Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅತೀವಷ್ಛಿ ಮತ್ತು ಪ್ರವಾಹದಿಂದಾಗಿ ಅನ್ನದಾತರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಈ ಬಾರಿ ಅಕ್ಟೋಬರ್ 31 ರಂದು ಶುಕ್ರವಾರ ತಮ್ಮ ಜನ್ಮದಿನ ಆಚರಿಸಿಕೊಳ್ಳದಿರಲು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ನಿರ್ಧರಿಸಿದ್ದಾರೆ.ರಾಜ್ಯದಲ್ಲಿ ಅತೀವೃಷ್ಠಿ ಮತ್ತು ಪ್ರವಾಹದಿಂದಾಗಿ ರೈತಾಪಿ ಜನರು ಸಂಕಷ್ಟದಲ್ಲಿದ್ದಾರೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲೂ ಮಳೆ ಮತ್ತು ಪ್ರವಾಹದಿಂದಾಗಿ ಹಲವಾರು ಗ್ರಾಮಗಳಲ್ಲಿ ಸಮಸ್ಯೆಗಳಾಗಿವೆ. ಆಸ್ತಿ-ಪಾಸ್ತಿ ಮತ್ತು ಬೆಳೆಯೂ ಹಾನಿಯಾಗಿದೆ.ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಜನ್ಮದಿನ ಆಚರಿಸಿಕೊಳ್ಳಲು ಮನಸ್ಸು ಒಪ್ಪುತ್ತಿಲ್ಲ. ಹೀಗಾಗಿ ಇದೇ ಅಕ್ಟೋಬರ್ 31 ರಂದು ಶುಕ್ರವಾರ ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ. ಬೆಂಬಲಿಗರು, ಅಭಿಮಾನಿಗಳು, ಹಿತೈಸಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕ ಸುನೀಲಗೌಡ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶದಲ್ಲೇ ರೈತರು ಹಾಗೂ ಸಹಕಾರಿ ಹಿತರಕ್ಷಣೆಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ. ಯಾವುದೇ ಪಕ್ಷದ ಸರ್ಕಾರ ಅಧಿಕಾರದಲ್ಲಿ ಇದ್ದರೂ ಸಹಕಾರಿ ಬಲವರ್ಧನೆಗೆ ಆದ್ಯತೆ ನೀಡುತ್ತಿರುವುದು ರಾಜ್ಯದ ರೈತರ ಸೌಭಾಗ್ಯ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಬಣ್ಣಿಸಿದರು.ಭಾನುವಾರ ರಾತ್ರಿ ವಿಜಯಪುರ ತಾಲೂಕಿನ ಜಂಬಗಿ(ಆ) ಗ್ರಾಮದಲ್ಲಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಸಭಾಭವನ ಲೋಕಾರ್ಪಣೆ ಮಾಡಿ, ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಷ್ಟ್ರೀಕೃತ ಬ್ಯಾಂಕ್ ಗಳು ರೈತಸ್ನೇಹಿಯಲ್ಲ. ಹೀಗಾಗಿ ಕೃಷಿ, ರೈತ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿರುವ ಸಹಕಾರಿ ರಂಗವನ್ನು ಬಲಪಡಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.ಸಹಕಾರಿ ಸಂಸ್ಥೆಗಳು ಬದುಕಿದ್ದರೆ ರೈತನೂ ಬದುಕಿರುತ್ತಾನೆ, ಇಲ್ಲವಾದರೆ ರೈತ ಹಾಗೂ ಸಹಕಾರಿ ರಂಗ ಎರಡೂ ಅಸ್ತಿತ್ವ ಕಳೆದುಕೊಳ್ಳುತ್ತವೆ.ಸಹಕಾರಿ ವ್ಯವಸ್ಥೆ ಬದುಕಿದ್ದರಿಂದಲೇ ರಾಜ್ಯ ಸರ್ಕಾರ ಮೂರು ಬಾರಿ ಕೃಷಿ ಸಾಲ ಮನ್ನಾ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕಾರ್ಖಾನೆ ಮಾಲೀಕರು ದರ ನಿಗದಿ ಮಾಡದೆ ರೈತರನ್ನು ದಾರಿ ತಪ್ಪಿಸುವ, ದ್ವಂದ್ವ ನೀತಿ ಅನುಸರಿಸಿ ರೈತರ ಮದ್ಯೆ ಒಡಕು ಮೂಡಿಸುವ ಕೆಲಸ ಮಾಡುತ್ತಾರೆ ಈ ಯಾವ ಕಾರ್ಯಗಳಿಗೂ ಕಿವಿಗೊಡದೆ ಸರ್ವ ರೈತರು ಒಂದುಗೂಡಿ ಕಾರ್ಖಾನೆಯವರಿಗೆ ಸರಿಯಾದ ಪಾಠ ಕಲಿಸಬೇಕಿದೆ ಎಂದು ರೈತ ಸಂಘದ ಮುಖಂಡರಾದ ಟಿ.ಟಿ. ಹಗೇದಾಳ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ರೈತ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಸಕ್ಕರೆ ಕಾರ್ಖಾನೆಗಳು ಬೆಲೆ ಘೋಷಣೆ ಮಾಡುವವರೆಗೂ ಕಬ್ಬು ಕಟಾವು ಮಾಡಬಾರದು ಎಂದು ರೈತರಲ್ಲಿ ಮನವಿ ಮಾಡಿದರು.ಯುವ ರೈತ ಮಂಜುನಾಥ ಸೊನ್ನದ ಮಾತನಾಡಿ, ಮಾರುಕಟ್ಟೆಯಲ್ಲಿ ಬೆಳೆಗಳಿಗೆ ಸರಿಯಾದ ಬೆಲೆ ಸಿಗದಿರುವುದು ರೈತರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಹವಾಮಾನ ಬದಲಾವಣೆ ಸಹ ರೈತರ ಜೀವನಕ್ಕೆ ದೊಡ್ಡ ಆಘಾತವಾಗಿದೆ. ಮಳೆ ಹೆಚ್ಚು ಕಡಿಮೆ ಬಂದರೆ ಎರಡೂ ರೈತರಿಗೆ ಹಾನಿ ಉಂಟುಮಾಡುತ್ತವೆ. ಮಳೆ ಅತಿಯಾಗಿರುವುದರಿಂದ ಹಲವೆಡೆ ಬೆಳೆ ನಷ್ಟ ಉಂಟಾಗಿದೆ. ಸರಕಾರಗಳು ರೈತರು ಬೆಳೆದ ಕಬ್ಬಿಗೆ…

Read More

ಉಪ್ಪಾರ ಪ್ರತಿಭಾ ಪುರಸ್ಕಾರ, ನಿವೃತ್ತರು, ನೂತನ ನೇಮಕವಾದ ನೌಕರರು, ಸಾಧಕರಿಗೆ ಸನ್ಮಾನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರವರ್ಗ 1 ರಲ್ಲಿರುವ ಉಪ್ಪಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬೇಡಿಕೆಗೆ ಪೂರಕವಾಗಿ ಕುಲಶಾಸ್ತ್ರ ಅಧ್ಯಯನ ಮಾಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ, ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಭರವಸೆ ನೀಡಿದರು.ಭಾನುವಾರ ನಗರದ ಕಂದಗಲ್ ಹನುಮಂತ್ರಾಯ ರಂಗ ಮಂದಿರದಲ್ಲಿ ಜಿಲ್ಲಾ ಉಪ್ಪಾರ ಸೇವಾ ಸಂಘ, ಜಿಲ್ಲಾ ಉಪ್ಪಾರ ನೌಕರರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರು ಹಾಗೂ ನೂತನ ನೌಕರರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಎಲ್ಲ ಸಮಾಜಗಳಲ್ಲಿ ಇರುವಂತೆ ಆರ್ಥಿಕ ಬಡವರಿದ್ದಾರೆ. ಅಂಥವರಿಗೆ ಸಾಮಾಜಿಕ ನ್ಯಾಯದ ಲಾಭ ಸಿಗಬೇಕಿದೆ. ಮೀಸಲಾತಿಗಾಗಿ ಕುಲ ಶಾಸ್ತ್ರ ಅಧ್ಯಯನ ನಡೆಸುವ ಕುರಿತು ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಸೇರಿ ಚರ್ಚೆಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಜಿಲ್ಲೆಯ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಲಬುರ್ಗಿ ಘಟಕದ ವಿಭಾಗ-೧ ರಿಂದ ಕಲಬುರ್ಗಿ, ವಿಜಯಪುರ, ಬೆಳಗಾವಿ ಮಾರ್ಗವಾಗಿ ಗೋವಾ ರಾಜ್ಯದ ಪಣಜಿಗೆ ಅಮೋಘವರ್ಷ ನಾನ್ ಎ.ಸಿ ಸ್ಲೀಪರ ಕೋಚ್ ಬಸ್ ಅನ್ನು ಆರಂಭಿಸಲಾಗಿದೆ.ನೂತನ ಬಸ್ ಕಲಬುರ್ಗಿಯಿಂದ ಸಂಜೆ ೧೮-೦೧ಕ್ಕೆ ಹೊರಟು, ಸಿಂದಗಿಗೆ ಸಂಜೆ ೨೦-೧೫ಕ್ಕೆ ಆಗಮಿಸುವುದು. ಸಂಜೆ ೨೦-೪೦ಕ್ಕೆ ದೇವರ ಹಿಪ್ಪರಗಿಯಿಂದ ಹೊರಟು, ವಿಜಯಪುರಕ್ಕೆ ರಾತ್ರಿ ೨೧-೫೦ ಆಗಮಿಸುವುದು. ವಿಜಯಪುರದಿಂದ ಹೊರಟು ಪಣಜಿಯನ್ನು ಮರುದಿನ ಬೆಳಿಗ್ಗೆ ೬-೧೫ಕ್ಕೆ ತಲುಪಲಿದೆ. ಕಲಬುರ್ಗಿಯಿಂದ ಪಣಜಿಗೆ ರೂ,೧೨೫೭, ಸಿಂದಗಿಯಿಂದ ಪಣಜಿಗೆ ರೂ,೧೦೫೪, ದೇವರ ಹಿಪ್ಪರಗಿಯಿಂದ ಪಣಜಿಗ ರೂ. ೯೮೧ ಹಾಗೂ ವಿಜಯಪುರದಿಂದ ಪಣಜಿಗೆ ರೂ ೮೮೬ ಬಸ್ ದರವಿದ್ದು, ಪ್ರಯಾಣಿಕರು ಈ ಬಸ್ಸಿನ ಸದುಪಯೋಗ ಪಡೆಸುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಅಂಗಡಿ ಮಾಲೀಕರಿಂದ ಅಭಿಯಾನಕ್ಕೆ ಸಕಾರಾತ್ಮಕ ಸ್ಪಂದನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯ, ಮನೋರಂಜನಾ ಕೇಂದ್ರಗಳು ಮತ್ತು ಹೊಟೇಲ್ ಸೇರಿದಂತೆ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಭಾಷೆಯ ಶೇ.೬೦ರಷ್ಟು ಕನ್ನಡ ನಾಮಪಲಕ ಅಳವಡಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳೂ ಒಳಗೊಂಡಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದ ವಿವಿಧ ಅಂಗಡಿಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿ ಶೇ. ೬೦% ರಷ್ಟು ನಾಮಫಲಕಗಳನ್ನು ಅಳವಡಿಸುವ ಕುರಿತು ತಿಳುವಳಿಕೆ ನೀಡಲಾಯಿತು.ಬೆಳಿಗ್ಗೆ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯ ಆವರಣದಿಂದ ಜಾಗೃತಿ ಅಭಿಯಾನ ಕಾರ್ಯಯಕ್ರಮವು ಆರಂಭಗೊಂಡಿತು. ಅಭಿಯಾನವು ಗಾಂಧಿ ವೃತ್ತದ ವರೆಗೂ ನಡೆಯಿತು.ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿನ ವಿವಿಧ ಅಂಗಡಿ ಮುಂಗಟ್ಟುಗಳು ಕಡ್ಡಾಯವಾಗಿ ಕನ್ನಡ ನಾಮ ಫಲಕಗಳನ್ನು ಅಳವಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.ಸರ್ಕಾರದ ಆದೇಶದಂತೆ ನಾಮಫಲಕಗಳು ಶೇ.೬೦…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ವಶಪಡಿಸಿಕೊಂಡ ಜಮೀನಿಗೆ ನ್ಯಾಯಾಲಯದ ಆದೇಶದಂತೆ ಪರಿಹಾರ ನೀಡದ ಕಾರಣ, ಯುಕೆಪಿಯ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಾರ್ಯಾಲಯದ ಜೀಪ್, ಕಂಪ್ಯೂಟರ್ ಗಳನ್ನು ಸೋಮವಾರ ಜಪ್ತಿ ಮಾಡಲಾಯಿತು.ವಿಜಯಪುರ ತಾಲ್ಲೂಕಿನ ಮದಭಾವಿ ಗ್ರಾಮದ ರೈತ ಜಕ್ಕಪ್ಪಗೌಡ ಧರೆಪ್ಪಾ ಬಿರಾದಾರ ಅವರಿಗೆ ಸೇರಿದ ಒಂದು ಎಕರೆ ಜಮೀನು ಯುಕೆಪಿಯ ಕಾಲುವೆ ನಿರ್ಮಾಣಕ್ಕೆ ವಶಪಡಿಸಿಕೊಳ್ಳಲಾಗಿತ್ತು.ವಿಜಯಪುರದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪರಿಹಾರ ನಿಗದಿಗೊಳಿಸಿ ಆದೇಶಿಸಿತ್ತು.ಅಲ್ಲದೇ ಹೈಕೋರ್ಟ್ ಕೂಡಾ ಪರಿಹಾರ ಮೊತ್ತದ ಅರ್ಧದಷ್ಟನ್ನು ತಕ್ಷಣವೇ ನೀಡುವಂತೆ ಮಧ್ಯಂತರ ಆದೇಶ ನೀಡಿತ್ತು.ಹೈಕೋರ್ಟ್ ಮಧ್ಯಂತರ ತೀರ್ಪಿನಂತೆ ನೀಡಬೇಕಾದ ಪರಿಹಾರ ಹಣ ೨,೨೬,೪೭,೪೫೨ ರೂ ನೀಡಲು ಯುಕೆಪಿಯ ವಿಶೇಷ ಭೂಸ್ವಾಧೀನಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ನ್ಯಾಯಾಲಯ ನಿಗದಿಗೊಳಿಸಿದ ಪರಿಹಾರದ ಶೇ ೨೫ ರಷ್ಟು ಹಣವನ್ನಾದರೂ ತಕ್ಷಣ ನೀಡಿ ಎಂಬುದು ರೈತರ ಬೇಡಿಕೆಯಾಗಿತ್ತು. ಆದರೂ ಪರಿಹಾರ ನೀಡಿರಲಿಲ್ಲ. ಅದಕ್ಕಾಗಿ ವಿಜಯಪುರದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶದಂತೆ ಕಚೇರಿಯ ವಸ್ತುಗಳನ್ನು ಜಪ್ತಿ ಮಾಡಲಾಯಿತು ರೈತನ ಪರ ವಕೀಲರಾದ…

Read More

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕ ರಾಜ್ಯ ಮೋಚಿಗಾರ ಸಮಾಜದ ಸಂಘಟನಾತ್ಮಕ ಸಮಿತಿ ರಚನೆ ಘೋಷಿಸಲಾಯಿತು.ಈ ಹೊಸ ಸಮಿತಿಯಲ್ಲಿ ವಿವಿಧ ಹುದ್ದೆಗಳಿಗೆ ಪ್ರಮುಖ ಮುಖಂಡರು ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ಮಹದೇವಪ್ಪ ಸ್ವಾದಿ ರಾಜ್ಯಾಧ್ಯಕ್ಷರಾಗಿ ಹನುಮಂತಪ್ಪ ಮ. ಬಂಕಾಪೂರ ಸಲಹಾ ಸಮಿತಿ ಅಧ್ಯಕ್ಷರಾಗಿ ಡಾ. ಬಿ.ಎಸ್. ಮದಕಟ್ಟಿ ರಾಜ್ಯ ಉಪಾಧ್ಯಕ್ಷರಾಗಿ ಮಹಾದೇವ ಹುಣಸೂರ, ಶ್ರೀಕಾಂತ ಮಾಲಗತ್ತಿ, ಮಲ್ಲೇಶಪ್ಪ ಬಂಕಾಪೂರ, ಅಶೋಕ ನೀಡಗಲ್, ರವೀಂದ್ರ ಗೌಡರ, ಡಾ. ಪ್ರಕಾಶ ಎಸ್. ಇನಾಮದಾರ ಮತ್ತು ಉಮೇಶ ನರಗುಂದ ನೇಮಕಗೊಂಡಿದ್ದಾರೆ.ಕಾರ್ಯನಿರ್ವಹಣಾ ಸಮಿತಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುನೀಲ ರಾ. ಜೈನಾಪುರ, ಖಜಾಂಚಿಯಾಗಿ ಗಣಪತಿ ಸ್ವಾದಿ, ಕಾರ್ಯದರ್ಶಿ (ಸಲಹಾ ಸಮಿತಿ) ಎಸ್.ಪಿ. ಶಿವಕುಮಾರ್, ಜಂಟಿ ಕಾರ್ಯದರ್ಶಿಯಾಗಿ ರೇವಣ್ಣ ಕಡೇಮನೆ ಸೇರಿದಂತೆ ಅನೇಕರು ಸೇವೆ ಸಲ್ಲಿಸಲಿದ್ದಾರೆ.ಸಂಘಟನಾ ಕಾರ್ಯದರ್ಶಿಗಳಾಗಿ ವೈ. ನಂಜುಂಡಪ್ಪ, ಮಂಜುನಾಥ ಬ್ಯಾಹಟ್ಟಿ, ವಿ. ಆಯಿಲ ಕೃಷ್ಣಪ್ಪ, ಯಲ್ಲಪ್ಪ ಮಾಳಗಿಮನಿ, ಅನಂತಪದ್ಮನಾಭಯ್ಯ ಮತ್ತು ವೈ. ನರಸಪ್ಪ ನೇಮಕಗೊಂಡಿದ್ದಾರೆ. ಸಹ ಕಾರ್ಯದರ್ಶಿಯಾಗಿ ಶ್ರೀ ಫಕೀರಪ್ಪ ಬ್ಯಾಹಟ್ಟಿ ಸೇವೆ ಸಲ್ಲಿಸಲಿದ್ದಾರೆ.ಕಾನೂನು ಸಲಹೆಗಾರರಾಗಿ ತೇಜಸ್ ಹಾಗೂ ಶ್ರೀ ಪ್ರಕಾಶ್…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಭಗವದ್ಗೀತೆ ಒಂದು ದೇಶಕ್ಕೆ ಸೀಮಿತವಾದ ಗ್ರಂಥವಲ್ಲ. ಇಡೀ ಮನುಕುಲದ ಒಳಿಗಾಗಿ ಇರುವ ಗ್ರಂಥ ಎಂದು ಬಾಗಲಕೋಟೆಯ ಭಗವದ್ಗೀತಾ ಅಭಿಯಾನದ ಧರ್ಮದರ್ಶಿ ಪಂ.ಬಿಂದುಮಾಧವಾಚಾರ್ಯ ನಾಗಸಂಪಿಗೆ ಹೇಳಿದರು.ಪಟ್ಟಣದ ಶ್ರೀ ಗುರು ರಾಘವೇಂದ್ರ ಮಹಾಸ್ವಾಮಿಗಳ ಬೃಂದಾವನ ಸನ್ನಿಧಿಯ ಧಾರ್ಮಿಕ ಭವನದಲ್ಲಿ ಶಿರಸಿ ಸೋಂದಾ ಸ್ವರ್ಣವಲ್ಲೀ ಸಂಸ್ಥಾನ ಯತಿವರೇಣ್ಯ, ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ನಡೆಸುತ್ತಿರುವ ಭಗವದ್ಗೀತಾ ಅಭಿಯಾನ ಕರ್ನಾಟಕ-೨೦೨೫ನ್ನು ಉದ್ಘಾಟಿಸಿ, ಪ್ರಥಮ ಪಠಣದ ಪಾಠವನ್ನು ಬೋಧಿಸಿ ಅವರು ಮಾತನಾಡಿದರು.ಮೊಟ್ಟ ಮೊದಲ ಮನೋವಿಜ್ಞಾನಿ ಕೃಷ್ಣ, ಮನಃಶಾಸ್ತ್ರ ಗ್ರಂಥ ಭಗವದ್ಗೀತೆಯಾಘಿದೆ. ಭಗವದ್ಗೀತೆ ಎನ್ನುವ ದೀಪವನ್ನು ಮನೆಮನೆಗೆ ಹಚ್ಚುವ ಉದ್ದೇಶದಿಂದ ಅಭಿಯಾನವನ್ನು ಪ್ರಾರಂಭಿಸಿದ ಮೊದಲ ಮಾಹನ್ ಸಂತರು ಗಂಗಾಧರೇAದ್ರ ಸ್ವಾಮಿಗಳು. ಮನುಕುಲ ವ್ಯಾಪಿಸಿರುವ ವಿಶ್ವಕ್ಕೆ ಪರಿಚಯಿಸುವ ಉದ್ದೇಶಕ್ಕಾಗಿಯೆ ಶ್ರೀಗಳವರು ಭಗವದ್ಗೀತಾ ಅಭಿಯಾನ ಪ್ರಾರಂಭಿಸಿದ್ದಾರೆ. ಪ್ರತಿಯೊಬ್ಬರೂ ಭಗವದ್ಗೀತೆ ಎಂದರೇನು? ಅದರ ಪ್ರಯೋಜನದ ಬಗ್ಗೆ ಅರಿತಾಗಿಲೇ ಅಭಿಯಾನದ ಯಶಸ್ಸಾಗುತ್ತದೆ.ಅರ್ಜುನನ ಮೋಹ ನಾಶಕ್ಕೆ ಹೊರಟಿದ್ದೆ ಗೀತಾ ಶಾಸ್ತ್ರ. ಭಗವಂತನ ಕರುಣೆಯಿಂದ ಅರ್ಜುನನಿಗೆ ಉಪದೇಶ ಮಾಡಿದ ಗ್ರಂಥವೇ ಭಗವದ್ಗೀತೆ.…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗುಣಮಟ್ಟದ ಶಿಕ್ಷಣಕ್ಕಾಗಿ ಒಂದು ಅಭೂತಪೂರ್ವ ಬದಲಾವಣೆಯ ಚೌಕಟ್ಟನ್ನು ಕರ್ನಾಟಕ ಪಬ್ಲಿಕ್ ಶಾಲೆಗಳು ಒದಗಿಸುತ್ತವೆ. ವಿದ್ಯಾರ್ಥಿಗಳ ಗುಣಮಟ್ಟದ ಕಲಿಕೆ, ದಾಖಲಾತಿ ಹೆಚ್ಚಳ, ಒಂದೇ ಸೂರಿನಡಿ ಎಲ್.ಕೆ.ಜಿ ಯಿಂದ ಪದವಿ ಪೂರ್ವ ಶಿಕ್ಷಣದವರೆಗೆ ವಿದ್ಯಾಭ್ಯಾಸ ನೀಡುವ ಮಹತ್ವಾಕಾಂಕ್ಷಿಯ ಕಾರ್ಯತಂತ್ರವೇ ಕೆಪಿಎಸ್ ಶಾಲೆಗಳದ್ದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈಗಾಗಲೇ ಸಿಂದಗಿ ತಾಲೂಕಿನ ಯಂಕಂಚಿ ಮತ್ತು ದೇವರಹಿಪ್ಪರಗಿ ತಾಲೂಕಿನ ಜಾಲವಾದ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರ ಮತ್ತೆ ಹೊಸದಾಗಿ ಸಿಂದಗಿ ತಾಲೂಕಿನ ಗಣಿಹಾರ ಗ್ರಾಮದ ಆರ್.ಎಮ್.ಎಸ್.ಎ ಪ್ರೌಢಶಾಲೆ, ಬೊಮ್ಮನಹಳ್ಳಿ ಗ್ರಾಮದ ಆರ್.ಎಂ.ಎಸ್.ಎ ಪ್ರೌಢಶಾಲೆ ಮತ್ತು ಯರಗಲ್ ಬಿಕೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅನುಮೋದನೆ ನೀಡುವ ಮೂಲಕ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಒಂದೇ ಆವರಣದಲ್ಲಿ ಎಲ್.ಕೆ.ಜಿ ಯಿಂದ ಪದವಿ ಪೂರ್ವದವರೆಗೆ ಶಿಕ್ಷಣವನ್ನು ಒದಗಿಸಲು ಅನುಕೂಲ ಮಾಡಿಕೊಟ್ಟಿದೆ. ಅಂದಾಜು ರೂ.೨-೪ಕೋಟಿ ರೂ. ಅನುದಾನವನ್ನು ಈ ಶಾಲೆಗಳಿಗೆ…

Read More