Author: editor.udayarashmi@gmail.com

ವಿಜಯಪುರ: ಜಿಲ್ಲೆಯ ೭ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯಲ್ಲಿ ೫೬ ಸರ್ಕಾರಿ ಹಾಗೂ ಖಾಸಗಿ ಪ್ರೌಢ ಶಾಲೆಗಳಿಗೆ ಪ್ರತಿ ಶಾಲೆಗೆ ೦೧ ಲ್ಯಾಪಟಾಪ್ ಹಾಗೂ ೦೧ ಕಲರ್ ಪ್ರಿಂಟರ್‌ನ್ನು ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ನವದೆಹಲಿ ಪ್ರತಿನಿಧಿ ಪ್ರಕಾಶ ಹುಕ್ಕೇರಿಯವರು ೨೦೨೪ ಹೊಸ ವರ್ಷದ ನಿಮಿತ್ಯ ಸೋಮವಾರದಂದು ಅವರ ಕಾರ್ಯಕರ್ತರು ಶಾಲೆಗಳಿಗೆ ತೆರಳಿ ಲ್ಯಾಪಟಾಪ್ ಹಾಗೂ ಪ್ರಿಂಟರಗಳನ್ನು ಹಂಚಿಕೆ ಮಾಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಬಸವನ ಬಾಗೇವಾಡಿ ತಾಲೂಕಿನ ೮ ಪ್ರೌಢ ಶಾಲೆಗಳು, ಇಂಡಿ ತಾಲೂಕಿನ ೮ ಪ್ರೌಢ ಶಾಲೆಗಳು, ಸಿಂದಗಿ ತಾಲೂಕಿನ ೮ ಪ್ರೌಢ ಶಾಲೆಗಳು, ಚಡಚಣ ತಾಲೂಕಿನ ೮ ಪ್ರೌಢ ಶಾಲೆಗಳು, ಬಬಲೇಶ್ವರ ತಾಲೂಕಿನ ೮ ಪ್ರೌಢ ಶಾಲೆಗಳು, ವಿಜಯಪೂರ ನಗರದ ೮ ಪ್ರೌಢ ಶಾಲೆಗಳು ಹಾಗೂ ಮುದ್ದೇಬಿಹಾಳ ತಾಲೂಕಿನ ೮ ಪ್ರೌಢ ಶಾಲೆಗಳನ್ನು ಒಳಗೊಂಡಿವೆ.

Read More

ಆಲಮಟ್ಟಿ: ಇಲ್ಲಿಯ ವಿವಿಧ ಉದ್ಯಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಕಾರ್ಮಿಕರಿಗೆ ಆರು ತಿಂಗಳಿಂದ ವೇತನ ಪಾವತಿ ಮಾಡದಿರುವುದನ್ನು ಖಂಡಿಸಿ ಅರಣ್ಯ ದಿನಗೂಲಿಗಳು ಮಂಗಳವಾರ ಇಲ್ಲಿ ಪ್ರತಿಭಟಿಸಿದರು.ರಾಕ್ ಉದ್ಯಾನದಿಂದ ಮುಖ್ಯ ಎಂಜಿನಿಯರ್ ಕಚೇರಿಯವರೆಗೆ ೧೦೦ ಕ್ಕೂ ಹೆಚ್ಚು ಕಾರ್ಮಿಕರು ಮೆರವಣಿಗೆ ನಡೆಸಿ ವೇತನ ವಿಳಂಬ ಧೋರಣೆ ಖಂಡಿಸಿದರು.ಮುಖ್ಯ ಎಂಜಿನಿಯರ್ ಕಚೇರಿ ಎದುರು ಸಂಜೆಯವರೆಗೂ ಪ್ರತಿಭಟನೆ ನಡೆಸಿದ ನೂರಾರು ಕಾರ್ಮಿಕರು ಕಳೆದ ಆರು ತಿಂಗಳಿಂದ ವೇತನ ನೀಡಿಲ್ಲ, ಇದರಿಂದ ನಮ್ಮ ನಿತ್ಯ ಜೀವನದ ಸಾಗಿಸುವುದು ದುಸ್ತರವಾಗಿದೆ ಎಂದು ನೊಂದು ನುಡಿದರು.ಪ್ರತಿಭಟನೆ ಮಾಡಿದಾಗಷ್ಟೇ ನಮಗೆ ವೇತನವಾಗುತ್ತದೆ, ಇಲ್ಲದಿದ್ದರೇ ನಮ್ಮ ಗೋಳು ಕೇಳುವವರೂ ಯಾರೂ ಇಲ್ಲ ಎಂದರು.ಕಳೆದ ೨೦ ವರ್ಷಗಳಿಂದ ಇಲ್ಲಿ ಕನಿಷ್ಠ ಕೂಲಿಗಾಗಿ ದುಡಿಯುತ್ತಿದ್ದೇವೆ, ಉದ್ಯಾನವನ ನಿರ್ಮಾಣ, ನಿರ್ವಹಣೆಯಲ್ಲಿ ನಮ್ಮ ಪಾತ್ರ ಅಧಿಕ, ಇಂತಹ ಪರಿಸ್ಥಿತಿಯಲ್ಲಿ ಆರು ತಿಂಗಳಿಂದ ವೇತನ ಆಗಿಲ್ಲ ಎಂದರೇ ನಮ್ಮ ಜೀವನ ನಿರ್ವಹಣೆ ಹೇಗೆ? ಎಂದು ಅವರು ಪ್ರಶ್ನಿಸಿದರು.*ಬಾರದ ಮುಖ್ಯ ಎಂಜಿನಿಯರ್:*ಮುಖ್ಯ ಎಂಜಿನಿಯರ್ ಕಚೇರಿಯ ಎದುರು ಸಂಜೆಯವರೆಗೂ ಕುಳಿತರೂ ಆಲಮಟ್ಟಿಯಲ್ಲಿದ್ದರೂ ಮುಖ್ಯ ಎಂಜಿನಿಯರ್…

Read More

ಮುದ್ದೇಬಿಹಾಳ: ಕ್ಷಯರೋಗ ನಿರ್ಮೂಲನೆ, ಕುಷ್ಠರೋಗ ನಿಯಂತ್ರಣ, ಕೋವಿಡ್ ೧೯.ಎಓ-೧ ರೂಪಾಂತರಿ ಉಪತಳಿ ಹಾಗೂ ಹದಿಹರೆಯದವರ ರಕ್ತಹೀನತೆ ಮತ್ತು ಅಪೌಷ್ಟಿಕತೆಯನ್ನು ನಿವಾರಿಸಲು ‘ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ’ (ಎಎಂಪಿಕೆ) ಯೋಜನೆ ಅಡಿಯಲ್ಲಿ ಗುರುತಿಸಿ ಅನೀಮಿಯಾದಿಂದ ಬಳಲುವವರಿಗೆ ಸೂಕ್ತ ಚಿಕಿತ್ಸೆ ಮತ್ತು ಔಷಧಿಗಳನ್ನು ನೀಡಲಾಗುತ್ತದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನುಸೂಯ ತೇರದಾಳ ಹೇಳಿದರು.ಇಲ್ಲಿನ ಎಂ.ಜಿ.ವ್ಹಿ.ಸಿ ಮಹಾವಿದ್ಯಾಲಯದಲ್ಲಿ ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಎನ್.ಸಿ.ಸಿ, ಎನ್.ಎಸ್.ಎಸ್ ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಆರೋಗ್ಯ ಮಹತ್ವದ ಬಗ್ಗೆ ಅರಿವು ಹೊಂದುವದು ಅವಶ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಆರೋಗ್ಯ ಇಲಾಖೆಯಿಂದ ದೊರೆಯುವ ಸೌಲಭ್ಯಗಳು ಮತ್ತು ರೋಗ ನಿಯಂತ್ರಣದ ಕುರಿತು ಮುಂಜಾಗ್ರತೆ ಕ್ರಮಗಳನ್ನು ಹಾಗೂ ಚಿಕಿತ್ಸೆಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಅವಶ್ಯ ಇದೆ ಎಂದರು.ನಗರ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಮಾತನಾಡಿ ರೋಗ ಬಾರದಂತೆ ಮುಂಜಾಗೃತೆ ವಹಿಸುವುದು ಉತ್ತಮ. ರೋಗವಾಹಕ ಸೊಳ್ಳೆಗಳಿಂದ ರೋಗ ಹರಡದಂತೆ ಕ್ರಮ ವಹಿಸಲು ಅಗತ್ಯ…

Read More

ನಿಡಗುಂದಿ: ೩೯ ವರ್ಷಗಳ ಕಾಲ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿಗೊಂಡ ಕಮದಾಳ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಬಿ. ಉಣ್ಣಿಭಾವಿ ಅವರನ್ನು ಗ್ರಾಮಸ್ಥರು, ನಾನಾ ಸಂಘಟನೆಗಳು, ಅವರ ಶಿಷ್ಯಂದಿರು ಸನ್ಮಾನಿಸಿ ಗುರುಭಕ್ತಿ ಮೆರೆದರು.ಉಣ್ಣಿಭಾವಿ ಅವರ ಸೇವೆ ಹಾಗೂ ವಿದ್ಯಾರ್ಥಿಗಳ ಕುರಿತು ಅವರ ಕಾಳಜಿ ಹಾಗೂ ಬದ್ಧತೆ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ಸಹಸ್ರಾರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಶ್ರಮಿಸಿದ ಉಣ್ಣಿಭಾವಿ ಅವರ ಸೇವೆ ಅನನ್ಯ ಎಂದರು. ನಿವೃತ್ತಿಯ ದಿನ ರಾಜ್ಯದ ನಾನಾ ಕಡೆಯಿಂದ ಅವರ ಶಿಷ್ಯರು ಬಂದು ಸನ್ಮಾನಿಸಿದ್ದು ಅವರ ಸೇವೆಗೆ ಸಂದ ಗೌರವ ಎಂದರು. ಸಮುದಾಯದ ಸಹಭಾಗಿತ್ವದಿಂದ ಕಮದಾಳ ಶಾಲೆಯಲ್ಲಿಯೂ ಸ್ಮಾರ್ಟ್ ಕ್ಲಾಸ್ ಅಳವಡಿಸಬೇಕು, ಅದಕ್ಕೆ ಬೇಕಾದ ಹಣವನ್ನು ಗ್ರಾಮಸ್ಥರು ನೀಡಬೇಕು ಎಂದರು. ಇದರಿಂದ ಮಕ್ಕಳ ಕಲಿಕೆ ಇನ್ನಷ್ಟು ದೃಡೀಕರಣಗೊಳ್ಳಲಿದೆ ಎಂದರು. ಪ್ರಾಸ್ತವಿಕವಾಗಿ ಮಾತನಾಡಿದ ಶಿಕ್ಷಕ ಎಂ.ಎಸ್. ಯಳಮೇಲಿ, ಎಲ್ಲಾ ಶಿಕ್ಷಕರನ್ನು ಒಗ್ಗೂಡಿಸಿ…

Read More

ಸಿಂದಗಿ: ತಾಲೂಕಿನ ಸಾಸಾಬಾಳ ಗ್ರಾಮದ ಎಚ್.ಪಿ.ಎಸ್. ಶಾಲೆಯಲ್ಲಿ ಸುಮಾರು ೨೦೦ ಮಕ್ಕಳು ಅಧ್ಯಯನ ಮಾಡುತ್ತಿದ್ದು, ಅದರಲ್ಲಿ ಬಹುತೇಕ ಮಕ್ಕಳು ಅನಧಿಕೃತವಾಗಿ ನಡೆಸುತ್ತಿರುವ ಕೋಚಿಂಗ್ ಸೆಂಟರ್‌ಗಳಿಗೆ ಹೋಗುತ್ತಿದ್ದು, ಸರಕಾರದ ಸೌಲಭ್ಯಗಳು ದುರುಪಯೋಗವಾಗುತ್ತಿವೆ, ಇದರ ಬಗ್ಗೆ ತಾವು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಕರವೇ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಮಾತನಾಡಿದ ಅವರು, ಈ ವಿಚಾರವಾಗಿ ಹಲವಾರು ಬಾರಿ ತಮ್ಮ ಗಮನಕ್ಕೆ ತಂದರು ತಾವುಗಳು ಯಾವುದೇ ಕ್ರಮಕೈಗೊಂಡಿಲ್ಲ. ಈ ಹಿಂದೆ ಹಾಜರಾತಿ ವಿಷಯದಲ್ಲಿ ಸಾಕಷ್ಟು ಕಿರಿಕಿರಿ ಉಂಟಾಗಿ ಶಾಲೆಯ ಮುಖ್ಯಗುರು ಶಿಕ್ಷಕ ಬಸವರಾಜ ನಾಯ್ಕಲ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದರಿ ಕೋಚಿಂಗ್ ಕ್ಲಾಸ್‌ಗಳ ಮೇಲೆ ಕ್ರಮ ವಹಿಸಿಕೊಳ್ಳದಿದ್ದರೆ ಶಾಲೆಯನ್ನು ಬಂದ್ ಮಾಡಿ ಕಾರ್ಯಾಲಯದ ಮುಂದೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಕರವೇ ಪದಾಧಿಕಾರಿಗಳು ಹಾಗೂ ಸಾಸಾಬಾಳ ಗ್ರಾಮದ ಪಾಲಕ ಪೋಷಕರು ಆಗ್ರಹಿಸಿದರು.ಈ ವೇಳೆ ಶ್ರೀಕಾಂತ ಬಿಜಾಪೂರ, ಪೀರು ಕೆರೂರ ಸೇರಿದಂತೆ ಕರವೇ ಪದಾಧಿಕಾರಿಗಳು ಗ್ರಾಮದ ಪಾಲಕರು ಇದ್ದರು.

Read More

ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯದಲ್ಲಿ ನ್ಯಾಯವಾದಿಗಳ ಸಂಘದ ವತಿಯಿಂದ ಹೊಸ ವರ್ಷದ ದಿನಾಚರಣೆಯನ್ನು ಆಚರಿಸಲಾಯಿತು.ಈ ವೇಳೆ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಲಕ್ಷ್ಮೀ ನಿಂಗಪ್ಪ ಗರಗ ಮಾತನಾಡಿ, ಪ್ರಕರಣಗಳನ್ನು ಇತ್ಯರ್ಥಗೊಳಿಸುವಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಕೂಡ ನ್ಯಾಯವಾದಿಗಳು ಸಹಕಾರ ನೀಡುವಂತೆ ಮನವಿ ಮಾಡುತ್ತಾ ಕೋವಿಡ್ ಮಹಾಮಾರಿ ಮತ್ತೆ ಹರಡುತ್ತಿದ್ದು ಮುಂಜಾಗೃತೆ ಕ್ರಮಗಳನ್ನು ಪಾಲಿಸುವಂತೆ ಸಲಹೆ ನೀಡಿದರು.ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮಾತನಾಡಿ, ಸಂಘದ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವೃತ್ತಿ ಜೀವನದಲ್ಲಿ ಒಳ್ಳೆಯ ಹೆಸರನ್ನು ಪಡೆದುಕೊಳ್ಳುವಂತೆ ಕಿವಿ ಮಾತು ಹೇಳಿದರು.ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ, ಸರ್ಕಾರಿ ವಕೀಲ ಬಸವರಾಜ ಆಹೇರಿ, ನ್ಯಾಯವಾದಿಗಳಾದ ಸಂಗಮೆಶ ಹೂಗಾರ, ಎಂ.ಎಚ್.ಕ್ವಾರಿ, ಎಂ.ಎಸ್.ಅಮಲ್ಯಾಳ, ಎನ್.ಆರ್.ಮೊಕಾಶಿ, ಸಿದ್ದನಗೌಡ ಬಿರಾದಾರ ಮಾತನಾಡಿ ಶುಭಾಶಯಗಳನ್ನ ತಿಳಿಸಿದರು. ಎಜಿಪಿ ಎಚ್.ಎಲ್.ಸರೂರ, ಸಂಘದ ಉಪಾಧ್ಯಕ್ಷ ಎಚ್.ಜಿ.ನಾಗೋಡ ವೇದಿಕೆಯಲ್ಲಿದ್ದರು.ಹಿರಿಯ ನ್ಯಾಯವಾದಿಗಳಾದ ಸಿ.ಆರ್.ಜೋಶಿ, ಎಂ.ಎ.ಮುದ್ದೇಬಿಹಾಳ, ಜೆ.ಎ.ಚಿನಿವಾರ, ಎಸ್.ಆರ್.ಸಜ್ಜನ, ಎನ್.ಜಿ.ಕುಲಕರ್ಣಿ ನ್ಯಾಯವಾದಿಗಳಾದ ಬಿ.ಎ.ಚಿನಿವಾರ, ಎಸ್.ಎಂ.ಕಿಣಗಿ, ಪಿ.ಎ.ಹಿರೇಮಠ, ಎಲ್.ಎಸ್.ಮೇಟಿ, ಎಸ್.ಬಿ.ಬಾಚಿಹಾಳ, ಎನ್.ಬಿ.ಮುದ್ನಾಳ, ಚೇತನ ಶಿವಶಿಂಪಿ,…

Read More

ಸಿಂದಗಿ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕು ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು, ವಿಸ್ತೀರ್ಣದಲ್ಲಿಯೂ ದೊಡ್ಡದಾಗಿದೆ. ಸಿಂದಗಿಯು ಭೌಗೋಳಿಕವಾಗಿ ಕೇಂದ್ರಸ್ಥಾನದಲ್ಲಿದ್ದು, ಸುತ್ತ ಮುತ್ತಲಿನ ಕಲಬುರುಗಿ, ಯಾದಗೀರಿ, ರಾಯಚೂರ, ವಿಜಯಪೂರ ಜಿಲ್ಲೆಗಳ ಹೆಚ್ಚಿನ ಸಂಪರ್ಕ ಹೊಂದಿದೆ. ಮತ್ತು ಕಂದಾಯ ಇಲಾಖೆಯಲ್ಲಿ ಅತೀ ಹೆಚ್ಚಿನ ಆದಾಯವನ್ನು ಸಿಂದಗಿ ತಾಲೂಕಿನಿಂದ ಸಂಗ್ರಹವಾಗುತ್ತಿದ್ದು ಜಿಲ್ಲಾ ಕೇಂದ್ರವಾಗಲು ಯೋಗ್ಯವಾಗಿದೆ ಎಂದು ಆದಿಜಾಂಬವ ಜನಸಂಘದ ಉತ್ತರ ಕರ್ನಾಟಕ ವಲಯ ಅಧ್ಯಕ್ಷ ಸಾಯಬಣ್ಣ ದೇವರಮನಿ ಹೇಳಿದರು.ರಾಷ್ಟ್ರೀಯ ಹೆದ್ದಾರಿ-೫೦ ಸಿಂದಗಿ ನಗರದೊಂದಿಗೆ ಸಂಪರ್ಕ ಬೆಸೆದಿದ್ದು, ಸಾರಿಗೆ ಸಂಪರ್ಕಕ್ಕೆ ಉತ್ತಮ ನಿದರ್ಶನವಾಗಿದೆ. ಬರುವ ದಿನಗಳಲ್ಲಿ ನೂತನ ರೇಲ್ವೇ ಮಾರ್ಗ ಸೃಷ್ಟಿಯಾಗುವ ಲಕ್ಷಣಗಳಿದ್ದು, ಪೂರ್ವ ದಿಕ್ಕಿನಲ್ಲಿ ಕಲಬುರಗಿ ಹಾಗೂ ಪಶ್ಚಿಮದಲ್ಲಿ ವಿಜಯಪೂರ ಜಿಲ್ಲೆಯಲ್ಲಿ ವಿಮಾನ ನಿಲ್ದಾಣಗಳಿದ್ದು, ರಾಜ್ಯದ ರಾಜಧಾನಿ ಸಂಪರ್ಕಿಸಲು ಸಮಯದ ಉಳಿತಾಯವಾಗುವುದು. ಮತ್ತು ಉತ್ತಮ ಕೈಗಾರೀಕರಣ ವಲಯವಾಗಿ ಪರಿವರ್ತಿಸಲು ಕೇಂದ್ರ ಸ್ಥಾನದಲ್ಲಿದೆ. ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಹೆಬ್ಬಾಗಿಲು ಆಗಿ ಬೌಗೋಳಿಕವಾಗಿ ಎರಡು ವಲಯಗಳನ್ನು ಸಂಪರ್ಕಿಸಿ ಸಾಂಸ್ಕೃತಿಕ ಪ್ರತಿಬಿಂಬವಾಗಿದೆ. ಸುತ್ತ-ಮುತ್ತಲಿನ ಎಲ್ಲಾ ತಾಲೂಕಗಳಿಗೆ…

Read More

ಸಿಂದಗಿ: ಪಟ್ಟಣದಲ್ಲಿನ ಕುಡಿಯುವ ನೀರಿನ ಬವಣೆ ನೀಗಿಸಲು ಅಮೃತ-೨ ಯೋಜನೆಯ ಮೂಲಕ ಪ್ರತಿ ಮನೆ ಮನೆಗಳಿಗೆ ನೀರಿನ ಸರಬರಾಜು ಮಾಡಲು ಸುಮಾರು ೯೬ ಕೋಟಿ ಅನುದಾನದಲ್ಲಿ ಕಾಮಗಾರಿ ಕೂಡಲೆ ಪ್ರಾರಂಭ ಮಾಡಲಾಗುವುದು. ಪ್ರಸ್ತುತ ಕಾಮಗಾರಿಗೆ ಮೊದಲ ಹಂತದಲ್ಲಿರೂ ೪೦ ಕೊಟಿ ಬಿಡುಗಡೆಗೊಂಡಿದ್ದು ಕಾಮಗಾರಿಯ ಟೆಂಡರ್ ಪ್ರಕ್ರಿಯೆಯಲ್ಲಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಅವರು ಪುರಸಭೆ ಕಾರ್ಯಾಲಯ ಸಿಂದಗಿ ಆಯೋಜಿಸಿರುವ ೨೦೨೩-೨೪ ನೇ ಸಾಲಿನ ಪುರಸಭೆಯ ನಿಧಿಯಲ್ಲಿ ಮನಗೂಳಿ ಅವರ ಮನೆಯಿಂದ ಶ್ರೀ ಸೋಮಲಿಂಗೇಶ್ವರ ಚೌಕದವರೆಗೆ ೩೦ ಲಕ್ಷರೂ ಗಳಲ್ಲಿನ ಸಿಸಿ ರಸ್ತೆ, ವಿಜಯಪುರದ ಮುಖ್ಯರಸ್ತೆಯಿಂದ ಶ್ರೀ ಸೋಮಲಿಂಗೇಶ್ವರ ಚೌಕದವರೆಗೆ ೧೫ ಲಕ್ಷರೂಗಳಲ್ಲಿ ಬೀದಿ ದ್ವೀಪ ಅಳವಡಿಕೆ, ಆಲಮೇಲ ಸರ್ ಮನೆಯಿಂದ ಆಶೀರ್ವಾದ ಕಲ್ಯಾಣ ಮಂಟಪದಿಂದ ಬಿರಾದಾರ ಸರ್ ಮನೆಯವರೆಗೆ ೧೫ ಲಕ್ಷ ರೂಗಳಲ್ಲಿ ಬೀದಿ ದೀಪ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಪಟ್ಟಣದ ಜನತೆಗೆ ಪ್ರಸ್ತುತ ಸುಮಾರು ೬-೭ ದಿನಕ್ಕೊಮ್ಮೆ ಕುಡಿಯುವ ನೀರು ಸರಬರಾಜ ಆಗುತ್ತಿದೆ. ಇದನ್ನು ತಪ್ಪಿಸಲು…

Read More

ಸಿಂದಗಿ: ಪೂಜ್ಯ ಸಿದ್ದೇಶ್ವರ ಶ್ರೀಗಳು ಜೀವಂತ ದೇವರಿಗೆ ಹೋಲಿಸಬಹುದಾದ ಮಾನವರಲ್ಲಿ ಒಬ್ಬರು. ಅವರ ಗುಣಗಳನ್ನು ವಿವರಿಸುವಲ್ಲಿ ಪದಗಳು ಕಡಿಮೆಯಾಗಬಹುದು ಅವರದೊಂದು ಸ್ವಚ್ಚ, ಅರ್ಥಪೂರ್ಣ ಬದುಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಸಿದ್ದಲಿಂಗ ಚೌಧರಿ ಹೇಳಿದರು.ಅವರು ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅವ್ವಾ ಫೌಂಡೇಶನ್ ವತಿಯಿಂದ ಮಂಗಳವಾರ ಹಮ್ಮಿಕೊಂಡ ಶ್ರೀ ಸಿದ್ದೇಶ್ವರ ಶ್ರೀಗಳ ನುಡಿ ನಮನ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ ಮಾತನಾಡಿದರು.ಸಮಾಜ ತಿದ್ದುವ ಸ್ವಾಮಿಗಳು ಹೇಗಿರಬೇಕು ಎನ್ನುವದಕ್ಕೆ ಉತ್ತಮ ಉದಾರಣೆ ಶ್ರೀಗಳು. ತಮ್ಮ ಪ್ರವಚನಗಳ ಮೂಲಕವೇ ಜಗತ್ತಿಗೆ ಜ್ಞಾನದ ಬೆಳಕನ್ನು ನೀಡಿ ಲಕ್ಷಾಂತರ ಜನರಿಗೆ ಆದರ್ಶರಾದವರು. ಅವರು ಹುಟ್ಟಿ ಬೆಳೆದ ವಿಜಯಪುರ ಜಿಲ್ಲೆಯಲ್ಲಿ ನಾವೆಲ್ಲ ಇದ್ದೇವೆ ಎನ್ನುವುದೆ ನಮ್ಮೆಲ್ಲರ ಸೌಭಾಗ್ಯ ಎಂದರು.   ಈ ವೇಳೆ ಶ್ರೀ ಪದ್ಮರಾಜ ಮಹಾವಿದ್ಯಾಲಯದ ಉಪನ್ಯಾಸಕ ಡಾ.ಶರಣಬಸವ ಜೋಗೂರ ಮಾತನಾಡಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಜೆ.ಸಿ.ನಂದಿಕೋಲ ಅವರು ಉಪಸ್ಥಿತರಿದ್ದರು.ಉಪನ್ಯಾಸಕರಾದ ಸುಧಾಕರ ಚವ್ಹಾಣ, ಪಿ.ಸಿ.ಕುಲಕರ್ಣಿ, ಆರ್.ಎ.ಹಾಲಕೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.ಈ ವೇಳೆ ಅವ್ವಾ ಫೌಂಡೇಶನ್ ಸಂಚಾಲಕ ಸಿದ್ದಲಿಂಗ…

Read More

ಸಿಂದಗಿ: ಪದವಿ ಶಿಕ್ಷಣ ಬದುಕನ್ನು ನಿರ್ಮಾಣ ಮಾಡುತ್ತದೆ ಆದರೆ ಅಕ್ಷರದ ಜ್ಞಾನವಿಲ್ಲದಿದ್ದರೆ ಬದುಕೆ ನಿರ್ನಾಮವಾಗುತ್ತದೆ ಎಂದು ವಿಜಯಪುರ ಅಕ್ಕ ಮಹಾದೇವಿ ವಿವಿಯ ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ವಿಷ್ಣು ಎಂ. ಶಿಂಧೆ ಹೇಳಿದರು.ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾ ಭವನದಲ್ಲಿ ಪ್ರಸಕ್ತ ಸಾಲಿನ ಪಠ್ಯಪೂರಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವೆಂದರೆ ಕೇವಲ ಓದು-ಬರಹವಲ್ಲ. ಶಿಕ್ಷಣವೆಂದರೆ ಬದುಕು ನಿರ್ಮಿಸಬಲ್ಲ ಅಸ್ತ್ರವಾಗಿದೆ. ಇಂದು ಯುವಕರು ಮಾದಕ ವಸ್ತುಗಳ ದಾಸರಾಗುತ್ತ ದಾರಿ ತಪ್ಪುತ್ತಿದ್ದಾರೆ. ಪಾಲಕರು ಕೇವಲ ಶಿಕ್ಷಣ ಸಂಸ್ಥೆಯೆಡೆಗೆ ಬೆರಳು ಮಾಡಿ ತೊರಿಸದೇ ಗ್ರಾಮೀಣ ಬಾಗದಲ್ಲಿ ಇಂತಹ ದಾರಿ ತಪ್ಪುತ್ತಿರುವ ಯುವಕರನ್ನು ಒಂದೆಡೆಗೆ ಸೇರಿಸಿ ಜೀವನದ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವದಲ್ಲದೇ ಮಾರ್ಗದರ್ಶನ ನೀಡಬೇಕು. ಇದರಿಂದ ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಅಂದ ಅವರು, ಇಂದು ಹೆಣ್ಣು ಹುಟ್ಟಿದರೆ ಹುಣ್ಣು ಹುಟ್ಟಿತು ಎನ್ನುವ ಭಾವನೆಯಲ್ಲಿರುವ ನಾವುಗಳು ತಾರತಮ್ಯ ತೊರದೇ ಸರಿಸಮಾನವಾದ ಶಿಕ್ಷಣ ನೀಡುವ ಮೂಲಕ ಸಂಸ್ಕಾರ ಬೆಳೆಸಬೇಕು…

Read More