರ ಕನಸು ನನಸಾಗುತ್ತಿದೆ. ಜ.22 ನಮ್ಮ ದೇಶದ ಭವಿಷ್ಯದ, ಭಾರತದ ಸ್ವಾಭಿಮಾನದ ಸಂಕೇತ, ಹಿಂದುತ್ವದ ಸ್ವಾಭಿಮಾನದ ಸಂಕೇತ, ಮೊಘಲರ ದಬ್ಬಾಳಿಕೆಯ ಗುಲಾಮಗಿರಿ ತೊಲಗಿಸಿದ ಸಂಕೇತದ ದಿನವಾಗಿದೆ. ಈ ದಿನ ಅವಿಸ್ಮರಣೀಯಗೊಳಿಸಲು, ಅಯೋಧ್ಯ ರಾಮ ಮಂದಿರ ಉದ್ಘಾಟನೆಯ ದಿನವಾದ ಜ.22 ರಂದು ನಗರದಲ್ಲಿ ಕನಿಷ್ಠ ಒಂದು ಲಕ್ಷ ದೀಪ ಬೆಳಗಬೇಕು. ಈ ನಿಟ್ಟಿನಲ್ಲಿ ಪ್ರತಿ ಹಿಂದುಗಳ ಮನೆಯ ಆವರಣದಲ್ಲಿ ಕನಿಷ್ಠ ಐದು ದೀಪಗಳನ್ನು ಬೆಳಗಿಸಬೇಕು.ದೀಪಾವಳಿ ಸಂದರ್ಭದಲ್ಲಿ ನಗರದ 11 ಸಾವಿರ…

Read More

ಕೊಲ್ಹಾರ: ಪಟ್ಟಣದ ಅಮಾನತ್ ಮೈನಾರಿಟೀಸ್ ಕೊ.ಆಪ್ ಕ್ರೆಡಿಟ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ಮಹಮ್ಮದಸಲೀಂ ಅಬ್ದುಲ್ ರೆಹಮಾನ ಅತ್ತಾರ ಅವರನ್ನು ಅವಿರೋಧವಾಗಿ ಸರ್ವ ಸದಸ್ಯರು ಆಯ್ಕೆ ಮಾಡಿದರು.ಈ ಮೊದಲು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಅಲ್ಲಾಭಕ್ಷ ವಿಜಾಪೂರ ಅವರ ವಿರುದ್ದ ಅವಿಶ್ವಾಸ ಮಂಡಣೆ ಮಾಡಿದ್ದರ ಪ್ರಯುಕ್ತ ಅಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಯಿತು.ಚುನಾವಣೆ ಅಧಿಕಾರಿಗಳಾಗಿ ಎಸ.ಎಸ್.ಹಂಗರಗಿ ಕಾರ್ಯ ನಿರ್ವಹಿಸಿದರು. ಅದರಂತೆ ರಶೀದ ಬಿಕ್ಕನಸಾಬ್ ಬೇಪಾರಿ ಅವರನ್ನು ಉಪಾಧ್ಯಕ್ಷ ಸ್ಥಾನದಲ್ಲಿ ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಮುಂದುವರೆಸಲಾಯಿತು.ಆಡಳಿತ ಮಂಡಳಿಯ ಸದಸ್ಯರಾದ ಜಾವೇದ ಬೀಳಗಿ, ಅಲ್ಲಾಭಕ್ಷ ಗಿರಗಾಂವಿ, ನೂರಹ್ಮದ ಕಂಕರಪೀರ, ಸಲೀಂ ಸಾರವಾಡ, ದಾದಾಪೀರ ಕಂಕರಪೀರ, ಶ್ರೀಮತಿ ಮಾಬೂಬಿ ಅತ್ತಾರ ಉಪಸ್ಥಿತರಿದ್ದರು. ಪಟ್ಟಣದ ಹಿರಿಯರಾದ ಕಲ್ಲು ದೇಸಾಯಿ, ಚನಮಲ್ಲಪ್ಪ ಗಿಡ್ಡಪ್ಪಗೋಳ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ನೂತನ ಅಧ್ಯಕ್ಷರನ್ನು ಸನ್ಮಾನಿಸಿದರು.

Read More

ಇಂಡಿ: ಇಂಡಿ, ಚಡಚಣ ತಾಲೂಕಿನ ಭೀಮಾ ನದಿಯ ದಂಡೆಯ ರೈತರು ಭೀಕರ ಬರಗಾಲದ ನಿಮಿತ್ಯ ಬರುವ ದಿನಗಳಲ್ಲಿ ಗ್ರಾಮಸ್ಥರಿಗೆ ಮತ್ತು ಜನ ಜಾನುವಾರುಗಳಿಗೆ ತೊಂದರೆ ಯಾಗದಂತೆ ಮಾನವೀಯ ಆಧಾರದ ಮೇಲೆ ಕೃಷಿಗೆ ನೀರು ಬಳಸಬಾರದೆಂದು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ್ ಮನವಿ ಮಾಡಿದ್ದಾರೆ.ಅವರು ಶುಕ್ರವಾರ ಇಂಡಿ ಮತ್ತು ಚಡಚಣ ತಾಲೂಕಿನ ಅಣಚಿ, ಧೂಳಖೇಡ, ಮರಗೂರ ಗ್ರಾಮಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರೈತರಿಗೆ ಮನವಿ ಮಾಡಿದರು.ಇಂಡಿ ಮತ್ತು ಚಡಚಣ ತಾಲೂಕಿನಲ್ಲಿ ಮಳೆ ಕಡಿಮೆಯಾಗಿರುವದರಿಂದ ಭೀಮಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ ರೈತರು ಕೃಷಿಗೆ ನೀರು ಬಳಸಬಾರದು, ಅದಲ್ಲದೆ ಇಂಡಿ ಮತ್ತು ಚಡಚಣ ತಾಲೂಕಿನ ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಗಳಿಗೆ ನೀರಿನ ಅವಶ್ಯಕತೆ ಇರುವದರಿಂದ ಇಂಡಿ ಮತ್ತು ಚಡಚಣ ತಾಲೂಕುಗಳ ಭೀಮಾ ನದಿಯ ದಡದಲ್ಲಿರುವ ಗ್ರಾಮಗಳ ರೈತರು ನೀರನ್ನು ಬಳಸದಂತೆ ಕಾನೂನಾತ್ಮಕ ನಿರ್ಭಂಧ ವಿಧಿಸಿದ್ದು ಮಾನವೀಯ ಆಧಾರದ ಮೇಲೆ ನೀರು ಬಳಸದಂತೆ ೧೪೪ರನ್ವಯ ಆದೇಶ ಹೊರಡಿಸಿದೆ ಎಂದರು.ಇಂಡಿಯ ತಹಸೀಲ್ದಾರ ಬಿ.ಎಸ್.ಕಡಕಬಾವಿ, ಚಡಚಣ…

Read More