Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ತಾಲೂಕಿನ ವಡವಡಗಿ ಗ್ರಾಮದಲ್ಲಿ ಕಾರ್ಯಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಪರವಾನಗಿ ಭೂಮಾಪಕರ ಮೇಲೆ ನಡೆದಿರುವ ಹಲ್ಲೆ ಖಂಡನೀಯ. ಭೂಮಾಪಕರಿಗೆ ಕಾರ್ಯಕ್ಷೇತ್ರದಲ್ಲಿ ಸರ್ಕಾರ ಸೂಕ್ತ ಭದ್ರತೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗುರುವಾರ ಭೂಮಾಪಕರು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ಮನವಿ ಸಲ್ಲಿಸಿದರು.ಅವರು ಸಲ್ಲಿಸಿದ ಮನವಿಯಲ್ಲಿ ತಾಲೂಕಿನ ವಡವಡಗಿ ಗ್ರಾಮದ ಸರ್ವೆ ನಂ.೧೫೬/೧ ರಲ್ಲಿ ತಕರಾರು ಪ್ರಕರಣದ ಅಳತೆ ಕಾರ್ಯಕ್ಕೆ ಪರವಾನಗಿ ಭೂಮಾಪಕರಾದ ಶಿವರಾಜ ಚೌಧರಿ ಅವರು ಹೋದ ಸಂದರ್ಭದಲ್ಲಿ ಏಕಾಏಕಿ ಭೂಮಾಪಕರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಜರುಗಿದೆ. ಈ ಭೂಮಾಪಕರ ಮೇಲೆ ಹಲ್ಲೆ ಮಾಡಿರುವ ವ್ಯಕ್ತಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು.ಭೂಮಾಪಕರು ತಮ್ಮ ಕಾರ್ಯಕ್ಷೇತ್ರಕ್ಕೆ ಹೋದ ಸಂದರ್ಭದಲ್ಲಿ ಯಾವುದೇ ಸೇವಾ ಭದ್ರತೆ ಇಲ್ಲದೇ ಕಾರ್ಯನಿರ್ವಹಿಸುವಂತಾಗಿದೆ. ತಕರಾರು ಪ್ರಕರಣಗಳನ್ನು ಪರವಾನಗಿ ಭೂಮಾಪಕರಿಗೆ ಹಂಚಿಕೆ ಮಾಡಲಾಗುತ್ತಿದೆ. ಕೆಲವು ತಕರಾರು ಪ್ರಕರಣಗಳ ಅಳತೆ ಕಾರ್ಯ ಕಷ್ಟ ಸಾಧ್ಯವಾಗಿದೆ. ಈ ತಕರಾರು ಪ್ರಕರಣಗಳಿಗೆ ಬೇಕಾದ ಬಾಂದ ಜವಾನರು, ಸೇವಾ ಭದ್ರತೆ…
ರಾಜ್ಯದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 702 ಕ್ಕೇರಿಕೆ | ಸೋಂಕಿಗೆ ಬಲಿಯಾದವರ ಸಂಖ್ಯೆ ೧೦ ಕ್ಕೇರಿಕೆ ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ 173 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಎರಡು ಕೊರೋನವೈರಸ್ ಸಂಬಂಧಿತ ಸಾವುಗಳು ವರದಿಯಾಗಿವೆ.ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಶುಕ್ರವಾರ 173 ಹೊಸ ಕೋವಿಡ್ -19 ಸೋಂಕು ಪ್ರಕರಣಗಳ ದಾಖಲಾತಿಯೊಂದಿಗೆ ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 702ಕ್ಕೆ ಏರಿದೆ. ಈ ಪೈಕಿ 649 ಜನರು ಮನೆಯಲ್ಲಿ ಪ್ರತ್ಯೇಕವಾಗಿರುತ್ತಾರೆ ಮತ್ತು ಉಳಿದ 53 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಂತೆಯೇ ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 10ಕ್ಕೇರಿದೆ. ಮೃತರು ಕ್ರಮವಾಗಿ 59 ಮತ್ತು 69 ವರ್ಷ ವಯಸ್ಸಿನವರಾಗಿದ್ದಾರೆ, ಇಬ್ಬರೂ ಬೆಂಗಳೂರು ನಗರ ಜಿಲ್ಲೆಯಲ್ಲಿ ದಾಖಲಾಗಿದ್ದಾರೆ. ಇಬ್ಬರಿಗೂ ಜ್ವರ ಮತ್ತು ಕೆಮ್ಮಿನ ಲಕ್ಷಣಗಳಿತ್ತು ಎಂದು ಹೇಳಲಾಗಿದೆ.ಕಳೆದ 24 ಗಂಟೆಗಳಲ್ಲಿ 37 ಸೋಂಕಿತರು ಚೇತರಿಸಿಕೊಂಡಿದ್ದು, ಒಟ್ಟು 8,349…
“ಯುವಕರು ಮತ್ತು ದೇಶಪ್ರೇಮ” ಗೋಷ್ಠಿ ಉದ್ಘಾಟಿಸಿದ ಸಂಸದ ತೇಜಸ್ವಿ ಸೂರ್ಯ ಅಭಿಮತ ವಿಜಯಪುರ: ನಾನು ಶ್ರೀ ಸಿದ್ಧೇಶ್ವರ ಅಪ್ಪನವರನ್ನು ಭೇಟಿಯಾಗಿದ್ದು ಕೆಲವೇ ನಿಮಿಷಗಳು ಮಾತ್ರ. ಆದರೆ ಅವರ ಸಂದೇಶಗಳು ನನ್ನ ಜೀವನದ ಮೇಲೆ ಬೀರಿದ ಪ್ರಭಾವ ಅಪಾರ. ಈ ಕಾರ್ಯಕ್ರಮದಲ್ಲಿ ಬಾಗಿಯಾಗಿದ್ದು ನನ್ನ ಭಾಗ್ಯ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.ನಗರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳವರ ಗುರುನಮನ ಮಹೋತ್ಸವ ಅಂಗವಾಗಿ “ಯುವಕರು ಮತ್ತು ದೇಶಪ್ರೇಮ” ಎಂಬ ವಿಷಯದ ಕುರಿತು ಹಮ್ಮಿಕೊಂಡಿದ್ದ ೭ನೇ ಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶ್ರೀ ಸಿದ್ಧೇಶ್ವರ ಅಪ್ಪನವರು ತಮ್ಮ ಬದುಕೇ ಒಂದು ಸಂದೇಶವೆಂಬಂತೆ ಬದುಕಿದವರು. ಬಿಜ್ಜರಗಿ ಎಂಬ ಒಂದು ಸಣ್ಣ ಗ್ರಾಮದಲ್ಲಿ ಹುಟ್ಟಿ ಸದಾ ಜನರಿಗಾಗಿ ಬದುಕಿ ಇಂದು ದೇವರಾಗಿದ್ದಾರೆ. ಒಬ್ಬ ಮನುಷ್ಯ ಒಳ್ಳೆಯ ಕೆಲಸಗಳನ್ನು ಮಾಡುವ ಮೂಲಕ ದೇವರಾಗಬಹುದೆಂಬುದು ತೋರಿಸಿಕೊಟ್ಟವರು ಮತ್ತು ಸನ್ಯಾಸಿ ಎನ್ನುವವರು ಹೇಗಿರಬೇಕು ಎಂದು ತೋರಿಸಿಕೊಟ್ಟವರು. ಅಜಾರಮರ ಅಮರತ್ವಕ್ಕೆ ಸಾಕ್ಷಿಯಾದಂತವರು ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರು ಎಂದು ಹೇಳಿದರು.ಹಂಚಿನಾಳ ಭಕ್ತಿ ಯೋಗಾಶ್ರಮದ…
ಕೊಲ್ಹಾರ: ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮಿಗಳು ಅಧ್ಯಾತ್ಮದ ಒಲುವಿನ ಜೊತೆಗೆ ಜ್ಞಾನದ ಬುತ್ತಿಯನ್ನು ನಾಡಿನ ದೇಶದ ಮತ್ತು ವಿದೇಶದಲ್ಲಿರುವ ಪ್ರಜೆಗಳಿಗೆ ಉಣಬಡಿಸಿದ ಆಧುನಿಕ ಜಗದ ಸಂತರಾಗಿದ್ದರು ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.೨೦೨೪ರ ಜನವರಿ ತಿಂಗಳ ೧ & ೨ ತಾರೀಖಿನಂದು ಶ್ರೀಗಳು ಲಿಂಗೈಕ್ಯರಾದ ಪ್ರಯುಕ್ತ ನಡೆಯುತ್ತಿರುವ ಗುರು ನುಡಿ ನಮನ ಕಾರ್ಯಕ್ರಮದ ಅಂಗವಾಗಿ ಕೊಲ್ಹಾರ ರೈತ ಭಾಂದವರು ೫ ಕ್ವಿಂಟಾಲ್ ಬುಂದೆ ಅನ್ನಪ್ರಸಾದ ವ್ಯವಸ್ಥೆಯನ್ನು ವಿಜಯಪುರದ ಜ್ಞಾನಯೋಗಾಶ್ರಮಕ್ಕೆ ಕಳಿಸಿಕೊಡುವ ಕಾರ್ಯಕ್ರಮಕ್ಕೆ ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನದ ಮುಂದೆ ಚಾಲನೆ ನೀಡಿ ವರದಿಗಾರರೊಂದಿಗೆ ಅವರು ಮಾತನಾಡಿದರು.ಶ್ರೀಗಳ ನುಡಿನಮನ ಕಾರ್ಯಕ್ರಮವು ರಾಜ್ಯಾದ್ಯಂತ ಆಚರಣೆಯಾಗುವದರ ಜೊತೆಗೆ ಇಂದಿನ ಯುಗದ ಜನರಿಗೆ ಅವರು ಹೇಳಿರುವ ಪ್ರವಚನಗಳ ಜ್ಞಾನಗಂಗೆಯ ವಿಡಿಯೋ ದ್ವನಿಸುರುಳಿಗಳನ್ನು ಪ್ರತಿಯೊಬ್ಬರು ಆಲಿಸುವಂತಾಗಲು ಪಠ್ಯಪುಸ್ತಕಗಳಲ್ಲಿಯೂ ಕೂಡ ಸಿದ್ದೇಶ್ವರ ಮಹಾಸ್ವಾಮಿಗಳು ನಡೆದು ಬಂದ ಜೀವನ ಚರಿತ್ರೆ ಪಾಠ ಬೋಧನೆಯಾಗಲು ಸರಕಾರ ಕ್ರಮಕೈಗೊಳ್ಳಬೇಕು ಎಂದು ಬೆಳ್ಳುಬ್ಬಿಯವರು ಹೇಳಿದರು.ಅರಮನೆಯಂತಹ ಮನೆಗೆ ಆಸೆ ಪಡದೇ ದುಡ್ಡಿನ ವ್ಯಾಮೋಹದಿಂದ ದೂರ ಸರಿದು ಆಸೆಯೆಂಬ ಅಭಿಲಾಷೆಯನ್ನು ವ್ಯಕ್ತಪಡಿಸದೇ…
ಕೊಲ್ಹಾರ: ಪ್ರತಿಯೊಬ್ಬ ಮಾನವನು ಸಮಾಜದಲ್ಲಿ ಬದುಕುವಾಗ ಸಂಸ್ಕಾರ, ಸಂಸ್ಕೃತಿ, ಧರ್ಮ ಆಚರಣೆ, ನಡೆ ನುಡಿಯಲ್ಲಿ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡು ಕುಟುಂಬ ವ್ಯವಸ್ಥೆಯನ್ನು ಉತ್ತುಂಗ ಶಿಖರಕ್ಕೆ ಒಯ್ಯುವ ಉದಾತ್ತ ಚಿಂತನೆಯ ಮನೋಭಾವನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಬೇಲೂರು & ಕೊಲ್ಹಾರ ಹಿರೇಮಠದ ಪೀಠಾಧೀಕಾರಿ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು.ಶುಕ್ರವಾರ ಹಿರೇಮಠದಲ್ಲಿ ಹಮ್ಮಿಕೊಂಡ ವಿಶ್ವ ಮಾನವ ದಿನಾಚರಣೆಯ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ಇಂದಿನ ಸಮಾಜದಲ್ಲಿ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಯುವ ಸಮೂಹ ಮಧ್ಯ ಸೇವನೆ, ಮಾದಕ ದ್ರವ್ಯ, ಬೀಡಿ ಸಿಗರೇಟ ತಂಬಾಕು ಭಂಗಿ ಸೇವನೆ ಮಾಡುವದರ ಜೊತೆಗೆ ವಿವಿಧ ತರಹದ ಜೂಜಾಟಗಳಲ್ಲಿ ತೊಡಗಿಕೊಂಡು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವವರಲ್ಲದೇ ಕುಟುಂಬದ ನೆಮ್ಮದಿಯನ್ನು ಕಳೆಯುತ್ತಿರುವದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದರು.ದುಶ್ಚಟಗಳಿಗೆ ಬಲಿಯಾಗಿ ತಾವು ಮಾಡಿದ ದುಡಿಮೆಯ ಹಣ ತಂದೆ ತಾಯಿಗಳ ಕೂಡಿಟ್ಟ ಹಣ ವ್ಯಯವಾಗುವದಲ್ಲದೇ ದೇಹಾರೊಗ್ಯ ಮಾನಸಿಕ ಖಿನ್ನತೆ ಬೌದ್ದಿಕ ಆರೋಗ್ಯವನ್ನು ಕೆಡಿಸಿಕೊಂಡು ಕ್ಷಣ ಕ್ಷಣಕ್ಕೂ ದುಖಃ ಸಂಕಟದ ಯಾತನೆ ಅನುಭವಿಸುವರು. ಅಷ್ಟೇ ಅಲ್ಲದೇ ಮನೆಗಳಿಗೆ ಮಹಾಮಾರಿಯಾಗಿ ಸಮಾಜಕ್ಕೆ…
ಇಂಡಿ ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ಕಾರ್ಯನಿರತ ಪರ್ತಕರ್ತರ ಸಂಘದಿಂದ ಪ್ರತಿಭಟನೆ ಇಂಡಿ: ಇಂಡಿ ಜಿಲ್ಲೆಯಾಗಿ ಪರಿವರ್ತನೆ ಮಾಡಬೇಕೆಂದು ಆಗ್ರಹಿಸಿ ಗುರುವಾರ ಇಂಡಿಯ ಕಾರ್ಯನಿರತ ಪರ್ತಕರ್ತರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ನಂತರ ಮಿನಿ ವಿಧಾನಸೌಧ ತಲುಪಿ ಅಲ್ಲಿ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರಿಗೆ ಮನವಿ ಸಲ್ಲಿಸಲಾಯಿತು.ಪತ್ರಕರ್ತರಾದ ಅಬುಶಾಮ ಹವಾಲ್ದಾರ, ರಾಜಕುಮಾರ ಚಾಬುಕಸವಾರ, ಶಂಕರಲಿಂಗ ಜಮಾದಾರ ಮಾತನಾಡಿ ೧೯೯೬ ರಲ್ಲಿ ಜೆ.ಎಚ್.ಪಟೇಲ ಮುಖ್ಯಮಂತ್ರಿಗಳಿದ್ದಾಗ ವಿಜಯಪುರ ಜಿಲ್ಲೆಯನ್ನು ವಿಭಜಿಸಿ ಬಾಗಲಕೋಟ ಜಿಲ್ಲೆಯಾಗಿ ಮಾಡಿದರು. ಈಗ ಅದೇ ಮಾದರಿಯಲ್ಲಿ ಸಿದ್ದರಾಮಯ್ಯನವರು ಇಂಡಿ ಜಿಲ್ಲೆಯಾಗಿ ಮಾಡಲು ಆಗ್ರಹಿಸಿದರು.ದೇಶದಲ್ಲಿ ಮೊದಲು ಇದ್ದ ರಾಜ್ಯಕ್ಕಿಂತ ಅಭಿವೃದ್ಧಿಗಾಗಿ ಹೆಚ್ಚು ರಾಜ್ಯಗಳನ್ನು ಮಾಡಿದ್ದಾರೆ. ಉತ್ತರಾಂಚಲ,ಛತ್ತಿಸಗಡ,ತೆಲಂಗಾಣ ರಾಜ್ಯಗಳು ಬೇರ್ಪಡೆಯಾದ ನಂತರ ತೀವ್ರ ಅಭಿವೃದ್ದಿ ಕಂಡಿವೆ. ಅದರಂತೆ ಕರ್ನಾಟಕಲ್ಲೂ ಮೊದಲು ಇದ್ದ ಜಿಲ್ಲೆ ಹೆಚ್ಚಿಗೆ ಮಾಡಿ ಬಾಗಲಕೋಟ, ಯಾದಗಿರಿ ಸೇರಿದಂತೆ ಮಾಡಿದ್ದರಿಂದ ಅವು ಹೆಚ್ಚು ಪ್ರಗತಿಯಲ್ಲಿವೆ. ಹೀಗಾಗಿ ಪ್ರಗತಿಯ ದೃಷ್ಠಿಯಿಂದ ಇಂಡಿ ಜಿಲ್ಲೆ ಮಾಡಿದರೆ ಈ ಭಾಗ ಅಭಿವೃದ್ದಿ ಕಾಣಲು ಸಾಧ್ಯ ಎಂದರು.ಉತ್ತರ ಪ್ರದೇಶದಲ್ಲಿ…
ಇಂಡಿ: ವಿದ್ಯಾರ್ಥಿಗಳು ತಮಗೆ ಕಲಿಸಿದ ಗುರುವಿಗಿಂತ ಹೆಚ್ಚಿನ ಸಾಧನೆ ಮಾಡಿದರೆ ಅದೇ ಗುರುವಿಗೆ ನೀಡುವ ಮಹತ್ವದ ಗುರುಕಾಣಿಕೆ. ಹೆತ್ತ ತಾಯಿ ಹೊತ್ತ ನಾಡನ್ನು ಎಂದೂ ಮರೆಯಬಾರದು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಧರ ನಡಗಡ್ಡಿ ಹೇಳಿದರು.ಅವರು ತಾಲೂಕಿನ ತಾಂಬಾ ಗ್ರಾಮದ ಶ್ರೀ ಸಂಗನಬಸವೇಶ್ವರ ಪ್ರೌಢ ಶಾಲೆಯ ೧೯೯೮-೯೯ನೇ ಬ್ಯಾಚಿನ ಹಳೆಯ ವಿದ್ಯಾರ್ಥಿಗಳಿಂದ ಪ್ರೊಜೆಕ್ಟರ್ ಕೊಡುಗೆ ಹಾಗೂ ಗುರುವಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಯಾವುದೇ ಪಲಾಪೇಕ್ಷೆ ಇಲ್ಲದೆ ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಸೇವೆ ಸಲ್ಲಿಸುವ ಗುರುಗಳಿಗಾಗಿ ಗುರುವಂದನೆ ಕಾರ್ಯಕ್ರಮ ಆಯೋಜಿಸಿರುವದು ಹಾಗೂ ಪ್ರೊಜೆಕ್ಟರ್ ಕೊಡುಗೆಯಾಗಿ ನೀಡಿರುವದು ಶ್ಲಾಘನಿಯ ಎಂದರು.ಶ್ರೀಶಾಂತೇಶ್ವರ ಬ್ಯಾಂಕಿನ ವ್ಯವಸ್ಥಾಪಕ ಬಸವರಾಜ ರೊಟ್ಟಿ ಮಾತನಾಡಿದರು.ನಿವೃತ್ತ ಶಿಕ್ಷಕ ಜೆ.ಆರ್. ಪೂಜಾರಿ, ಶಿಕ್ಷಕಿ ಪಿ.ಬಿ. ಕಾಡಯ್ಯನಮಠ, ಮುಖ್ಯ ಗುರುಗಳಾದ ಎಸ್.ಎಮ್. ಚವ್ಹಾಣ, ಯುವರಾಜ ಪಡಗಣ್ಣವರ, ಜಿ.ಎಸ್. ಹಿರೇಮಠ ಮಾತನಾಡಿದರು.ನಿವೃತ್ತ ಶಿಕ್ಷಕ ಎಸ್.ಸಿ. ನಿಂಬಾಳ ಪ್ರೊಜೆಕ್ಟರ್ ಉದ್ಘಾಟಿಸಿದರು. ಸಂಸ್ಥೆಯ ಚೇರಮನ್ ಈರಣ್ಣ ಕಿಣಗಿ ಅಧ್ಯಕ್ಷತೆವಹಿಸಿದ್ದರು. ಪ್ರಾಚಾರ್ಯ ಸಿ.ಎಸ್. ಕಣಮೇಶ್ವರ, ಮಲಕಪ್ಪ ಸೋಮನಿಂಗ, ಪರಸು ಪಾಟೀಲ, ಬಾಬು ಕನೋಜಿ, ಆಯ್.ಸಿ. ಕಂಬಾರ, ರವಿ…
ಇಂಡಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಲಿತ ಸೇನೆಯ ಪದಾಧಿಕಾರಿಗಳನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಜಿಲ್ಲಾ ಅಧ್ಯಕ್ಷ ಖಾಜು ಹೊಸಮನಿ ಅವರ ನೇತೃತ್ವದಲ್ಲಿ ತಾಲೂಕು ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಇಂಡಿ ತಾಲೂಕು ಅಧ್ಯಕ್ಷರನ್ನಾಗಿ ಮಡೆಪ್ಪ ಚೋರಗಿ ಉಪಾಧ್ಯಕ್ಷರಾಗಿ ಸಂದೀಪ ಕಾಳೆ ಅವರನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಖಾಜು ಹೊಸಮನಿ, ಅರವಿಂದ ವಠಾರ, ಸುಭಾಸ ತಳವಾರ, ಮಾದೇಶ, ಅಕ್ಷಯ ಹಾದಿಮನಿ, ಸಂತೋಷ ಕಾಳೆ ಮತ್ತಿತರಿದ್ದರು.
ಇಂಡಿ: ಇಂಡಿ ತಾಲೂಕು ಜಿಲ್ಲೆಯಾಗಿ ಪರಿವರ್ತನೆ ಮಾಡುವ ಕುರಿತು ಅಭಿಪ್ರಾಯ ಸಂಗ್ರಹಿಸಲು ಡಿ. ೩೦ ರಂದು ಪಟ್ಟಣದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಗುರುಭವನದಲ್ಲಿ ಬೆಳಗ್ಗೆ ೧೧ ಗಂಟೆಗೆ ಸಭೆ ಕರೆಯಲಾಗಿದೆ.ಸಭೆಯ ಅಧ್ಯಕ್ಷತೆ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ವಹಿಸುವರು.ಆಸಕ್ತರು, ತಮ್ಮ ಅಭಿಪ್ರಾಯ ತಿಳಿಸಲು ಸಭೆಯಲ್ಲಿ ಪಾಲ್ಗೊಳ್ಳಲು ತಹಸೀಲ್ದಾರ ಬಿ.ಎಸ್.ಕಡಕಬಾವಿ ತಿಳಿಸಿದ್ದಾರೆ.
ಇಂಡಿ: ಪಟ್ಟಣದ ಗುರುಭವನದಲ್ಲಿ ಡಿ. ೩೦ ರಂದು ವಿಶೇಷ ಪಿಂಚಣಿ ಅದಾಲತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಂದಾಯ ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದ್ದಾರೆ.ಈ ಕುರಿತು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ನಾಗರಿಕರು ಸಾಕಷ್ಟು ಬಾರಿ ಕಚೇರಿಗಳೀಗೆ ಅಲೆದಾಡುತ್ತಿರುವುದು ಕಂಡು ಬಂದಿದ್ದು ಅವರನ್ನೊಳಗೊಂಡಂತೆ ಪಿಂಚಣಿಗೆ ಅರ್ಹರಾದ ಅಂಗವಿಕಲರು, ವಿಧವೆಯರು, ಭಾಗವಹಿಸಿ ಸ್ಥಳದಲ್ಲೇ ತಮ್ಮ ಸಮಸ್ಯೆ ಪರಿಹರಿಸಲು ಈ ವಿಶೇಷ ಪಿಂಚಣಿ ಅದಾಲತ್ ಹಮ್ಮಿಕೊಂಡಿದೆ ಎಂದು ತಿಳಿಸಿದ ಅವರು ಅದಾಲತ್ನಲ್ಲಿ ತಹಸೀಲ್ದಾರ ಬಿ.ಎಸ್. ಕಡಕಬಾವಿ ಸೇರಿದಂತೆ ತಾಲೂಕಿನ ವಿವಿಧ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಭಾಗವಹಿಸುವ ಪಲಾನುಭವಿಗಳು ಕಡ್ಡಾಯವಾಗಿ ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಆಧಾರಕಾರ್ಡ, ವಯಸ್ಸಿನ ದೃಡಿಕರಣ ಪತ್ರ, ಜನ್ಮ ದಾಖಲೆ, ಬ್ಯಾಂಕ ಪಾಸ ಪುಸ್ತಕ ಅಥವಾ ಅಂಚೆ ಕಛೇರಿಯ ಪಾಸ ಪುಸ್ತಕದೊಂದಿಗೆ ಡಿ.೩೦ ರಂದು ಬೆಳಗ್ಗೆ ೧೦. ಘಂಟೆಗೆ ಗುರುಭವನದಲ್ಲಿ ಹಾಜರಾಗಬೇಕೆಂದು ಕಂದಾಯ ಉಪ ವಿಭಾಗಾಧಿಕಾರಿಗಳು ಮನವಿ ಮಾಡಿದ್ದಾರೆ.
