Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಡಚಣ: ಸಮೀಪದ ದೇವರ ನಿಂಬರಗಿ ಗ್ರಾಮದ ದಲಿತ ವ್ಯಕ್ತಿಯ ಮೇಲೆ ಮಾರ್ಚ್ 11 ಸಾರ್ವಜನಿಕವಾಗಿ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಚಡಚಣ ಪೊಲೀಸ್ ಠಾಣೆಯ ಎಲ್.ಎಸ್. ರಾಠೋಡ (ಎ.ಎಸ್.ಐ)ಅವರನ್ನು ಅಮಾನತುಗೊಳಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಲಿತ ಮುಖಂಡರು ಚಡಚಣ ಉಪ ತಹಶೀಲದಾರ ಹುಸನಪ್ಪ ಹೊಸಮನಿ ಹಾಗೂ ಪಿ.ಎಸ್.ಐ. ಸೋಮೇಶ ಗೆಜ್ಜಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ದಲಿತ ಮುಖಂಡ ದಶರಥ ಬನಸೋಡೆ ಮಾತನಾಡಿ, ಆರೋಪಿತ ಅಧಿಕಾರಿ ಕಾನೂನಿನ ಅರಿವು ಇರುವವರು ಹಾಗೂ ಕಾನೂನು ಪಾಲಿಸುವವರಾಗಿದ್ದಾರೆ. ಅವರೇ ಕಾನೂನುಗಳನ್ನು ಗಾಳಿಗೆ ತೂರಿ ಅಮಾಯಕ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಇವರ ಮೇಲೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಮುಖಂಡ ಪರಮೇಶ್ವರ ಸಿಂಗೆ ಮಾತನಾಡಿ, ಇಂತಹ ಘಟನೆಗಳು ಸಮಾಜದಲ್ಲಿ ಅಸಮಾಧಾನ ಮತ್ತು ಭಯದ ವಾತಾವರಣವನ್ನು ಸೃಷ್ಟಿಸುತ್ತವೆ ಎಂದು ಅಭಿಪ್ರಾಯಪಟ್ಟ ಅವರು,…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಬಡವರಾದರೂ ತಮ್ಮ ಮಕ್ಕಳನ್ನು ಬಡತನದಲ್ಲಿ ಇರಬಾರದು ಎಂಬ ಆಶಯದಿಂದ ಕೂಲಿ ಕೆಲಸ ಮಾಡಿದರೂ ಶಿಕ್ಷಣ ಕೊಡಿಸಿ ದೊಡ್ಡ ವ್ಯಕ್ತಿಗಳನ್ನಾಗಿಸಬೇಕೆಂಬ ಕನಸು ಇಂದಿನ ಕಾಲದ ಪ್ರತಿಯೊಬ್ಬ ಪಾಲಕರಿಗೂ ಇದೆ. ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ, ನೀತಿ-ನಿಯಮಗಳನ್ನು ಕಲಿಸಿದಾಗ ಮಾತ್ರ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಸಾಹಿತಿ ಅಶೋಕ ಹಂಚಲಿ ಹೇಳಿದರು.ಪಟ್ಟಣದಲ್ಲಿ ವಿದ್ಯಾಸ್ಪೂರ್ತಿ ಪೂರ್ವ ಪ್ರಾಥಮಿಕ ಶಾಲೆ ಹಾಗೂ ನವೋದಯ ಕೋಚಿಂಗ್ ಕ್ಲಾಸಿಸ್ ವತಿಯಿಂದ ಆಯೋಜಿಸಿದ್ದ 5ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೊಡುಗೆ, ಪ್ರತಿಭಾ ಪುರಸ್ಕಾರ ಹಾಗೂ 6ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ಕಾಲದಲ್ಲಿ ಮಕ್ಕಳಿಗೆ ಸರಿಯಾದ ಸಮಯದಲ್ಲಿ ಸಂಸ್ಕಾರ ನೀಡುವುದು ಅತ್ಯಂತ ಅಗತ್ಯವಾಗಿದೆ. ಮಕ್ಕಳಿಗೆ ಉತ್ತಮ ಮಾರ್ಗದರ್ಶನ ನೀಡದೆ ಇದ್ದರೆ ಅವರು ಮೊಬೈಲ್, ಟಿವಿ ಮೊದಲಾದವುಗಳಲ್ಲಿ ಮುಳುಗಿ ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುವ ಸಾಧ್ಯತೆ ಇದೆ. ನಾವು ಭೂಮಿಯಲ್ಲಿ ಬಿತ್ತುವ ಬೀಜದ ಪ್ರಕಾರವೇ ಫಲ ಸಿಗುತ್ತದೆ. ಬೇವಿನ ಬೀಜ ಬಿತ್ತಿಕೊಂಡು ಮಾವಿನ ಹಣ್ಣು ನಿರೀಕ್ಷಿಸುವುದು ಸಾಧ್ಯವಿಲ್ಲ. ಅದೇ ರೀತಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ದಿನದಿಂದ‌ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸರ್ಕಾರಿ ಕಚೇರಿಗಳ ಮತ್ತು ಶಾಲಾ ಕಾಲೇಜುಗಳ ಸಮಯ ಬದಲಾವಣೆಗೆ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಸುರೇಶ ಶಡಶ್ಯಾಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕೆ.ಆನಂದ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿ ಮಾತನಾಡಿದ ಸುರೇಶ ಶಡಶ್ಯಾಳ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈಗಾಗಲೇ 36 ರಿಂದ 38 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಪ್ರತಿವರ್ಷಕ್ಕಿಂತ ಈ ವರ್ಷ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಿನ ಉಷ್ಣಾಂಶ ದಾಖಲಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿರುವುದರಿಂದ ಬಿಸಿಲಿನ ಝಳಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಕಚೇರಿಗೆ ಹೋಗಿ ಕಾರ್ಯನಿರ್ವಹಿಸಲು ಸರ್ಕಾರಿ ನೌಕರ ಸಿಬ್ಬಂದಿಗಳಿಗೆ ಹಾಗೂ ಕೆಲಸ ಕಾರ್ಯಗಳಿಗೆ ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದರಿಂದ ಸರ್ಕಾರಿ ನೌಕರರಿಗೆ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.ನೌಕರರ, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಕಚೇರಿ ಹಾಗೂ ಶಾಲಾ ಕಾಲೇಜುಗಳ ಕರ್ತವ್ಯದ ಅವಧಿಯನ್ನು…

Read More

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಕುಡಿಯುವ ನೀರಿನ ನಿರ್ವಹಣೆ ಕುರಿತು ಸಭೆಯಲ್ಲಿ ಡಿಸಿ ಡಾ.ಆನಂದ ಕೆ. ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ತೊಂದರೆಯಾಗಂತೆ ಈಗಿನಿಂದಲೇ ಮುಂಜಾಗೃತ ಕ್ರಮಕ್ಕಾಗಿ ಯೋಜನೆ ರೂಪಿಸಿ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ತಿಳಿಸಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಕುಡಿಯುವ ನೀರಿನ ನಿರ್ವಹಣೆ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ದುರಸ್ತಿ ಇರುವ ಬೋರವೆಲ್‌ಗಳನ್ನು ಪುನಶ್ಚೇತನಗೊಳಿಸಿ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿರುವ ದುರಸ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸಿ ಕುಡಿಯುವ ನೀರು ಸಮರ್ಪಕವಾಗಿ ದೊರೆಯುವಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಶುದ್ಧತೆ ಕುರಿತು ಮೇಲಿಂದ ಮೇಲೆ ಪರೀಕ್ಷಿಸಿ ಶುದ್ಧ ನೀರು ದೊರಕುವಂತ ಕ್ರಮ ವಹಿಸಬೇಕು. ಪ್ರಸಕ್ತ ವರ್ಷ ಏಪ್ರೀಲ್ ೩ರ ನಂತರ ಜಿಲ್ಲೆಯಲ್ಲಿರುವ ಕುಡಿಯುವ ನೀರಿಗಾಗಿ ಕಾಲುವೆಗಳ ಮೂಲಕ ಕೆರೆಗಳಿಗೆ ನೀರನ್ನು ಹರಿ ಬಿಡಲಾಗುತ್ತಿದ್ದು, ಕುಡಿಯುವ ನೀರಿಗಾಗಿ ಬಳಸಲು…

Read More

ಮಾನವ ಅಭಿವೃದ್ಧಿ ವರದಿ-೨೦೨೫ ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ-೨೦೩೧ | ಜಿ.ಪಂ. ಸಿಇಓ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಮಾನವ ಅಭಿವೃದ್ಧಿ ವರದಿ-೨೦೨೫ ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ-೨೦೩೧ ವರದಿ ತಯಾರಿಕೆಗೆ ನಿಖರವಾದ ಮತ್ತು ಸ್ಪಷ್ಟವಾದ ದತ್ತಾಂಶಗಳಿಂದ ಕೂಡಿದ ನಿಗಧಿತ ನಮೂನೆಯಲ್ಲಿ ದೃಢೀಕರಿಸಿ, ವಿಳಂಬ ಮಾಡದೇ ನಿಗದಿತ ಕಾಲಾವಧಿಯೊಳಗೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಸೂಚಿಸಿದರು.ಮಾರ್ಚ್ ೧೩ ರಂದು ಜಿಲ್ಲಾ ಪಂಚಾಯತಿಯ ಸಭಂಗಣದಲ್ಲಿ ನಡೆದ ಜಿಲ್ಲಾ ಮಾನವ ಅಭಿವೃದ್ಧಿ ವರದಿ-೨೦೨೫ ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ-೨೦೩೧ ವರದಿ ತಯಾರಿಸುವ ಕುರಿತು ವಲಯವಾರು ಉಪ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲಾ ಮಾನವ ಅಭಿವೃದ್ಧಿ ವರದಿ-೨೦೨೫ಕ್ಕೆ ಸಂಬಂಧಿಸಿದಂತೆ ೧೨೬ ಸೂಚ್ಯಾಂಕಗಳ ಪೈಕಿ ೪೭ ಸೂಚ್ಯಾಂಕಗಳ ಮಾಹಿತಿಯನ್ನು ಸಲ್ಲಿಸಿದ್ದು, ಬಾಕಿ ೭೯ ಸೂಚ್ಯಾಂಕಗಳ ಮಾಹಿತಿಯನ್ನು…

Read More

ಸಚಿವ ಡಾ.ಎಂ.ಬಿ.ಪಾಟೀಲ ರಿಗೆ ಸಂಸದ ರಮೇಶ ಜಿಗಜಿಣಗಿ ಒತ್ತಾಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಬೇಸಿಗೆಗೂ ಮುನ್ನವೇ ಬಿಸಲಿನ ಪ್ರಖರತೆ ಅಧಿಕವಾಗಿದೆ, ಬಿಸಿಲಿನ ತೀವ್ರತೆಯಿಂದ ಜಲಮೂಲಗಳು ಬತ್ತಿ ಕುಡಿಯುವ ನೀರಿಗೆ ವ್ಯತ್ಯಯ ಮೊದಲಾದ ಎದುರಾಗುವ ಸಮಸ್ಯೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲರು ಕೂಡಲೇ ಜನಪ್ರತಿನಿಧಿಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ವಿಶೇಷ ಸಭೆ ಕರೆಯಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೇಸಿಗೆ ಮುನ್ನವೇ ಬಿಸಿಲಿನ ತೀವ್ರತೆ ಅಧಿಕವಾಗಿದೆ, ವಿಜಯಪುರ ನಗರದಲ್ಲಿ ೮ ರಿಂದ ೧೦ ದಿನಕ್ಕೆ ನೀರು ಪೂರೈಕೆಯಾಗುತ್ತಿದ್ದು, ನೀರಿನ ಹಾಹಾಕಾರ ಉಂಟಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ‌. ಹೀಗಾಗಿ ಮುಂಬರುವ ಪರಿಸ್ಥಿತಿಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವುದು ಒಳ್ಳೆಯದು, ನಗರ ಹಾಗೂ ಗ್ರಾಮೀಣ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಯಾಗಬೇಕು, ಈ ನಿಟ್ಟಿನಲ್ಲಿ ಆಡಳಿತ ಯಂತ್ರ ಚುರುಕಾಗಬೇಕು, ಅನೇಕ ವಿಷಯದಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವ ರಾಜ್ಯ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಶಿಕ್ಷಣವನ್ನು ಉಪನಿರ್ದೇಶಕರ ಕಚೇರಿಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣವನ್ನು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವರ್ಗಾಯಿಸುವದು ಬೇಡ ಎಂದು ಆಗ್ರಹಿಸಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರರು ಮತ್ತು ಉಪನ್ಯಾಸಕರು ಆಡಳಿತಸೌಧ ಎದುರು ಪ್ರತಿಭಟನೆ ನಡೆಸಿದರು.ಕಿರಣ ನಡಕಟ್ಟಿಯವರು ಮಾತನಾಡಿ ಪದವಿಪೂರ್ವ ಶಿಕ್ಷಣಕ್ಕೆ ಹೈಸ್ಕೂಲ ಶಿಕ್ಷಣ ಸೇರ್ಪಡೆ ಬೇಡ, ಜಿ.ಪಂ ಗೆ ನಿಯಂತ್ರಣ ಬೇಡ, ಹಿಂದಿನಂತೆ ಪದವಿ ಪೂರ್ವ ಇಲಾಖೆ ಇರಬೇಕು ಎಂಬ ಹಲವಾರು ಬೇಡಿಕೆಗಳನ್ನು ಆಗ್ರಹಿಸಿದರು.ಪದವಿಪೂರ್ವ ಇಲಾಖೆ ಇದ್ದಾಗ ದೇಶದಲ್ಲಿಯೇ ಮಾದರಿ ಸಿ ಇ ಟಿ ಮಾಡಿದ ಶ್ರೇಯಸ್ಸು ಪದವಿಪೂರ್ವ ಇಲಾಖೆಗೆ ಇದೆ. ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿದ್ದ ಪರೀಕ್ಷಾ ವಿಭಾಗವನ್ನು ಹಿಂದಿನಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶನಾಲಯಕ್ಕೆ ಮರಳಿ ವರ್ಗಾಯಿಸಬೇಕು ಇಲ್ಲದಿದ್ದರೆ ದ್ವೀತಿಯ ಪಿಯು ಪರೀಕ್ಷೆ ಉತ್ತರ ಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸಿ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದೀಷ್ಠಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವದು ಎಂದರು.ಪ್ರತಿಭಟನೆಯಲ್ಲಿ ಪ್ರಾಚಾರ್ಯರಾದ ಶಿವಾನಂದ ಕಾಮಗೊಂಡ, ಚಂದ್ರಶೇಖರ ಯಳಸಂಗಿ, ಎಸ್.ಎಸ್.ತೆಗ್ಗೆಳ್ಳಿ,…

Read More

ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳಿಗೆ ಬಿಜೆಪಿ ನಿಯೋಗದಿಂದ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2024-25ನೇ ಸಾಲಿನ ಹವಾಮಾನ ಆಧಾರಿತ ವಿಮಾ ಯೋಜನೆಯಡಿ ವಿಮೆ ಕಂತು ಪಾವತಿಸಿದ್ದರೂ ಪರಿಹಾರದಿಂದ ವಂಚಿತರಾಗಿರುವ ಜಿಲ್ಲೆಯ 931 ದ್ರಾಕ್ಷಿ ಬೆಳೆಗಾರರಿಗೆ ತಕ್ಷಣವೇ ವಿಮಾ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಗುರುಲಿಂಗಪ್ಪ ಅಂಗಡಿ ಅವರ ನೇತೃತ್ವದ ನಿಯೋಗವು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಪತ್ರ ಅರ್ಪಿಸಿತು. ಕಳೆದ ಸಾಲಿನಲ್ಲಿ ಅತಿವೃಷ್ಟಿ, ಅನಾವೃಷ್ಟಿ ಹಾಗೂ ರೋಗಬಾಧೆಯಿಂದ ದ್ರಾಕ್ಷಿ ಬೆಳೆ ನಷ್ಟವಾಗಿತ್ತು. ಜಿಲ್ಲೆಯಲ್ಲಿ 15 ಸಾವಿರಕ್ಕೂ ಅಧಿಕ ಬೆಳೆಗಾರರು ವಿಮೆ ಮಾಡಿಸಿದ್ದರು. ಆದರೆ, ನಿಯಮಾನುಸಾರ ವಿಮೆ ಕಂತು ಪಾವತಿಸಿದ್ದರೂ, ನಕಲಿ ಕ್ಷೇತ್ರ ಎಂಬ ನೆಪವೊಡ್ಡಿ ವಿಮಾ ಕಂಪನಿಗಳು ಜಿಲ್ಲೆಯ 931 ಬೆಳೆಗಾರರಿಗೆ (ವಿಶೇಷವಾಗಿ ಬಬಲೇಶ್ವರ ತಾಲೂಕಿನ ರೈತರಿಗೆ) ಪರಿಹಾರ ನೀಡದೆ ಸತಾಯಿಸುತ್ತಿವೆ ಎಂದು ಮುಖಂಡರು ಆರೋಪಿಸಿದರು.ಈ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತ ವಿಮಾ ಕಂಪನಿಯೊಂದಿಗೆ ಮಾತನಾಡಿ, ಬಾಕಿ…

Read More

ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳಿಂದ ಪ್ರಕರಣ ದಾಖಲು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಫೇಸ್ ಬುಕ್ ನಲ್ಲಿ ಬಸವಣ್ಣನವರು ಮತ್ತು ಅಕ್ಕಮಹಾದೇವಿ ಅವರ ಬಗ್ಗೆ ಅತ್ಯಂತ ಅಶ್ಲೀಲ ಕೀಳುಮಟ್ಟದ ಪದಗಳನ್ನು ಬಳಸುವ ಮನೋರೋಗಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಪುಣೆ ಇದರ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ವಿಜಯಪುರ ಮತ್ತು ಬೆಳಗಾವಿಯಲ್ಲಿ ಸೈಬರ್ ಕ್ರೈಂ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠ ಅಧಿಕಾರಿಗಳಿಗೆ ದೂರು ಸಲ್ಲಿಸಿ ಪ್ರಕರಣ ದಾಖಲಿಸಿದ್ದಾರೆ.ಎಂ ರಮಾಕಾಂತ ಎಂಬವನು ಫೇಸ್ ಬುಕ್ ನಲ್ಲಿ ಬಸವಣ್ಣನವರು ಮತ್ತು ಅಕ್ಕಮಹಾದೇವಿ ಅವರ ಬಗ್ಗೆ ಅತ್ಯಂತ ಅಶ್ಲೀಲ ಕೀಳುಮಟ್ಟದ ಪದಗಳನ್ನು ಬಳಸಿದ ಕಾರಣ ಅವನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.ವಿಜಯಪುರದಲ್ಲಿ ಜಿಲ್ಲಾ ಘಟಕದ ಉಪಾಧ್ಯಕ್ಷ ಸಿದ್ದಪ್ಪ ಪಡನಾಡ, ಡಾ.ಶಾರದಾಮಣಿ ಹುನಶಾಳ, ರತ್ನತ್ಕ ಬಿರಾದಾರ, ರೇವತಿ ಬಿರಾದಾರ, ಗಂಗಾಧರ ಸಾಲಕ್ಕಿ ಅವರು ಮತ್ತು ಬೆಳಗಾವಿಯಲ್ಲಿ ಡಾ ಶಶಿಕಾಂತ ಪಟ್ಟಣ ಮತ್ತು ಸುಧಾ ಪಾಟೀಲ ಇವರು…

Read More

ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ ರಿಷಿ ಆನಂದ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಮೃತ ಯೋಜನೆಯಡಿ ಜಿಐಎಸ್ ಆಧಾರಿತ ಮಹಾ ಯೋಜನೆಯ ಕುರಿತು ನಗರಕ್ಕೆ ಹತ್ತಿರವಿರುವ ೯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇದರಿಂದ ಗ್ರಾಮ ಪಂಚಾಯತಿಗಳು ಉನ್ನತೀಕರಣಗೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ ಹೇಳಿದರು.ಗುರುವಾರ ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರ ಅಧ್ಯಕ್ಷತೆಯಲ್ಲಿ ಜಿಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,ನಗರದ ಸ್ಥಳೀಯ ಯೋಜನಾ ಪ್ರದೇಶಕ್ಕೆ ಅಮೃತ ಯೋಜನೆಯಡಿ ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ (ಪ-೩), ಸರ್ಕಾರದಿಂದ ತಾತ್ಕಾಲಿಕ ಅನುಮೋದನೆಯಾಗಿರುವುದರಿಂದ ಸ್ಥಳೀಯ ಯೋಜನಾ ಪ್ರದೇಶದಲ್ಲಿ ಬರುವ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಲಹೆ,ಆಕ್ಷೇಪಣೆಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ.ಕೇವಲ ೧೦ ವರ್ಷಗಳ ಹಿಂದೆ ನೋಡುವುದಾದರೆ ವಿಜಯಪುರ ನಗರವು ಪ್ರಸ್ತುತ ಬೃಹತ್ ಮಟ್ಟದಲ್ಲಿ…

Read More