Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಡಿ.೨೯ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟçಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦-೩೦ಕ್ಕೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ವಿಶೇಷ ಉಪನ್ಯಾಸಕರಾಗಿ ಶ್ರೀಮತಿ ಪೂಜಾ ಕೆ.ಎಸ್. ಹಾಗೂ ಕುಮಾರಿ ರಕ್ಷಂದಾ…
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ವತಿಯಿಂದ ಡಾ.ಅಂಬೇಡ್ಕರ್ ಓದು ಎಂಬ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಕುರಿತು ವಿಶೇಷ ಡಿ.೨೮ರಂದು ನಗರದ ದರಬಾರ ಶಾಲೆಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾವರ್ಧಕ ಸಂಘದ ಸಂಯೋಜನಾಧಿಕಾರಿ ಡಾ.ವಿ.ಬಿ.ಗ್ರಾಮಪುರೋಹಿತ ಅವರು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ಡಾ.ಅಂಬೇಡ್ಕರ್ ಅವರಲ್ಲಿನ ಓದಿನ ಹಂಬಲ ಇಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಟಿ.ಆರ್.ಕುಲಕರ್ಣಿ ಅವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠವಾಗಿದೆ. ಈ ಸಂವಿಧಾನಕ್ಕನುಗುಣವಾಗಿ ನಡೆಯುವ ಮೂಲಕ ದೇಶವನ್ನು ಅಭಿವೃದ್ದಿಪಥದತ್ತ ಕೊಂಡೊಯ್ಯೋಣ ಎಂದು ಅವರು ಹೇಳಿದರು.ವಿಶೇಷ ಉಪನ್ಯಾಸ ನೀಡಿದ ಎ.ನಾಗರಾಜ ಅವರು ಮಾತನಾಡಿದರು.ಪ್ರಾಸ್ತಾವಿಕವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಅವರು ಮಾತನಾಡಿ ಸ್ವಾಗತಿಸಿದರು. ವಿ.ಬಿ.ಕುಲಕರ್ಣಿ ವಂದಿಸಿದರು. ಜಿ.ಬಿ.ಕುಲಕರ್ಣಿ ನಿರೂಪಿಸಿದರು.
ವಿಜಯಪುರ: ಜಿಲ್ಲೆಯ ೧೧೦/೧೧ ಕೆವ್ಹಿ ಮಟ್ಟಿಹಾಳ ಟ್ಯಾಪ್ ಮಾರ್ಗದ ಕಾಮಗಾರಿಯು ಪ್ರಗತಿಯಲ್ಲಿದ್ದು, ಸದರಿ ಕಾಮಗಾರಿಗೆ ಪ್ರಸ್ತುತ ೧೧೦ ಕೆವ್ಹಿ ಮಲಘಾಣ-ಮಟ್ಟಿಹಾಳ-ರೋಣಿಹಾಳ ಮಾರ್ಗದ ಮುಕ್ತತೆ ಅವಶ್ಯಕತೆ ಇರುವುದರಿಂದ ೧೧೦/೧೧ ಕೆವ್ಹಿ ಮಟ್ಟಿಹಾಳ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಬರುವ ಎಲ್ಲಾ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ೩೩ಕೆವ್ಹಿ ವಿಜಯಪುರ ನಗರ ಕುಡಿಯುವ ನೀರಿನ ಸ್ಥಾವರಗಳಿಗೆ & ೩೩ ಕೆವ್ಹಿ ಕಾರಜೋಳ ಎಲ್.ಆಯ್.ಎಸ್. ಮಾರ್ಗಗಳಿಗೆ ಡಿ.೨೯ರಂದು ಬೆಳಿಗ್ಗೆ ೯ ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬಸವನಬಾಗೇವಾಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
ವಿಜಯಪುರ: ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳ ೩ನೇ ತ್ರೈಮಾಸಿಕ ಸಭೆಯು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ೨೦೨೪ರ ಜನವರಿ ೩ ರಂದು ಬೆಳಿಗ್ಗೆ ೧೦-೩೦ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ೨೦೨೪ ಪರಿಷ್ಕೃತ ವೇಳಾಪಟ್ಟಿ ಹೊರಡಿಸಿದ್ದು, ಅದರನ್ವಯ ಕರಡು ಮತದಾರರ ಯಾದಿ ಪ್ರಕಟಿಸಿ ನಂತರದಲ್ಲಿ ದಿನಾಂಕ: ೦೯-೧೦-೨೦೨೩ರವರೆಗೆ ಸ್ವೀಕೃತವಾದ ಹಕ್ಕು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ನಿಗದಿಪಡಿಸಲಾದ ದಿನಾಂಕ : ೨೬-೧೨-೨೦೨೩ರನ್ನು ಪರಿಷ್ಕರಿಸಿ ದಿ.೧೨-೦೧-೨೦೨೪ ವರೆಗೆ ಹಾಗೂ ಅಂತಿಮ ಮತದಾರರ ಯಾದಿಯನ್ನು ಪ್ರಕಟಿಸಲು ನಿಗದಿಪಡಿಸಲಾದ ೦೫-೦೧-೨೦೨೪ರ ದಿನಾಂಕವನ್ನು ದಿ: ೨೨-೦೧-೨೦೨೪ಕ್ಕೆ ನಿಗದಿಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ೨೧ನೇ ಅವಧಿಗೆ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಜನವರಿ ೯ರಂದು ಚುನಾವಣೆ ನಡೆಸಲು ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ದಿನಾಂಕ ನಿಗದಿಗೊಳಿಸಿದ್ದಾರೆ.ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪ ಮಹಾಪೌರ ಸ್ಥಾನ ಪರಿಶಿಷ್ಟ ಪಂಗಡ ವರ್ಗಕ್ಕೆ ಮೀಸಲಿರಿಸಲಾಗಿದೆ. ಚುನಾವಣಾ ವೇಳಾಪಟ್ಟಿಯಂತೆ ದಿ.೦೯-೦೧-೨೦೨೪ರಂದು ಬೆಳಿಗ್ಗೆ ೯ ರಿಂದ ೧೧ ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸುವುದು. ಮಧ್ಯಾಹ್ನ ೧ ಗಂಟೆಗೆ ಸಭೆ ಆರಂಭ, ಮಧ್ಯಾಹ್ನ ೧ ಗಂಟೆಯ ನಂತರ ಮಹಾಪೌರ, ಉಪಮಹಾಪೌರ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ, ಪ್ರಮಾಣ ವಚನ, ಹಾಜರಾತಿ, ಕೋರಂ ಪರಿಶೀಲನೆ, ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ ಹಾಗೂ ಮತಗಳ ಏಣಿಕೆ ಹಾಗೂ ಫಲಿತಾಂಶ ಘೋಷಣೆ ಪ್ರಕ್ರಿಯೆ ನಡೆಯಲಿದೆ ಎಂದು ಅವರು…
ಮಾಗಣಗೇರಿಯಲ್ಲಿ ಪುರಾಣ ಕಾಯ೯ಕ್ರಮಕ್ಕೆ ಚಾಲನೆ | ಡಾ.ವಿಶ್ವರಾಧ್ಶ ಶ್ರೀ ಶ್ಲಾಘನೆ ಬ್ರಹ್ಮದೇವನಮಡು: ಪುರಾಣ ಪುಣ್ಶ ಕಥಾಶ್ರವಣದಿಂದ ಮಾನವನ ಬದುಕು ಹಸನಾಗುವುದು ಎಂದು ಶ್ರೀಮಠದ ಶಿವಾಚಾಯ೯ ರತ್ನ ಪ್ರಶಸ್ತಿ ಪುರಸ್ಕ್ರತ ಡಾ.ವಿಶ್ವರಾಧ್ಶ ಶಿವಾಚಾ೯ರು ಹೇಳಿದರು.ಸಮೀಪದ ಸುಕ್ಷೇತ್ರ ಮಾಗಣಗೇರಿ ಬೃಹನ್ಮಠದ ಗುರು ಚನ್ನವೃಷಬೇಂದ್ರ ಶಿವಯೋಗಿಗಳ ಮತ್ತು ಕೆಂಭಾವಿ ಗುರು ಅಯ್ಯಪ್ಪಯ್ಯ ಶಿವಾಚಾರ್ಯರ ರಥೋತ್ಸವ ಮತ್ತು ಜಾತ್ರಾ ಮಹೋತ್ಸವದ ಅಂಗವಾಗಿ ಇತ್ತಿಚೇಗೆ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ಮಹಾಪುರಾಣ ಪ್ರಾರಂಭೋತ್ಸವಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಆಶೀವ೯ಚನ ನೀಡಿದರು.ಸಂಸ್ಕಾರಯುತ ಸಮಾಜ ನಿರ್ಮಾಣದ ಅಡಿಪಾಯ ಕಲ್ಪಿಸುವಂತ ಕಾರ್ಯಗಳಲ್ಲಿ ಎಲ್ಲ ಭಕ್ತ ಬಳಗ ಪಾಲ್ಗೊಂಡು ಇದರ ಸದುಪಯೋಗ ಪಡಿದುಕೊಳ್ಳಬೇಕು. ಈ ನಾಡಿನಲ್ಲಿ ಅನ್ನದಾಸೋಹ ಜ್ಞಾನ ದಾಸೋಹಗಳನ್ನು ಮಾಡುತ್ತಿರುವ ಮಠ ಮಾನ್ಯಗಳ ಕಾರ್ಯ ಶ್ಲಾಘನೀಯ, ಯಾವ ಸಕಾ೯ರಗಳು ಮಾಡದಂತ ದಾಸೋಹವನ್ನು ನಮ್ಮ ನಾಡಿನ ಬಹುತೇಕ ಮಠ ಮಾನ್ಯಗಳು ನಡೆಸಿಕೊಂಡು ಬಂದಿರುವುದು ಸನಾತನ ಧರ್ಮದ ಹೆಗ್ಗುರುತು ಎಂದು ಹೇಳಿದರು.ಕವಡಿಮಟ್ಚಿಯ ಬಸವಪ್ರಭು ಸ್ವಾಮೀಜಿ ಹಿರೇಮಠ, ಅರಳಹಳ್ಳಿಯ ಬಸವರಾಜ ಶಾಸ್ತ್ರಿಗಳು ವ್ಯಾಸಪೀಠದ ಮೂಲಕ ಪುರಾಣ ಪ್ರಾರಂಭಿಸಿ…
ಮುದ್ದೇಬಿಹಾಳ: ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾ ಸಂಸ್ಥೆಯ ಸ್ಥಾಪನೆಗೆ ಕಾರಣೀಕರ್ತರಾದ ಹಿಂದೂ ಸೇವಾ ಪ್ರತಿಷ್ಠಾನದ ಪ್ರಥಮ ನಿರ್ದೇಶಕರಾದ ದಿ.ಅಜಿತಕುಮಾರರವರ ಸ್ಮೃತಿ ದಿವಸದ ನಿಮಿತ್ತ ಮುದ್ದೇಬಿಹಾಳದ ಜ್ಞಾನ ಭಾರತಿ ವಿದ್ಯಾಮಂದಿರದ ವಿದ್ಯಾರ್ಥಿಗಳಿಂದ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು-ಹಂಫಲಗಳನ್ನು ಹಂಚುವ ಕಾರ್ಯ ನಡೆಯಿತು.ಈ ವೇಳೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಅನಿಲಕುಮಾರ ಶೇಗುಣಸಿ, ಮಕ್ಕಳ ತಜ್ಞ ಪರಶುರಾಮ ವಡ್ಡರ, ನರ್ಸಿಂಗ ಅಧಿಕಾರಿ ಸಂಜಯ ಭೋಸಲೆ, ಬಿಎಚ್ಓ ತಾಳಿಕೋಟಿ, ಸಂಸ್ಥೆಯ ನಿರ್ದೇಶಕಿ ಲೀಲಾ ಭಟ್ಟ, ಪ್ರೌಢ ಶಾಲಾ ಮುಖ್ಯಗುರು ರಾಮಚಂದ್ರ ಹೆಗಡೆ, ದೈಹಿಕ ಶಿಕ್ಷಕ ಬಿ.ಟಿ.ಭಜಂತ್ರಿ ಸೇರಿದಂತೆ ಇತರರು ಹಾಜರಿದ್ದರು.
ಮುದ್ದೇಬಿಹಾಳ: ಪಟ್ಟಣದ ವಿದ್ಯುತ್ ಉಪಕೇಂದ್ರ ೧೧೦/೩೩/೧೧ಕೆವಿ ಯಲ್ಲಿ ಡಿ.೨೯ ರಂದು ಮೂರನೇ ತ್ರೈಮಾಸಿಕ ನಿರ್ವಹಣೆಯನ್ನು ಕೈಗೊಳ್ಳುತ್ತಿರುವದರಿಂದ ಸದರಿ ಉಪ ಕೇಂದ್ರದಿಂದ ವಿದ್ಯುತ್ ಸರಬರಾಜು ಹೊಂದಿರುವ ೧೧ಕೆವಿ ಹಿರೇಮುರಾಳ, ೩೩ಕೆವಿ ನಾಲತವಾಡ, ಢವಳಗಿ, ತಂಗಡಗಿ ಉಪಕೇಂದ್ರಗಳು ಹಾಗೂ ಕುಡಿಯುವ ನೀರು ಸರಬರಾಜು, ಪಂಪಸೆಟ್ಟ ಮತ್ತು ನಿರಂತರ ಜ್ಯೋತಿ ಮಾರ್ಗಗಳಿಗೆ ವಿದ್ಯುತ್ ಪೂರೈಕೆ ಇರುವದಿಲ್ಲ. ಗ್ರಾಹಕರು ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.
ವಿಜಯಪುರ: ಶತಮಾನದ ಶ್ರೇಷ್ಠ ಸಂತ ಜ್ಞಾನಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಜಿಯವರ ಗುರುನಮನ ದಿನದಂದು ಸರ್ಕಾರಿ ಕಛೇರಿ ಹಾಗೂ ಶಾಲಾ ಕಾಲೇಜುಗಳ ಸಿಬ್ಬಂದಿ ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅನೂಕೂಲವಾಗಿಸಲು ಜನೇವರಿ 1 ಹಾಗೂ 2 ತಾರಿಖಿನ ಎರಡು ದಿನಗಳಂದು ರಜೆ ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘವು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿ ಮಾತನಾಡಿದ ನೌಕರರ ಸಮನಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಶ್ರೀಗಳು ಹಲವಾರು ದಶಕಗಳವರೆಗೆ ದೇಶ ವಿದೇಶಗಳಲ್ಲಿ ಸಂಚರಿಸಿ ಜ್ಞಾನದಾಸೋಹ ಮಾಡಿದವರು. ಪೂಜ್ಯರು 2023 ಜನೇವರಿ 2 ರಂದು ತಮ್ಮ ಭೌತಿಕ ದೇಹವನ್ನು ತ್ಯಜಿಸಿ ಬಯಲಲ್ಲಿ ಬಯಲಾದರು. ಆ ದಿನದಂದು ನಾವೆಲ್ಲರೂ ಪೂಜ್ಯರಿಗೆ ತಮ್ಮ ಹೃದಯಾಂತರಾಳದ ನಮನಗಳನ್ನು ಅರ್ಪಿಸುವದು ಆದ್ಯ ಕರ್ತವ್ಯವಾಗಿದೆ ಎಂದರು.ಎರಡು ದಿವಸಗಳ ಕಾಲ ನಡೆಯುವ ಎಲ್ಲ ಧಾರ್ಮಿಕ, ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಸರಕಾರಿ ನೌಕರರು ಹಾಗೂ…
