Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಆಲಮೇಲ: ಇದೇ ಜನೇವರಿ ೨೨ ರಂದು ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಕೆಂದ್ರಿಯ ಮಂಡಳಿ ವಿಜಯಪುರ, ಜಿಲ್ಲೆಯ ಆಲಮೇಲ ಪಟ್ಟಣದ ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರಿಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಆಮಂತ್ರಣ ಪತ್ರಿಕೆಯನ್ನು ನೀಡಲಾಯಿತು.ಇದೆ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡರಾದ ಶ್ರೀಮಂತ ದುದ್ದಗಿ, ಶೇಖರಗೌಡ ಹರನಾಳ, ಮಲ್ಲಿಕಾರ್ಜುನ ರಾಂಪೂರಮಠ, ರಾಜೇಂದ್ರ ರಾಠೋಡ, ಅರವಿಂದ್ ಪತ್ತಾರ ಉಪಸ್ಥಿತರಿದ್ದರು.
ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಟಕ್ಕಳಕಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಜಾಧವನಗರ ಟಕ್ಕಳಕಿ ಶಾಲೆಯ, ವಿಜ್ಞಾನ ಮತ್ತು ಗಣಿತ ವಿಷಯದ ಶಿಕ್ಷಕಿ ಶ್ರೀಮತಿ ಶಿಲ್ಪಾ. ಹಂಜಿ (ಬಿರಾದಾರ) ಅವರು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯವರು ಶೈಕ್ಷಣಿಕ ಸಾಧನೆಗಾಗಿ ಕೊಡಮಾಡುವ ‘ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ‘ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಜಿ.ಎಸ್.ಕಾಂಬಳೆ ಹಾಗೂ ಕಾರ್ಯದರ್ಶಿ ರಮೇಶ ನಾಯಕ ತಿಳಿಸಿದ್ದಾರೆ.ವಿಜಯಪುರದ ತೊರವಿಯಲ್ಲಿರುವ ಡಾ.ಅಂಬೇಡ್ಕರ್ ಸಮುದಾಯ ಭವನದಲ್ಲಿ ಜನೇವರಿ ೨೧ ರಂದು ನಡೆಯಲಿರುವ ಜಿಲ್ಲಾಮಟ್ಟದ ಶೈಕ್ಷಣಿಕ ಸಮ್ಮೇಳನ ಹಾಗೂ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶ್ರೀಮತಿ ಶಿಲ್ಪಾ. ಹಂಜಿ (ಬಿರಾದಾರ) ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಟಕ್ಕಳಕಿಯ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮಧುಕರ.ಜಾಧವ, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಜಾಲೀಂದ್ರ ಘಾಟಗೆ, ಶಾಲಾಮುಖ್ಯ ಗುರು ಬಿ.ಎಸ್.ಹಾಲಳ್ಳಿ, ಸಿಬ್ಬಂದಿಯವರಾದ ಡಿ.ಎನ್.ಫೋಣಸಗಿ, ಎಸ್.ಆರ್.ಅನಂತಪೂರ, ಎಸ್.ಜಿ.ಬಗಲಿ, ವಿ.ಎಮ್.ಮುಳಗುಂದ…
ಬಸವನಬಾಗೇವಾಡಿ: ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ರಾಯಭಾರಿ ಎಂದು ರಾಜ್ಯದ ಮಂತ್ರಿಮಂಡಲದಲ್ಲಿ ನಿರ್ಣಯ ತೆಗೆದುಕೊಂಡು ಘೋಷಣೆ ಮಾಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಅಭಿನಂದನೆ ಸಲ್ಲಿಸಿದ್ದಾರೆ.ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಈ ಹಿಂದೆ ಕೂಡಾ ಮುಖ್ಯಮಂತ್ರಿಗಳಾದ ಸಂದರ್ಭದಲ್ಲಿ ವಿಶ್ವಗುರು ಬಸವಣ್ಣನವರ ಬಾವಚಿತ್ರಗಳನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಹಾಕಬೇಕು ಎಂದು ಆದೇಶ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕೆಂದ ಅವರು, ವಿಜಯಪುರದ ವಿಶ್ವವಿದ್ಯಾಲಯಕ್ಕೆ ಅಕ್ಕ ಮಹಾದೇವಿ ಹೆಸರನ್ನು ನಾಮಕರಣ ಮಾಡಿದ್ದು ಇತಿಹಾಸ. ಅಲ್ಲದೆ ಇತ್ತೀಚೆಗೆ ವಿಜಯಪುರದ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರನ್ನು ನಾಮಕರಣ ಮಾಡುವ ಮೂಲಕ ನಿಜವಾದ ಶರಣರ ತತ್ವಗಳನ್ನು ತಮ್ಮ ಆಡಳಿತದಲ್ಲಿ ಅಳವಡಿಸಿಕೊಂಡ ನಾಯಕರು ಯಾರಾದರೂ ಇದ್ದಾರೆ ಅವರು ಸಿದ್ದರಾಮಯ್ಯನವರು ಮಾತ್ರ. ಮುಂಬರುವ ಬಜೆಟ್ಟಿನಲ್ಲಿ ಬಸವ ಜನ್ಮ ಸ್ಥಳ ಬಸವನಬಾಗೇವಾಡಿ ಅಭಿವೃದ್ದಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.
ಬಸವನಬಾಗೇವಾಡಿ: ಮಹಾ ಮಾನವತಾವಾದಿ, ಜಗತ್ತಿನ ಪ್ರಥಮ ಸ್ವತಂತ್ರ ವಿಚಾರವಾದಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಮಂತ್ರಿಮಂಡಲದಲ್ಲಿ ನಿರ್ಧಾರ ತೆಗೆದುಕೊಂಡಿರುವುದು ಬಸವಣ್ಣನವರಿಗೆ ಕೊಟ್ಟ ಗೌರವವಾಗಿದೆ. ರಾಜ್ಯ ಸರ್ಕಾರಕ್ಕೆ ಅದರಲ್ಲೂ ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಂತ್ರಿ ಮಂಡಲ ಸದಸ್ಯರಿಗೆ ಅಭಿನಂದನೆಗಳು. ರಾಜ್ಯದ ಸಾಂಸ್ಕ್ರತಿಕ ನಾಯಕ ಎಂದು ಎಂದೋ ಆಗಬೇಕಾಗಿತ್ತು. ಆಗಲಾದರೂ ಸರ್ಕಾರ ನಿರ್ಣಯ ತೆಗೆದುಕೊಂಡಿರುವದು ಸಂತಸದ ಸಂಗತಿ. ಕಿತ್ತೂರನ್ನು ಚನ್ನಮ್ಮನ ಕಿತ್ತೂರು ಎಂದು ಕರೆಯುವ ಕುರಿತು ಮಂತ್ರಿಮಂಡಲದಲ್ಲಿ ನಿರ್ಧಾರ ತೆಗೆದುಕೊಂಡಿರುವುದು ಸೂಕ್ತವಾಗಿದೆ. ಈ ಎರಡು ನಿರ್ಧಾರಗಳನ್ನು ತೆಗೆದುಕೊಂಡ ಮಂತ್ರಿಮಂಡಲ ನಿರ್ಧಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ತಿಳಿಸಿದ್ದಾರೆ.
ಬಸವನಬಾಗೇವಾಡಿ: ಸಂಸದ ಅನಂತಕುಮಾರ ಹೆಗಡೆ ಅವರು ಅಹಿಂದ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯವರ ಬಗ್ಗೆ ಗೌರವ ಇಲ್ಲದೇ ಮಾತನಾಡಿರುವುದು ಖಂಡನೀಯ. ಈ ಹಿಂದೆ ಸಂವಿಧಾನ ಬದಲಾವಣೆ ಮಾಡುವದಕ್ಕೆ ನಾವು ಬಂದಿರುವುದು ಎಂದು ದೇಶ ವಿರೋದಿ ಹೇಳಿಕೆ ನೀಡುವ ಮೂಲಕ ಅನಂತಕುಮಾರ ಹೆಗಡೆ ವಿವಾದಕ್ಕೆ ಗುರಿಯಾಗಿದ್ದರು. ಇವರು ಜವಾಬ್ದಾರಿಯುತ ಜನಪ್ರತಿನಿಧಿ ಸಂಸದ ಸ್ಥಾನದಲ್ಲಿರುವ ಇವರು ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಮೂರ್ಖತನದ ಪರಮಾವಧಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಮಾಜಿಕ ನ್ಯಾಯ, ಜನಪ್ರಿಯತೆ ಇದನ್ನೆಲ್ಲ ಸಹಿಸಿಕೊಳ್ಳಲು ಆಗದೆ ಮುಂಬರುವ ಲೋಕಸಭಾ ಚುನಾವಣೆಯ ಕುತಂತ್ರ ಮಾಡಲು ಹೊರಟಿರುವ ಸಂಸದರು ಕೂಡಲೇ ಕ್ಷಮೆ ಯಾಚಿಸಬೇಕು. ಕ್ಷಮೆ ಯಾಚಿಸದೇ ಹೋದರೆ ಪರಿಣಾಮ ನೆಟ್ಟಗಿರುವದಿಲ್ಲ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ನಿರ್ದೇಶಕ ರಾಜೇಶ್ವರಿ ಯರನಾಳ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲೂಕ ಅಧ್ಯಕ್ಷ ರಾಜಶೇಖರ ಯರನಾಳ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಸವನಬಾಗೇವಾಡಿ: ಧಾರ್ಮಿಕ ಕಾರ್ಯಕ್ರಮಗಳು ಮನಸ್ಸಿಗೆ ನೆಮ್ಮದಿ ನೀಡುವುದರೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳಲು ಅಗತ್ಯವಿರುವ ಮೌಲ್ಯಗಳನ್ನು ತಿಳಿಸಿಕೊಡುತ್ತವೆ. ಪುರಾಣ, ಪ್ರವಚನದಂತಹ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ಬಬಲೇಶ್ವರದ ಜಗದ್ಗುರು ಡಾ.ಮಹದೇವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ಮನಗೂಳಿ ಸಂಸ್ಥಾನ ಹಿರೇಮಠದಲ್ಲಿ ಬುಧವಾರ ಸಂಜೆ ಡಾ. ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ 11ನೇ ಪುಣ್ಯರಾಧನೆ ಹಾಗೂ ವಿವಿಧ ಕಾರ್ಯಕ್ರಮಯಂಗವಾಗಿ ಜ.17 ರಿಂದ ಫೆ.2 ರವರೆಗೆ ಹಮ್ಮಿಕೊಂಡಿರುವ ಕಲಬುರಗಿ ಶರಣಬಸವೇಶ್ವರ ಪುರಾಣ ಪ್ರಾರಂಭೋತ್ಸವ ಸಮಾರಂಭದ ಸಾನಿಧ್ಯ ವಹಿಸಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಶ್ರೀಮಠದ ಅಭಿನವ ಸಂಗನಬಸವ ಶಿವಾಚಾರ್ಯರು ಐವತ್ತು ವರ್ಷದಲ್ಲಿ ಮಾಡುವಂತಹ ಕೆಲಸವನ್ನು ಹತ್ತೇ ವರ್ಷದಲ್ಲಿ ಮಾಡಿದ್ದಾರೆ. ಭಕ್ತರ ಸಹಕಾರದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಈ ಜಿಲ್ಲೆಯ ಕ್ರಿಯಾಶೀಲ ಪೂಜ್ಯರು ಎನಿಸಿಕೊಂಡಿದ್ದಾರೆ ಎಂದು ಹೇಳಿದರು.ಯರನಾಳ ವಿರಕ್ತಮಠದ ಗುರು ಸಂಗನಬಸವ ಸ್ವಾಮೀಜಿ ಮಾತನಾಡಿದರು.ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮನಗೂಳಿ ಹಿರೇಮಠದ ಹಿಂದಿನ ಪೂಜ್ಯರು ಈ ಮಠದ ಅಭಿವೃದ್ಧಿಗೆ ಶ್ರಮಿಸುವುದರೊಂದಿಗೆ ಭಕ್ತರಿಗೆ ನಿರಂತರವಾಗಿ…
ಕಸಾಪ ಗೆ ಕೆಲಸ ಮಾಡುವವರು ಬೇಕಿದೆ, ಟೀಕೆ ಮಾಡುವವರಲ್ಲ :ಹಾಸಿಂಪೀರ ವಾಲೀಕಾರ ಬಸವನಬಾಗೇವಾಡಿ: ಕನ್ನಡ ಸಾಹಿತ್ಯ ಪರಿಷತ್ತಿನ ಹುದ್ದೆಗಳನ್ನು ಪಡೆದುಕೊಂಡ ನಂತರ ಸುಮ್ಮನೆ ಕುಳಿತುಕೊಳ್ಳದೇ ನಿರಂತರವಾಗಿ ಕನ್ನಡ ತಾಯಿ ಸೇವೆ ಮಾಡಬೇಕು. ಜಿಲ್ಲೆಯ ಆರು ತಾಲೂಕುಗಳಲ್ಲಿ ತಾಲೂಕು ಅಧ್ಯಕ್ಷರು ನಿಷ್ಕ್ರಿಯವಾದ ಕಾರಣದಿಂದಾಗಿ ಅವರನ್ನು ಬದಲಾಯಿಸಿ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳು ನಿರಂತರವಾಗಿ ನಡೆಯುವಂತೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಹೇಳಿದರು.ತಾಲೂಕಿನ ನಾಗೂರ ಗ್ರಾಮದ ಯಮನೂರೇಶ್ವರ ದೇವಸ್ಥಾನದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲೂಕು ಕಸಾಪ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾಧ್ಯಕ್ಷರ ಅಭಿನಂದನಾ ಸಮಾರಂಭ ಹಾಗೂ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿಗೆ ಕೆಲಸ ಮಾಡುವವರು ಬೇಕು, ಟೀಕೆ ಮಾಡುವವರು ಬೇಕಿಲ್ಲ. ಪರಿಷತ್ತಿನಿಂದ ದಂಪತಿ ಸಮೇತರಾಗಿ ಸನ್ಮಾನ ಸ್ವೀಕರಿಸಿಕೊಂಡು ಟೀಕೆ ಮಾಡುವುದು ಎಷ್ಟು ಸರಿ? ಟೀಕೆ ಮಾಡುವವರು ವೇದಿಕೆಗೆ ಬನ್ನಿ…
ವೀಣಾಂತರಂಗ’*- ವೀಣಾ ಹೇಮಂತ್ ಗೌಡ ಪಾಟೀಲ್* ಮುಂಡರಗಿ-ಗದಗ ರಸ್ತೆಯ ತಿರುವಿನಲ್ಲಿ ಕೈಕಾಲು ಗಟ್ಟಿಮುಟ್ಟಾಗಿದ್ದ ಓರ್ವ ಮನುಷ್ಯ ಭಿಕ್ಷೆ ಬೇಡುತ್ತಿದ್ದ. ಭಿಕ್ಷೆ ಹಾಕದೆ ಮುಂದೆ ಹೋಗುತ್ತಿದ್ದ ಜನರನ್ನು ಹೀಯಾಳಿಸುತ್ತಾ, ಈ ಜಗತ್ತನ್ನು ಪಾಪಿಗಳ ಲೋಕವೆಂದು ಕೊಂಚ ಮಾತ್ರದ ಕನಿಕರವೂ ಇಲ್ಲದ ಜನರೆಂದು ಎಲ್ಲರನ್ನೂ ದೂಷಿಸುತ್ತಾ ಗೊಣಗುತ್ತ ಕುಳಿತಿದ್ದನು. ತನ್ನನ್ನು ತಾನು ಕನಿಕರದ, ಅಪಹಾಸ್ಯದ, ಅವಜ್ಞೆಯ ವಸ್ತುವನ್ನಾಗಿಸಿಕೊಂಡು ಭಿಕ್ಷೆ ಬೇಡುತ್ತಿದ್ದ ಆತನದು ಹೀನಾಯ ಪರಿಸ್ಥಿತಿ. ಸ್ವಯಂಕೃತ ಅಪರಾಧ,!! ಪರೀಕ್ಷೆಗೆ ಚೆನ್ನಾಗಿ ತಯಾರಿ ಮಾಡಿಕೊಳ್ಳದ ಮಗುವೊಂದು ಪರೀಕ್ಷಾ ಮೇಲ್ವಿಚಾರಕರ ಮತ್ತು ಉತ್ತರ ಪತ್ರಿಕೆಗಳನ್ನು ಪರಿಶೀಲಿಸುವ ಶಿಕ್ಷಕರ ಗುಂಪನ್ನು ಹೀಯಾಳಿಸುವುದು, ಶಾಲೆಯ ಸ್ಪರ್ಧೆಗಳಲ್ಲಿ ಮೊದಲ ಸ್ಥಾನ ಗಳಿಸದಿದ್ದರೆ ಶಾಲೆಯಲ್ಲಿ ಭೇದ ಭಾವ ಮಾಡುವರೆಂಬ ಆರೋಪ ಮಾಡುವ ಹಲವಾರು ಜನ ನಮ್ಮ ಸಮಾಜದಲ್ಲಿ ಇರುತ್ತಾರೆ. ಕೆಲವೊಮ್ಮೆ ಅವರ ಆಪಾದನೆಗಳು ನಿಜವಾದರೂ ಬಹಳಷ್ಟು ಬಾರಿ ಈ ಮಾತುಗಳಲ್ಲಿ ಹುರುಳಿರುವುದಿಲ್ಲ. ಅಂತಹವರಿಗೆ ನೀವೇನಾದರೂ ತಿಳಿಯಹೇಳಹೊರಟರೆ ನಿಮ್ಮಷ್ಟು ಮೂರ್ಖರು ಮತ್ತೊಬ್ಬರಿಲ್ಲ. ಅವರದು ಒಂದು ರೀತಿಯ ಅರೆಬೆಂದ ಪರಿಸ್ಥಿತಿ. ಪೂರ್ತಿ ತಿಳಿದವರಿಗೆ ಮತ್ತು ಏನೂ…
Udayarashmi kannada daily newspaper
ಬುಧವಾರ 87 ಮಂದಿಗೆ ಪಾಸಿಟಿವ್ ಧೃಡ | ಒಬ್ಬರ ಸಾವು | ಸಕ್ರಿಯ ಪ್ರಕರಣಗಳು 672ಕ್ಕೆ ಇಳಿಕೆ ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯಾಗುತ್ತಿದ್ದು, ಬುಧವಾರ 87 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 672ಕ್ಕೆ ಇಳಿಕೆಯಾಗಿದೆ.ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 38 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 87 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.ಬುಧವಾರ ಕೋವಿಡ್ ನಿಂದ 165 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,589 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 1.14ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.ಸೋಂಕಿತರಲ್ಲಿ 672 ಮಂದಿ ಮನೆ ಆರೈಕೆಗೆ ಒಳಗಾದರೆ, 24 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 3 ಸೋಂಕಿತರು ತೀವ್ರ ನಿಗಾ…
