Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಜನವರಿ ೨೫ ರವಿವಾರ ರಥಸಪ್ತಮಿ ಶುಭ ಮಹೂರ್ತದಂದು ರಾಜ್ಯಮಟ್ಟದ ಆದಿ ಬಣಜಿಗ ಸಮಾಜದ ವಧು-ವರರ ಸಮಾವೇಶವನ್ನು ವಿಜಯಪೂರ ನಗರದ ಸಂಗನಬಸವ ಸಮುದಾಯ ಭವನ ಲಿಂದಗುಡಿ ರಸ್ತೆ ಬಿಎಲ್ಡಿಇ ಆಸ್ಪತ್ರೆ ಹತ್ತಿರ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಪಾಲ್ಗೊಳ್ಳಬೇಕೆಂದು ಜಿಲ್ಲಾ ಅಧ್ಯಕ್ಷ ಸೋಮನಿಂಗ ಕಠಾವಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದರು.ಜಿಲ್ಲಾ ವೀರಶೈವ ಲಿಂಗಾಯತ ಆದಿಬಣಜಿಗರ ಕ್ಷೇಮಾಭಿವೃದ್ದಿ ಸಂಘ ವಿಜಯಪೂರ(ರಿ), ಮತ್ತು ವಧು-ವರರ ಮಾಹಿತಿ ಕೇಂದ್ರ ಸಂಘಟಣೆ ಅಡಿಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಆದ್ದರಿಂದ ಕರ್ನಾಟಕ ಸೇರಿದಂತೆ ಪಕ್ಕದ ರಾಜ್ಯಗಳಾದ ಮಹರಾಷ್ಟ್ರ, ಆಂದ್ರ ಪ್ರದೇಶ, ತೆಲಂಗಾಣದಲ್ಲಿರುವ ಆಧಿಬಣಜಿಗ ಸಮುದಾಯದ ಬಂಧುಗಳಲ್ಲಿ ಸಂಪರ್ಕ ಕಲ್ಪಿಸುವ ಬಾಂಧವ್ಯ ಪ್ರೀತಿ. ಪ್ರೇಮ, ಬೆಳೆಸುವ ಒಬ್ಬರಿಗೊಬ್ಬರು ಪರಸ್ಪರ ಪರಿಚಯ ಮಾಡಿಕೊಳ್ಳಲು ಅನುಕೂಲವಾಗುವ ದೃಷ್ಟಿಕೋಣದಿಂದ ಇದೊಂದು ಸಮಾಜದ ಐತಿಹಾಸಿಕ ನಿರ್ಣಯವಾಗಿದೆ ಎಂದರು.ಸಮಾಜದಲ್ಲಿ ಅನೇಕ ಪಾಲಕರು ವರನ ಮತ್ತು ಕನ್ಯೆಯ ಮದುವೆ ಮಾಡಲು ಪರದಾಡುತ್ತಿರುವವರಾಗಿ ಕನ್ಯೆ ಹುಡುಕಿ ಸುಸ್ತಾಗಿರುವ ಸೂಕ್ತ ವರನ ಹುಡುಕಾಟದಲ್ಲಿರುವ ವಧು-ವರರ ಪಾಲಕರಿಗೆ ಸುವರ್ಣ ಅವಕಾಶವನ್ನು ಸಂಘಟಣೆಯವರು…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ವಿಜಯಪುರ ಬಾಗಲಕೋಟೆ ಜಿಲ್ಲಾ ಹಾಲು ಉತ್ಪಾದಕರ ಸಂಘದ ಒಕ್ಕೂಟದ ನಿರ್ದೇಶಕರಾದ ನಿಂಗನಗೌಡ ಪಾಟೀಲ ಅವರು ತಮ್ಮ ತಂದೆ ರುದ್ರಗೌಡ ವೀರನಗೌಡ ಪಾಟೀಲ್ ಇವರ ಸ್ಮರಣಾರ್ಥ ನಾಗರದಿನ್ನಿ ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆ ಬ್ಯಾಗ ಹಾಗೂ ನೋಟ್ ಬುಕ್ ವಿತರಣೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಿದರು.ಈ ಸಂದರ್ಭದಲ್ಲಿ ಪ್ರದೀಪ ಪಾಟೀಲ, ಶಾಲೆ ಗುರುಗಳು ಗುರುಮಾತೆಯರು ಹಾಗೂ ಗ್ರಾಮದ ಯುವಕರು ಕೂಡ ಪಾಲ್ಗೊಂಡಿದ್ದರು.
ಕಲಕೇರಿಗ್ರಾಪಂ ನಿರ್ಮಿಸಿದ ಗ್ರಾಮೀಣ ಸಂತೆ ಮಾರುಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳ ಉದ್ಘಾಟನೆ ಸಮಾರಂಭ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಜನತೆಯ ಆಶಿರ್ವಾದದಿಂದ ಸಿಕ್ಕ ಅಧಿಕಾರದ ಅವಧಿಯಲ್ಲಿ ಜನ ಮೆಚ್ಚುವ ಕೆಲಸ ಕಾರ್ಯಗಳನ್ನು ಮಾಡಿದರೆ ಮಾತ್ರ ಅದು ಜನತೆಯ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯವಾಗುತ್ತದೆ. ಅಂತಹ ಕೆಲಸವನ್ನು ಗ್ರಾಮದ ಮುಖ್ಯ ಬಜಾರನಲ್ಲಿ ಉತ್ತಮ ಗುಣಮಟ್ಟದ ೫೦ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡುವ ಮೂಲಕ ಕಲಕೇರಿಯ ಗ್ರಾಮ ಪಂಚಾಯತಿಯು ಇಡಿ ಜಿಲ್ಲೆಗೆ ಮಾದರಿಯಾಗಿದೆ ಎಂದು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲೋಡಗಿ ಹೇಳಿದರು.ಕಲಕೇರಿ ಗ್ರಾಮದ ಮುಖ್ಯ ಬಜಾರನಲ್ಲಿ ಜಿಲ್ಲಾ ಪಂಚಾಯತ್ ವಿಜಯಪುರ, ತಾಲೂಕು ಪಂಚಾಯತ್ ತಾಳಿಕೋಟಿ ಗ್ರಾಮ ಪಂಚಾಯತ್ ಕಾರ್ಯಾಲಯ ಕಲಕೇರಿ ಇವರ ವತಿಯಿಂದ ಹಮ್ಮಿಕೊಂಡ ಮಹಾತ್ಮಾ ಗಾಂಧೀಜಿ ಮಾರುಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳನ್ನು ಉದ್ಘಾಟಿಸಿ, ಸಸಿ ನೆಟ್ಟು ಅವರು ಮಾತನಾಡಿದರು.ಇಲ್ಲಿಯ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಸದಸ್ಯರು ಅತ್ಯಂತ ಕಡಿಮೆ ಅವಧಿಯಲ್ಲಿ ಮಳಿಗೆಗಳನ್ನು ನಿರ್ಮಿಸುವದರ ಜೊತೆಗೆ ಸುಮಾರು ೩೦-೪೦ ವರ್ಷಗಳಿಂದ ಈ ಜಾಗದಲ್ಲಿ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲ್ಲೂಕು ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಮಕ್ಕಳ ಸಾಹಿತ್ಯ ಸಂಗಮದ ವತಿಯಿಂದ ಶ್ರೀ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆಲಮೇಲ ಶಾಲೆಯಲ್ಲಿ ಅಕ್ಷರದ ಅವ್ವ, ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ಆಚರಿಸಲಾಯಿತು.ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಜೋಗೂರ ರವರು ೧೮ನೇ ಶತಮಾನದಲ್ಲಿ ಅಸ್ಪೃಶ್ಯತೆ ಯನ್ನು ಹೋಗಲಾಡಿಸಿ , ಜ್ಞಾನದ ಹಣತೆಯನ್ನು ಹಚ್ಚಲು ಪೌರೋಹಿತ್ಯ ಸಮಾಜದಿಂದ ಅನೇಕ ಅವಮಾನಗಳನ್ನು ಸಹಿಸಿಕೊಂಡು ಪ್ರತಿಯೊಂದು ಹೆಣ್ಣು ಅಕ್ಷರ ಜ್ಞಾನ ಪಡೆಯಲು ತಮ್ಮ ಇಡೀ ಜೀವನವನ್ನು ಶೈಕ್ಷಣಿಕ ಕ್ರಾಂತಿಗೆ ಮುಡುಪಾಗಿಟ್ಟ ಸಾವಿತ್ರಿಬಾಯಿ ಫುಲೆ ರವರ ಆದರ್ಶಗಳು ಇಂದಿನ ಮಕ್ಕಳಿಗೂ ದಾರಿ ದೀಪ ಎಂದರು.ಮಕ್ಕಳ ಸಾಹಿತ್ಯ ಸಂಗಮದ ವತಿಯಿಂದ ಸಾವಿತ್ರಿ ಬಾಯಿ ಫುಲೆ ರವರ ವಿಚಾರ ಸಂಕಿರಣ ಆಯೋಜಿಸಿ ಮಕ್ಕಳಿಗೆ ಬಹುಮಾನ ವಿತರಿಸಿರುವುದು ಶ್ಲಾಘನೀಯ ಕಾರ್ಯ ಎಂದು ಸಾಹಿತ್ಯ ಚಟುವಟಿಕೆಗೆ ಅಭಿನಂದನೆ ತಿಳಿಸಿದರು.ಈ ವೇಳೆ ಸಾವಿತ್ರಿಬಾಯಿ ಫುಲೆ ರವರ ಕುರಿತು ಭಾಷಣ ಮಾಡಿದ ವಿದ್ಯಾರ್ಥಿಗಳಿಗೆ ಸಂಗಮದ…
ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸುವರ್ಣ ಸಂಭ್ರಮೋತ್ಸವದಲ್ಲಿ ಶಾಸಕ ಕಟಕದೊಂಡ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಲೋಣಿ ಬಿಕೆ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸುವರ್ಣ ಸಂಭ್ರಮೋತ್ಸವ ಕಾರ್ಯಕ್ರಮವು ದಿ.ರಾಜಶೇಖರ ಕಲ್ಯಾಣಶೆಟ್ಟಿ ವೇದಿಕೆಯಲ್ಲಿ ಶನಿವಾರ ಜರುಗಿತು.ಕಾರ್ಯಕ್ರಮವನ್ನು ವಿಜಯಪುರ ಸಂಸದ ರಮೇಶ ಜಿಗಜಣಗಿ ಉದ್ಘಾಟಿಸಿದರು.ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಎಮ್. ಕೋರೆ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಭಾಗದ ಬಡಮಕ್ಕಳಿಗೆ ಶಿಕ್ಷಣ ಕಲ್ಪಿಸಲು ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಋಣಿಯಾಗಿರುತ್ತೆನೆ ಎಂದರು.ಸಂಸದ ರಮೇಶ ಜಿಗಜಿಣಗಿ ಸುವರ್ಣ ಸಂಭ್ರಮೋತ್ಸವವನ್ನು ಉದ್ಘಾಟಿಸಿ ಹಾಗೂ ಸಂಸ್ಥೆಯ 50ನೇ ವರ್ಷದ ಶಿಕ್ಷಣ ಸಂಸ್ಥೆಯ ಗ್ರಂಥ ಬಿಡುಗಡೆ ಮಾಡಿ ಮಾತನಾಡಿದ ಅವರು, ಶಿಕ್ಷಣ ನೀಡುವದು ಪುಣ್ಯದ ಕೆಲಸ, ತಾಯಿ ಮೊದಲ ಗುರು, ನಂತರ ಶಿಕ್ಷಕರು. ಅದಕ್ಕಾಗಿ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಇಂದಿನ ಶಿಕ್ಷಣದ ತಳಹದಿಯ ಮೇಲೆ ನಿಂತಿದೆ ಎಂದ ಅವರು, ಗಡಿಭಾಗದಲ್ಲಿ ಶಿಕ್ಷಣ ಕ್ರಾಂತಿಯನ್ನು ಮಾಡಿದ ಬಿ.ಎಮ್. ಕೋರೆ ಅವರಿಂದ ಲೋಣಿ ಗ್ರಾಮ ವಿದ್ಯಾಕಾಶಿಯಾಗಿದ್ದು ಈ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿನಲ್ಲಿ ಬಿ.ಎಡ್ ಕೋರ್ಸಿನ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ ೧೫ರವರೆಗ ವಿಸ್ತರಿಸಲಾಗಿದೆ.ವಿದ್ಯಾರ್ಥಿಗಳು ಅರ್ಜಿಯನ್ನು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳೊಂದಿಗೆ ಹಾರ್ಡ್ ಪ್ರತಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಚೇರಿ ( ೦೮೩೫೫೨_೨೯೫೫೨೩) ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಚೇರಿ, ವಿಜಯಪುರ ( ೮೧೨೩೭೧೦೭೬೬) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಬ. ಬಾಗೇವಾಡಿ ( ೯೯೭೨೩೪೦೭೨೧) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮುದ್ದೇಬಿಹಾಳ (೮೭೨೨೪೪೫೫೫೨) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಸಿಂದಗಿ ( ೯೦೩೫೫೫೮೬೦೯) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಆಗ್ರಹ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ ಕಳೆದ 107 ದಿನಗಳಿಂದ ಪ್ರತಿಭಟಿಸುತ್ತಿದ್ದ ಹೋರಾಟಗಾರರ ಮೇಲೆ FIR ದಾಖಲಿಸಿರುವುದು ಹಾಗೂ ರಾತ್ರೋರಾತ್ರಿ ಪ್ರತಿಭಟನಾ ಸ್ಥಳದ ಪೆಂಡಾಲ್ ತೆಗೆದಿರುವದು ಖಂಡನೀಯ. ಇದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಕಿಡಿಕಾರಿದ್ದಾರೆ.ಈ ಕುರಿತು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ ಅವರು, ಪ್ರತಿಭಟನೆಯನ್ನು ಹತ್ತಿಕ್ಕುವ ಸರಕಾರ ಇದು.ಈ ರಾಜ್ಯದಲ್ಲಿ ನ್ಯಾಯಕ್ಕಾಗಿ ಯಾರೂ ಕೂಡ ಪ್ರತಿಭಟನೆ ಮಾಡಬಾರದು, ಮಾಡಿದರೆ ಈ ಸರ್ಕಾರ ಅವರನ್ನು ಟಾರ್ಗೆಟ್ ಮಾಡಿ ಅವರ ಮೇಲೆ FIR ದಾಖಲಿಸಿ, ಬಂಧಿಸುತ್ತಿರುವುದು ಸರಿಯಲ್ಲ ಎಂದಿದ್ದಾರೆ.ಈ ಕಾಂಗ್ರೇಸ್ ಸರಕಾರ ಬಂದಾಗಿನಿಂದ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದೆ. ಇದು ಸಂವಿಧಾನ ವಿರೋಧಿ ನಡೆಯಾಗಿದೆ. ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಬಗ್ಗೆ ಕೂಡಲೇ ಸರಕಾರ ಸ್ಪಂದಿಸಬೇಕು. ಪ್ರತಿಭಟನಾ ನಿರತ ಹೋರಾಟಗಾರರನ್ನು ಕೂಡಲೇ ಬಿಡುಗಡೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸಲು ಜ.೫ರ ಸೋಮವಾರ ಮಧ್ಯಾಹ್ನ ೩.೩೦ ರಿಂದ ೪.೩೦ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ದೂರವಾಣಿ ೬೩೬೬೪೨೩೮೮೭ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಆದ್ದರಿಂದ ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಗ್ರಾಮ ಒನ್ ಯೋಜನೆಯನ್ನು ವಿಸ್ತರಿಸಲು ಸದರಿ ಯೋಜನೆಯನ್ನು ಫ್ರಾಂಚೈಸಿಗಳ ಮೂಲಕ ಅನುಷ್ಠಾನಗೊಳಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ ವಿಜಯಪುರ ತಾಲೂಕಿನ ಕನ್ನೂರ ೦೧, ಇಂಡಿ ತಾಲೂಕಿನ ಝಳಕಿ ೦೧ ಸಿಂದಗಿ ತಾಲೂಕಿನ ರಾಂಪೂರ ಪಿ.ಎ ೦೧ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಫ್ರಾಂಚೈಸಿ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ದಿನಾಂಕ : ೧೫-೦೧-೨೦೨೬ರ ರಾತ್ರಿ ೧೧:೫೯ರವರೆಗೆhttps://www.karnatakaone.gov.in/Public/FranchiseeTerms ಲಿಂಕ್ ಮೂಲಕ ಗ್ರಾಮ ಒನ್ ಫ್ರಾಂಚೈಸಿ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಹೆಸ್ಕಾಂ ವಿಭಾಗೀಯ ಕಚೇರಿ ಆವರಣದಲ್ಲಿ ಹೆಸ್ಕಾಂ ಹಾಗೂ ಕರ್ನಾಟಕ ವಿದ್ಯುತ ಪ್ರಸರಣ ನಿಗಮ ನಿಯಮಿತ ನೌಕರರ ಸಂಘದ ಸಹಯೋಗದಲ್ಲಿ ವಿಜಯಪುರ ಜ್ಞಾನಯೋಗಾಶ್ರಮದ ಲಿಂ.ಸಿದ್ದೇಶ್ವರ ಸ್ವಾಮೀಜಿಯವರ ಮೂರನೇ ವರ್ಷದ ಗುರು ನಮನದಂಗವಾಗಿ ಶುಕ್ರವಾರ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ರಕ್ತದಾನ ಶಿಬಿರದಲ್ಲಿ 65 ನೌಕರ ಬಾಂಧವರು ರಕ್ತದಾನ ಮಾಡಿದರು.ನೌಕರರ ಬಾಂಧವರ ರಕ್ತದೊತ್ತಡ, ರಕ್ತದಲ್ಲಿನ ಹಿಮೋಗ್ಲೋಬಿನ್ ಪರೀಕ್ಷೆ ಮಾಡಲಾಯಿತು.ಈ ಸಂದರ್ಭದಲ್ಲಿ ಹೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಿದ್ರಾಮ ಬಿರಾದಾರ, ಸ್ಥಳೀಯ ಹೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆರ್.ವ್ಹಿ.ಶಹಾ, ತಾಳಿಕೋಟಿ ಹೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿಜಯಕುಮಾರ ಬಿರಾದಾರ, ನೌಕರ ಬಾಂಧವರಾದ ಎಂ.ವೈ.ಉಕ್ಕಲಿ, ಮಲ್ಲು ಗೇಡಿ, ಸುಭಾಸ ನಾಶಿ, ಗುರು ಯರನಾಳ, ಮಂಜು ಈಳಗೇರ, ಶಿವಾನಂದ ಕುಳಗೇರಿ, ರಮೇಶ ಸೇರಿದಂತೆ ಇತರರು ಇದ್ದರು. ಇದೇ ಸಂದರ್ಭದಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು
