Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಢವಳಗಿ: ಗ್ರಾಮದ ಶ್ರೀ ಮಡಿವಾಳೇಶ್ವರರ ಜಾತ್ರಾಮಹೋತ್ಸವದ ಅಂಗವಾಗಿ ಗುರುವಾರದಂದು ಏರ್ಪಡಿಸಿದ ಭಾರವಾದ ಚೀಲ ಎತ್ತುವ ಸ್ಪರ್ಧೆಯಲ್ಲಿ 2ಕ್ವೀಂಟಲ್ 25 ಕೆಜಿ ತೂಕ ಎತ್ತುವ ಮೂಲಕ ಕುಂಟೋಜಿ ಗ್ರಾಮದ ಶ್ರೀಕಾಂತ ನಾಯಕ ಅವರು ಪ್ರಥಮ ಸ್ಥಾನ ಪಡೆದರು.ಬೀಮಣ್ಣ ಸೋಮನಾಳ ಅವರು 2 ಕ್ವೀಂಟಲ್ 15 ಕೆಜಿ ತೂಕ ಎತ್ತಿ ದ್ವೀತಿಯ ಸ್ಥಾನ ಪಡೆದರೆ, ಮಾಳಿಂಗರಾಯ ಯಾಳವಾರ ಅವರು ತೃತೀಯ ಸ್ಥಾನ ಪಡೆದರು.
ಮೋರಟಗಿ ಚೆಕ್ ಪೋಸ್ಟಗೆ ಚುನಾವಣಾಧಿಕಾರಿ & ಸಿಪಿಐ ಭೇಟಿ | ದಾಖಲಾತಿ ಪರಿಶೀಲನೆ ಮೋರಟಗಿ: ಗಡಿ ಭಾಗದ ಕೊನೆಯ ಚೆಕ್ ಪೋಸ್ಟ್ ಇದಾಗಿದೆ ಕಡ್ಡಾಯವಾಗಿ ಪ್ರತಿಯೊಂದು ವಾಹನ ಮೇಲೆ ಹದ್ದಿನ ಕಣ್ಣಿರಿಸಿ ಎಂದು ಸಿಂದಗಿ ೩೩ ಸಹಾಯಕ ಚುನಾವಣಾ ಅಧಿಕಾರಿ ವಿನಯಕುಮಾರ ಪಾಟೀಲ ಹೇಳಿದರು.ಲೋಕಸಭಾ ಚುನಾವಣೆ ಹಿನ್ನೆಲೆ ನಿರ್ಮಿಸಲಾದ ಚೆಕ್ ಪೋಸ್ಟಗೆ ಶುಕ್ರವಾರ ಭೇಟಿ ನೀಡಿ ದಾಖಲಾತಿ ಪರಿಶೀಲಿಸಿ ಅವರು ಮಾತನಾಡಿದರು.ರಾಷ್ಟ್ರೀಯ ಹೆದ್ದಾರಿ ಆಗಿರುವುದರಿಂದ ಬೇರೆ ಬೆರೆ ಜಿಲ್ಲೆಗಳಿಂದ ಸಾವಿರಾರು ವಾಹನಗಳು ಸಂಚಿರಿಸುತ್ತವೆ ಕರ್ತವ್ಯದಲ್ಲಿ ಲೋಪ ಮಾಡದೆ ಮುಲಾಜಿಲ್ಲದೆ ಪ್ರತಿ ವಾಹನ ಕೂಡಾ ಪರಿಶೀಲಿಸಿ ಅನಧಿಕೃತ ಸಾರಾಯಿ, ದಾಖಲಾತಿ ಇಲ್ಲದ ದುಡ್ಡು ಕಂಡಲ್ಲಿ ಕೂಡಲೇ ಮೇಲ್ಲಾಧಿಕಾರಿಗಳ ಗಮನಕ್ಕೆ ತನ್ನಿ ಎಂದು ಚೆಕ್ ಪೋಸ್ಟನಲ್ಲಿ ಕಾರ್ಯನಿರ್ವಾಹಿಸುವ ಅಧಿಕಾರಿಗಳಿಗೆ ಸೂಚಿಸಿದರು.ಮೂಲ ಸೌಕರ್ಯ ವದಗಿಸಲು ಸೂಚನೆ : ಚೆಕ್ ಪೋಸ್ಟನಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳಿಗೆ ಶುದ್ಧ ಕುಡಿಯುವ ನೀರು ಊಟದ ವ್ಯವಸ್ಥೆ ವಿದ್ಯುತ್ ಸಿ ಸಿ ಕ್ಯಾಮೀರಾ, ಟಾರ್ಚಾ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಬಂಧ ಪಟ್ಟ…
ದೇವರಹಿಪ್ಪರಗಿ: ಶ್ರೀಜಗದ್ಗುರು ರೇಣುಕಾಚಾರ್ಯರು ವೀರಶೈವಧರ್ಮವನ್ನು ನೆಲೆಗೊಳಿಸಿದ ಮಹಾತ್ಮರು. ಸರ್ಕಾರ ಅವರ ಜೀವನ, ಸಾಧನೆಗಳನ್ನು ಪಠ್ಯದಲ್ಲಿ ಸೇರಿಸಲು ಮುಂದಾಗಬೇಕು ಎಂದು ಜಡಿಮಠದ ಜಡಿಸಿದ್ಧೇಶ್ವರಶ್ರೀಗಳು ಹೇಳಿದರು.ಪಟ್ಟಣದ ಪಂಚಾಚಾರ್ಯ ಕಲ್ಯಾಣಮಂಟಪದಲ್ಲಿ ಶುಕ್ರವಾರ ಜರುಗಿದ ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ರೇಣಕಾಚಾರ್ಯರು ಪರಶಿವನ ಪಂಚಬ್ರಹ್ಮ ಮುಖದಿಂದ ಆವಿರ್ಭವಿಸಿದ ಪಂಚಾಚಾರ್ಯರರಲ್ಲಿ ಪ್ರಥಮ ಗಣೇಶ್ವರರಾಗಿದ್ದಾರೆ. ಇವರು ಕೊಲ್ಲಿಪಾಕಿಯಲ್ಲಿ ೧೮ ಮಠಗಳನ್ನು ಕಟ್ಟಿಸಿ ಎಲ್ಲ ಕುಲದವರಿಗೂ ಶಿವಜ್ಞಾನವನ್ನು ಪಡೆಯಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ ಮಾತನಾಡಿ, ರೇಣುಕಾಚಾರ್ಯರನ್ನು ಕೇವಲ ವೀರಶೈವರಿಗೆ ಸೀಮಿತಗೊಳಿಸದೇ ವೀರಶೈವ ಲಿಂಗಾಯತ ಸಮುದಾಯದ ಪ್ರಮುಖರ ಉಪಸ್ಥಿತಿಯಲ್ಲಿ ಇಂದು ರೇಣುಚಾರ್ಯರ ಜಯಂತಿ ಆಚರಿಸುತ್ತಿರುವುದು ಉತ್ತಮ ಬೆಳವಣಿಗೆ. ಈ ಸಂಪ್ರದಾಯ ಮುಂದುವರೆಯಲಿ ಎಂದರು.ತಾಲ್ಲೂಕು ಜಂಗಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಸೋಮಶೇಖರ ಹಿರೇಮಠ ಹಾಗೂ ಕಲ್ಯಾಣ ಮಂಟಪ ಸಮಿತಿ ಅಧ್ಯಕ್ಷ ಬಸಯ್ಯ ಮಲ್ಲಿಕಾರ್ಜುನಮಠ ಮಾತನಾಡಿದರು.ಇದೇ ಸಂದರ್ಭದಲ್ಲಿ ರೇಣುಕರ ಭಾವಚಿತ್ರಕ್ಕೆ ಶಾಸ್ತೋಕ್ತ ಪೂಜೆ, ಪುಷ್ಪವೃಷ್ಠಿ ನೆರವೇರಿಸಿ ಮಂಗಳಾರತಿಯೊಂದಿಗೆ ಪ್ರಸಾದ ವಿತರಿಸಲಾಯಿತು.ಅವೋಗೇಶ್ವರ ಧಾಮದಶ್ರೀ, ಪಟ್ಟಣ ಪಂಚಾಯಿತಿ ಸದಸ್ಯ ಶಾಂತಯ್ಯ…
ಇಂಡಿ: ಭೂಮಿಯಲ್ಲಿರುವ ಸಕಲ ಜೀವ ರಾಶಿಗಳಿಗೂ ನೀರು ಅಗತ್ಯವಾಗಿ ಬೇಕು. ಆದರೆ ಮನುಷ್ಯನು ನೀರನ್ನು ಬಳಸುವ ಪ್ರಮಾಣವು ಮಾತ್ರ ಹೆಚ್ಚಾಗಿರುತ್ತದೆ. ಕುಡಿಯುವುದರಿಂದ ಹಿಡಿದು ದೈನಂದಿನ ಚಟುವಟಿಕೆಗಳಿಗೆ ನೀರಿನ ಬಳಕೆಯು ಹೆಚ್ಚಿದೆ. ನೀರಿನ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆಯು ಕಾಡುತ್ತಿದೆ. ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ನೀರನ್ನು ಉಳಿತಾಯ ಮಾಡಲು ಈ ಕೆಲವು ಟಿಪ್ಸ್ ಗಳನ್ನು ಪಾಲಿಸುವುದು ಉತ್ತಮ ಎಂದು ರಸಾಯನಶಾಸ್ತ್ರ ಉಪನ್ಯಾಸಕರು, ಎಸ್.ಕೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ತಾಳಿಕೋಟಿಯ ಆಯ್.ವ್ಹಿ.ರೋಡಗಿ ಹೇಳಿದರು.ಪಟ್ಟಣದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ರಸಾಯನಶಾಸ್ತ್ರ ವಿಭಾಗದ ಅಡಿಯಲ್ಲಿ “ವಿಶ್ವ ಜಲ ದಿನಾಚರಣೆ” ಕಾರ್ಯಕ್ರಮದಲ್ಲಿ ಮಾತನಾಡಿದರು.ಪ್ರಾಂಶುಪಾಲರಾದ ಡಾ.ಎಸ್.ಬಿ.ಜಾಧವ ಮಾತನಾಡಿ ಬೇಸಿಗೆಕಾಲ ಆರಂಭವಾಗುತ್ತಿದ್ದಂತೆ ನೀರಿನ ಹಾಹಾಕಾರ ಕಾಣಿಸಿಕೊಳ್ಳುತ್ತವೆ. ದೈನಂದಿನ ಚಟುವಟಿಕೆಗಳಿಗೆ ಬಿಡಿ, ಕುಡಿಯುವುದಕ್ಕೂ ನೀರು ಇರುವುದಿಲ್ಲ. ಕಾಡಿನ ನಾಶದಿಂದ ಸರಿಯಾದ ಸಮಯಕ್ಕೆ ಮಳೆ ಬಾರದೆ ಹಳ್ಳ, ಕೊಳ, ನದಿ ಸೇರಿದಂತೆ ಅದೆಷ್ಟೋ ಸಿಹಿ ನೀರಿನ…
ಗ್ರಾಪಂ.ಗೆ ಬೀಗ ಹಾಕಿ ತಲೆಯ ಮೇಲೆ ಕಲ್ಲು ಹೊತ್ತು ಗ್ರಾಮಸ್ಥರಿಂದ ಧರಣಿ ಸತ್ಯಾಗ್ರಹ ಕಲಕೇರಿ: ತಿಂಗಳಾದ್ರು ಬರ್ತಾ ಇಲ್ಲ ನಲ್ಲಿ ನೀರು..! ತಿಂಗಳುಗಳೇ ಕಳೆದರೂ ಗ್ರಾಮ ಪಂಚಾಯಿತಿಗೆ ಬಾರದ ಅಭಿವೃದ್ಧಿ ಅಧಿಕಾರಿಗಳು, ತಿಳಗೂಳ ಗ್ರಾಮದ ನೆರವಿಗೆ ಬರ್ತಾರಾ ಶಾಸಕ ರಾಜುಗೌಡ ಪಾಟೀಲ್, ಹೀಗೆಲ್ಲ ಕೇಳಿ ಬರುತ್ತಿರುವ ಮಾತುಗಳು ಕಲಕೇರಿ ಸಮೀಪದ ತಿಳಗೂಳ ಗ್ರಾಮದಲ್ಲಿ..ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ತಿಳಗೂಳ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಗ್ರಾಮದಲ್ಲಿ ತಿಂಗಳು ಕಳೆದರೂ ಯಾವುದೇ ನಲ್ಲಿಗಳಲ್ಲಿ ನೀರು ಬರುತ್ತಿಲ್ಲ, ಗ್ರಾಮದ ಎರೆ ಹೋಲದಲ್ಲಿ ಸರ್ಕಾರದಿಂದ ಎರಡು ಬಾವಿಗಳನ್ನು ನಿರ್ಮಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ, ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲ ಎನ್ನುವಂತಾಗಿದೆ ಎಂದು ನೀರಿನ ಬವಣೆ ತೋಡಿಕೊಂಡ ಗ್ರಾಮಸ್ಥರು ಎರಡು ಬಾವಿಗಳಲ್ಲಿ ನೀರು ತುಂಬಿದ್ದರೂ ಎರಡೂ ಬಾವಿಗಳ ಪೈಪ್ಲೈನ್ ಒಡೆದು ಹೋಗಿ ಸುಮಾರು ೪ ರಿಂದ ೫ ವರ್ಷಗಳು ಗತಿಸಿದರೂ ಯಾವೊಬ್ಬ ಅಧಿಕಾರಿಯೂ ಸಹ ಇತ್ತ ಕಡೆ ಗಮನ ಹರಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ…
ವಿಜಯಪುರ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇರುವುದರಿಂದ ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಅಳವಡಿಸಲಾಗಿರುವ ಮೋಟಾರ್ ಪಂಪಗಳನ್ನು ತೆರವುಗೊಳಿಸಬೇಕು ಎಂದು ಕೃಷ್ಣ ಭಾಗ್ಯ ಜಲ ನಿಗಮ ಅಣೆಕಟ್ಟು ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.ಮಳೆಯ ಕೊರತೆಯಿಂದ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಇಲ್ಲ. ಪ್ರಸ್ತುತ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ಮುಂಬರುವ ಜೂನ್ ತಿಂಗಳ ಅಂತ್ಯದವರೆಗೆ ಆಲಮಟ್ಟಿ ಜಲಾಶಯ ಅವಲಂಬಿತ ನಗರ, ಪಟ್ಟಣ, ಹಾಗೂ ಗ್ರಾಮಗಳಿಗೆ ಕುಡಿಯುವ ನೀರನ್ನು ಕಾಯ್ದಿರಿಸಬೇಕಾಗುತ್ತದೆ.ವಿಪತ್ತು ನಿರ್ವಹಣಾ ಕಾಯ್ದೆ ಜಾರಿಯಾಗಿರುವ ಹಿನ್ನಲೆಯಲ್ಲಿ ಜಲಾಶಯದ ಹಿನ್ನೀರಿನಲ್ಲಿ ಅಳವಡಿಸಲಾಗಿರುವ ಮೋಟಾರ್ ಪಂಪ್ ಸೆಟ್ ಗಳ ಪರವಾನಿಗೆ ಸ್ಥಗಿತಗೊಳಿಸಲಾಗಿದೆ. ಆದ ಕಾರಣ ಹಿನ್ನೀರಿನ ನೀರನ್ನು ಅನ್ಯ ಉದ್ದೇಶಕ್ಕೆ ಬಳಸುವುದು ನಿಷೇಧಿಸಲಾಗಿದೆ. ಸದರಿ ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಪ್ರಜಾಪ್ರಭುತ್ವದ ಸಂವಿಧಾನಿಕ ಹಕ್ಕಾಗಿರುವ ಮತದಾನದಿಂದ ಯಾವುದೇ ಮತದಾರರು ವಂಚಿತರಾಗಬಾರದೆನ್ನುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಪ್ರಸ್ತುತ ಲೋಕಸಭಾ ಚುನಾವಣೆಗೆ ೮೫ವರ್ಷ ಮೇಲ್ಪಟ್ಟ ವಯಸ್ಸಿನವರಿಗೆ ಹಾಗೂ ವಿಕಲಚೇತನರಿಗೆ ಮನೆಯಲ್ಲಿಯೇ ಮತ ಚಲಾವಣೆ ಮಾಡುವ ಅವಕಾಶ ನೀಡಿರುತ್ತದೆ.ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಶುಕ್ರವಾರದಂದು ಜಿಲ್ಲೆಯ ಮನಗೂಳಿ ಹಾಗೂ ಯರನಾಳ ಗ್ರಾಮದ ಮನೆ ಮನೆಗೆ ಭೇಟಿ ನೀಡಿ, ಮತಗಟ್ಟೆಗೆ ಬಂದು ಮತದಾನ ಮಾಡಲು ನಿಶಕ್ತರಾಗಿರುವವರನ್ನು ಮತಗಟ್ಟೆಯ ಬಿಎಲ್ಓ ಗಳು ಗುರುತಿಸಿ ನಮೂನೆ ೧೨ಡಿ ಪತ್ರದ ಮೂಲಕ ಮನೆಯಲ್ಲೇ ಮತ ಚಲಾವಣೆ ಮಾಡುವ ಅವಕಾಶ ನೀಡುತ್ತಾರೆ. ಇದನ್ನು ೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.೮೫ ವರ್ಷ ಮೇಲ್ಪಟ್ಟ ವಯೋವೃದ್ಧರಿಗೆ ಮತ್ತು ವಿಕಲಚೇತನ ಮತದಾರರಿಗೆ ನಮೂನೆ ೧೨ ಡಿ ಪತ್ರ ವಿತರಿಸುವ ಮೂಲಕ, ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಜಿಲ್ಲೆಯಲ್ಲಿ ಯಾರೊಬ್ಬರೂ ಮತದಾನ ದಿಂದ ದೂರ ಉಳಿಯದಂತೆ ಮತದಾನದ ಶೇಕಡಾ ಪ್ರಮಾಣ ಹೆಚ್ಚಿಸಲು ಕಾರ್ಯೋನ್ಮುಖರಾಗಿ ಕೆಲಸ ಮಾಡಬೇಕು…
ವಿಜಯಪುರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿರ್ವಹಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಜಿಲ್ಲಾ ವಿಪತ್ತು ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ ೦೮೩೫೨-೨೨೧೨೬೧ ಅಥವಾ ಟೋಲ್ ಪ್ರೀ ಸಂಖ್ಯೆ ೧೦೭೭ಕ್ಕೆ ಕರೆ ಮಾಡಿ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ವಿದ್ಯುತ್ ನಿರ್ವಹಣಾ ಕಾಮಗಾರಿ ಕಾರ್ಯ ಕೈಗೊಳ್ಳಲಾಗಿರುವುದರಿಂದ ೨೨೦/೧೧೦/೧೧ ಕೆವಿ ಬಸವನ ಬಾಗೇವಾಡಿ, ಮಮದಾಪೂರ ಕೇಂದ್ರದಿಂದ ಹೊರಹೋಗುವ ೧೧೦ ಕೆವಿ ಮಮದಾಪೂರ, ಬಬಲೇಶ್ವರ, ಶಿರಬುರ, ಬೆಳುಬ್ಬಿ ಹಾಗೂ ಕಂಬಾಗಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಹೋಗುವ ಎಲ್ಲಾ ೩೩ಕೆವಿ, ೧೧ಕೆವಿ ವಿದ್ಯುತ್ ಮಾರ್ಗದಲ್ಲಿ ಮಾ.೨೩ರಂದು ಬೆಳಗ್ಗೆ ೮ರಿಂದ ಸಾಯಂಕಾಲ ೪ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಕಾರಣ ಎಲ್ಲಾ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ವಿಜಯಪುರ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೨೨೦/೧೧೦/೧೧ ಕೆವಿ ಬಸವನ ಬಾಗೇವಾಡಿ ಸ್ವೀಕೇಂದ್ರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ೧೧೦/೧೧ ಕೆವಿ ವಿತರಣಾ ಕೇಂದ್ರ ಅಥರ್ಗಾ, ದೇವರ ಹಿಪ್ಪರಗಿ, ೩೩ಕೆವಿ ಕೋರವಾರ, ಕಡ್ಲೇವಾಡ ಮಾರ್ಗಗಳ ಮೂಲಕ ಸರಬರಾಜು ಆಗುವ ಎಲ್ಲಾ ೧೧ಕೆವಿ, ೩೩ಕೆವಿ ವಿದ್ಯುತ್ ಮಾರ್ಗಗಳಲ್ಲಿ ಮಾ.೨೩ ರಂದು ಬೆಳಗ್ಗೆ ೮ರಿಂದ ಸಂಜೆ ೪ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಈ ಸಮಯದಲ್ಲಿ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಇಂಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
