Subscribe to Updates
Get the latest creative news from FooBar about art, design and business.
Author: editor.udayarashmi@gmail.com
– ಸಂಪದಾ ಹಿರೇಮಠಆಲಮಟ್ಟಿ: ಹೊಸವರ್ಷದ ಪ್ರಥಮ ಹಬ್ಬವೆಂದೇ ಕರೆಯಲಾಗುತ್ತಿರುವ ಎಳ್ಳ ಅಮವಾಸ್ಯೆಯ ಮಕರ ಸಂಕ್ರಮಣ ದಿನವಾದ ಸೋಮವಾರ ಮುಂಜಾನೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು, ಪ್ರವಾಸಿಗರು ಆಲಮಟ್ಟಿಗೆ ಆಗಮಿಸಿ ಕೃಷ್ಣೆಯ ಎಡ ಮತ್ತು ಬಲಬದಿಗಳಲ್ಲಿ ಪವಿತ್ರ ಸ್ನಾನ ಮಾಡುತ್ತಿರುವುದು ವಿಶೇಷವಾಗಿತ್ತು.ಮಕರಸಂಕ್ರಮಣದ ದಿನದಂದು ಸೂರ್ಯನು ತನ್ನ ಪಥವನ್ನು ಬದಲಾಯಿಸಿ ದಕ್ಷಿಣಾಯಣದಿಂದ ಉತ್ತರಾಯಣದ ಕಡೆಗೆ ವಾಲುತ್ತಾನೆ. ಈ ದಿನದಂದು ಪವಿತ್ರ ಕೃಷ್ಣೆಯಲ್ಲಿ ಎಳ್ಳು ಮೈಗೆ ಹಚ್ಚಿಕೊಂಡು ಮಿಂದೆದ್ದು ಉಳಿದವರಿಗೂ ಎಳ್ಳನ್ನು ಹಂಚಿ ದೇವಸ್ಥಾನಗಳಿಗೆ ತೆರಳಿ ದೇವರುಗಳ ದರ್ಶನ ಪಡೆದರೆ ಪುಣ್ಯಪ್ರಾಪ್ತಿಯಾಗುತ್ತದೆಂಬ ನಂಬಿಕೆಯಿಂದ ಸಾವಿರಾರು ಸಂಖ್ಯೆಯಲ್ಲಿ ಮಕ್ಕಳು, ಮಹಿಳೆಯರು, ವಯೋವೃದ್ಧರು ಸೇರಿದಂತೆ ಎಲ್ಲ ವಯೋಮಾನದವರು ಲಿಂಗಭೆದವಿಲ್ಲದೇ ಶಾಸ್ತ್ರಿ ಜಲಾಶಯದ ಹಿನ್ನೀರು ಹಾಗೂ ಮುನ್ನೀರು ಪ್ರದೇಶಗಳಾಗಿರುವ ಪಾರ್ವತಿ ಕಟ್ಟೆ ಸೇತುವೆ ಕೆಳಭಾಗ, ಚಂದ್ರಮ್ಮಾದೇವಿ ದೇವಸ್ಥಾನದ ಬಳಿ, ಕೃಷ್ಣಾ ಸೇತುವೆಗಳ ಕೆಳಭಾಗದಲ್ಲಿ, ಸೀತಿಮನಿ, ಮನಹಳ್ಳಿ, ಯಲಗೂರ, ಯಲ್ಲಮ್ಮನ ಬೂದಿಹಾಳಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪವಿತ್ರ ಸ್ನಾನ ಮಾಡಿದರು.*ಸ್ಥಳಾಭಾವ:* ದೂರದ ಊರುಗಳಿಂದ ಆಗಮಿಸಿದ್ದ ಪ್ರವಾಸಿಗರು ತಮ್ಮ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ನಲ್ಲಿ ಸ್ಥಳಾವಕಾಶ ಸಿಗದೇ…
ಶ್ರೀ ಸಿದ್ದೇಶ್ವರ ಜಾನುವಾರು ಜಾತ್ರಾ ಮಹೋತ್ಸವದ ಸಮಾರಂಭದಲ್ಲಿ ಶಾಸಕ ಬಸನಗೌಡ ಯತ್ನಾಳ ಅಭಿಮತ ವಿಜಯಪುರ: ವೈಜ್ಞಾನಿಕ ಕಾರಣಗಳಿಂದಲೇ ಋಷಿಮುನಿಗಳು, ಹಿರಿಯರು ಆಕಳನ್ನು ಗೋಮಾತೆ ಅಂದಿದ್ದಾರೆ. ಜೋಳ ಬೆಳೆಯುವುದು ಕಡಿಮೆ ಆಗಿದ್ದರಿಂದ, ಕ್ರಮೇಣ ಗೋ ಸಂಪತ್ತು ಕಡಿಮೆ ಆಗುತ್ತಿದ್ದು, ಮುಂದಿನ ಅಧಿವೇಶನದಲ್ಲಿ ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ, ಕ್ವಿಂಟಲ್ ಗೆ ರೂ.5 ಸಾವಿರ ನಿಗದಿಪಡಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ಹೇಳಿದರು.ನಗರ ಮತಕ್ಷೇತ್ರ ವ್ಯಾಪ್ತಿಯ ತೊರವಿ ಸಮೀಪ ಸಿದ್ದೇಶ್ವರ ಸಂಕ್ರಮಣ ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಶ್ರೀ ಸಿದ್ದೇಶ್ವರ ಜಾನುವಾರು ಜಾತ್ರಾ ಮಹೋತ್ಸವದ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.ಸ್ವಾತಂತ್ರ್ಯ ಬಂದಾಗ ಈ ದೇಶದಲ್ಲಿ ಗಣತಿ ಪ್ರಕಾರ 120 ಕೋಟಿ ಪಶು ಸಂಪತ್ತು ಇತ್ತು. ಆಗ ಜನಸಂಖ್ಯೆ ಕೇವಲ 35 ಕೋಟಿ ಇದ್ದರೆ, ಇಂದು 150 ಕೋಟಿ ನಾವುಗಳಿದ್ದರೆ, 25 ಕೋಟಿಗೆ ಅವು ಬಂದಿವೆ. ಮೇವಿನ ಕೊರತೆಯೇ ಇದಕ್ಕೆ ಕಾರಣವಾಗಿದ್ದು, ಜೋಳ ಬೆಳೆದರೆ ಕಣಕಿ ಸಿಗುತ್ತದೆ, ಅದರಿಂದ ದನಗಳನ್ನು ಸಾಕಬಹುದು. ದನಗಳಿದ್ದರೆ…
ದೇವರಹಿಪ್ಪರಗಿ: ಜಿಲ್ಲಾ ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ ಆರ್.ಎಸ್.ಪಾಟೀಲ(ಕುಚಬಾಳ) ಎರಡನೆಯ ಬಾರಿಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಸೇರಿದ ಕಾರ್ಯಕರ್ತರು ನೂತನ ಅಧ್ಯಕ್ಷರ ಆಯ್ಕೆಗೆ ಹರ್ಷ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ರಮೇಶ ಮಸಬಿನಾಳ ಮಾತನಾಡಿ, ಮುಂದಿನ ಲೋಕಸಭೆಯ ಚುನಾವಣೆಯಲ್ಲಿ ನೂತನ ಅಧ್ಯಕ್ಷರ ನೇತೃತ್ವದಲ್ಲಿ ಪಕ್ಷ ಜಿಲ್ಲೆಯಲ್ಲಿ ಮತ್ತೆ ಜಯಭೇರಿ ಭಾರಿಸಿ ನೆಚ್ಚಿನ ಪ್ರಧಾನಿ ಮೋದಿಯವರ ಕೈ ಬಲಪಡಿಸುವುದರಲ್ಲಿ ಯಾವುದೇ ಸಂದೇಹವಿಲ್ಲ. ನಾವೆಲ್ಲ ಕಾರ್ಯಕರ್ತರು ನೂತನ ಅಧ್ಯಕ್ಷರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬಲಪಡಿಸೋಣ ಹಾಗೂ ಮುನ್ನಡೆಸೋಣ ಎಂದರು.ಯುವಮೋರ್ಚಾ ಜಿಲ್ಲಾ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಶಿವರಾಜ ತಳವಾರ, ಸೋಮು ದೇವೂರ, ಮಹಾಂತೇಶ ಗುಡಿಮನಿ, ಚಂದ್ರಶೇಖರ ದಾನಗೊಂಡ, ಕಾಶೀನಾಥ ಚವ್ಹಾಣ, ಸಾಹೇಬಗೌಡ ಬಿರಾದಾರ, ಪರಮಾನಂದ ಹಳ್ಳಿ ಸೇರಿದಂತೆ ಇತರರು ಭಾಗವಹಿಸಿದ್ದರು.
ದೇವರಹಿಪ್ಪರಗಿ: ಕನ್ನಡ ಸಾಹಿತ್ಯ ಪರಿಷತ್ ಹಾಗೂ ಬಸವ ಶರಣ ಸಂಗಮ ಸೇವಾ ಸಮೀತಿಯಿಂದ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಯಿತು.ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಪರಿಷತ್ ಹಾಗೂ ಸೇವಾ ಸಮೀತಿಯ ಪದಾಧಿಕಾರಿಗಳು ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಸವಶರಣ ಸಂಗಮ ಸಮೀತಿಯ ತಾಲ್ಲೂಕು ಅಧ್ಯಕ್ಷ ಸಂಗಪ್ಪಣ್ಣ ತಡವಲ್ ಮಾತನಾಡಿ, ಸಿದ್ಧರಾಮೇಶ್ವರರು ಶ್ರೀಶೈಲ ಮಲ್ಲಿಕಾರ್ಜುನನ ಒಬ್ಬ ಮಹಾನ್ ಭಕ್ತರಾಗಿದ್ದರು. ಅನುಭವ ಮಂಟಪದ ಗೋಷ್ಠಿಯಲ್ಲಿ ಭಾಗವಹಿಸಿ ಮಹಾಶಿವಯೋಗಿ ಎನಿಸಿಕೊಂಡರು ಎಂದು ಮಾಹಿತಿ ನೀಡಿದರು.ಶಿಕ್ಷಕ ಪ್ರಲ್ಹಾದ್ ಕುಲಕರ್ಣಿ ಮಾತನಾಡಿ, ೧೨ನೇ ಶತಮಾನದ ಶಿವಶರಣರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದರು.ತಾಲ್ಲೂಕು ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್.ವಾಲೀಕಾರ, ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ, ಶಾಲೆಯ ಮುಖ್ಯಗುರು ಪಿ.ಸಿ.ತಳಕೇರಿ, ಪಟ್ಟಣ ಪಂಚಾಯಿತಿ ಸದಸ್ಯ ರಮೇಶ ಮಸಬಿನಾಳ, ಸೋಮು ದೇವೂರ, ಸಂಗಮೇಶ ಕೆರೆಪ್ಪಗೋಳ, ನಾಗಯ್ಯ ಹಿರೇಮಠ, ಮಹಾಂತಯ್ಯ ಮಠಪತಿ, ರವಿ ಕೋಟಿನ್, ಬಸವರಾಜ ಬಡಿಗೇರ, ಗುರಣ್ಣ ಹೊಕ್ಕುಂಡಿ, ಶಿವಶಂಕರ ರೂಗಿ,…
ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಾದ್ಯಂತ ಜನರು ಸೋಮವಾರ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು.ರೈತ ಬಾಂಧವರು ತಮ್ಮ ಹೊಲದಲ್ಲಿ ಬೆಳೆದು ನಿಂತಿದ್ದ ಬೆಳೆಯಲ್ಲಿನ ಐದು ಜೋಳದ ತೆನೆ, ಗೋಧಿ ತೆನೆ, ಕಡಲೆ ಗಿಡ ಮಾರುಕಟ್ಟೆಯಲ್ಲಿ ಖರೀದಿಸಿದ್ದ ಬಾರಿಹಣ್ಣು ಸೇರಿದಂತೆ ವಿವಿಧ ಹಣ್ಣುಗಳನ್ನು ತಂದು ಮನೆಯಲ್ಲಿನ ದೇವರ ಜಗುಲಿ ಮೇಲೆ ಇಟ್ಟು ದೇವರ ಪೂಜೆಯೊಂದಿಗೆ ಬೆಳೆಗಳ ತೆನೆಗಳಿಗೆ ಪೂಜೆ ಸಲ್ಲಿಸಿದರು. ಹಬ್ಬಕ್ಕಾಗಿ ತಯಾರಿಸಿದ ವಿವಿಧ ಖಾದ್ಯದೊಂದಿಗೆ ಎಳ್ಳು, ಬೆಲ್ಲದೊಂದಿಗೆ ಮನೆಯ ದೇವರಿಗೆ ನೈವೇದ್ಯ ಅರ್ಪಿಸಿದರು.ಸಂಜೆ ಕುಟುಂಬ ಸದಸ್ಯರು ಎಳ್ಳು, ಬೆಲ್ಲ, ಕಾಯಿ ಕರ್ಪೂರದೊಂದಿಗೆ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಕುಟುಂಬ ಸದಸ್ಯರು, ಸಂಬಂಧಿಕರು, ಹಿರಿಯರು, ಸ್ನೇಹಿತರಿಗೆ ಪರಸ್ಪರ ಎಳ್ಳು ಬೆಲ್ಲ (ಕುಸುರೆಳ್ಳು) ವಿನಿಮಯ ಮಾಡಿಕೊಂಡು ಹಬ್ಬದ ಶುಭಾಶಯ ಕೋರಿದರು.ಲಕ್ಷ್ಮೀ ನಗರದಲ್ಲಿ ವಿಶಿಷ್ಟ ಆಚರಣೆ : ಪಟ್ಟಣದ ಲಕ್ಷ್ಮೀ ನಗರದ ನಿವಾಸಿಗಳು ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ್ದು ಗಮನ ಸೆಳೆಯಿತು. ಮಹಿಳೆಯರು ಬಡಾವಣೆಯ ವಿಶಾಲ ಜಾಗೆಯನ್ನು ಸ್ವಚ್ಛಗೊಳಿಸಿ, ನೀರು ಸಿಂಪಡಿಸಿ ರಂಗವಲ್ಲಿ…
ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ಗ್ರಾಮದ ಎಸ್.ಆರ್.ಹೈಸ್ಕೂಲನಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ಜ.17 ರಂದು ಮಧ್ಯಾಹ್ನ 3 ಗಂಟೆಗೆ ಲಿಂ.ಬಿ.ಎಸ್.ಪಾಟೀಲ ಮಹಾರಾಜರು, ಲಿಂ.ಶ್ರೀಶೈಲಪ್ಪ ಧನಶೆಟ್ಟಿ, ಲಿಂ.ಮುರಿಗೆವ್ವ ಲಿಂ.ಮಲಕಾಜಪ್ಪ ಅಳ್ಳಗಿ ಇವರ ಸ್ಮರಣಾರ್ಥ ದತ್ತಿ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ವಿ.ಬಿ.ಮರ್ತುರ ಅಧ್ಯಕ್ಷತೆ ವಹಿಸುವರು. ರೇಣುಕಾಚಾರ್ಯ ವಿದ್ಯಾವರ್ಧಕ ಸಂಘದ ನಿರ್ದೇಶಕ ಕೈಲಾಸ ಗುರಪ್ಪ ಸಜ್ಜನ ಕಾರ್ಯಕ್ರಮ ಉದ್ಘಾಟಿಸುವರು. ವಿಜಯಪುರದ ಫ.ಗು.ಹಳಕಟ್ಟಿ ಇಂಜನಿಯರಿಂಗ್ ಕಾಲೇಜಿನ ಪ್ರೊ.ಎಂ.ಐ.ಸಕ್ಕರಿ ಉಪನ್ಯಾಸ ನೀಡುವರು. ಮುಖ್ಯಶಿಕ್ಷಕ ಬಿ.ಬಿ.ಪಾಟೀಲ, ನಿವೃತ್ತ ಶಿಕ್ಷಕ ಆರ್.ಜಿ.ಅಳ್ಳಗಿ, ಎಸ್.ಬಿ.ಐ ನಿವೃತ್ತ ವ್ಯವಸ್ಥಾಪಕ ವೀರೇಶ ಕುಂಟೋಜಿ, ಕದಳಿ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷೆ ಸಾವಿತ್ರಿ ಕಲ್ಯಾಣಶೆಟ್ಟಿ, ಯುವ ಘಟಕದ ಅಧ್ಯಕ್ಷ ಶರಣು ಬಸ್ತಾಳ ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬಸವನಬಾಗೇವಾಡಿ: ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದಲ್ಲಿನ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2024-25 ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿಗೆ ದಾಖಲಾತಿಗಾಗಿ ನಡೆಸುವ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.2023-24ನೇ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಆನ್ ಲೈನ್ ವೆಬಸೈಟ್www.schooleducation.kar.nic.inಮೂಲಕ ಫೆ.6 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಮಾಹಿತಿಗಾಗಿ ಮುಖ್ಯಶಿಕ್ಷಕ ಸುಭಾಸ ಹರಿಜನ (9880789382) ಹಾಗೂ ಚಿತ್ರಕಲಾ ಶಿಕ್ಷಕ ಸಿ.ಜಿ.ಬಾಗೇವಾಡಿ (9481573922) ಅವರನ್ನು ಸಂಪರ್ಕಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಸವನಬಾಗೇವಾಡಿ: ತಾಲೂಕಿನ ನಾಗೂರ ಗ್ರಾಮದ ಯಮನೂರೇಶ್ವರ ದೇವಸ್ಥಾನ ಆವರಣದಲ್ಲಿ ಜ.೧೭ ರಂದು ಸಂಜೆ ೬ ಗಂಟೆಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾಧ್ಯಕ್ಷರ ಅಭಿನಂದನಾ ಸಮಾರಂಭ ಹಾಗೂ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಚನ್ನಬಸವಸ್ವಾಮೀಜಿ, ಸಿದ್ದರಾಮ ಸ್ವಾಮೀಜಿ, ಡಾ.ಸಿದ್ದಲಿಂಗ ಸ್ವಾಮೀಜಿ, ಗುರುಸಂಗನಬಸವ ಸ್ವಾಮೀಜಿ, ವೀರರುದ್ರಮುನಿ ಶಿವಾಚಾರ್ಯರು, ಅಭಿನವ ಸಂಗನಬಸವ ಶಿವಾಚಾರ್ಯರು, ಸಿದ್ದಲಿಂಗ ಸ್ವಾಮೀಜಿ, ಶಿವಪ್ರಕಾಶ ಶಿವಾಚಾರ್ಯರು, ಬೃಂಗೀಶ್ವರಲಿಂಗ ಶಿವಾಚಾರ್ಯರು, ಶಿವಕುಮಾರ ಸ್ವಾಮೀಜಿ, ಶಿವಪುತ್ರಯ್ಯ ಸ್ವಾಮೀಜಿ, ದಾಕ್ಷಾಯಣಿ ಅಮ್ಮನವರು ವಹಿಸವರು. ಸಚಿವ ಶಿವಾನಂದ ಪಾಟೀಲ ಉದ್ಘಾಟಿಸುವರು. ಶಾಸಕ ರಾಜುಗೌಡ ಪಾಟೀಲ ಅವರು ನಾಡದೇವಿ ಭಾವಚಿತ್ರಕ್ಕೆ ಪುಷಾರ್ಚನೆಗೈಯುವರು. ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ವಹಿಸುವರು. ತಾಲೂಕು ಕಸಾಪ ನೂತನ ಅಧ್ಯಕ್ಷ ಶಿವಾನಂದ ಡೋಣೂರ ಆಶಯ ನುಡಿಗಳನ್ನಾಡುವರು. ಮುಖ್ಯಅತಿಥಿಗಳಾಗಿ ಮುಖಂಡರಾದ ಈರಣ್ಣ ಪಟ್ಟಣಶೆಟ್ಟಿ, ಸುರೇಶ ಹಾರಿವಾಳ, ಸಂಗನಗೌಡ ಚಿಕ್ಕೊಂಡ, ಶಿವನಗೌಡ ಬಿರಾದಾರ, ಭರತ ಅಗರವಾಲ, ಶಿವಾನಂದ ಮಂಗಾನವರ, ಚಂದ್ರೇಶೇಖರ…
ವಿಜಯಪುರ: ೨೦೨೪ ಮತ್ತೊಮ್ಮೆ ಮೋದಿ ಎಂಬ ಗೋಡೆ ಬರಹವನ್ನು ವಿಜಯಪುರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬರೆಯುವ ಮೂಲಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಚಾಲನೆ ನೀಡಿದರು.ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ವಾರ್ಡ್ ಗಳಲ್ಲಿ ಈ ಸಂದೇಶದ ಗೋಡೆಬರಹವನ್ನು ಬರೆಯುವ ಕಾರ್ಯ ರೂಪಿಸಲಾಗಿದೆ.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ, ದೇಶ ಇನ್ನಷ್ಟು ಅಭಿವೃದ್ಧಿ ಪಥದತ್ತ ಮುನ್ನಡೆಯಲು ಮೋದಿಜಿ ಅವರು ಇನ್ನೊಮ್ಮೆ ಪ್ರಧಾನಿಯಾಗಬೇಕಾಗಿರುವುದು ಅಗತ್ಯವಾಗಿದೆ. ಭಾರತವನ್ನು ವಿಶ್ವಗುರುವಾಗಿಸುವ ದಿವ್ಯ ಸಂಕಲ್ಪವನ್ನು ಹೊತ್ತು ಕೆಲಸ ಮಾಡಿ ವಿಶ್ರಾಂತಿ, ರಜೆಯನ್ನು ಪಡೆಯದೇ ಕೆಲಸ ಮಾಡುತ್ತಿರುವ ಮೋದಿಜಿ ಅವರಂತಹ ಪ್ರಧಾನಿಯನ್ನು ಪಡೆದಿದ್ದೆ ಒಂದು ಸುದೈವ ಎಂದರು.ಮೋದಿಜಿ ಅವರ ಕಾಲಘಟ್ಟದಲ್ಲಿ ಪ್ರಾಮಾಣಿಕ, ಜನಪರ ಹಾಗೂ ಪರಿಶುದ್ಧ ಆಡಳಿತ ಪ್ರತಿಯೊಬ್ಬ ಭಾರತೀಯರ ಮನಗೆದ್ದಿದೆ, ವಿದೇಶಿ ರಾಷ್ಟ್ರಗಳು ಸಹ ಮೋದಿಜಿ ನಾಯಕತ್ವಕ್ಕೆ ಮನಸೋತಿವೆ ಎಂದರು.ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು, ಭವ್ಯ ರಾಮಮಂದಿರ ನಿರ್ಮಾಣ, ಕಪ್ಪು ಹಣದ ವಿರುದ್ದ ಸಮರ, ಉಜ್ವಲ ಯೋಜನೆ ಮೂಲಕ ಮನೆ ಮನೆಗೆ ಅಡುಗೆ…
ವಿಜಯಪುರ: ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಇರುವ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿಶ್ರೀ ನರೇಂದ್ರ ಮೋದಿಜೀ ಅವರ ಕರೆ ಮೇರೆಗೆ ವಿಜಯಪುರ ನಗರದ ವಾರ್ಡ್ ನಂಬರ್ 1 ರ ಅದೃಷ್ಟಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಕಾರಜೋಳ ಮಾತನಾಡಿ, ಪ್ರಭು ಶ್ರೀರಾಮನ ಮಂದಿರ ಲೋಕಾರ್ಪಣೆಯಾಗುತ್ತಿರುವುದು ಪ್ರತಿ ಭಾರತೀಯನ ಭಕ್ತಿಯ ಪ್ರತೀಕ, ರಾಮನ ಜನ್ಮಭೂಮಿಯಲ್ಲಿ ಭವ್ಯ ಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ, ಇದು ಪ್ರತಿಯೊಬ್ಬರು ಸಂತಸ ಪಡುವ ಸಂಗತಿ. ಮರ್ಯಾದಾ ಪುರಷೋತ್ತಮ ರಾಮ ಆದರ್ಶ ಆಡಳಿತದ ಪ್ರತಿರೂಪ ಕೂಡ ಹೌದು, ಹೀಗಾಗಿ ರಾಮ ಮಂದಿರ ಲೋಕಾರ್ಪಣೆಯನ್ನು ಜನಸೇವಾ ಕಾರ್ಯ, ಭಕ್ತಿ ಭಾವ ಮೂಡಿಸುವ ಮಂದಿರಗಳ ಸ್ವಚ್ಛ ತೆ ಕಾರ್ಯದ ಮೂಲಕ ಸೇವೆಯ ಮೂಲಕವೇ ಸಂಭ್ರಮಿಸಲಾಗುತ್ತಿದೆ, ಈ ಕಾರಣಕ್ಕೆ ಹೆಮ್ಮೆಯ ಪ್ರಧಾನಿ ಈ ಕರೆ ಕೊಟ್ಟಿದ್ದಾರೆ, ಎಲ್ಲರೂ ಸಹ ನಮ್ಮ ಭಕ್ತಿ ಕೇಂದ್ರಗಳ…
