Subscribe to Updates
Get the latest creative news from FooBar about art, design and business.
Author: editor.udayarashmi@gmail.com
ತಿಕೋಟಾ: ಮಕ್ಕಳ ಆರೈಕೆ ಮಾಡುವ ಕೂಸಿನ ಮನೆಗಳು ಬಡವರು, ಕೂಲಿಕಾರರು, ರೈತರ ಮಕ್ಕಳಿಗೆ ಅನುಕೂಲವಾಗಲಿದ್ದು, ಅವುಗಳ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ತಾಲ್ಲೂಕ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ ಹೇಳಿದರು.ಪಟ್ಟಣದ ತಾಲ್ಲೂಕ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಕೂಸಿನ ಮನೆ ಆರೈಕೆದಾರರ ಎರಡನೇ ಹಂತದ ತರಬೇತಿ ಉದ್ಘಾಟಿಸಿ ಅವರು ಮಾತನಾಡಿದರು.ಕೂಸಿನ ಮನೆ ಆರೈಕೆದಾರರು ತರಬೇತಿ ಪಡೆದು ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕು. ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರ ಮೂರು ವರ್ಷದೊಳಗಿನ ಮಕ್ಕಳಿಗೆ ಆರೈಕೆ ಮಾಡುವ ಉದ್ದೇಶದಿಂದ ಕೂಸಿನ ಮನೆ ಎಂಬ ಶೀರ್ಷಿಕೆಯಡಿ ಶಿಶು ಪಾಲನಾ ಕೇಂದ್ರಗಳನ್ನು ಪ್ರಾರಂಭ ಮಾಡಲಾಗಿದೆ.ಕೂಸಿನ ಮನೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಬರುವಂತೆ ನೋಡಿಕೊಳ್ಳಬೇಕು. ನಿಮ್ಮ ಮೇಲೆ ಸಾಕಷ್ಟು ಜವಾಬ್ದಾರಿ ಇರುತ್ತದೆ. ಮಕ್ಕಳ ಪಾಲಕರಿಗೆ ಪ್ರತಿದಿನ ನೆಮ್ಮದಿಯಿಂದ ಕೆಲಸ ಮಾಡಲು ಸಹಾಯಕವಾಗುತ್ತದೆ. ಗ್ರಾಮೀಣ ಪ್ರದೇಶದ ಬಡವರ ಮಕ್ಕಳಿಗೆ ಕೂಸಿನ ಮನೆ ವರವಾಗಿದೆ. ಅದರಲ್ಲಿ ಕೆಲಸ ಮಾಡಲು ಅವಕಾಶ…
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿನಿ ರಾಧಿಕಾ ಕವಟಗಿ ರಾಜ್ಯ 19 ವರ್ಷದೊಳಗಿನ ಬಾಲಕಿಯರ ಫುಟಬಾಲ್ ತಂಡಕ್ಕೆ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ.ಪದವಿ ಪೂರ್ವ ಶಿಕ್ಷಣ ಇಲಾಖೆಯ ಬಾಲಕಿಯರ 19 ವಯೋಮಿತಿಯ 67ನೆಯ ರಾಷ್ಟ್ರೀಯ ಫುಟ್ಬಾಲ್ ಪಂದ್ಯಾವಳಿ ಜನೇವರಿ 6 ರಿಂದ ಜನೇವರಿ 11ರ ವರೆಗೆ 2024 ರ ವರೆಗೆ ಪಂಜಾಬಿನ ಲುಧಿಯಾನ ಜಿಲ್ಲೆಯಲ್ಲಿ ನಡೆಯಲಿವೆ. ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಕರ್ನಾಟಕ ಬಾಲಕಿಯರ ತಂಡಕ್ಕೆ ರಾಧಿಕಾ ಕವಟಗಿ ಆಯ್ಕೆಯಾಗಿ ಹೆಮ್ಮೆ ತಂದಿದ್ದಾರೆ.ವಿದ್ಯಾರ್ಥಿನಿಯ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೋಟ್ನಾಳ, ಆಡಳಿತಾಧಿಕಾರಿ ಬಿ. ಆರ್. ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.ಈ ಮಧ್ಯೆ ಸೋಮವಾರ ವಿದ್ಯಾರ್ಥಿನಿ ರಾಧಿಕಾ ಕವಟಗಿ ಅವರನ್ನು ಕಾಲೇಜಿನಲ್ಲಿ ದೈಹಿಕ ನಿರ್ದೇಶಕ ಎಸ್. ಎಸ್. ಕೋರಿ, ದೈಹಿಕ ಉಪನಿರ್ದೇಶಕ ಕೈಲಾಸ ಹಿರೇಮಠ, ಪ್ರಾಚಾರ್ಯ ಸಿ. ಬಿ. ಪಾಟೀಲ, ದೈಹಿಕ ಶಿಕ್ಷಕ…
ಶ್ರೀ ಲಕ್ಷ್ಮಿ ವೆಂಕಟೇಶ್ವರ ಸೌಹಾರ್ದ ಸಹಕಾರಿ ಸಂಘ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ ಅಭಿಮತ ವಿಜಯಪುರ: ಸಹಕಾರಿ ಸಂಘಗಳ ಆಡಳಿತ ಮಂಡಳಿ ಮತ್ತು ಸಾಲ ಪಡೆಯುವ ಗ್ರಾಹಕರು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಬ್ಯಾಂಕುಗಳು ಹೆಚ್ಚಿನ ಅಭಿವೃದ್ಧಿಯಾಗಲು ಸಾಧ್ಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಇಂದು ಗುರುವಾರ ಬಬಲೇಶ್ವರ ತಾಲೂಕಿನ ಕೊಡಬಾಗಿ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸೌಹಾರ್ದ ಸಹಕಾರಿ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.ಗ್ರಾಮೀಣ ಭಾಗದಲ್ಲಿ ರೈತರಿಗೆ ಭೂಮಿ, ನೀರು, ವಿದ್ಯುತ್ ಅತ್ಯಗತ್ಯ. ಅಲ್ಲದೇ, ಕಷ್ಟದ ಸಂದರ್ಭಗಳಲ್ಲಿ ಅವರಿಗೆ ಸಾಲ ಬೇಕಾಗುತ್ತದೆ. ಈ ಸಂದರ್ಭದಲ್ಲಿ ಹಣಕಾಸು ಸಂಸ್ಥೆಗಳ ಪಾತ್ರ ಪ್ರಮುಖವಾಗಿರುತ್ತದೆ. ಉಳ್ಳವರ ಜೊತೆಗೆ ಬಡವರಿಗೆ, ಸಣ್ಣ ವ್ಯಾಪಾರಿಗಳಿಗೆ ಸಾಲ ನೀಡಿ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಸಂಸ್ಥೆಗಳು ಮಾಡಬೇಕು. ಅದೇ ರೀತಿ, ಸಾಲ ಪಡೆಯುವ ಗ್ರಾಹಕರೂ ಕೂಡ ಶ್ರದ್ಧೆಯಿಂದ ಸಾಲ ಮರು ಪಾವತಿಸಬೇಕು. ಆಗ ಮಾತ್ರ ಹಣಕಾಸು ಸಂಸ್ಥೆಗಳು…
ಮುದ್ದೇಬಿಹಾಳ: ಅಮರಶಿಲ್ಪಿ ಜಕಣಾಚಾರಿ ಅವರು ಶಿಲ್ಪ ಕಲೆಗೆ ನೀಡಿದ ಕೊಡುಗೆ ಅಪಾರವಾದದ್ದು. ಇದು ಸೂರ್ಯ ಚಂದ್ರರು ಇರುವವರೆಗೆ ಅಮರವಾಗಿರುತ್ತದೆ ಎಂದು ತಹಶೀಲ್ದಾರ ಬಲರಾಮ ಕಟ್ಟಿಮನಿ ಹೇಳಿದರು.ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಅಮರ ಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಅಮರ ಶಿಲ್ಪಿ ಚಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.ಅಮರ ಶಿಲ್ಪಿ ಜಕಣಾಚಾರಿ ಅವರು ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂ ನಮ್ಮನ್ನು ಬೆರಗುಗೊಳಿಸುತ್ತವೆ. ಇಂತಹ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜಗತ್ತಿನ ಅದ್ಭುತ ಶಿಲ್ಪಗಳ ಸಾಲಿನಲ್ಲಿ ನಿಲ್ಲುವ ಜಕಣಾಚಾರಿ ಅವರು ಕಲ್ಲಿನಲ್ಲಿ ಕೆತ್ತಿದ ಬೆಲೂರು ಮತ್ತು ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಮಾಡುವ ಕೆಸದ ಬಗ್ಗೆ ತಿಳುವಳಿಕೆ, ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಲಭಿಸುತ್ತದೆ. ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸುತ್ತದೆ. ಸಾಧಕರನ್ನು ಸ್ಮರಣೆ ಮಾಡಿದರಷ್ಟೇ ಸಾಲದು ಅವರ ಗುಣ…
ಬಸವನಬಾಗೇವಾಡಿ: ಜಿಲ್ಲಾ ಮಾದಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕವು ೨೦೨೨-೨೩ ನೇ ಸಾಲಿನ ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ವೈದ್ಯಕೀಯ, ಎಜನಿಯರಿಂಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದೆ. ೨೦೨೨-೨೩ ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.೮೦ ರಷ್ಟು, ಪಿಯುಸಿ ಪರೀಕ್ಷೆಯಲ್ಲಿ ಶೇ. ೭೦ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಜ.೫ ರೊಳಗೆ ತಮ್ಮ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಬಸವನಬಾಗೇವಾಡಿ, ಕೊಲ್ಹಾರ ತಾಲೂಕಿನ ಪ್ರತಿಭಾ ಪುರಸ್ಕಾರಕ್ಕೆ ಒಳಪಡುವ ವಿದ್ಯಾರ್ಥಿಗಳು ಸಂಘದ ಅಧ್ಯಕ್ಷ ಕೆ.ಎಂ.ಬೇಲಿ ಮೊ- ೯೦೧೯೪೪೨೨೪೮, ಪಿ.ಎಂ.ರತ್ನಾಕರ ಮೊ-೯೯೦೦೬೭೧೦೮೨, ಸಿ.ಟಿ.ಮಾದರ ಮೊ- ೮೬೧೮೨೬೦೭೯೪, ಎಸ್.ಬಿ.ಮಾದರ ಮೊ- ೯೪೮೧೫೭೧೦೭೮, ಎಚ್.ಎಂ. ಹೊಸಮನಿ ಮೊ- ೮೪೩೧೮೩೭೫೧೬ ಇವರಿಗೆ ಸಂಪರ್ಕಿಸಿ ಮಾಹಿತಿ ನೀಡಬೇಕು. ಜ.೭ ರಂದು ಪಟ್ಟಣದ ಮಸಬಿನಾಳ ರಸ್ತೆಯಲ್ಲಿರುವ ಯಲ್ಲಾಲಿಂಗ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಸಮಾಜದ ಪುರಸಭೆ, ಪಟ್ಟಣ ಪಂಚಾಯತ ಸದಸ್ಯರನ್ನು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರನ್ನು ಹಾಗೂ ಹೊಸದಾಗಿ ಸರ್ಕಾರಿ ನೌಕರಿಗೆ…
ಬಸವನಬಾಗೇವಾಡಿ: ಆಗಿನ ಕಾಲದ ಸಾಮಾಜಿಕ, ಸಮಾನತೆ, ದೀನದಲಿತರ, ಹಿಂದುಳಿದವರ ಶೈಕ್ಷಣಿಕ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸುಧಾರಣೆ ತಂದ ಮಹಾತ್ಮರಲ್ಲಿ ಸಾವಿತ್ರಿಬಾಯಿ ಪುಲೆಯವರು ಅಗ್ರಗಣ್ಯರು. ಅವರ ಆರ್ಶ ಸರಳ ಜೀವನವು ಎಲ್ಲರಿಗೂ ಮಾದರಿಯಾಗಿದೆ ಎಂದು ಮಾಳಿ ಸಮಾಜದ ಯುವ ಮುಖಂಡ ಜಟ್ಟಿಂಗರಾಯ ಮಾಲಗಾರ ಹೇಳಿದರು.ಪಟ್ಟಣದ ನಾಗೂರ ರಸ್ತೆಯಲ್ಲಿ ಮಾಳಿ ಸಮಾಜ ಬಾಂಧವರು ಬುಧವಾರ ಹಮ್ಮಿಕೊಂಡಿದ್ದ ದೇಶದ ಪ್ರಥಮ ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಅವರ ೧೯೩ ನೇ ಜಯಂತಿ ಕರ್ಯಕ್ರಮದಲ್ಲಿ ಸಾವಿತ್ರಿಬಾಯಿ ಪುಲೆ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ಸಾವಿತ್ರಿಬಾಯಿ ಅವರು ಮಹಿಳಾ ಹಕ್ಕುಗಳ ಧ್ವನಿ ಎತ್ತಿದರು. ಸಾಮಾಜಿಕ ನಿಯಮಗಳ ವಿರುದ್ಧ ಅವರು ಹೋರಾಡಿದರು. ಅವರು ನೀಡಿರುವ ಕೊಡುಗೆಗಳು ದೇಶದ ಸಾಮಾಜಿಕ ರಚನೆಯಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ ಎಂದರು.ಈ ಸಂದರ್ಭದಲ್ಲಿ ಅಪ್ಪಾಶಿ ಮಾಲಗಾರ, ಸಿದ್ದಣ್ಣ ಕಲ್ಲೂರ, ಬಸವರಾಜ ಮಾಲಗಾರ, ಪಾವಡೆಪ್ಪ ಮಾಲಗಾರ, ರಾಜು ಮಾಳಿ, ರಮೇಶ ಮಾಲಗಾರ, ಮುತ್ತು ಮಾಲಗಾರ, ಸಂಗಪ್ಪ ತೋಟದ, ಲಕ್ಷ್ಮಣ…
ಸಿಂದಗಿ: ಇಡೀ ರಾಜ್ಯದಲ್ಲಿ ರೈತರ ಕಬ್ಬು ಕಾರ್ಖಾನೆಗೆ ಹೋಗುತ್ತಿದೆ. ತೂಕದಲ್ಲಿ ವ್ಯತ್ಯಾಸವಾಗುತ್ತಿದೆ ಎಂದು ಈಗಾಗಲೇ ನನಗೆ ಸಾಕಷ್ಟು ದೂರುಗಳು ಬಂದಿವೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.ಪಟ್ಟಣದ ಎಪಿಎಂಸಿಗೆ ದಿಡೀರನೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ ತೂಕದಲ್ಲಿ ಮೋಸ ಸೇರಿದಂತೆ ರೈತರಿಗೆ ವಂಚಿಸುವುದನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಕಬ್ಬಿನ ತೂಕದಲ್ಲಿ ಮೋಸ ನಡೆಯುತ್ತಿರುವ ಕುರಿತು ಹಲವಾರು ಬಾರಿ ರೈತ ಸಂಘಟನೆಗಳಿಂದ ನನಗೆ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕ ಮಾಡಲು ಡಿಜಿಟಲ್ ತೂಕದ ಯಂತ್ರ ಅಳವಡಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ. ಏಕೆಂದರೆ ಡಿಜಿಟಲ್ ತೂಕದ ಯಂತ್ರಗಳನ್ನು ಬಳಸುವುದರಿಂದ ತೂಕದಲ್ಲಿ ರೈತರಿಗೆ ಯಾವುದೇ ಮೋಸವಾಗುವುದಿಲ್ಲ. ಈಗಾಗಲೇ ಕಾರ್ಖಾನೆಯವರಿಗೆ ಡಿಜಿಟಲ್ ತೂಕದ ಯಂತ್ರಗಳನ್ನು ಅಳವಡಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಕೆಲವು ಕಾರ್ಖಾನೆಯ ಮಾಲೀಕರು ಅಳವಡಿಸಿದರೇ ಇನ್ನೂ ಕೆಲವು ಕಾರ್ಖಾನೆಯ ಮಾಲೀಕರು ಅಳವಡಿಸಿದೆ ಇಲ್ಲದಿರುವುದು ಕಂಡುಬಂದಿದೆ. ಕೆಲವು ಕಾರ್ಖಾನೆಯವರು ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ನನಗೆ…
ಸಿಂದಗಿ: ಸಾವಿತ್ರಿಬಾಯಿ ಪುಲೆ ಸಾಮಾಜಿಕ ಅಸಮಾನತೆಗಳ ವಿರುದ್ಧ ಹೋರಾಡಿ ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಿದರು ಎಂದು ಎಸ್.ಡಿ.ಎಂ.ಸಿ ಅಧ್ಯಕ್ಷ ಚನ್ನಪ್ಪಗೌಡ ಬಿರಾದಾರ ಹೇಳಿದರು.ತಾಲೂಕಿನ ಹಂದಿಗನೂರ ಗ್ರಾಮದ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಸಾವಿತ್ರಿಬಾಯಿ ಪುಲೆ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ದೇಶದ ಪ್ರಥಮ ಮಹಿಳಾ ಶಿಕ್ಷಕಿ ಎನಿಸಿಕೊಂಡಿದ್ದಾರೆ. ಮಹಿಳಾ ಶಿಕ್ಷಣಕ್ಕೆ ಅವರ ಕೊಡುಗೆ ಅನನ್ಯ. ಇಂದಿಗೂ ಮಹಿಳೆಯರಿಗೆ ಅವರು ಸ್ಫೂರ್ತಿಯಾಗಿದ್ದರೆ ಎಂದರು.ಈ ವೇಳೆ ಗ್ರಾಮ ಪಂಚಾಯತ್ ವತಿಯಿಂದ ಶಾಲೆಗೆ ೨೦ ಡೆಸ್ಕ ಗಳನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಆಯ್.ಎಂ.ಬಿರಾದಾರ, ಸಿದ್ದಣ್ಣ ಪಟ್ಟಣಶೆಟ್ಟಿ, ನಾನಾಗೌಡ ಬಿರಾದಾರ, ಭೀಮರಾಯ ಬಿಂಗೋಳ್ಳಿ, ಮಡಿವಾಳಪ್ಪ ಗುಬ್ಬೇವಾಡ, ಶಾಲೆಯ ಮುಖ್ಯಗುರು ಎಸ್.ಎಸ್. ಬುಲಬುಲೆ, ವ್ಹಿ.ಎಸ್.ಕುಲಕರ್ಣಿ, ವಿಜಯಕುಮಾರ ಚಿಂಚೋಳ್ಳಿ, ಶ್ರೀಕಾಂತ ಹಿರೇಮಠ, ಸೋಮಶೇಖರ ಪತ್ತಾರ ಸೇರಿದಂತೆ ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಇದ್ದರು.
ಮುದ್ದೇಬಿಹಾಳ: ಪಟ್ಟಣದ ಹಡಲಗೇರಿಯಲ್ಲಿನ ಮಾದರಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆಯನ್ನು ಬುಧವಾರ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು ನಾವುಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕುತ್ತಿದ್ದು ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು. ಸರಕಾರದ ಸವಲತ್ತು ಸೌಲಭ್ಯಗಳ ಸದುಪಯೋಗ ಪಡಿಸಿಕೊಂಡು ಬದುಕು ಸುಂದರವಾಗಿ ಕಟ್ಟಿಕೊಳ್ಳಬೇಕು ಎಂದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಮ್.ಜಿ.ವ್ಹಿ.ಸಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಬಿ.ಎ.ಗೂಳಿ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಬಸವರಾಜ ನಾಡಗೌಡ ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧೆ, ಆಸಕ್ತಿ ಏಕಾಗ್ರತೆಯಿಂದ ಶಿಕ್ಷಣ ಪಡೆದು ಮೌಲ್ಯಯುತ ಜೀವನ ರೂಪಿಸಿಕೊಳ್ಳಬೇಕು. ಮೊಬೈಲ್ನ್ನು ಗ್ರಂಥಾಲಯದಂತೆ ಬಳಸಿ ಜ್ಞಾನಾರ್ಜನೆಯ ಜೊತೆಗೆ ಕೌಶಲ್ಯ ರೂಪಿಸಿಕೊಂಡು ಪಠ್ಯೇತರ ಚಟುವಟಿಕೆಗಳಾದ ಸಾಂಸ್ಕೃತಿಕ, ಕ್ರೀಡೆ ಹಾಗೂ ಎನ್.ಎಸ್.ಎಸ್. ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದೈಹಿಕ ಮತ್ತು ಮಾನಸಿಕ ಸದೃಡತೆ ಬೆಳೆಸಿಕೊಂಡು ವ್ಯಕ್ತಿತ್ವ ವಿಕಸನದ ಮೂಲಕ ಉತ್ತಮ ನಾಗರಿಕರಾಗಿ ಬೆಳೆಯಬೇಕು ಎಂದರು.ಪ್ರಾಚಾರ್ಯ ಡಾ.ಎಸ್.ಎಲ್ ಪಾಟೀಲ ಅಧ್ಯಕ್ಷೀಯ ನುಡಿಗಳನ್ನಾಡಿದರು.…
ಆರು ತಿಂಗಳ ವೇತನ ಪಾವತಿಗೆ ಆಗ್ರಹಿಸಿ ಆಲಮಟ್ಟಿಯ ವಿವಿಧ ಉದ್ಯಾನದ ಅರಣ್ಯ ಕಾರ್ಮಿಕರ ಧರಣಿ ಆಲಮಟ್ಟಿ: ಆರು ತಿಂಗಳ ವೇತನ ಪಾವತಿಗೆ ಆಗ್ರಹಿಸಿ ಆಲಮಟ್ಟಿಯ ವಿವಿಧ ಉದ್ಯಾನದ ಕೆಬಿಜೆಎನ್ ಎಲ್ ಅರಣ್ಯ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಬುಧವಾರ ಎರಡು ದಿನ ಪೂರೈಸಿತು.ಎರಡನೇ ದಿನ ಬುಧವಾರದ ಪ್ರತಿಭಟನೆಗೆ ಜಯಕರ್ನಾಟಕ ಜನಪರ ವೇದಿಕೆ ಹಾಗೂ ಬಿಸಿಯೂಟ ಕಾರ್ಯಕರ್ತರ ಸಂಘಟನೆಯವರು ಸೇರಿ ನಾಣಾ ಸಂಘಟನೆಗಳ ಮುಖಂಡರು ಧರಣಿ ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಕಾರ್ಮಿಕರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. , ವಿವಿಧ ಸಂಘಟನೆಯ ಮುಖಂಡರಾದ ಭರತಕುಮಾರ, ಶೋಭಾ ಬಂಡಿವಡ್ಡರ, ದ್ಯಾಮಣ್ಣ ಬಿರಾದಾರ ಮೊದಲಾದವರು ಮಾತನಾಡಿ, ಪ್ರತಿಭಟನೆ ನಡೆಸಿ ಎರಡೂ ದಿನ ಕಳೆದರೂ ಕೆಬಿಜೆಎನ್ ಎಲ್ ಮುಖ್ಯ ಎಂಜಿನಿಯರ್ ಪ್ರತಿಭಟನಾ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸುವ ಪ್ರಯತ್ನ ನಡೆಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸಿಗುವುದು ನಿತ್ಯ ೫೦೦ ರೂ, ಅಂತಹ ಆರ್ಥಿಕ ಮಟ್ಟದಲ್ಲಿಯೂ ಆರು ತಿಂಗಳ ಕಾಲ ವೇತನ ಆಗದಿದ್ದರೇ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.ಮಂಗಳವಾರ…
