Author: editor.udayarashmi@gmail.com

ಅದ್ಧೂರಿ ಪಲ್ಲಕ್ಕಿ ಉತ್ಸವ | ೧೫೦ ಹಂಡೆ ರುಚಿಕಟ್ಟಾದ ಬಜ್ಜಿ ಪಲ್ಯೆ ತಯಾರಿಕೆ | ಸಿಂದಗಿ: ತಾಲೂಕಿನ ಆಹೇರಿ ಗ್ರಾಮದಲ್ಲಿರುವ ಗಂಗಾಧರೇಶ್ವರರ ಜಾತ್ರೆ ಪ್ರತಿವರ್ಷದಂತೆ ಈ ವರ್ಷವೂ ಸಂಕ್ರಮಣದ ದಿನವೇ ಸೋಮವಾರ ಭಕ್ತರ ದರ್ಶನದಿಂದ ಜಾತ್ರೆವಿಜೃಂಭಣೆಯಿಂದ ನಡೆಯಿತು.ತಾಲೂಕಿನ ಆಹೇರಿ ಗ್ರಾಮದಲ್ಲಿರುವ ಗಂಗಾಧರೇಶ್ವರ ದೇವಸ್ಥಾನಕ್ಕೆ ಪಲ್ಲಕ್ಕಿಯನ್ನು ಜಯಘೋಷಗಳನ್ನು ಕೂಗುತ್ತಾ ಸ್ವಾಗತಿಸಲಾಯಿತು. ಬಳಿಕ ಅಗ್ಗಿ ಹಾಯುವ ಕಾರ್ಯ ಜರುಗಿತು. ದೇವಸ್ಥಾನದ ಆವರಣದಲ್ಲಿ ಚರಗ ಚೆಲ್ಲಿ ರೈತನ ಸಿರಿ ಸಮೃದ್ಧಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ಈ ಬಾರಿ ೧೫೦ ಹಂಡೆಯ ಬಜ್ಜಿ ಪಲ್ಯೆ ಮಾಡಲಾಯಿತು.ಗುರು ಶಿಷ್ಯರ ಬಾಂಧವ್ಯಕ್ಕೆ ಸಾಕ್ಷಿಯಾದ ಭಕ್ತರು:ಈ ಜಾತ್ರೆಯ ವಿಶೇಷವೆಂದರೆ ವಿವಿಧ ಧಾನ್ಯಗಳಿಂದ ತಯಾರಿಸಿದ ಭಜ್ಜಿ ಪಲ್ಯೆ ಮತ್ತು ರೊಟ್ಟಿಗೆ ಭಕ್ತರೆಲ್ಲರೂ ಬಾಯಿ ಚಪ್ಪರಿಸಿ ಪ್ರಸಾದ ರೂಪದಲ್ಲಿ ಸ್ವೀಕರಿಸಿ ಮಲ್ಲಯ್ಯನ ಏಳ ಕೋಟೆ ಏಳು ಕೋಟೆಯ ಉಗೆ ಎಂದು ಗಂಗಾಧರೇಶ್ವರ ಕೃಪೆಗೆ ಪಾತ್ರರಾಗುತ್ತಾರೆ.ಕಮಿಟಿಯ ಭಾಗಪ್ಪಗೌಡ ಪಾಟೀಲ, ಶಾಂತಗೌಡ ಬಿರಾದಾರ, ಗಂಗಾಧರ ಚಿಂಚೊಳ್ಳಿ, ರಮಜಾನಸಾಬ ದುಮ್ಮದ್ರಿ, ಗೌಡಪ್ಪಗೌಡ ಪಾಟೀಲ, ಸಿದ್ದು ಕಡಗಂಚಿ, ಬಸಣ್ಣಸಾಹು ಕಡಗಂಚಿ, ಶಿವಾನಂದ…

Read More

ಸಿಂದಗಿ: ಪಟ್ಟಣದ ಶ್ರೀ ಸಂಗಮೇಶ್ವರ ದೇವರ ಜಾತ್ರಾಮಹೋತ್ಸವ ಅಂಗವಾಗಿ ಜ.೧೯ ಶುಕ್ರವಾರ ಬೆಳಿಗ್ಗೆ ೮ ಗಂಟೆಗೆ ಶ್ರೀ ಸಂಗಮೇಶ್ವರ ಹಾಗೂ ಭ್ರಮರಾಂಬಿಕಾ ದೇವಿಯ ಉತ್ಸವ ಮೂರ್ತಿಗಳ ರಥೋತ್ಸವ ಮತ್ತು ಪಲ್ಲಕ್ಕಿ ಉತ್ಸವ ಜರಗುತ್ತದೆ. ರಥೋತ್ಸವ ಮತ್ತು ಪಲ್ಲಕ್ಕಿ ಉತ್ಸವವು ದೇವಸ್ಥಾನದಿಂದ ಹೊರಟು ನೀಲಗಂಗಾದೇವಿ ದೇವಸ್ಥಾನ ಮಾರ್ಗವಾಗಿ ಹಳೆಬಜಾರದಲ್ಲಿನ ಶ್ರೀ ಬಸವಣ್ಣ ದೇವಸ್ಥಾನದವರೆಗೆ ಸಾಗಿ ಪುನಃ ಅದೇ ಮಾರ್ಗವಾಗಿ ದೇವಸ್ಥಾನ ತಲಪುವುದು ಎಂದು ದೇವಸ್ಥಾನದ ಕಮಿಟಿ ಸದಸ್ಯರು ತಿಳಿಸಿದ್ದಾರೆ.ದೇವಸ್ಥಾನದ ಹಿನ್ನಲೆ: ಐತಿಹಾಸಿಕ ಸಂಗಮೇಶ್ವರ ದೇವಸ್ಥಾನ ಕಲ್ಯಾಣ ಚಾಲುಕ್ಯರ ಶೈಲಿಯಲ್ಲಿ ನಿರ್ಮಿತವಾಗಿದೆ. ಗರ್ಭಗುಡಿಯ ಮೇಲೆ ಕದಂಬ ನಾಗರ ಶೈಲಿಯ ಶಿಖರವಿದೆ. ದೇವಾಲಯದ ಎದುರು ನಿರ್ಮಿಸಿರುವ ಮಂಟಪದಲ್ಲಿ ಶಿವಲಿಂಗಗಳು ಮತ್ತು ನಂದಿಶಿಲ್ಪ ಕಲಾಕೃತಿಗಳಿವೆ. ದೇವಾಲಯದ ಹಿಂಬದಿ ಭ್ರಮರಾಂಬಿಕಾ ಗುಡಿ ಇದೆ. ದೇವಸ್ಥಾನದ ಸುತ್ತಲೂ ವಿಶಾಲವಾದ ಒಳಾಂಗಣ ಇದ್ದು ಇಲ್ಲಿ ಗಣಪತಿ, ಹಿರಿಯೊಡೆಯ ಮಳೆ ಸಂಗಪ್ಪ, ನರಸಿಂಹ ಮತ್ತು ಭನಶಂಕರಿಯ ಚಿಕ್ಕ ಚಿಕ್ಕ ಗುಡಿಗಳಿವೆ. ಒಳ ಗೋಡೆಗೆ ಹೊಂದಿಕೊಂಡಂತೆ ಪಾರ್ವತಿ, ಭೈರವ, ನಾಗ ನಾಗಿಣಿ ಮೊದಲಾದ ವಿಜಯನಗರೋತ್ತರ…

Read More

ಸಿಂದಗಿ: ಭಗವಂತನ ಸೇವೆಯನ್ನು ನಿಸ್ವಾರ್ಥ ಭಾವದಿಂದ ಮಾಡಿದಾಗ ಮಾತ್ರ ಆ ದೇವರು ಒಳ್ಳೆಯ ಮಾರ್ಗ ತೋರುತ್ತಾನೆ ಎಂದು ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ ಹೇಳಿದರು.ಭಾನುವಾರದಂದು ಪಟ್ಟಣದ ಬಸ್‌ಡಿಪೋ ಬಳಿಯಿರುವ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದಲ್ಲಿ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ೨೮ನೆಯ ಜಾತ್ರಾ ಮಹೋತ್ಸವ-ಧರ್ಮಸಭೆ ಕಾರ್ಯಕ್ರಮ ಹಾಗೂ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಪುರಾಣ ಪ್ರವಚನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾನವ ಆದ್ಯಾತ್ಮಿಕ ಜ್ಞಾನವನ್ನು ರೂಢಿಸಿಕೊಳ್ಳಬೇಕು. ತಿಳುವಳಿಕೆಗಾಗಿ ಇಂತಹ ಪುರಾಣ ಪ್ರವಚನ ಸಂತ್ಸಂಗಗಳನ್ನು ಆಲಿಸಬೇಕು. ಈ ಮಾನವ ಜನ್ಮ ಬಲು ದೊಡ್ಡದು ಮತ್ತು ಅಪೂರ್ವವಾಗಿದೆ. ಶರಣರ, ಸಂತರ, ಮಹಾಂತರ ಜೀವನ ಚರಿತ್ರೆಗಳನ್ನು ಅರಿತುಕೊಂಡು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದರು.ಈ ವೇಳೆ ಕಾರ್ಯಕ್ರಮದ ಅತಿಥಿ ಸ್ಥಾನವನ್ನು ಅಲಂಕರಿಸಿದ ಡಾ.ವಿಜಯಕುಮಾರ ವಾರದ ಮಾತನಾಡಿದರು.ಇದೇ ಸಂದರ್ಭದಲ್ಲಿ ಮಾದನ ಹಿಪ್ಪರಗಾ ಶ್ರೀಮಠದ ಶಾಂತವೀರ ಶಿವಾಚಾರ್ಯರು ಆಶೀರ್ವದಿಸಿದರು. ಸಾನಿಧ್ಯವನ್ನು ನಾಲವಾರ ಶ್ರೀಮಠದ ಶಿವಯೋಗಿ ಡಾ.ಚಂದ್ರಶೇಖರ ಸ್ವಾಮಿಗಳು ವಹಿಸಿದ್ದರು. ಕಾರ್ಯಕ್ರಮದ ನೇತೃತ್ವವನ್ನು ಸಿಂದಗಿ ಆದಿಶೇಷ ಶ್ರೀಮಠದ ನಾಗರತ್ನ ರಾಜಯೋಗಿ…

Read More

ಆಲಮೇಲ: ತಾಲ್ಲೂಕಿನ ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆಯು ಪ್ರತಿವರ್ಷ ನೀಡುವ ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿಯನ್ನು ಪ್ರಸಕ್ತ ಸಾಲಿನಲ್ಲಿ ಧಾರವಾಡದ ಹಿರಿಯ ಸಾಹಿತಿ ಡಾ. ಸಂಗಮನಾಥ ಲೋಕಾಪುರ ಅವರಿಗೆ ನೀಡಲು ನಿರ್ಧರಿಸಿದೆ ಎಂದು ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಆರ್. ಕತ್ತಿ ತಿಳಿಸಿದ್ದಾರೆ.ಪ್ರಶಸ್ತಿಯು ಹತ್ತು ಸಾವಿರ ರೂ.ಗಳ ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಫಲಕ ಒಳಗೊಂಡಿದ್ದು ಇದೇ ತಿಂಗಳು ೩೦ ರಂದು ಕಡಣಿಯಲ್ಲಿ ನಡೆಯುವ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳ ಸಂಸ್ಮರಣಾರ್ಥ ಹಮ್ಮಿಕೊಂಡಿರುವ ೩೦ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.ಸಿಂದಗಿಯ ಸಿ.ಎಂ.ಮನಗೂಳಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಳೆದ ವರ್ಷ ನಿವೃತ್ತಿಯಾಗಿರುವ ಡಾ. ಸಂಗಮನಾಥ ಲೋಕಾಪೂರ ಅವರು ನಾಡಿನ ಹಿರಿಯ ತಲೆಮಾರಿನ ಶ್ರೇಷ್ಠ ಕತೆಗಾರರು, ಕತೆ, ವಿಮರ್ಶೆ, ಸಂಶೋಧನೆಗಳಲ್ಲಿ ಸದಾ ತಮ್ಮನ್ನು ತೊಡಗಿಸಿಕೊಂಡಿರುವ ಅವರನ್ನು ಅವರ ಒಟ್ಟು ಜೀವಮಾನದ ಸಾಹಿತ್ಯಕ್ಕಾಗಿ ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿ ನೀಡಲಾಗಿದೆ ಎಂದು ಆಯ್ಕೆ ಸಮಿತಿಯ ಡಾ. ರಮೇಶ ಕತ್ತಿ ತಿಳಿಸಿದ್ದಾರೆ. ಕಳೆದ ವರ್ಷ…

Read More

– ಮಂಡ್ಯ ಮ.ನಾ.ಉಡುಪ ರೈತನೊಬ್ಬ ದೊಡ್ಡದಾದ ಗೂಳಿಯೊಂದನ್ನು ಸಾಕಿದ್ದ. ಅದು ನೋಡಲು ಬೃಹದಾಕಾರವಾಗಿತ್ತು. ನೋಡಿದವರು ಅದರ ದೇಹ ನೋಡಿ ಭಯಪಡುವ ರೀತಿಯಲ್ಲಿತ್ತು. ನೋಡಲು ಮಾತ್ರ ಭಯಂಕರವಾಗಿದ್ದ ಗೂಳಿ ತುಂಬಾ ಸಾಧು ಸ್ವಭಾವದ್ದಾಗಿತ್ತು.ರೈತ ತನ್ನ ಜಮೀನಿನ ಕೆಲಸ-ಕಾರ್ಯಗಳಿಗೆ ಈ ಗೂಳಿಯನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿದ್ದ. ಗೂಳಿಯೂ ಸಹ ರೈತನ ಜೊತೆಗೆ ಯಾವುದೇ ಮೈಗಳ್ಳತನ ಮಾಡದೇ ಪ್ರಾಮಾಣಿಕವಾಗಿ ದುಡಿಯುತ್ತಿತ್ತು.ಅದೊಂದು ಮದ್ಯಾಹ್ನದ ಸಮಯದಲ್ಲಿ ಗೂಳಿಯನ್ನು ರೈತನು ವಿಶ್ರಾಂತಿಗಾಗಿ ಕೊಟ್ಟಿಗೆಯಲ್ಲಿ ಕಟ್ಟಿದ್ದ. ನೊಣವೊಂದು ಗೂಳಿಯ ಕೊಂಬಿನ ಮೇಲೆ ಬಂದು ಕುಳಿತಿತು. ಸ್ವಲ್ಪ ಸಮಯದ ನಂತರ ನೊಣವು ಹಾರಿಬಂದು ಗೂಳಿಯ ಎದುರಿಗೆ ಬಂದು ಹೇಳಿತು” ನನ್ನ ಕ್ಷಮಿಸು. ನನಗೆ ತಿಳಿಯದೇ ನಿನ್ನ ಕೊಂಬಿನ ಮೇಲೆ ಬಂದು ಕುಳಿತೆ. ಆಮೇಲೆ ತಿಳಿಯಿತು. ನನ್ನ ದೇಹದ ಭಾರದಿಂದಾಗಿ ನಿನಗೆ ನೋವಾಗುತಿದೆಯೆಂದು … “ಅದಕ್ಕೆ ಗೂಳಿ ನಗುತ್ತಾ ಹೇಳಿತು” ಮಿತ್ರಾ ನಿನ್ನಿಂದ ನನಗಾವ ನೋವಾಗಲಿ, ಭಾರವಾಗಲಿ ಆಗಿಲ್ಲ. ವಾಸ್ತವವಾಗಿ ಹೇಳಬೇಕೆಂದರೆ ನೀನು ನನ್ನ ಕೊಂಬಿನ ಮೇಲೆ ಕುಳಿತುಕೊಂಡ ವಿಚಾರ ನೀ ಹೇಳಿದ ಮೇಲೆ ನನಗೆ…

Read More

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರತಿಜ್ಞೆ! ಬೆಂಗಳೂರು: ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಮತ್ತೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿಯಿಂದ ಮಾತ್ರ ಕಾವೇರಿ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡರು, ತಮ್ಮ ಕೊನೆಯ ಉಸಿರು ಇರುವವರೆಗೂ ಕಾವೇರಿ ನೀರಿಗಾಗಿ ಹೋರಾಟ ಮಾಡುವುದಾಗಿ ಪ್ರತಿಜ್ಞೆ ಮಾಡಿದರು.ಕರ್ನಾಟಕ ಎದುರಿಸುತ್ತಿರುವ ಕಾವೇರಿ ನೀರಿನ ಸಮಸ್ಯೆ ಬಗೆಹರಿಸುವ ಶಕ್ತಿ ಮೋದಿಗೆ ಮಾತ್ರ ಇದೆ ಎಂದರು.ಕಾವೇರಿ ನೀರು ಬಿಡುವಂತೆ ಪ್ರತಿ ವರ್ಷ ತಮಿಳುನಾಡು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುತ್ತದೆ. ನಮಗೆ ನೀರಿಲ್ಲದಿದ್ದರೂ,ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀರು ಕೊಡಿ ಎಂದು ಹೇಳುತ್ತಾರೆ, ನಮ್ಮ ಅಧಿಕಾರಿಗಳು ಎಷ್ಟೇ ವಾದಿಸಿದರೂ ಪ್ರಯೋಜನವಾಗಿಲ್ಲ. ಕಾವೇರಿ ಜಲಾಶಯಗಳಲ್ಲಿ ಎಷ್ಟು ನೀರಿದೆ ಎಂಬುದನ್ನು ನೋಡಲು ಸಿಡಬ್ಲ್ಯುಎಂಎ ಕರ್ನಾಟಕಕ್ಕೆ ಭೇಟಿ ನೀಡಿಲ್ಲ. ಮತ್ತೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿ ಅವರಿಂದ ಮಾತ್ರ ಕಾವೇರಿ ಸಮಸ್ಯೆ ಬಗೆಹರಿಸಲು ಸಾಧ್ಯ…

Read More

ಕಲಕೇರಿ: ಜ.22 ರಂದು ಮರ್ಯಾದಾ ಪುರುಷೋತ್ತಮ, ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರ ಬಾಲರಾಮ ಮೂರ್ತಿ ಪ್ರತಿಷ್ಠಾನ ಹಿನ್ನೆಲೆಯಲ್ಲಿ ಶ್ರೀರಾಮರಕ್ಷೆ ಮಂತ್ರಾಕ್ಷತೆ ಪ್ರತಿ ಮನೆ ಮನೆಗೆ ತಲುಪಿಸಲು ಪರಮ ರಾಮ ಭಕ್ತ ಹನುಮನ ದಿನ ಶನಿವಾರ ಸಕಲ ವೈಭವದೊಂದಿಗೆ ಪುರ ಪ್ರವೇಶಕ್ಕೆ ಸ್ವಾಗತ ಮಾಡಿಕೊಳ್ಳಲಾಯಿತು.ಗ್ರಾಮದ ಶ್ರೀ ಯಲ್ಲಾಲಿಂಗ ಮಠದಿಂದ ಶ್ರೀ ಗುರು ವೀರಘಂಟೈ ಮಡಿವಾಳೇಶ್ವರ ದೇವಸ್ಥಾನದವರೆಗೆ ಡೊಳ್ಳು ವಾದ್ಯ ಭಾಜಾ ಭಜಂತ್ರಿ ಮೆರವಣಿಗೆಯೊಂದಿಗೆ ಗ್ರಾಮದ ಹಿರೇಮಠದ ಸಿದ್ಧರಾಮ ಶಿವಾಚಾರ್ಯರು ಮತ್ತು ಗದ್ದುಗಿಮಠದ ಮಡಿವಾಳೇಶ್ವರ ಶಿವಾಚಾರ್ಯರ ಸಮ್ಮುಖದಲ್ಲಿ ಶ್ರೀರಾಮ ಭಕ್ತರು, ಯುವ ಸಮೂಹ ರಾಮನಾಮವನ್ನು ಪಠಿಸುತ್ತಾ ಜಯಘೋಷಗಳೊಂದಿಗೆ ಭಕ್ತಿಪೂರ್ವಕವಾಗಿ ಸ್ವಾಗತ ಮಾಡಿಕೊಂಡರು.ಈ ವೇಳೆ ಶ್ರೀರಾಮ, ಲಕ್ಷ್ಮಣ, ಸೀತೆ ಮತ್ತು ಹನುಮನ ವೇಷಧರಿಸಿದ ಮುದ್ದು ಮಕ್ಕಳು ಎಲ್ಲರ ಗಮನ ಸೆಳೆದರು

Read More

ತಿಕೋಟಾ: ಜನೆವರಿ 22ಕ್ಕೆ ನಡೆಯುವ ಆಯೋಧ್ಯೇಯ ಶ್ರೀರಾಮಚಂದ್ರನ ರಾಮಲಲ್ಲಾ ಮೂರ್ತಿ ಪ್ರತಿಷ್ಟಾಪನೆ ಹಾಗೂ ದೇವಾಲಯದ ಉದ್ಘಾಟನೆಯು ಅಖಂಡ ಭಾರತದ ಸನಾತನ ಸಂಸ್ಕೃತಿಗೆ ಸಂದ ಜಯ. ರಾಮನ ಆದರ್ಶ, ರಾಮನ ತತ್ವಗಳು ದೇಶಕ್ಕಷ್ಟೇ ಅಲ್ಲದೇ ವಿಶ್ವಕ್ಕೂ ಆದರ್ಶಪ್ರಾಯವಾಗಿದೆ ಎಂದು ಪ್ರವಚಕಾರ ಬಾಬುರಾವ್ ಮಹಾರಾಜರು ಹೇಳಿದರು.ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದಲ್ಲಿ ಜರುಗಿದ ಪ್ರಭು ಶ್ರೀ ರಾಮಚಂದ್ರನ ಬೃಹತ್ ಶೋಭಾಯಾತ್ರೆಯಲ್ಲಿ ಅವರು ಮಾತನಾಡಿದರು.ರಾಮ ವಿಷ್ಣುವಿನ ಏಳನೇ ಅವತಾರ ಎಂದು ಪೂಜಿಸುತ್ತಾರೆ. ರಾಮಮಂದಿರದ ಬಾಗಿಲು ತೆರೆಯುವ ದಿನಕ್ಕಾಗಿ ಭಕ್ತರು ಕಾಯುತ್ತಿದ್ದು, ಶೀಘ್ರದಲ್ಲಿ ದೇಗುಲ ಭಕ್ತರ ಪ್ರವೇಶಕ್ಕೆ ತೆರೆಯಲಿದೆ. ರಾಮ ಮಂದಿರವು ರಾಷ್ಟ್ರೀಯ ದೇವಾಲಯವಾಗಬೇಕು. ಯುವಕರು ಕಾಶಿಯೊಂದಿಗೆ ಅಯೋಧ್ಯೆಯ ದರ್ಶನವನ್ನೂ ಮಾಡಬೇಕು ಎಂದು ನಿವೃತ್ತ ಉಪನ್ಯಾಸಕ ರೇ ಸಿ ಪಾಟೀಲ ಹೇಳಿದರು.ಈ ಸಂದರ್ಭದಲ್ಲಿ ಲಿಂಗರಾಜ ಪಾಟೀಲ, ಅರವಿಂದ್ ಮಾಲಗಾರ, ತುಕಾರಾಮ ನಲವಡೆ, ರಾಜಕುಮಾರ ತಿವಾರಿ, ಮೊನೇಶ್ ಪತ್ತಾರ, ಗಣೇಶ ಗುಗ್ಗರಿ, ಧರೆಪ್ಪ ಹೆಚ್ ಡಿ, ಸುರೇಶ ನರಳೆ, ಸಂಜು ಯಚ್ಚಿ, ಗೋವಿಂದ ರಜಪೂತ, ಶ್ರೀಶೈಲ ಕೊರಬು, ಮಹಾಂತೇಶ ಮಾಲಗಾರ…

Read More

ಶ್ರೀ ಶಿವದಾಸಿಮಯ್ಯ ಜಯಂತ್ಯೋತ್ಸವ | ಪ್ರತಿಭಾ ಪುರಸ್ಕಾರ | ದಾನಿಗಳಿಗೆ ಸನ್ಮಾನ ವಿಜಯಪುರ: ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಸಮಾಜಕ್ಕೆ ಒಳಿತನ್ನು ಮಾಡುವ ಮನೋಭಾವನೆ ಉಳ್ಳವರಾಗಬೇಕೆಂದು ಬೆಳ್ಳರೆ ಬಸವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.ಶಿವಸಿಂಪಿ ಸಮಾಜ ಕಲ್ಯಾಣ ಸಂಘ (ರಿ) ವಿಜಯಪುರ ಇವರು ಹಮ್ಮಿಕೊಂಡಿರುವ ಶ್ರೀ ಶಿವದಾಸಿಮಯ್ಯ ಜಯಂತ್ಯೋತ್ಸವ ೨೦೨೨-೨೩ರ ಪ್ರತಿಭಾ ಪುರಸ್ಕಾರ ಹಾಗೂ ದಾನಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಅಮೃತಾನಂದ ಮಹಾಸ್ವಾಮಿಗಳು ಗುರುದೇವ ಆಶ್ರಮ ಕಾತ್ರಾಳ ಬಾಲಗಾಂವ ಮತ್ತು ಸಿದ್ದರಾಮೇಶ್ವರ ಪಟ್ಟದ ದೇವರು ಬೋಳಚಿಂಚೋಳಿ ಇವರು ಸಾನಿಧ್ಯ ವಹಿಸಿದ್ದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಬಸನಗೌಡ ಆರ್ ಪಾಟೀಲ (ಯತ್ನಾಳ) ಅವರು, ಸಮಾಜ ಪ್ರಗತಿಯತ್ತ ಸಾಗಲು ಆಡಳಿತ ಮಂಡಳಿಯ ಪ್ರಾಮಾಣಿಕ, ಕ್ರಿಯಾಶೀಲತೆ ಹಾಗೂ ಉತ್ತಮ ಹಿನ್ನೆಲೆ ಕಾರಣ. ಆಡಳಿತ ಮಂಡಳಿ ಉತ್ತಮವಾಗಿದ್ದರೆ ಸಮಾಜದಿಂದ ಮತ್ತು ಜನ ಪ್ರತಿನಿಧಿಗಳಿಂದ ದೇಣಿಗೆ ಸಹಾಯ ಸಹಕಾರ ದೊರೆಯುತ್ತದೆ ಎಂದು ತಿಳಿಸಿ, ಸಮಾಜದಲ್ಲಿರುವ ಎಲ್ಲ ಜನರು ತಮ್ಮ ದುಡಿಮೆಯ ಸ್ವಲ್ಪ ಭಾಗವನ್ನು ಸಮಾಜದ ಅಭಿವೃದ್ಧಿಗೆ ಮೀಸಲಾಗಿಡಬೇಕೆಂದು ತಿಳಿಸಿದರಲ್ಲದೆ,…

Read More