Author: editor.udayarashmi@gmail.com

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ವಾಪಸ್ ಪಡೆದ ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನಿಸಿರುವ ಸಿಬಿಐ, ಹೈಕೋರ್ಟ್ ಮೊರೆ ಹೋಗಿದೆ. ಶೀಘ್ರದಲ್ಲೇ ಈ ಪ್ರಕರಣದ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ. ಕೆ. ಶಿವಕುಮಾರ್, ‘ಸಿಬಿಐ ಹಾಗೂ ಕೇಂದ್ರ ಸರ್ಕಾರ ಉದ್ದೇಶ ಪೂರ್ವಕವಾಗಿ ನನಗೆ ಹಿಂಸೆ ನೀಡಲು ಬಯಸುತ್ತಿವೆ. ರಾಜ್ಯ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದ್ದು, ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಲು ಮುಂದಾಗಿದೆ. ರಾಜ್ಯ ಸರ್ಕಾರ ತನಿಖೆಯನ್ನು ವಾಪಸ್ ಪಡೆದ ಬಳಿಕವೂ ಸಿಬಿಐ ಅಧಿಕಾರಿಗಳು ನನ್ನ ಆಪ್ತರಿಗೆ ನೋಟಿಸ್ ನೀಡಿದ್ದಾರೆ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದರೆ ನನ್ನ ವಿರುದ್ಧ ರಾಜಕೀಯ ಪ್ರೇರಿತವಾಗಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎನ್ನುವುದು ಸ್ಪಷ್ಟವಾಗುತ್ತಿದೆ. ಆದರೆ, ಬಿಜೆಪಿ ನಾಯಕರ ವಿರುದ್ದ ಮಾತ್ರ ಸಿಬಿಐ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಕಿಡಿಕಾರಿದ್ದಾರೆ.‘ಎಲ್ಲದಕ್ಕೂ ಒಂದು ಮಿತಿ ಇರುತ್ತದೆ; ನನಗೆ ನೀಡುತ್ತಿರುವ…

Read More

13404 ಎಕರೆ ರೈತರ ಭೂಮಿ ವಶಕ್ಕೆ ಆಗ್ರಹ | ಕ್ರಮ ಕೈಗೊಳ್ಳದ ಸಿಎಂ ಬಗ್ಗೆ ಮಾಜಿ ಪಿಎಂ ಬೇಸರ ಬೆಂಗಳೂರು: ನೈಸ್ ಯೋಜನೆಯನ್ನು (ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸ್) ರಾಜ್ಯ ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ‘ಆ ಕಂಪನಿ ವಶದಲ್ಲಿರುವ 13404 ಎಕರೆಯಷ್ಟು ರೈತರ ಭೂಮಿಯನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಗ್ಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರೂ ಅವರು ಈವರೆಗೆ ಯಾವುದೇ ಕ್ರಮ ವಹಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.‘ಸಿದ್ದರಾಮಯ್ಯ ಬಡವರ ಪರ ಮಾತನಾಡುತ್ತಾರೆ. ಆ ಯೋಜನೆಯಲ್ಲಿ ಇಷ್ಟೊಂದು ಅಕ್ರಮ ಆಗಿದ್ದರೂ, ಬಡವರ ಭೂಮಿ ಲೂಟಿ ಹೊಡೆಯಲಾಗಿದ್ದರೂ ಏನು ಕ್ರಮ ತೆಗೆದುಕೊಂಡಿಲ್ಲ. ಬಡವರ ಪರ ಮಾತಾಡುವ ಸಿಎಂ ಯಾಕೆ ಕ್ರಮ ತೆಗೆದುಕೊಂಡಿಲ್ಲ’ ಎಂದು ಪ್ರಶ್ನಿಸಿದರು.‘ಸಿದ್ದರಾಮಯ್ಯ ಅವರು ಎಷ್ಟು ವರ್ಷ ಆಳಿದರೂ ಈ ಕಪ್ಪುಚುಕ್ಕೆಯಿಂದ ಹೊರಗೆ ಬರಲು ಸಾಧ್ಯವಿಲ್ಲ. ಇದರ ವಿರುದ್ದ ಅವರು ಕ್ರಮ…

Read More

ವಿಜಯಪುರ: ನಗರದ ಇಬ್ರಾಹಿಂಪುರದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಇದೇ ಜ.6 ರಿಂದ ಮೂರು ದಿನಗಳವರೆಗೆ ಶ್ರೀ ನಂದಬಸವೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಲಿದೆ.ಜಾತ್ರೆಯ ಅಂಗವಾಗಿ ಜ.6 ರಂದು ರಾತ್ರಿ 10.30ಕ್ಕೆ ಸ್ಥಳೀಯ ಶ್ರೀ ನಂದಬಸವೇಶ್ವರ ನಾಟ್ಯ ಸಂಘದವರಿಂದ ರೈತನ ರಾಜ್ಯದಲ್ಲಿ ರೌಡಿಗಳ ದರ್ಬಾರ ಎಂಬ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳುವುದು.ಜ. 7 ರಂದು ಬೆಳಿಗ್ಗೆ 6ಕ್ಕೆ ನಂದಬಸವೇಶ್ವರನಿಗೆ ಅಭಿಷೇಕ, ಪೂಜೆ ನೆರವೇರುವುದು. ನಂತರ ನಂದಿಕೋಲ ಮೆರವಣಿಗೆ ನಡೆಯುವುದು. ಬೆಳಿಗ್ಗೆ 9ಕ್ಕೆ ಶ್ರೀ ನಂದಬಸವೇಶ್ವರ ಗುಡಿಯಿಂದ ನಂದಿಕೋಲ ಮೆರವಣಿಗೆ ಹೊರಟು ಗ್ರಾಮದ ಎಲ್ಲ ಭಕ್ತಾದಿಗಳ ಮನೆಗಳಿಗೆ ಭೇಟಿಕೊಟ್ಟು ಮರಳಿ ಮಧ್ಯಾಹ್ನ 1ಕ್ಕೆ ದೇವಸ್ಥಾನಕ್ಕೆ ಬಂದು ತಲುಪುವುದು. ನಂತರ ಮಹಾಪ್ರಸಾದ ನಡೆಯುವುದು.ಜ.8 ರಂದು ಮಧ್ಯಾಹ್ನ 1ಕ್ಕೆ ನಂದಿಕೋಲ ಮೆರವಣಿಗೆ ಪ್ರಾರಂಭವಾಗಿ ಇಬ್ರಾಹಿಂಪುರ ಭಕ್ತಾದಿಗಳ ಮನೆಗಳಿಗೆ ಭೇಟಿ ಕೊಟ್ಟು ಸಂಜೆ 4.30ಕ್ಕೆ ಕನಕದಾಸ ಬಡಾವಣೆ, ಅಲ್ಲಾಪುರ ಓಣಿಯ ಮಾರ್ಗವಾಗಿ ಸಾಗಿ 6.30ಕ್ಕೆ ರೇಲ್ವೆಸ್ಟೇಷನ್ ಮುಂದಿರುವ ಕರ್ನಾಟಕ ಜಿನ್ನಿಂಗ್ ಫ್ಯಾಕ್ಟರಿ ಬಳಿ ಶ್ರೀ ನಂದಬಸವೇಶ್ವರ ಹಾಗೂ ಶ್ರೀ…

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿನಿ ವಿಜಯಪುರ: ಇತ್ತಿಚೆಗೆ ನಡೆದ ರಾಷ್ಟ್ರೀಯ ಖೇಲೋ ಇಂಡಿಯಾ ಮಹಿಳಾ ಕಿಕ್ ಬಾಕ್ಸಿಂಗ್ ಲೀಗ್‌ನಲ್ಲಿ ಪ್ರಥಮ ಹಾಗೂ ದ್ವಿತಿಯ ಸ್ಥಾನ ಪಡೆದುಕೊಂಡಿದ್ದಾಳೆ.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿನಿ ನೇಹಾ ಬಾಲಗಾಂವ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಖೇಲೋ ಇಂಡಿಯಾ ವುಮೆನ್ಸ್ ಕಿಕ್ ಬಾಕ್ಸಿಂಗ್ ಲೀಗ್‌ನಲ್ಲಿ ಸ್ಪರ್ಧಿಸಿ ರಾಜ್ಯಮಟ್ಟದ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ.ಇವಳ ಈ ಸಾಧನೆಯನ್ನು ಗುರುತಿಸಿ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಗಳಾದ ಡಾ.ಆರ್.ಬಿ.ಕೊಟ್ನಾಳ ಆಡಳಿತ ಮಂಡಳಿ, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಆರ್.ಎಂ.ಮಿರ್ದೆ ಹಾಗೂ ದೈಹಿಕ ನಿರ್ದೇಶಕರಾದ ಎಸ್.ಕೆ ಪಾಟೀಲ ಇವರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

Read More

ವಿಜಯಪುರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ವಿಜಯಪುರ ವತಿಯಿಂದ ನಗರದ ಬಿಎಲ್‌ಡಿಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ಜನವರಿ ೧೦ರಂದು ಬೆಳಿಗ್ಗೆ ೧೧ ಗಂಟೆಗೆ MY BHARAT-VIKSIT BHARAT@2047 ವಿಷಯದ ಬಗ್ಗೆ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ.ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ರಾಜ್ಯಮಟ್ಟಕ್ಕೆ ಕಳುಹಿಸಲಾಗುವುದು. ಹಾಗೂ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಒಂದು ಲಕ್ಷ ರೂ. ಬಹುಮಾನ, ದ್ವೀತಿಯ ಸ್ಥಾನ ಪಡೆದವರಿಗೆ ೫೦ ಸಾವಿರ ರೂ. ತೃತೀಯ ಸ್ಥಾನ (ಎರಡು) ಪಡೆದವರಿಗೆ ತಲಾ ೨೫ ಸಾವಿರ ರೂ. ಬಹುಮಾನ ನೀಡಲಾಗುವುದು.ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವವರು ದಿನಾಂಕ : ೦೯-೦೧-೨೦೨೪ರೊಳಗಾಗಿ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಅಧಿಕಾರಿಗಳು, ನೆಹರು ಯುವ ಕೇಂದ್ರ, ವಿಜಯಪುರ ಕಚೇರಿ ದೂ: ೦೮೩೫೨-೨೪೪೧೩೦, ಮೊ: ೯೯೭೦೮೨೩೯೩೦ ಸಂಖ್ಯೆಗೆ…

Read More

ಮುದ್ದೇಬಿಹಾಳ: ಹಸಿರು ತೋರಣ ಗೆಳೆಯರ ಬಳಗದ ನೂತನ ಅಧ್ಯಕ್ಷರನ್ನಾಗಿ ವೈದ್ಯ ವೀರೇಶ ಇಟಗಿ ಮತ್ತು ಕಾರ್ಯದರ್ಶಿಯಾಗಿ ನಿವೃತ್ತ ಶಿಕ್ಷಕ ಬಿ. ಎಚ್.ಬಳಬಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಸಾರ್ವಜನಿಕ ಉದ್ಯಾನವನದಲ್ಲಿ ನಡೆದ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಗೌರವಾಧ್ಯಕ್ಷರಾಗಿ ಬಿ.ಎಂ.ಪಲ್ಲೇದ, ಉಪಾಧ್ಯಕ್ಷರಾಗಿ ಬಸವರಾಜ ಬಿಜ್ಜೂರ, ಖಜಾಂಚಿಯಾಗಿ ಅಶೋಕ ರೇವಡಿ, ಸಂಚಾಲಕರಾಗಿ ಮಹಾಬಲೇಶ್ವರ ಗಡೇದ, ಸಹ ಕಾರ್ಯದರ್ಶಿಯಾಗಿ ವೀರೇಶ ಹಂಪನಗೌಡರ ಆಯ್ಕೆಯಾದರು.ಈ ವೇಳೆ ರವಿ ಗೂಳಿ, ಕೆ.ಆರ್.ಕಾಮಟೆ, ನಾಗಭೂಷಣ ನಾವದಗಿ, ರಾಜಶೇಖರ ಕಲ್ಯಾಣಮಠ, ಬಿ.ಎಸ್.ಮೇಟಿ, ಅಶೋಕ ರೇವಡಿ ಸೇರಿದಂತೆ ಬಳಗದ ಸದಸ್ಯರು ಉಪಸ್ಥಿತರಿದ್ದರು.ಜ.೭ ರಂದು ಸಂಜೆ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜರುಗಲಿದೆ ಎಂದು ಬಳಗದ ಕಾರ್ಯದರ್ಶಿ ವೀರೇಶ ಢವಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮುದ್ದೇಬಿಹಾಳ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ನೂತನವಾಗಿ ನಿರ್ಮಿಸಲಾದ ಪಿಎಸ್‌ಐ ಕೊಠಡಿಯನ್ನು ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ ಉದ್ಘಾಟಿಸಿದರು.ಪಿಎಸ್‌ಐ ಸಂಜೀವ ತಿಪರೆಡ್ಡಿ ಸೇರಿದಂತೆ ಸಿಬ್ಬಂದಿ ಇದ್ದರು.

Read More

ಮುದ್ದೇಬಿಹಾಳ: ತಾಲೂಕಿನ ಅಮರಗೋಳ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕುಳಿತು ತಮ್ಮ ಫಾಯಿದೆಗೋಸ್ಕರ ಹಣ ಕಟ್ಟಿ ಅಂದರ್ ಬಾಹರ್ ಇಸ್ಪೀಟ್ ಆಡುತ್ತಿದ್ದವರ ಮೇಲೆ ಇಲ್ಲಿನ ಪಿಎಸ್‌ಐ ಸಂಜೀವ ತಿಪರೆಡ್ಡಿ ಪ್ರಕರಣ ದಾಖಲಿಸಿದ್ದಾರೆ.ತಾಲೂಕಿನ ತಂಡಗಿ ಗ್ರಾಮದ ಗಣೇಶ ಹಾದಿಮನಿ, ಅಮರಗೋಳದ ಶಿವಪ್ಪ ಜೂಲಗುಡ್ಡ, ಹುನಗುಂದ ತಾಲೂಕು ಹುಲ್ಲಳ್ಳಿ ಗ್ರಾಮದ ಶರಣಪ್ಪ ಮಾದರ ಮತ್ತು ಮಹಾಂತೇಶ ಬೆಣ್ಣೂರ, ಧನ್ನೂರ ಗ್ರಾಮದ ಬಸವರಾಜ ಶಿರಹಟ್ಟಿ ಇವರ ಮೇಲೆ ಪ್ರಕರಣ ದಾಖಲಾಗಿದೆ.

Read More

ಮುದ್ದೇಬಿಹಾಳ: ಮುಸ್ಲಿಂ ಮಹಿಳೆಯರ ಕುರಿತು ಮಾತನಾಡಿದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ರಾಜ್ಯ ಸರ್ಕಾರವು ಸ್ವಯಂ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸುವುದು ಅಗತ್ಯವಿದೆ ಎಂದು ಕರ್ನಾಟಕ ಮುಸ್ಲಿಂ ಯೂನಿಟ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಲಾಡ್ಲೆಮಶಾಕ ನಾಯ್ಕೋಡಿ ಆಗ್ರಹಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಮಾಜದಲ್ಲಿ ದ್ವೇಷ ಬಿತ್ತುವ ಉದ್ದೇಶದಿಂದ ಕಲ್ಲಡಕ ಪ್ರಭಾಕರ ಭಟ್ ಮುಸ್ಲಿಂ ಮಹಿಳೆಯರ ಕುರಿತು ಹೇಳಿಕೆ ನೀಡಿದ್ದಾರೆ. ಇದು ಕೇವಲ ಆ ಧರ್ಮದ ಮಹಿಳೆಯರಿಗೆ ಮಾತ್ರವಲ್ಲದೇ ಇಡೀ ಮಹಿಳಾ ಸಮಾಜಕ್ಕೆ ಅಪಮಾನವಾದಂತಾಗಿದೆ. ಇವರ ವಿರುದ್ಧ ರಾಜ್ಯ ಸರ್ಕಾರವು ಹಿಂದೇಟು ಹಾಕದೆ ಕಾನೂನು ಕ್ರಮಕ್ಕೆ ಮುಂದಾಗಲಿ ಎಂದು ಒತ್ತಾಯಿಸಿದ್ದಾರೆ.

Read More

ಮುದ್ದೇಬಿಹಾಳ: ಕರ್ನಾಟಕ ಮುಸ್ಲಿಂ ಸಂಘದ ಜಿಲ್ಲಾಧ್ಯಕ್ಷರನ್ನಾಗಿ ಪಟ್ಟಣದ ಲಾಳೆಸಾ ನದಾಫ್ ಅವರನ್ನು ಆಯ್ಕೆ ಮಾಡಿ ರಾಜ್ಯಧ್ಯಕ್ಷ ಎಲ್.ಎನ್.ಬಶೀರ ಅಹಮದ್ ಆದೇಶಿಸಿದ್ದಾರೆ.

Read More