Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಪ್ರಕೃತಿ ವೈವಿಧ್ಯತೆ ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨//೪೧೬೦ ಉದಯರಶ್ಮಿ ದಿನಪತ್ರಿಕೆ ಕರ್ನಾಟಕದ ಎರಡನೇ ಅತೀ ದೊಡ್ಡ ಜಲಪಾತವೆಂದು ಗೋಕಾಕ ಜಲಪಾತವನ್ನು ಕರೆಯಲಾಗುತ್ತದೆ. ಇದು ಕರ್ನಾಟಕದ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಿಂದ ೬ ಕಿ.ಮೀ ದೂರದಲ್ಲಿರುವ ಈ ಜಲಪಾತವು ಘಟಪ್ರಭ ನದಿಯಿಂದ ಉಂಟಾಗುತ್ತದೆ. ಇದು ಕೆನಡಾ ಮತ್ತು ಅಮೇರಿಕ ದೇಶದ ನಡುವೆ ಇರುವ ನಯಾಗರ ಜಲಪಾತದಂತೆ ಕಾಣಿಸುವುದರಿಂದ ಇದನ್ನು ಭಾರತದ ನಯಾಗರವೆಂದು ಕರೆಯುತ್ತಾರೆ.ಸುಮಾರು ೧೮೦ ಅಡಿ ಎತ್ತರದಿಂದ ಧುಮುಕುವ ನೀರು ಇಲ್ಲಿ ರಮಣೀಯವಾಗಿ ಕಾಣುತ್ತದೆ. ಮಳೆಗಾಲದ ಜೂನ್ ತಿಂಗಳಿನಿಂದ ಡಿಸೆಂಬರ್ ಅಂತ್ಯದವರೆಗೂ ಈ ಜಲಪಾತದಲ್ಲಿ ಹೇರಳ ನೀರಿರುವುದರಿಂದ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಬಹುದು. ಮಳೆಗಾಲದಲ್ಲಿ ಕೆಂಪು ಬಣ್ಣದ ನೀರಿನೊಂದಿಗೆ ಈ ಜಲಪಾತವು ಭೋರ್ಗರೆಯುತ್ತಾ ಧುಮುಕುತ್ತದೆ.ತೂಗು ಸೇತುವೆ ಗೋಕಾಕ ಫಾಲ್ಸ್ನ ಮತ್ತೊಂದು ವಿಶೇಷತೆ ಎಂದರೆ ಜಲಪಾತದ ನೀರು ಧುಮುಕುವ ಸ್ಥಳಕ್ಕೆ ಹೋಗಲು ಸಹಾಯ ಆಗುವಂತೆ ಬ್ರಿಟಿಷರ ಕಾಲದಲ್ಲಿ ಮರದ ಕಟ್ಟಿಗೆ (ಪಳಿಗಳು) ಮತ್ತು…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಕಳ್ಳತನ ಮಾಡಿ ಸಿಕ್ಕಿ ಬಿದ್ದ ವ್ಯಕ್ತಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರು ‘ನಿನ್ನ ಪರವಾಗಿ ಹೇಳುವುದೇನಾದರೂ ಇದ್ದರೆ ಹೇಳಬಹುದು ಎಂದು ಹೇಳಿದಾಗ ಅದಕ್ಕೆ ಆತ ನ್ಯಾಯಾಧೀಶರೇ, ನನ್ನ ಹೊತೆಗೆ ನನ್ನ ತಂದೆ ತಾಯಿಗೂ ಶಿಕ್ಷೆ ವಿಧಿಸಿ. ಅವರನ್ನೂ ಜೈಲಿಗೆ ಕಳಿಸಿ ಎಂದ. ನ್ಯಾಯಾಧೀಶರು ಕಾರಣ ಕೇಳಿದಾಗ ಕಳ್ಳ ಹೇಳಿದ ’ನಾನು ಚಿಕ್ಕವನಿದ್ದಾಗ ಶಾಲೆಯಲ್ಲಿ ಒಂದು ಪೆನ್ಸಿಲ್ ಕದ್ದೆ ನಮ್ಮ ತಂದೆ ತಾಯಿಗೆ ಗೊತ್ತಾದರೂ ಅವರು ಏನನ್ನೂ ಹೇಳಲಿಲ್ಲ. ನಂತರ ಬೇರೆ ಬೇರೆ ವಸ್ತುಗಳನ್ನು ಕದ್ದು ತರತೊಡಗಿದೆ. ಕಳ್ಳತನದ ವಿಷಯ ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಏನೂ ಹೇಳುತ್ತಿರಲಿಲ್ಲ. ನನ್ನ ಕುಕೃತ್ಯವನ್ನು ಅವರು ನಿರ್ಲಕ್ಷಿಸಿದರು. ಬರಬರುತ್ತ ನನಗೆ ಕಳ್ಳತನ ಚಟವಾಯಿತು. ಇಂದು ನಾನು ದೊಡ್ಡ ಪ್ರಮಾಣದ ಕಳ್ಳನಾಗಲು ಅವರೇ ಕಾರಣ ಹೀಗಾಗಿ ನನ್ನೊಂದಿಗೆ ಅವರನ್ನೂ ಶಿಕ್ಷಿಸಿ.’ ಎಂದುತ್ತರಿಸಿದ. ಕಳ್ಳ ಹೇಳಿದ್ದು ಸರಿಯಾಗಿದೆ. ಪಾಲಕರು ತಮ್ಮ ಜವಬ್ದಾರಿಯನ್ನು ನಿರ್ವಹಿಸದೇ ಇದ್ದುದರಿಂದ ಅಪರಾಧದಲ್ಲಿ ಪಾಲುದಾರರಾದರು. ಈ ದೃಷ್ಟಾಂತವು ಯಾವುದೇ ಕೆಟ್ಟದ್ದನ್ನು…
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ನಾಡು ನುಡಿ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದ್ದು ಕನ್ನಡದ ಆಸ್ಮಿತೆಯನ್ನು ಎತ್ತಿ ಹಿಡಿಯಲು ನಾವೆಲ್ಲರೂ ಕನ್ನಡ ಭಾಷೆಯನ್ನ ಬಳಸಬೇಕು ಮತ್ತು ಬೆಳೆಸಬೇಕು. ಆ ನಿಟ್ಟಿನಲ್ಲಿ ನಾಡಿನ ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡಬೇಕಾಗಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಾಡಿನ ಕನ್ನಡ ಮಾಧ್ಯಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಬರೆದು 625 ಕ್ಕೆ 625 ಅಂಕ ಪಡೆದ ಮಕ್ಕಳಿಗಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ವಿಶೇಷವಾದ ಅಧ್ಯಯನ ಪ್ರವಾಸವನ್ನು ಏರ್ಪಡಿಸಿದೆ. ನವೆಂಬರ್ 14ರ ಒಳಗಾಗಿ ಅಕಾಡೆಮಿಯ ಕೇಂದ್ರ ಕಚೇರಿಯಲ್ಲಿ ಸಾಧಕ ಮಕ್ಕಳು ತಮ್ಮ ಹೆಸರನ್ನು ನೋಂದಾಯಿಸಬೇಕೆಂದು ತಿಳಿಸಿದ್ದಾರೆ.ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದಿರುವ ಸರಕಾರಿ ಶಾಲೆಗಳಲ್ಲಿ ಓದಿ ಸಾಧನೆ ಮಾಡಿರುವ ಕನ್ನಡ ಮಾಧ್ಯಮದ ಮಕ್ಕಳನ್ನು ಪ್ರೋತ್ಸಾಹಿಸುವುದು ಅಕಾಡೆಮಿಯ ಮೊದಲ ಆದ್ಯತೆಯಾಗಿದೆ ಎಂದು ಅವರು ಹೇಳಿದರು.ಅವರು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಕೇಂದ್ರ ಕಚೇರಿಯಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಆರ್ಥಿಕ ಸಮಸ್ಯೆಯಿಂದಾಗಿ ಸಂಕಷ್ಟದಲ್ಲಿದ್ದ ಆರು ಜನ ಎುದುರಿಸುತ್ತಿದ್ದ ಆರು ಜನ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಹಣಕಾಸು ನೆರವು ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ.ರವಿವಾರ ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಆರು ಜನ ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ಕೋರ್ಸಿನ ಪ್ರಥಮ ವರ್ಷದ ಬೋಧನಾ ಶುಲ್ಕ, ಊಟ ಮತ್ತು ವಸತಿ(ಹಾಸ್ಟೇಲ್ ಮತ್ತು ಮೆಸ್)ಕ್ಕೆ ಅಗತ್ಯವಾಗಿರುವ ಹಣದ ಚೆಕ್ ನ್ನು ವಿತರಿಸಿದರು.ಬಳಿಕ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು. ತಮ್ಮ ಶಿಕ್ಷಣಕ್ಕೆ ಅಗತ್ಯವಾಗಿರುವ ಆರ್ಥಿಕ ನೆರವನ್ನು ನೀಡಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಪೋಷಕರು, ತಮ್ಮ ಊರು ಮತ್ತು ಬಸವನಾಡು ವಿಜಯಪುರ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಕಿವಿಮಾತು ಹೇಳಿ ಶುಭ ಹಾರೈಸಿದರು. ಆರು ಜನ ವಿದ್ಯಾರ್ಥಿಗಳಿಗೆ ಒಟ್ಟು…
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಧೂಳಖೇಡ ಗ್ರಾಮದ ಭೀಮಾಶಂಕರ ನಗರದಲ್ಲಿ ಶನಿವಾರ ಮಧ್ಯಾಹ್ನ ೧೨.೩೦ ರ ಸುಮಾರಿಗೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಚಡಚಣ ಆಹಾರ ಇಲಾಖೆ ಹಾಗೂ ಝಳಕಿ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಧೂಳಖೇಡ ಗ್ರಾಮದ ಭೀಮಾಶಂಕರ ನಗರದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಸುಮಾರು ೧೫೬೮೦ ರೂಪಾಯಿ ಮೌಲ್ಯದ ೫೬೦ ಕೆಜಿ ಅಕ್ಕಿ ಹಾಗೂ ಟಂ ಟಂ ಪ್ಯಾಜಿಯೋ ಕೆಎ ೨೮/ಎಬಿ ೧೧೧೫ ವಶಕ್ಕೆ ಪಡೆದಿದ್ದಾರೆ ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಝಳಕಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಚಡಚಣ ಆಹಾರ ಇಲಾಖೆಯ ಆಹಾರ ನಿರೀಕ್ಷಕರಾದ ಶಿವಾನಂದ ಕೋಳಿ ಹೇಳಿದರು.ಪ್ರಕರಣ ಝಳಕಿ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.ಈ ದಾಳಿಯಲ್ಲಿ ಚಡಚಣ ಆಹಾರ ನಿರೀಕ್ಷಕ ಶಿವಾನಂದ ಕೋಳಿ, ಝಳಕಿ ಪೋಲಿಸ್ ಸಿಬ್ಬಂದಿಗಳಾದ ಎಸ್.ಬಿ. ಉಮರಾಣಿ, ಎಸ್.ಜಿ. ಬಿರಾದಾರ,…
ಲೇಖನ- ಜಯಶ್ರೀ. ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರು ‘ಇಂಚರ’, ಪ್ಲಾಟ್ ನಂ – ೧೨೪,ಚಂದ್ರಮೌಳಿ ಕಾಲೋನಿಬೆಳಗಾವಿ-೧೭ಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಜೀವದ ಗೆಳತಿ,ನೆತ್ತಿ ಸುಡುವ ಸೂರ್ಯನ ಆರ್ಭಟವ ತಗ್ಗಿಸಲೆಂದೇ ಮಟ ಮಟ ಮಧ್ಯಾಹ್ನ ಸುರಿದ ಮಳೆ ಗಕ್ಕನೇ ನಿಂತಾಗ, ಆಗಸದಲ್ಲಿ ಕಾಮನಬಿಲ್ಲು ಮೈ ಅರಳಿಸಿಕೊಂಡು ತುಟಿ ಬಿರಿದು ನಿಂತಿತು. ಅದೇ ಕ್ಷಣ ಕಾಗದವನ್ನೇ ದೋಣಿಯಾಗಿಸಿ ನಾನು ನೀನು ಕೈ ಕೈ ಹಿಡಿದು ತೇಲಿ ಬಿಟ್ಟ ಗಳಿಗೆ ಅದೆಷ್ಟು ಮಧುರ ಅನುಭವ! ಅಲ್ಲವೇ ಗೆಳತಿ? ಅದನ್ನು ಮರೆಯಲಾದೀತೆ? ಹಾಲುಗಡಲು ಕಡೆಯುವಾಗ ಜನಿಸಿದ ಅಪ್ಸರೆಯಂತೆ ನಿನ್ನ ನೋಟ ಕಂಗೊಳಿಸುತ್ತಿರುವಾಗ ಗಗನದ ಮಳೆ ಬಿಲ್ಲು ನಸು ನಾಚಿ ಮರೆಯಾಯಿತು. ತಕ್ಷಣವೇ ಬಲು ಮೋಹಗೊಂಡು ನಿನ್ನ ಸುಕೋಮಲ ಬೆರಳಿಗೆ ಬೆರಳು ಬೆಸೆದೆ. ನಿನ್ನನ್ನು ಗೆಳತಿಯಾಗಿ ಪಡೆದು ಪರಿಪೂರ್ಣನಾದೆ ಎಂಬ ಭಾವದಲ್ಲಿ ಮಿಂದು ನನ್ನ ಹೃದಯ ಕುಣಿಯಿತು. ನಾನೇ ಭಾಗ್ಯವಂತ ನಾನೇ ಪುಣ್ಯವಂತ ನನಗರಿವಿಲ್ಲದೇ ಉಸಿರಿದೆ ಅದಕ್ಕೆ ನೀನು ಊಹ್ಞೂಂ ಇಲ್ಲ ನಾನೇ ಭಾಗ್ಯವತಿ ಎಂದದ್ದು ಇಂದಿಗೂ ಕಿವಿಯಲ್ಲಿ ಅನುರುಣಿಸುತ್ತಿದೆ.…
ಲೇಖನ- ವೀಣಾ ಹೇಮಂತಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಈ ಹಿಂದೆ ಮಕ್ಕಳು ಚಿಕ್ಕವರಿದ್ದಾಗ ಅವರಿಗೆ ಒಂದು ನೋಟ್ ಪುಸ್ತಕ ಬೇಕಾದರೆ ಅವರು ತಮ್ಮ ಪಾಲಕರಿಗೆ ಹೇಳುತ್ತಿದ್ದರು. ಹಾಗೆ ಹೇಳಿದೊಡನೆ ಪುಸ್ತಕ ಸಿಗುತ್ತದೆ ಎಂಬುದಕ್ಕೆ ಯಾವುದೇ ಖಾತರಿ ಇರಲಿಲ್ಲ. ಪಾಲಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಮನೆಯಲ್ಲಿ ಉಳಿದ ಹಿಂದಿನ ವರ್ಷದ ಪುಸ್ತಕಗಳಲ್ಲಿನ ಖಾಲಿ ಹಾಳೆಗಳನ್ನು ಹರಿದು ಅದರಿಂದಲೇ ಮತ್ತೊಂದು ನೋಟು ಪುಸ್ತಕವನ್ನು ತಯಾರಿಸಿ ಅದನ್ನು ಬಳಸಿಕೊಳ್ಳಲು ಹೇಳುತ್ತಿದ್ದರು.ಯೂನಿಫಾರ್ಮ್ ಅಥವಾ ಸಮವಸ್ತ್ರದ್ದು ಕೂಡ ಇದೇ ಕಥೆ. ನಮಗೆ ಹೊಸ ಸಮವಸ್ತ್ರ ಬೇಕೆಂದು ನಾವು ಈ ವರ್ಷಕ್ಕೆ ಪಾಲಕರಲ್ಲಿ ಬೇಡಿಕೆ ಇಟ್ಟರೆ ಅದು ಮಾರ್ಚ್ ತಿಂಗಳಿನಲ್ಲಿಯೇ ಆಗಬೇಕಿತ್ತು. ಶಾಲೆಯ ರಜಾ ದಿನಗಳಲ್ಲಿ ನಮ್ಮ ಹಳೆಯ ಸಮವಸ್ತ್ರವನ್ನು ಪರಿಶೀಲಿಸಿ ಅದನ್ನು ರಿಪೇರಿ ಮಾಡಬಹುದಾದರೆ ಪಾಲಕರು ಅದರ ಹೊಲಿಗೆ ಬಿಚ್ಚಿ ದೊಡ್ಡದಾಗಿಸುವ ಇಲ್ಲವೇ ಇಲ್ಲವೇ ನಮ್ಮ ದೇಹದ ಅಳತೆಗೆ ಸರಿಹೊಂದುವ ರೀತಿಯಲ್ಲಿ ಸರಿ ಮಾಡಿ ಕೊಡುತ್ತಿದ್ದರು. ಇನ್ನು ಎಲ್ಲಾ ಹಬ್ಬಗಳಿಗೂ ಬಟ್ಟೆ ಕೊಡಿಸುವ ವಾಡಿಕೆಯಂತೂ ಇರಲೇ ಇಲ್ಲ.…
“ನವೆಂಬರ್ ಕ್ರಾಂತಿ”ಯ ಚರ್ಚೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಮಿಕ ಹೇಳಿಕೆ ಮಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತಾದ “ನವೆಂಬರ್ ಕ್ರಾಂತಿ”ಯ ಬಗ್ಗೆ ವ್ಯಾಪಕ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಂತೆಯೇ ಇತ್ತ ಸಿಎಂ ಸಿದ್ದರಾಮಯ್ಯ ಈ ಚರ್ಚೆಗೆ ಮತ್ತೊಂದು ಟ್ವಿಸ್ಟ್ ನೀಡುವ ಹೇಳಿಕೆ ನೀಡಿದ್ದಾರೆ.ಕಾಂಗ್ರೆಸ್ ಸರ್ಕಾರ ನವೆಂಬರ್ನಲ್ಲಿ ತನ್ನ ಐದು ವರ್ಷಗಳ ಅವಧಿಯ ಅರ್ಧಭಾಗ ತಲುಪಿರುವಂತೆಯೇ ನಾಯಕತ್ವದಲ್ಲಿ ಸಂಭವನೀಯ ಬದಲಾವಣೆಯ ಬಗ್ಗೆ ಊಹಾಪೋಹಗಳೆದ್ದಿವೆ.ಇದನ್ನು ಕೆಲವರು “ನವೆಂಬರ್ ಕ್ರಾಂತಿ” ಎಂದು ಕರೆಯುತ್ತಿದ್ದು, ಈ ಕುರಿತ ಚರ್ಚೆಗಳು ವ್ಯಾಪಕವಾಗಿವೆ. ಆದಾಗ್ಯೂ, ಸಿಎಂ ಸಿದ್ದರಾಮಯ್ಯ ಕೂಡ ಐದು ವರ್ಷಗಳ ಪೂರ್ಣ ಅವಧಿಯನ್ನು ಪೂರ್ಣಗೊಳಿಸುವುದಾಗಿ ನಿರಂತರವಾಗಿ ಪುನರುಚ್ಚರಿಸುತ್ತಿದ್ದಾರೆ.ಆದರೆ ಇದೀಗ ಮೊದಲ ಬಾರಿಗೆ ಸಿಎಂ ಸ್ಥಾನದ ಬದಲಾವಣೆ ಕುರಿತು ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ನತ್ತ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ.ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬ ಅವರ ಆಪ್ತ ಮತ್ತು ಮಾಜಿ ಸಚಿವ ಕೆ ಎನ್ ರಾಜಣ್ಣ ಅವರ ಹೇಳಿಕೆಯ ಬಗ್ಗೆ ಕೇಳಿದಾಗ, “ಅದು ಅವರ ವೈಯಕ್ತಿಕ ಅಭಿಪ್ರಾಯ”…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ವ್ಯವಸ್ಥಿತ ಚರಂಡಿ ಇರದ ಕಾರಣ ಮಲೀನ ನೀರು ರಸ್ತೆಯಲ್ಲಿ ಹರಿದು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಕೂಡಲೇ ಸಿ.ಸಿ ರಸ್ತೆ, ಚರಂಡಿ ನಿರ್ಮಿಸುವುದರ ಜೊತೆಗೆ ಮುಳ್ಳಿನ ಗಿಡಗಳನ್ನು ತೆರವು ಗೊಳಿಸಲು ೧೧ನೇ ವಾರ್ಡಿನ ಬಸವನಗರ ನಿವಾಸಿಗಳು ಆಗ್ರಹಿಸಿದ್ದಾರೆ.ಪಟ್ಟಣದ ೧೧ ನೇ ವಾರ್ಡಿನಲ್ಲಿ ವಿಜಯಪುರ ರಸ್ತೆಗೆ ಹೊಂದಿಕೊಂಡಿರುವ ಕರ್ನಾಟಕ ತೈಲ ವಿತರಣಾ ಕೇಂದ್ರ (ಪಟ್ರೋಲ್ ಪಂಪ್)ದ ಹಿಂದುಗಡೆ ಪ್ರದೇಶದಲ್ಲಿ ಅವ್ಯವಸ್ಥೆ ತಲೆದೋರಿದ್ದು ಪಟ್ಟಣ ಪಂಚಾಯಿತಿಯಿಂದ ಅಸ್ಪೃಶ್ಯತೆಗೆ ಒಳಗಾಗಿದೆ. ಈ ಕುರಿತು ವಾರ್ಡಿನ ನಿವಾಸಿಗಳಾದ ಡಾ.ಮಂಜುನಾಥ ಮಠ ಹಾಗೂ ಯೂಸೂಫ್ ಮಹಮ್ಮದ್ ಅಲಿ ಹೇಳುವಂತೆ, ನಮ್ಮ ಕಾಲೊನಿಗೆ ಉತ್ತಮವಾದ ಮುಖ್ಯ ರಸ್ತೆ, ಚರಂಡಿಯಿಲ್ಲದೇ ಬಳಲುತ್ತಿದೆ. ಈ ಕುರಿತು ಪಟ್ಟಣ ಪಂಚಾಯಿತಿಯಲ್ಲಿ ಕೇಳಲಾಗಿ ಅನುದಾನದ ಕೊರತೆಯ ಕಾರಣ ನೀಡಲಾಗುತ್ತಿದೆ. ಹಾಗಿದ್ದರೇ ಪಟ್ಟಣ ಪಂಚಾಯಿತಿಯಡಿ ಅನುಮತಿ ಪಡೆದ ಕಾಲೊನಿಗೆ ರಸ್ತೆ, ಚರಂಡಿಯಂತಹ ಅಭಿವೃದ್ಧಿ ಕಾರ್ಯಗಳು ಬೇಡವೇ? ಇಲ್ಲಿಯ ನಿವಾಸಿಗಳು ಕರ, ತೆರಿಗೆಯನ್ನು ಪ್ರತಿ ವರ್ಷ ಸಂದಾಯ ಮಾಡುತ್ತಿಲ್ಲವೇ? ಯಾಕೆ ಈ ತಾರತಮ್ಯ ಎಂದು…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಮ್ಮ ಬದುಕಿನಲ್ಲಿ ಎದುರಾಗುವ ಅನಿಶ್ಚಿತ ಘಟನೆಗಳು, ಅವಘಡಗಳು ಆರ್ಥಿಕ ಸಮಸ್ಯೆಗಳಿಗೆ ಎಡೆ ಮಾಡಿಕೊಡುತ್ತದೆ , ಇಲ್ಲವಾದರೆ ಕುಟುಂಬವನ್ನು ನಿರ್ವಹಿಸಲು ಕಷ್ಟವಾಗುತ್ತದೆ, ಇಂತಹ ಸಮಯದಲ್ಲಿ ಜೀವ ವಿಮೆಗಳು ಸಹಕಾರಿಯಾಗುತ್ತವೆ ಎಂದು ಪ್ರಭುಲಿಂಗೇಶ್ವರ ಸೌಹಾರ್ದ ಪತ್ತಿನ ಅಧ್ಯಕ್ಷ ,ನಾಡೋಜ ಶಾಸಕ ಜಗದೀಶ ಗುಡಗುಂಟಿ ಹೇಳಿದರು.ನಗರದ ಗೃಹ ಕಚೇರಿ ಸಾಕ್ಷಾತ್ಕಾರ ಭವನದಲ್ಲಿ ನಡೆದ ಪ್ರಭುಲಿಂಗೇಶ್ವರ ಸಹಕಾರಿ ಸಂಘದ ವಿವಿಧ ವಿಮಾ ಕಂಪನಿಗಳ ಒಡಬಂಡಿಕೆ ಕಾರ್ಯಕ್ರಮದಲ್ಲಿ ಮಾತನಾಡಿ, ಜೀವ ವಿಮೆಯನ್ನು ಸಮರ್ಪಕವಾಗಿ ನಿರ್ವಹಿಸಿದರೆ ಬದುಕಿನ ಬಂಡಿಯನ್ನು ಸರಾಗವಾಗಿ ಎಳೆಯಬಹುದು,ಜೀವ ವಿಮೆಯು ದೀರ್ಘಾವಧಿಯ ಉಳಿತಾಯಕ್ಕೆ ನೆರವಾಗುವುದರ ಜೋತೆಗೆ ಬದುಕಿಗೆ ರಕ್ಷಣೆಯನ್ನೂ ನೀಡುತ್ತದೆ.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾವಾಗ ಏನಾಗುತ್ತದೆ ಎಂದು ಗೊತ್ತಾಗುವುದಿಲ್ಲ, ಕುಟುಂಬವನ್ನು ನಿರ್ವಹಣೆ ಮಾಡುವ ಯಜಮಾನನಿಗೆ ಆಕಸ್ಮಿಕವಾಗಿ ಏನಾದರೂ ಆದರೆ ಅವನ ಕುಟುಂಬ ಬೀದಿಗೆ ಬರುತ್ತದೆ, ಇಂತಹ ಕೆಟ್ಟ ಸಮಯದಲ್ಲಿ ಇನ್ಸೂರೆನ್ಸ್ ಗಳು ಜೀವನ ನಡೆಸಲು ಸಹಕಾರಿಯಾಗುತ್ತವೆ, ನಾವು ದುಡಿಯುವ ಹಣದಲ್ಲಿ ಸ್ವಲ್ಪ ಪ್ರಮಾಣದಲ್ಲಿ ವಿಮೆ ಮಾಡಿಸಿದರೆ ನಮ್ಮ ಮುಂದಿನ ಜೀವನಕ್ಕೆ ಅನುಕೂಲವಾಗುತ್ತದೆ.ಇಂದು ಸಾಲ…
