Author: editor.udayarashmi@gmail.com

ನೈರುತ್ಯ ರೇಲ್ವೆ ವಲಯದ ಜನರಲ್ ಮ್ಯಾನೇಜರ್ ಸಂಜೀವಕಿಶೋರ ಮಾಹಿತಿ ಆಲಮಟ್ಟಿ: ಬದಾಮಿ, ಬಾಗಲಕೋಟೆ, ಆಲಮಟ್ಟಿ, ವಿಜಯಪುರ ನಾಲ್ಕು ರೈಲು ನಿಲ್ದಾಣಗಳನ್ನು ಅಮೃತ ರೈಲು ಯೋಜನೆಯಡಿ ಸೇರಿಸಲಾಗಿದ್ದು, ಈಗಾಗಲೇ ಕಾಮಗಾರಿ ಆರಂಭಗೊಂಡಿವೆ. ವಿಜಯಪುರ-ಬಾಗಲಕೋಟೆ ರೈಲು ನಿಲ್ದಾಣದ ಆಧುನೀಕರಣ ಮುಕ್ತಾಯ ಹಂತಕ್ಕೆ ಬಂದಿವೆ ಎಂದು ನೈರುತ್ಯ ರೇಲ್ವೆ ವಲಯದ ಜನರಲ್ ಮ್ಯಾನೇಜರ್ ಸಂಜೀವಕಿಶೋರ ಹೇಳಿದರು.ಆಲಮಟ್ಟಿಯ ರೈಲು ನಿಲ್ದಾಣಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಅಮೃತ ರೈಲು ನಿಲ್ದಾಣದ ಕಾಮಗಾರಿ, ದ್ವಿಪಥ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು. ಇದರಿಂದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.ಗದಗ-ಹೊಟಗಿ ಮಾರ್ಗದ ರೈಲ್ವೆ ಡಬಲಿಂಗ್ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಬಾಗಲಕೋಟೆ-ವಂದಾಲ ಮಧ್ಯೆ ಮಾತ್ರ ಬಾಕಿಯಿದೆ. ಆಲಮಟ್ಟಿ-ಬಾಗಲಕೋಟೆ ಮಧ್ಯೆ ಮೇ-೨೦೨೪ ಕ್ಕೆ ಪೂರ್ಣಗೊಳ್ಳಲಿದೆ, ಆಲಮಟ್ಟಿ-ವಂದಾಲ ಮಧ್ಯೆ ಬರುವ ಕೃಷ್ಣಾ ನದಿಯ ಸೇತುವೆ ಕಾಮಗಾರಿ ನಡೆದಿದೆ. ಅದು ಬಹುತೇಕ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದರು. ಆಲಮಟ್ಟಿ-ಗದಗ ಮಧ್ಯೆ ಎಲೆಕ್ಟ್ರಿಫಿಕೇಶನ್ ಕಾಮಗಾರಿಯೂ ಜೂನ್-೨೦೨೪ ಕ್ಕೆ ಪೂರ್ಣಗೊಳ್ಳಲಿದೆ ಎಂದರು.ಆಲಮಟ್ಟಿಯಲ್ಲಿ ಮೂರು…

Read More

ಸಿಂದಗಿ: ಆನೆಕಾಲು ರೋಗ ನಿರ್ಮೂಲನೆ ಮಾಡುವಲ್ಲಿ ಎಲ್ಲಾ ಇಲಾಖೆಗಳ ಜವಾಬ್ದಾರಿ ಬಹಳ ಮುಖ್ಯ ಎಂದು ಆಲಮೇಲ ತಹಶೀಲ್ದಾರ್ ಸುರೇಶ ಚಾವಲರ ಹೇಳಿದರು.ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಜರುಗಿದ ಆನೆಕಾಲು ರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಸಾಮೂಹಿಕ ಔಷಧಿ ನುಂಗಿಸುವ ತಾಲೂಕು ಮಟ್ಟದ ಸಮನ್ವಯ ಸಮಿತಿ ಪೂರ್ವಭಾವಿ ಸಭೆಯಲ್ಲಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯೊಂದಿಗೆ ಎಲ್ಲರೂ ಕೈ ಜೋಡಿಸಿ ತಾಲೂಕನ್ನು ಆನೆಕಾಲು ರೋಗದಿಂದ ಮುಕ್ತಗೊಳಿಸಬೇಕು. ಡಿಇಸಿ ಮಾತ್ರೆಯನ್ನು ಎಲ್ಲಾ ಮುಖ್ಯೋಪಾಧ್ಯಾಯರು ಶಾಲೆಯ ಮಕ್ಕಳಿಗೆ ನುಂಗಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ವಹಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಅಂಗನವಾಡಿ ವ್ಯಾಪ್ತಿಯಲ್ಲಿ ಆನೇಕಲ್ ರೋಗದ ಬಗ್ಗೆ ಮಾಹಿತಿ ತಿಳಿಸುವಂತೆ ವಿಶ್ವ ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ತಿಳಿಸಿದರು. ಗ್ರಾಮ ಪಂಚಾಯಿತ್ ಹಾಗೂ ಪುರಸಭೆ ಮಟ್ಟದಲ್ಲಿ ಕಸ ವಿಲೇವಾರಿ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಸೂಚಿಸಿದರು.ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಗ್ರೇಡ್ ೨ ತಹಶೀಲ್ದಾರ್ ಆಯ್.ಜೆ.ಬಳಗಾನೂರ ಮಾತನಾಡಿ, ಎಲ್ಲಾ ಹಂತದ ಅಧಿಕಾರಿಗಳು ಈಗಿನಿಂದಲೇ ಸಭೆ, ತಿಳಿವಳಿಕೆ ಶಿಬಿರಗಳನ್ನು…

Read More

ವಿಜಯಪುರ: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ೨೦೨೨ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ಕೃತಿಗಳನ್ನು ಆಹ್ವಾನಿಸಿದೆ.ಪ್ರತಿ ಆಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು ೨೦೨೨ರ ಜನವರಿ ೦೧ ರಿಂದ ೨೦೨೨ರ ಡಿಸೆಂಬರ್ ೩೧ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃಷಿಯಲ್ಲಿ ಪ್ರಥಮ ಮುದ್ರಣ ೨೦೨೨ ಎಂದು ಮುದ್ರಿತವಾಗಿರಬೇಕು.ಆಸಕ್ತರು ತಲಾ ೪ ಪ್ರತಿಗಳನ್ನು ರಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ೨ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨ ಇವರಿಗೆ ರಿಜಿಸ್ಟರ್ಡ ಅಂಚೆ ಅಥವಾ ಕೊರಿಯರ್ ಮೂಲಕ ಅಥವಾ ಖುದ್ದಾಗಿ ೨೦೨೪ರ ಫೆಬ್ರುವರಿ ೨೦ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೦೮೦-೨೨೨೧೧೭೩೦, ೨೨೧೦೬೪೬೦ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

Read More

ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ದಂದರಗಿ ಗ್ರಾಮದ ೩೨ ವರ್ಷದ ಲಲಿತಾ ಗಂ.ನಾಗೇಶ ಮೇಲಸಕ್ಕರಿ ಎಂಬ ಮಹಿಳೆ ದಿನಾಂಕ : ೦೨-೧೨-೨೦೨೨ ರಿಂದ ವಿಜಯಪುರ ನಗರದ ಉಪಲಿ ಬುರುಜ್ ಹತ್ತಿರದಿಂದ ಕಾಣೆಯಾಗಿರುವ ಕುರಿತು ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ಮಹಿಳೆ ಪತ್ತೆಗೆ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಕಾಣೆಯಾಗಿರುವ ಮಹಿಳೆಯು ೫.೪ ಎತ್ತರ, ಸಾಧಾರಣ ಮೈಕಟ್ಟು, ಕೋಲುಮುಖ, ಗೋಧಿಬಣ್ಣ, ಕನ್ನಡ ಭಾಷೆ ಬಲ್ಲವಳಾಗಿದ್ದು, ಕಾಣೆಯಾದ ಸಂದರ್ಭದಲ್ಲಿ ಬೂದು ಬಣ್ಣದ ಮತ್ತು ಹಳದಿ ಬಣ್ಣದ ಚೂಡಿದಾರ ಧರಿಸಿದ್ದಳು.ಈ ಚಹರೆಪಟ್ಟಿಯುಳ್ಳ ಮಹಿಳೆ ಪತ್ತೆಯಾದಲ್ಲಿ ಸಾರ್ವಜನಿಕರು ಪೊಲೀಸ್ ಅಧೀಕ್ಷಕರು ದೂ: ೦೮೩೫೨-೨೫೦೧೫೨, ಜಿಲ್ಲಾ ನಿಸ್ತಂತು ಕಚೇರಿ ದೂ: ೦೮೩೫೨-೨೫೦೮೪೪, ಮಹಿಳಾ ಪೊಲೀಸ್ ಠಾಣೆ ಮೊ: ೯೪೮೦೮೦೪೨೭೦ ಸಂಖ್ಯೆಗೆ ಮಾಹಿತಿ ನೀಡುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣವಾಗಿ ಕಳೆದ ನ.೨ ಕ್ಕೆ ೫೦ ವರ್ಷ ಪೂರ್ಣಗೊಂಡಿರುವ ಶುಭ ಸಂದರ್ಭದಲ್ಲಿ “ಕರ್ನಾಟಕ ಸಂಭ್ರಮ-೫೦” ರ “ಹೆಸರಾಯಿತು ಕರ್ನಾಟಕ , ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿ ಇದೇ ಜ ೨೭ ರಿಂದ ಫೆ.೧೨ ರವರೆಗೆ ಜಿಲ್ಲೆಯಾದ್ಯಂತ ” ಜ್ಯೋತಿ ಹೊತ್ತ ರಥ ಯಾತ್ರೆ” ನಡೆಯಲಿದ್ದು, ಸಂಭ್ರಮದ ಸ್ವಾಗತಕ್ಕೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಕೆಸ್ವಾನ ಸಭಾಂಗಣದಲ್ಲಿ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜ್ಯೋತಿ ರಥಯಾತ್ರೆಗೆ ಸ್ವಾಗತ ಮತ್ತು ಸಂಚಾರಕ್ಕಾಗಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯ ಆಲಮೇಲ ತಾಲೂಕಿನಲ್ಲಿ ಪ್ರವೇಶಿಸಿ ಜಿಲ್ಲೆಯ ಎಲ್ಲ ತಾಲ್ಲೂಕುಗಳ ವಿವಿಧ ಸ್ಥಳಗಳ ಮೂಲಕ ಕನ್ನಡ ನಾಡು ನುಡಿಯ, ಸಾಂಸ್ಕೃತಿಕ ಪರಂಪರೆ, ಇತಿಹಾಸ ಮತ್ತು ಕನ್ನಡದ ಮಹತ್ವವನ್ನು ಸಾರಿ ಹೇಳುವ ವಿಶೇಷ ಜ್ಯೋತಿ ರಥಯಾತ್ರೆ ಇದಾಗಿದ್ದು, ಆಯಾ…

Read More

ವಿಜಯಪುರ: ಜಿಲ್ಲೆಯು ಆನೇಕಾಲು ರೋಗದಿಂದ ಮುಕ್ತವಾಗಬೇಕಾದರೆ ಸಾಮೂಹಿಕ ಔಷಧಿ ಸೇವನೆ ಕಾರ್ಯಕ್ರಮದಲಿ ಎಲ್ಲರೂ ಕಡ್ಡಾಯವಾಗಿ ಮಾತ್ರೆಗಳನ್ನು ಸೇವಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.ಮಂಗಳವಾರ ಸಾಮೂಹಿಕ ಔಷಧ ಸೇವನೆಯ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ಆರೋಗ್ಯ ಶಿಕ್ಷಣ ಸಾಮಗ್ರಿಗಳ ಬಿಡುಗಡೆ ಮಾಡಿ ಮಾತನಾಡಿದ ಅವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯ ಆನೆಕಾಲು ರೋಗ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಜಿಲ್ಲೆಯ ಸಿಂದಗಿ ತಾಲೂಕಿನ ಹಾಗೂ ಮುದ್ದೇಬಿಹಾಳ ತಾಲೂಕಿನ ಜನವರಿ ೧೮ರಿಂದ ೨ ವರ್ಷ ಮೇಲ್ಪಟ್ಟ ಅಂಗನವಾಡಿ ಮಕ್ಕಳು,ಪ್ರಾಥಮಿಕ,ಪ್ರೌಢಶಾಲೆ,ಪದವಿಪೂರ್ವ ಹಾಗೂ ಪದವಿ ಕಾಲೇಜಿಗಳ ವಿದ್ಯಾರ್ಥಿಗಳಿಗೆ ಹಾಗೂ ಫೆಬ್ರವರಿ ೧೦ ರಿಂದ ಫೆ.೨೯ರವರೆಗೆ ಸಮೂಹದಲ್ಲಿ ಸಾಮೂಹಿಕ ಔಷಧ ನುಂಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ಜಿಲ್ಲೆಯಲ್ಲಿ ಈ ರೋಗ ಶೂನ್ಯಕ್ಕೆ ತರಲು ಕ್ರಮವಹಿಸಬೇಕು. ಜಿಲ್ಲೆಯ ಸಿಂದಗಿ ಹಾಗೂ ಮುದ್ದೇಬಿಹಾಳ ತಾಲೂಕಿನ ಎರಡು ವಲಯಗಳನ್ನು ಆನೆಕಾಲು ರೋಗ ಮುಕ್ತ ತಾಲೂಕು ಮಾಡಲು ಕಡ್ಡಾಯವಾಗಿ…

Read More

– ಇಲಾಹಿ ಇ. ಜಮಖಂಡಿ ಚಿಮ್ಮಡ: ಆಧುನಿಕತೆಯ ಭರಾಟೆ ನಡುವೆಯೂ ಉತ್ತರ ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಸಂಕ್ರಾಂತಿ ಎಂದೇ ಕರೆಯಲ್ಪಡುವ ಮಕರ ಸಂಕ್ರಮಣವನ್ನು ಈ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ಸಂಭ್ರಮ, ಸಡಗರದೊಂದಿಗೆ ಆಚರಿಸಲಾಯಿತು.ಸೂರ್ಯದೇವನು ತನ್ನ ಪಥ ಬದಲಾಯಿಸಿ ಒಂದು ರಾಶಿಯಿಂದ ಮತ್ತೊಂದು ರಾಶಿಯತ್ತ ತನ್ನ ಕಿರಣ ಬೀರುತ್ತಾನೆ. ದಕ್ಷಿಣ ದಿಕ್ಕಿನಿಂದ ಉತ್ತರದ ಕಡೆಗೆ ಅರ್ದ ವರ್ಷ ಪಯಣ ಮಾಡಿ ಮಕರ ರಾಶಿಗೆ ಆಗಮಿಸುತ್ತಾನೆ ಎಂಬುದು ಧಾರ್ಮಿಕ ನಂಬಿಕೆ. ಈ ಸಮಯದಲ್ಲಿ ರೈತಾಪಿ ಜನರ ಸುಗ್ಗಿಕಾಲವಾಗಿದ್ದು ಸುಗ್ಗಿಯನ್ನು ಮುಕಾಯಗೊಳಿಸಿ ಭುವಿಯನ್ನು ಸೂರ್ಯನ ಒಡಲಿಗೆ ಹರಿಬಿಟ್ಟು ವಿವಿಧ ಬಣ್ಣ ವಸ್ತುಗಳಿಂದ ಶೃಂಗರಿಸಿದ ಎತ್ತಿನ ಬಂಡಿ ಹೂಡಿಕೊಂಡು ಇಡೀ ಕುಟುಂಬದೊಂದಿಗೆ ತಮ್ಮ ನಂಬಿಕೆಯ ದೇವರ ದರ್ಶನ ಮಾಡಿಕೊಂಡು ಕರೀ ದಿನವಾದ ಮಂಗಳವಾರ ನದೀ ತೀರಕ್ಕೆ ಹೋಗಿ ವಿಶೇಷ ಅಡುಗೆ ತಯಾರಿಸಿಕೊಂಡು ಕುಟುಂಬದೊಂದಿಗೆ ಊಟಮಾಡಿ ಜಲ ಚರಗಳಿಗೂ ಉಣಬಡಿಸಿ ಇಡೀದಿನ ಪ್ರಕೃತಿ ಮಡಿಲಲ್ಲಿ ಕಳೆಯುವ ಪಧ್ಧತಿ ಮೊದಲಿನಿಂದಲೂ ನಡೆದುಕೊಂಡು ಬಂದಿದ್ದು, ಅದರಂತೆ ಸೋಮವಾರವೂ ಈ ಭಾಗದ…

Read More

ತಾಳಿಕೋಟಿ: ತಾಲೂಕಿನ ಮೂಕಿಹಾಳ ಗ್ರಾಮದ ಹಜರತ್ ಲಾಡ್ಲೆ ಮಶ್ಯಾಕ ದರ್ಗಾ ಉರುಸು ಪ್ರಯುಕ್ತ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ವಿಜಯಪುರ ಮತ್ತು ಹಜರತ್ ಲಾಡ್ಲೆ ಮಶ್ಯಾಕ ದರ್ಗಾ ಕಮೀಟ ಸಹಯೋಗದಲ್ಲಿ ಜ.೧೮ ಗುರುವಾರ ದಿವಸ ” ಜಿಲ್ಲಾ ಮಟ್ಟದ ಜಾನಪದ ಸಮಾವೇಶ ” ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಎಸ್ ಪಾಟೀಲ (ಪಡಗಾನೂರ) ತಿಳಿಸಿದ್ದಾರೆ.ಮೂಕಿಹಾಳ ಗ್ರಾಮದ ದರ್ಗಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಬೆಳಿಗ್ಗೆ ೧೧ ಘಂಟೆಗೆ ಹಿರೂರ ಪಡೇಕನೂರ ಮಲ್ಲಿಕಾರ್ಜುನ ಸ್ವಾಮೀಜಿ ಮತ್ತು ದಾವಲಮಲೀಕ ಅಜ್ಜನವರ ಸಾನಿಧ್ಯದಲ್ಲಿ , ಜವಳಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರು ಸಮಾವೇಶ ಉದ್ಘಾಟಿಸುವರು. ನಾಗಠಾಣ ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ ಕಲಾವಿದರನ್ನು ಸನ್ಮಾನಿಸುವರು. ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡುವರು. ಸಾಹಿತಿ…

Read More

ಮುದ್ದೇಬಿಹಾಳ: ಡೆಲೆವರಿ ವೃತ್ತಿಯಲ್ಲಿ ತೋಡಗಿಕೊಂಡಿರುವ ಅಸಂಘಟಿತ ವಲಯದ ಕಾರ್ಮಿಕರು ಗಿಗ್ ಕಾರ್ಮಿಕರ ವಿಮಾ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವಂತೆ ಕಾರ್ಮಿಕ ನೀರಿಕ್ಷಕ ಐ.ಎಚ್.ಇನಾಮದಾರ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇಶದಲ್ಲಿಯೇ ಮೋದಲ ಬಾರಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ೧೮ ರಿಂದ ೬೦ ವರ್ಷದ ಒಳಗಿನವರು ಸೇವಾ ಸಿಂಧು ಪೋರ್ಟಲ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬೇಕು. ಕರ್ತವ್ಯದಲ್ಲಿರುವಾಗ ಮತ್ತು ಇಲ್ಲದಿರುವಾಗ ಅಪಘಾತಗಳು ಸಂಭವಿಸಿದರೆ ೨ ಲಕ್ಷಗಳ ವಿಮಾ ಪರಿಹಾರ ಸಿಗಲಿದ್ದು, ಆಧಾರ ಕಾರ್ಡ, ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ, ವೇತನ ಪಡೆದ ಬ್ಯಾಂಕ ಪಾಸ್ ಬುಕ್ ಮತ್ತು ಇ-ಶ್ರಮ್ ನೋಂದಣಿ ಸಂಖ್ಯೆಯೊಂದಿಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.ದಿನ ಪತ್ರಿಕೆಗಳನ್ನು ಮನೆ, ಮನೆಗೆ ವಿತರಿಸುವ ವಿತರಕರು ಸೇರಿದಂತೆ ಅಮೇಜಾನ, ಸ್ವೀಗ್ಗಿ, ಜೋಮ್ಯಾಟೊ, ಪೋರ್ಟರ್, ಪಾರ್ಮಸಿ, ಬಲಿಂಕಿಟ್, ಜಿಪ್ಪೋ, ಬಿಗ್ ಬಾಸ್ಕೆಟ್, ಡಾಮಿನೋಸ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೋಡಗಿಸಿಕೋಂಡವರೂ ಸಹ ಈ ಯೋಜನೆಯ ಲಾಭ ಪಡೆಯಬಹುದು ಎಂದು ತಿಳಿಸಿದ್ದಾರೆ.

Read More

ಮುದ್ದೇಬಿಹಾಳ: ತಾಲೂಕಿನ ಲೊಟಗೇರಿ ಗ್ರಾಮದ ಸಮುದಾಯ ಭವನದ ಮುಂದೆ ಕುಳಿತು ಅಂದರ್-ಬಾಹರ್ ಇಸ್ಪೀಟ್ ಆಡುತ್ತಿದ್ದ ೭ ಜನರ ಮೇಲೆ ಪಿಎಸ್‌ಐ ಸಂಜೀವ ತಿಪರೆಡ್ಡಿ ಕರ್ನಾಟಕ ಪೊಲೀಸ್ ಕಾಯ್ದೆ ಅಡಿ ಕೇಸ್ ದಾಖಲಿಸಿದ್ದಾರೆ.ಲೊಟಗೇರಿ ಗ್ರಾಮದ ಸಂಗಪ್ಪ ಬಿರಾದಾರ, ಹುಲಗಪ್ಪ ಕೊಳ್ಳಿ, ಹಣಮಂತ ಕೊಳ್ಳಿ, ತಿಮ್ಮಣ್ಣ ಬಿರಾದಾರ, ಲಕ್ಕಪ್ಪ ನಾಗರಬೆಟ್ಟ, ಬಿಜ್ಜೂರ ಗ್ರಾಮದ ಶಿವಪುತ್ರ ಚಾಕರಿ ಮತ್ತು ಘಾಳಪೂಜಿ ಗ್ರಾಮದ ಚೆನ್ನಪ್ಪ ನಾಗರಬೆಟ್ಟ ಮೇಲೆ ಕೇಸ್ ದಾಖಲಾಗಿದೆ.

Read More