Author: editor.udayarashmi@gmail.com

ವಿಜಯಪುರ: ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಸ್ವಸ್ಥವೃತ್ತ ಹಾಗೂ ಯೋಗ ವಿಭಾಗದ ವತಿಯಿಂದ ಮಲಬದ್ದತೆಯಿಂದ ಬಳಲುವ ರೋಗಿಗಳಿಗಾಗಿ ಯೋಗ ಚಿಕಿತ್ಸಾ ಉಚಿತ ಶಿಬಿರ ಜನೇವರಿ 8 ರಿಂದ ಜನೇವರಿ 13ರ ವರೆಗೆ ನಡೆಯಲಿದೆ.ಆಸ್ಪತ್ರೆಯ ಆವರಣದಲ್ಲಿ ಜನೇವರಿ 8 ರಿಂದ ಜನೇವರಿ 13ರ ವರೆಗೆ ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ಶಿಬಿರ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- 8277192896 ಸಂಪರ್ಕಿಸಬಹುದಾಗಿದೆ.

Read More

(ಟೈಂ ಬ್ಯಾಂಕ್ ಅಕೌಂಟ್ ಮೆಂಟೇನನ್ಸ್- ಹೀಗೆ ಮಾಡಿ ನೋಡಿ ) ಜಯ್ ನುಡಿ (ವ್ಯಕ್ತಿತ್ವ ವಿಕಸನ ಮಾಲಿಕೆ)*- ಜಯಶ್ರೀ.ಜೆ.ಅಬ್ಬಿಗೇರಿ (ಬೆಳಗಾವಿ)*ಆಂಗ್ಲ ಭಾಷಾ ಉಪನ್ಯಾಸಕರು, ಸ.ಪ.ಪೂ ಕಾಲೇಜು, ಹಿರೇಬಾಗೇವಾಡಿ, ಜಿ:ಬೆಳಗಾವಿ ಮೊ.೯೪೪೯೨೩೪೧೪೨ ಟೈಂ ನೋಡೋಕೂ ಟೈಂ ಇಲ್ಲ. ಎಲ್ಲಾ ಟೈಮಿನೊಳಗೂ ಮೈ ತುಂಬ ಕೆಲಸ. ಎಲ್ಲಿ ಕುಂತರೂ ಕೆಲಸ ಕೈ ಮಾಡಿ  ಕರಿತಾವ.. ಮೈ ಕೆರೆದುಕೊಳ್ಳಲೂ ಪುರುಸೊತ್ತಿಲ್ಲದಂಗ ಕೆಲಸ ಮಾಡಿದರೂ ಕೆಲಸ ಮುಗಿತಿಲ್ಲ. ಆದರೂ ಮಾಡಿದ ಕೆಲಸ ಒಂದೂ  ನೆಟ್ಟಗಾಗ್ತಿಲ್ಲ ಎನ್ನುವುದು ಅನೇಕರ ಗೊಣಗಾಟ. ಇಂಥ ಟೈಮಿನೊಳಗ ಕನಸು ಬೇರೆ ಕಾಡ್ತಾವ. ಕನಸು ಕಾಣಬೇಕೋ ನೆಟ್ಟಗಾಗುವಂಗ ಕೆಲಸ ಮಾಡೂ ರೀತಿನ ಬದಲಿಸಬೇಕೋ ಏನೂ ತಿಳಿತಿಲ್ಲ. ಎಲ್ಲಾ ಗೊಂದಲಮಯ. ಈ ಗೊಂದಲಕ್ಕೆ ಮಂಗಳಾರತಿ ಹಾಡಬೇಕಂದರೆ ಇದನ್ನು ಗಮನವಿರಿಸಿ ಓದಿ ಇದರಲ್ಲಿಯ ನಿಯಮ ಪಾಲಿಸಿ. ಕೆಲಸಕ್ಕೆ ಉತ್ತಮ ಫಲ ತಾನೆ ಸಿಗುತ್ತೆ ನೋಡಿ.. *ಕಾಲ ಮಿತ್ರನೂ ಹೌದು ಶತ್ರುವು ಹೌದು*ಅರೆ ಅದ್ಹೇಗೆ ಮಿತ್ರ ಶತ್ರು ಆಗುವುದು ಸಾಧ್ಯವಿದೆ ಅಂತಿರೇನು? ಕಾಲವನ್ನು ನಾವು ಸಕಾರಾತ್ಮಕವಾಗಿ ಉಪಯೋಗಿಸಿಕೊಂಡರೆ ಮಾತ್ರ…

Read More

ಯಡ್ರಾಮಿ: ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಯಡ್ರಾಮಿ ಪಟ್ಟಣದ ಆರಾಧ್ಯ ದೇವತೆ ಶ್ರೀ ಗ್ರಾಮ ದೇವತೆ ರಥೋತ್ಸವ ಶುಕ್ರವಾರದಂದು ಸಾವಿರಾರು ಭಕ್ತರ ಜಯಘೋಷದ ಮದ್ಯೆ ಅದ್ದೂರಿಯಾಗಿ ನಡೆಯಿತು.ಗುರುವಾರ ಸಾಯಂಕಾಲ ೭ಕ್ಕೆ ಪಟ್ಟಣದ ಹನುಮಾನ ಮಂದಿರದಿಂದ ದೇವಿಯನ್ನು ಬಣ್ಣದಿಂದ ಗ್ರಾಮ ದೇವತೆ ದೇವಸ್ಥಾನಕ್ಕೆ ಕರೆತರಲಾಯಿತು. ನಂತರ ಅಲಂಕಾರಗೊಂಡ ರಥದಲ್ಲಿ ದೇವಿಯನ್ನು ಪ್ರತಿಷ್ಟಾಪಿಸಿ, ರಾತ್ರಿ ೧೨.೨೦ಕ್ಕೆ ಯಡ್ರಾಮಿ ವಿರಕ್ತಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಸುರಪೂರ ನಿಷ್ಠಿ ಕಡ್ಲೆಪ್ಪನವರ ವಿರಕ್ತಮಠದ ಶ್ರೀ ಪ್ರಭುಲಿಂಗ ಮಹಾಸ್ವಾಮಿಗಳು ಹಾಗೂ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರೊಂದಿಗೆ ಮೆರವಣಿಗೆಗೆ ಚಾಲನೆ ನೀಡಿದರು.ಕಳಸ ಹೊತ್ತ ಸುಮಂಗಲೆಯರು, ಹುಲಿ ವೇಷಧಾರಿ ಕುಣಿತ, ನಾಸಿಕ್ ಬ್ಯಾಂಜೊ ಪಾರ್ಟಿ, ಡೊಳ್ಳು ಕುಣಿತ, ಕುದುರೆ ಕುಣಿತ, ನಂದಿ ದ್ವಜ ಕುಣಿತ, ಬೊಂಬೆ ಮೆರವಣಿಗೆ, ಕರಡಿ ಮಜಲು, ಹಲಗೆ ಹಾಗೂ ಭಕ್ತರ ಜಯಘೋಷದೊಂದಿಗೆ ಶ್ರಿ ಗ್ರಾಮ ದೇವತೆ ದೇವಸ್ಥಾನದಿಂದ ಪ್ರಾರಂಭವಾದ ರಥೋತ್ಸವ ಹಳೆ ಬಜಾರ್, ಬಸವೇಶ್ವರ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ ಮೂಲಕ ಶುಕ್ರವಾರ ನಸುಕಿನ ಜಾವ…

Read More

ಆಲಮೇಲ. ಕನ್ನಡ ಜಾನಪದ ಪರಿಷತ್ ಆಲಮೇಲ ತಾಲೂಕು ಘಟಕದ ಉದ್ಘಾಟನೆ ರವಿವಾರ ಜ. ೭ ರಂದು ತಾಲೂಕಿನ ಕಡಣಿ ಗ್ರಾಮದ ಶಂಕರಲಿಂಗೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನ ೩ ಗಂಟೆಗೆ ನಡೆಯಲಿದೆ. ಆಲಮೇಲ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕಜಾಪ ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಉದ್ಘಾಟಿಸುವರು. ಯುವ ಪ್ರಶಸ್ತಿ ಪುರಸ್ಕೃತರ ಸಂಘದ ರಾಷ್ಟ್ರೀಯ ಅಧ್ಯಕ್ಷ ನೂತನ ಪದಾಧಿಕಾರಿಗಳಿಗೆ ಪದಪತ್ರ ನೀಡುವರು, ಕಜಾಪ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಎಸ್ ಪಾಟೀಲ (ಪಡಗಾನೂರ) ಅಧ್ಯಕ್ಷತೆ ವಹಿಸುವರು, ಕಜಾಪ ಜಿಲ್ಲಾ ಕಾರ್ಯದರ್ಶಿ ಡಾ.ರಮೇಶ ತೇಲಿ ಪ್ರಾಸ್ತಾವಿಕ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಸಾಹಿತಿ ಡಾ.ರಮೇಶ ಕತ್ತಿ, ಸರಕಾರಿ ನೌಕರರ ಸಂಘದ ಸಿಂದಗಿ ತಾಲೂಕಾಧ್ಯಕ್ಷ ಆರ್ ಜಿ ಬಿರಾದಾರ, ಕನ್ನಡ ಸಾಹಿತ್ಯ ಪರಿಷತ್ ಆಲಮೇಲ ತಾಲೂಕಾಧ್ಯಕ್ಷ ಶಿವಶರಣ ಗುಂದಗಿ, ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಸೈಯದ್ ದೇವರಮನಿ, ಕಡಣಿ ಗ್ರಾಂ ಪಂ ಅಧ್ಯಕ್ಷ ಬಸವಲಿಂಗಪ್ಪ ಕತ್ತಿ, ಗಣ್ಯರಾದ ಈರಯ್ಯ ಗಂಗೊಳ್ಳಿ, ಬಸವರಾಜ ತಾವರಗೇರಿ, ಗಂಗಾಧರ ಶ್ರೀಗಿರಿ, ಹಣಮಂತ್ರಾಯ ಕಳಸಗೊಂಡ, ಶಿವಣ್ಣಗೌಡ…

Read More

ಚಿಮ್ಮಡ: ಇದೇ ೨೨ ರಂದು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ನಡೆಯಲಿರುವ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನಿಮಿತ್ತ ಮನೆ ಮನೆಗೆ ಶ್ರೀ ರಾಮನ ಆಶೀರ್ವಾದ ಕಾರ್ಯಕ್ರಮಕ್ಕೆ ಶ್ರೀ ಪ್ರಭು ಮಹಾಸ್ವಾಮಿಗಳು ಹಾಗೂ ಶ್ರೀ ಜನಾರ್ಧನ ಮಹಾರಾಜರು ಶನಿವಾರ ಚಾಲನೆ ನೀಡಿದರು.ಸಂಕೇತಿಕವಾಗಿ ಗ್ರಾಮದ ಐದು ಮನೆಗಳ ಮಹಿಳೆಯರಿಗೆ ಅಕ್ಷತೆ ನೀಡಿ ಆಶೀರ್ವದಿಸಿ ಮಾತನಾಡಿದ ಶ್ರೀಗಳು ನೀಡಿರುವ ಅಕ್ಷತೆಯನ್ನು ಜಗಲಿಯ ಮೇಲಿಟ್ಟು ಪ್ರತಿದಿನ ಪೂಜೆ ಮಾಡಿ ಪ್ರಾಣ ಪ್ರತಿಷ್ಠಾಪನೆ ದಿನವಾದ ಜನೆವರಿ ೨೨ರಂದು ಮನೆಯ ಹಿರಿಯರಿಂದ ಕಿರಿಯರ ತಲೆ ಮೇಲೆ ಈ ಅಕ್ಷತೆ ಹಾಕ ಆಶೀರ್ವದಿಸಿದರೆ ಪ್ರಭು ಶ್ರೀ ರಾಮನ ಆಶೀರ್ವಾದ ದೊರೆತಂತೆ ಎಂದರು.ನಂತರ ಗ್ರಾಮದ ಪ್ರತಿ ಮನೆಗಳಿಗೆ ಈ ಅಕ್ಷತೆಯನ್ನು ಮಾಹಿತಿ ಪತ್ರದೊಂದಿಗೆ ಹಂಚಲಾಯಿತು.ಕಾರ್ಯಕ್ರಮದಲ್ಲಿ ಗ್ರಾ.ಪಂ, ಮಾಜಿ ಅಧ್ಯಕ್ಷ ಪರಪ್ಪಾ ಪಾಲಭಾವಿ, ಪ್ರಕಾಶ ಪಾಟೀಲ, ಮನೋಜ ಹಟ್ಟಿ, ಚಂದ್ರಕಾಂತ ಜಾಡಗೌಡ, ಅವ್ವನಪ್ಪಾ ಮುಗಳಖೋಡ, ಬಸವರಾಜ ಬಿಜಾಪೂರ, ಕಾಳು ಬಡಿಗೇರ, ಶಿವಪ್ಪಾ ದಿನ್ನಿಮನಿ ಸೇರಿದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು.

Read More

ಕೆಂಭಾವಿ: ಸವ್ಯಸಾಚಿ ಡಾ. ಜಿ. ಪರಮೇಶ್ವರ್ ಯುವ ಬಿಗ್ರೇಡ್ ಸಂಘದ ಪದಾಧಿಕಾರಿಗಳ ಆಯ್ಕೆ ಪಟ್ಟಣದ ಪ್ರವಾಸ ಮಂದಿರದಲ್ಲಿ ನಡೆಯಿತು.ಯಾದಗಿರಿ ಜಿಲ್ಲಾ ಅಧ್ಯಕ್ಷ ಬಸು ನಾಟಿಕಾರ ಇವರ ನೇತೃತ್ವದಲ್ಲಿ ಸುರಪುರ ತಾಲೂಕ ಅಧ್ಯಕ್ಷರಾಗಿ ಧರ್ಮಣ್ಣ ಚಿಂಚೋಳಿ ಹಾಗೂ ಹುಣಸಗಿ ತಾಲೂಕ ಅಧ್ಯಕ್ಷರಾಗಿ ಮೊಹಮ್ಮದ ಚೌದ್ರಿ ಇವರನ್ನು ಆಯ್ಕೆ ಮಾಡಲಾಯಿತು.ಈ ಸಂಧರ್ಭದಲ್ಲಿ ಸತೀಶ್, ಹಣಮಂತ ಚವ್ಹಾಣ, ಗಿರೀಶ್ ಎಮ್ ಚಟ್ರೇಕರ್, ಸಾಯಬಣ್ಣ ಎಂಟಮನ್, ಮಲಿಕ್ ಚೌದ್ರಿ, ಗಜ, ರವಿ ಯಮನೂರ, ರಮೇಶ್ ಬಡೆಗೇರ ಹಾಗೂ ಇತರರು ಇದ್ದರು.

Read More

ಸಿಂದಗಿ: ಸಾವಿತ್ರಿಬಾಯಿ ಪುಲೆ ಸಾಮಾಜಿಕ ಅಸಮಾನತೆಗಳ ವಿರುದ್ಧ ಹೋರಾಡಿ ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಿದರು ಎಂದು ಎಸ್.ಡಿ.ಎಂ.ಸಿ ಅಧ್ಯಕ್ಷ ಚನ್ನಪ್ಪಗೌಡ ಬಿರಾದಾರ ಹೇಳಿದರು.ತಾಲೂಕಿನ ಹಂದಿಗನೂರ ಗ್ರಾಮದ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಸಾವಿತ್ರಿಬಾಯಿ ಪುಲೆ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ದೇಶದ ಪ್ರಥಮ ಮಹಿಳಾ ಶಿಕ್ಷಕಿ ಎನಿಸಿಕೊಂಡಿದ್ದಾರೆ. ಮಹಿಳಾ ಶಿಕ್ಷಣಕ್ಕೆ ಅವರ ಕೊಡುಗೆ ಅನನ್ಯ. ಇಂದಿಗೂ ಮಹಿಳೆಯರಿಗೆ ಅವರು ಸ್ಫೂರ್ತಿಯಾಗಿದ್ದರೆ ಎಂದರು.ಈ ವೇಳೆ ಗ್ರಾಮ ಪಂಚಾಯತ್ ವತಿಯಿಂದ ಶಾಲೆಗೆ ೨೦ ಡೆಸ್ಕ ಗಳನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಆಯ್.ಎಂ.ಬಿರಾದಾರ, ಸಿದ್ದಣ್ಣ ಪಟ್ಟಣಶೆಟ್ಟಿ, ನಾನಾಗೌಡ ಬಿರಾದಾರ, ಭೀಮರಾಯ ಬಿಂಗೋಳ್ಳಿ, ಮಡಿವಾಳಪ್ಪ ಗುಬ್ಬೇವಾಡ, ಶಾಲೆಯ ಮುಖ್ಯಗುರು ಎಸ್.ಎಸ್. ಬುಲಬುಲೆ, ವ್ಹಿ.ಎಸ್.ಕುಲಕರ್ಣಿ, ವಿಜಯಕುಮಾರ ಚಿಂಚೋಳ್ಳಿ, ಶ್ರೀಕಾಂತ ಹಿರೇಮಠ, ಸೋಮಶೇಖರ ಪತ್ತಾರ ಸೇರಿದಂತೆ ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಇದ್ದರು.

Read More

ಮುದ್ದೇಬಿಹಾಳ: ಪಟ್ಟಣದ ಹಡಲಗೇರಿಯಲ್ಲಿನ ಮಾದರಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆಯನ್ನು ಬುಧವಾರ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು ನಾವುಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕುತ್ತಿದ್ದು ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು. ಸರಕಾರದ ಸವಲತ್ತು ಸೌಲಭ್ಯಗಳ ಸದುಪಯೋಗ ಪಡಿಸಿಕೊಂಡು ಬದುಕು ಸುಂದರವಾಗಿ ಕಟ್ಟಿಕೊಳ್ಳಬೇಕು ಎಂದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಮ್.ಜಿ.ವ್ಹಿ.ಸಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಬಿ.ಎ.ಗೂಳಿ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಬಸವರಾಜ ನಾಡಗೌಡ ಮಾತನಾಡಿದರು.ಪ್ರಾಚಾರ್ಯ ಡಾ.ಎಸ್.ಎಲ್ ಪಾಟೀಲ ಅಧ್ಯಕ್ಷೀಯ ನುಡಿಗಳನ್ನಾಡಿದರು. ಪ್ರೊ. ಮಂಜುಳಾ ಕಟಗೇರಿಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಡಾ. ದಸ್ತಗೀರ ಹಾಲ್ಯಾಳ ಸ್ವಾಗತಿಸಿದರು. ಪ್ರೊ.ಶಿವಕುಮಾರ ಉಣ್ಣಿಬಾವಿ ವಂದಿಸಿದರು. ಪ್ರೊ. ಶ್ರೀಮತಿ.ಪೂಜಾ ಬಡಿಗೇರವರು ನಿರೂಪಿಸಿದರು.

Read More

ಅಭಿಮತ- ಚೇತನ ಭಾರ್ಗವ, ಬೆಂಗಳೂರು ನಮ್ಮ ಜೊತೆಗೆ ಇದ್ದು ನಮ್ಮಿಂದ ಉಪಯೋಗವನ್ನು ಪಡೆದುಕೊಂಡು ತಮ್ಮ ಕೆಲಸ ಮುಗಿದ ಮೇಲೆ ನಮ್ಮನ್ನು ಮರೆಯುವ ವ್ಯಕ್ತಿತ್ವವನ್ನು ಹೊಂದಿರುವವರೇ ಸಮಯ ಸಾಧಕರು. ಅವರಿಗೆ ಕೃತಜ್ಞತೆ ಎನ್ನುವುದು ಇರುವುದಿಲ್ಲ. ಮೇಲೆ ಏರಲು ಏಣಿಯ ಅವಶ್ಯಕತೆ ಇದೆ. ಏಣಿ ಹತ್ತಿಯಾದ ಮೇಲೆ ಏಣಿಗೂ ನಮಗೂ ಸಂಬಂಧವೇ ಇಲ್ಲ ಅನ್ನುವ ಮನಸ್ಥಿತಿ ಸಮಯ ಸಾಧಕರದ್ದಾಗಿರುತ್ತದೆ. ಅವರು ತಮ್ಮ ಲಾಭವನ್ನು ಮಾತ್ರ ನೋಡಿಕೊಳ್ಳುತ್ತಾರೆ ವಿನಹ ಅವರಿಗೆ ಸಹಾಯ ಮಾಡಿದವರ ಮೇಲೆ ಪ್ರೀತಿ ಕರುಣೆ ಇರುವುದಿಲ್ಲ. ನಮ್ಮ ಜೀವನದಲ್ಲಿ ನಾವು ಅನೇಕ ವ್ಯಕ್ತಿತ್ವವುಳ್ಳ ಜನರನ್ನು ನೋಡುತ್ತೇವೆ. ಕೆಲವರು ನಮ್ಮನ್ನು ಪ್ರೀತಿಸುತ್ತಾರೆ, ಕೆಲವರು ತಟಸ್ಥರಾಗಿರುತ್ತಾರೆ, ಕೆಲವರು ದ್ವೇಷಿಸುತ್ತಾರೆ, ಇನ್ನೂ ಕೆಲವರು ನಮ್ಮೊಡನೆ ಒಳ್ಳೆಯ ಒಡನಾಟ ಇಟ್ಟುಕೊಂಡು ತಮಗೆ ನಮ್ಮಿಂದ ಏನು ಉಪಯೋಗವಿದೆ ಎಂದು ತಿಳಿದು ಅದಕ್ಕೆ ನಮ್ಮನ್ನು ಬಳಸಿಕೊಂಡು ಹೋಗುತ್ತಾರೆ. ಇಂತಹ ವ್ಯಕ್ತಿತ್ವ ಉಳ್ಳವರು ಸ್ನೇಹಕ್ಕಾಗಲಿ ಪ್ರೀತಿಗಾಗಲಿ ಅರ್ಹವಾದ ವ್ಯಕ್ತಿಗಳಲ್ಲ. ಇವರು ಮಹಾನ್ ಸ್ವಾರ್ಥಿಗಳಾಗಿರುತ್ತಾರೆ. ಸಮಯ ಸಾಧಕರು ನಾವು ಉತ್ತಮ ಸ್ಥಿತಿಯಲ್ಲಿದ್ದಾಗ ನಮ್ಮೊಂದಿಗೆ ತಮ್ಮನ್ನು…

Read More