Author: editor.udayarashmi@gmail.com

ವಿಜಯಪುರ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು (ಕೆ.ಎಸ್.ಡಿ.ಸಿ) ವತಿಯಿಂದ ವಿಶ್ವ ಕೌಶಲ್ಯ ಸ್ವರ್ಧೆಯನ್ನು ಆಯೋಜಿಸಲಾಗತ್ತಿದ್ದು, ಈ ಸ್ಪರ್ಧೆಯಲ್ಲಿ ೫೭ ವಿವಿಧ ಕೌಶಲ್ಯಗಳಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ನೋಂದಣಿ ಪ್ರಕ್ರಿಯೆ ಆರಂಭಿಸಿದೆ.ಈ ಪ್ರಕ್ರಿಯೆಯಲ್ಲಿ ಆಭ್ಯರ್ಥಿಗಳ ಆಯ್ಕೆ ಜಿಲ್ಲೆ, ವಿಭಾಗ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ನಡೆಯುವುದು. ರಾಷ್ಟ್ರ ಮಟ್ಟದಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಕೇಂದ್ರ ಸರಕಾರ ವತಿಯಿಂದ ೨೦೨೪ ರಲ್ಲಿ ಪ್ರಾನ್ಸಿನ ಲಿಯೋನ್‌ನಲ್ಲಿ ನಡೆಯುವ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅಭ್ಯರ್ಥಿಗಳು ಜನವರಿ ೦೭ -೨೦೨೪ ರೊಳಗಾಗಿ www.skillindiadigital.gov.in ವೆಬ್‌ಸೈಟ್‌ನಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ವಿಜಯಪುರ ಕಛೇರಿ ದೂರವಾಣಿ ಸಂಖ್ಯೆ: ೦೮೩೫೨-೨೯೭೦೧೯ ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಅಲೆಮಾರಿ ಹಾಗೂ ಅರೆ ಅಲೆಮಾರಿ ಸಲಹಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ಸೂಕ್ತ ಜಾಗೃತಿ ಹಾಗೂ ಅರಿವು ಮೂಡಿಸಿ ಸಮರ್ಪಕವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲೆಮಾರಿ-ಅರೆ ಅಲೆಮಾರಿ ಜನಾಂಗಕ್ಕೆ ದೊರೆಯುವ ಸೌಲಭ್ಯಗಳನ್ನು ದೊರಕಿಸಿ ಆರ್ಥಿಕ ಸ್ವಾವಲಂಬನೆಗೆ ಅಧಿಕಾರಿಗಳು ಕ್ರಮ ವಹಿಸಬೇಕು. ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೊತ್ಸಾಹ ಧನ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿವೇತನ ಹಾಗೂ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾವಕಾಶ ಸೇರಿದಂತೆ ಜನಾಂಗದ ಆರ್ಥಿಕ ಸಬಲತೆಗೆ ಮೂಲಭೂತ ಸೌಕರ್ಯ ಹಾಗೂ ವಸತಿ ಸೌಲಭ್ಯವನ್ನು ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.೨೦೨೨-೨೦೨೩ನೆ ಸಾಲಿನಲ್ಲಿ ಅಲೆಮಾರಿ, ಅರೆಅಲೆಮಾರಿ…

Read More

ವಿಜಯಪುರ: ಜಿಲ್ಲೆಯ ಗಿಗ್ ಕಾರ್ಮಿಕರಿಗಾಗಿ ಅಪಘಾತ ಪರಿಹಾರ-ವೈದ್ಯಕೀಯ ಸೌಲಭ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿ ನೊಂದಾಯಿಸಿಕೊಂಡು ಸೌಲಭ್ಯ ಪಡೆದುಕೊಳ್ಳುವಂತೆ ಗಿಗ್ ಕಾರ್ಮಿಕರಿಗೆ ವಿಜಯಪುರ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸಂಹಿತೆ ೨೦೨೦ ರಕಲಂ೨(೩೫) ರನ್ವಯ ಕೆಲಸವನ್ನು ನಿರ್ವಹಿಸುವ ಅಥವಾ ಕೆಲಸದ ವ್ಯವಸ್ಥೆಯಲ್ಲಿ ಭಾಗವಹಿಸುವ ಮತ್ತು ಸಾಂಪ್ರದಾಯಿಕ ಉದ್ಯೋಗದಾತ-ಉದ್ಯೋಗಿ ಸಂಬಂಧದ ಹೊರಗಿನ ಚಟುವಟಿಕೆಗಳಿಂದ ಆದಾಯ ಗಳಿಸುವ ವ್ಯಕ್ತಿ ಮತ್ತು ನಿರ್ದಿಷ್ಟ ದರವನ್ನು ಪಾವತಿಸುವ ಒಪ್ಪಂದದ (ಎಲ್ಲಾ ತುಂಡು ದರದ ಕೆಲಸವನ್ನು ಒಳಗೊಂಡಂತೆ) ನಿಯಮಗಳು ಮತ್ತು ಷರತ್ತುಗಳ ಆಧಾರದ ಮೇಲೆ ಕೆಲಸ ಮಾಡುವ ವ್ಯಕ್ತಿಗಳು ಉದಾಹರಣೆಗೆ ಸ್ವಿಗ್ಗಿ, ಜೋಮ್ಯಾಟೋ, ಅಮೇಜಾನ್, ಬಿಗ್ ಬಾಸ್ಕೆಟ್, ಫ್ಲಿಪ್ ಕಾರ್ಟ್ ಸಂಸ್ಥೆಗಳಲ್ಲಿ ಪೂರ್ಣಕಾಲಿಕ-ಅರೆಕಾಲಿಕ ಡೆಲಿವರಿ ನೌಕರರು ನೊಂದಣಿ ಮಾಡಿಕೊಳ್ಳುವುದರಿಂದ ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯ ಫಲಾನುಭವಿಗಳಾಗುತ್ತಾರೆ.ಈ ಫಲಾನುಭವಿಗಳಿಗೆ ಅಪಘಾತ ಮರಣ ಹೊಂದಿದ್ದಲ್ಲಿ ವಿಮಾ ಪರಿಹಾರ ೨ಲಕ್ಷ ರೂ. ಹಾಗೂ ಜೀವ ವಿಮಾ ೨ಲಕ್ಷ ರೂ. ಸೇರಿ ಒಟ್ಟು ೪…

Read More

ವಿಜಯಪುರ: ದಿನಪತ್ರಿಕೆ ವಿತರಕ ಕಾರ್ಮಿಕರಿಗೆ ಜಾರಿ ಮಾಡಿರುವ ಅಪಘಾತ ಪರಿಹಾರ ಹಾಗೂ ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಜಾರಿಗೆ ತಂದಿದು, ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಚಿಸುವ ಪತ್ರಿಕಾ ವಿತರಕರು ಇ-ಶ್ರಮ ನೊಂದಣಿ ಮಾಡಿಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.ಈ ಯೋಜನೆಯಡಿ ಅರ್ಹರಾಗಲು ಪ್ರತ್ಯೇಕ ನೊಂದಣಿ ಅಗತ್ಯವಿರುವುದಿಲ್ಲ. ಇ-ಶ್ರಮನಲ್ಲಿ ನೊಂದಣಿಯಾದ ದಿನಪತ್ರಿಕೆ ವಿತರಕ ಕಾರ್ಮಿಕರಿಗೆ ಅನ್ವಯಿಸುತ್ತದೆ. ಈ ಯೋಜನೆ ಲಾಭ ಪಡೆಯಲು ಇ-ಶ್ರಮ ನೊಂದಣಿ ಕಡ್ಡಾಯವಾಗಿದ್ದು, ಇದುವರೆಗೂ ಇ-ಶ್ರಮನಲ್ಲಿ ನ್ಯೂಸ್ ಪೇಪರ್ ಬಾಯ್ ಎಂದು ನೊಂದಣಿ ಮಾಡದೇ ಇದ್ದರೆ ಕೂಡಲೇ ಇ-ಶ್ರಮ್ ಪೋರ್ಟಲ್‌ನಲ್ಲಿ ನೊಂದಣಿ ಮಾಡಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು. ಅಲ್ಲದೇ ವಿಶೇಷ ಇ-ಶ್ರಮ್ ನೊಂದಣಿ ಕ್ಯಾಂಪ್‌ಗಳನ್ನು ಜಿಲ್ಲಾ ಕೇಂದ್ರ ಸ್ಥಾನದ ಕಾರ್ಮಿಕ ಅಧಿಕಾರಿಗಳ ಕಚೇರಿಯಲ್ಲಿ ಜ.೨ ರಿಂದ ಒಂದು ವಾರ ಮತ್ತು ಜ.೩ರಿಂದ ೧೨ರವರೆಗೆ ಇಂಡಿ, ಸಿಂದಗಿ, ಬಸವನಬಾಗೇವಾಡಿ ಹಾಗೂ ಮುದ್ದೇಬಿಹಾಳ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಹಮ್ಮಿಕೊಂಡಿದ್ದು, ವಿಶೇಷ ನೊಂದಣಿ ಕ್ಯಾಂಪ್ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕೃಷಿಗೆ ಸಂಬಂಧಿಸಿದ ವಿಷಯಗಳ ಕುರಿತು ಜನವರಿ-೨೦೨೪ರ ಮಾಹೆಯಲ್ಲಿ ತರಬೇತಿಗಳನ್ನು ಆಯೋಜಿಸಲಾಗಿದ್ದು, ಆಸಕ್ತ ರೈತರು ತರಬೇತಿಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.ಜನವರಿ ೦೩ ರಂದು ಸಿಂದಗಿ ರೈತ ಸಂಪರ್ಕ ಕೇಂದ್ರದಲ್ಲಿ ಸಮಗ್ರ ಕೃಷಿ ಪದ್ಧತಿಯು ರೈತರ ಆರ್ಥಿಕ ಮಟ್ಟವನ್ನು ದ್ವಿಗುಣಗೊಳಿಸಲೊಂದು ಸುಲಭೋಪಾಯ, ಜ.೦೪ರಂದು ದೇವರಹಿಪ್ಪರಗಿ ರೈತ ಸಂಪರ್ಕ ಕೇಂದ್ರದಲ್ಲಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೇಸಾಯ ತಾಂತ್ರಿಕತೆಗಳು, ಜ.೦೫ರಂದು ಆಲಮೇಲ ರೈತ ಸಂಪರ್ಕ ಕೇಂದ್ರದಲ್ಲಿ ರಾಸಾಯನಿಕ ಮುಕ್ತ ಕೃಷಿ ಪದ್ಧತಿಗಳು, ಜ.೦೯ ರಂದು ಇಂಡಿ ರೈತ ಸಂಪರ್ಕ ಕೇಂದ್ರದಲ್ಲಿ ಕೋಯ್ಲೋತ್ತರ ತಾಂತ್ರಿಕತೆಗಳು, ಜ.೧೦ರಂದು ಚಡಚಣ ರೈತ ಸಂಪರ್ಕ ಕೇಂದ್ರದಲ್ಲಿ ಆದಾಯ ಉತ್ಪನ್ನ ಚಟುವಟಿಕೆಗಳು, ಜ.೧೧ ರಂದು ಚಡಚಣ ತಾಲೂಕಿನ ಬಳ್ಳೊಳ್ಳಿ ರೈತ ಸಂಪರ್ಕ ಕೇಂದ್ರದಲ್ಲಿ ಕಿರುಧಾನ್ಯಗಳು ಹಾಗೂ ಮೌಲ್ಯವರ್ಧನೆ ಮತ್ತು ಜ.೧೨ ರಂದು ಮುದ್ದೇಬಿಹಾಳ ರೈತ ಸಂಪರ್ಕ ಕೇಂದ್ರದಲ್ಲಿ ಹಣ್ಣು ಹಾಗೂ ತರಕಾರಿಗಳ ಸಂಸ್ಕರಣೆ ಹಾಗೂ ಮೌಲ್ಯವರ್ಧನೆ ಕುರಿತು ಒಂದು…

Read More

ವಿಜಯಪುರ: ತೋಟಗಾರಿಕೆ ಇಲಾಖೆ ವತಿಯಿಂದ ಪ್ರಕಸ್ತ ೨೦೨೩-೨೪ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ (ಹನಿ ನೀರಾವರಿ) ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಎರಡು ಹೆಕ್ಟೇರ್‌ವರೆಗೆ ಶೇ.೯೦ ಮತ್ತು ಸಾಮಾನ್ಯ ವರ್ಗದ ರೈತರಿಗೆ ಶೆ.೭೫ ರಷ್ಟು ಸಹಾಯಧನ ಪಡೆಯಲು ಅವಕಾಶವಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಈ ಹಿಂದೆ ಅಳವಡಿಸಿಕೊಂಡಿದ್ದ ಸೂಕ್ಷ್ಮ ನೀರಾವತಿ ಪದ್ಧತಿ ಹಾಳಾಗಿದ್ದಲ್ಲಿ- ಘಟಕ ಕಾರ್ಯನಿರ್ವಹಿಸದೇ ಇದ್ದಲ್ಲಿ ೭ ವರ್ಷಗಳ ನಂತರ ಅದೇ ಜಮೀನಿಗೆ ಮತ್ತೊಮ್ಮೆ ಸೂಕ್ಷ್ಮ ನೀರಾವತಿ ಪದ್ಧತಿಯನ್ನು ಅಳವಡಿಸಿಕೊಂಡು ಸಹಾಯ ಪಡೆದುಕೊಳ್ಳಬಹುದಾಗಿದೆ.ಜಿಲ್ಲೆಯ ತೋಟಗಾರಿಕೆ ಬೆಳೆಗಳನ್ನು ಬೆಳೆದ ಹಾಗೂ ಬೆಳೆಯುವ ರೈತರು ಈ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಎಡಿಸಿ ಮಹಾದೇವ ಮುರಗಿ ಆಶಯ ವಿಜಯಪುರ: ಕಲೆ ಎಂದೆಂದಿಗೂ ಶಾಶ್ವತ, ಅಮರಶಿಲ್ಪಿ ಜಕಣಾಚಾರಿಯಂತಹ ಮಹನೀಯರ ಕುರಿತಾಗಿ ತಕಳಿದುಕೊಳ್ಳುವ ಮೂಲಕ ಅವರ ಕಲೆಯ ಕುರಿತು ಸ್ಫೂರ್ತಿ ಪಡೆದುಕೊಂಡು, ಶಿಲ್ಪಕಲೆಯಲ್ಲಿ ಸಾಧನೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರುಗಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ವಿಶ್ವಕರ್ಮ ಅಮರಶಿಲ್ಪಿ ಜಕಣಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.ಜಗತ್ತು ಮರೆಯದ ಅಮರ ಶಿಲ್ಪಕಲೆಗಳನ್ನು ಕೊಟ್ಟ ಕೀರ್ತಿ ಜಕಣಾಚಾರಿ ಅವರಿಗೆ ಸಲ್ಲುತ್ತದೆ. ಅಮರಶಿಲ್ಪಿ ಜಕಣಾಚಾರಿಯ ಸಾಧನೆಯು ನಮಗೆ ಪ್ರೇರಣೆ ಆಗಬೇಕು ಎಂದು ಸಲಹೆ ನೀಡಿದರು.ಜಕಣಾಚಾರಿ ಅವರು ಹೇಗೆ ತಮ್ಮ ಶಿಲ್ಪಕಲೆಗಳನ್ನು ಕೆತ್ತಲೂ ಕೆಲಸದ ಮೂಲಕ ತಪಸ್ಸು ಮಾಡುತ್ತಿದ್ದರೋ ಹಾಗೆ ಇಂದಿನ ಜನರು ತಮ್ಮ ತಮ್ಮ ವೃತ್ತಿಯಲ್ಲಿ ಯಶಸ್ಸು ಹೊಂದಲು ತಮ್ಮ ವೃತ್ತಿಯ ಗೌರವ ಹೊಂದಿ, ಆ ದಿಸೆಯಲ್ಲಿ ಸಾಧನೆ ಮಾಡಬೇಕು…

Read More

ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಮಿತಿ ವತಿಯಿಂದ ಭಾರತದ ಪ್ರಥಮ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಫುಲೆ ಅವರ ರಾಜ್ಯ ಮಟ್ಟದಲ್ಲಿ ಜನ್ಮ ಜಯಂತಿಯನ್ನು ಆಚರಣೆ ಜೊತೆಗೆ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.ಜನವರಿ ೦೩ ರಂದು ಮಾತೇ ಸಾವಿತ್ರಿಬಾಯಿ ಫುಲೆ ಅವರ ೧೯೩ ನೇ ಜನ್ಮ ಜಯಂತಿ ಪ್ರಯುಕ್ತ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮತ್ತು ಮಾಡುತ್ತಿರುವ ಮಹಿಳಾ ಸಾಧಕಿಯರನ್ನು ಗುರುತಿಸಿ ರಾಜ್ಯ ಮಟ್ಟದ “ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ” ನೀಡಲಾಗುತ್ತಿದೆ.ಸದರಿ ಕಾರ್ಯಕ್ರಮದ ಉದ್ಘಾಟಕರಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ. ಎಂ. ಬಿ. ಪಾಟೀಲ ಆಗಮಿಸುತ್ತಿದ್ದು, ಫಾದರ್ ಟಿಯೋಲ ಮೆಚಡೊ ಅವರು ದಿವ್ಯ ಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರು, ಹಿರಿಯ ಹೋರಾಟಗಾರರಾದ ಬಿ. ಗೋಪಾಲ್, ಹಿರಿಯ ಪತ್ರಕರ್ತರಾದ ಅನಿಲ್ ಹೊಸಮನಿ,…

Read More

ಬ್ರಹ್ಮದೇವನಮಡು: ಪ್ರತಿಯೊಬ್ಬರೂ ಧಮ೯ದ ಹಾದಿಯಲ್ಲಿ ನಡೆದಾಗ ಮಾತ್ರ ಸನ್ಮಾಗ೯ ಸಿಗಲಿದೆ. ನಂಬಿಕೆ,ಭಕ್ತಿ,ದಯ,ಸಹನೆಯಿಂದ ಗುರು ಹಿರಿಯರನ್ನು ಗೌರವಿಸುತ್ತ ಜೀವನ ನಡೆಸಬೇಕು ಎಂದು ಶ್ರೀಮಠದ ಶಿವಾಚಾಯ೯ ರತ್ನ ಪ್ರಶಸ್ತಿ ಪುರಸ್ಕ್ರತ ಡಾ.ವಿಶ್ವರಾಧ್ಶ ಶಿವಾಚಾಯ೯ರು ಹೇಳಿದರು.ಸಮೀಪದ ಸುಕ್ಷೇತ್ರ ಮಾಗಣಗೇರಿ ಬೃಹನ್ಮಠದಗುರು ಚನ್ನವೃಷಬೇಂದ್ರ ಶಿವಯೋಗಿಗಳ ಮತ್ತು ಕೆಂಭಾವಿ ಗುರು ಅಯ್ಯಪ್ಪಯ್ಯ ಶಿವಾಚಾರ್ಯರ ರಥೋತ್ಸವ ಮತ್ತು ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ಮಹಾಪುರಾಣದ ತೊಟ್ಟಿಲೋತ್ಸವ ಕಾಯ೯ಕ್ರಮದಲ್ಲಿ ಅವರು ಆಶೀವ೯ಚನ ನೀಡಿದರು.ಸತ್ಶ, ಶುದ್ದ ಕಾಯಕದೊಂದಿಗೆ ಧಮ೯ದಿಂದ ನಡೆದರೆ ಜೀವನ ಸಾಥ೯ಕವಾಗುತ್ತದೆ ಎಂದರು.ಈ ವೇಳೆ ನಾಗೇಶ ಧನಶೆಟ್ಟಿ ,ಪತ್ರಕತ೯ ಮಲ್ಲು ಕೆಂಭಾವಿ ಸೇರಿದಂತೆ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.ಅರಳಹಳ್ಳಿಯ ಪ್ರವಚನಕಾರ ಬಸವರಾಜ ಶಾಸ್ತ್ರಿಗಳು ಪ್ರವಚನ ನೀಡಿದರು. ಗದುಗಿನ ಮಲ್ಲಿಕಾಜು೯ನ ನರಸಲಗಿ ಸಂಗೀತ ಸೇವೆಯೊಂದಿಗೆ ಅಕಾಶ ಹಿರೇಮಠ ತಬಲ್ ಸಾತ್ ನೀಡಿದರು.

Read More

ದೇವಾಂಗ ಸಂಘದ ಪದಾಧಿಕಾರಿಗಳ ಆಯ್ಕೆ & ಸಂಘಟನಾ ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಆನಂದ ಹುಲಮನಿ ಅಭಿಮತ ಮುದ್ದೇಬಿಹಾಳ: ಸಾಮಾಜಿಕ, ರಾಜಕೀಯ, ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಲು ಸಂಘಟನೆ ಪ್ರಮುಖ ಅಸ್ತ್ರವಾಗಿದ್ದು ಸಂಘಟಿತರಾದಾಗ ಮಾತ್ರ ನಮಗೆ ಸೌಲಭ್ಯಗಳು ದೊರಕಲು ಸಾಧ್ಯವಿದೆ ಎಂದು ಕರ್ನಾಟಕ ರಾಜ್ಯ ದೇವಾಂಗ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಆನಂದ ಹುಲಮನಿ ಹೇಳಿದರು.ಪಟ್ಟಣದ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ದೇವಾಂಗ ಸಂಘದ ತಾಲ್ಲೂಕಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು.ಒಳಪಂಗಡಗಳಲ್ಲಿರುವ ಭಿನ್ನಾಭಿಪ್ರಾಯಗಳನ್ನು ಒಟ್ಟುಗೂಡಿಸಿ ನೇಕಾರ ಸಮುದಾಯದ ಹೆಸರಿನಲ್ಲಿ ಸಂಘಟನೆ ಬಲಗೊಳಿಸಬೇಕಿದೆ ಎಂದರು.ಹಂಪಿ ಶ್ರೀ ಗಾಯತ್ರಿ ಮಹಾಸಂಸ್ಥಾನ ಮಠದ ಟ್ರಸ್ಟಿ ನಾಗೇಶ ಭಾವಿಕಟ್ಟಿ, ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಮಾತನಾಡಿ, ದೇವಾಂಗ ಸಮಾಜದ ಬಾಂಧವರು ಸಂಕಷ್ಟದಲ್ಲಿದ್ದಾಗ, ಮಕ್ಕಳಿಗೆ ಶಿಕ್ಷಣದ ಸಲುವಾಗಿ ಸಹಾಯ ಬೇಕಾದಾಗ ಸಮಾಜದ ಸಂಘಟನೆ ಅಗತ್ಯವೆನಿಸುತ್ತದೆ. ಜಿಲ್ಲೆಯ ಸಮುದಾಯದ ಬಾಂಧವರಲ್ಲಿ ಸಂಘಟನೆಯ ಬಗ್ಗೆ ಜಾಗೃತಿ ಮೂಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.ನೇಕಾರ ಸಮುದಾಯಗಳ…

Read More