Author: editor.udayarashmi@gmail.com

ಇಂಡಿ: ಪ್ರತಿಯೊಬ್ಬ ವಿಕಲಚೇತನರು ತಪ್ಪದೇ ತಪಾಸಣೆ ಮಾಡಿಸಿಕೊಂಡು ಉಚಿತ ಆರೋಗ್ಯ ತಪಾಸಣೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಉಮೇಶ ಹೂಗಾರ ಹೇಳಿದರು.ಗುರುವಾರ ತಾಲೂಕಿನ ಆಳೂರ ಗ್ರಾಮದ ಗ್ರಾಮ ಪಂಚಾಯತ್ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಕಲಚೇತನರ ಸಂಘಟನೆಯಿಂದ ೨೫ ರಿಂದ ೭೦ ವರ್ಷದ ಒಳಗಿನ ವಿಕಲಚೇತನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು.ಒತ್ತಡದ ಜೀವನದಲ್ಲಿ ಆರೋಗ್ಯದ ಕಾಳಜಿ ವಹಿಸದೇ ಇರುವುದರಿಂದ ಅನೇಕ ರೋಗಗಳಿಗೆ ತುತ್ತಾಗುವಂತಾಗಿದೆ. ಕಾರಣ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ನಾವು ಆರೋಗ್ಯವಾಗಿದ್ದರೆ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ. ಇಂತಹ ತಪಾಸಣೆ ಶಿಬಿರಗಳ ಸದುಪಯೋಗ ಪಡೆದುಕೋಬೇಕು ಎಂದರು.ಈ ಸಂದರ್ಭದಲ್ಲಿ ವಿ.ಆರ್.ಡಬ್ಲ್ಯೂ ಭೀಮಾಶಂಕರ ಗುಡ್ಡೇವಾಡಿ, ಪತ್ರಕರ್ತ ಯಲಗೊಂಡ ಬೇವನೂರ, ಚಂದ್ರಕಾಂತ ದೌಲಿ, ತಾಲೂಕಾ ಕೆ.ಎಚ್.ಪಿ.ಟಿ.ಸಂಯೋಜಕ ಶಿವಾನಂದ ಸಿಂಗೆ, ಗ್ರಾಪಂ ಸದಸ್ಯರು, ಗ್ರಾಪಂ ಕಾರ್ಯದರ್ಶಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸೇರಿದಂತೆ ವಿಕಲಚೇತನರು ಭಾಗವಹಿಸಿದ್ದರು.

Read More

ಇಂಡಿ: ಲಾರಿ ಚಾಲಕರಿಗೆ ಮಾರಕವಾದ ಕಾನೂನು ಜಾರಿ ಮಾಡಿದ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ, ಕೂಡಲೇ ಕಾನೂನು ವಾಪಸ್ ಪಡೆದುಕೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಇಂಡಿ ತಾಲ್ಲೂಕು ಲಾರಿ ಚಾಲಕರ ಸಂಘದ ಅಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರಿಗೆ ಚಾಲಕರು ಮನವಿಪತ್ರ ಸಲ್ಲಿಸಿದರು.ಲಾರಿ ಚಾಲಕರ ಸಂಘದ ಅಧ್ಯಕ್ಷ ಮೈಬೂಬ್ ಟಾಂಗೇವಾಲೆ ಮಾತನಾಡಿ, ಕೇಂದ್ರ ಸರ್ಕಾರ ಭಾರತೀಯ ನ್ಯಾಯ ಸಂಹಿತೆ (ಬಿಎನೆಸ್ ೨೦೨೩) ಕಾಯ್ದೆಯನ್ನು ದಿನಾಂಕ ೨೦೨೪ರ ಏಪ್ರಿಲ್ ರಿಂದ ಅನ್ವಯವಾಗುವಂತೆ ಜಾರಿ ಮಾಡಿದ್ದು, ಈ ಹೊಸ ಕಾನೂನು ವ್ಯವಸ್ಥೆಯನ್ನು ವಾಹನ ಉದ್ಯಮಕ್ಕೆ ಸಂಬಂಧಿಸಿದ ಹಲವು ನಿಯಮಗಳು ತುಂಬಾ ಕಠಿಣವಾಗಿದ್ದು, ಅದರಲ್ಲೂ ಸೆಕ್ಷೆನ್ ೧೦೬ (೧) ಮತ್ತು ಸೆಕ್ಷೆನ್ ೧೦೬ (೨) ಅಡಿಯಲ್ಲಿ ಯಾವದೇ ವಾಹನ ಚಾಲಕರು ಅಪಘಾತವನ್ನು ಮಾಡಿ ಯಾವದೇ ನಾಗರಿಕರ ಸಾವಿಗೆ ಕಾರಣವಾದರೆ ಚಾಲಕನಿಗೆ ೧೦ ವರ್ಷಗಳವರೆಗೆ ಕಠಿಣ ಶಿಕ್ಷೆ ಮತ್ತು ೭ ಲಕ್ಷಗಳ ವರೆಗೆ ದಂಡವನ್ನು ನ್ಯಾಯಾಲಯ ವಿಧಿಸಬಹುದಾಗಿದೆ.ಲಾರಿ ಚಾಲಕರು ತಿಂಗಳಿಗೆ ೧೨ ರಿಂದ…

Read More

ಕೋಲಾರ: ಬರಗಾಲದಿಂದ ತತ್ತರಿಸಿ ಕಂಗಾಲಾಗಿರುವ ರೈತರಿಗೆ ಕಾಲುವೆಯ ನೀರು ಇಲ್ಲದೇ, ಒಣಗುತ್ತಿವೆ ಇರುವ ಅಲ್ಪಸ್ವಲ್ಪ ಬೆಳೆಗಳಿಗೆ ನೀರಿನ ಅವಶ್ಯಕತೆ ಇದೆ, ಕೂಡಲೇ ಕೋಲಾರ, ನಿಡಗುಂದಿ, ತಾಲೂಕಿನಲ್ಲಿರುವ ಮುಳವಾಡ ಏತನೀರಾವರಿಯ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ನಾಳೆ ಮಂಗಳವಾರದಂದು ರೈತರೊಂದಿಗೆ ಕೋಲಾರದ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ಮೂಲಕ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೋಲಾರ ತಾಲೂಕಾ ಅಧ್ಯಕ್ಷ ಸೋಮು ಬಿರಾದಾರ ತಿಳಿಸಿದ್ದಾರೆ.ನಾರಾಯಣಪುರ ಆಣೆಕಟ್ಟಿನ ಎಡ ಹಾಗೂ ಬಲದಂಡೆಯ ಕಾಲುವೆಗಳಿಗೆ ನೀರು ಹರಿಸುತ್ತಿರುವುದು ಖುಷಿಯ ವಿಚಾರ, ಅದರಂತೆ ನಮ್ಮ ಬೆಳೆಗಳು ಉಳಿಯಬೇಕು ಜಾನುವಾರುಗಳಿಗೆ ಕುಡಿಯಲು ನೀರು ಬೇಕೆ ಬೇಕು ಆದ್ದರಿಂದ ಜನೇವರಿ ೨೨ ರ ಒಳಗೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿದರು.ಮಳೆಯ ಅಭಾವದಿಂದ ಇರುವ ಭಾವಿ, ಭೋರವೆಲ್‌ಗಳಲ್ಲಿ ನೀರಿಲ್ಲದೇ ಜಮೀನಿನಲ್ಲಿ ಇರುವ ಗೋಧಿ, ಕಡ್ಲಿ, ಶೇಂಗಾ, ಸೂರ್ಯಕಾಂತಿ, ಮೇಣಸಿನಕಾಯಿ, ಸೇರಿದಂತೆ ವಿವಿಧ ಬೆಳೆಗಳು ಒಣಗುತ್ತಿವೆ, ರೈತ ಉಳಿಯಬೇಕಾದರೆ ಕಾಲುವೆಗೆ ನೀರು ಹರಿಸಬೇಕು ಇಲ್ಲವಾದಲ್ಲಿ…

Read More

ಬ್ರಹ್ಮದೇವನಮಡು: ಮುಖ್ಶಮಂತ್ರಿ ಸಿದ್ದರಾಮಯ್ಶ ಅವರನ್ನು ಏಕವಚನದಲ್ಲಿ ನಿಂದಿಸಿದ ಉತ್ತರ ಕನ್ನಡದ ಸಂಸದ ಅನಂತಕುಮಾರ ಹೆಗಡೆ ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಚಂದ್ರು ಕೆಂಭಾವಿ ಒತ್ತಾಯಿಸಿದ್ದಾರೆ.ಈ ಹಿಂದೆ ಕೇಂದ್ರ ಸಚಿವರಾಗಿದ್ದಾಗ ಸಂವಿಧಾನವನ್ನು ಬದಲಾಯಿಸುವ ಕುರಿತು ಮಾತನಾಡಿ ವಿವಾದಕ್ಕೆ ಕಾರಣವಾಗಿದ್ದರು. ಬಳಿಕ ನಾಲ್ಕು ವಷ೯ ಸಾವ೯ಜನಿಕವಾಗಿ ಯಾವ ಕಾಯ೯ಕ್ರಮದಲ್ಲೂ ಪಾಲ್ಗೊಂಡಿರಲಿಲ್ಲ. ಇದೀಗ ಲೋಕಸಭೆ ಚುನಾವಣೆ ಬರುತ್ತಿದ್ದು, ಹೀಗಾಗಿ ಮತ್ತೇ ನಾಲಿಗೆ ಹರಿಬಿಟ್ಟಿದ್ದಾರೆ.ಹಿರಿಯ ನಾಯಕರ ವಿರುದ್ದ ಬಾಯಿಗೆ ಬಂದಂತೆ ಪದ ಪ್ರಯೋಗ ಮಾಡುತ್ತಿರುವದು ಸರಿಯಲ್ಲ. ಸರ್ಕಾರ ಕೂಡಲೇ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Read More

ದೇವರಹಿಪ್ಪರಗಿ: ದೇಶದಾದ್ಯಂತ ಮಂತ್ರಾಕ್ಷತೆ ವಿತರಣೆ ಶಾಂತಿಯುತವಾಗಿ ಜರುಗುತ್ತಿದೆ. ಯಾವುದೇ ಕಾರಣಕ್ಕೂ ಮಂತ್ರಾಕ್ಷತೆ ವಿತರಣೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ಸುಸಂದರ್ಭಕ್ಕೆ ಕಪ್ಪುಚುಕ್ಕೆ ಆಗಬಾರದು. ಆ ನಿಟ್ಟಿನಲ್ಲಿ ನಾವೆಲ್ಲ ಶಾಂತಿಯುತವಾಗಿ ಇರೋಣ ಎಂದು ಬಿಜೆಪಿ ಜಿಲ್ಲಾ ಧುರೀಣ ವಿಜುಗೌಡ ಪಾಟೀಲ ಹೇಳಿದರು.ಪಟ್ಟಣದ ಕರಿದೇವರ ದೇವಸ್ಥಾನದಲ್ಲಿ ಜರುಗಿದ ಸಂಘ ಪರಿವಾರ, ಬಿಜೆಪಿಯ ಪ್ರಮುಖರು, ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕಳೆದ ದಿನಗಳಲ್ಲಿ ನಡೆದ ಕಹಿ ಘಟನೆಗಳನ್ನು ಮರೆಯೋಣ. ದಿ:೨೨ ರಂದು ಎಲ್ಲರೂ ಮನೆಮನೆಗಳಲ್ಲಿ ದೀಪ ಬೆಳಗಿಸಿ ಮತ್ತೊಮ್ಮೆ ದೀಪಾವಳಿ ಆಚರಿಸುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸೋಣ ಎಂದರು.ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ ಮಾತನಾಡಿ, ಪಟ್ಟಣದ ಶಾಂತಿ ಕದಡುವ ಕಾರ್ಯಗಳಿಗೆ ಆಸ್ಪದ ನೀಡದಂತೆ ನಾವೆಲ್ಲ ಪ್ರಬುದ್ಧರಾಗಿ ವರ್ತಿಸೋಣ ಎಂದರು.ಮನೆಮನೆಗೆ ಮಂತ್ರಾಕ್ಷತೆ ವಿತರಿಸುವ ಸಮಯದಲ್ಲಿ ಪಟ್ಟಣದ ೮ನೇ ವಾರ್ಡಿನಲ್ಲಿ ಘೋಷಣೆಗೆ ಸಂಬಂಧಿಸಿದಂತೆ ಸಂಘದ ಕಾರ್ಯಕರ್ತರು ಹಾಗೂ ಒಂದು ಸಮುದಾಯದ ನಡುವೆ ಕೈ-ಕೈ ಮಿಲಾಯಿಸಿ ವಿವಾದ ಉಂಟಾಗಿತ್ತು. ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಸಂಘದ…

Read More

ದೇವರಹಿಪ್ಪರಗಿ: ನಮ್ಮ ವರ್ತನೆ, ಬುದ್ಧಿಮತ್ತೆ, ಪ್ರಯತ್ನಗಳೇ ನಮ್ಮ ನಿಜವಾದ ಅಂತಃಶಕ್ತಿಗಳು ಇವುಗಳ ಮೂಲಕ ವಿದ್ಯಾರ್ಥಿಗಳು ಯಶಸ್ಸಿನತ್ತ ಸಾಗಲು ಮುಂದಾಗಬೇಕು ಎಂದು ಕೊಣ್ಣೂರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಬಿ.ಕೆ.ಕೊಣ್ಣೂರ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಜರುಗಿದ ೨೦೨೩-೨೪ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ಕ್ರಾಸ್, ಸ್ಕೌಟ್ ಮತ್ತು ಗೈಡ್ ಚಟುವಟಿಕೆಗಳ ಉದ್ಘಾಟನಾ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.ನಮ್ಮ ಯಶಸ್ಸಿನ ಮೂಲವೇ ನಮ್ಮ ನಡುವಳಿಕೆ. ಆದ್ದರಿಂದ ನಾವೆಲ್ಲ ಉತ್ತಮ ಚಾರಿತ್ರ್ಯವನ್ನು ಅಳವಡಿಸಿಕೊಂಡು ಜೀವನದಲ್ಲಿ ಮುನ್ನಡೆಯೋಣ ಎಂದರು.ವಿಜಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಡಾ.ಚಂದ್ರಕಾಂತ ಬಿ. ಹಾಗೂ ಇಂಡಿ ಜಿ.ಆರ್.ಜಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಆನಂದ ನಡುವಿನಮನಿ ಮಾತನಾಡಿದರು.ಪ್ರಾಂಶುಪಾಲ ಅಶೋಕ ಹೆಗಡೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ದೈಹಿಕ ಶಿಕ್ಷಣ ನಿರ್ದೇಶಕ ಡಾ.ಅಶೋಕಕುಮಾರ ಜಾಧವ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.ವಿಜಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಮಮತಾ ಬನ್ನೂರ,…

Read More

ಮೋರಟಗಿ: ಗ್ರಾಮದ ಪ್ರತಿಷ್ಠಿತ ಕಲ್ಪವೃಕ್ಷ ಕಾಲೇಜಿನ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ದಿನಾಂಕ ೨೧ ರಂದು ರವಿವಾರ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ಸದ್ಗುರು ಶಂಕರಾನಂದ ಸ್ವಾಮಿಗಳು ಆರೂಢ ಮಠ ಅಸಂಗಿಹಾಳ ದಿವ್ಯ ಸಾನಿಧ್ಯ ವಹಿಸಲಿಸಲಿದ್ದು ಸಂಸ್ಥಾಪಕ ಅಧ್ಯಕ್ಷ ಶಿವಶರಣಗೌಡ ಬಿರಾದಾರ ಅಧ್ಯಕ್ಷ ಸ್ಥಾನ ವಹಿಸಲಿದ್ದಾರೆ.ಈ ಕಾರ್ಯಕ್ರಮದಲ್ಲಿ ವಿಶೇಷ ಸನ್ಮಾನಿತರಾಗಿ ಇಸ್ರೋ ಹಿರಿಯ ವಿಜ್ಞಾನಿ ಸಂಜೀವ ಗೌರ ಆಗಮಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಡಾ, ಪಿ. ಕೆ. ಹೊಸಮನಿ ಪಿಯು ಡಿಡಿಪಿಐ ವಿಜಯಪುರ, ಬಿ. ಟಿ. ಗೊಂಗಡಿ, ಸಿ. ಎಂ. ಬಂಡಗಾರ, ಎಸ್. ಕೆ. ಬಿರಾದಾರ, ಪಾಲಕರ ಪ್ರತಿನಿಧಿಯಾಗಿ ಎಸ್. ಎಸ್. ಪೂಜಾರಿ, ಆಡಳಿತ ಅಧಿಕಾರಿ ಎಸ್. ಎಚ್. ದುಳಬಾ, ಸಮನ್ವಯ ಅಧಿಕಾರಿ ಎಸ್. ವ್ಹಿ. ಬಿರಾದಾರ, ಪ್ರಾಚಾರ್ಯ ಡಾ, ಎ. ಬಿ. ಸಿಂದಗಿ, ಎಲ್. ಎಸ್. ಸುಲ್ತಾನಪುರ, ಪ್ರಾಚಾರ್ಯ ಎಸ್. ಬಿ. ಬಿರಾದಾರ, ವಿದ್ಯಾರ್ಥಿಗಳ ಪ್ರತಿನಿಧಿಗಳಾದ ಕುಮಾರಿ ಪಲ್ಲವಿ ಪಾರಗೊಂಡ, ಕುಮಾರ ದಾವಲಮಲಿಕ ಪಟೇಲ್ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಕಲ್ಪವೃಕ್ಷ ಆಡಳಿತ…

Read More

ವಿಜಯಪುರ: ಶ್ರೀ ರಾಮ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ಜ.೨೨ ಸೋಮವಾರ ಶ್ರೀ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಮಧ್ಯಾಹ್ನ ೧೨ ಗಂಟೆಯಿಂದ ಶ್ರೀರಾಮ ಮಂದಿರ ಲೋಕಾರ್ಪಣೆ ಹಾಗೂ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವ ಶ್ರೀರಾಮ ದೇವರಿಗೆ ವಿಶೇಷ ಪೂಜೆ ಮಹಾ ಆರತಿ, ಸಾಯಂಕಾಲ ೫:೦೦ ಗೆ ಶ್ರೀ ರಾಮನ ಸ್ತುತಿ ಭಕ್ತಿಗೀತೆಗಳು, ಸಂಗೀತ ಹಾಗೂ ಭಜನೆ ಕಾರ್ಯಕ್ರಮ, ನಂತರ ಸಹಸ್ರಾರು ದೀಪಾಲಂಕಾರದೊಂದಿಗೆ ವಿಶೇಷವಾಗಿ ರಂಗೋಲಿ ಚಿತ್ರದಲ್ಲಿ ಶ್ರೀ ರಾಮ ಮಂದಿರ ಹಾಗೂ ಶ್ರೀ ರಾಮನ ಭಾವಚಿತ್ರ ಮೂಡಿ ಬರಲಿದೆ,ಸದ್ಭಕ್ತರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಗಳಿಗೆ ಶೋಭೆ ತರಬೇಕೆಂದು ಶಂಕರಲಿಂಗ ದೇವಸ್ಥಾನ ಕಮಿಟಿ ಕೋರಿದೆ.

Read More

ವಿಜಯಪುರ: ನಗರದಿಂದ ತಿರುಪತಿಗೆ ನೇರ ರೈಲುಸಂಚಾರ ಆರಂಭಿಸುವಂತೆ ಸಂಸದರಾದ ರಮೇಶ ಜಿಗಜಿಣಗಿ ಅವರು ಹುಬ್ಬಳ್ಳಿ ರೇಲ್ವೆ ಜನರಲ್ ಮ್ಯಾನೇಜರ್ ಅವರಿಗೆ ಪತ್ರ ಬರೆದಿದ್ದಾರೆ.ವಿಜಯಪುರದಿಂದ ತಿರುಪತಿಯ ಮಧ್ಯ ಸಂಚರಿಸುವ ರೈಲನ್ನು ಆರಂಭಿಸುವಂತೆ ಸಾರ್ವಜನಿಕರ ಬಹದಿನಗಳ ಬೇಡಿಕೆಯಾಗಿದ್ದು, ಈ ಕುರಿತು ಕೇಂದ್ರ ರೇಲ್ವೆ ಸಚಿವರೊಂದಿಗೂ ಚರ್ಚಿಸಲಾಗಿದೆ. ಜನರಿಗೆ ನೇರವಾದ ಮಾರ್ಗವಿಲ್ಲದೇ ಇರುವುದರಿಂದ ಪ್ರಯಾಣಕ್ಕೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಶೀಘ್ರವಾಗಿ ವಿಜಯಪುರ – ತಿರುಪತಿ ಮಧ್ಯ ರೈಲನ್ನು ಪ್ರಾರಂಭಿಸಿ ಜನರಿಗೆ ಅನುಕೂಲ ಕಲ್ಪಿಸುವಂತೆ ಅವರು ಪತ್ರ ಬರೆದು ಕೋರಿದ್ದಾರೆ.

Read More

ಸಿಂದಗಿ: ಮಕ್ಕಳ ತೂಕ ನಿರ್ವಹಣೆ, ಆರೋಗ್ಯ, ಶುಚಿತ್ವ, ಪೌಷ್ಟಿಕ ಆಹಾರ, ಶಾಲಾ ಪೂರ್ವ ಶಿಕ್ಷಣ, ವೈಯಕ್ತಿಕ ಸ್ವಚ್ಛತೆ, ಅಪೌಷ್ಟಿಕತೆ ಹೋಗಲಾಡಿಸುವ ಬಗ್ಗೆ ಎಚ್ಚರ ವಹಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಭುಲಿಂಗ ಹಿರೇಮಠ ಹೇಳಿದರು.ತಾಲೂಕಿನ ಗಣಿಹಾರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡ ಪಾಲಕರ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಮೋಬೈಲ್ ಗೀಳಿನಿಂದಾಗುವ ದುಷ್ಪರಿಣಾಮ ಹಾಗೂ ಅಪೌಷ್ಟಿಕ ಮಕ್ಕಳಿಗೆ ಎನ್.ಆರ್.ಸಿಯಲ್ಲಿ ದಾಖಲು ಮಾಡುವುದರ ಕುರಿತು ತಿಳಿಸಲಾಯಿತು. ಹಾಗೂ ಇಲಾಖೆಯ ವಿವಿಧ ಯೋಜನೆಗಳಾದ ಮಾತೃವಂದನಾ ಸುಕನ್ಯಾ ಸಮೃದ್ಧಿ, ಗೃಹಲಕ್ಷ್ಮಿ ಯೋಜನೆಗಳ ಬಗ್ಗೆ ಪಾಲಕರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಿದರು.ಇದೇ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿಯವರಿಂದ ಆನೆಕಾಲು ನಿಯಂತ್ರಣ ಮಾತ್ರೆಗಳನ್ನು ನುಂಗಿಸಲಾಯಿತು.ಈ ವೇಳೆ ವಲಯ ಮೇಲ್ವಿಚಾರಕಿ ಸುನಿತಾ ಕಪ್ಪೆನವರ, ಅಂಗನವಾಡಿ ಕಾರ್ಯಕರ್ತೆ ಜ್ಯೋತಿ, ಆರೋಗ್ಯ ಇಲಾಖೆ ಸಿಬ್ಬಂದಿ ಸಿಎಚ್ಒ ಬಸವರಾಜ ಶಹಾಪುರ ಸೇರಿದಂತೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಾಲಕರು ಹಾಗೂ ಮಕ್ಕಳು ಇದ್ದರು.

Read More