Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಇಂಡಿ: ಆಧುನಿಕ ಕೃಷಿ ಪಧ್ಧತಿ ಅಳವಡಿಸಿಕೊಂಡು ಕೃಷಿ ಚಟುವಟಿಕೆಗಳಲ್ಲಿ ನಿರಂತರವಾಗಿ ಕಾರ್ಯೋನ್ಮುಖರಾದರೆ ಕೃಷಿ ಒಂದು ಉಧ್ಯಮವಾಗಿ ಹೊರಹೊಮ್ಮುತ್ತದೆ. ಸರಕಾರಗಳಿಗೆ ರೈತರು ಸಾಲ ಮನ್ನಾ ಮಾಡುವಂತೆ ಮನವಿ ಮಾಡುವುದನ್ನು ನಿಲ್ಲಿಸಿ, ಉತ್ತಮ ಕೃಷಿ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ಮುಂದಾಗಿ ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.ತಾಲೂಕಿನ ಲಚ್ಯಾಣ ಗ್ರಾಮದ ಅಹಿರಸಂಗ ರಸ್ತೆಯ ಶ್ರೀಮಂತ ಇಂಡಿ ಇವರ ತೋಟದಲ್ಲಿ ಶುಕ್ರವಾರ ಕೃಷಿ ಇಲಾಖೆ ಇಂಡಿ, ಕೃಷಿ ವಿಜ್ಞಾನ ಕೇಂದ್ರ ವಿಜಯಪುರ, ಭೀಮಾಶಂಕರ ಸಕ್ಕರೆ ಕಾರ್ಖಾನೆ ಮರಗೂರ ಹಾಗೂ ಶಾಂತೇಶ್ವರ ವಿವಿದೊದ್ದೇಶಗಳ ಸಹಕಾರಿ ಸಂಘ ಹೋರ್ತಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಬ್ಬಿನ ಬೆಳೆ ಕ್ಷೇತ್ರೋತ್ಸವ ಹಾಗೂ ವಿಚಾರ ಸಂಕೀರಣ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.ಮಣ್ಣಿನ ಫಲವತ್ತತೆ ಕಾಪಾಡಿ ಆಧುನಿಕ ಪದ್ದತಿಯ ಡ್ರೀಪ್ ನೀರಾವರಿ ಪದ್ದತಿ ಅಳವಡಿಸಿ ಕಬ್ಬಿನ ಇಳುವರಿ ಹೆಚ್ಚಿಸಲು ಸಾಧ್ಯವಾಗುತ್ತದೆ. ಒಂದು ಎಕರೆ ಪ್ರದೇಶದಲ್ಲಿ ೪೦ ಸಾವಿರ ಸಸಿ ನೆಡಬೇಕು. ಒಂದು ಸಸಿ ಎರಡರಿಂದ ಮೂರು ಕಿಲೋ ಆಗುವಂತೆ ನೋಡಿಕೊಳ್ಳಬೇಕು. ಆಗ…
ವಿಜಯಪುರದಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಗ್ರಾಮೀಣ ರಸ್ತೆಗಳು, ಕೆರೆಗಳ ಅಭಿವೃದ್ದಿ, ಅಕ್ರಮ ಮದ್ಯ ಮಾರಾಟ ಕಡಿವಾಣದಲ್ಲಿ ಪ್ರಗತಿ ಸಾಧಿಸಲಾಗಿದ್ದು, ವಿಜಯಪುರ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ದಿಗೊಳಿಸಿ ಮಾದರಿ ಜಿಲ್ಲೆಯನ್ನಾಗಿಸಲು ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಸಂಪೂರ್ಣ ಅಭಿವೃದ್ದಿಗಾಗಿ ಮತ್ತಷ್ಟು ಯೋಜನೆಗಳನ್ನು ರೂಪಿಸಿಕೊಂಡು ಕೆರೆ, ನದಿ ಇಕ್ಕೆಲಗಳಲ್ಲಿ ಗಿಡ ಬೆಳೆಸುವ ಮೂಲಕ ಅರಣ್ಯೀಕರಣಕ್ಕೆ ಒತ್ತು ನೀಡಬೇಕು. ಅರಣ್ಯ ಸಂರಕ್ಷಣೆ ನಮ್ಮ ಹೊಣೆಯಾಗಿದೆ. ಅರಣ್ಯೀ ಪ್ರದೇಶ ಹೆಚ್ಚಳವಾಗುವಂತೆ ನೋಡಿಕೊಳ್ಳಬೇಕು. ಟ್ರೀ ಪಾರ್ಕ್ ಯೋಜನೆ ಸಮರ್ಪಕವಾಗಿ ಅನುಷ್ಠನಗೊಳಿಸುವ ಮೂಲಕ ಹಸಿರು ಹೊದಿಕೆ ಹೆಚ್ಚಿಸುವತ್ತ ಯೋಜನೆ ರೂಪಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆ ನೀಡುವ ಜವಾಬ್ದಾರಿ ನಮ್ಮೆಲ್ಲರಮೇಲಿದೆ. ಆ ನಿಟ್ಟಿನಲ್ಲಿ ಅರಣ್ಯೀಕರಣಕ್ಕೆ ಇನ್ನಷ್ಟು…
ವಿಜಯಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾವಿಗೆ ಪವಿತ್ರತೆ ಇದೆ, ಆದರೆ ಪವಿತ್ರ ಕಾವಿಗೆ ಅಗೌರವ ತೋರಿ ಕಾವಿ ಬಟ್ಟೆಯುಟ್ಟ ಸ್ವಾಮೀಜಿಯವರನ್ನು ಎಳೆದಾಡಿ, ಅವರ ಮೊಬೈಲ್ ಕಸಿದು ಗುಂಡಾ ವರ್ತನೆ ಮಾಡಿರುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಆಕ್ರೋಶ ವ್ಯಕ್ತಪಡಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ೧೦೦ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಯುತ್ತಿದೆ. ಸಮಾಜದ ಹಿತಕ್ಕಾಗಿ ಅನೇಕರು ತಮ್ಮ ಮನೆ-ಮಠ ಬಿಟ್ಟು ಹೋರಾಟ ನಡೆಸುತ್ತಿದ್ದಾರೆ. ಆದರೆ, ಗುರುವಾರ ನಡೆದ ಹೋರಾಟದಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿಯ ಕಾವಿ ಬಟ್ಟೆಯನ್ನು ಎಳೆದಾಡಿ, ಅವರ ಮೇಲೆ ಕೈಹಾಕಿ, ಮೊಬೈಲ್ ಕಸಿದುಕೊಂಡು ಗುಂಡಾವರ್ತನೆ ಮಾಡಿರುವುದು ಖಂಡನೀಯ ಎಂದರು.ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಸೇರಿ ಹಲವು ವಿಷಯದಲ್ಲಿ ವಿಜಯಪುರ ಜಿಲ್ಲೆಗೆ ರಾಜ್ಯ ಸರ್ಕಾರ ದ್ರೋಹ ಹಾಗೂ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಹೋರಾಟಗಾರರಲ್ಲಿ ಎಲ್ಲ ಪಕ್ಷ, ಜಾತಿ,…
ವಿಜಯಪುರದ ಜ್ಞಾನಯೋಗಾಶ್ರಮಕ್ಕೆ ಹರಿದುಬಂದ ಭಕ್ತಸಾಗರ | ನಗರದೆಲ್ಲೆಡೆ ಸಿದ್ಧೇಶ್ವರ ಶ್ರೀಗಳ ಭಾವಚಿತ್ರವಿಟ್ಟು ಪೂಜೆ | ಎಲ್ಲೆಡೆ ಅನ್ನಸಂತರ್ಪಣೆ ಉದಯರಶ್ಮಿ ದಿನಪತ್ರಿಕೆ ವರದಿ: ದೇವೇಂದ್ರ ಹೆಳವರವಿಜಯಪುರ: ನಗರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ, ಶತಮಾನದ ಶ್ರೇಷ್ಠ ಸಂತ ಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳ ಮೂರನೇ ವರ್ಷದ ಗುರುನಮನ ಮಹೋತ್ಸವವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.ಗುರುನಮನ ಮಹೋತ್ಸವ ಕಾರ್ಯಕ್ತಮದಲ್ಲಿ ಭಾಗವಹಿಸಲು ಜ್ಞಾನಯೋಗಾಶ್ರಮಕ್ಕೆ ನೆರೆಯ ಮಹಾರಾಷ್ಟ ಸೇರಿದಂತೆ ನಾಡಿನ ವಿವಿಧೆಡೆಯಿಂದ ಭಕ್ತಸಾಗರವೇ ಹರಿದು ಬಂದಿತ್ತು.ಗುರುನಮನ ಮಹೋತ್ಸವದ ಅಂಗವಾಗಿ ನಗರದ ಬಿ.ಎಲ್.ಡಿ.ಇ.ರಸ್ತೆ, ಆಶ್ರಮ ರಸ್ತೆಯುದ್ದಕ್ಕೂ ಆಕರ್ಷಕ ಮಂಟಪ ನಿರ್ಮಿಸಿ ಪುಷ್ಪಾಲಂಕಾರ ಮಾಡಿ ಸಿದ್ಧೇಶ್ವರ ಮಹಾಸ್ವಾಮಿಗಳ ಭಾವಚಿತ್ರವಿಟ್ಟು ಗುರುನಮನ ಸಲ್ಲಿಸುವ ಜತೆಗೆ ಜ್ಞಾನಯೋಗಾಶ್ರಮಕ್ಕೆ ತೆರಳುವ ಭಕ್ತಾದಿಗಳಿಗೆ, ಉಪಹಾರ, ಪಾನೀಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ವಿವಿಧ ಸಂಘಟನೆಯವರು ಹಾಗೂ ಸಾರ್ವಜನಿಕರು ಭಕ್ತಿಸೇವೆ ಸಲ್ಲಿಸಿದರು.ಆಶ್ರಮ ರಸ್ತೆಯ ಶ್ರೀ ಸಿದ್ಧೇಶ್ವರ ಅಪ್ಫಾಜಿ( ಚಾರಲೈಟ್ ಬಳಿ) ವೃತ್ತದಲ್ಲಿ ಬಣ್ಣದ ರಂಗೋಲಿಯಿಂದ ಆಕರ್ಷಕ ಚಿತ್ರ ಬಿಡಿಸಿ ಅಲಂಕಾರ ಮಾಡಿದ್ದು ಭಕ್ತರ ಗಮನ ಸೆಳೆಯಿತು.ಗುರುನಮನ ಮಹೋತ್ಸವ ಪ್ರಯುಕ್ತ…
ಕಲಕೇರಿಗ್ರಾಪಂ ನಿರ್ಮಿಸಿದ ಗ್ರಾಮೀಣ ಸಂತೆ ಮಾರುಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳ ಉದ್ಘಾಟನೆ ಸಮಾರಂಭ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಜನತೆಯ ಆಶಿರ್ವಾದದಿಂದ ಸಿಕ್ಕ ಅಧಿಕಾರದ ಅವಧಿಯಲ್ಲಿ ಜನ ಮೆಚ್ಚುವ ಕೆಲಸ ಕಾರ್ಯಗಳನ್ನು ಮಾಡಿದರೆ ಮಾತ್ರ ಅದು ಜನತೆಯ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯವಾಗುತ್ತದೆ. ಅಂತಹ ಕೆಲಸವನ್ನು ಗ್ರಾಮದ ಮುಖ್ಯ ಬಜಾರನಲ್ಲಿ ಉತ್ತಮ ಗುಣಮಟ್ಟದ ೫೦ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡುವ ಮೂಲಕ ಕಲಕೇರಿಯ ಗ್ರಾಮ ಪಂಚಾಯತಿಯು ಇಡಿ ಜಿಲ್ಲೆಗೆ ಮಾದರಿಯಾಗಿದೆ ಎಂದು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲೋಡಗಿ ಹೇಳಿದರು.ಕಲಕೇರಿ ಗ್ರಾಮದ ಮುಖ್ಯ ಬಜಾರನಲ್ಲಿ ಜಿಲ್ಲಾ ಪಂಚಾಯತ್ ವಿಜಯಪುರ, ತಾಲೂಕು ಪಂಚಾಯತ್ ತಾಳಿಕೋಟಿ ಗ್ರಾಮ ಪಂಚಾಯತ್ ಕಾರ್ಯಾಲಯ ಕಲಕೇರಿ ಇವರ ವತಿಯಿಂದ ಹಮ್ಮಿಕೊಂಡ ಮಹಾತ್ಮಾ ಗಾಂಧೀಜಿ ಮಾರುಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳನ್ನು ಉದ್ಘಾಟಿಸಿ, ಸಸಿ ನೆಟ್ಟು ಅವರು ಮಾತನಾಡಿದರು.ಇಲ್ಲಿಯ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಸದಸ್ಯರು ಅತ್ಯಂತ ಕಡಿಮೆ ಅವಧಿಯಲ್ಲಿ ಮಳಿಗೆಗಳನ್ನು ನಿರ್ಮಿಸುವದರ ಜೊತೆಗೆ ಸುಮಾರು ೩೦-೪೦ ವರ್ಷಗಳಿಂದ ಈ ಜಾಗದಲ್ಲಿ…
ವಿಜಯಪುರದಲ್ಲಿ ಮಾಜಿ ಶಾಸಕ ಪ್ರೊ.ರಾಜು ಆಲಗೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟಗಾರು ಪೊಲೀಸರ ಮೇಲೆ ಕೈ ಎತ್ತಿರುವುದು ಸರಿಯಲ್ಲ, ಅದೇ ತೆರನಾಗಿ ಹೋರಾಟ ಸ್ಥಳವನ್ನು ತೆರವುಗೊಳಿಸಿರುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲರು ಭರವಸೆ ನೀಡಿದ್ದರು, ಹೀಗಿದ್ದರೂ ಸಹ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಔಚಿತ್ಯವಿರಲಿಲ್ಲ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ, ಸ್ವಾಮೀಜಿಗಳು ಆರಕ್ಷಕ ಅಧಿಕಾರಿಗಳ ಮೇಲೆ ಕೈ ಮಾಡುವ ಅವಶ್ಯಕತೆಯೂ ಇರಲಿಲ್ಲ, ಇದೇ ಘಟನೆ ಇರಿಸಿಕೊಂಡು ಹೋರಾಟ ವೇದಿಕೆಯನ್ನೇ ತೆರವುಗೊಳಿಸಿರುವುದು ಅಕ್ಷಮ್ಯ ಅಪರಾಧವೇ, ಹೋರಾಟ, ಚಳವಳಿಗಳು ದಮನವಾಗಬಾರದು, ಹೋರಾಟದ ಹೆಸರಿನಲ್ಲಿ ಆರಕ್ಷಕರ ಮೇಲೆ ಕೈ ಮಾಡಿರುವುದು ಸರಿಯಲ್ಲ ಎಂದು ಆಲಗೂರ ಹೇಳಿದರು.ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಯಾರ ತಕಾರರು ಇಲ್ಲ. ಇದರ ಪರವಾಗಿಯೇ ಕಾಂಗ್ರೆಸ್ ಪಕ್ಷ ಮತ್ತು ಸಚಿವರು, ಶಾಸಕರು ಸಹ…
ಕೊಲ್ಹಾರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಶ್ರದ್ಧಾಂಜಲಿ ಸಭೆ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಹಿಂದೂಗಳ ಮೇಲೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹತ್ಯೆ ಹಾಗೂ ದೌರ್ಜನ್ಯವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಪಟ್ಟಣದಲ್ಲಿ ಶ್ರದ್ಧಾಂಜಲಿ ಹಾಗೂ ಪಂಜಿನ ಮೆರವಣಿಗೆ ನಡೆಯಿತು.ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದಿಂದ ಆರಂಭವಾದ ಈ ಮೆರವಣಿಗೆ ಪ್ರಮುಖ ಬೀದಿಗಳ ಮೂಲಕ ಸಾಗಿ ಮರಳಿ ದೇವಸ್ಥಾನದ ತಲುಪಿತು. ನೂರಾರು ಹಿಂದೂ ಕಾರ್ಯಕರ್ತರು ಪಂಜುಗಳನ್ನು ಹಿಡಿದು ಮೌನ ಶ್ರದ್ಧಾಂಜಲಿ ಸಲ್ಲಿಸಿ, ಬಾಂಗ್ಲಾದೇಶದಲ್ಲಿನ ಹಿಂದುಗಳ ಮೇಲೆ ನಡೆಯುತ್ತಿರುವ ಅಕ್ರಮಗಳಿಗೆ ವಿರೋಧ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಶಂಕರ ಗಣಾಚಾರಿ, ಬಿಜೆಪಿ ಯುವ ಮುಖಂಡ ಚಂದ್ರಶೇಖರ್ ಬೆಳ್ಳುಬ್ಬಿ, ಬಜರಂಗದಳ ಅಧ್ಯಕ್ಷ ಮಹೇಶ್ ತುಂಬುರಮಟ್ಟಿ ಸೇರಿದಂತೆ ಅನೇಕ ಹಿಂದೂ ಕಾರ್ಯಕರ್ತರು ಹಾಗೂ ಮುಖಂಡರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಅಂಬೇಡ್ಕರ್ ಸರ್ಕಲ್ನಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ತೌಶೀಪ ಗಿರಗಾಂವಿ, ರಿಯಾಜ್ ಗಿರಗಾಂವಿ ದಶರಥ ಈಟಿ, ಸಂಗಪ್ಪ ಚಿಮ್ಮಲಗಿ ತಿಪ್ಪಣ್ಣ ಕುದರಿ, ಮಾರುತಿ ಕುದರಿ, ಸಿಡ್ಲಪ್ಪ ತಳಗೇರಿ, ಶೇಖು ಈಟಿ, ಸಚಿನ್ ಈಟಿ ಸಹಿತ ಅನೇಕರು ಉಪಸ್ಥಿತರಿದ್ದರು,
ಸಿದ್ದೇಶ್ವರ ಶಿಕ್ಷಣ ಸಂಸ್ಥೆ ಲೋಣಿ (ಬಿ.ಕೆ) ಅಧ್ಯಕ್ಷ ಬಿ.ಎಂ.ಕೋರೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಉದಯರಶ್ಮಿ ದಿನಪತ್ರಿಕೆ ಚಡಚಣ:ಶಿಕ್ಷಣವೇ ಸಮಾಜ ಪರಿವರ್ತನೆಯ ಮೂಲಶಕ್ತಿ ಎಂಬ ತತ್ವದ ತಳಹದಿಯ ಮೇಲೆ ಗ್ರಾಮೀಣ ಪ್ರದೇಶದಲ್ಲಿ ಆರಂಭಿಸಲಾದ ಲೋಣ (ಬಿ.ಕೆ) ಗ್ರಾಮದ ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ. ಈ ನಿಮಿತ್ಯ ಜ.3 ಮತ್ತು 4 ರಂದು ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಿ.ಎಂ.ಕೋರೆ ಹೇಳಿದರು.ಲೋಣಿ ಬಿ.ಕೆ ಗ್ರಾಮದ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯಾಲಯದಲ್ಲಿ ಗುರುವಾರ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಗ್ರಾಮೀಣ ಹಾಗೂ ಗಡಿಭಾಗದ ಮಕ್ಕಳಿಗೆ ಶಿಕ್ಷಣ ಒದಗಿಸುವ ಸಂಕಲ್ಪದೊಂದಿಗೆ 1974 ರಲ್ಲಿ ಆರಂಭಿಸಲಾದ ಈ ಸಂಸ್ಥೆ ಇಂದು ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಕಾಲೇಜು, ವೃತ್ತಿಪರ ಶಿಕ್ಷಣ ಒಳಗೊಂಡಂತೆ 11 ಅಂಗ ಸಂಸ್ಥೆಗಳಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆಜ.3 ರಂದು ಸುವರ್ಣ ಮಹೋತ್ಸವದ ಸಾನಿಧ್ಯವನ್ನು ವಿಜಯಪೂರ ಷಣ್ಮೂಖಾರೂಢ ಮಠದ ಅಭಿನವ ಸಿದ್ಧಾರೂಢ ಸಾಮೀಜಿ ವಹಿಸಲಿದ್ದು, ಉದ್ಘಾಟನೆಯನ್ನು ಜಿಲ್ಲಾ…
ಲೇಖನ- ಬಸವರಾಜ ಹೂಗಾರನಿಕಟ ಪೂರ್ವ ಜಿಲ್ಲಾ ಅಧ್ಯಕ್ಷರುಬಿಜೆಪಿ ಯುವ ಮೋರ್ಚಾವಿಜಯಪುರ ಜಿಲ್ಲೆಮೊ: 9740207097 ಉದಯರಶ್ಮಿ ದಿನಪತ್ರಿಕೆ ಬಾಂಗ್ಲಾದೇಶದ ಹಿಂದೂಗಳ ವಿಚಾರದಲ್ಲಿ ಇಂಡಿ ಮೈತ್ರಿ ವಿಫಲವಾಗಿದ್ದು, ಓವೆಸಿ ಮಾತ್ರ ನಾಯಕತ್ವ ತೋರಿದ್ದಾರೆ.ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸೆ ಮತ್ತು ಭದ್ರತಾ ಆತಂಕಗಳು ಇಡೀ ದಕ್ಷಿಣ ಏಷ್ಯಾದ ಮನಸ್ಸನ್ನು ಕಲುಷಿತಗೊಳಿಸಿರುವ ಸಂದರ್ಭದಲ್ಲಿ, ಭಾರತದ ರಾಜಕೀಯ ನಾಯಕತ್ವದ ನಿಲುವುಗಳು ಕಠಿಣ ಪರೀಕ್ಷೆಗೆ ಒಳಗಾಗಿವೆ. ಇಂತಹ ಗಂಭೀರ ಮಾನವೀಯ ಸಂಕಟದ ನಡುವೆ, ಯಾರ ಧ್ವನಿ ಕೇಳಿಬಂದಿತು ಮತ್ತು ಯಾರು ಮೌನಕ್ಕೆ ಶರಣಾದರು ಎಂಬ ಪ್ರಶ್ನೆಗೆ ಉತ್ತರಗಳು ಈಗ ಸ್ಪಷ್ಟವಾಗಿವೆ.ತಮ್ಮನ್ನು ತಾವು “ಧರ್ಮನಿರಪೇಕ್ಷತೆ” ಮತ್ತು “ಅಲ್ಪಸಂಖ್ಯಾತರ ರಕ್ಷಣೆ” ಎಂಬ ಪದಗಳ ಮೂಲಕ ಸದಾ ಮುಂಚೂಣಿಯಲ್ಲಿ ತೋರಿಸಿಕೊಳ್ಳುವ ಇಂಡಿ ಮೈತ್ರಿಕೂಟದ ನಾಯಕರು — ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ, ಅಖಿಲೇಶ್ ಯಾದವ್, ತೇಜಸ್ವಿ ಯಾದವ್, ಮಮತಾ ಬ್ಯಾನರ್ಜಿ, ಅಭಿಷೇಕ್ ಬ್ಯಾನರ್ಜಿ, ಉದ್ಧವ ಠಾಕ್ರೆ, ಆದಿತ್ಯ ಠಾಕ್ರೆ, ಶರದ್ ಪವಾರ್, ಸುಪ್ರಿಯಾ ಸುಲೆ,…
