Author: editor.udayarashmi@gmail.com

ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳು ಜಾರಿಗೆ :ಸಿಎಂ ಸಿದ್ದರಾಮಯ್ಯ ಬೆಂಗಳೂರು: ಚುನಾವಣಾ ಪೂರ್ವ ನೀಡಿದ್ದ ಗ್ಯಾರಂಟಿಗಳ ಪೈಕಿ ಐದನೇ ಗ್ಯಾರಂಟಿ ‘ಯುವನಿಧಿ ಯೋಜನೆ’ಗೆ ಶುಕ್ರವಾರ (ಜ.12) ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.ಶಿವಮೊಗ್ಗ ನಗರ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯದ ವಿವಿದಡೆಗಳಿಂದ ಆಗಮಿಸಿದ್ದ 15 ಮಂದಿ ಯುವ ಜನರಿಗೆ ಸಾಂಕೇತಿಕವಾಗಿ ನಿರುದ್ಯೋಗ ಭತ್ಯೆಯ ಚೆಕ್ ನೀಡುವ ಮೂಲಕ ಸಿಎಂ ಯೋಜನೆಯನ್ನು ಉದ್ಘಾಟಿಸಿದರು.ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್, ಮಧು ಬಂಗಾರಪ್ಪ, ಬಿ.ನಾಗೇಂದ್ರ, ಮಂಕಾಳ್ ವೈದ್ಯ ಸೇರಿದಂತೆ ಪ್ರಮುಖರು ಹಾಜರಿದ್ದರು.ಕಾರ್ಯಕ್ರಮದ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, “ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಅವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ ಎಂದಿದ್ದಾರೆ.“ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು…

Read More

ಮುದ್ದೇಬಿಹಾಳ: ತಾಲ್ಲೂಕಿನ ಢವಳಗಿ ಗ್ರಾಮದ ಬಸವ ಬಾಲ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 161 ನೇ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.ಇದೇ ವೇಳೆಯಲ್ಲಿ ಶಾಲೆಯ ಮುಖ್ಯ ಗುರುಗಳಾದ ರಮೇಶ ಮೂಲಿಮನಿ, ಜೆ ಎಸ್ ಪಾಟೀಲ, ಬಿ ಎಸ್ ಪಾಟೀಲ, ಎಸ್ ಬಿ ಬಿರಾದಾರ, ಎಸ್ ಎಸ್ ಅವಟಿ,ಹರಿನಾಥ ಎನ್ ಹಾಗೂ ಅತಿಥಿ ಶಿಕ್ಷಕರಾದ ಪರಶುರಾಮ ಮೂಲಿಮನಿ, ಹಾಗೂ ಬಿಬಿ ಫಾತಿಮಾ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಇದ್ದರು.

Read More

ತಿಕೋಟಾ: ಸ್ವಾಮಿ ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೇ ಪ್ರಪಂಚದ ಇತರೆ ದೇಶಗಳಿಗೂ ಸಹ ಅವರ ತತ್ವಗಳು, ಬದುಕಿದ ಹಾದಿ, ಯುವ ಜನತೆಗೆ ನೀಡಿದ ಸ್ಫೂರ್ತಿಯ ಕರೆಗಳಿಂದ ಅವರು ಇಂದಿಗೂ ಎಂದೆಂದಿಗೂ ಪ್ರಪಂಚದ ಆಧ್ಯಾತ್ಮಿಕ ಗುರು ಎಂದು ಹಿರಿಯ ಉಪನ್ಯಾಸಕ ಎಸ್ ಜಿ ಲಕ್ಕುಂಡಿಮಠ ಹೇಳಿದರು.ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ ವಿ ವಿ ಎಸ್ ಕಾಲೇಜ್ (ಹೈಸ್ಕೂಲ್)ನಲ್ಲಿ ಶುಕ್ರವಾರ ಸ್ವಾಮಿ ವಿವೇಕಾನಂದರ 161ನೇ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.ವಿವೇಕಾನಂದರ ಕೊನೆಯ ಮೂರು ಭವಿಷ್ಯವಾಣಿಗಳಲ್ಲಿ ಎರಡು ನಿಜವಾಗಿದ್ದು, ಕೊನೆಯ ಭವಿಷ್ಯವಾಣಿಯಾದ ಭಾರತ ವಿಶ್ವಗುರು ಆಗುವಲ್ಲಿ ದೇಶದ ಪ್ರತಿಯೊಬ್ಬರೂ ಶ್ರಮಿಸುವ ಸಂಕಲ್ಪ ಮಾಡಬೇಕೆಂದು ಆರ್ ಜಿ ಹಾಜೀವಗೋಳ ಹೇಳಿದರು.ಭಾರತದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಎಂದೂ ಕರೆಯಲ್ಪಡುವ ರಾಷ್ಟ್ರೀಯ ಯುವ ದಿನವು ದೇಶದ ಯುವ ಜನತೆಯ ಚೈತನ್ಯ, ಸಾಮರ್ಥ್ಯ ಮತ್ತು ಆಕಾಂಕ್ಷೆಗಳೊಂದಿಗೆ ಪ್ರತಿಧ್ವನಿಸುವ ಆಚರಣೆಯಾಗಿದೆ. ಸಮಾಜಕ್ಕೆ ಸಕಾರಾತ್ಮಕವಾಗಿ ಕೊಡುಗೆ ನೀಡಲು, ಏಕತೆಯನ್ನು ಬೆಳೆಸಲು ಮತ್ತು ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರತಿ ಯುವ ಮನಸ್ಸಿನಲ್ಲಿರುವ ಸಾಮರ್ಥ್ಯವನ್ನು ಈ…

Read More

ವಿಜಯಪುರ: ತಾಲ್ಲೂಕಿನ ನಾಗಠಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಶ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಿದ “ಅಡುಗೆ ಕೋಣೆ”ಯನ್ನು ಶುಕ್ರವಾರ ವಿಜಯಪುರ ತಾಲೂಕಾ ಪಂಚಾಯತ್ ಸಹಾಯಕ ನಿರ್ದೇಶಕರಾದ ಕಾಸಿಂಮಸಾಬ ಮಸಳಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ನರೇಗಾ ಯೋಜನೆಯು ಗ್ರಾಮೀಣ ಜನರಿಗೆ ೩೧೬ ರೂ ಕೂಲಿ ಜೊತೆಗೆ ೧೦೦ ದಿನಗಳ ಉದ್ಯೋಗ ಖಾತರಿ ನೀಡುವವರ ಜೊತೆಗೆ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸಹ ನೆರವು ನೀಡುತ್ತಿದೆ. ಸರಕಾರಿ ಪ್ರಾರ್ಥಮಿಕ & ಪ್ರೌಢಶಾಲೆಗಳಲ್ಲು ಶಾಲಾ ಆಟದ ಮೈದಾನ, ಶೌಚಾಲಯ, ಕಂಪೌಂಡ ಗೋಡೆ, ಅಡುಗೆ ಕೋಣೆಯಂತಹ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಗ್ರಾಮ ಪಂಚಾಯತಿ ಅಧಿಕಾರಿಗಳು, ಸದಸ್ಯರುಗಳು ಮತ್ತು ಶಾಲಾ ಶಿಕ್ಷಕರು ಸಮನ್ವಯತೆಯಿಂದ ಈ ಮೇಲಿನ ಕಾಮಗಾರಿಗಳನ್ನು ಪಡೆದುಕೊಂಡು ಶಾಲೆಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಬಸಪ್ಪ ಹಳ್ಳಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಆರ್.ರಾಠೋಡ್, ತಾಲೂಕು ತಾಂತ್ರಿಕ ಸಂಯೋಜಕ…

Read More

ಜ.೧೩ ರಿಂದ ನಡೆಯುವ ಪ್ರದರ್ಶನ | ಉತ್ತಮ ಕೈತೋಟ, ತಾರಸಿತೋಟ ಪ್ರದರ್ಶನಕ್ಕೆ ಬಹುಮಾನ ವಿಜಯಪುರ: ನಗರದ ತೋಟಗಾರಿಕೆ ಇಲಾಖೆಯ ಆವರಣದ ಬಸವವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ, ವಿಜಯಪುರ ಜಿಲ್ಲಾ ತೋಟಗಾರಿಕೆ ಸಂಘ (ರಿ), ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ, ಇಂಡಿ ಹಾಗೂ ಜಿಲ್ಲಾ ಹಾಪ್‌ಕಾಮ್ಸ್ ವಿಜಯಪುರ ಇವರ ಸಹಯೋದಲ್ಲಿ, ಜನವರಿ ೧೩ರಿಂದ ೧೫ರವರೆಗೆ ಮೂರು ದಿನಗಳ ಕಾಲ ಫಲ-ಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನ ಕಾರ್ಯಕ್ರಮ ನಡೆಯಲಿದೆ ಎಂದು ತೋಟಗಾರಿಕೆ ಉಪನಿರ್ದೇಶಕ ರಾಹುಲ ಬಾಗಲದೊಡ್ಡಿ ತಿಳಿಸಿದ್ದಾರೆ.ವಿವಿಧ ಬಗೆಯ ಸಿರಿಧಾನ್ಯಗಳನ್ನು ಹಾಗೂ ವಿವಿಧ ಬಣ್ಣ-ಬಣ್ಣದ ಹೂಗಳನ್ನು ಬಳಸಿ ಶ್ರೀ ಸಿದ್ದೇಶ್ವರ ಶ್ರೀಗಳ ಪ್ರತಿಕೃತಿ ನಿರ್ಮಿಸಿ, ಶತಮಾನದ ಸಂತ ಶ್ರೀ ಸಿದ್ದೇಶ್ವರ ಶ್ರೀಗಳಿಗೆ ನಮನ ಸಲ್ಲಿಸಲಾಗುತ್ತಿದೆ.ಅದರಂತೆ ಗಣಪತಿ, ನವಿಲು, ಪ್ರಾಣಿಗಳ ಆಕೃತಿಯ ಕಲಾಕೃತಿಯ ಪ್ರದರ್ಶನವೂ ಸಹ ನಡೆಯಲಿದೆ. ಈ ತೋಟಗಾರಿಕೆ ಅಭಿಯಾನದಲ್ಲಿ ಐತಿಹಾಸಿಕ ಚಂದ್ರಯಾನ-೩ರ ಯಶೋಗಾಥೆಯನ್ನು ಸಾರುವ ನಿಟ್ಟಿನಲ್ಲಿ ಫಲ-ಪುಷ್ಪಗಳಿಂದ ವಿಕ್ರಮ್ ಲ್ಯಾಂಡರ್‌ನ ಮಾದರಿಗಳನ್ನು ಸಿದ್ಧಪಡಿಸಲಾಗುತ್ತಿದೆ. ಶಾಲಾ ಮಕ್ಕಳಿಗೆ ತರಬೇತಿ: ಈ…

Read More

ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಮುದ್ದೇಬಿಹಾಳ, ತಾಳಿಕೋಟೆ, ಢವಳಗಿ ಮತ್ತು ನಾಲತ್ವಾಡ ಹೋಬಳಿಯ ರೈತರಿಗೆ ಜ.೧೬ ರಿಂದ ೧೯ರವರೆಗೆ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸೂಕ್ಷö್ಮ ನೀರಾವರಿ ಘಟಕಗಳ ಉಪಯೋಗಗಳು ಮತ್ತು ನಿರ್ವಹಣೆ ಕುರಿತು ತರಬೇತಿ ಆಯೋಜಿಸಲಾಗಿದೆ.ಜನವರಿ ೧೬, ೧೭,೧೮ ಹಾಗೂ ೧೯ ರಂದು ಕ್ರಮವಾಗಿ ನಾಲ್ಕು ದಿನಗಳ ಕಾಲ ತರಬೇತಿ ಆಯೋಜಿಸಲಾಗಿದ್ದು, ಆಸಕ್ತ ರೈತರು ಭಾಗವಹಿಸಿ ತರಬೇತಿ ಸದುಪಯೋಗ ಪಡೆದುಕೊಳ್ಳಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಶ್ರೀಮತಿ ಫಾತಿಮಾ ಬಾನು ಸುತಾರ ಮೊ: ೯೮೮೬೧೩೪೩೧೦ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ನಗರದ ವಿವಿಧ ಪ್ರದೇಶಗಳಲ್ಲಿ ನಡೆಯುತ್ತಿರುವ ಕಾಮಗಾರಿ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಪಾಲಿಕೆಯ ವ್ಯಾಪ್ತಿಯ ಇಂಡಿ ರಸ್ತೆಯಲ್ಲಿರುವ ಕಸ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡಿ ಕಸ ಪ್ರತ್ಯೇಕಿಸುವ ಯಂತ್ರದ ಅಳವಡಿಕೆಯ ಕಾಮಗಾರಿ ಆದಷ್ಟು ಬೇಗನೆ ಯಂತ್ರದ ಅಳವಡಿಕೆ ಕೆಲಸ ಪೂರ್ಣಗೊಳಿಸಬೇಕು ಹಾಗೂ ಈ ಸ್ಥಳದಲ್ಲಿರುವ ಘನ ತ್ಯಾಜ್ಯ ಕೂಡಲೇ ವಿಲೇವಾರಿ ಮಾಡಲು ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸುವಂತೆಯೂ, ಮತ್ತು ಸುತ್ತಮುತ್ತಲಿನ ಗಿಡ ಮರಗಳಿಗೆ ಬೇಸಿಗೆ ಕಾಲದಲ್ಲಿ ಸರಿಯಾಗಿ ನೀರು ಒದಗಿಸಿ ಪರಿಸರ ಕಾಳಜಿವಹಿಸಬೇಕು ಎಂದು ಪಾಲಿಕೆ ಪರಿಸರ ಅಭಿಯಂತರರಾದ ಅಶೋಕ ಸಜ್ಜನ ಅವರಿಗೆ ಸೂಚಿಸಿದರು.ಹಂಚನಾಳ ತಾಂಡಾ ಹತ್ತಿರ ಇರುವ ಕೆರೆಗೆ ಭೇಟಿ ನೀಡಿ, ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದಂತೆ, ಕೆರೆಯ ನೀರಿಗೆ ಕೆಮಿಕಲ್ ಟ್ರೀಟ್‌ಮೆಂಟ್ ಮಾಡಬೇಕು ಹಾಗೂ ಒಳಚರಂಡಿ ನೀರು ವೈಜ್ಞಾನಿಕವಾಗಿ ಸ್ವಚ್ಚಗೊಳಿಸುವ ಬಗ್ಗೆ ಕ್ರಮವಹಿಸಲು ಪಾಲಿಕೆ ಆಯುಕ್ತರಿಗೆ ಸೂಚಿಸಿದರು.ಬರಟಗಿ ತಾಂಡಾ ಹತ್ತಿರ ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆ ಅಡಿಯಲ್ಲಿ ನಿರ್ಮಾಣ ಹಂತದ ಕಟ್ಟಡ…

Read More

ಕಲಕೇರಿ: ಸಿಡಿಲ ಮರಿ, ವೀರ ಸನ್ಯಾಸಿ, ಸಂತ ಶ್ರೇಷ್ಟರಾದ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಇಂದಿನ ಯುವಕರು ಮೈಗೂಡಿಸಿಕೊಂಡು ಸಮರ್ಥ ಜೀವನ ಕಟ್ಟಿಕೊಳ್ಳುವುದರ ಜೊತೆಗೆ ಸುಭದ್ರ ರಾಷ್ಟ್ರ ನಿರ್ಮಾಣ ತಮ್ಮ ಗುರಿಯಾಗಿಸಿಕೊಳ್ಳಬೇಕೆಂದು ಪ್ರಾಚಾರ್ಯ ಎಸ್ ಎಮ್ ಸಜ್ಜನ ಹೇಳಿದರು.ಗ್ರಾಮದ ಆದರ್ಶ ಪ್ರಥಮ ದರ್ಜೆ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿ ಕಲ್ಯಾಣ ಘಟಕದ ಅಡಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಇಂದಿನ ಯುವಕರು ಶಿಕ್ಷಣದ ಜೊತೆಗೆ ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ಉದಾತ್ತವಾದ ವಿಚಾರಧಾರೆಗಳನ್ನು ಅವಲೋಕಿಸಿ ವೈಚಾರಿಕತೆ ಮತ್ತು ವೈಜ್ಞಾನಿಕ ದೃಷ್ಟಿಕೋನದ ಸಮಾಜ ನಿರ್ಮಿಸಲು ಮುಂದಾಗಬೇಕಿದೆ ಎಂದು ಹೇಳಿದರು.ಈ ವೇಳೆ ಉಪನ್ಯಾಸಕರಾದ ಪ್ರವೀಣ ಪಾಕಿ, ಯುವಪ್ರತಿನಿಧಿ ಕುಮಾರಿ ವಿದ್ಯಾಶ್ರೀ ಬಿರಾದಾರ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪ್ರೊ.ಆಬಿದಅಲಿ ಸಾಲೋಡಗಿ, ವಿದ್ಯಾರ್ಥಿ ಕಲ್ಯಾಣ ಘಟಕದ ಸಂಯೋಜಕರಾದ ಪ್ರೊ.ಶ್ರೀದೇವಿ ಹೂಲಿ, ಪ್ರೊ.ರುಕ್ಷಾನಾಬೇಗಂ ಬೇಪಾರಿ, ಪ್ರೊ.ಮಲ್ಲಿಕಾರ್ಜುನ ಸಜ್ಜನ, ಪ್ರೊ.ಸಂಗೀತಾ ಟೆಂಗಳಿ, ಪ್ರೊ.ಝರೀನಾ ಕುಕನೂರ, ಪ್ರೊ.ಮಹಾಂತೇಶ ಲಂಗೋಟಿ, ಪ್ರೊ.ಹುಸೇನಬಾಶಾ ಹಿಪ್ಪರಗಿ, ಪ್ರೊ.ಸವಿತಾ…

Read More

ಆಲಮೇಲ: ಪಟ್ಟಣದಲ್ಲಿ ಸಾಂಪ್ರದಾಯಿಕವಾಗಿ ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯದಂತೆ ಎಳ್ಳ ಅಮಾವಾಸ್ಯೆ ಚರಗ ಚಲ್ಲುವ ಹಬ್ಬವನ್ನು ಸಡಗರದಿಂದ ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಸಂಭ್ರಮದಿಂದ ಗುರುವಾರ ಆಚರಿಸಲಾಯಿತು.ರೈತರು ತಾವು ನಂಬಿರುವ ಮಣ್ಣನ್ನು ದೈವಭಾವದಿಂದ ಪೂಜಿಸುವ ಆಚರಣೆ ಇದಾಗಿದೆ. ಶ್ರಮಕ್ಕೆ ತಕ್ಕಂತೆ ಉತ್ತಮ ಫಸಲನ್ನು ಕೊಡುವ ಭೂಮಿ ತಾಯಿಯನ್ನು ಪೂಜಿಸಿ, ಹೊಲದ ತುಂಬೆಲ್ಲಾ ಚೀಲಗಳು ತುಂಬಿ ಹೊರಗೆ ಚೆಲ್ಲುವಷ್ಟು ಬೆಳೆ ನೀಡಲಿ ಎಂದು ಗ್ರಾಮೀಣ ಭಾಗಗಳಲ್ಲಿ ಆಚರಿಸುವ ಹಬ್ಬವೇ ಚರಗ ಚೆಲ್ಲುವ ಹಬ್ಬವಾಗಿದೆ.ಮಾರ್ಗಶಿರ ಮಾಸದಲ್ಲಿ ಬರುವ ಎಳ್ಳು ಅಮಾವಾಸ್ಯೆ ಅಪ್ಪಟ ರೈತರ ಹಬ್ಬ. ಹೊಲಗಳಲ್ಲಿ ಬೆಳೆದು ನಿಂತಿರುವ ಹಿಂಗಾರು ಪೈರುಗಳ ನಡುವೆ ಬನ್ನಿಕಂಟಿಗೆ ಸೀರೆ ಉಡಿಸಿ, ಐದು ಕಲ್ಲುಗಳನ್ನು ಇಟ್ಟು ಭೂ ತಾಯಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.ಚರಗ ಚಲ್ಲುವ ಹಬ್ಬದ ವಿಶೇಷತೆ.ಅಮವಾಸ್ಯೆಯ ಮೂರ್ನಾಲ್ಕು ದಿನ ಮುಂಚಿತವಾಗಿ ರೈತರ ಮನೆಗಳಲ್ಲಿ ಹಬ್ಬದ ತಯಾರಿ ನಡೆಯುತ್ತದೆ. ಹಬ್ಬದ ವಿಶೇಷವಾಗಿ ಕಡಬ, ಸಜ್ಜೆ ರೊಟ್ಟಿ,ಜೋಳದ ರೊಟ್ಟಿ, ನಾನಾ ಬಗೆಯ ಚಟ್ನಿ, ಕಾಳು, ಎಣ್ಣೆಗಾಯಿ, ಎಳ್ಳು ಮತ್ತು ಶೇಂಗಾದ ಹೋಳಿಗೆ…

Read More

ಆಲಮೇಲ: ಪಟ್ಟಣದ ಸ್ವಾಮಿ ವಿವೇಕಾನಂದ ಸಂಘ(ರಿ) ವತಿಯಿಂದ ಸ್ವಾಮಿವೇಕಾನಂದರ ೧೬೧ನೇ ಜಯಂತಿಯನ್ನು ಆಚರಿಸಲಾಯಿತು.ಈ ವೇಳೆ ಮಾತನಾಡಿದ ಸಂಘದ ಸದಸ್ಯ ರತನಟಾಟ ಒನಕುದರೆ ಸ್ವಾಮಿ ವಿವೇಕಾನಂದರು ಭಾರತ ನಿರ್ಮಿಸಿದ ಅತ್ಯಂತ ಶ್ರೇಷ್ಠ ಆಧ್ಯಾತ್ಮಿಕ ನಾಯಕರಲ್ಲಿ ಒಬ್ಬರು ಅವರ ಜೀವನದ ಕಥೆಯು ಸ್ಪೂರ್ತಿಯಾಗಿದೆ ಎಂದು ಹೇಳಿದರುಈಗಿನ ಯುವಪಿಳಿಗೆಯವರಾದ ನಾವುಗಳು ದುಷ್ಟಚಟಗಳ ದಾಸರಾಗದೆ ಧರ್ಮ ರಕ್ಷಣೆಯ ಕಡೆಗೆ ಮಹಾನ ನಾಯಕರು ಹಾಕಿಕೊಟ್ಟ ಉತ್ತಮವಾದ ಜೀವನದ ಕಡೆಗೆ ಸಾಗಬೇಕಿದೆಇದೆ ತಿಂಗಳ ಕೋನೆಯಲ್ಲಿ ನಮ್ಮ ಸಂಘದ ವತಿಯಿಂದ ಉಚಿತ ನೇತ್ರ ತಪಾಸಣ ಶಿಬಿರ ಮತ್ತು ರಕ್ತದಾನ ಶಿಬಿರ ಹಾಗೂ ಸ್ವಾಮಿ ವಿವೇಕಾನಂದರ ಉಪನ್ಯಾಸ ಕಾರ್ಯಕ್ರಮ ಮಾಡಲಿದ್ದವೆ ಎಂದರುವಿಶ್ವ ಅಮರಗೊಂಡ, ಮದನ ರಜಪೂತ, ವಿಶ್ವ ಕೊರಳ್ಳಿ, ಶರಣು ಗುರಕಾರ, ಕಮಲಾಕರ ಪತ್ತಾರ, ಅಶೋಕ ಪರಿಟ, ಅಜಯ ಬಂಟನೂರ ಮುಂತಾದವರು ಇದ್ದರು.

Read More