Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು ಬಿಡುಗಡೆ ಮಾಡುವ ಸುದ್ದಿ ತಿಳಿಯುತ್ತಿದ್ದಂತೆ ಕರವೇ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಶೋಕ ಹಾರಿವಾಳ ನೇತೃತ್ವದಲ್ಲಿ ಸೋಮವಾರ ರಾತ್ರಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಪಟಾಕ್ಷಿ ಸಿಡಿಸಿ, ಸಿಹಿ ಹಂಚಿ ಸಂತಸ ಪಟ್ಟರು.ಈ ಸಂದರ್ಭದಲ್ಲಿ ಅಶೋಕ ಹಾರಿವಾಳ ಮಾತನಾಡಿ, ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಈಚೆಗೆ ನಾರಾಯಣಗೌಡ ಅವರ ನೇತೃತ್ವದಲ್ಲಿ ದೊಡ್ಡ ಪ್ರಮಾಣದಲ್ಲಿ ಹೋರಾಟ ನಡೆದಿತ್ತು. ಈ ಸಂದರ್ಭದಲ್ಲಿ ನಮ್ಮ ಸಂಘಟನೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿದಂತೆ ೨೯ ಜನರನ್ನು ಏಕಾಏಕಿ ಬಂಽಸಲಾಗಿತ್ತು. ಇದೀಗ ಅವರಿಗೆ ಬಿಡುಗಡೆ ಭಾಗ್ಯ ದೊರೆತಿರುವುದು ನಮ್ಮ ಎಲ್ಲ ಕಾರ್ಯಕರ್ತರಿಗೆ ಸಂತಸ ತಂದಿದೆ. ನಮ್ಮ ಸಂಘಟನೆಯ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಕನ್ನಡ ನಾಡಿನಲ್ಲಿ ಕನ್ನಡ ಭಾಷೆ ರಕ್ಷಣೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿರುವ ನಾರಾಯಣಗೌಡ ಅವರಿಗೆ ಯಾವಾಗಲೂ ನಮ್ಮ ಕಾರ್ಯಕರ್ತರು ಬೆಂಬಲವಾಗಿ ಇರುತ್ತಾರೆ ಎಂದರು.ಈ ಸಂದರ್ಭದಲ್ಲಿ ಬಸವರಾಜ ಹೂಗಾರ, ರವಿ ಗೊಳಸಂಗಿ, ಸುರೇಶ…
ಬಸವನಬಾಗೇವಾಡಿ: ಅಖಂಡ ತಾಲೂಕಿನಲ್ಲಿರುವ ಶಿಶುಪಾಲನಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಇಲಾಖೆಯ ಮಾರ್ಗಸೂಚಿ ಕಾರ್ಯನಿರ್ವಹಿಸುವ ಜೊತೆಗೆ ಮಕ್ಕಳನ್ನು ಉತ್ತಮ ರೀತಿಯಲ್ಲಿ ಆರೈಕೆ ಮಾಡಬೇಕೆಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ಯುವರಾಜ್ ಹನಗಂಡಿ ಹೇಳಿದರು.ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಗ್ರಾಮೀಣ ಶಿಶುಪಾಲನಾ ಕೇಂದ್ರಗಳ ಮಕ್ಕಳ ಆರೈಕೆದಾರರಿಗೆ ಸೋಮವಾರ ಆಯೋಜಿಸಿದ್ದ ಅಖಂಡ ತಾಲೂಕು ಮಟ್ಟದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಸವನಬಾಗೇವಾಡಿ, ನಿಡಗುಂದಿ ಮತ್ತು ಕೊಲ್ಹಾರ ತಾಲೂಕಿನ 27 ಆಯ್ದ ಗ್ರಾಮ ಪಂಚಾಯತಿಗಳಲ್ಲಿ ಶಿಶು ಪಾಲನಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು. ಮಕ್ಕಳ ಆರೈಕೆದಾರರ ತರಬೇತಿ ಪಡೆದು ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.ತರಬೇತಿ ಪಡೆದ ತಾವೆಲ್ಲರೂ ಇಲಾಖೆ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಬೇಕು. ಶಿಶುಗಳನ್ನು ಉತ್ತಮ ರೀತಿಯಲ್ಲಿ ಆರೈಕೆ ಮಾಡಬೇಕು. ಮಕ್ಕಳ ಆಹಾರ, ಸ್ವಚ್ಛತೆ ಮತ್ತು ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡಿ ಅಖಂಡ ತಾಲೂಕಿನ ಕೂಸಿನ ಮನೆಗಳು ರಾಜ್ಯದಲ್ಲಿಯೇ ಮಾದರಿಯಾಗುವಂತೆ ಶ್ರಮಿಸಬೇಕೆಂದು ಕರೆ ನೀಡಿದರು.ತಾ.ಪಂ.ಸಹಾಯಕ ನಿರ್ದೇಶಕ (ಮನರೇಗಾ) ಪ್ರಕಾಶ್ ದೇಸಾಯಿ ಅವರು ಮಾತನಾಡಿದರು.ಕೊಲ್ಹಾರ ತಾಪಂ ಐಇಸಿ ಸಂಯೋಜಕ ಸಂತೋಷ ಹರಿಜನ ಅವರು…
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ರಾಂಪೂರ (ಪಅ) ನಿಮಪೋ ವೃತ್ತದಡಿ ಬರುವ ಇಂಡಿ ಶಾಖಾ ಕಾಲುವೆ ಹಾಗೂ ಇಂಡಿ ಏತ ನೀರಾವರಿ ಕಾಲುವೆಗಳಡಿ ಬರುವ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆಗಳನ್ನು ಸಂರಕ್ಷಿಸಲು ಜ.೮ ರಿಂದ ೧೧ ರವರೆಗೆ ನೀರು ಹರಿಸಲಾಗುವುದು ಎಂದು ಕೆಬಿಜೆಎನ್ಎಲ್ ರಾಂಪೂರ ವೃತ್ತದ ಅಧೀಕ್ಷಕ ಅಭಿಯಂತರ ಮನೋಜಕುಮಾರ ಗಡಬಳ್ಳಿ ಅವರು ತಿಳಿಸಿದ್ದಾರೆ.ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರೂ ಆದ ಕೃಷ್ಣಾ ಮೇಲ್ಕಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಹಾಗೂ ಅಚ್ಚು ಕಟ್ಟು ಪ್ರದೇಶದ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ರೈತ ಮುಖಂಡರೊಂದಿಗೆ ಜ.೬ ರಂದು ನಡೆದ ವಿಡಿಯೋ ಸಂವಾದ ಸಭೆಯ ನಿರ್ಣಯದಂತೆ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಕ್ಕೆ ನಾರಾಯಣಪುರ ಜಲಾಶಯದಿಂದ ೦೩ ದಿನ ನೀರನ್ನು ಹರಿಸಲು ನೀಡಿದ ನಿರ್ದೇಶನದಂತೆ ಕಾಲುವೆ ಮೂಲಕ ೨.೭೫ ಟಿಎಂಸಿ ನೀರನ್ನು ಹರಿಸಲಾಗುವುದು.ಈ ಅವಧಿಯಲ್ಲಿ ಕಾಲುವೆ ಚಾಜಲ ಗೇಟ್ಗಳಿಗೆ ಹಾನಿ ಮಾಡುವುದು, ಎಸ್ಕೇಪ್ ಮೂಲಕ ಹಳ್ಳಕ್ಕೆ ನೀರು ಹರಿಸುವುದು,…
ವಿಜಯಪುರ: ಗ್ರಾಹಕರು ತಮ್ಮ ಹಕ್ಕಿನ ಬಗ್ಗೆ ಅರಿವು ಹೊಂದಬೇಕು. ಇದಕ್ಕೆ ಸಂಬಂಧಿಸಿದ ಇಲಾಖೆಗಳು ಗ್ರಾಹಕರ ಹಕ್ಕುಗಳು ಮತ್ತು ಕಾನೂನುಗಳ ಅರಿವು ಮೂಡಿಸಬೇಕು ಎಂದು ವಿಜಯಪುರ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಸ್ ಕುಂದರ್ ಅವರು ಹೇಳಿದರು.ಅವರು ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಆಹಾರ ಸುರಕ್ಷತಾ ಇಲಾಖೆ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ನ್ಯೂ ಸಂಸ್ಥೆ ವಿಜಯಪುರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ -೨೦೨೩ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಎಲ್ಲರೂ ಗ್ರಾಹಕ ಕಾನೂನು…
ವಿಜಯಪುರ: ಸಿದ್ದೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಜಾನುವಾರಗಳ ಪ್ರದರ್ಶನ ನಡೆಯಲಿದ್ದು, ರೈತರು ತಮ್ಮ ಜಾನುವಾರುಗಳನ್ನು ಶ್ರೀ ಸಿದ್ದೇಶ್ವರ ಜಾನುವಾರು ಜಾತ್ರೆಯಲ್ಲಿ ಪ್ರದರ್ಶಿಸುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ತಿಳಿಸಿದ್ದಾರೆ.ಕಳೆದ ಮೂರು ವರ್ಷಗಳಿಂದ ಕರೋನಾ ಮಹಾಮಾರಿಯಿಂದ ಜಾನುವಾರಗಳ ಜಾತ್ರೆ ನಡೆದಿರಲಿಲ್ಲ. ಹಾಗಾಗಿ ಈ ವರ್ಷ ಜಾನುವಾರು ಜಾತ್ರೆಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ರೈತರು ತಮ್ಮ ಜಾನುವಾರುಗಳನ್ನು ಪ್ರದರ್ಶಿಸಬಹುದಾಗಿದ್ದು, ಉತ್ತಮ ಜಾನುವಾರಗಳಿಗೆ ಸೂಕ್ತ ಬಹುಮಾನವನ್ನು ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ತೊರವಿಯಲ್ಲಿ ಜ.೧೦ರಿಂದ ೧೮ರವರೆಗೆ ಜರುಗುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆ ವಿಜಯಪುರ: ಪ್ರತಿ ವರ್ಷದಂತೆ ವಿಜಯಪುರ ತಾಲೂಕಿನ ತೊರವಿಯಲ್ಲಿ ಜ.೧೦ರಿಂದ ೧೮ರವರೆಗೆ ಜರುಗುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆಯನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಿದ್ದೇಶ್ವರ ಜಾನುವಾರು ಜಾತ್ರೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಾನುವಾರು ಜಾತ್ರೆಯಲ್ಲಿ ಗಡಿ ಭಾಗವಾಗಿರುವುದರಿಂದ ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ರೈತರು, ಜಾನುವಾರುಗಳು ಆಗಮಿಸಲಿರುವುದರಿಂದ ಸೂಕ್ತ ಲಸಿಕಾಕರಣ, ಜಾತ್ರೆಯಲ್ಲಿ ಭಾಗವಹಿಸಿದ ರೈತರಿಗೆ ನಿರಂತರವಾಗಿ ಕುಡಿಯುವ ನೀರಿನ ವ್ಯವಸ್ಥೆ, ಜಾತ್ರೆ ಸ್ಥಳದಲ್ಲಿ ಸ್ವಚ್ಚತೆ, ಒಂದು ವಾರಗಳ ಕಾಲಕ್ಕೂ ಹೆಚ್ಚಿನ ದಿನ ಜಾತ್ರೆ ನಡೆಯುವುದರಿಂದ ಸಮರ್ಪಕ ವಿದ್ಯುತ್ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಯಾವುದೇ ಅಡೆ-ತಡೆವಾಗದಂತೆ ನೋಡಿಕೊಂಡು ವ್ಯವಸ್ಥಿತವಾಗಿ ಜಾತ್ರೆ ಆಯೋಜಿಸುವಂತೆ ಅವರು ಸೂಚನೆ ನೀಡಿದರು.ಜಾತ್ರೆಯಲ್ಲಿ ಅಂದಾಜು…
ಸಿಂದಗಿ: ಪಟ್ಟಣದಲ್ಲಿ ಶ್ರೀ ಶಿವದಾಸಿಮಯ್ಯ ಶಿವಶಿಂಪಿ ಸಮುದಾಯ ಸಭಾಭವನ ನಿರ್ಮಾಣಗೊಳ್ಳಲು ರಾಜ್ಯ ಸರ್ಕಾರದಿಂದ ೨೫ ಲಕ್ಷ ಅನುದಾನವನ್ನು ನೀಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಅವರು ಪಟ್ಟಣದ ಲೋಣಿ ಲೇಔಟ್ದಲ್ಲಿ ಸೋಮವಾರ ಶ್ರೀ ಶಿವದಾಸಿಮಯ್ಯ ಶಿವಸಿಂಪಿ ಸಮಾಜ ವಿಕಾಸ ಸಂಘದಿಂದ ನಡೆದ ಸಭಾಭವನದ ಮತ್ತುಕಾರ್ಯಾಲಯದ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.ಸಣ್ಣ ಸಣ್ಣ ಸಮುದಾಯಗಳು ಯಾವತ್ತು ನಾವು ಸಣ್ಣ ಸಮುದಾಯದವರು ಎಂದು ಭಾವಿಸಿಕೊಳ್ಳಬಾರಾದು ಸಣ್ಣ ಸಮುದಾಯದಲ್ಲಿಯೆ ಅತ್ಯಂತ ಮಹತ್ತರವಾದ ಪ್ರತಿಭೆಗಳಿರುತ್ತವೆ. ಅಂತಹ ಸಮುದಾಯಗಳನ್ನು ಶಿಕ್ಷಣ, ಸಾಮಾಜಿಕ, ಆರೋಗ್ಯವಾಗಿ ಮತ್ತು ಎಲ್ಲ ರೀತಿಗಳಲ್ಲಿ ಅಭಿವೃದ್ದಿ ಪಡಿಸುವ ಕನಸನ್ನು ಹೊತ್ತುಕೊಂಡಿದ್ದೇನೆ. ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಬೇಕು ಎಂದ ಅವರು ನಮ್ಮ ತಂದೆಯ ಕಾಲದಿಂದಲೂ ಶಿವಶಿಂಪಿ ಸಮುದಾಯ ನಮ್ಮ ಮನೆತನದ ಮೇಲೆ ಅತಿಯಾದ ಗೌರವವನ್ನಿಟ್ಟುಕೊಂಡಿದೆ ಆ ಸಮುದಾಯಕ್ಕೆ ನಾವು ಸದಾಋಣಿಯಾಗಿರುತ್ತೇವೆ ಎಂದರು.ಸಮುದಾಯದ ಪ್ರಮುಖ ಪ್ರಭುಲಿಂಗ ಲೋಣಿ, ಸಮಾಜದ ಉಪಾಧ್ಯಕ್ಷ ಡಾ.ವಿಶ್ವರಾಧ್ಯ ಶಿವಶಿಂಪಗೇರ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮಾಜದ ಗೌರವಾಧ್ಯಕ್ಷ ಬಂಡೆಪ್ಪ ಲೋಣಿ, ಅಧ್ಯಕ್ಷ ಅಶೋಕ ಲೋಣಿ,…
ಸಿಂದಗಿ: ವಿದ್ಯಾರ್ಥಿಗಳು ಕೀಳರಿಮೆ, ಹಿಂಜರಿಕೆ ತೊರೆದು, ಹೊಸ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರಲ್ಲೂ ಹಲವಾರು ದೌರ್ಬಲ್ಯಗಳು, ನ್ಯೂನ್ಯತೆಗಳಿದ್ದು, ಅದನ್ನು ಎದುರಿಸಿ ಮುಂದುವರೆಯಬೇಕು ಎಂದು ಬಾಗಲಕೋಟೆಯ ಬಸವೇಶ್ವರ ಕಲಾ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕಿ ಮುಕ್ತಾ ಹಿರೇಮಠ ಕಿವಿಮಾತು ಹೇಳಿದರು.ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಮಹಾವಿದ್ಯಾಲಯದ ಸಭಾಭವನದಲ್ಲಿ ಶ್ರೀ ಪದ್ಮರಾಜ ಮಹಿಳಾ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿ ಸ್ಥಾನ ವಹಿಸಿ ಅವರು ಮಾತನಾಡಿದರು.ಸಾನಿಧ್ಯ ವಹಿಸಿದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿದರು.ಈ ವೇಳೆ ಪ್ರಾಚಾರ್ಯ ಎಂ.ಎಸ್ ಹೈಯಾಳಕರ ಅಧ್ಯಕ್ಷೀಯ ಮಾತುಗಳನ್ನಾಡಿದರು. ಕಾರ್ಯಾಧ್ಯಕ್ಷ ಎಸ್.ಎಸ್. ಸಜ್ಜನ, ಪ್ರಧಾನ ಕಾರ್ಯದರ್ಶಿ ಗಂಗಾ ಗಾಲೀಬ ದೇವಣಗಾಂವ, ಎಂ.ಎಸ್. ಸಜ್ಜನ, ಸುವರ್ಣಾ ಹಿಪ್ಪರಗಿ ವೇದಿಕೆಯ ಮೇಲಿದ್ದರು.ಈ ವೇಳೆ ಬೋರಗಿ ಎಂ.ಪಿ.ಎಸ್ ಶಾಲೆಗೆ ಶಿಕ್ಷಕಿಯಾಗಿ ಆಯ್ಕೆಯಾದ ಎಂ.ಎಸ್ ಸಜ್ಜನ ಹಾಗೂ ವಿದ್ಯಾರ್ಥಿನಿ ಸುವರ್ಣ ಹಿಪ್ಪರಗಿ ಅವರನ್ನು ಸನ್ಮಾನಿಸಲಾಯಿತು.ವಿದ್ಯಾರ್ಥಿನಿ ವಿಶಾಲಾಕ್ಷಿ ಮಾಲಿಪಾಟೀಲ ನಿರೂಪಿಸಿದರು. ಉಪನ್ಯಾಸಕಿ ಹೇಮಾ ಹಿರೇಮಠ…
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬಿ ಎಚ್ಚರಿಕೆ ಸಿಂದಗಿ: ತಾಲೂಕಿನಲ್ಲಿ ೫೧ ಮಕ್ಕಳು ತೀವ್ರ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿದ್ದಾರೆ. ಈ ರೀತಿಯಾಗಿ ಮಕ್ಕಳು ಬಳಲಬಾರದು ಎಂಬ ದೃಷ್ಠಿಯಿಂದ ಸರಕಾರ ತಾಲೂಕು ಆಸ್ಪತ್ರೆಯಲ್ಲಿ ಎನ್ಆರ್ಸಿ ಮಕ್ಕಳ ಘಟಕಗಳನ್ನು ಸ್ಥಾಪಿಸಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬಿ ಹೇಳಿದರು.ಪಟ್ಟಣಕ್ಕೆ ದಿಡೀರನೇ ವಿವಿಧ ಇಲಾಖೆ ಮತ್ತು ಶಾಲೆಗಳಿಗೆ ಭೇಟಿ ನೀಡಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಮಕ್ಕಳು ಅಪೌಷ್ಠಿಕತೆಯಿಂದ ಬಳಲಬಾರದು ಎಂಬ ದೃಷ್ಠಿಯಿಂದ ಮಕ್ಕಳ ಪೌಷ್ಠಿಕ ಪುನಃಶ್ಚೇತನ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಇಲ್ಲಿನ ವೈದ್ಯಾಧಿಕಾರಿ ನಿರ್ಲಕ್ಷ್ಯದಿಂದಾಗಿ ಬಂದಿತ್ತು. ಅದನ್ನು ಖುದ್ದು ನಾವಾಗಿಯೇ ತೆಗೆಯುವ ಪರಿಸ್ಥಿತಿ ಬಂದಿದೆ. ತಾಲೂಕು ಆಸ್ಪತ್ರೆಯ ನವಜಾತ ಶಿಶುವಿನ ಘಟಕದಲ್ಲಿ ವಿದ್ಯುತ್ ವ್ಯವಸ್ಥೆ ಸರಿಯಾಗಿಲ್ಲ. ಬಾಣಂತಿಯರಿಗೆ ಬಿಸಿ ನೀರಿನ ವ್ಯವಸ್ಥೆಯಿಲ್ಲ. ಪತ್ಯ ಅಹಾರವು ಸರಿಯಾಗಿ ನೀಡುತ್ತಿಲ್ಲ ಎಂಬುದು ಅಲ್ಲಿನ ಬಾಣಂತಿಯರಿಗೆ ವಿಚಾರಿಸಿದಾಗ ತಿಳಿದು ಬಂದಿದೆ ಹಾಗಾಗಿ ನಾಳೆ ವಿಜಯಪುರದಲ್ಲಿ ನಡೆಯುವ ಸಭೆಗೆ…
ಜ.೧೧ – ೧೨ರಂದು ಸಿಂದಗಿ ತಾಲೂಕು ಜಿಲ್ಲೆಯನ್ನಾಗಿ ರಚಿಸಬೇಕೆಂದು ಮನವಿ ಸಲ್ಲಿಕೆ ಸಿಂದಗಿ: ತಾಲೂಕನ್ನು ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಾರಂಭವಾದ ಈ ಹೋರಾಟದ ಹಿನ್ನೆಲೆಯಲ್ಲಿ ಬರುವ ಜ.೧೧ ಅಥವಾ ೧೨ರಂದು ಸಿಎಂ ಭೇಟಿಗಾಗಿ ನಿಯೋಗ ಹೋಗಲು ನಿರ್ಧಾರ ಮಾಡಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ನಗರದ ಬಸವ ಮಂಟಪದಲ್ಲಿ ಭಾನುವಾರ ಸಾಯಂಕಾಲ ಹಮ್ಮಿಕೊಂಡ ಸಿಂದಗಿಯನ್ನು ಜಿಲ್ಲೆಯನ್ನಾಗಿ ಮಾಡುವ ಬೇಡಿಕೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ರಮೇಶ ಭೂಸನೂರ, ವಿಪ ಮಾಜಿ ಸದಸ್ಯ ಅರುಣ ಶಹಾಪೂರ, ಸಾಹಿತಿಗಳು, ಸಂಘಟನೆಯ ಪ್ರಮುಖರು, ಮಹಿಳಾ ಪ್ರತಿನಿಧಿಗಳು, ಪತ್ರಕರ್ತರು ಸೇರಿಕೊಂಡು ಹತ್ತಾರು ಜನರ ನಿಯೋಗವನ್ನು ರಚಿಸಿ ಸಿಎಂ. ಡಿಸಿಎಂ, ಸಚಿವರ ಮತ್ತು ಸರಕಾರದ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಸಿಂದಗಿ ತಾಲೂಕನ್ನು ಜಿಲ್ಲೆಯನ್ನಾಗಿ ರಚಿಸಬೇಕು ಎಂಬ ಮನವಿ ಸಲ್ಲಿಕೆ ಮಾಡಲಾಗುವುದು ಎಂದರು.ಇದೇ ಸಂದರ್ಭದಲ್ಲಿ ಮಕ್ಕಳ ಹಿರಿಯ ಸಾಹಿತಿ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಹ.ಮ.ಪೂಜಾರ ಮಾತನಾಡಿದರು.ಈ ವೇಳೆ ವಿಪ ಮಾಜಿ ಸದಸ್ಯ ಅರುಣ…
