Author: editor.udayarashmi@gmail.com

ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತದಿಂದ ಶುಕ್ರವಾರ ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಹಾಯೋಗಿ ವೇಮನ ಅವರ ಜಯಂತಿ ಆಚರಿಸಲಾಯಿತು.ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ಸಮಾಜದಲ್ಲಿ ಸಾಧನೆ ಮಾಡಿದ ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಸೀಮಿತಗೊಳಿಸದೇ ಅವರ ತತ್ವಾರ‍್ಶಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡುವ ನಿಟ್ಟಿನಲ್ಲಿ ನಾವು ಉತ್ತಮ ಸಮಾಜವನ್ನು ಕಟ್ಟಬೇಕಾಗಿದೆ ಎಂದರು.ವಕೀಲ ಎಸ್.ಎಚ್.ಗುರಡ್ಡಿ ಮಾತನಾಡಿ, ಮಹಾಯೋಗಿ ವೇಮನ ಅವರು ತಮ್ಮ ಸಾಹಿತ್ಯ ರಚನೆಗಳ ಮೂಲಕ ಸಮಾಜದ ಕಂದಾಚಾರ, ಮೂಢನಂಬಿಕೆ, ಸೋಗಲಾಡಿತನವನ್ನು ಪ್ರಶ್ನಿಸಿದರು. ಶ್ರೇಷ್ಠ ಮಾನವೀಯ ಮೌಲ್ಯಗಳನ್ನು ಸಾರುವ ಮೂಲಕ ಸಮಾಜಕ್ಕೆ ತಮ್ಮದೇಯಾದ ಕೊಡುಗೆ ನೀಡಿದ್ದಾರೆ. ಮಹಾಯೋಗಿ ವೇಮನ ಅವರು ಲೋಕeನ ಹರಡಿದ್ದಾರೆ ಎಂದರು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಭವಾನಿ ಪಾಟೀಲ, ರೇಷ್ಮೆ ಇಲಾಖೆಯ ಎಸ್.ಐ.ಗೋಲಗೊಂಡ, ಖಜಾನೆ ಇಲಾಖೆಯ ಅಧಿಕಾರಿ ಮನೋಜ ಪಾಟೀಲ, ಭೂಮಾಪನಾ ಇಲಾಖೆಯ ವ್ಯವಸ್ಥಾಪಕ ಕಲಾದಗಿ, ಶಿರಸ್ತೇದಾರ ಬೋರಮ್ಮ ಪೋಲೇಶಿ, ತಹಸೀಲ್ದಾರ ಸಿಬ್ಬಂದಿಗಳಾದ ಮಂಜು ಹಳ್ಳೂರ,…

Read More

ಸಿಂದಗಿ: ಜಾತಿ ತಾರತಮ್ಯ, ಢಾಂಬಿಕ ಭಕ್ತಿ ಎಲ್ಲದರ ವಿರುದ್ಧ ತಿರುಗಿ ಬಿದ್ದಿದ್ದ ಬಸವಣ್ಣ, ತಮ್ಮದೇ ಆದ ರೀತಿಯಲ್ಲಿ ದಮನಕ್ಕೊಳಗಾದವರ ಧ್ವನಿಯಾಗಿ ನಿಂತಿದ್ದರು. ಇಷ್ಟಲಿಂಗ ಮೂರ್ತಿಯ ಪರಿಕಲ್ಪನೆಯನ್ನು ನೀಡಿ ದೇವರನ್ನು ಎಲ್ಲರ ಕರಸ್ಥಲಕ್ಕೆ ತಂದರು. ಕಾಯಕವೇ ಕೈಲಾಸ ಎಂದು ಹೇಳಿ, ಎಲ್ಲರಲ್ಲೂ ದುಡಿಯುವ ಛಲ ಹುಟ್ಟು ಹಾಕಿದರು ಎಂದು ಹಿಕ್ಕನಗುತ್ತಿ ಲಿಂಗಾಯತ ಮಹಾಮಠದ ಪ್ರಭುಲಿಂಗ ಶರಣರು ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಜರುಗಿದ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಅವರು, ಅನುಭವ ಮಂಟಪ ಸ್ಥಾಪಿಸಿ, ಅದರಲ್ಲಿ ಎಲ್ಲರೂ ವಿಚಾರ ವಿನಿಮಯ ಮಾಡಲು ವೇದಿಕೆ ಕಲ್ಪಿಸಿದರು. ಕೆಳ ಜಾತಿಗಳಿಂದಲೂ ಬಂದ ಶರಣರು ಇಲ್ಲಿ ತಮ್ಮ ಚಿಂತನೆಗಳನ್ನು ಮಂಡಿಸಿ ಮನುಕುಲಕ್ಕೆ ಆದರ್ಶವಾಗಿದ್ದಾರೆ ಎಂದರು.ಇದೇ ಸಂದರ್ಭದಲ್ಲಿ ಸಿಎಂ ಮನಗೂಳಿ ಕಾಲೇಜಿನ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಮಾತನಾಡಿದರು.ಈ ವೇಳೆ ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ, ದಸಂಸ ವಿದ್ಯಾರ್ಥಿ ಘಟಕದ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ, ಹಿರಿಯ ಸಾಹಿತಿ ಡಾ.ಎಂ.ಎಂ.ಪಡಶೆಟ್ಟಿ, ಡಾ.ಚನ್ನಪ್ಪ ಕಟ್ಟಿ, ಗುರು ತಾರಾಪುರ, ಜಗದೀಶ ಕಲಬುರಗಿ, ವಿಶ್ವನಾಥ…

Read More

ಸಿಂದಗಿ: ತಾಲೂಕು ಮಟ್ಟದ ಜ.೨೬ರಂದು ಜರುಗಲಿರುವ ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿದ ಆಚರಣೆ ಮಾಡಲೂ ಎಲ್ಲ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಅಧಿಕಾರಿಗಳಿಗೆ ಸೂಚನೆ ನೀಡಿದರು.ತಾಲೂಕು ಆಡಳಿತ ಸೌಧದಲ್ಲಿ ಸಭಾಂಗಣದಲ್ಲಿ ಜರುಗಿದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕು ಮಟ್ಟದ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗಳು ಪರಸ್ಪರ ಸಮನ್ವಯದೊಂದಿಗೆ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಸರಕಾರಿ ಕಚೇರಿ, ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಚತೆಯೊಂದಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಕಾರ್ಯಕ್ರಮ ಸ್ಥಳದ ಸ್ವಚ್ಚತೆ ಹಾಗೂ ಅತಿಥಿಗಳಿಗೆ ಆಸನದ, ಅಲ್ಪೋಪಹಾರದ ವ್ಯವಸ್ಥೆಗೆ ಕ್ರಮ ವಹಿಸಿಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದ ಕುರಿತು ಮುದ್ರಿಸಲಾಗುವ ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದ ಪ್ರಕಾರ ಮುದ್ರಿಸಿ ಗಣ್ಯರಿಗೆ ಸಮಯಕ್ಕಿಂತ ಮುಂಗಡವಾಗಿ ತಲುಪಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ, ಮೂಲಭೂತ ಸೌಲಭ್ಯ ವ್ಯವಸ್ಥೆ, ವೇದಿಕೆ ನಿರ್ಮಾಣ ಸೇರಿದಂತೆ…

Read More

ಆಲಮೇಲ: ೧೨ನೇ ಶತಮಾನದ ಮಹಾನ್ ಶರಣ, ಜಗಜ್ಯೋತಿ ಅಣ್ಣ ಬಸವಣ್ಣನವರನ್ನು ಕರ್ನಾಟಕದ ಸಂಸ್ಕೃತಿಕ ನಾಯಕರನ್ನಾಗಿ ಘೋಷಣೆ ಮಾಡಿದ್ದು, ಮುಂಬರುವ ದಿನಗಳಲ್ಲಿ ಬಸವಣ್ಣನವರ ಆಶಯದಂತೆ ಸಮಾನತೆ ಕಾಲವು ಆದಷ್ಟು ಬೇಗ ಬರಲಿ ಎಂದು ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಜಿ ಹೇಳಿದರು.ಶುಕ್ರವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಜ್ಯ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಂಸ್ಕೃತಿಕ ನಾಯಕನನ್ನಾಗಿ ಮಾಡಿರುವ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಬಸವಣ್ಣನವರು ೧೨ನೇ ಶತಮಾನದಲ್ಲಿ ಮಹಾನ್ ಶರಣರಾದಂತವರು. ಅವರು ಇಂದು ಜಗತ್ತಿಗೆ ವಿಶ್ವಗುರುವಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಂಸ್ಕೃತಿಕ ನಾಯಕನ್ನಾಗಿ ಮಾಡಿರುವುದು ರಾಜ್ಯದ ಜನತೆಗೆ, ಶರಣರಿಗೆ ಹೆಮ್ಮೆಯ ವಿಷಯವಾಗಿದೆ. ಬಸವಣ್ಣನವರ ಆಶಯಂತೆ ಮುಂಬರುವ ದಿನಗಳಲ್ಲಿ ಸಮಾನತೆಯ ಸಾರುವ ಕೆಲಸ ಆಗಬೇಕು. ಮುಂಬರುವ ದಿನಗಳಲ್ಲಿ ಕರ್ನಾಟಕದ ಜನರು ನಾವು ಲಿಂಗಾಯತ ಧರ್ಮದವರು ಎಂದು ನಮೂದಿಸಬೇಕು ಎಂದು ಕರೆ ನೀಡಿದರು.ಪ್ರದಾನ ಮಂತ್ರಿ ನರೇಂದ್ರ ಮೋದಿ ಅವರು ಬಸವಣ್ಣವರ ಬಗ್ಗೆ ಆಳವಾಗಿ ಅಧ್ಯಯನ ಮಾಡುತ್ತಿದ್ದಾರೆ ಹಿಂದಿನ ಯಾವ ಪ್ರಧಾನಿಯೂ ಮಾಡದಂತ…

Read More

ದೇವರಹಿಪ್ಪರಗಿ: ದಿ: ೨೦ ರಂದು ಶನಿವಾರ(ಇಂದು) ಬೆಳಿಗ್ಗೆ ೧೦ ಘಂಟೆಗೆ ದೇವರಹಿಪ್ಪರಗಿ ಇಂಡಿ ರಸ್ತೆಯಲ್ಲಿಯ ಹೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಹಮ್ಮಿಕೊಳ್ಳಲಾಗಿದೆ.ತಾಲ್ಲೂಕಿನ ಎಲ್ಲಾ ಗ್ರಾಹಕರು ಸಭೆಗೆ ಆಗಮಿಸಿ ತಮ್ಮ ಕುಂದುಕೊರತೆಗಳನ್ನು ವ್ಯಕ್ತಪಡಿಸಿ ಪರಿಹಾರ ಕಂಡುಕೊಳ್ಳಬೇಕೆಂದು ಕಾರ್ಯ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Read More

ದೇವರಹಿಪ್ಪರಗಿ: ಇಡೀ ಸಮಾಜಕ್ಕೆ ತನ್ನದೇಯಾದ ಅತ್ಯಮೂಲ್ಯವಾದ ಸಂದೇಶಗಳನ್ನು ನೀಡಿದ ವೇಮನರ ಆದರ್ಶಗಳು ಇಂದಿನ ಪೀಳಿಗೆಗೆ ಆದರ್ಶಪ್ರಾಯವಾಗಿವೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ ಹೇಳಿದರು.ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಜರುಗಿದ ವೇಮನರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವೇಮನರು ತನ್ನನ್ನು ತಾನು ತಿದ್ದಿಕೊಂಡು ಮಹಾಯೋಗಿಯಾಗಿ ಬೆಳೆದರು ಎಂದರು.ಬಸವಶರಣ ಸಂಗಮ ಸೇವಾ ಸಮೀತಿ ಅಧ್ಯಕ್ಷ ಸಂಗಪ್ಪಣ್ಣ ತಡವಲ್ ಮಾತನಾಡಿ, ವೇಮನರ ಬಾಲ್ಯ, ಸಮಾಜ ಅವರನ್ನು ಕಂಡ ರೀತಿ, ಮುಂದೆ ಅವರು ಬದಲಾಗಿ ಸಮಾಜಕ್ಕೆ ನೀಡಿದ ದಿವ್ಯಸಂದೇಶಗಳ ಕುರಿತು ಮಾಹಿತಿ ನೀಡಿದರು.ಶಿಕ್ಷಕ ಪ್ರಲ್ಹಾದ್ ಕುಲಕರ್ಣಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಮಾಡಿದ ಸರ್ಕಾರದ ನಿಲುವನ್ನು ಶ್ಲಾಘಿಸಿ, ಧನ್ಯವಾದ ಸಲ್ಲಿಸಲಾಯಿತು.ವಚನ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಜೆ.ಆರ್.ಬಿರಾದಾರ, ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎಚ್.ವಾಲೀಕಾರ, ಮುಖ್ಯಗುರು ಪಿ.ಸಿ.ತಳಕೇರಿ, ಉಪನ್ಯಾಸಕ ಆಕ್ರಮ್ ಪಾಷಾ, ಕೆ.ಎಮ್.ನಂದಿ, ಪ್ರಕಾಶ ಪೂಜಾರಿ, ಎಸ್.ಜಿ.ತಾವರಖೇಡ, ಗೊಲ್ಲಾಳ ಬಿರಾದಾರ, ಬಸವರಾಜ ಬಡಿಗೇರ, ಕೆ.ಜಿ.ಪವಾರ ಸೇರಿದಂತೆ ಸರ್ಕಾರಿ ಪದವಿ…

Read More

ದೇವರಹಿಪ್ಪರಗಿ: ಗಣರಾಜ್ಯೋತ್ಸವ ದಿನಾಚರಣೆಯ ಜವಾಬ್ದಾರಿಗಳನ್ನು ತಾಲ್ಲೂಕು ಆಡಳಿತದ ಜೊತೆಗೆ ವಿವಿಧ ಇಲಾಖೆಗಳು ವಹಿಸಿಕೊಂಡು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಗಣರಾಜ್ಯೋತ್ಸವ, ಅಂಗವಾಗಿ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಚರಣೆಯ ಜೊತೆಗೆ ಸ್ಥಳೀಯ ಶಾಲೆಗಳ ಮಕ್ಕಳ ಉಪಹಾರ, ಸಾಂಸ್ಕೃತಿಕ ಕಾರ್ಯಕ್ರಮಗಳು, ಧ್ವಜಾರೋಹಣದ ಕುರಿತು ಸೂಕ್ತ ಕ್ರಮವಹಿಸಲು ಸೂಚಿಸಿದರು.ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್.ವಾಲೀಕಾರ ಮಕ್ಕಳಿಗೆ ಉಪಹಾರ ಹಾಗೂ ನೀರಿನ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿದರು.ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ ಯೋಧನ ಸ್ಮಾರಕದ ರಿಪೇರಿ ಕುರಿತು ಗಮನ ಸೆಳೆದರು.ನಂತರ ಕಾಶೀನಾಥ ತಳಕೇರಿ, ಜಾನು ಗುಡಿಮನಿ, ಬಸವರಾಜ ತಳಕೇರಿ, ರಾವುತ ತಳಕೇರಿ ಮಾತನಾಡಿದರು.ಶಿರಸ್ತೇದಾರ ಸುರೇಶ ಮ್ಯಾಗೇರಿ, ತಾಲ್ಲೂಕು ಪಂಚಾಯಿತಿಯ ಶ್ರೀನಿವಾಸ ಪವಾರ, ಸಿಆರ್‌ಪಿ ವಿಜಯಲಕ್ಷ್ಮೀ ನವಲಿ, ಸಿಡಿಪಿಓ ಎಸ್.ಎನ್.ಹಿರೇಮಠ, ಪ್ರಾಚಾರ್ಯ ವ್ಹಿ.ಜಿ.ಹೂನಳ್ಳಿ, ಸಿದ್ಧೇಶ್ವರ ಸ್ವಾಮೀಜಿ ಶಿಕ್ಷಣಸಂಸ್ಥೆಯ ಎ.ಕೆ.ಆನಂದ, ಮಹಿಳಾ ಪಿಎಸ್‌ಐ ಎಸ್.ಬಿ.ನಡುವಿನಕೇರಿ, ಶಾಂತಾ ಕಸ್ತೂರಿ, ವ್ಹಿ.ವಾಯ್.ಹಳ್ಳಿ, ಆರ್.ಆರ್.ಕೋರಿ, ಆರ್.ಜಿ.ಕೋಟಿನ್, ಪಿ.ಸಿ.ತಳಕೇರಿ, ಶಿವಶರಣ ಪೂಜಾರಿ, ನಾನಾಗೌಡ…

Read More

ಇಂಡಿ: ಪಟ್ಟಣದ ಮಧ್ಯ ಭಾಗದಲ್ಲಿ ಪಾಳುಬಿದ್ದಿದ್ದಜಾಗವನ್ನು ಗುರುತಿಸಿ, ಅದನ್ನು ಸದುಪಯೋಗಮಾಡಿಕೊಂಡು 30 ಕೋಟಿ ರೂ,ಗಳ ವೆಚ್ಚದಲ್ಲಿ 246ವ್ಯಾಪಾರಿ ಮಳಿಗೆಗಳುಳ್ಳ ಮೆಗಾ ಮಾರುಕಟ್ಟೆ ನಿರ್ಮಿಸಿದ್ದು, ಅವುಗಳಲ್ಲಿ ಈಗಾಗಲೇ 100 ಮಳಿಗೆಗಳು ವ್ಯಾಪಾರಕ್ಕೆ ಸಿದ್ದವಾಗಿವೆ. ಅವುಗಳನ್ನು ಬಹಿರಂಗ ಹರಾಜು ಮಾಡಿ ಪುರಸಭೆಗೆ ಆದಾಯ ಮಾಡಿಕೊಡಬೇಕೆಂದು ಹರಾಜು ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಅದಕ್ಕೆ ಪುರಸಭೆಯ ಸದಸ್ಯರು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಶಾಸಕ ಯಶವಂತರಾಯಗೌಡ ಅವರು ಮನವಿ ಮಾಡಿಕೊಂಡರು.ಅವರು ಗುರುವಾರ ಮೆಗಾ ಮಾರುಕಟ್ಟೆಯಆವರಣದಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮೆಗಾ ಮಾರುಕಟ್ಟೆಗೆ ಶಾಸಕರ ಅನುದಾನದಲ್ಲಿ 8ಕೋಟಿ ನೀಡಲಾಗಿದೆ. ಇನ್ನುಳಿದ ಹಣವನ್ನು ಸರ್ಕಾರದವಿವಿಧ ಸಂಸ್ಥೆಗಳಿಂದ ಸಾಲ ಪಡೆದುಕೊಳ್ಳಲಾಗಿದೆ. ಆಸಾಲವನ್ನು ಪುರಸಭೆ ಸಕಾಲದಲ್ಲಿ ತೀರಿಸುವ ಉದ್ದೇಶದಿಂದ ಸರ್ಕಾರಿ ನಿಯಮಾನುಸಾರ ಸಿದ್ದಗೊಂಡಿರುವ ಮೆಗಾ ಮಾರುಕಟ್ಟೆಯ ಮಳಿಗೆಗಳನ್ನು ಹರಾಜು ಮಾಡಲಾಗುತ್ತಿದೆ. ಇದರಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದರು.ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯರಾದ ಅನೀಲಗೌಡ ಬಿರಾದಾರ ಮಾತನಾಡಿ, ಮುಂಬರುವ ದಿನಾಂಕ 22 ಮತ್ತು 23 ರಂದು ನಡೆಯುವ ಮೆಗಾ ಮಾರುಕಟ್ಟೆಯ ಮಳಿಗೆಗಳ ಹರಾಜಿಗೆ ಗ್ರೀನ್…

Read More

ಲಿಂಬೆ ನಾಡಿನಲ್ಲಿ ರಾಮನಾಮ ಜಪ | ಶರವೇಗದಲ್ಲಿ ಸಾಗುತ್ತಿರುವ ಮಂತ್ರಾಕ್ಷತೆ ಕಾರ್ಯ *- ಶಂಕರಲಿಂಗ ಜಮಾದಾರ*ಇಂಡಿ: ಭಾರತದ ಸನಾತನ ಯಾತ್ರೆಯಲ್ಲಿ ಹಿಂದೂ ಧರ್ಮದ ಧಾರ್ಮಿಕ, ಸಾಂಸ್ಕೃತಿಕ ಚರಿತ್ರೆಯ ಇತಿಹಾಸದಲ್ಲಿ ದೇವತಾ ಪುರುಷರಾಗಿರುವ ಪ್ರಭು ಶ್ರೀರಾಮಚಂದ್ರರ ಪ್ರಾಣ ಪ್ರತಿಷ್ಠಾನ ಸಮಾರಂಭ ಅಯೋಧ್ಯೆಯಲ್ಲಿ ಜರಗುತ್ತಿರುವ ಪ್ರಯುಕ್ತ ಲಿಂಬೆ ನಾಡಿನಲ್ಲಿ ಮಂತ್ರಾಕ್ಷತೆ ಹಂಚುವ ಪವಿತ್ರ ಕಾರ್ಯ ಅತ್ಯಂತ ಸಡಗರ- ಸಂಭ್ರಮದಿಂದ ನಡೆಯುತ್ತಿದೆ.ಭವಿಷ್ಯದ ಜಿಲ್ಲಾ ಕೇಂದ್ರ ಎಂದು ಬಿಂಬಿತಗೊಂಡು, ಸದ್ಯ ಪ್ರತ್ಯೇಕ ಜಿಲ್ಲಾ ಕೇಂದ್ರಕ್ಕಾಗಿ ಅತೀ ಹೆಚ್ಚು ಪ್ರತಿಭಟನೆ ನಡೆಸುತ್ತಿರುವ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಅತ್ಯಂತ ವೈಶಿಷ್ಟ್ಯದಿಂದ ಮಂತ್ರಾಕ್ಷತೆ ಹಂಚುವ ಮತ್ತು ಸ್ವೀಕರಿಸುವ ಕಾರ್ಯ ಅದ್ದೂರಿಯಿಂದ ನಡೆಯುತ್ತಿದೆ.*ಭೀಮಾತೀರದಲ್ಲಿ ರಾಮನಪೂಜೆ*ರಾಜ್ಯದಲ್ಲಿಯೇ ಲಿಂಬೆನಾಡು ಭೀಮಾ ತೀರ ಎಂದೇ ಪ್ರಖ್ಯಾತಿ ಹೊಂದಿರುವ ಇಂಡಿಯ ಪ್ರತಿ ಮನೆ ಮನೆಯಲ್ಲೂ ಅತ್ಯಂತ ಸಡಗರ-ಸಂಭ್ರಮದೊಂದಿಗೆ ಶ್ರೀರಾಮನ ಭಾವಚಿತ್ರ, ಕರಪತ್ರ ಹಾಗೂ ಮಂತ್ರಾಕ್ಷತೆ ಕಾರ್ಯ ಸ್ವೀಕರಿಸುವಲ್ಲಿ, ಅದರಲ್ಲೂ ವಿಶೇಷವಾಗಿ ಗೃಹಣಿಯರು ಅರಿಶಿಣ, ಕುಂಕುಮ ಹಚ್ಚಿ ಮತ್ತು ಮಂಗಳರಾತಿ ಬೆಳಗಿ ಮಂತ್ರಾಕ್ಷತೆ ಸ್ವೀಕರಿಸುತ್ತಿರುವ ವಿಶೇಷ ಸ್ಮರಣಿಯ ಘಳಿಗೆಯಾಗಿ,…

Read More

ವಿಜಯಪುರ: ಗ್ರಾಮೀಣ ತಾಲೂಕಿನ ಕಗ್ಗೋಡ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯದ 2024-25 ನೇ ಸಾಲಿಗೆ ಆರನೇ ತರಗತಿ ದಾಖಲಾತಿಗೆ ಪ್ರವೇಶ ಪರೀಕ್ಷೆ ನಡೆಸಲಾಗುವುದು. 2023-24ನೇ ಸಾಲಿನಲ್ಲಿ ವಿಜಯಪುರ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವ್ಯಾಪ್ತಿಯಲ್ಲಿ ಬರುವ ಶಾಲೆಗಳಲ್ಲಿ ಐದನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕರೆಯಲಾಗಿದೆ.ಫೆಬ್ರುವರಿ ಆರರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಎಸ್.ಎ.ಟಿ.ಎಸ್ ನಂಬರ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ವಿದ್ಯಾರ್ಥಿಯ ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿ ಪಾಲಕರ ಮೊಬೈಲ್ ನಂಬರ್ ನಮೂದಿಸಬೇಕು.ಹೆಚ್ಚಿನ ಮಾಹಿತಿಗಾಗಿ ಮುಖ್ಯೋಪಾಧ್ಯಾಯರು 9902716236, ನೋಡಲ್ ಅಧಿಕಾರಿಗಳು 9880832448, ಕಚೇರಿ ಸಹಾಯಕರು 8971163743 ಇವರನ್ನು ಸಂಪರ್ಕಿಸಲು ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಎಸ್. ಬಳೋಲಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More