Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕಾರಜೊಳ & ತೊನಶ್ಯಾಳದಲ್ಲಿ ಜೆಜೆಎಂ ಯೋಜನೆಗೆ ಚಾಲನೆ ನೀಡಿದ ಎಂಎಲ್ಸಿ ಸುನೀಲಗೌಡ ಪಾಟೀಲ ಸ್ಪಷ್ಠನೆ ವಿಜಯಪುರ: ಗ್ರಾಮಸ್ಥರು ಮತ್ತು ಗ್ರಾಮ ಪಂಚಾಯಿತಿ ಪರವಾಗಿ ನಾನು ಹೋರಾಟ ಮಾಡಿದರ ಫಲವಾಗಿ ಜಲಜೀವನ ಮಿಷನ್(ಜೆಜೆಎಂ) ಯೋಜನೆಗೆ ಗ್ರಾ. ಪಂ. ಗಳ ವತಿಯಿಂದ ನೀಡಬೇಕಿದ್ದ ಸಮುದಾಯ ವಂತಿಗೆಯನ್ನು ರದ್ದು ಪಡಿಸಲಾಗಿದೆ. ಈಗ ಸರಕಾರವೇ ಈ ಹಣವನ್ನು ಭರಿಸುತ್ತಿದ್ದು, ಈ ದುಡ್ಡಿನಲ್ಲಿ ಗ್ರಾ. ಪಂ. ಗಳು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಸೋಮವಾರ ಬಬಲೇಶ್ವರ ತಾಲೂಕಿನ ಕಾರಜೊಳ ಗ್ರಾಮದಲ್ಲಿ ತೊನಶ್ಯಾಳ ಗ್ರಾಮದಲ್ಲಿ ರೂ.1.47 ಕೋ. ಮತ್ತು ಕಾರಜೋಳ ಗ್ರಾಮದಲ್ಲಿ ರೂ.1.22 ಕೋ. ವೆಚ್ಚದಲ್ಲಿ ಮನೆಮನೆಗಳಿಗೆ ನೀರು ಪೂರೈಸುವ ಜೆಜೆಎಂ ಯೋಜನೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಈ ಮುಂಚೆ ಜೆಜೆಎಂ ಯೋಜನೆ ಕಾಮಗಾರಿಗಳಿಗೆ ಪ್ರತಿಯೊಂದು ಗ್ರಾ. ಪಂ. ಗಳು 15ನೇ ಹಣಕಾಸಿನಡಿ ಮತ್ತು ಫಲಾನುಭವಿಗಳಿಂದ ಸಮುದಾಯ ವಂತಿಗೆಯನ್ನು ನೀಡಬೇಕಿತ್ತು. ಕೊರೊನಾ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಗ್ರಾಮಸ್ಥರು ನಮಗೆ ನಳಗಳೇ ಬೇಡ ಎಂದು…
ವ್ಯಂಗೋತ್ಸವ*- ಶ್ರೀನಿವಾಸ ಜಾಲವಾದಿ,* ಸಾಹಿತಿ ಸುರಪುರ ‘ಮದ್ಯಮುಕ್ತ ರಾಜ್ಯ ಮಾಡ್ತಾರಂತಪಾ’ ಅಂದ ಶೌರಿ’ಏನ್ ಮಾಡ್ತಾರಲೇ, ಮೊನ್ನಿ ಹೊಸ ವರ್ಸದ ಹಿಂದಿನ ರಾತ್ರಿ ಇನ್ನೂರು ಕೋಟಿ ಕುಡ್ದಾವ್ರು’ ನಕ್ಕ ಜಬರಿ’ಮತ್ತ ಅವತ್ತ ಕೋವಿಡ್ ತಳಿ ಎಲ್ಲಿ ಹೋಗಿತ್ತ?’ ಕೇಳಿದಳು ರಾಣಿ’ಅದು ಮದ್ಯಮುಕ್ತ ಇಲ್ಲಿ ಅಲ್ಲಪಾ, ಅದು ಛತ್ತಿಸಗಢದಾಗ ಜನೇವರಿ 22 ಕ್ಕ ಮಾಡಕತ್ತಾರ’ ಅಂದ ಶೌರಿ’ಯಾಕ?”ಏ ಅದು ರಾಮನ ತಾಯಿ ಊರು ಐತಿ, ಅವತ್ತ ಅಯೋಧ್ಯದಾಗ ರಾಮಲಲ್ಲಾನ ಕುಂದ್ರಸ್ತಾರ, ಅದಕ್ಕs ಅಂದ ಮದ್ಯ ಬಂದ್’ ಅಂದ ಶೌರಿ’ ಮತ್ತs ಗೋದ್ರಾ ಮರಕಳಿಸ್ತೈತಿ ಅಂತ ಹರಿ ಹೇಳೇತಿ’ ಅಂದಳು ರಾಣಿ’ಆ ಪ್ರಸಾದ ಮತ್ತ ಅಂದೇತಿ, ನಿತ್ಯಾನಂದಗ ಭಾಳ ಭಕ್ತರ ಇದ್ದಂಗ ಸಿದ್ರಾಮಯ್ಯಗೂ ಭಕ್ತರ ಭಾಳ ಅದಾರಂತ’ ಅಂದ ಜಬರಿ’ ಮತ್ತ ನಮ್ಮ ಇಜಾಪುರದ ಹುಲಿ ಗಪ್ಪ ಆಗೇತಲಾ?’ ಕೇಳಿದ ಶೌರಿ’ಅಸಂತೋಸ ಜರಾ ತಡಿ ಗಡಬಡ ಮಾಡಬ್ಯಾಡ ಅಂದಿರಬೇಕು’ ನಕ್ಕಳು ರಾಣಿ’ ಮತ್ತs ಜ್ಯೂನಿಯರ್ ಕುಸ್ತಿಪಟುಗಳು ಸಾಕ್ಷಿ ಪೂನಿಯಾ ಪೋಗಾಟ ವಿರುದ್ಧ ತಿರಿಗಿ ಬಿದ್ದಾರಂತಲಾ?’ ಕೇಳಿದ…
ಆಕ್ಸಫರ್ಡ್ ಐಐಟಿ ಒಲಿಂಪಿಯಾಡ್ ಶಾಲೆಯ ಕ್ರೀಡಾಕೂಟದಲ್ಲಿ ಬಸವರಾಜ ಕೌಲಗಿ ಅಭಿಮತ ವಿಜಯಪುರ: ಆರೋಗ್ಯಪೂರ್ಣವಾದ ದೇಹದಲ್ಲಿ ಮಾತ್ರ ಆರೋಗ್ಯಪೂರ್ಣವಾದ ಮನಸ್ಸು ಅರಳಲು ಸಾಧ್ಯ. ಮಕ್ಕಳ ಪರಿಪೂರ್ಣ ವ್ಯಕ್ತಿತ್ವ ವಿಕಾಸಕ್ಕಾಗಿ ನಾವು ಅವರ ಆಸಕ್ತಿಗಳನ್ನು ಪೋಷಿಸಬೇಕಾಗಿದೆ, ಮಕ್ಕಳ ಕ್ರೀಡಾಸಕ್ತಿಗೆ ನೀರೆರೆದು ಪೋಷಿಸಿದಾಗ ಮಾತ್ರ ಆರೋಗ್ಯ ಪೂರ್ಣ ಜೀವನವನ್ನು ನಡೆಸಲು ಸಾಧ್ಯವಾಗುತ್ತದೆ ಎಂದು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ ಹೇಳಿದರು.ನಗರದ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಆಕ್ಸ್ಫರ್ಡ್ ಐ ಐ ಟಿ ಒಲಿಂಪಿಯಾಡ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕ್ರೀಡಾಕೂಟವನ್ನು ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ ವಿಜಯಕುಮಾರ ಆಜುರು ಮಾತನಾಡಿ “ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುವುದು ಇಂದಿನ ಅಗತ್ಯವಾಗಿದೆ. ಒತ್ತಡದ ಜೀವನಕ್ರಮ ಅನುಸರಿಸುತ್ತಿರುವ ನಾವೆಲ್ಲರೂ ರೋಗ ಮುಕ್ತ ಜೀವನ ನಡೆಸಲು ಮಕ್ಕಳನ್ನು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಬೇಕು, ಆ ಕೆಲಸವನ್ನು ಆಕ್ಸ್ಫರ್ಡ್ ಸಂಸ್ಥೆ ಅತ್ಯಂತ ಶ್ರದ್ದೆಯಿಂದ ಮಾಡುತ್ತಿದೆ, ಪಾಲಕರು ಕೂಡ…
Udayarashmi kannada daily newspaper
ಆದಿತ್ಯ ಯಾನ ಕೈಗೊಂಡಿದ್ದ ಇಸ್ರೋ ಮಿಷನ್ ಯಶಸ್ವಿ | ಪ್ರಧಾನಿ ಮೋದಿ ಮೆಚ್ಚುಗೆ | ಸೂರ್ಯನ ಅಧ್ಯಯನದ ಮೊದಲ ನೌಕೆ ನವದೆಹಲಿ: ಆದಿತ್ಯ ಯಾನ ಕೈಗೊಂಡಿದ್ದ ಇಸ್ರೋ ಮಿಷನ್ ಯಶಸ್ವಿಯಾಗಿದೆ. ಸೂರ್ಯನ ಅಧ್ಯಯನಕ್ಕಾಗಿ ಉಡಾವಣೆಯಾಗಿದ್ದ ಆದಿತ್ಯ ನೌಕೆ ನಿಗದಿತ ಎಲ್-1 ಪಾಯಿಂಟ್ ತಲುಪುವಲ್ಲಿ ಯಶಸ್ವಿಯಾಗಿದೆ.ಚಂದ್ರಯಾನ-3 ರ ಬಳಿಕ ಇಸ್ರೋ ಮಹತ್ವದ ಸಾಧನೆ ಮಾಡಿದ್ದು, ಆದಿತ್ಯ ನೌಕೆ ಸೂರ್ಯನ ಅಧ್ಯಯನ ಆರಂಭಿಸಲಿರುವ ಮೊದಲ ನೌಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಂದ್ರಯಾನ-3 ಯಶಸ್ವಿಯಾದ 10 ದಿನಗಳಲ್ಲಿ ಆದಿತ್ಯ ಎಲ್-1 ನೌಕೆಯನ್ನು ಉಡಾವಣೆ ಮಾಡಲಾಗಿತ್ತು. ಸುದೀರ್ಘ 126 ದಿನಗಳ ಬಳಿಕ ಆದತ್ಯ ನೌಕೆ ತನ್ನ ಗಮ್ಯ ತಲುಪಿದೆ.ಪ್ರಧಾನಿ ನರೇಂದ್ರ ಮೋದಿ ಇಸ್ರೋ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.ಭಾರತ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಭಾರತದ ಮೊದಲ ಆದಿತ್ಯ ಅಧ್ಯಯನ ನೌಕೆ ಎಲ್-1 ಪಾಯಿಂಟ್ ತಲುಪಿದೆ. ಇದು ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣಾ ಮನೋಭಾವಕ್ಕೆ ಸಾಕ್ಷಿಯಾಗಿದೆ.ಇದು ಅತ್ಯಂತ ಸಂಕೀರ್ಣ ಮತ್ತು ಸಂಕೀರ್ಣವಾದ ಬಾಹ್ಯಾಕಾಶ…
ವಿಜಯಪುರ: ಜಿಲ್ಲಾ ಆಸ್ಪತ್ರೆ ವಿಜಯಪುರದಲ್ಲಿ ೪೦ ವರ್ಷದ ಮದುಮೇಹ ರೋಗದಿಂದ ಬಲಳುತ್ತಿರುವ ರೋಗಿಗೆ ಇನಸಿಜನಲ್ ಹರ್ನಿಯಾ ಹೊಟ್ಟೆಯ ದೊಡ್ಡ ಪ್ರಮಾಣದ ಹರಣಿಯಾಅನ್ನು ಉದರ ದರ್ಶಕ ವಿಧಾನದಿಂದ ಅತ್ಯಂತ ಚಿಕ್ಕ ರಂದ್ರಗಳ ಮೂಲಕ ಐಪಾಮ್ಪ್ಲಸ್ ಶಸ್ತ್ರಚಿಕಿತ್ಸೆಯನ್ನು ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಡಾ. ಆನಂದ ಝಳಕಿ, ಡಾ.ರಿಹಾನ ಬಾಂಗಿ ಹಾಗೂ ಅವರ ತಂಡ ಮತ್ತು ಅರವಳಿಕೆಯನ್ನು ಡಾ. ಗುರುಲಿಂಗಪ್ಪ ಉಪಾಸೆ ಅವರು ಈ ಶಸ್ತçಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.ರೋಗಿಗೆ ಮದುಮೇಹ ಇರುವುದರಿಂದ ಶಸ್ತ್ರಚಿಕಿತ್ಸೆ ಮಾಡುವುದು ಅನಿವಾರ್ಯವಾದ ಹಿನ್ನಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿರುವುದರಿಂದ ಪ್ರಯೋಜನಕಾರಿಯಾಗಿದೆ. ಈ ಶಸ್ತ್ರಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಗಳಲ್ಲಿ ಮಾಡಿದರೆ ಅಂದಾಜು ರೂ.೩ಲಕ್ಷ ಖರ್ಚು ವೆಚ್ಚವಾಗುತ್ತಿತ್ತು. ಜಿಲ್ಲಾ ಆಸ್ಪತ್ರೆಯಲ್ಲಿ ಈ ಸೇವೆ ಉಚಿತವಾಗಿ ದೊರೆಯುವುದರೊಂದಿಗೆ ರೋಗಿಯು ಆರೋಗ್ಯವಾಗಿ ಚೆತರಿಸಿಕೊಳ್ಳುತ್ತಿದ್ದಾರೆ. ಈ ಯಶಸ್ವಿ ಕಾರ್ಯ ಕೈಗೊಂಡಿರುವ ತಂಡಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೋಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುದ್ದೇಬಿಹಾಳ: ಪಟ್ಟಣದ ಮುಖ್ಯ ಬಜಾರನಲ್ಲಿರುವ ಕೆಬಿಎಂಪಿಎಸ್ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಯ ಒಟ್ಟು ೭೪ ವಿಕಲಚೇತನ ಮಕ್ಕಳಿಗೆ ಸರ್ಕಾರದ ಸಾಧನಗಳ ಸಲಕರಣೆಗಳನ್ನು ವಿತರಿಸಲಾಯಿತು.ಈ ವೇಳೆ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಬಿಇಓ ಬಸವರಾಜ ಸಾವಳಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ, ತಾಲೂಕು ಪಂಚಾಯತನ ಯೋಜನಾಧಿಕಾರಿ ಖೂಬಾಸಿಂಗ್ ಜಾಧವ, ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ, ಸರ್ಕಾರಿ ಪ್ರೌಢ ಶಾಲೆಯ ಮುಖ್ಯಗುರು ಎಂ.ಎಸ್.ಕವಡಿಮಟ್ಟಿ, ಬಿಆಯ್ಇಆರ್ ಟಿ.ಎಸ್.ರಾಮಥಾಳ, ವಿಕಲಚೇತನರ ಸಂಘದ ಜಿಲ್ಲಾಧ್ಯಕ್ಷ ಎಸ್.ಕೆ.ಘಾಟಿ, ತಾಲೂಕು ಅಧ್ಯಕ್ಷ ನಾಗೇಶ ಸೇರಿದಂತೆ ಮತ್ತೀತರರು ಇದ್ದರು.
ವಿಜಯಪುರ: ಜಿಲ್ಲೆಯ ಮದಭಾವಿ-ಕವಲಗಿ ಹತ್ತಿರ ಶನಿವಾರ ಸಂಭವಿಸಿದ ಸಾರಿಗೆ ಬಸ್ಗಳ ಅಪಘಾತಕ್ಕೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಗಾಯಾಳುಗಳನ್ನು ದಾಖಲಿಸಿರುವ ಆಸ್ಪತ್ರೆಯ ವೈದ್ಯಾಧಿಕಾರಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಸೂಕ್ತ ಸೂಚನೆಗಳನ್ನು ನೀಡಿದ್ದಾರೆ.ಅಪಘಾತದ ಸುದ್ದಿ ತಿಳಿದ ಕೂಡಲೇ ಸಚಿವರು, ಅಪಘಾತದ ಬಗ್ಗೆ ಮಾಹಿತಿ ಪಡೆದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ದೊರೆಯಲು ಅಗತ್ಯ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ವಿಜಯಪುರ: ವಿಜಯಪುರ ಜಿಲ್ಲೆಯ ಮದಭಾವಿ-ಕವಲಗಿ ಹತ್ತಿರ ಶನಿವಾರ ಸಂಭವಿಸಿದ ಸಾರಿಗೆ ಬಸ್ಗಳ ಅಪಘಾತದಲ್ಲಿ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ಮಾಡಿ, ಗಾಯಾಳುಗಳ ಅಗತ್ಯ ಚಿಕಿತ್ಸೆಗೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಶನಿವಾರ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಗಾಯಾಳುಗಳ ಕುರಿತು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದು, ಗಾಯಾಳುಗಳಿಗೆ ಅಗತ್ಯವಿರುವ ಎಕ್ಸರೇ, ಸಿಟಿ ಸ್ಕ್ಯಾನ್ ಸೇರಿದಂತೆ ಅಗತ್ಯ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸುವಂತೆ ಸೂಚನೆ ನೀಡಿದ್ದಾರೆ. ಕೆಎಸ್ಆರ್ಟಿಸಿ ಅಧಿಕಾರಿಗಳಿಗೂ ಅಗತ್ಯ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ವಿಜಯಪುರ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಯ ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ ೨೬, ೨೦೨೩ರಿಂದ ಆರಂಭಗೊಂಡಿದೆ. ೨೦೨೨-೨೩ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ ೨೦೨೩ರಲ್ಲಿ ತೇರ್ಗಡೆಯಾಗಿ ಫಲಿತಾಂಶ ಪ್ರಕಟಗೊಂಡ ೧೮೦ ದಿವಸದ ಒಳಗಡೆ ಕೆಲಸ ದೊರೆಯದ ಪದವಿಧರ ಹಾಗೂ ಡಿಪ್ಲೋಮಾ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.ಈ ಯೋಜನೆಯಡಿ ಅರ್ಹ ಪದವಿಧರರಿಗೆ ಮಾಸಿಕ ೩,೦೦೦ರೂ ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ ೧,೫೦೦ ಮಾಸಿಕ ಭತ್ಯೆ ಸಿಗಲಿದೆ. ಹಾಗಾಗಿ ೨೦೨೨-೨೩ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗ ಯುವಕ/ಯುವತಿಯರು ನೋಂದಾಯಿಸಿಕೊಳ್ಲಬಹುದಾಗಿದೆ. ಸರ್ಕಾರಿ, ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ, ಸ್ವಯಂ ಉದ್ಯೋಗ ಮಾಡುತ್ತಿರುವ ಹಾಗೂ ಪದವಿ/ಡಿಪ್ಲೋಮಾ ಮುಗಿದ ನಂತರ ಮುಂದಿನ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.ಅರ್ಹ ಅಭ್ಯರ್ಥಿಗಳು sevasindhugs.karnataka.gov.in ಲಾಗಿನ್ ಆಗಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ಪದವಿ/ಡಿಪ್ಲೋಮಾ ತೇರ್ಗಡೆಯಾದ ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾಣ ಪತ್ರವನ್ನು ಓಂಆ ಪೋರ್ಟಲ್ನಲ್ಲಿ ಸಂಬಂಧಪಟ್ಟ ವಿಶ್ವ ವಿದ್ಯಾಲಯಗಳು, ಶೈಕ್ಷಣಿಕ ಸಂಸ್ಥೆಗಳು, ಮಂಡಳಿಗಳು ಇಂದೀಕರಿಸಿರುವುದನ್ನು ಖಚಿತಪಡಿಸಿಕೊಳ್ಳಲು nad.karntaka.gov.in/#/Yuvnidhi ಜಾಲತಾಣದಲ್ಲಿ ಲಾಗಿನ್…
