Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ರಾಜ್ಯ ಸಂಘದ ಹಿರಿಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಅಧ್ಯಕ್ಷ ಸುರೇಶ ಶೇಡಶ್ಯಾಳ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕಾರ್ಯಕಾರಿಣಿ ಸಭೆ ನಡೆಯಿತು.ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ಅನ್ನು ಎಲ್ಲಾ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಸಂಯುಕ್ತವಾಗಿ ಬಿಡುಗಡೆ ಮಾಡಿದರು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಸುರೇಶ ಶೇಡಶ್ಯಾಳ ಸರಕಾರಿ ನೌಕರರ ಸಂಘದ ಮೂಲಕ ನೌಕರರ ಹಿತಕ್ಕಾಗಿ ಅನೇಕ ಮಹತ್ವದ ಸಾಧನೆಗಳು ಸಾಧ್ಯವಾಗಿವೆ ಎಂದು ತಿಳಿಸಿದರು.ಕೆಜಿಐಡಿ ಸಂಪೂರ್ಣ ಗಣಕೀಕರಣ, ಆರೋಗ್ಯ ಸಂಜೀವಿನಿ (ಕೆಎಎಸ್ಎಸ್) ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜೆಡಿಎಂ ಸಮಿತಿ ರಚನೆ, ಮಹಿಳಾ ನೌಕರರಿಗೆ ಋತುಚಕ್ರ ರಜೆ ಸೇರಿದಂತೆ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ನಮ್ಮ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರ ನೌಕರಪರ ನಾಯಕತ್ವದ ಫಲವಾಗಿ ಸಂಘದಿಂದ ನಿರಂತರವಾಗಿ ನಡೆಯುತ್ತಿದೆ ಎಂದರು. ನೌಕರರಿಗೆ ಯಾವುದೇ ಸಮಸ್ಯೆಗಳಿದ್ದರೂ ಸಂಘಟನೆಯ ಗಮನಕ್ಕೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು, 2022-23ನೇ ಸಾಲಿನಲ್ಲಿ ಮುಜರಾಯಿ ಇಲಾಖೆಯಿಂದ ನಗರ ಮತಕ್ಷೇತ್ರದ ವ್ಯಾಪ್ತಿಯ ವಾರ್ಡ ನಂ.26ರ ದಿವಟಗೇರಿಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕಾಗಿ ಮಂಜೂರಿಸಿದ ರೂ.10 ಲಕ್ಷ ಅನುದಾನದ ಪೈಕಿ ಮೊದಲ ಕಂತಿನಲ್ಲಿ ರೂ.5 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ ಎಂದು ನಗರ ಶಾಸಕರ ಸಾರ್ವಜನಿಕ ಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ಇಂಡಿ: ಸಮಾಜದಲ್ಲಿ ಎದುರಾದ ಅನೇಕ ಅವಮಾನ-ಕಷ್ಟಗಳನ್ನು ಸಹಿಸಿಕೊಂಡು ಜೀವನವಿಡೀ ಹೋರಾಟ ನಡೆಸಿದ ಸಾವಿತ್ರಿಬಾಯಿ ಫುಲೆ ಅವರು ದಲಿತರು ಮತ್ತು ಮಹಿಳೆಯರ ಹೃದಯದಲ್ಲಿ ಅಕ್ಷರದ ಬೀಜ ಬಿತ್ತಿದ ಶಿಕ್ಷಣದ ಸಾಧಕಿ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶನಿವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಹಾಗೂ ಪಾಲಕ-ಶಿಕ್ಷಕರ ಸಭೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ಬಾಲ್ಯ ವಿವಾಹ, ಸತಿ ಪದ್ಧತಿ ಮತ್ತು ಜಾತಿ ಪದ್ಧತಿಯಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿದ ಸಾವಿತ್ರಿಬಾಯಿ ಫುಲೆ ಅವರು ತಮ್ಮ ಸರಳ ಜೀವನಶೈಲಿಯೊಂದಿಗೆ, ಭಾರತೀಯ ಮಹಿಳಾ ಸಬಲೀಕರಣದ ಸಂಕೇತವಾಗಿ ಇಂದಿಗೂ ಸ್ಫೂರ್ತಿಯಾಗಿ ನಿಂತಿದ್ದಾರೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷ ಅಲ್ಲಾಭಕ್ಷ ಮಕಾನದಾರ ಮಾತನಾಡಿ, ಮಕ್ಕಳು ಮನೆಗೆ ಬಂದ ನಂತರ ಪಾಠ ಹೇಳಿಕೊಡುತ್ತಾ, ಮನೆಯಲ್ಲಿ ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸುವುದು ತಂದೆ-ತಾಯಿಯರ ಕರ್ತವ್ಯ. ಜೀವನ ಮೌಲ್ಯಗಳನ್ನು ಮನೆಯಿಂದಲೇ ರೂಢಿಸಬೇಕು ಎಂದು ಹೇಳಿದರು.ಮುಖ್ಯ ಶಿಕ್ಷಕ ಕೆ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಪಾಲಕ ಪೋಷಕರು ಶಿಕ್ಷಕರೊಂದಿಗೆ ಕೈಜೋಡಿಸಿದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು ವಿದ್ಯಾರ್ಥಿಗಳು ಪ್ರಾಮಾಣಿಕತೆಯಿಂದ ಅಭ್ಯಾಸ ಮಾಡಿ ತಂದೆ ತಾಯಿಗಳ, ಕಲಿಸಿದ ಶಿಕ್ಷಕರ ಹಾಗೂ ಗ್ರಾಮದ ಹೆಸರು ತರುವ ಕೆಲಸ ಮಾಡಬೇಕು ಎಂದು ಶಿಕ್ಷಕ ಸಂಗನಬಸವ ಉಟಗಿ ಹೇಳಿದರು.ಅವರು ಕುಂಬಾರಹಳ್ಳದ ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿದ ಪಾಲಕ ಪೋಷಕ ಸಭೆ ಮತ್ತು ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ ಸರ್ಕಾರ ಉತ್ತೀರ್ಣತೆಯ ಪ್ರಮಾಣವನ್ನು 35 ರಿಂದ 33ಕ್ಕೆ ಇಳಿಸಿದ್ದು ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾರ್ಜನೆ ಮಾಡಬೇಕು. ಸರಕಾರ ಮಕ್ಕಳಿಗೆ ನೀಡುವ ಸೌಲಭ್ಯಗಳ ಕುರಿತು ಸಂಪೂರ್ಣ ಮಾಹಿತಿ ನೀಡಿದರು.ಅಕ್ಷರದ ಅವ್ವ ಸಾವಿತ್ರಿಬಾಯಿ ಪುಲೆ ಅವರು ಭಾರತದ ಅಜ್ಞಾನವನ್ನು ಹೋಗಲಾಡಿಸಲು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಲು ನಿಸ್ವಾರ್ಥವಾಗಿ ದುಡಿದು ನಂತರ ಜನ ಸೇವೆ ಮಾಡುತ್ತಾ ಜನರಿಗಾಗಿ ಮಡಿಲು ಅಮರರಾಗಿದ್ದಾರೆ. ಅವರ ಆದರ್ಶವನ್ನು ಮಕ್ಕಳೆಲ್ಲರೂ ಜೀವನದಲ್ಲಿ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ನಿತ್ಯ ಸಮಾಜದಲ್ಲಿ ನಾವು ಉತ್ತಮ ಬದುಕು ಕಂಡುಕೊಳ್ಳಬೇಕಾದರೆ ಸಂಸ್ಕೃತಿ, ಸಂಸ್ಕಾರ ಜೀವನದಲ್ಲಿಅಳವಡಿಸಿಕೊಳ್ಳುವ ಜೊತೆಗೆ ನಮ್ಮ ಮಕ್ಕಳಿಗೂ ಕಲಿಸಬೇಕೆಂದು ವಿಶ್ರಾಂತ ಪ್ರಾಂಶುಪಾಲ ಡಾ.ಎಸ್.ಬಿ.ಸುಗ್ಗಮದ ಹೇಳಿದರು.ಸ್ಥಳಿಯ ವಿರಕ್ತಮಠದ ಚನ್ನಬಸವೇಶ್ವರ ಸಭಾ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಭು ಮಹಾಸ್ವಾಮಿಗಳ ೫೫ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ಬೆಳಗುತ್ತಿರುವ ದೀಪಗಳನ್ನು ಆರಿಸಿ ಜನ್ಮದಿನ ಆಚರಿಸುವ ಸಂಸ್ಕತಿ ಪಾಶ್ಚಾತರದ್ದು. ಇನ್ನೊಬ್ಬರ ಜೀವನದಲ್ಲಿ ಬೆಳಗುವ ದೀಪವಾಗುವ ಕಾರ್ಯ ಮಾಡುವುದು ಭಾರತೀಯ ಸಂಸ್ಕೃತಿ. ನಮ್ಮ ಪರಂಪರೆಯನ್ನು ನಮ್ಮ ಮಕ್ಕಳಿಗೆ ಕಲಿಸಬೇಕಾಗಿದೆ ಆ ಕಾರಣಕ್ಕ ಶ್ರೀಮಠದ ಭಕ್ತ ಮಂಡಳಿ ಈ ಜನ್ಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.ನಿವೃತ್ತ ಪ್ರಾದ್ಯಾಪಕ ಡಾ. ವಿರುಪಾಕ್ಷ ಚಿಮ್ಮಡ, ಗ್ರಾ.ಪಂ ಮಾಜಿ ಅಧ್ಯಕ್ಷ ಪರಪ್ಪಾ ಪಾಲಭಾವಿ, ಪ್ರವೀಣ ಪೂಜಾರಿ ಮಾತನಾಡಿದರು.ಸಮಾರಂಭದ ಸಾನಿಧ್ಯವಹಿಸಿದ ಪ್ರಭು ಮಹಾಸ್ವಾಮಿಗಳು ಗ್ರಾಮದ ವಿವಿಧ ಸಮುದಾಯಗಳ ಪ್ರಮುಖರಿಂದ ಗೌರವ ಸ್ವೀಕರಿಸಿ ಕಾಣಿಕೆಯಾಗಿ ಸ್ವೀಕರಿಸಿದ ಕಲಿಕಾ ಸಾಮಗ್ರಿಗಳನ್ನು ಶಾಲೆಯ ವಿದ್ಯಾರ್ಥಿಗಳಿಗೆ ವಿತರಿಸಿದರು.ಶಾಸಕ ಸಿದ್ದು ಸವದಿ, ಕಾಂಗ್ರೆಸ್ ಧುರೀಣ ಸಿದ್ದು ಕೊಣ್ಣೂರ,…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನ್ನೊಲವಿನ ಕಿರಣಾ,ಗಿಳಿ ಹಸಿರು ಬಣ್ಣದ ಚೆಂದದ ಕುರ್ತಾ ಅದಕ್ಕೊಪ್ಪುವ ಬಿಳಿ ಬಣ್ಣದ ಪಟಿಯಾಲಾ ಪ್ಯಾಂಟ್, ಕಿವಿಯಲ್ಲಿ ಅತ್ತಿತ್ತ ಓಲಾಡುವ ಹಸಿರು ಬಿಳಿ ಹರಳಿರುವ ಜುಮ್ಕಿ, ತಿದ್ದಿ ತೀಡಿ ಮಾಡಿದಂತಿರುವ ಕಾಮನ ಬಿಲ್ಲಿನಂತಹ ಹುಬ್ಬುಗಳು ಮತ್ತು ಕಣ್ಣಿಗೆ ನಯವಾಗಿ ತೀಡಿದ ಕಾಡಿಗೆ, ತೆಳುವಾಗಿ ಬಣ್ಣ ಲೇಪಿಸಿದ ಅಂದದ ಅಧರಗಳು. ನೀಲಿ ಬಣ್ಣದ ಕಂಗಳು, ನಕ್ಕರೆ ಕೆನ್ನೆಯಲ್ಲಿ ಬೀಳುವ ಗುಳಿಗಳು. ಲೂಸಾಗಿ ಹೆಣೆದ ಜಡೆ. ಐದೂವರೆ ಅಡಿ ಎತ್ತರದ ಸಮತೂಕದ ನಿಂಬೆ ಬಣ್ಣದ ಮೈಕಟ್ಟಿನವಳು. ಸರಿ ಪ್ರಮಾಣದ ಅಂಗ ಸೌಷ್ಟವ ಇರುವ ಸುಂದರಿ ನೀನು, ಮೊದಲ ನೋಟದಲ್ಲೇ ಕಳೆದು ಹೋದೆ.ಮತ್ತೇರಿಸುವ ಮೋಹಕ ನಗು ಚೆಲ್ಲುವವಳು ಸರಳ ಉಡುಗೆ ತೊಡುಗೆ ಇರುವ ಸಿಂಪಲ್ ಸುಂದರಿ ಎನ್ನಬಹುದು. ಸಿಂಪಲ್ಲಾಗಿದ್ರೂ ಗತ್ತು ಗಾಂಭರ್ಯತೆ. ಒಮ್ಮೆ ನೋಡಿದರೆ ಮತ್ತೆ ಮತ್ತೆ ನೋಡಬೇಕೆನಿಸುವ ಚೆಲುವಿ ಯಾರಿರಬಹುದೆಂದು ನಿನ್ನ ಹೆಜ್ಜೆಯನ್ನೇ ಹಿಂಬಾಲಿಸಿದವು ನನ್ನ ಕಾಲುಗಳು. ನಾನು ಮಾಸ್ಟರ್ ಡಿಗ್ರಿ ಮುಗಿಸಿ ಜಾಬ್ಗೆ ಹುಡುಕಾಡುತ್ತಿದ್ದ…
ಸಂಗನಬಸವ ಶ್ರೀಗಳನ್ನು ಬಿಡುಗಡೆ ಮಾಡದಿದ್ದರೆ ವಿಜಯಪುರ ಬಂದ್ಗೆ ಕರೆ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಸರ್ಕಾರ ಹಿಂದೂ ಸ್ವಾಮೀಜಿಗಳ ಮೇಲೆ ದೊಡ್ಡ ಷಡ್ಯಂತ್ರ ಮಾಡುತ್ತಿದೆ, ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಈ ರೀತಿ ಹಿಂಸೆ ನೀಡುವ ಕೆಲಸ ಮಾಡುತ್ತಿದೆ, ಸರ್ಕಾರಿ ವೈದ್ಯಕೀಯ ಕಾಲೇಜಿನ ನ್ಯಾಯಯುತ ಹೋರಾಟದಲ್ಲಿ ತೊಡಗಿದ್ದ ಶ್ರೀ ಸಂಗನಬಸೇಶ್ವರ ಸ್ವಾಮೀಜಿಯವರನ್ನು ಕೂಡಲೇ ಬಿಡುಗಡೆ ಮಾಡಬೇಕು, ಇಲ್ಲವಾದರೆ ವಿಜಯಪುರ ಬಂದ್ ಸೇರಿದಂತೆ ವಿವಿಧ ಹಂತದ ಹೋರಾಟ ಕೈಗೊಳ್ಳಲು ನಾವು ಸಿದ್ಧ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು.ಮುಖ್ಯಮಂತ್ರಿಗಳು ವಿಜಯಪುರಕ್ಕೆ ಬರುವ ಕಾರ್ಯಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ, ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ ಹಿನ್ನೆಲೆಯಲ್ಲಿ ರಾಣಿ ಚೆನ್ನಮ್ಮ ಮೂರ್ತಿ ಸಿ.ಎಂ. ಸಿದ್ಧರಾಮಯ್ಯ ಅವರು ಉದ್ಘಾಟಿಸುವುದು ಬೇಡ ಎಂದು ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿದ್ದಾರೆ, ಈಗ ಪಿಪಿಪಿ ಹೋರಾಟಗಾರರಿಂದ ಮುಖ್ಯಮಂತ್ರಿಗಳಿಗೆ ವಿರೋಧ ವ್ಯಕ್ತವಾಗುವ ದೃಷ್ಟಿಯಿಂದ ಹೋರಾಟವನ್ನು ಹತ್ತಿಕ್ಕುವ ಕೆಲಸ ನಡೆದಿದೆ ಎಂದರು.ಬAದಾಗ ಯಾವ ವಿರೋಧವೂ ವ್ಯಕ್ತವಾಗಬಾರದು ಎಂದು ಉದ್ದೇಶಪೂರ್ವಕವಾಗಿ ಸರ್ಕಾರಿ ಮೆಡಿಕಲ್ ಕಾಲೇಜ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ವಿವಿಧ ಪುಸ್ತಕಗಳ ಆಯ್ಕೆ ಲೇಖಕ, ಲೇಖಕ-ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರಿಂದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಹಿತ್ಯ, ಮಕ್ಕಳ ಸಾಹಿತ್ಯ, ಕಲೆ ಮತ್ತು ವಿಜ್ಞಾನ ಪ್ರಕಾರಗಳ ಯಾವುದೇ ಭಾಷೆಯ ಪುಸ್ತಕಗಳನ್ನು ಹಾಗೂ ಸ್ಪರ್ಧಾತ್ಮಕ, ಪಠ್ಯ, ಪರಾಮರ್ಶನ, ಸಾಂದರ್ಭಿಕ ಮತ್ತು ಅಭಿನಂದನ ಗ್ರಂಥಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಅರ್ಜಿ ಸಲ್ಲಿಸಬಹುದು.೨೦೨೫ರ ಕರ್ನಾಟಕದಲ್ಲಿ ಪ್ರಥಮವಾಗಿ ಮುದ್ರಣಗೊಂಡ ಪ್ರಕಟಗೊಳ್ಳುವ ಯಾವುದೇ ಭಾಷೆಯ ಪುಸ್ತಕಗಳನ್ನು ಉಪನಿರ್ದೇಶಕರ ಕಚೇರಿ ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ದಿನಾಂಕ ೩೧-೦೧-೨೦೨೬ರ ಸಂಜೆ ೫:೩೦ರ ಒಳಗಾಗಿ ನೋಂದಣಿ ಮಾಡಿಸುವುದು ಹಾಗೂ ಈ ಪುಸ್ತಕಗಳನ್ನು ಮಾತ್ರ ರಾಜ್ಯ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗೆ ಪರಿಗಣಿಸಲಾಗುವುದು.ನೋಂದಣಿ ಪ್ರಮಾಣ ಪತ್ರದ ನಕಲು ಪ್ರತಿಯೊಂದು ಹಾಗೂ ಪುಸ್ತಕದ ಒಂದು ಪ್ರತಿಯನ್ನು ದಿನಾಂಕ:೩೧-೦೧-೨೦೨೬ರ ೫:೩೦ರೊಳಗೆ ಆಯ್ಕೆಗಾಗಿ ಉಪನಿರ್ದೇಶಕರು, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ ಬೆಂಗಳೂರು ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಕೇಂದ್ರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯ ಕೇಂದ್ರ ಬಸ್ ನಿಲ್ದಾಣಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲು ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್ ಮಾಡಲಾಗಿದೆ.ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ,ಈ ಪ್ರಕಟಣೆಯ ೦೩ ದಿನಗಳೊಳಗೆ ಮಹಾನಗರ ಪಾಲಿಕೆಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿಜಯಪುರದ ಬಾಲಮಂದಿರದಲ್ಲಿ ಹೊಸ ವರ್ಷಾಚರಣೆ | ಮಕ್ಕಳೊಂದಿಗೆ ಸಂಭ್ರಮ | ಸಸಿ ನೆಡುವಿಕೆ | ಪ್ರತಿಭಾವಂತ ವಿದ್ಯಾರ್ಥಿಗೆ ಸನ್ಮಾನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಲಮಂದಿರದ ಆವರಣದಲ್ಲಿ ಕೈತೋಟ ಅಭಿವೃದ್ಧಿಪಡಿಸಬೇಕು ಹಾಗೂ ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಯೋಜನಾಬದ್ಧವಾಗಿ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು.ಜಿಲ್ಲಾಡಳಿತ,ಎಂ.ಬಿ.ಪಾಟೀಲ ಫೌಂಡೇಷನ್, ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ದಿನಾಂಕ ೦೧-೦೧-೨೦೨೬ ರಂದು ನಗರದ ಸರ್ಕಾರಿ ಬಾಲಕರ ಬಾಲಮಂದಿರ ವಿಜಯಪುರದಲ್ಲಿ ಹೊಸ ವರ್ಷಾಚರಣೆಯನ್ನು ಮಕ್ಕಳೊಂದಿಗೆ ಆಚರಿಸಿ ಅವರು ಮಾತನಾಡಿದರು.ಮಕ್ಕಳು ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗಾಗಿ ಅನೇಕ ಸೌಲಭ್ಯ ಒದಗಿಸಿದೆ. ಇದರ ಸದುಪಯೋಗಪಡೆದುಕೊಂಡು ಸತತ ಪರಿಶ್ರಮಿಗಳಾಗಿ ಅಧ್ಯಯನ ಮಾಡಿ, ಉನ್ನತ ಹುದ್ದೆಗೇರುವ ಗುರಿ ಹೊಂದಬೇಕು ಎಂದು ಪ್ರೇರಣಾ ನುಡಿಗಳನ್ನಾಡಿದರು.ಧಾರವಾಡದ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಮಾತನಾಡಿ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಹಲವು ಯೋಜನೆ…
