Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ರೈತರಿಗೆ ನೂರಾರು ರೀತಿಯಲ್ಲಿ ಶೋಷಣೆ, ಮೋಸ ವಂಚನೆ ಮಾಡಲಾಗುತ್ತಿದೆ, ಅಂತವರಿಗೆ ನ್ಯಾಯಯೂತವಾಗಿ ತನಿಖೆ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರೊಂದಿಗೆ ಜಿಲ್ಲಾಧಿಕಾರಿಗಳಾದ ಡಾ ಆನಂದ ಅವರಿಗೆ ಮನವಿ ಸಲ್ಲಿಸಿದರು.ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಮನವಿ ಸಲ್ಲಿಸಿ ಮಾತನಾಡುತ್ತಾ ಜಿಲ್ಲೆಯಲ್ಲಿ ರೈತರಿಗೆ ಹಲವಾರು ರೀತಿಯಲ್ಲಿ ಮೋಸ ಆಗುತ್ತಿದೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅದರಲ್ಲಿ ಮುಖ್ಯವಾಗಿ ಕಬ್ಬಿನ ತೂಕದಲ್ಲಿ ಮನ್ನಾಪುರ ಸಂಗಮನಾಥ ಸಕ್ಕರೆ ಕಾರ್ಖಾನೆಯಿಂದ ೫೬೦ ಕೆ.ಜಿ ಮೋಸವನ್ನು ಬಯಲೆಗೆಳೆಯಲಾಗಿದೆ, ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಹಾಗೂ ಈ ಹಿಂದೆ ಕಬ್ಬು ಕೊಟ್ಟು ಎಲ್ಲಾ ರೈತರಿಗೂ ಪರಿಹಾರ ನೀಡಬೇಕು ಮತ್ತು ಸಕ್ಕರೆ ಸಚಿವರ ಹೇಳಿಕೆಯಂತೆ ೫ ಲಕ್ಷ ಬಹುಮಾನ ಕೋಡಬೇಕು ಎಂದರು.ಅದೇರೀತಿ ದ್ರಾಕ್ಷಿ ವಿಮೆ ತುಂಬಿದ ೧೮೮೫ ಕ್ಕು ಅಧಿಕ ರೈತರಿಗೆ ವಿಮೆ ಬರಬೇಕು, ಮೆಕ್ಕಜೋಳ ಖರೀದಿ ಕೇಂದ್ರ ಆರಂಭಿಸಬೇಕು,…

Read More

ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್‌ | ಆಯವ್ಯಯ ಮಂಡನೆಗೆ ಸಿದ್ಧತೆ ಆರಂಭ | ಸಿಎಂ ಸಿದ್ದರಾಮಯ್ಯ ಭರವಸೆ ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಇತ್ಯರ್ಥವಾಗದೆ ಮುಂದುವರೆದಿರುವುದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ವರ್ಷದ ಮೊದಲ ದಿನವೇ ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್ ನೀಡಿದ್ದಾರೆ.ಈಗಾಗಲೇ 16 ಬಜೆಟ್‌ ಗಳನ್ನು ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, 17ನೇ ಬಜೆಟ್‌ ಅನ್ನು ನಾನೇ ಮಂಡಿಸುತ್ತೇನೆ. ಈ ತಿಂಗಳಿನಿಂದ ಬಜೆಟ್ ಗೆ ಸಿದ್ಧತೆ ನಡೆಸುವುದಾಗಿ ಗುರುವಾರ ಹೇಳಿದ್ದಾರೆ. ಈ ಮೂಲಕ ಹೊಸ ದಾಖಲೆ ಬರೆಯಲು ಸಿದ್ದರಾಮಯ್ಯ ಮುಂದಾಗಿದ್ದಾರೆ.ಗುರುವಾರ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರಿಗಳು ಸಮ್ಮೇಳನ ಸಭಾಂಗಣದಲ್ಲಿ ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರಿದರು.ಸರ್ಕಾರದ ಅಪರ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಐಜಿಪಿಸಿಸಿಎಫ್ ಹಾಗೂ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸಿಎಂ ಭೇಟಿಯಾಗಿ ಶುಭಾಶಯ ತಿಳಿಸಿದರು.ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯ ಕೇಂದ್ರ ಬಸ್ ನಿಲ್ದಾಣಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲು ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್ ಮಾಡಲಾಗಿದೆ.ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ,ಈ ಪ್ರಕಟಣೆಯ 03 ದಿನಗಳೊಳಗೆ ಮಹಾನಗರ ಪಾಲಿಕೆಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಚಿಮ್ಮಡದಲ್ಲಿ ನಡೆದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಬಿ.ಎಂ. ಹಳಮನಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಸಮೂಹ ಶಿಕ್ಷಣ ಕಲಿಕೆಯ ಆಸಕ್ತಿ ಬೆಳೆಯಬೇಕು, ಮಗುವಿನ ಕಲಿಕಾ ಸಾಮರ್ಥ್ಯ ವೃದ್ದಿಸುವಲ್ಲಿ ಎಫ್.ಎಲ್.ಎನ್. ಆದಾರಿತ ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಶಿಕ್ಷಣ ಸಂಯೋಜಕ ಬಿ.ಎಂ. ಹಳಮನಿ ಹೇಳಿದರು.ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ಬಾಗಲಕೋಟ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಸಮನ್ವಯಾಧಿಕಾರಿಗಳ ಕಾರ್ಯಾಲಯ ಜಮಖಂಡಿ, ಸಮೂಹ ಸಂಪನ್ಮೂಲ ಕೇಂದ್ರ ಚಿಮ್ಮಡ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ಲಷ್ಟರ್ ಮಟ್ಟದ ಎಫ್.ಎಲ್.ಎನ್. ಆಧರಿತ “ಕಲಿಕಾ ಹಬ್ಬ” ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿ ಮಾತನಾಡಿದ ಅವರು ಎಫ್.ಎಲ್.ಎನ್. ಎಂದರೆ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಶಾಸ್ತç, ಮಗುವಿನ ಕನಿಷ್ಠ ಕಲಿಕೆಯ ಮಾನದಂಡಗಳಾದ ಸ್ಪಷ್ಠ ಓದು ಶುಧ್ಧ ಬರಹ ಸರಳ ಲೆಕ್ಕಾಚಾರ ಸಾಮಥ್ಯವಾಗಿದೆ. ಯಾವ ಮಕ್ಕಳು ಸಾಮಾನ್ಯ ಕಲಿಕೆಯಲ್ಲಿ ಈ ಸಾಮರ್ಥ್ಯಗಳನ್ನು ಸಾಧಿಸಿಲ್ಲವೋ ಅಂಥಹ ಮಕ್ಕಳನ್ನು ಗುರುತಿಸಿ ಅವರಿಗೆ ಚಟುವಟಿಕೆ ಆಧಾರಿತ ವಿಶೇಷಭೋಧನೆಯ ಮೂಲಕ ಕಲಿಸುವ ಪ್ರಕ್ರಿಯೇಯಾಗಿದೆ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಅಯ್ಯಪ್ಪ ಸ್ವಾಮಿಯ ವೃತಾಚರಣೆ, ನಿಯಮ, ಪರಂಪರೆ ಐತಿಹಾಸಿಕವಾದದ್ದು. ೭೦ರ ದಶಕದಿಂದ ಶುರುವಾದ ಪರಂಪರೆ ಸಧ್ಯ ಕರ್ನಾಟಕದಿಂದ ಪ್ರತೀ ವರ್ಷ ಕೋಟ್ಯಾಂತರ ಮಾಲಾಧಾರಿಗಳು ಅಯ್ಯಪ್ಪನ ದರ್ಶನ ಪಡೆಯುತ್ತಾರೆ ಎಂದು ಭಾರತೀಯ ಅಯ್ಯಪ್ಪ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ರಾಮು ಕರಾಂಡ ಗುರುಸ್ವಾಮಿಗಳು ಹೇಳಿದರು.ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ ಮಹಾಪೂಜೆ ಹಾಗೂ ಪಡಿಪೂಜೆಯ ಬಳಿಕ ಮಾಧ್ಯದವರನ್ನುದ್ದೇಶಿಸಿ ಅವರು ಮಾತನಾಡಿದರು.ಮಂಡಲ ಕಾಲ ವೃತಾಚರಣೆ ಮಾಡುವದರಿಂದ ನಮ್ಮ ದೇಹ, ಮನಸ್ಸು ಪರಿಶುದ್ಧವಾಗುತ್ತದೆ. ಮನಸ್ಸಿಗೆ ನೆಮ್ಮದಿ, ಆನಂದ, ಸಂತೋಷ, ಸಂಮೃದ್ಧಿ ಪ್ರಾಪ್ತಿಯಾಗುತ್ತದೆ. ಅಯ್ಯಪ್ಪ ಅಂದರೆ ಕಲಿಯುಗದ ವರದ. ಬೇಡಿದ ವರಗಳನ್ನು ತಕ್ಷಣ ನೀಡುವ ದೇವರು. ಹಾಗಾಗಿ ಕೋಟ್ಯಾಂತರ ಜನ ನಂಬಿ ಅವರ ಮೊರೆ ಹೋಗಿ, ತಮ್ಮನ್ನು ತಾವು ಸಮರ್ಪಣೆ ಮಾಡಿಕೊಂಡು ಶರಣಾಗುತ್ತಾರೆ ಎಂದರು.ಸತತ ೩೨ನೇ ವರ್ಷದ ಮಾಲಾಧಾರಿ ಶಿವು ಕಿರಶ್ಯಾಳ ಗುರುಸ್ವಾಮಿ ಅವರು ಮಾತನಾಡಿ, ಕಳೆದ ೧೭ ವರ್ಷಗಳಿಂದ ಈ ಆವರಣದಲ್ಲಿ ಮಹಾಪೂಜೆ ನೆರವೇರಿಸುತ್ತ ಬರುತ್ತಿದ್ದೇವೆ. ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಂಗವಾಗಿ ತಾಲೂಕಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ ಸರಳ ಕಾರ್ಯಕ್ರಮದಲ್ಲಿ ಜಕಣಾಚಾರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸಂಸ್ಮರಣಾ ದಿನಾಚರಣೆಯನ್ನು ಆಚರಿಸಲಾಯಿತು.ಪೂಜೆಯನ್ನು ಪ್ರಭಾರಿ ತಹಸೀಲ್ದಾರ ಅವ್ವಪ್ಪ ಅಮರವಾಡಗಿ ಅವರು ನೆರವೇರಿಸಿದರು. ನಿವೃತ್ತ ಉಪನ್ಯಾಸಕ ಕೆ.ಬಿ.ಕಡೆಮನಿ ಅವರು ಅಮರಶಿಲ್ಪಿ ಜಕಣಾಚಾರಿ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ ಎಸ್.ಎಚ್.ಅರಕೇರಿ, ಉಪತಹಸೀಲ್ದಾರ ಬಿ.ಆರ್.ಪೋಲೇಶಿ, ಶಿರಸ್ತೇದಾರ ಬಿ.ಆರ್.ಬಳೂರಗಿ, ವಿಶ್ವಕರ್ಮ ಸಮಾಜದ ಮುಖಂಡರಾದ ರಾಜೇಂದ್ರ ಪತ್ತಾರ, ಜಗನ್ನಾಥ ಪತ್ತಾರ, ಮುತ್ತು ಪತ್ತಾರ,ಪ್ರಭು ಬಡಿಗೇರ, ರಾಮು ಬಡಿಗೇರ, ಬಸವರಾಜ ಬಡಿಗೇರ, ಸುಭಾಸ ಬಡಿಗೇರ, ಮಂಜುನಾಥ ಬಡಿಗೇರ, ಚನ್ನಪ್ಪ ಪತ್ತಾರ, ಬಸನಗೌಡ ಪಾಟೀಲ, ತಹಸೀಲ್ದಾರ ಕಚೇರಿಯ ಸಿಬ್ಬಂದಿ ಇತರರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ವಿವಿಧ ಡಿಎಸ್ಎಸ್ ಮುಖಂಡರು ಕೇಕ್ ಕತ್ತರಿಸು ಮೂಲಕ ಗುರುವಾರ ಭೀಮಾ ಕೋರೆಗಾಂವ್ ವಿಜಯೋತ್ಸವ ದಿನವನ್ನು ಆಚರಿಸಿ ಡಾ.ಬಿ.ಆರ್.ಅಂಬೇಡ್ಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಡಿಎಸ್ಎಸ್ ಮುಖಂಡರಾದ ಅಶೋಕ ಚಲವಾದಿ, ಅರವಿಂದ ಸಾಲವಾಡಗಿ ಮಾತನಾಡಿ, ಡಾ.ಅಂಬೇಡ್ಕರ ಅವರಿಗೆ ಸಂವಿಧಾನ ಬರೆಯಲು ಸ್ಪೂರ್ತಿ ನೀಡಿದ ಸಂಗತಿಗಳಲ್ಲಿ ಭೀಮಾ ಕೋರೆಗಾಂವ್ ವಿಜಯ ಕೂಡಒಂದಾಗಿದೆ. ಪುಣೆ ಪ್ರದೇಶದಲ್ಲಿ ಪೇಶ್ವೆಗಳ ದೊಡ್ಡ ಸೈನ್ಯದ ಜೊತೆ ಕೋರೆಗಾಂವ್ ವೀರರು ಅವಿರತವಾಗಿ ಹೋರಾಟ ನಡೆಸಿ ಎರಡನೇ ಬಾಜಿರಾಯನ ಮಗನನ್ನು ಕೊಂದ ನೆನಪಿಗೆ ಈ ವಿಜಯೋತ್ಸವ ಆಚರಿಸಲಾಗುತ್ತಿದೆ. ಕ್ರೂರ ಜಾತಿ ಪದ್ಧತಿ, ಅಸ್ಪೃಶ್ಯತೆಯ ನಡುವೆಯೂ ದಲಿತರು ನಡೆಸಿದ ಹೋರಾಟ ಅಂಬೇಡ್ಕರ ಅವರ ಬದುಕಿಗೆ ತಿರುವು ಕೊಟ್ಟ ಸಂಗತಿಯಾಗಿದೆ.ಈ ಘಟನೆಯ ಹಿನ್ನೆಲೆ, ವಿದ್ಯಮಾನಗಳ ಕುರಿತು ಇಂದಿನ ತಲೆಮಾರಿಗೆ ತಲುಪಿಸುವ ಅಗತ್ಯವಿದೆ ಎಂದರು.ಈ ಸಂದರ್ಭದಲ್ಲಿ ಡಿಎಸ್ಎಸ್ ಮುಖಂಡರಾದ ತಮ್ಮಣ್ಣ ಕಾನಾಗಡ್ಡಿ, ಪ್ರಭು ದಳವಾಯಿ, ರಮೇಶ ಸಾಲೋಡಗಿ, ಸತ್ಯಪ್ಪ ಕಟ್ಟಿಮನಿ, ಮೌನೇಶ ಹೆಬ್ಬಾಳ, ಗಂಗಾ ನಂದಿ, ಜಯಶ್ರೀ ನಡುವಿನಮನಿ,…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಿಂದಗಿ ನಗರದ ಶಾಖಾ ವ್ಯಾಪ್ತಿಯಲ್ಲಿ ಮೇಘಾ ಮಾರ್ಟ್ ಕಟ್ಟಡ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ೧೦೦ಕೆವ್ಹಿಎ ಮನಗೂಳಿ ಹಾಗೂ ೧೦೦ಕೆವ್ಹಿಎ ಮನಗೂಳಿ ಐಪಿಡಿಎಸ್ ವಿದ್ಯುತ್ ಪರಿವರ್ತಕ ಸ್ಥಳಾಂತರ ಕಾಮಗಾರಿ ಕೈಗೆತ್ತಿಕೊಂಡಿರುವ ಕಾರಣ ಎಫ್-೦೧ ಸಿಂದಗಿ ನಗರ ಮಾರ್ಗದ ಮೇಲೆ ಬರುವ ಬಸವ ನಗರ, ಡಿಸಿಸಿ ಬ್ಯಾಂಕ್, ಶಾಸಕರ ಮನೆಯ ಸುತ್ತಮುತ್ತಲಿನ ಪ್ರದೇಶ ಹಾಗೂ ಬಸವೇಶ್ವರ ಬ್ಯಾಂಕ್, ಗೌಡರ ಓಣಿ, ತೆಕ್ಕಿಯಾ ಗಲ್ಲಿ ಮತ್ತು ಕಾಗಿ ಆಸ್ಪತ್ರೆಯವರೆಗೆ ಜ.೦೨ರಂದು ಬೆಳಿಗ್ಗೆ ೦೯ಗಂಟೆಯಿAದ ಸಾಯಂಕಾಲ ೬:೩೦ಗಂಟೆಯವರೆಗೆ ವಿದ್ಯುತ್ ವ್ಯತ್ಯೆಯವಾಗುವುದರಿಂದ ಸದರಿ ಮಾರ್ಗಗಳ ಮೇಲೆ ಬರುವ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಿಂದಗಿ ಹೆಸ್ಕಾಂ ಉಪ-ವಿಭಾಗದ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಕಲಚೇತನರು ಸಹ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ. ಎಲ್ಲರಂತೆ ಅವರಲ್ಲಿಯೂ ಸಾಮರ್ಥ್ಯ, ಪ್ರತಿಭೆಯಿದೆ ಎಂದು ತಾಲೂಕು ಪಂಚಾಯತ್ ಇಒ ರಾಮು ಅಗ್ನಿ ಹೇಳಿದರು.ಸಿಂದಗಿ ಪಟ್ಟಣದ ಚೆನ್ನವೀರ ಸ್ವಾಮೀಜಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಹಳೆ ಸಿಡಿಪಿಒ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಅಂಗವಿಕಲರ ರಾಜ್ಯ ಒಕ್ಕೂಟ, ವಿಜಯಪುರ ಜಿಲ್ಲಾ ಸಮಿತಿ ಹಾಗೂ ಸಿಂದಗಿ ತಾಲೂಕು ಘಟಕ ವತಿಯಿಂದ ಹಮ್ಮಿಕೊಂಡ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಕಲಚೇತರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯನಿರ್ವಹಿಸಬೇಕು. ತಾಪಂ ಇಲಾಖೆಯಲ್ಲಿ ಶೇ.೧೫ರಷ್ಟು ಮೀಸಲಾತಿ ಕ್ರಿಯಾಯೋಜನೆ ಮಾಡಿ ಸಾಧನ ಸಲಕರಣೆಗಳನ್ನು ವಿತರಣೆ ಮಾಡಿದ್ದೇವೆ ಎಂದರು.ಈ ವೇಳೆ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಘು ಹುಬ್ಬಳ್ಳಿ ಮಾತನಾಡಿ, ವಿಕಲಚೇತನರು ಸಮಾಜದಲ್ಲಿ ಅತ್ಯಂತ ಕೆಳಮಟ್ಟದಲ್ಲಿದ್ದು, ಅವರ ಸರ್ವಾಂಗೀಣ ಅಭಿವೃದ್ಧಿ ಮಾಡಬೇಕೆನ್ನುವ ಸಲುವಾಗಿ ಪ್ರತಿ ವರ್ಷ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.ಈ ವೇಳೆ ವಿಕಲಚೇತನ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಜಯಪುರ ಪ್ರಕಾಶ ಬಿರಾದಾರ, ಸಿಂದಗಿಯ ತಶ್ವೀನ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಬೆಂಗಳೂರಿನ ಯಲಹಂಕಾ ಬಳಿಯ ಕೋಗಿಲು ಲೇಔಟ್‌ನಲ್ಲಿ ಅಕ್ರಮವಾಗಿ ವಾಸವಾಗಿರುವ ಕುಟುಂಬಗಳ ಒತ್ತುವರಿ ತೆರವು ಕಾರ್ಯಾಚರಣೆ ಮಾಡುವಾಗ ಮುತವರ್ಜಿ ವಹಿಸುವ ಕಾಂಗ್ರೆಸ್ ಸರಕಾರ ಮುಳಗಡೆಯ ಸಂತ್ರಸ್ತರ ತ್ಯಾಗವನ್ನು ಮರೆತಂತೆ ಕಾಣುತ್ತದೆ ಅವರಿಗೆ ಸೂರು ನೀಡುವದರಲ್ಲಿ ಹಿಂದೆಟು ಹಾಕಿರುವ ಇಂಥಹ ಸರಕಾರಕ್ಕೆ ನಾಚಿಕೆ ಬರಬೇಕು ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಆರೋಪಿಸಿದರು.ಪಟ್ಟಣದ ಅವರ ಸ್ವಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಡಿಯಲ್ಲಿ ಮುಳಗಡೆಯಾಗಿ ನಿರಾಶ್ರಿತರಾಗಿರುವ ಮುಸ್ಲಿಂ ಸಮುದಾಯದ ದಲಿತ ಸಮುದಾಯದ ಅತ್ಯಂತ ಹಿಂದುಳಿದ ವರ್ಗಗಳ ಬಡಜನರು ಕೊಲ್ಹಾರ ಪುನರ್ವಸತಿ ಕೇಂದ್ರದಲ್ಲಿ ಕಳೆದ ೨೫ ವರ್ಷಗಳಿಂದ ಪತ್ರಾಸ ಸೆಡ್‌ನಲ್ಲಿ ಬಿಸಿಲು ಮಳೆ ಚಳಿ ಎನ್ನದೇ ಕುಟುಂಬ ಸಮೇತರಾಗಿ ವಾಸವಾಗಿರುವವರಿಗೆ ಮೂಲಭೂತ ಸೌಲಭ್ಯ ಒದಗಿಸಿ ಒಂದು ಸೂರು ಒದಗಿಸಿ ಕೊಡುವ ಸೌಜನ್ಯ ತೋರದೇ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಮತ್ತು ಈ ಕ್ಷೇತ್ರವನ್ನು ಪ್ರತಿನಿಧಿಸುವ ಸಚಿವ ಶಿವಾನಂದ ಪಾಟೀಲ ತಕ್ಷಣವೇ ರಾಜಿನಾಮೆ ಕೊಡಬೇಕು ಎಂದು ಒತ್ತಾಯಿಸಿದರು.ಕಾಂಗ್ರೆಸ್…

Read More