Author: editor.udayarashmi@gmail.com

ಆಲಮೇಲದಲ್ಲಿ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಸಚಿವ ಶಿವಾನಂದ ಪಾಟೀಲ ಕರೆ ವಿಜಯಪುರ: ರೈತರು ಹೊಸ ತಂತ್ರಜ್ಞಾನ ಹಾಗೂ ವೈಜ್ಞಾನಿಕತೆಯಿಂದ ಕೂಡಿದ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಅದರೊಂದಿಗೆ ಸಮಗ್ರ ಕೃಷಿ ಪದ್ಧತಿಯನ್ನು ಬಳಸಿಕೊಳ್ಳಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.   ಶನಿವಾರ ಆಲಮೇಲ ಪಟ್ಟಣದಲ್ಲಿ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರೈತರು ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು. ಒಂದೇ ಬೆಳೆಗ ಸೀಮಿತವಾಗದೆ ವಿವಿಧ ರೀತಿಯ ಬೆಳೆಗಳನ್ನು ಬೆಳೆಯಬೇಕು. ಅದರಲ್ಲಿ ಒಂದರ ಬೆಲೆ ಇಲ್ಲದಿದ್ದಲ್ಲಿ ಇನ್ನೊಂದು ಬೆಳೆಯ ಬೆಲೆ ಇರುತ್ತದೆ. ಸಮಗ್ರ ಕೃಷಿಗೆ ಹೆಚ್ಚು ಒತ್ತು ನೀಡಬೇಕು. ಮಳೆ ಕಡಿಮೆ ಆದ ಸಂದರ್ಭದಲ್ಲಿ ಕೂಡ ಅದಕ್ಕೆ ಹೊಂದುಕೊಳ್ಳುವಂತಹ ಬೇಸಾಯ ಪದ್ಧತಿಗಳನ್ನು ರೈತರು ರೂಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿದರು.ಕಾರ್ಯಕ್ರಮದಲ್ಲಿ ಆಲಮೇಲದ ಗುರುಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು, ಆಲಮೇಲ ದೇವರಗುಡ್ಡ ಗುರುಪೀಠದ…

Read More

ಸಿಂದಗಿ: ಕಂದಾಯ ಇಲಾಖೆಯ ಸೆಕ್ರೆಟೆಡ್ ಆಫೀಸಿನ ಉಲ್ಲೇಖದ ಮೇರೆಗೆ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಇಂಡಿ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿಸಬೇಕೆನ್ನುವ ಜನಾಭಿಪ್ರಾಯ ಸಂಗ್ರಹ ಮಾಡಲು ಸಭೆ ಕರೆಯಲಾಗಿದೆ. ಅದಕ್ಕೆ ಸಾಧಕ ಬಾಧಕಗಳನ್ನು ಚರ್ಚಿಸಿ ಅಭಿಪ್ರಾಯ ಮಂಡಿಸಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. ಕಾರಣ ಜ.೧೦ರ ಒಳಗಾಗಿ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಬೇಕು ಎಂದು ಇಂಡಿ ಉಪವಿಭಾಗಾಧಿಕಾರಿ ಚಂದ್ರಕಾಂತ ಗದ್ಯಾಳ ಹೇಳಿದರು.ಪಟ್ಟಣದ ತಾಪಂ ಸಭಾ ಭವನದಲ್ಲಿ ನಡೆದ ಇಂಡಿ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿಸಲು ಕರೆದ ಜನಾಭಿಪ್ರಾಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಾಸಕ ಅಶೋಕ ಮನಗೂಳಿ ಮಾತನಾಡಿ, ಸರಕಾರದಿಂದ ಬಂದ ವರದಿಯ ಬಗ್ಗೆ ಯಾರಿಗೂ ಸಂಪರ್ಕ ಮಾಡಿಲ್ಲ. ಹಿಂದೆ ಅಖಂಡ ಜಿಲ್ಲೆಯಲ್ಲಿ ೧೫ ತಾಲೂಕುಗಳಿದ್ದವು ಬಾಗಲಕೋಟ ಪ್ರತ್ಯೇಕ ಜಿಲ್ಲೆಯಾಗಿರುವುದರಿಂದ ಅಭಿವೃದ್ಧಿ ಕುಂಟಿತವಾಗಿತ್ತು ಜೆ.ಎಚ್.ಪಟೇಲ, ಎಚ್.ಡಿ.ಕುಮಾರಸ್ವಾಮಿಯವರು ಮತ್ತೆ ಹಲವು ತಾಲೂಕುಗಳನ್ನು ರಚನೆ ಮಾಡಿರುವುದರಿಂದ ಈ ಜಿಲ್ಲೆಗೆ ೧೩ ತಾಲೂಕುಗಳಾಗಿವೆ ಇವುಗಳಲ್ಲಿ ನೀರಾವರಿ, ರಾಷ್ಟ್ರೀಯ ಹೆದ್ದಾರಿಯಿಂದ ನಾಲ್ಕು ರಾಜ್ಯಗಳ ಸಂಪರ್ಕಕೊಂಡಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ತುಲನಾತ್ಮವಾಗಿ ನೋಡಿದಾಗ ಎಲ್ಲ…

Read More

ಸಿಂದಗಿ: ತಾಲೂಕಿನ ಮಂಗಳೂರು ಗ್ರಾಮದಲ್ಲಿ ಶ್ರೀ ಸಮರ್ಥ ಸದ್ಗುರು ಭೀಮಾಶಂಕರ ಮಹಾರಾಜರ ೬೯ನೆಯ ಪುಣ್ಯಾರಾಧನೆಯ ಪ್ರಯುಕ್ತ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದೆ.ತಾಲೂಕಿನ ಮಂಗಳೂರು ಗ್ರಾಮದ ಶ್ರೀ ಸಮರ್ಥ ಸದ್ಗುರು ಭೀಮಾಶಂಕರ ಮಹಾರಾಜರ ೬೯ನೇ ಪುಣ್ಯರಾಧನೆ ಪ್ರಯುಕ್ತ ನಿವೃತ್ತ ಶಿಕ್ಷಕ ವಿರೂಪಾಕ್ಷಪ್ಪ ಸಿಂಪಿ ರಚಿಸಿದ ಭವ ದಾಟುವ ದಾರಿ ಎಂಬ ಆಧ್ಯಾತ್ಮಿಕ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ಡಿ.೩೧ರಂದು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರದ ದಿವ್ಯ ಸಾನಿಧ್ಯ ಯಂಕಂಚಿಯ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ವಹಿಸುವರು. ಬಮ್ಮನಹಳ್ಳಿಯ ಶ್ರೀ ಸಮರ್ಥ ಸದ್ಗುರು ನರಸಿಂಹ ಮಹಾರಾಜರು ಅಧ್ಯಕ್ಷತೆ ವಹಿಸುವರು. ಮಂಗಳೂರಿನ ವೇ. ಮೂ. ಮಲ್ಲಯ್ಯ ಸಿದ್ದರಾಮಯ್ಯ ಹಿರೇಮಠ ಅವರು ಸಮ್ಮುಖ ವಹಿಸುವರು. ಘೋಡಗೇರಿಯ ಶಿವಾನಂದ ಮಠದ ಮಲ್ಲಯ್ಯ ಸ್ವಾಮಿಗಳು ನೇತೃತ್ವ ವಹಿಸುವರು. ನ್ಯಾಯವಾದಿ ಎನ್.ಎಸ್. ಹಿರೇಮಠ ಗ್ರಂಥ ಬಿಡುಗಡೆ ನೆರವೇರಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಕುಮಸಿಯ ಸದ್ಗುರು ರಘುನಾಥ್ ಭಟ್ ಜೋಶಿ, ವಿಠ್ಠಲ ಕೊಳ್ಳೂರ, ತದ್ದೇವಾಡಿಯ ಪುರಾಣ ಕೇಸರಿ ಮಹಾಂತೇಶ ಶಾಸ್ತ್ರಿಗಳು ಉಪಸ್ಥಿತರಿರುವರು.ಕಾರಣ ಸುತ್ತಮುತ್ತಲಿನ ಗ್ರಾಮಸ್ಥರು ಗ್ರಂಥ ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ…

Read More

ಸಿಂದಗಿ: ಬೆಂಗಳೂರಲ್ಲಿ ನಡೆದ ಕರವೇ ಬ್ರಹತ್ ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ನಾರಾಯಣ ಗೌಡರನ್ನು ಹಾಗೂ ಎಲ್ಲ ಕರವೇ ಕಾರ್ಯಕರ್ತರನ್ನು ರಾಜ್ಯ ಸರಕಾರ ಬಂಧನ ಮಾಡಿಸಿದೆ. ಕರ್ನಾಟಕದಲ್ಲಿ ಕನ್ನಡಿಗನಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಸಂತೋಷ್ ಡಂಬಳ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಿಂದಗಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಬೆಂಗಳೂರಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನು ಬಂಧಿಸಿದನ್ನು ಖಂಡಿಸಿ ಪ್ರತಿಭಟಿಸಿ ಮಾತನಾಡಿದ ಅವರು, ನಾರಾಯಣಗೌಡರು ತಮ್ಮ ಯಾವುದೇ ಸ್ವಾರ್ಥಿಕ್ಕಾಗಿ ಹೋರಾಟ ಮಾಡಿಲ್ಲ. ಈ ಕನ್ನಡ ನಾಡಿನ ಮಣ್ಣಿಗಾಗಿ, ಕನ್ನಡದ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಕನ್ನಡದ ಉಳಿವಿಗಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಅವರನ್ನು ಬಂದಿಸಿದ ಮಾತ್ರಕ್ಕೆ ಕರವೇ ಹೋರಾಟ ನಿಲ್ಲುತ್ತದೆ ಎನ್ನುವುದು ನಿಮ್ಮ ಮುಟ್ಟಾಳತನ. ನಮ್ಮ ಹೋರಾಟ ಯಾವತ್ತೂ ನಿಲ್ಲುವುದಿಲ್ಲ. ಸಿಂದಗಿಯ ಅಂಗಡಿ ಮಾಲೀಕರಿಗೆ ಕಳೆದ ದಿನಗಳಲ್ಲಿ ಕನ್ನಡ ನಾಮಫಲಕ ಕುರಿತು ಜಾಗ್ರತಿ ಮೂಡಿಸಿದ್ದೇವೆ. ವಿಶೇಷವಾಗಿ ಮಾರ್ವಾಡಿಗಳು ಎಚ್ಚೆತ್ತುಕೊಂಡು ನಿಮ್ಮ ನಾಮ ಫಲಕಗಳನ್ನು ಬದಲಾಯಿಸಿ ಅಚ್ಚ ಕನ್ನಡದ…

Read More

ಇಂಡಿ ಜಿಲ್ಲಾ ಕೇಂದ್ರವಾಗಿಸುವ ಅಭಿಪ್ರಾಯ ಸಂಗ್ರಹಣೆ ಸಭೆಯಲ್ಲಿ ೧೭ ಸಂಘಟನೆಗಳ ಮನವಿ ದೇವರಹಿಪ್ಪರಗಿ: ದೇವರಹಿಪ್ಪರಗಿ ತಾಲ್ಲೂಕು ಕೇಂದ್ರವನ್ನು ನೂತನ ಜಿಲ್ಲೆಯನ್ನಾಗಿ ಘೋಷಣೆ ಮಾಡಿ, ಇಲ್ಲವಾದಲ್ಲಿ ತಾಲ್ಲೂಕನ್ನು ವಿಜಯಪುರ ಜಿಲ್ಲೆಯಲ್ಲಿಯೇ ಮುಂದುವರೆಸಿ ಎಂದು ತಾಲ್ಲೂಕಿನ ೧೭ ಸಂಘಟನೆಗಳು ಮನವಿ ಸಲ್ಲಿಸಿ, ಒಕ್ಕೋರಲಿನ ಅಭಿಪ್ರಾಯ ವ್ಯಕ್ತಪಡಿಸಿದವು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಸೃಜಿಸುವ ಬಗ್ಗೆ ಅಭಿಪ್ರಾಯ ಸಂಗ್ರಹಣೆಗಾಗಿ ಇಂಡಿ ಉಪವಿಭಾಗಾಧಿಕಾರಿ ಅಬೀದ ಗದ್ಯಾಳ ಅಧ್ಯಕ್ಷತೆಯಲ್ಲಿ ಜರುಗಿದ ದೇವರಹಿಪ್ಪರಗಿ ತಾಲ್ಲೂಕು ಸಾರ್ವಜನಿಕರ ಸಭೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರು ಪಾಲ್ಗೊಂಡು ಅಭಿಪ್ರಾಯ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ತಾಲ್ಲೂಕು ವೈದ್ಯರ ಸಂಘದ ಅಧ್ಯಕ್ಷ ಆರ್.ಆರ್.ನಾಯಿಕ ಹಾಗೂ ಸದಯ್ಯನಮಠದ ವೀರಗಂಗಾಧರಶ್ರೀಗಳು ಮಾತನಾಡಿದರು.ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಎನ್. ಬಸವರೆಡ್ಡಿ, ತಾಲ್ಲೂಕು ರೈತ ಸಂಘದ ಅಜೀಜ್ ಯಲಗಾರ, ಜೆಡಿಎಸ್ ಪಕ್ಷದ ಸಾಯಬಣ್ಣ ಬಾಗೇವಾಡಿ, ಪಟ್ಟಣ ಪಂಚಾಯಿತಿ ಸದಸ್ಯ ಕಾಶೀನಾಥ ಜಮಾದಾರ, ದಲಿತ ಸಂಘರ್ಷ ಸಮೀತಿಯ ಹುಯೋಗಿ ತಳ್ಳೋಳ್ಳಿ, ಪ್ರಕಾಶ…

Read More

ವಿಜಯಪುರ: ವೇದಗಳ ಸಾರವನ್ನು, ಬಸವಾದಿ ಶರಣರ ವಚನಗಳ ಆಶಯವನ್ನು ಕಥೆಗಳ ಮೂಲಕ ವಿವರಿಸಿ ಮಹಾನ್‌ ಉದಾತ್ತ ಚಿಂತನೆಗಳು, ಆದರ್ಶಗಳು ಮನಸಿಗೆ ನಾಟುವಂತೆ ಮಾಡುವ ಅದ್ಭುತ ಶಕ್ತಿ ಶ್ರೀಗಳಲ್ಲಿತ್ತು ಎಂದುಭಾಲ್ಕಿಯ ಗೋರಚಿಂಚೋಲಿ ಮಠದ ಸಿದ್ದರಾಮೇಶ್ವರ ಪಟ್ಟದೇವರು ಹೇಳಿದರು.ಅವರು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಂಜೆ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ವಿಶ್ವದ ವಿವಿಧ ದಾರ್ಶನಿಕರ ದರ್ಶನ, ಚಿಂತಕರ ಉದಾತ್ತ ಚಿಂತನೆಗಳನ್ನು ಸುಲಲಿತವಾಗಿ ಹೇಳುವ ಪೂಜ್ಯರು ಸಾಧಕರಿಗೆ ಸನ್ಮಾರ್ಗ ತೋರುವ ದಾರಿದೀಪವಾಗಿದ್ದರು ಎಂದು ಹೇಳಿದರು.ನಾಗಠಾಣದ ಕಲ್ಲಯಾರೂಢ ಮಠದ ಪ್ರಜ್ಞಾನಂದ ಸ್ವಾಮೀಜಿ ಮಾತನಾಡಿದರು.ಶಿಕ್ಷಕ ಸಾಹಿತಿ ಸಂತೋಷ ಬಂಡೆ ಮಾತನಾಡಿದರು.ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಅಧ್ಯಕ್ಷತೆ ವಹಿಸಿದ್ದರು.ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಿದ್ದೇಶ್ವರ ಶ್ರೀಗಳ ಭಾವಚಿತ್ರ ಮೆರವಣಿಗೆಯ ಜೊತೆಗೆ ಮಕ್ಕಳು ಪುಸ್ತಕದ ಕಟ್ಟುಗಳನ್ನು ತಲೆಯ ಮೇಲೆ ಹೊತ್ತು ಸಾಗಿದ್ದು ವಿಶೇಷವಾಗಿತ್ತು.ಶಾಲಾ ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ,ಸಂಸ್ಥೆಯ ಕಾರ್ಯದರ್ಶಿ ಸುನಂದಾ ಹುಣಶ್ಯಾಳ, ಶಿಕ್ಷಕರಾದ ಎಂ ಎಸ್ ಪಾಪನಾಳಮಠ, ರಾಘವೇಂದ್ರ ಮೊಗಳ,…

Read More

ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ಎಸ್.ಪಿ. ಕಾಮರ್ಸ್ ಕಾಲೇಜಿನ ಬಿಬಿಎ ವಿಭಾಗ ಇಂದು ಶುಕ್ರವಾರ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿದ್ದ ಜಿಲ್ಲಾ ಮಟ್ಟದ ಮಂಚ್- ಮಚ್ಚಾ ವೃತ್ತಿಪರ ಸ್ಪರ್ಧೆಯಲ್ಲಿ ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ ತಂಡ ಸಮಗ್ರ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಬಿ.ಎಲ್.ಡಿ.ಇ ಸಂಸ್ಥೆಯ ಹೊಸ ಆವರಣದಲ್ಲಿರುವ ಬಿಬಿಎ ಕಾಲೇಜಿನಲ್ಲಿ ನಡೆದ ಈ ವೃತ್ತಿಪರ ಸ್ಪರ್ಧೆಯಲ್ಲಿ ರ್ಯಾಂಪ್ ವಾಕ್, ಟೀಮ್ ಬಿಲ್ಡಿಂಗ್, ರಸಪ್ರಶ್ನೆ, ಅಡುಗೆ, ಛಾಯಾಚಿತ್ರ ಸ್ಪರ್ಧೆಗಳು ನಡೆದವು. ಜಿಲ್ಲೆಯ ನಾನಾ ಭಾಗಗಳಿಂದ 29 ಪಿಯು ಕಾಲೇಜುಗಳ ಸುಮಾರು 500 ಜನ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡರು. ಒಟ್ಟು ಐದು ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಸ್ಥಾನ ಪಡೆದವರಿಗೆ ರೂ. 2000 ಮತ್ತು ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ರೂ.1000 ನಗದು ಬಹುಮಾನ ನೀಡಲಾಯಿತು. ಈ ಸ್ಪರ್ಧೆಗಳಲ್ಲಿ ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜು ಮತ್ತು ಎ.ಎಸ್.ಪಾಟೀಲ ಕಾಮರ್ಸ್…

Read More

ವಿಜಯಪುರ: ಇಸ್ರೋ ಮಾಜಿ ಅಧ್ಯಕ್ಷ ಪ್ರೊ. ಎ. ಎಸ್. ಕಿರಣಕುಮಾರ ಅವರು ಇಂದು ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದರುಈ ಸಂದರ್ಭದಲ್ಲಿ ಪ್ರೊ. ಎ.ಎಸ್. ಕಿರಣಕುಮಾರ ಅವರನ್ನು ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಸಮಕುಲಪತಿ ಡಾ. ಅರುಣ ಸಿ ಇನಾಮದಾರ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡಿದ ಪ್ರೊ. ಎ.ಎಸ್. ಕಿರಣಕುಮಾರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಇತ್ತೀಚಿನ ಸಾಧನೆಗಳು, ಬಾಹ್ಯಾಕಾಶ ತಂತ್ರಜ್ಞಾನದಲ್ಲಿನ ನಡೆದಿರುವ ಪ್ರಗತಿ ಮತ್ತು ಭಾರತದ ಬಾಹ್ಯಾಕಾಶ ಪರಿಶೋಧನೆ ಪ್ರಯತ್ನಗಳ ಭವಿಷ್ಯ ಪಥದ ಒಳನೋಟಗಳನ್ನು ಹಂಚಿಕೊಂಡರು. ಅಲ್ಲದೇ, ಬಾಹ್ಯಾಕಾಶ ಸಂಶೋಧನೆಯಲ್ಲಿನ ಅನ್ವೇಷಣೆಯ ಸಂದರ್ಭದಲ್ಲಿ ಇಸ್ರೋ ಎದುರಿಸಿದ ಸವಾಲುಗಳು ಮತ್ತು ಯಶಸ್ಸಿನ ಕುರಿತು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ, ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ,…

Read More

ಆಲಮಟ್ಟಿ: ಮಕ್ಕಳಲ್ಲಿ ಗಣಿತ ಕೌಶಲ್ಯ ಬೆಳೆಸಿ, ಮಕ್ಕಳಲ್ಲಿ ಸಾಮರ್ಥ್ಯವಾರು ಕಲಿಕಾ ಹಿಂದುಳಿಯುವಿಕೆಯನ್ನು ಗುರುತಿಸಲು ಗಣಿತ ಕಲಿಕಾ ಆಂದೋಲನದ ಸ್ಪರ್ಧೆಗಳು ಪೂರಕವಾಗಿವೆ ಎಂದು ನಿಡಗುಂದಿ ವಲಯದ ಶಿಕ್ಷಣ ಸಂಯೋಜಕ ಉದಯಕುಮಾರ ಬಶೆಟ್ಟಿ ಅಭಿಪ್ರಾಯಪಟ್ಟರು.ಸಮೀಪದ ಬೇನಾಳ ಆರ್.ಎಸ್. ಗ್ರಾಮದ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಅಕ್ಷರ ಫೌಂಡೇಶನ್ ಸಹಯೋಗದಲ್ಲಿ ಶುಕ್ರವಾರ ನಡೆದ ಬೇನಾಳ ಆರ್.ಸಿ. ಪಂಚಾಯ್ತಿ ಮಟ್ಟದ ಮಕ್ಕಳ ಗಣಿತ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಪ್ರಾಥಮಿಕ ಹಂತದಲ್ಲಿ ಸರಳ ಲೆಕ್ಕಾಚಾರ ಮಾಡಲು ಮಕ್ಕಳಲ್ಲಿ ಕಲಿಕೆ ಮಾಡಿಸುವುದು ಅಗತ್ಯ. ಅದಕ್ಕೆ ಪೂರಕವಾಗಿ ಈ ಗಣಿತ ಕಲಿಕಾ ಆಂದೋಲನ ನೆರವಾಗುತ್ತದೆ. ಮಕ್ಕಳಲ್ಲಿ ಗಣಿತ ಸ್ಪರ್ಧೆಯ ಮನೋಭಾವನೆ ಮೂಡಿಸಲಿದೆ ಎಂದರು.ಸಮೂಹ ಸಂಪನ್ಮೂಲ ವ್ಯಕ್ತಿ ಸುರೇಶ ಹುರಕಡ್ಲಿ ಮಾತನಾಡಿದರು.ಪಿಡಿಓ ಬಾದಶಹಾ ಖೀಜಿ, ಮುಖ್ಯ ಶಿಕ್ಷಕ ಹನುಮಂತಪ್ಪ ಇಲ್ಯಾಳ, ರವಿ ಬಿರಾದಾರ, ರಾಘವೇಂದ್ರ ವಂದಗನೂರ, ಚಂದ್ರಶೇಖರ ಕೋಳೇಕರ, ಉತ್ತಮ ಪತ್ತಾರ, ಎನ್.ಬಿ. ಭಜಂತ್ರಿ, ಎಸ್.ಡಿ. ಸಂತೇವೂರ, ಗೀತಾ ಹತ್ತರಕಿಹಾಳ, ಪ್ರಭಾಕರ ಹೆಬ್ಬಾಳ, ಎನ್.ಬಿ.…

Read More