Author: editor.udayarashmi@gmail.com

ಝಳಕಿ ಗ್ರಾಮಸ್ಥರ ಕುಡಿಯುವ ನೀರಿಗೆ ಸಂಕಷ್ಟ | ರವಿಕುಮಾರ ಹೂಗಾರ ಆರೋಪ ಉದಯರಶ್ಮಿ ದಿನಪತ್ರಿಕೆ ಚಡಚಣ: ಜಲಧಾರೆ ಯೋಜನೆಯ ಉದ್ದೇಶ ಜನರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದಾದರೂ, ಝಳಕಿ ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿಯಿಂದಲೇ ಗ್ರಾಮಸ್ಥರಿಗೆ ನೀರಿನ ತೀವ್ರ ಸಮಸ್ಯೆ ಉಂಟಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಝಳಕಿ ವಲಯದ ಅಧ್ಯಕ್ಷ ರವಿಕುಮಾರ ಹೂಗಾರ ಆರೋಪಿಸಿದ್ದಾರೆ.ಅವರು ಪ್ರಕಟಣೆಯಲ್ಲಿ ತಿಳಿಸಿದಂತೆ, ಜಲಧಾರೆ ಯೋಜನೆಯ ಗುತ್ತಿಗೆದಾರ ರಘು ವಂಶಿ ಅವರು ಝಳಕಿ ಗ್ರಾಮದ ಜೆ.ಜೆ.ಎಂ. ಪೈಪ್‌ಲೈನ್ ಕಾಮಗಾರಿ ವೇಳೆ ಗ್ರಾಮದ ನಲ್ಲಿಯ ಪೈಪ್‌ಲೈನ್ ಅನ್ನು ಮೂರು–ನಾಲ್ಕು ಸ್ಥಳಗಳಲ್ಲಿ ನೀರು ಸೋರಿಕೆಯಾಗಿದ್ದು ಕಂಡುಬಂದಿದ್ದು ಅಲ್ಲಿ ಪೈಪಅಳವಡಿಸುವಾಗ ಪೈಪಲೈನ್ ಒಡೆದಿದ್ದಾರೆ. ಈ ಬಗ್ಗೆ ವಾಟರ್ ಮ್ಯಾನ್ ಅಬ್ದುಲ್ ಮುಲ್ಲಾ ಅವರು ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರೂ, ಸಮಯಕ್ಕೆ ಸರಿಯಾಗಿ ಪೈಪ್‌ಲೈನ್ ದುರಸ್ತಿ ಮಾಡದೆ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದರು.ಇಂಡಿ ತಾಲೂಕು ಉಪಾಧ್ಯಕ್ಷ ಪ್ರಕಾಶ ಪಾಟೀಲ ಮಾತನಾಡಿ, ಗುತ್ತಿಗೆದಾರರಿಗೆ ಎಷ್ಟೇ ಬಾರಿ ಕರೆ ಮಾಡಿದರೂ ಸ್ಪಂದನೆ ಇಲ್ಲದೆ,…

Read More

ಭೀಮ್ ಸರಕಾರ್ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಪರಶುರಾಮ ಚಲವಾದಿ ಒತ್ತಾಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಪಾಯಕರ ಮನರಂಜನಾ ಕ್ರೀಡೆಗಳಿಗೆ ಜಿಲ್ಲಾಡಳಿತವು ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಭೀಮ್ ಸರಕಾರ ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಪರಶುರಾಮ ಚಲವಾದಿ ಮಾತನಾಡಿ, ನಗರದಲ್ಲಿ ಕಳೆದ ವರ್ಷ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಅನಧಿಕೃತ ಅಪಾಯಕರ ಕಾನೂನು ಬಾಹಿರ ಮನೋರಂಜನಾ ಆಟಗಳಿಗೆ ಜಿಲ್ಲಾಡಳಿತ ಪರವಾನಿಗೆ ನೀಡಿದ್ದಿರಿ. ಆ ಪ್ರಯುಕ್ತ ಉಲ್ಲೇಖ (೨) ರ ಪ್ರಕಾರ ನಮ್ಮ ಸಂಘಟನೆ ಪರವಾಗಿ ನ್ಯಾಯಾಲಯದ ಮೆಟ್ಟಲೇರಿದ್ದು ತಮಗೂ ತಿಳಿದ ವಿಷಯ, ಅದರಂತೆ ಈ ಮನೋರಂಜನಾ ಆಟಗಳಿಗೆ ಸಂಬಂಧಪಟ್ಟ ಎಲ್ಲ ಇಲಾಖೆಗಳಿಗೆ ಅರ್ಜಿ ಬರೆದು ಎನ್.ಓ.ಸಿ ನೀಡದಿರುವ ಬಗ್ಗೆ ಪತ್ರ ಪಡೆದುಕೊಂಡು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದರೂ ಕೂಡಾ ಪರವಾನಿಗೆ ಇಲ್ಲದೆ ಮನೋರಂಜನೆ ಆಟಗಳನ್ನು ಆಡಿಸಲಾಯಿತು. ಈಗ ಮತ್ತೆ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಸಮೀಪಿಸಿದ್ದು ಮತ್ತೆ ಈ ಅಪಾಯಕರ ಕಾನೂನು ಬಾಹಿರ ಮನೋರಂಜನಾ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವಣ್ಣನವರು ಜಾತಿ-ಲಿಂಗ ಬೇಧವಿಲ್ಲದ ಸಮಾಜ, ಸ್ತ್ರೀ ಸ್ವಾತಂತ್ರ್ಯ, ಸಮಾನತೆ, ಕಾಯಕವೇ ಕೈಲಾಸ, ದಾಸೋಹ ತತ್ವಗಳ ವಿಚಾರಧಾರೆಗಳು ಹಾಗೂ ಸಾಮಾಜಿಕ ಮೌಢ್ಯತೆಯನ್ನು ತೊಲಗಿಸಿಲು ಹೋರಾಡಿದ ಶ್ರೇಷ್ಠ ಸಂತ. ೧೨ ನೆಯ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಯ ಮೂಲಕ ಎಲ್ಲ ಸಮುದಾಯದ ಶರಣರನ್ನು ಒಂದುಗೂಡಿಸಿ ಸಮ ಸಮಾಜದ ಹರಿಕಾರರಾಗಿದ್ದರು ಎಂದು ವಿಜಯಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತç ಪ್ರಾಧ್ಯಾಪಕ ಪ್ರೊ. ಎಂ.ಎಸ್.ಖೊದ್ನಾಪೂರ ಅವರು ಅಭಿಪ್ರಾಯಪಟ್ಟರು.ಅವರು ಮಹಾರಾಷ್ಟçದ ಸೋಲಾಪೂರದ ಅಹಲ್ಯಾಬಾಯಿ ಹೋಳ್ಕರ ಸೋಲಾಪೂರ ವಿಶ್ವವಿದ್ಯಾಲಯ ಹಾಗೂ ಸಂಗಮೇಶ್ವರ ಕಾಲೇಜ (ಸ್ವಾಯತ್ತ) ಇವುಗಳ ಸಹಯೋಗದಡಿಯಲ್ಲಿ “ಮಹಾತ್ಮಾ ಬಸವೇಶ್ವರ ವಿಚಾರಧಾರೆ ಮತ್ತು ಕಾರ್ಯಸಾಧನೆಗಳು” ವಿಷಯ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕೀರಣದದಲ್ಲಿ ಪ್ರಥಮ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡುತ್ತಿದ್ದರು.ಅವರು ಮಾತನಾಡುತ್ತಾ, ಬಸವಣ್ಣನವರು ಜಾತಿ, ಮತ, ಪಂಗಡ, ಧರ್ಮ, ಲಿಂಗ, ಬಡವ-ಬಲ್ಲಿದ ಯಾವುದೇ ಭೇದವಿಲ್ಲದೇ ಎಲ್ಲರೂ ಸಮಾನರು ಎಂಬ ಸಮಾನತೆಯ ಜತೆಗೆ “ವಸುದೈವ ಕುಟುಂಬಕಂ” ಎಂಬ ಸಮಷ್ಠಿಭಾವದ ವಿಶ್ವ ಮಾನವತೆಯ…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಯಾವುದೇ ಒಂದು ಸಸಿಯ ಚಿಗುರುವ ಭಾಗವನ್ನು ನಾವು ಕುಡಿ ಎಂದು ಕರೆಯುತ್ತೇವೆ. ಬೇರು ಸಸ್ಯಕ್ಕೆ ಮೂಲ ಆಧಾರವಾದರೆ ಕಾಂಡ ಎಲೆಗಳು ಅದರ ವಿಸ್ತರಿತ ಭಾಗವಾಗುತ್ತವೆ ಮತ್ತು ಕುಡಿ ಮುಂದಿನ ಭವಿಷ್ಯದಲ್ಲಿ ದೊಡ್ಡದಾಗುವ,ಹೆಮ್ಮರವಾಗುವ ಭಾಗವಾಗುತ್ತದೆ.ಅಂತೆಯೇ ಕುಟುಂಬದಲ್ಲಿ ಹಿರಿಯರು ಮೂಲ ಬೇರಾದರೆ ಅವರ ಮಕ್ಕಳು ಕಾಂಡ ಎಲೆ ಮುಂತಾದ ಸಸ್ಯದ ಭಾಗಗಳಾಗುತ್ತಾರೆ ಮನೆಯ ಮಕ್ಕಳು ಆ ಮನೆಯ ಭವಿಷ್ಯದ ಕುಡಿಗಳಾಗುತ್ತಾರೆ. ಇಂತಹ ಮನೆಯ ಮಕ್ಕಳು ತಮ್ಮ ಎಲ್ಲಾ ಅಣ್ಣ, ತಮ್ಮ, ಅಕ್ಕ, ತಂಗಿಯರೊಂದಿಗೆ ಉತ್ತಮವಾದ ಒಡನಾಟವನ್ನು ಇಟ್ಟುಕೊಂಡು ಬಾಳುವಂತೆ ನಾವು ಮಕ್ಕಳನ್ನು ಬೆಳೆಸಬೇಕು.ಮಕ್ಕಳಲ್ಲಿ ಅವರು ಹಾಗೆ ಇವರು ಹೀಗೆ ಎಂಬ ಪೂರ್ವಾಗ್ರಹಗಳನ್ನು ಬೆಳೆಸದೇ ಎಲ್ಲರೊಂದಿಗೆ ಪ್ರೀತಿ, ವಿಶ್ವಾಸ, ಸಹೃದಯತೆಯಿಂದ ಬದುಕುವಂತಹ ತಾಳ್ಮೆಯ ಸ್ವಭಾವವನ್ನು ನಿಧಾನವಾಗಿ ರೂಢಿಸಬೇಕು.ಒಂದೇ ಕುಟುಂಬದ ಎರಡನೇ ತಲೆಮಾರಿನ ಮಕ್ಕಳು ಮತ್ತು ಮೊಮ್ಮಕ್ಕಳಲ್ಲಿಯೂ ಕೂಡ ತಮ್ಮ ಹಿರಿಯರಲ್ಲಿ ಇದ್ದಂತಹ ಅನ್ಯೋನ್ಯತಾ ಭಾವ, ಪ್ರೀತಿ ವಿಶ್ವಾಸ ಇರಲಿ… ಹಾಗೆ ಇರುವಂತೆ ಮಕ್ಕಳನ್ನು ಬೆಳೆಸಬೇಕು.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿನ ತಾಂತ್ರಿಕ ಯುಗದಲ್ಲಿ ವಿಜ್ಞಾನ ಪರಿಭಾಷೆಯು ಎಲ್ಲಡೆಯೂ ಸಿಗುತ್ತವೆ. ಆದರೆ ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆ ಮತ್ತು ಮನೋಭಾವ ಮೂಡಿಸುವುದು ಇಂದಿನ ಶಿಕ್ಷಣದ ಗುರಿಯಾಗಬೇಕು ಎಂದು ಬೆಂಗಳೂರಿನ ಸೃಜನಶೀಲ ಅಧ್ಯಾಪನ ಕೇಂದ್ರದ ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ ಹೇಳಿದರು.ಡಿ.೨೮.೨೯ರಂದು ನಗರದ ಆಕ್ಟ್-ಶಾರದಾ ಪಬ್ಲಿಕ್ ಶಾಲೆಯ ಕಲಾ ಸೌರಭ ೨೦೨೫-೨೬ನೇ ಸಾಲಿನ ಎರಡು ದಿನಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳ ಸರ್ವಾಂಗೀಣ ಶೈಕ್ಷಣಿಕ ಪ್ರಗತಿಯಲ್ಲಿ ವಿಜ್ಞಾನದ ಜೊತೆಜೊತೆಗೆ ಮೌಲ್ಯವರ್ಧನೆಗೆ ಒತ್ತು ನೀಡುವ ವಿವಿಧ ಸಾಂಸ್ಕöÈತಿಕ ಚಟುವಟಿಕೆಗಳಿಗೆ ಒತ್ತು ನೀಡಿದಾಗ ನಿಜವಾದ ಸೃಜನಶೀಲತೆ ಮಕ್ಕಳಲ್ಲಿ ಮೂಡಿಬರುತ್ತದೆ ಎಂದು ತಿಳಿಸಿದರು.ಪಠ್ಯ ವಿಷಯವನ್ನು ವಿಶೇಷ ಜ್ಞಾನವನ್ನಾಗಿಸಿದಾಗ ಅದೇ ವಿಜ್ಞಾನವಾಗುತ್ತದೆ. ಈ ವಿಜ್ಞಾನವನ್ನು ಜೀವನಕ್ಕೆ ರೂಢಿಸಿಕೊಂಡಾಗ ಅರಿವಿನ ಅಭಿಜ್ಞಾನವಾಗುತ್ತದೆ. ವಿಜ್ಞಾನವು ಬೆಂಕಿ ಇದ್ದ ಹಾಗೆ, ಇದರಿಂದ ದೀಪವನ್ನು ಬೆಳಗಿಸಬಹುದು, ಮನೆ ಸುಡುವದಕ್ಕೂ ಬಳಸಬಹುದು ಆದರೆ ವಿಜ್ಞಾನವನ್ನು ಹೇಗೆ ಬಳಸಬೇಕು ಎಂಬ ಪ್ರಜ್ಞೆ ಮತ್ತು ವಿವೇಕವನ್ನು ಬೆಳೆಸುವುವಲ್ಲಿ ಶಿಕ್ಷಕರು ಮತ್ತು ಪೋಷಕರು ವಿಶೇಷ ಪಾತ್ರ…

Read More

ಎಕ್ಸಲಂಟ್ ವಿಜ್ಞಾನ ಪ. ಪೂ ಕಾಲೇಜಿನಲ್ಲಿ ಗುರುನಮನ ಮಹೋತ್ಸವದೊಂದಿಗೆ ಹೊಸ ವರ್ಷಕ್ಕೆ ಚಾಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹುಟ್ಟಿದಾಗ ಯಾವ ವ್ಯಕ್ತಿಯೂ ಸಹ ದಡ್ಡನಾಗಿರುವುದಿಲ್ಲ. ಬದಲಿಗೆ ನಮ್ಮನ್ನು ಇನೊಬ್ಬರೊಂದಿಗೆ ಹೋಲಿಸಿಕೊಂಡು ದಡ್ಡ ಎಂದುಕೊಳ್ಳುತ್ತೇವೆ, ಅದರ ಬದಲಿಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ನಾನು ಬುದ್ದಿವಂತ ನನ್ನಿಂದ ಎಲ್ಲವೂ ಸಾಧ್ಯ ಎಂದುಕೊಂಡು ಪ್ರತಿದಿನವನ್ನು ಪ್ರಾರಂಭಿಸಿದರೆ ಯಶಸ್ಸು ಎನ್ನುವುದು ಹುಡುಕಿಕೊಂಡು ಬರುತ್ತದೆ ಎಂದು ಕಾಖಂಡಕಿಯ ಗುರುದೇವಾಶ್ರಮದ ಪ.ಪೂ ಶ್ರೀ ಶಿವಯೋಗೀಶ್ವರ ಸ್ವಾಮೀಜಿ ಹೇಳಿದರು.ನಗರದ ಎಕ್ಸಲಂಟ್ ಪ. ಪೂ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರಿಗೆ ಗುರು ನಮನ ಮಹೋತ್ಸವದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು; ಮಕ್ಕಳಲ್ಲಿ ಧನಾತ್ಮಕ ಚಿಂತನೆಗಳು ಜಾಗೃತಗೊಳ್ಳಬೇಕಾದರೆ ಸಣ್ಣ ಸಣ್ಣ ಅಂಶಗಳಿಂದಲೂ ಜ್ಞಾನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿಗಳು ಸದಾ ಯತ್ನಿಸುತ್ತಿರಬೇಕು. ತನ್ನನ್ನು ಯಾವತ್ತೂ ಯಾರ ಜೊತೆಗೂ ಹೋಲಿಸಿಕೊಳ್ಳಬಾರದು. ನಿಸರ್ಗ ನಮ್ಮನ್ನು ಸೃಷ್ಠಿಸುವಾಗ ವಿಶೇಷವಾಗಿ ಸೃಷ್ಠಿಸಿರುತ್ತಾನೆ. ಯಾರಿಗೆ ಯಾವ ಶಕ್ತಿ ನೀಡಬೇಕು. ಯಾರಿಗೆ ಯಾವ ಜ್ಞಾನ ನೀಡಬೇಕು ಅದನ್ನು ನೀಡಿರುತ್ತಾನೆ. ಒಬ್ಬರು…

Read More

ವಿಜಯಪುರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಮರ ಶಿಲ್ಪಿ ಜಕಣಚಾರಿ ಅವರ ಶ್ರದ್ಧೆ, ಪ್ರಾಮಾಣಿಕತೆ ಹಾಗೂ ಅವರು ಕಲೆಗೆ ನೀಡಿದ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಶಿಲ್ಪಕಲೆಯ ಇತಿಹಾಸದಲ್ಲಿ ಅಜರಾಮರಾಗಿರುವ ಅಮರಶಿಲ್ಪಿ ಜಕಣಾಚಾರಿ ಅವರು ಕಲ್ಲಿನಲ್ಲಿ ಜೀವ ತುಂಬಿದ ಮಹಾನ್ ಶಿಲ್ಪಿ, ಹೊಯ್ಸಳ ಯುಗದ ಶಿಲ್ಪಕಲೆಗೆ ಶಾಶ್ವತವಾದ ಕೀರ್ತಿ ತಂದ ಮಹಾನ್ ಕಲಾವಿದರು. ಶಿಲ್ಪಕಲೆ, ಸಂಸ್ಕೃತಿ ಹಾಗೂ ಇತಿಹಾಸದ ಕುರಿತು ಅಮರಶಿಲ್ಪಿ ಜಕಣಾಚಾರಿ ಭಾರತೀಯ ಶಿಲ್ಪಕಲೆಗೆ ವಿಶ್ವಮಟ್ಟದ ಹೆಗ್ಗುರುತನ್ನು ತಂದ ಮಹಾನ್ ಕಲಾವಿದ. ಅವರ ಕಲಾ ಪರಂಪರೆ ನಮ್ಮ ಸಾಂಸ್ಕೃತಿಕ ಅಸ್ತಿತ್ವದ ಹೆಮ್ಮೆಯಾಗಿದೆ. ಅದ್ಭುತ ಶಿಲ್ಪಕಲೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷಿ ಇಲಾಖೆಯ ವತಿಯಿಂದ ಜನವರಿ ೦೩ರಂದು ಬೆಳಿಗ್ಗೆ ೭ರಿಂದ ೮:೩೦ರವರೆಗೆ ಸಿರಿಧಾನ್ಯ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸಿರಿ ಧಾನ್ಯ ನಡಿಗೆ ಕಾರ್ಯಕ್ರಮವು ಜ್ಞಾನಯೋಗಾಶ್ರಮದಿಂದ ಆರಂಭಗೊಂಡು, ಶ್ರೀ ಸಿದ್ದೇಶ್ವರ ದೇವಸ್ಥಾನ, ಗಾಂಧಿ ವೃತ್ತ,ಬಸವೇಶ್ವರ ವೃತ್ತದ ಮೂಲಕ ಗಗನಮಹಲವರೆಗೆ ನಡೆಯಲಿದೆ.ಸಿರಿ ಧಾನ್ಯ ನಡಿಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು,ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂಕ್ರಮಣದಲ್ಲಿ ನಡೆಯುವ ಶ್ರೀ ಸಿದ್ದೇಶ್ವರ ಜಾತ್ರಾ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯು ವಿಜಯಪುರ ತಾಲೂಕಿನ ತೊರವಿಯಲ್ಲಿ ಜ.೧೦ ರಿಂದ ೧೭ರವರೆಗೆ ಶ್ರೀ ಸಿದ್ದೇಶ್ವರ ಜಾನುವಾರು ಜಾತ್ರೆ ನಡೆಯಲಿದೆ.ರೈತರು ಹಾಗೂ ಸಾರ್ವಜನಿಕರು ತಮ್ಮ ಜಾನುವಾರಗಳನ್ನು ಜನವರಿ ೯ರಿಂದ ತೊರವಿಯ ಜಾನುವಾರು ಜಾತ್ರಾ ಸ್ಥಳಕ್ಕೆ ತರುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಜಂಟಿ ನಿರ್ದೇಶಕರು ಹಾಗೂ ಕಾರ್ಯದರ್ಶಿಗಳಾದ ಅಲ್ಲಾಭಕ್ಷ ಬಿಜಾಪುರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ವಿಜಯಪುರ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ-ರಾಷ್ಟ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈಯ್ಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಕ್ರೀಡಾಂಗಣ ಹಾಗೂ ನಗರದ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಕ್ರೀಡಾಂಗಣಗಳಲ್ಲಿ ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಗುರುವಾರ ನಗರದ ಜಿಲ್ಲಾ ಕ್ರೀಡಾಂಗಣದ ಕಚೇರಿಯಲ್ಲಿ ಜರುಗಿದ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆಗೈಯಲು ಅನುಕೂಲವಾಗುವ ನಿಟ್ಟಿನಲ್ಲಿ ನಿರ್ಮಿಸಲಾದ ಜಿಲ್ಲಾ ಕ್ರೀಡಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಿ ಕ್ರೀಡಾಪಟುಗಳಿಗೆ ಅಣಿಗೊಳಿಸಲಾಗಿದ್ದು, ಅದರಂತೆ ಕ್ರೀಡಾ ಪರಿಕರಗಳು, ಕ್ರೀಡಾಂಗಣವನ್ನು ಸ್ವಚ್ಛವಾಗಿಸಿಟ್ಟುಕೊಂಡು ಕ್ರೀಡಾಪಟುಗಳಿಗೆ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.ಜಿಲ್ಲಾ ಕ್ರೀಡಾಂಗಣದ ಮುಂಭಾಗದ ಒಳಚರಂಡಿ ನೀರು ಹರಿದು ಹೋಗಿ ತೊಂದರೆಯಾಗದಂತೆ ನೋಡಿಕೊಂಡು ಕೂಡಲೇ ಮಹಾನಗರ ಪಾಲಿಕೆ…

Read More