Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಗ್ರಾಮ ಪಂಚಾಯಿತಿ ಸದಸ್ಯರ ಹಿತ ಕಾಪಾಡಲು ಸದಾ ಬದ್ಧನಿರುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಗುರುವಾರ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಆಶ್ರಯದಲ್ಲಿ 2023-24ನೇ ವರ್ಷದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಹೊಸೂರು ಗ್ರಾಮ ಪಂಚಾಯಿತಿಯ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೌರವ ಧನ ಹೆಚ್ಚಳಕ್ಕೆ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಿದ ಪರಿಣಾಮ ಸರಕಾರ ಸ್ಪಂದಿಸಿದೆ. ಈಗ ಪ್ರತಿಯೊಂದು ಗ್ರಾಮ ಪಂಚಾಯಿತಿಗೆ ಹೊಸದಾಗಿ ತಲಾ 100 ಮನೆಗಳನ್ನು ಮಂಜೂರು ಮಾಡುವಂತೆ ಸದನದ ಒಳಗೆ ವಸತಿ ಸಚಿವರಿಗೆ ಮನವಿ ಮಾಡಿದ್ದು, ಅದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶೀಘ್ರದಲ್ಲಿ ಮನೆಗಳು ಮಂಜೂರಾಗಲಿವೆ ಎಂದು ಅವರು ತಿಳಿಸಿದರು.ಶಾಸಕರ ಮಾದರಿಯಲ್ಲಿ ಗ್ರಾ.ಪಂ ತಾ.ಪಂ, ಜಿ.ಪಂ. ಸದಸ್ಯರು ಮತ್ತು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಗಳಿಗೆ ಬಸ್ ಪಾಸ್ ಸೌಲಭ್ಯ, ಅವರ ವಾಹನಗಳಿಗೆ ಟೋಲ್…
ನೂತನ (ಸರಕಾರಿ) ಶಿಕ್ಷಕರಿಗೆ ಸಿಂದಗಿ ಮುಸ್ಲಿಂ ಬಾಗವಾನ ಜಮಾತ್ ನಿಂದ ಸನ್ಮಾನ ವಿಜಯಪುರ: ಮಕ್ಕಳಲ್ಲಿ ಅಡಗಿರುವ ಅಂಧಕಾರವನ್ನು ತೊಲಗಿಸಿ ಸುಜ್ಞಾನದ ಬೆಳಕನ್ನು ಚೆಲ್ಲುವ ಅವಕಾಶ ಪರಮಾತ್ನ ಕರುಣಿಸಿದ್ದಾನೆ. ಪ್ರತಿಯೊಂದು ಮಕ್ಕಳನ್ನು ತಮ್ಮ ಮನೆಯ ಮಕ್ಕಳಂತೆ ಭಾವಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಎಂದು ಮುಸ್ಲಿಂ ಬಾಗವಾನ ಜಮಾತ್ ಅಧ್ಯಕ್ಷ ಅಲ್ತಾಫ ಬಾಗವಾನ ನೂತನ ಶಿಕ್ಷಕರಿಗೆ ಸಲಹೆ ನೀಡಿದರು.ಪಟ್ಟಣದಲ್ಲಿ ಮುಸ್ಲಿಂ ಬಾಗವಾನ ಜಮಾತ್ ವತಿಯಿಂದ ನೂತನವಾಗಿ ಸರಕಾರಿ ಶಿಕ್ಷಕರಾಗಿ ಆಯ್ಕೆಯಾದ ಶಿಕ್ಷಕರಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಸನ್ಮಾನಿಸಿ ಅವರು ಮಾತನಾಡಿದರು.ಶಾಲೆ ಎಂದರೆ ದೇವಾಲಯ, ಶಿಕ್ಷಕರನ್ನು ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ತಮ್ಮನ್ನು ದೇವರ ಸ್ವರೂಪದಲ್ಲಿ ಕಾಣುತ್ತಾರೆ ತಮ್ಮ ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ಕೂಡಾ ಗುರುತಿಸಿ ಅವರು ಕೂಡಾ ಈ ದೇಶದ ಉನ್ನತ ಹುದ್ದೆಯ ಅಧಿಕಾರಿಯಾಗುವ ನಿಟ್ಟಿನಲ್ಲಿ ಜವಾಬ್ದಾರಿಯಿಂದ ಬೋಧನೆ ಮಾಡಬೇಕು. ದೇಶದಲ್ಲಿ ಹತ್ತು ಹಲವಾರು ಹುದ್ದೆಗಳು ಸಿಗುತ್ತವೆ. ಎಲ್ಲರಿಗೂ ಶಿಕ್ಷಕನಾಗುವ ಅದೃಷ್ಟ ಇರುವುದಿಲ್ಲ. ಆ ಅದೃಷ್ಟ ನಿಮ್ಮ…
Udayarashmi kannada daily newspaper
ಕಾಲವಿನ್ನೂ ಪಕ್ವವಾಗಿಲ್ಲ | ಡಿ.29ರ ಸಭೆ ರದ್ದುಪಡಿಸಿ | ಮಾಜಿ ಎಂಎಲ್ಸಿ ಅರುಣ ಶಹಾಪುರ ಆರೋಪ ವಿಜಯಪುರ: ಇಂಡಿ ನೂತನ ಜಿಲ್ಲೆಯಾಗಲು ಕಾಲ ಇನ್ನೂ ಪಕ್ವವಾಗಿಲ್ಲ. ಹೀಗಾಗಿ ಡಿಸೆಂಬರ್ 29 ರಂದು ಈ ಕುರಿತು ಕರೆಯಲಾದ ಸಭೆಯನ್ನು ರದ್ದು ಪಡಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದ್ದಾರೆ.ಬುಧವಾರ ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿ ನೂತನ ಜಿಲ್ಲೆ ಮಾಡುವ ಕುರಿತು ಜನಾಭಿಪ್ರಾಯ ಸಂಗ್ರಹಿಸಲು ಸಿಂದಗಿ ತಹಸೀಲ್ದಾರರು ಡಿಸೆಂಬರ್ 29 ರಂದು ಸಭೆ ಕರೆದಿದ್ದಾರೆ. ಇದು ಸರಿಯಲ್ಲ. ಸರಕಾರ ವಿಜಯಪುರ ಜಿಲ್ಲೆಯನ್ನು ವಿಭಜಿಸುವ ಪ್ರಸ್ತಾಪ ಹೊಂದಿದೆಯೇ ಎಂಬುದನ್ನು ಸರಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.ಮೂರು ಬಾರಿ ಇಂಡಿ ಶಾಸಕರಾದರೂ ಸಚಿವ ಸ್ಥಾನ ಮತ್ತು ಅಧಿಕಾರ ಸಿಗಲಿಲ್ಲ. ಶ್ರೀ ರೇವಣಸಿದ್ಧೇಶ್ವರ ಏತ ನೀರಾವರಿ ಯೋಜನೆಗೆ ಅನುದಾನ ಸಿಗುತ್ತಿಲ್ಲ. ಅಭಿವೃದ್ಧಿಗೂ ಹಣ ಬಿಡುಗಡೆಯಾಗುತ್ತಿಲ್ಲ ಎಂಬ ರಾಜಕೀಯ ಹತಾಶೆಯಿಂದ ಇಂಥ ಗೊಂದಲ ಸೃಷ್ಟಿಸಿ ನೂತನ ಜಿಲ್ಲೆ ರಚನೆಯ ಭಾವನಾತ್ಮಕ ವಿಷಯವನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು…
ವಿಜಯಪುರ: ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೇ ಡಿಸೆಂಬರ್ 29 ಶುಕ್ರವಾರದಂದು ಮಧ್ಯಾನ್ಹ 3 ಕ್ಕೆ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಗುರುನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಮಧ್ಯಾನ್ಹ 3ಕ್ಕೆ ಗ್ರಾಮದ ಕಲ್ಲಯಾರೂಢ ಮಠದಿಂದಪೂಜ್ಯಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರ ಜೊತೆಗೆ ಪುಸ್ತಕ ಕಟ್ಟುಗಳ ಮೆರವಣಿಗೆ ಆರಂಭವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗುವದು.ಸಂಜೆ 5 ಗಂಟೆಗೆ ಶ್ರೀ ಮಲ್ಲಿಕಾರ್ಜುನ ಶಾಲಾ ಆವರಣದಲ್ಲಿ ಗುರುನಮನ ಕಾರ್ಯಕ್ರಮ ಜರುಗಲಿದ್ದು, ನಾಗಠಾಣದ ಉದಯೆಶ್ವರ ಮಠದ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ದಿವ್ಯ ಸಾನಿಧ್ಯ ಮತ್ತು ಕಲ್ಲಯಾರೂಢ ಮಠದ ಶ್ರೀ ಪ್ರಜ್ಞಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಹಿರೇರೂಗಿ ಯುಬಿಎಸ್ ಶಾಲಾ ಶಿಕ್ಷಕ ಸಂತೋಷ ಬಂಡೆ ಗುರುನಮನ ಸಲ್ಲಿಸುವರು. ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಅಧ್ಯಕ್ಷತೆ ವಹಿಸುವರು. ಸಂಸ್ಥೆಯ ಕಾರ್ಯದರ್ಶಿ ಸುನಂದಾ ಹುಣಶ್ಯಾಳ, ಶಾಲಾ ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ, ಶಿಕ್ಷಕರು, ಪಾಲಕರು, ಗ್ರಾಮಸ್ಥರು, ಮಕ್ಕಳು ಉಪಸ್ಥಿತರಿರುವರು.ಮಕ್ಕಳಿಂದ ಪೂಜ್ಯಶ್ರೀಗಳ ಕುರಿತು ನಾಟಕ-ಹಾಡು ಜೊತೆಗೆ ದೀಪಗಳ ಪ್ರಜ್ವಲನ ನಂತರ ಮಹಾಪ್ರಸಾದ ಇರುತ್ತದೆ.…
ರೂ.೪೦ ಸಾವಿರ ಕೋಟಿ ಭ್ರಷ್ಟಾಚಾರ ಆರೋಪ ಕುರಿತಂತೆ ಕಾಂಗ್ರೆಸ್ ಮುಖಂಡ ಎಸ್.ಎಂ.ಪಾಟೀಲ ಆಗ್ರಹ ವಿಜಯಪುರ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಕಾಲಘಟ್ಟದಲ್ಲಿ ೪೦ ಸಾವಿರ ಕೋಟಿ ರೂ. ಭ್ರಷ್ಟಾಚಾರವಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗಂಭೀರವಾಗಿ ಆರೋಪಿಸಿದ್ದಾರೆ, ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಬೇಕು, ಅಂಕಿ-ಸಂಖ್ಯೆಗಳನ್ನು ಆಧಾರವಾಗಿರಿಸಿಕೊಂಡು ಹೇಳಿರುವ ಯತ್ನಾಳ ಅವರನ್ನು ತನಿಖೆ ನಡೆಸಿದರೆ ಇನ್ನಷ್ಟು ಸತ್ಯಾಂಶ ಹೊರಬೀಳಲಿದೆ ಎಂದು ಕಾಂಗ್ರೆಸ್ ಮುಖಂಡ ಎಸ್.ಎಂ. ಪಾಟೀಲ ಗಣಿಹಾರ ಒತ್ತಾಯಿಸಿದರು.ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಯತ್ನಾಳರು ಬಿಜೆಪಿ ಸರ್ಕಾರದ ಭಾಗವಾಗಿದ್ದರು, ಆಗ ಈ ಅವ್ಯವಹಾರದ ಬಗ್ಗೆ ಧ್ವನಿ ಏಕೆ ಎತ್ತಲಿಲ್ಲ? ನಿಮ್ಮ ಪಾಲು ಅದರಲ್ಲಿತ್ತೋ? ಅಥವಾ ಪಾಲು ಹಣ ಹಂಚಿಕೆಯಲ್ಲಿ ಧಕ್ಕೆಯಾಗಿದ್ದಕ್ಕೆ ಈ ರೀತಿ ಆರೋಪಿಸುತ್ತಿದ್ದಿರೋ ಎಂದು ಯತ್ನಾಳರಿಗೆ ಸವಾಲು ಹಾಕಿದರು. ಯತ್ನಾಳರ ಬಗ್ಗೆ ಜನರಿಗೆ ಗೌರವವಿದೆ, ಅವರ ಈ ಗೌರವ ಇನ್ನೂ ಹೆಚ್ಚಾಗಬೇಕು, ಹೀಗಾಗಿ ಮೊದಲು ಚುನಾವಣೆಗೆ…
ಸಿದ್ದೇಶ್ವರ ಶ್ರೀ ಗುರುನಮನ | ಮಹಿಳೆ ಮತ್ತು ಸಂಸ್ಕೃತಿ ಗೋಷ್ಠಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಭಿಮತ ವಿಜಯಪುರ: ಮಹಿಳೆ ಹೊರತಾಗಿ ಸಂಸ್ಕೃತಿ ಇಲ್ಲ, ಸಂಸ್ಕೃತಿ ಹೊರತಾಗಿ ಮಹಿಳೆ ಇಲ್ಲ. ಸಂಸ್ಕೃತಿ ಉಳಿದಿದ್ದು ಮಹಿಳೆಯಿಂದ, ಮಹಿಳೆ ಸಂಸ್ಕೃತಿಯ ಬ್ರಾಂಡ್ ಅಂಬಾಸಿಡರ್ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಬುಧವಾರ ಸಂಜೆ ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಸ್ವಾಮೀಜಿ ಗುರುನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹಿಳೆ ಮತ್ತು ಸಂಸ್ಕೃತಿ ಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಭಾರತ ದೇಶಕ್ಕೆ 5 ಸಾವಿರ ವರ್ಷಗಳ ಇತಿಹಾಸವಿದೆ. ಭಾರತ ದೇಶದ ವೈಭವಪೂರಿತ ಇತಿಹಾಸವನ್ನು ನಾವು ಕೇಳಿ ತಿಳಿದುಕೊಂಡಿದ್ದೇವೆ. ಆದರೆ ಮಹಿಳೆಯನ್ನು ಕೇವಲ ಹೆರೋಕೆ, ಲಾಲಿ ಹಾಡೋಕೆ, ಅಡುಗೆ ಮಾಡೋಕೆ ಸೀಮಿತ ಮಾಡಲಾಗಿದೆ. ಗಂಡ ಸತ್ತರೆ ಬದುಕಲು ಸಾಧ್ಯವೇ ಇಲ್ಲ ಎಂದು ಚಿತೆಗೆ ಹಾರಿ ಪ್ರಾಣ ಬಿಡುವ ಅನಿಷ್ಠ ಪದ್ಧತಿಯನ್ನು ಭಾರತ ಕಂಡಿದೆ. ಇಂದು ಹೆಣ್ಣು ಬದಲಾಗಿದ್ದಾಳೆ. ಪೈಲಟ್ ಆಗಿಯೂ ಸಾಧನೆ ಮಾಡಿದ್ದಾಳೆ, ಕೂಲಿ ಮಾಡಿಯೂ ಸಂಸಾರ ನಡೆಸುತ್ತಾಳೆ,…
ಜಯ್ ನುಡಿ ಜಯಶ್ರೀ.ಜೆ. ಅಬ್ಬಿಗೇರಿ,* ಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ, ಮೊ.೯೪೪೯೨೩೪೧೪೨ ಜೀವನವೆನ್ನುವುದು ಏರಿಳಿತಗಳಿಂದ ಕೂಡಿದೆ. ಅದು ಹೀಗೆ ಇರುತ್ತದೆ ಹೀಗೇ ಸಾಗುತ್ತದೆಂದು ಖಚಿತವಾಗಿ ಹೇಳಲು ಆಗುವುದಿಲ್ಲ. ಹೀಗಿದ್ದಾಗ್ಯೂ ಕೆಲವರು ಮಾತ್ರ ಏರಿಳಿತಗಳನ್ನು ಲೆಕ್ಕಿಸದೇ ತಾವು ಅಂದುಕೊಂಡಂತೆ ಗೆಲುವನ್ನು ದಾಖಲಿಸಿಯೇ ಬಿಡುತ್ತಾರೆ. ಒಮ್ಮೆಲೇ ಭರ್ರನೇ ಬೀಸುವ ಬಿರುಗಾಳಿಯಾಗಲಿ, ಮನಸ್ಸಿಗೆ ಮುದನೀಡುವ ತಂಗಾಳಿಯಾಗಲಿ ಅವರಿಗೆ ಯಾವುದೇ ವ್ಯತ್ಯಾಸ ತರುವುದಿಲ್ಲ. ಅದಕ್ಕೆ ಅವರು ಮೂಗಿನ ಮೇಲೆ ಬೆರಳಿಡುವ, ಅಚ್ಚರಿಯನ್ನು ಮೂಡಿಸುವ ಯಶಸ್ಸಿನ ಕಿರೀಟವನ್ನು ಮುಡಿಗೇರಿಸಿಕೊಳ್ಳುತ್ತಾರೆ. ಸೋಲುಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ ಅವುಗಳಿಂದ ಪಾಠ ಕಲಿಯುತ್ತ ಗೆಲುವಿನ ಮಾರ್ಗದಲ್ಲಿ ನಡೆಯುತ್ತಾರೆ. ಹಾಗಾದರೆ ಗೆಲುವಿನ ಸರದಾರರಿಗೂ ಸೋತು ಸುಣ್ಣವಾಗುವ ವ್ಯಕ್ತಿಗಳಿಗೂ ಇರುವ ವ್ಯತ್ಯಾಸವಾದರೂ ಏನು? ಎನ್ನುವ ಪ್ರಶ್ನೆ ತಲೆಯಲ್ಲಿ ಸುಳಿಯುತ್ತದೆ. ಯಶಸ್ವಿ ವ್ಯಕ್ತಿಗಳು ಮತ್ತು ವಿಫಲ ವ್ಯಕ್ತಿಗಳನ್ನು ಪ್ರತ್ಯೇಕಿಸುವ ಅತ್ಯಂತ ಸ್ಪಷ್ಟವಾದ ಅಂಶಗಳು ಬಹಳಷ್ಟು ಇವೆ. ಅದರಲ್ಲಿ ಸ್ಥಿರತೆಯ ಶಕ್ತಿ ಪ್ರಮುಖವಾದುದು. ಯಶಸ್ವಿ ವ್ಯಕ್ತಿಗಳು ಅಸಾಧಾರಣ ಫಲಿತಾಂಶಗಳನ್ನು ಉಂಟು ಮಾಡಬಲ್ಲರು. ಏಕೆಂದರೆ ಅವರು ತಮ್ಮ ಯೋಜನೆಗಳನ್ನು ಅನುಸರಿಸಲು ಆಯ್ಕೆ…
ವಿಜಯಪುರ: ಪಿಯುಸಿಯಲ್ಲಿ ಉತ್ತೀರ್ಣರಾಗಿರುವ ಮತ್ತು ೨೦೨೪ರಲ್ಲಿ ಉತ್ತೀರ್ಣರಾಗುತ್ತಿರುವ ವಿದ್ಯಾರ್ಥಿಗಳಿಗೆ ಎಚ್ಸಿಎಲ್ ಟೆಕ್ನಾಲಜಿಸ್ ವತಿಯಿಂದ ೧೨ ತಿಂಗಳ ಉದ್ಯೋಗ ಆಧಾರಿತ ಟೆಕ್ ಬಿ ತರಬೇತಿ ಆಯೋಜಿಸಲಾಗಿದ್ದು, ಆಸಕ್ತ ಅಭ್ಯಥಿಗಳು ನೊಂದಾಯಿಸಿಕೊಳ್ಳುವAತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳು ತಿಳಿಸಿದ್ದಾರೆ.ಎಚ್ಸಿಎಲ್ ಟೆಕ್ನಾಲಜಿ ಅವರು ಪರಿಣಿತಿ ಮತ್ತು ಉತ್ಸಾಹಿ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದೊಮದಿಗೆ ಒಡಂಬಡಿಕೆ ಮಾಡಿಕೊಂಡಿದೆ.ತರಬೇತಿಗೆ ಪ್ರವೇಶ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ೬ ತಿಂಗಳು ಕ್ಲಾಸ್ರೂಂ ತರಬೇತಿ ಮತ್ತು ೬ ತಿಂಗಳು ಇಂಟರ್ನಶಿಪ್ ತರಬೇತಿ ನೀಡಲಿದ್ದು, ಇಂಟರ್ನಶಿಪ್ ತರಬೇತಿ ಸಮಯದಲ್ಲಿ ತಿಂಗಳಿಗೆ ೧೦ ಸಾವಿರ ರೂ. ಸ್ಟೈಫಂಡ್ ನೀಡಲಾಗುವುದು. ನಂತರ ಹೆಚ್ಸಿಎಲ್ ಟೆಕ್ನಾಲಜಿಸ್ನಲ್ಲಿ ಉದ್ಯೋಗದ ಜೊತೆಯಲ್ಲಿ ಐಐಟಿ, ಐಐಐಟಿ, ಐಐಎಂ, ಬಿಐಟಿಎಸ್, ಪಿ ಸೇರಿದಂತ ವಿಶ್ವವಿದ್ಯಾಲಯಗಳಿಂದ ಉನ್ನತ ಶಿಕ್ಷಣಕ್ಕೆ ಅವಕಾಶ ಲಭಿಸಲಿದೆ.ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು http://bit.ly/TechBeeKSDC ಮೂಲಕ ನೊಂದಣಿ ಮಾಡಿಕೊಳ್ಳಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: ೮೭೨೨೭೯೦೩೪೦, ೯೮೪೫೪೫೪೪೭೧ ಸಂಖ್ಯೆಗೆ ಸಂಪರ್ಕಿಸುವAತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ೧೧೦/೧೧ ಕೆವ್ಹಿ ತಿಕೋಟ, ಹೊನವಾಡ,೩೩/೧೧ ಕೆವಿ ಬಿಜ್ಜರಗಿ ಹಾಗೂ ೧೧ ಕೆವಿ ಬೇಗಳ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಸದರಿ ವಿದ್ಯುತ್ ಕೇಂದ್ರಗಳಿಂದ ಸರಬರಾಜಾಗುವ ಎಲ್ಲ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ಡಿ.೨೮ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪-೩೦ ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
