Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಡಚಣ: ಕ್ರೀಡೆಯಲ್ಲಿ ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡಾಪಟುಗಳು ಪೌಷ್ಟಿಕ ಆಹಾರ ಸೇವಿಸುವ ಮೂಲಕ ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕು. ದೇಹ ಮತ್ತು ಮನಸ್ಸು ಸದೃಢವಾಗಿರಲು ನಿಯಮಿತವಾಗಿ ಕ್ರೀಡಾಭ್ಯಾಸ ಮಾಡಬೇಕು ಎಂದು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಂ.ಬಿ. ಬಿರಾದಾರ ಸಲಹೆ ನೀಡಿದರು.ಪಟ್ಟಣದ ಶ್ರೀ ಎಸ್‌ಎಸ್‌ಎಚ್ ಅಂತರಾಷ್ಟ್ರೀಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಚಾಲನೆ ನೀಡಿ ಅವರು ಮಾತನಾಡಿದರು.ಬರಡೋಲ ಕೆಪಿಎಸ್ ಪ್ರೌಢಶಾಲೆಯ ಪ್ರಾಚಾರ್ಯ ಸಿ.ಎ. ಚನಗೊಂಡ ಮಾತನಾಡಿ, ಕ್ರೀಡೆಗಳನ್ನು ಆಡುವುದರಿಂದ ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ ಹೆಚ್ಚುವುದರ ಜೊತೆಗೆ ಚಲನಶೀಲತೆ ವೃದ್ಧಿಯಾಗುತ್ತದೆ. ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಹಿಂಜರಿಕೆ ಹಾಗೂ ಕೀಳರಿಮೆಯನ್ನು ದೂರ ಮಾಡುವುದರ ಜೊತೆಗೆ ತಮ್ಮ ಪ್ರತಿಭೆಯನ್ನು ಗುರುತಿಸಿಕೊಳ್ಳಲು ಉತ್ತಮ ವೇದಿಕೆಯಾಗಿದೆ ಎಂದರು.ದೈಹಿಕ ಶಿಕ್ಷಕ ಜಿ.ಎಸ್. ಧಂದರಗಿ ಮಾತನಾಡಿದರು.ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗಿಯಾಗಿ ತಮ್ಮ ತಮ್ಮ ಪ್ರತಿಭೆಯನ್ನು ತೋರಿದರು ಮತ್ತು ಪಾರಿತೋಷಕವನ್ನು ಪಡೆದರು.ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶಂಕರ ಹಾವಿನಾಳ,…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಹೆಣ್ಣೊಂದು ಕಲಿತರೆ ಶಾಲೆ ಒಂದು ತೆರೆದಂತೆ ಎಂಬ ನಾಣ್ಣುಡಿಯಂತೆ ಇಂದು ಪ್ರತಿಯೊಂದು ಹೆಣ್ಣು ಮಕ್ಕಳು ಶಿಕ್ಷಣವಂತರಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕೆಂದು, ಹಾಗೂ ಒಂದು ಹೆಣ್ಣು ಮಗು ಶಿಕ್ಷಣ ಪಡೆದರೆ ಇಡೀ ಕುಟುಂಬವೇ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಸಾಧ್ಯ ಎಂದು ಮುಖ್ಯ ಶಿಕ್ಷಕ ನಾರಾಯಣ ಶಾಸ್ತ್ರಿ ಹೇಳಿದರು.ಅವರು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ ಕುಂಬಾರಹಳ್ಳದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಇಂದಿನ ದಿನಮಾನದಲ್ಲಿ ಸಮಾಜದಲ್ಲಿ ಎಲ್ಲಾ ರಂಗದಲ್ಲಿಯೂ ಹೆಣ್ಣು ಮಕ್ಕಳು ಸಾಧನೆ ಮಾಡುತ್ತಿದ್ದು, ಅವರಿಗೆ ಪ್ರೋತ್ಸಾಹಿಸುವ ಕೆಲಸ ಎಲ್ಲರೂ ಮಾಡಬೇಕಾಗಿದೆ ಎಂದು ಹೇಳಿದರು.ಶಿಕ್ಷಕ ಸಂಗಮೇಶ್ ಉಟಗಿ ಮಾತನಾಡಿ, ತೊಟ್ಟಿಲು ತೂಗುವ ಕೈ ದೇಶವನ್ನೇ ಆಳಬಹುದು ಎಂಬುದಕ್ಕೆ ನಮ್ಮ ದೇಶದ ರಾಷ್ಟ್ರಪತಿ ದ್ರೌಪದಿ ಮುರುಮು ಸಾಕ್ಷಿಯಾಗಿದ್ದಾರೆ. ಅದೇ ರೀತಿ ಉನ್ನತ ಹುದ್ದೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಅಧಿಕಾರದಲ್ಲಿರುವುದು ನೋಡಬಹುದಾಗಿದೆ. ಇದಕ್ಕೆಲ್ಲ ಮುಖ್ಯ ಕಾರಣ ಶಿಕ್ಷಣ. ಆದರೆ ಈಗಿನ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನ ತಾವರಖೇಡ ಗ್ರಾಮದಲ್ಲಿ ಮೃತಪಟ್ಟ ಮಂಗನ ಶವ ಸಂಸ್ಕಾರವನ್ನು ಗ್ರಾಮಸ್ಥರು ವಿಧಿ ವಿಧಾನಗಳೊಂದಿಗೆ ನೆರವೇರಿಸಿದ ಘಟನೆ ಶನಿವಾರ ನಡೆದಿದೆ.ಗ್ರಾಮದಲ್ಲಿ ಮಂಗವೊಂದು ಅಸಸ್ಥಗೊಂಡಿದ್ದನ್ನು ಗಮನಿಸಿದ ಗ್ರಾಮಸ್ಥರು ಅದನ್ನು ಕೂಡಲೆ ವಾಹನ ಮೂಲಕ ಆಲಮೇಲ ಸರ್ಕಾರಿ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಸಹಿತ ಚಿಕಿತ್ಸೆ ಫಲಕಾರಿಯಾಗದೆ ಜ.24 ಶನಿವಾರ ಮೃತಪಟ್ಟಿದೆ.ಗ್ರಾಮಸ್ಥರು ಮಂಗನ ಅಂತ್ಯ ಸಂಸ್ಕಾರವನ್ನು ವಾದ್ಯಮೇಳದೊಂದಿಗೆ, ಪಟಾಕಿ ಸುಡುತ್ತಾ, ಭಜನೆ ಮಾಡುತ್ತಾ ಗ್ರಾಮಸ್ಥರು ಜೈ ಶ್ರೀ ರಾಮ್, ಜೈ ಹನುಮಾನ್ ಎಂದು ಘೋಷಣೆ ಕೂಗುತ್ತಾ ಊರಿನ ಪ್ರಮುಖ ಬೀದಿಗಳಲ್ಲಿ ಎತ್ತಿನ ಬಂಡಿಯ ಮೇಲೆ ಮೆರವಣಿಗೆ ಮಾಡುತ್ತ ಭೀಮಾ ನದಿಯ ದಂಡೆಯಲ್ಲಿರುವ ಹಳೆ ತಾವರಖೇಡ ಗ್ರಾಮದಿಂದ ಹೊಸ ಪುನರ್ವಸತಿ ಕೇಂದ್ರದಲ್ಲಿ ಮಂಗನ ಅಂತ್ಯಕ್ರಿಯೆಯನ್ನು ವೇ.ಗುರುಮೋರ್ತಯ್ಯ ಹಿರೇಮಠ್ ವಿಧಿ ವಿಧಾನಗಳೊಂದಿಗೆ ನೆರವೇರಿಸಿದರು.ಗ್ರಾಮದ ಯುವಕರು ಹಿರಿಯರು ತಾಯಂದಿರು ಅಂತ್ಯಕ್ರಿಯೆ ಯಲ್ಲಿ ಬಾಗಿಯಾಗಿದ್ದರು. ಅಂತ್ಯಕ್ರಿಯೆಗೆ ಆಗಮಿಸಿದ ಭಕ್ತಾದಿಗಳಿಗೆ ಅನ್ನಪ್ರಸಾದ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗಿತ್ತು.

Read More

ವಿಪಕ್ಷ ಶಾಸಕರ ವಿರುದ್ಧ ಮಾತ್ರವೇ ಕ್ರಮವೇಕೆ? | ರಾಜ್ಯಪಾಲರ ಅವಮಾನಿಸಿದ ಕಾಂಗ್ರೆಸ್ ವಿರುದ್ಧ ಶಿಸ್ತು ಕ್ರಮ ಏಕಿಲ್ಲ? | ಬಿಜೆಪಿ ಆರೋಪ ಬೆಂಗಳೂರು: ಸದನದ ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕೆ ವಿರೋಧ ಪಕ್ಷಗಳ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು, ರಾಜ್ಯಪಾಲರ ಅವಮಾನಿಸಿದ ಕಾಂಗ್ರೆಸ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ಹೇಳಿದ್ದು, ಪಕ್ಷಪಾತದ ನಡೆಸುತ್ತಿರುವುದಾಗಿ ಆರೋಪ ಮಾಡಿದ್ದಾರೆ.ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದರು.ರಾಜ್ಯಪಾಲರು ಸದನದಿಂದ ಹೊರಬಂದಾಗ, ಸ್ಪೀಕರ್ ಸೇರಿದಂತೆ ಯಾರೂ ಅವರೊಂದಿಗೆ ಇರಲಿಲ್ಲ. ರಾಜ್ಯಪಾಲರು ಸದನದಿಂದ ಓಡಿಹೋದರು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ. ಇದು ರಾಜ್ಯದ ರಾಜ್ಯಪಾಲರಿಗೆ ಮಾಡಿದ ಅವಮಾನ. ಕೆಲವು ಕಾಂಗ್ರೆಸ್ ಶಾಸಕರು ರಾಜ್ಯಪಾಲರು ಸದನದಿಂದ ಹೊರಹೋಗದಂತೆ ತಡೆಯಲು ಪ್ರಯತ್ನಿಸಿದಾಗ, ಸ್ಪೀಕರ್ ಆಗಿ ನೀವು ಕ್ರಮ…

Read More

ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತಿ ಅಭಿವೃದ್ಧಿ ಹಾಗೂ ಐ.ಟಿ ಮತ್ತು ಬಿ.ಟಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯಿತಿಗಳಿಗೆ ಈಗಿರುವ ಆಡಳಿತ ಸಮಿತಿಯನ್ನು ಮರು ನೇಮಕ ಮಾಡಲು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರು ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತಿ ಅಭಿವೃದ್ಧಿ ಹಾಗೂ ಐ.ಟಿ ಮತ್ತು ಬಿ.ಟಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ.ಯಾವುದೇ ಪಂಚಾಯಿತಿ ಸದಸ್ಯರ ಅವಧಿ ಮೊದಲ ಸಭೆ ಗೊತ್ತುಪಡಿಸಿದ ದಿನಾಂಕದಿಂದ ಐದು ವರ್ಷಗಳ ಅಸ್ತಿತ್ವದಲ್ಲಿದ್ದು, ಐದು ವರ್ಷಗಳ ಪೂರ್ಣಗೊಂಡ ನಂತರ ಅವಧಿ ಮುಕ್ತಾಯವಾಗುತ್ತದೆ. 2020 ರಿಂದ 2025ರ ವರೆಗೆ ರಚಿತವಾದ ರಾಜ್ಯದ ಗ್ರಾ. ಪಂ ಅವಧಿಯುವ 2026ರ ಜನೇವರಿಯಿಂದ ಮಾರ್ಚವರೆಗೆ ನಾನಾ ದಿನಾಂಕಗಳಂದು ಮುಕ್ತಾಯವಾಗಲಿದೆ. ಆದ್ದರಿಂದ ರಾಜ್ಯ ಸರಕಾರ ಅವಧಿ ಮುಗಿಯುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಯಂದಿರು ಮಕ್ಕಳಲ್ಲಿ ಧಾರ್ಮಿಕ-ಸಾಮಾಜಿಕ, ನಮ್ಮ ಪರಂಪರೆ-ಸಂಪ್ರದಾಯ, ಆಚಾರ-ವಿಚಾರ, ಸಂಸ್ಕೃತಿ-ಸಂಸ್ಕಾರಗಳನ್ನು ಒಡಮೂಡಿಸುವ ಕಾರ್ಯ ಮಾಡಬೇಕು. ಅಂದಾಗ ಮಾತ್ರ ಮುಂದಿನ ಜನಾಂಗವು ನಮ್ಮ ಧಾರ್ಮಿಕ ಸಂಪ್ರದಾಯ-ವಿಧಿವಿಧಾನಗಳನ್ನು ಉಳಿಸಿ-ಬೆಳೆಸಲು ಸಾಧ್ಯ ಎಂದು ಮುಖ್ಯ ಅತಿಥಿ ಶ್ರೀಮತಿ ಮಾಯಾದೇವಿ ಚೌಧರಿ ಅವರು ಸಲಹೆ ನೀಡಿದರು.ಅವರು ನಗರದ ಅಥಣಿ ರಸ್ತೆಯಲ್ಲಿರುವ ಅಲ್-ಅಮೀನ್ ಆಸ್ಪತ್ರೆ ಎದುರಿಗೆ ಇರುವ ಎನ್.ಜಿ.ಓ ಕಾಲನಿಯಲ್ಲಿ ಜೈ ಶ್ರೀ ಆಂಜನೇಯ ದೇವಸ್ಥಾನದ ೬ ನೇಯ ವರ್ಷದ ಜಾತ್ರಾ ಮಹೋತ್ಸವದಲ್ಲಿ ಗೋಮಾತೆ ಮತ್ತು ಬನ್ನಿ ಮಹಾಂಕಾಳಿ ಪೂಜೆ ಸಲ್ಲಿಸುವದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.ಬದುಕು ಸಂಕೀರ್ಣಮಯವಾಗುತ್ತಿರುವ ಇಂದಿನ ಕಾಲದಲ್ಲಿ ಮನುಷ್ಯ ಏನೆಲ್ಲ ಗಳಿಸಿದರೂ ಮನಸ್ಸಿಗೆ ಶಾಂತಿ ಇಲ್ಲದಂತಾಗಿದೆ. ಹನುಮಂತ-ರಾಮನ ನಡುವಿನ ಗುರು-ಶಿಷ್ಯರ ಅವಿನಾವ ಸಂಬಂಧ ಮತ್ತು ದೈವಿಭಕ್ತಿಯೇ ನಮ್ಮೆಲ್ಲರಿಗೆ ಆದರ್ಶವಾಗಬೇಕು. ಇಡೀ ಜಗತ್ತಿನಲ್ಲಿಯೇ ಧಾರ್ಮಿಕ ಪರಂಪರೆ-ಆಚರಣೆ, ಸಂಪ್ರದಾಯ ಮತ್ತು ಸಂಸ್ಕೃತಿ-ಸಂಸ್ಕಾರಕ್ಕೆ ಹೆಸರುವಾಸಿಯಾದ ರಾಷ್ಟ್ರ ನಮ್ಮದು. ಹಲವು ಧರ್ಮ, ಸಂಪ್ರದಾಯ, ಆಚರಣೆ, ಭಾಷೆ, ಸಂಸ್ಕೃತಿ ಬೇರೆ ಬೇರೆಯಾದರೂ ಅಖಂಡತೆ ಮತ್ತು ವಿವಿಧತೆಯಲ್ಲಿ ಏಕತೆ ಎಂಬುದನ್ನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ನ್ಯಾಯಾಂಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ಜನವರಿ ೨೫ ರಂದು ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ೧೬ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦ಕ್ಕೆ ನಡೆಯುವ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ.ಅವರು ಉದ್ಘಾಟಿಸಲಿದ್ದು, ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ,ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧನೆ, ಸಾಂಕೇತಿಕವಾಗಿ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಣೆ, ಅತ್ಯುತ್ತಮ ಬಿ.ಎಲ್.ಒ ಅವರಿಗೆ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಬಸವ ಇಂಟರ್ನ್ಯಾಷನಲ್ ಸಿಬಿಎಸ್‌ಇ ಶಾಲೆಯ ವಿದ್ಯಾರ್ಥಿ ಕುಮಾರ್ ಮೊಮ್ಮದ್ ಜಿಶಾನ್ ಸೂರಜ್ ರಿಸಾಲ್ದಾರ್ ಇವರು ಕರ್ನಾಟಕ ರಾಜ್ಯದ ಪರವಾಗಿ ಗೋವಾ ರಾಜ್ಯದಲ್ಲಿ ಯುಥ್ ಗೇಮ್ಸ್ ಇಂಡಿಯಾ ಹಮ್ಮಿಕೊಂಡಿರುವ ರಾಷ್ಟ್ರೀಯ ಮಟ್ಟದ ಅಂಡರ್ ೧೦ ನಲ್ಲಿ ಅಥ್ಲೇಟಿಕ್ ಸ್ಪರ್ಧೆ ೧೦೦ ಮೀಟರ್ ಓಟದಲ್ಲಿ ೧೫ ಸೆಕೆಂಡ್ ನಲ್ಲಿ ಓಟವನ್ನು ಪೂರ್ಣಗೊಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.ಕರ್ನಾಟಕದ ಪರವಾಗಿ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮೊಹಮ್ಮದ್ ಜಿಶಾನ್ ಸೂರಜ್ ರಿಸಾಲ್ದಾರ್ ಈಗ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಮುಂದೆ ನೇಪಾಳದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾರತಪರವಾಗಿ ಜೀಶಾನ್ ಪ್ರತಿನಿಧಿಸಲಿದ್ದಾರೆ. ಅಲ್ಲಿ ಏಷಿಯಾ ಖಂಡದ ಎಲ್ಲಾ ರಾಷ್ಟ್ರಗಳು ಭಾಗವಹಿಸುತ್ತಿದ್ದು, ಅಲ್ಲಿಯೂ ಕೂಡ ಜಿಶಾನ್ ಗೆಲುವು ಸಾಧಿಸಲಿ ಎಂದು ನಗರದ ಜನತೆ ಹಾರೈಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಸ್ ಹಾಗೂ ಕರ್ನಾಟಕ ನಾಡ ರಕ್ಷಣಾ ವೇದಿಕೆ ವಿಜಯಪುರ ವತಿಯಿಂದ ವಿಶೇಷ ಸಾಧಕರಿಗೆ ಕೊಡಮಾಡುವ ರಾಷ್ಟ್ರೀಯ ಜ್ಞಾನಸಿರಿ ಪ್ರಶಸ್ತಿಗೆ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಬಂಡೆ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸುರೇಶ ಜತ್ತಿ ತಿಳಿಸಿದ್ದಾರೆ.ಇದೇ 28 ರ ಇಳಿಹೊತ್ತು 4.30 ಕ್ಕೆ ವಿಜಯಪುರ ನಗರದಲ್ಲಿ ಜರುಗುವ ‘ಜ್ಞಾನಸಿರಿ ಉತ್ಸವ-2026’ ಸಮಾರಂಭದಲ್ಲಿ ಮನುಗೂಳಿಯ ಸಂಗನಬಸವ ಶಿವಾಚಾರ್ಯರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಸೇರಿದಂತೆ ಅನೇಕ ಗಣ್ಯರು ಶಿಕ್ಷಕ ಸಂತೋಷ ಬಂಡೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರದಲ್ಲಿ ಚಾಲಕರ ದಿನಾಚರಣೆ | ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ ಅಭಿಮತ B ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಚಾಲಕರಿಗೆ ನೈತಿಕ ಸ್ಥೈರ್ಯ ತುಂಬುವ ಹಾಗೂ ಅವರ ಜವಾಬ್ದಾರಿಯುತ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಜನವರಿ 24ರಂದು ಚಾಲಕರ ದಿನ ಆಚರಣೆ ಮಾಡಲಾಗುತ್ತಿದ್ದು, ಪ್ರಯಾಣಿಕರ ಸುರಕ್ಷತೆಯೊಂದಿಗೆ ಪ್ರಯಾಣಿಕರ ನಂಬಿಕೆ ಗಳಿಸಿ, ಸೇವೆ ಸಲ್ಲಿಸುತ್ತಿರುವ ಚಾಲಕರ ಕಾರ್ಯ ಅತ್ಯಂತ ಮಹತ್ವದ್ದಾಗಿದ್ದು, ಅವರ ಕಾರ್ಯ ಜವಾಬ್ದಾರಿಯುತ ಮತ್ತು ಗೌರವಯುತ ಸೇವೆಯಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ವಸೀಂಬಾಬಾ ಮುದ್ದೇಬಿಹಾಳ ಅವರು ಹೇಳಿದರು.ಅವರು, ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ ನಡೆದ ಚಾಲಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಕರ್ತವ್ಯದ ಅವಧಿಯಲ್ಲಿ ಮೈತುಂಬಾ ಕಣ್ಣಾಗಿಸಿಕೊಂಡು ಪ್ರಯಾಣಿಕರ ಸುರಕ್ಷತೆಯನ್ನು ಆದ್ಯತೆಯನ್ನಾಗಿಸಿಕೊಂಡು ನಿರ್ವಹಿಸುವ ಕಾರ್ಯ ಅನುಪಮವಾಗಿದೆ ಎಂದು ಅವರು ಹೇಳಿದರು.ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ ಅವರು ಮಾತನಾಡಿ,ಚಾಲಕರ ದಿನಾಚರಣೆ ಸಂದರ್ಭದಲ್ಲಿ ಚಾಲಕರಿಗೆ ಸನ್ಮಾನ, ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಹಮ್ಮಿಕೊಂಡು ಆರೋಗ್ಯ‌…

Read More