Author: editor.udayarashmi@gmail.com

ಕೊಲ್ಹಾರ: ಮುಳಗಡೆಯ ಪ್ರದೇಶ ಪುನರ್ವಸತಿ ಕೇಂದ್ರವಾದ ಕೊಲ್ಹಾರ ಪಟ್ಟಣದ ಹಲವಾರು ಜ್ವಲಂತ ಸಮಸ್ಯೆಗಳ ಕುರಿತು ಸಚಿವ ಶಿವಾನಂದ ಎಸ್. ಪಾಟೀಲ ಅವರಿಗೆ ವಿಜಯಪುರದ ಪ್ರವಾಸಿ ಮಂದಿರದಲ್ಲಿ ಕೊಲ್ಹಾರ ತಾಲೂಕು ಹೋರಾಟ ಸಮೀತಿ ಅಧ್ಯಕ್ಷ ಈರಣಗೌಡ ಬ ಕೋಮಾರ ಮಂಗಳವಾರ ಮನವಿ ಸಲ್ಲಿಸಿದರು.ಪುನರ್ವಸತಿ ಕೇಂದ್ರದಲ್ಲಿ ಸರಕಾರಿ ಜಾಗವನ್ನು ಅನಧೀಕೃತವಾಗಿ ಬಳಸುತ್ತಿರುವ ವ್ಯಕ್ತಿಗಳಿಂದ, ಸಂಸ್ಥೆಗಳಿಂದ ಮರಳಿ ಸರಕಾರಕ್ಕೆ ವಶಪಡಿಸಿಕೊಂಡು ತಾಲೂಕಾ ಆಡಳಿತದ ಸರಕಾರಿ ಕಚೇರಿಗಳ ಕಟ್ಟಡ ನಿರ್ಮಿಸಲು ತ್ವರಿತವಾಗಿ ತನಿಖೆ ಪೂರ್ಣಗೊಳಿಸಿ ತೆರವುಗೊಳಿಸಲು ಆದೇಶ ಹೊರಡಿಸಬೇಕು. ಕೊಲ್ಹಾರ ಪಟ್ಟಣಕ್ಕೆ ಮುಳಗಡೆಯ ಪರಿಹಾರ ಹಣದಲ್ಲಿ ಆಗಿರುವ ತಾರತಮ್ಯವನ್ನು ಸರಿಪಡಿಸಬೇಕು. ತಾಲೂಕು ಕೇಂದ್ರಕ್ಕೆ ಇನ್ನು ಬರಬೇಕಾದ ಸರಕಾರಿ ಕಚೇರಿಗಳನ್ನು ತ್ವರಿತವಾಗಿ ಮಂಜೂರು ಮಾಡಿಸಬೇಕು. ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯಲಯ ಹಾಗೂ ರೈತರು ಬೆಳೆಯುವ ಈ ಭಾಗದ ಪ್ರಮುಖ ಬೆಳೆಯಾದ ಉಳ್ಳಾಗಡ್ಡಿಗೆ ಸರಕಾರಿ ಶಿಥಲೀಕರಣ ಘಟಕ ನಿರ್ಮಾಣ ಮಾಡಿ ಈರುಳ್ಳಿ ಬೆಳೆಗೆ ಯೋಗ್ಯ ದರ ಸಿಗಬೇಕು. ಮುಳವಾಡ ಕೈಗಾರಿಕಾ ವಸಹಾತು ಪ್ರದೇಶದಲ್ಲಿ ನಿರುದ್ಯೋಗ ಯುವಕರಿಗೆ ಉದ್ಯೋಗ ಸಿಗುವಂತಾಗಲು ಜವಳಿ…

Read More

ವಿಜಯಪುರ: ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾವರ್ಧಕ ಸಂಘದ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ ಜ.2 ರಂದು ಶತಮಾನದ ಸಂತ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮಿಗಳ ಗುರುನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ನಮನ ಸಲ್ಲಿಸಿ ಮಾತನಾಡಿದ ಬನ್ಸಿಲಾಲ ದರಬಾರ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಎಚ್ ಮಣ್ಣೂರ, ಪ್ರತಿ ಘಳಿಗೆ, ಪ್ರತಿದಿನವೂ ಪ್ರಕೃತಿಯ ನವ ಚೈತನ್ಯದಂತೆ ಬದುಕಿ ಭಕ್ತರ ಹೃದಯದಲ್ಲಿ ಶಾಶ್ವತ ನೆಲೆಯೂರಿ ಜ್ಞಾನದಾಸೋಹ ಹಂಚಿ ಸಮಾಜದಲ್ಲಿ ಎಲ್ಲರೂ ಪ್ರತಿ ಪ್ರೇಮ, ಸಹೋದರತೆ ಹಾಗೂ ಸೌಹಾರ್ದತೆಯಿಂದ ಹೇಗೆ ಬಾಳಬೇಕು ಎಂಬುದನ್ನು ಕಲಿಸಿಕೊಟ್ಟು ತಾವೂ ಅದರಂತೆ ಬದುಕಿ ಮಾದರಿಯಾದ ದಾರ್ಶನಿಕ, ಸಂತ ಶರಣರ, ವಿವೇಕಾನಂದರ ಆದರ್ಶಗಳನ್ನು ಯುವಜನಾಂಗಕ್ಕೆ ಅಮೂಲ್ಯವಾದ ಸಂದೇಶವನ್ನು ಸಾರಿದ ನಿಜ ಸಂತ ಅವರಾಗಿದ್ದರು ಎಂದು ತಿಳಿಸಿದರು.ವೇದಿಕೆಯ ಮೇಲೆ ಮುಖ್ಯೋಪಾಧ್ಯಾಯ ರಮೇಶ ಕೋಟ್ಯಾಳ ಉಪಸ್ಥಿತರಿದ್ದರುವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬಿಳಿ ಸಮವಸ್ತ್ರ ಧರಿಸಿ ಸಾಲಾಗಿ ಶಿಸ್ತಿನಿಂದ ಪುಷ್ಪ ಸಮರ್ಪಣೆ ಸಲ್ಲಿಸಿದರು.

Read More

ವಿಜಯಪುರ: ವಿಜಯಪುರ ಮೀಸಲು ಕ್ಷೇತ್ರದಲ್ಲಿ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಬಂಜಾರಾ ಸಮಾಜಕ್ಕೆ ಟಿಕೆಟ್ ನೀಡಬೇಕೆಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಅರ್ಜುನ ರಾಠೋಡ ವಿಜಯಪುರ ಮೀಸಲು ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.ಸೋಮವಾರ ನಗರದ ಬಿ.ಎಲ್.ಡಿ.ಇ ಅತಿಥಿಗೃಹದಲ್ಲಿ ಮುಖ್ಯಮಂತ್ರಿಗಳಿಗೆ ಬಂಜಾರಾ ಸಮುದಾಯದ ಶಾಲನ್ನು ಹೋದಿಸಿ, ಸನ್ಮಾನಿಸಿ, ಮನವಿ ಸಲ್ಲಿಸಿದ ಅವರು, ನಾನು 25 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿದ್ದೇನೆ. ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಪ್ರಾಮಾಣಿಕವಾಗಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಅಲ್ಲದೇ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಳಮೀಸಲಾತಿಯ ವಿರುದ್ಧ ಮೊದಲ ಬಾರಿ ನಾನು ಧ್ವನಿ ಎತ್ತಿ, ಇಡೀ ರಾಜ್ಯಾದ್ಯಾಂತ ಬಂಜಾರಾ ಸಮಾಜಕ್ಕೆ ಜಾಗೃತಿ ಮೂಡಿಸಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಶ್ರಮ ವಹಿಸಿದ್ದೇನೆ. ಈ ಕಾರ್ಯಕ್ಕಾಗಿ ರಾಜ್ಯಾಧ್ಯಕ್ಷರು, ಶಾಸಕರು, ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಶಾಸಕರಾದ ಅಪ್ಪಾಜಿ ನಾಡಗೌಡ, ಯಶವಂತರಾಯಗೌಡ…

Read More

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ ೨ರಂದು ವಿಜಯಪುರ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಜ.೨ ರಂದು ಬೆಳಗ್ಗೆ ೧೦ ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ ೧೦.೫೦ಕ್ಕೆ ಕೊಪ್ಪಳದ ಗಿಣಿಗೆರ ಏರ್‌ಸ್ಟ್ರಿಪ್‌ಗೆ ಆಗಮಿಸಿ, ಗಿಣಿಗೆರ ಏರ್‌ಸ್ಟ್ರಿಪ್‌ನಿಂದ ಹೊರಟು ಬೆಳಗ್ಗೆ ೧೧.೪೦ ಕ್ಕೆ ಬಿಎಲ್‌ಡಿಈ ವಿದ್ಯಾಸಂಸ್ಥೆಯ ಹೆಲಿಪ್ಯಾಡ್‌ಗೆ ಆಗಮಿಸಿ ಜ್ಞಾನಯೋಗಾಶ್ರಮದಲ್ಲಿ ನಡೆಯುವ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಗುರುನಮನ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.ನಂತರ ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ ೦೨.೩೦ಕ್ಕೆ ವಿಜಯಪುರದಿಂದ ರಸ್ತೆ ಮೂಲಕ ಹೊರಟು ವಿಜಯಪುರ ತಾಲೂಕಿನ ದ್ಯಾಬೇರಿ (ದೇವಿಪೂರ) ಶ್ರೀ ವಾಗ್ದೇವಿ ಸೇವಾ ಸಮಿತಿ ದ್ಯಾಬೇರಿ ಇವರ ವತಿಯಿಂದ ಆಯೋಜಿಸಿರುವ ಶ್ರೀ ವಾಗ್ದೇವಿ ದೇವಸ್ಥಾನದ ನೂತನ ಕಟ್ಟಡ ಉದ್ಘಾಟನೆ, ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಮಧ್ಯಾಹ್ನ ೦೩.೩೦ಕ್ಕೆ ದ್ಯಾಬೇರಿಯಿಂದ ಹೊರಟು ೦೪.೦೦ ಗಂಟೆಗೆ ಬಿಎಲ್‌ಡಿಈ ವಿದ್ಯಾಸಂಸ್ಥೆಯ ಹೆಲಿಪ್ಯಾಡ್‌ನಿಂದ ಬೆಂಗಳೂರಿಗೆ ಮರು ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಸಿಎಂ ಸಿದ್ದರಾಮಯ್ಯ ಮಾಹಿತಿ | 48 ಲಕ್ಷ ಹೆಕ್ಟೇರ್ ಪ್ರದೇಶ | ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆ ಬೆಂಗಳೂರು: ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35 ಸಾವಿರ ಕೋಟಿ ರೂಪಾಯಿ ಬೆಳೆ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣದಲ್ಲಿ ಸರ್ಕಾರದ ಕಾರ್ಯದರ್ಶಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿ, ಮಾತನಾಡಿದ ಸಿಎಂ, ಪ್ರಕೃತಿ ಸಹಾಯವಿಲ್ಲದಿದ್ದರೆ, ಸರ್ಕಾರ ಏನು ಪರಿಹಾರ ಕೊಟ್ಟರು ಸಾಕಾಗುವುದಿಲ್ಲ. ಹವಾಮಾನ ಬದಲಾವಣೆಯಿಂದಾಗಿ ಈ ವೈಪರೀತ್ಯ ಕಾಣುತ್ತಿದ್ದೇವೆ. ಮುಂಗಾರಿನಲ್ಲಿ ಒಳ್ಳೆ ಮಳೆಯಾಗುವ ನಿರೀಕ್ಷೆ ಇದೆ. 2024 ರಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.ಅಭಿವೃದ್ಧಿ ನಿರೀಕ್ಷಿತ ಫಲ ಕಾಣಲು ಸಮೃದ್ಧಿಯಾಗಿ ಮಳೆಯಾಗಲಿ. ಶೇ. 60ಕ್ಕೂ ಹೆಚ್ಚು ಜನ ವ್ಯವಸಾಯದ ಮೇಲೆ ಅವಲಂಬಿತರಾಗಿದ್ದಾರೆ. ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆಯಾಗಿದೆ. ಬಡವರ ಕುಟುಂಬಕ್ಕೆ ಹಣ ದೊರೆಯುತ್ತಿದ್ದು, ಕೊಳ್ಳುವ ಶಕ್ತಿ ಇದೆ. ಬರಗಾಲವಿದ್ದರೂ ಸ್ವಲ್ಪ ಮಟ್ಟಿಗೆ ಅದರ ತೀವ್ರತೆ…

Read More

ಬಸವನ ಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತದಿಂದ ಸೋಮವಾರ ಅಮರಶಿಲ್ಪಿ ಜಕಣಾಚಾರಿಯ ಜಯಂತಿಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ನಿವೃತ್ತ ಉಪನ್ಯಾಸಕ ಕೆ.ಬಿ.ಕಡೆಮನಿ ಅವರು ಅಮರಶಿಲ್ಪಿ ಜಕಣಾಚಾರಿ ಕುರಿತು ಮಾತನಾಡಿ ವಿಶ್ವಕರ್ಮರ ಕೊಡುಗೆ ಕುರಿತು ಹೇಳಿದರು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಭವಾನಿ ಪಾಟೀಲ, ಖಜಾನೆ ಇಲಾಖೆಯ ಅಧಿಕಾರಿ ಮನೋಜ ಪಾಟೀಲ,ಬಿಇಓ ವಸಂತ ರಾಠೋಡ, ಸಿಡಿಪಿಓ ನಿರ್ಮಲಾ ಸುರಪೂರ, ಶಿರಸ್ತೇದಾರ ಬಿ.ಆರ್‌.ಪೋಲಚ, ತಹಸೀಲ್ದಾರ ಕಚೇರಿಯ ಸಿಬ್ಬಂದಿಗಳಾದ ಮಂಜು ಹಳ್ಳೂರ, ಎ.ಟಿ.ಪಾಟೀಲ, ಕೆ.ವೈ. ಯಂಡ್ರಾಮಿ, ಇಬ್ರಾಹಿಂಪೂರ, ಎಸ್.ಎ.ತಳವಾರ, ಕಾಂಚನಾ ಸಂದಿಮನಿ, ವಿಶ್ವಕರ್ಮ ಸಮಾಜದ ಮುಖಂಡ ಮುತ್ತು ಪತ್ತಾರ ಇತರರು ಇದ್ದರು.

Read More

ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಗುರುನಮನ ಮಹೋತ್ಸವ ವಿಜಯಪುರ: ಪೂಜ್ಯ ಸಿದ್ಧೇಶ್ವರ ಅಪ್ಪನವರಂತಹ ಗುರು ಮತ್ತೊಬ್ಬರು ಸಿಗಲು ಸಾಧ್ಯವಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಭಾವುಕ ನುಡಿಗಳನ್ನಾಡಿದರು.ನಗರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ ಪರಮಪೂಜ್ಯ ಸಿದ್ದೇಶ್ವರ ಮಹಾಸ್ವಾಮಿಗಳವರ ಗುರುನಮನ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶ್ರೀ ಸಿದ್ಧೇಶ್ವರ ಅಪ್ಪನವರನ್ನು ಪ್ರತಿನಿತ್ಯ ಅತ್ಯಂತ ಸಮೀಪದಿಂದ ದಿನನಿತ್ಯ ನೋಡಿ ಕಣ್ಣು ತುಂಬಿಕೊಂಡ ನಾವೇ ಪುಣ್ಯರು. ತಮ್ಮ ವ್ಯಕ್ತಿತ್ವದಿಂದಲೇ ಅವರು ಜಗತ್ಪ್ರಸಿದ್ಧಿ ಗಳಿಸಿದ್ದರು. ಏನನ್ನು ಭಯಸದೆ ಸದಾ ಸಮಾಜಕ್ಕೆ ನೀಡಿದಂತವರು. ಅವರನ್ನು ಕಳೆದುಕೊಂಡು ನಾವು ಬಡವರಾಗಿದ್ದೇವೆ ಎಂದು ಸಿದ್ಧೇಶ್ವರ ಸ್ವಾಮೀಜಿಯವರನ್ನು ನೆನೆದು ಕಣ್ಣೀರಿಟ್ಟರು.ಇದೇ ಸಂದರ್ಭದಲ್ಲಿ ಮೈಸೂರಿನ ಖ್ಯಾತ ಸಾಹಿತಿ ಕೆ.ಸಿ.ಶಿವಪ್ಪ ಮಾತನಾಡಿ, ಸಮಯ ಪಾಲನೆ, ಶಿಸ್ತು, ಪರಿಸರ ರಕ್ಷಣೆ ಬಗ್ಗೆ ಇರುವ ಕಾಳಜಿ, ಹಸಿರನ್ನು ಬೆಳೆಸುವ ಚಿಂತನೆಗಳನ್ನು ಎಲ್ಲರೂ ಸಿದ್ದೇಶ್ವರ ಅಪ್ಪನವರನ್ನು ನೋಡಿ ಕಲಿಯಬೇಕು. ಒಬ್ಬ ಸಂತನಾಗಿ ಯಾರೂ ಮಾಡದಂತಹ ಅಮೋಘ ಕೆಲಸವನ್ನು ಶ್ರೀ ಸಿದ್ಧೇಶ್ವರ ಶ್ರೀಗಳು ಮಾಡಿದ್ದಾರೆ. ಇಡೀ ಜಗತ್ತಿಗೆ ಜ್ಞಾನದಾಸೋಹ ಮಾಡಿದ್ದಾರೆ ಎಂದರು.ಸೇಡಂ ನ…

Read More

ವಂದಾಲದಲ್ಲಿ ಗುರುವಂದನ ಕಾರ್ಯಕ್ರಮ | ಗುರುಗಳ ಪಾದಪೂಜೆ ಮಾಡಿ ಸನ್ಮಾನಿಸಿದ ಶಿಷ್ಯರು ಆಲಮಟ್ಟಿ: ೨೭ ವರ್ಷಗಳ ನಂತರ ಸ್ನೇಹಿತರೆಲ್ಲಾ ಸೇರಿ, ಗುರುವಂದನೆ ಕಾರ್ಯಕ್ರಮ ಏರ್ಪಡಿಸಿದ್ದು, ಭಾರತದಲ್ಲಿ ಮೊದಲಿನಿಂದಲೂ ಬಂದ ಗುರುಪರಂಪರೆಯನ್ನು ಮುಂದುವರೆಸಿದ್ದೀರಿ ಎಂದು ನಿವೃತ್ತ ಶಿಕ್ಷಕ ಎಸ್.ಎಸ್. ಭಾವಿಕಟ್ಟಿ ಅಭಿಪ್ರಾಯಪಟ್ಟರು.ಸಮೀಪದ ವಂದಾಲ ಗ್ರಾಮದ ಶಾಕಂಬರಿ ಪ್ರೌಡಶಾಲಾ ಆವರಣದಲ್ಲಿ ಏರ್ಪಡಿಸಿದ್ದ ೧೯೯೨-೯೩ ನೇ ಸಾಲಿನ ಅಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭ ನೇ ವರ್ಗ ಹಾಗೂ ೧೯೯೫-೯೬ ನೇ ಸಾಲಿನಲ್ಲಿ ಶಾಕಂಬರಿ ಪ್ರೌಡಶಾಲೆಯಲ್ಲಿ ೧೦ ನೇ ವರ್ಗ ಪಾಸಾದ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಗುರುವಿನ ಕೈಯಲ್ಲಿ ಕಲಿತಂತ ಮಕ್ಕಳು ಬದುಕಿನಲ್ಲಿ ಅಧಿಕಾರಿ, ನೌಕರ, ಉದ್ಯಮಿ, ಕೂಲಿ ಕಾರ್ಮಿಕ ಏನಾದರೂ ಆಗಿರಲಿ. ಆದರೆ ಮಾನವೀಯ ಮೌಲ್ಯವನ್ನೇ ಮರೆತು ಏನೇ ಸಾಧಿಸಿದರೂ ಅದು ವ್ಯರ್ಥ್ಯ ಎಂದರು.ಸಾಹಿತಿ ಅಶೋಕ ಹಂಚಲಿ, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಪ್ರಮೋದ ಕುಲಕರ್ಣಿ, ನಿವೃತ್ತ ಶಿಕ್ಷಕರಾದ ಬಿ.ಎನ್. ವಂದಾಲ, ಎಂ.ವಿ. ಪಾಟೀಲ, ಎಚ್.ಸಿ. ಭಜಂತ್ರಿ,…

Read More

ಬಸವನಬಾಗೇವಾಡಿ: ಪಟ್ಟಣದ ಕೂಡಲಸಂಗಮ ಅಭಿವೃದ್ಧಿ ಮಂಡಳಿ ಅಡಿಯಲ್ಲಿನ ಬಸವೇಶ್ವರ ದೇವಾಲಯ ಅಂತರಾಷ್ಟ್ರೀಯ ಶಾಲೆಯಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಆಹಾರ ಮೇಳದಲ್ಲಿ ಮಕ್ಕಳು ತಮ್ಮ ಮನೆಯಲ್ಲಿ ತಯಾರಿಸಿಕೊಂಡು ಬಂದಿದ್ದ ಬಗೆ ಬಗೆಯ ತಿನಿಸುಗಳ ಮಾರಾಟದಲ್ಲಿ ಉತ್ಸಾಹದಿಂದ ತಲ್ಲೀನರಾಗಿರುವುದು ಕಂಡು ಬಂದಿತು.ಮಕ್ಕಳ ಪಾಲಕರು ತಮ್ಮ ನೆರೆಹೊರೆಯವರೊಂದಿಗೆ ತಂಡೋಪತಂಡವಾಗಿ ಆಗಮಿಸಿ ವಿವಿಧ ತಿಂಡಿಗಳನ್ನು ಖರೀದಿಸಿ ಸವಿಯುವ ಮೂಲಕ ಮಕ್ಕಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು.ಸೋಮವಾರ ನಡೆದ ಆಹಾರಮೇಳ ಮನಸೂರೆಗೊಂಡಿತು.ವಿಶಾಲವಾದ ಶಾಲಾ ಆವರಣದಲ್ಲಿ ತಾತ್ಕಾಲಿಕ 20 ಮಳಿಗೆಗಳಲ್ಲಿ ವಿದ್ಯಾರ್ಥಿಗಳು ಮನೆಯಲ್ಲಿ ತಯಾರಿಸಿದ 50ಕ್ಕೂ ಹೆಚ್ಚು ತಿನಿಸುಗಳನ್ನು ಮಾರಾಟ ಮಾಡಿದರು. ಪಾಪಕರ್ನ್, ಚಾನ್ ಮಸಾಲ, ಚೌಚೌ ಪುರಿ, ಫಾಲುದಾ, ರಾಗಿ ಅಂಬ್ಲಿ, ಮಸಾಲಾ ಸ್ಪೈಸಿ ಚಾಟ್, ಬೇವು, ಸುರಕುಂಬ, ಫ್ರೂಟ್ ಸಲಾಡ್, ಪಾನಿಪುರಿ, ಚನ್ನಾ ಮಸಾಲಾ, ಶ್ಯಾಂಡವಿಚ್ , ಮಸಾಲಾ ಪಾಪಡ್ ಸೇರಿದಂತೆ ವಿವಿಧ ತಿನಿಸು, ಪಾನೀಯಗಳನ್ನು ಸವಿದ ಜನರು ಮಕ್ಕಳ ಉತ್ಸಾಹ, ಅವರು ತಯಾರಿಸಿದ ತಿನಿಸುಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಆಹಾರ ಮೇಳಕ್ಕೆ ಚಾಲನೆ ನೀಡಿದ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಈರಣ್ಣ…

Read More