Author: editor.udayarashmi@gmail.com

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಡಿ.೨೭ರ ಬುಧವಾರದಂದು ತಿಕೋಟಾ ತಾಲೂಕಿನ ಲೋಹಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಕಾಯ್ದಿರಿಸಿದ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಸುಮಾರು ೭೫ ಎಕರೆ ಭೂಮಿಯನ್ನು ಕರ್ನಾಟಕ ಆಹಾರ ನಿಯಮಿತ (ಫುಡ್ ಕರ್ನಾಟಕ ಲಿ.) ಸಂಸ್ಥೆಗೆ ಮೀಸಲಿಡಲಾಗಿದೆ. ಇಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳಿಗೆ ಅವಕಾಶ ನೀಡಲಾಗುತ್ತದೆ. ಮೊದಲನೇ ಹಂತದಲ್ಲಿ ೨೫ ಎಕರೆ ಭೂಮಿಯನ್ನು ಅಭಿವೃದ್ಧಿಪಡಿಸಿ ಇಂಡಸ್ಟ್ರಿಯಲ್ ಫ್ಲಾಟ್‌ಗಳನ್ನು ತಯಾರಿಸಲಾಗುತ್ತದೆ. ಹಾಗೂ ಕೃಷಿ ಕೈಗಾರಿಕೆ ಮಾಡುವವರಿಗೂ ಸಹ ಅವಕಾಶ ನೀಡಲಾಗುತ್ತದೆ. ಎರಡನೇ ಹಂತದಲ್ಲಿ ಕೋಲ್ಡ್ ಸ್ಟೋರೇಜ್ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಪಡಿಸುವುದು ಮತ್ತು ಮೂರನೇ ಹಂತದಲ್ಲಿ ಒಳಚರಂಡಿ ಸಂಸ್ಕರಣಾ ಘಟಕ ಬಳಸಿದ ನೀರನ್ನು ಮರು ಬಳಕೆ ಮಾಡುವ ಉದ್ದೇಶದಿಂದ ಶುದ್ಧೀಕರಣ ಘಟಕ ನಿರ್ಮಾಣ ಮಾಡಲಾಗುತ್ತದೆ. ಹೀಗೆ ಮೂರು ಹಂತಗಳಲ್ಲಿ ಈ ಫುಡ್ ಪಾರ್ಕ್ ಅಭಿವೃದ್ಧಿಗೆ ಯೋಜನೆ ಸಿದ್ಧಪಡಿಸಲಾಗಿದೆ. ಪ್ರಸ್ತುತದಲ್ಲಿ ರಸ್ತೆ…

Read More

ವಿಜಯಪುರ: ಕೋವಿಡ್-೧೯ ಉಪತಳಿ ಜೆಎನ್.೧ ರಾಜ್ಯದಲ್ಲಿ ಉಲ್ಬಣಿಸುತ್ತಿರುವ ಕಾರಣ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಸೋಂಕು ಪತ್ತೆ, ಸೋಂಕಿತರ ಚಿಕಿತ್ಸೆ ವಿಶೇಷ ಘಟಕ, ಆಕ್ಸಿಜನ್ ಘಟಕ, ಔಷಧ ಸೇರಿದಂತೆ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದ ಅವರುಕ, ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ, ತುರ್ತು ನಿಗಾ ಘಟಕ, ಉಪಕರಣಗಳ ಪರಿಶೀಲನೆ, ಆಕ್ಸಿಜನ್ ಸಿಲಿಂಡರ್ ಮಾಹಿತಿ, ಐಸಿಯುದಲ್ಲಿ ಇರುವ ಯಂತ್ರೋಪಕರಣಗಳು ಮತ್ತು ಔಷಧಗಳ ಲಭ್ಯತೆ ಕುರಿತು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಅವರು ಸೂಚನೆ ನೀಡಿದ್ದಾರೆ.ಪ್ರಸ್ತುತ ಹವಾಮಾನ, ಚಳಿ, ವಾತಾವರಣ ಇರುವುದರಿಂದ ಸೋಂಕು ತಗಲುವ ಸಾಧ್ಯತೆ ಹೆಚ್ಚಾಗುವುದರಿಂದ ಆರೋಗ್ಯ ಇಲಾಖೆ ಸೂಚನೆಗಳನ್ನು ಪಾಲಿಸಬೇಕು. ಹಿರಿಯ ನಾಗರಿಕರು, ದೀರ್ಘಕಾಲಿನ ಸಮಸ್ಯೆ ಹೊಂದಿರುವವರು, ಗರ್ಭೀಣಿಯರು, ಬಾಣಂತಿಯರು ಮನೆಯಿಂದ ಹೊರಗೆ ಹೋಗುವಾಗ, ಜನಸಂದಣಿ ಪ್ರದೇಶದಲ್ಲಿ ಮಾಸ್ಕ ಧರಿಸಬೇಕು. ಜ್ವರ,…

Read More

ಮುದ್ದೇಬಿಹಾಳ: ಪಟ್ಟಣದ ೧೮ ನೇ ವಾರ್ಡಿನ ಸದಸ್ಯ ಅಲ್ಲಾಭಕ್ಷ ಢವಳಗಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪಚುನಾವಣೆಗೆ ಬುಧವಾರ ಮತದಾನ ನಡೆಯಿತು.ಒಟ್ಟು ೧೧೧೨ ಮತದಾರರನ್ನು ಹೊಂದಿದ್ದ ವಾರ್ಡ ಗೆ ಒಟ್ಟು ೬ ಅಭ್ಯರ್ಥಿಗಳು ಸ್ಪರ್ದಿಸಿದ್ದರು. ೪೨೪ ಗಂಡು ೪೦೨ ಹೆಣ್ಣು ಸೇರಿ ಒಟ್ಟು ೮೨೬(೭೪.೨೮) ಮತದಾನವಾಯಿತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದರು. ಮತದಾನ ಮಾಡಲು ಬಂದಿದ್ದ ಅಂದಾಜು ೯೦ರ ವೃದ್ಧೆಗೆ ಯುವಕರು ಮತದಾನ ಕೇಂದ್ರದ ವರಗೆ ಕೈಹಿಡಿದು ಕರೆದುಕೊಂಡು ಹೋಗಿ ಸಹಕರಿಸಿದರು.ಸಹಾಯಕ ಚುನಾವಣಾ ಅಧಿಕಾರಿ ರಮೇಶ ಲಮಾಣಿ, ಪ್ರಿಸೈಡಿಂಗ್ ಅಧಿಕಾರಿ ಎಸ್.ಆರ್.ಪಾಟೀಲ ಸೇರಿದಂತೆ ಎಂ.ಬಿ.ಗುಡಗುಂಟಿ, ಎ.ಎಸ್.ಬಿರಾದಾರ, ಎಸ್.ಎನ್.ಕುಂಬಾರ ಕರ್ತವ್ಯದಲ್ಲಿದ್ದರು.

Read More

ವಿಜಯಪುರ: ಮಹಾನಗರ ಪಾಲಿಕೆ ವಾರ್ಡ್ ನಂ.35ರ ಕೌಜಲಗಿ ತಾಂಡಾದಲ್ಲಿ ಸರ್ಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂ.46 ರಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ, ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಕಟ್ಟಡವನ್ನು ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ಉದ್ಘಾಟಿಸಿದರು.ನಂತರ ಅಲ್ಲಿನ ನಿವಾಸಿಗಳ ಅಹವಾಲು ಆಲಿಸಿದರು. ಕೆಲ ಸಮಸ್ಯೆಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಕರೆ ಸರಿಪಡಿಸಲು ಸೂಚಿಸಿದರು. ಇದೇ ವೇಳೆ ಆತ್ಮೀಯವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಕುರಿಯವರ, ಮುಖಂಡರಾದ ರಾಜಕುಮಾರ ರಾಠೋಡ, ವಿಠ್ಠಲ ನಾಯಕ, ಉಮಾಜಿ ನಾಯಕ, ಜಗನ್ನಾಥ ರಾಠೋಡ, ಶಿವಾಜಿ ಚವ್ಹಾಣ, ಆನಂದ ಹಂಜಿ ಸೇರಿದಂತೆ ಶಾಲಾ ಶಿಕ್ಷಕರು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯ ನಿವಾಸಿಗಳು ಇದ್ದರು.

Read More

ಇಂಡಿ: ಫಲಾನುಭವಿಗಳ ಪಟ್ಟಿ ತಡೆಯುವಂತೆ ಗ್ರಾಮ ಪಂಚಾಯತಿ ಅಧ್ಯಕ್ಷರೊಬ್ಬರು ಒತ್ತಾಯಿಸಿದ್ದಾರೆ.ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮ ಪಂಚಾಯತಿಯಲ್ಲಿ ಬಸವ ವಸತಿ, ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ ತಡವಲಗಾ ಗ್ರಾಮ ಪಂಚಾಯತಿಗೆ 50 ಮನೆಯ ಗುರಿ ನೀಡಲಾಗಿದೆ. ಆದ್ರೇ, ಗ್ರಾಮ ಪಂಚಾಯತಿ ಸದಸ್ಯ ರಾಮನಗೌಡ ಪಾಟೀಲ ಗ್ರಾಮ ಪಂಚಾಯತಿ ಅಧ್ಯಕ್ಷ ರಮೇಶ ಹೊಸಮನಿ ಅವರ ಖೊಟ್ಟಿ ಸಹಿ ಮಾಡಿದ್ದಾರೆ‌‌‌. ಅದಕ್ಕಾಗಿ ಅವರ ವಿರುದ್ಧ ಸೂಕ್ತ ತನಿಖೆ ನಡೆಸಿ, ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಅಧ್ಯಕ್ಷ ಹೊಸಮನಿ ಮನವಿ ಸಲ್ಲಿಸಿದ್ದಾರೆ.

Read More

ಮುದ್ದೇಬಿಹಾಳ: ಪಟ್ಟಣದ ವಿದ್ಯಾನಗರದಲ್ಲಿರುವ ಹಾರ್ವರ್ಡ ಪಿ.ಯು ಸೈನ್ಸ್ ಕಾಲೇಜಿನಲ್ಲಿ ಡಿ.೨೮ ರ ಬೆಳಿಗ್ಗೆ ೧೦:೩೦ ಕ್ಕೆ ದತ್ತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಚನ್ನಣ್ಣ ಬಸವಂತ್ರಾಯ ದೇಸಾಯಿ(ಮಡಿಕೇಶ್ವರ) ಇವರ ಸ್ಮರಣಾರ್ಥವಾಗಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ದತ್ತಿ ದಾನಿಗಳಾಗಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಧಾರವಾಡದ ಉಪ್ಪಿನ ಬೆಟಗೇರಿಯ ಮೂರುಸಾವಿರ ಮಠದ ಕುಮಾರ ವಿರೂಪಾಕ್ಷ ಮಹಾಸ್ವಾಮಿಗಳು ಸಾನಿಧ್ಯವಹಿಸಿ ಅನುಭಾವ ನೀಡಲಿದ್ದಾರೆ. ಕಾಲೇಜಿನ ಅಧ್ಯಕ್ಷ ಎಸ್.ಎಂ.ನೆರಬೆಂಚಿ ಬಸವಭಾವ ಪೂಜೆ ನೆರವೇರಿಸಲಿದ್ದು, ತಾ.ಶ.ಸಾ.ಪ ಅಧ್ಯಕ್ಷ ಬಸವರಾಜ ನಾಲತವಾಡ ನೇತೃತ್ವ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ನ್ಯಾಯವಾದಿ ಎಸ್.ಬಿ.ಬಾಚಿಹಾಳ, ದಿ ಕರ್ನಾಟಕ ಕೋ ಅಪ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ, ಉದ್ಯಮಿಗಳಾದ ಸುಧೀರ ನಾವದಗಿ, ಶರಣು ಸಜ್ಜನ, ಪುರಸಭೆ ಸದಸ್ಯ ವಿರೇಶ ಹಡಲಗೇರಿ ಸೇರಿದಂತೆ ಮತ್ತೀತರರು ಆಗಮಿಸಲಿರುವದಾಗಿ ಪ್ರಕಟಣೆ ತಿಳಿಸಿದೆ.

Read More

ಬಸವನಬಾಗೇವಾಡಿ: ನಾಡಿನಲ್ಲಿ ನಡೆಯುವ ಜಾತ್ರೆ-ಉತ್ಸವಗಳು ಜನರಲ್ಲಿ ಭಕ್ತಿ ಹೆಚ್ಚಿಸಲು ಪೂರಕವಾಗಿವೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.ಪಟ್ಟಣದ ಗೌರಿ-ಶಂಕರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಸಂಜೆ ಜಾತ್ರಾಮಹೋತ್ಸವದಂಗವಾಗಿ ಹನ್ನೊಂದು ದಿನಗಳ ಕಾಲ ಹಮ್ಮಿಕೊಂಡಿದ್ದ ಪ್ರವಚನ ಮುಕ್ತಾಯ ಸಮಾರಂಭದಲ್ಲಿ ಜ್ಯೋತಿ ಬೆಳಗಿಸಿ ಮಾತನಾಡಿದ ಅವರು, ಜಗತ್ತು ವೈಜ್ಞಾನಿಕವಾಗಿ ಮುಂದುವರಿದರೂ ಆಧ್ಯಾತ್ಮಿಕ ಶಕ್ತಿಯಿಂದ ನಮ್ಮ ಬದುಕಿನಲ್ಲಿ ಶಾಂತಿ, ನೆಮ್ಮದಿ ಕಂಡುಕೊಳ್ಳಬಹುದು. ಯಾವುದೇ ಕಾಯಕ ಮಾಡಿದರೂ ಭಗವಂತನ ಮೇಲೆ ಭಕ್ತಿ ಬೆಳೆಸಿಕೊಂಡರೆ ತಾವು ಮಾಡುವ ಕಾಯಕ ಉತ್ತಮವಾಗಿ ಸಾಗುತ್ತದೆ. ಗೌರಿ-ಶಂಕರ ಜಾತ್ರೆಯು ವರ್ಷದಿಂದ ವರ್ಷಕ್ಕೆ ಸಡಗರ, ಸಂಭ್ರಮದಿಂದ ಆಚರಣೆಯಾಗುತ್ತಿರುವುದು ಸಂತಸದಾಯಕ ಸಂಗತಿ. ಜಾತ್ರೆಗಳಿಂದ ಜನರಲ್ಲಿ ದೈವ ಭಕ್ತಿ ಬರುವ ಜೊತೆಗೆ ನಾವೆಲ್ಲರೂ ಒಂದು ಎಂಬ ಭಾವ ಬರುತ್ತದೆ ಎಂದರು.ಸಾನಿಧ್ಯ ವಹಿಸಿದ್ದ ವಿರಕ್ತಮಠ ಸಿದ್ದಲಿಂಗ ಸ್ವಾಮೀಜಿ, ಪ್ರವಚನಕಾರ ಹೊಳಲು ವಿರಕ್ತಮಠದ ಚನ್ನಬಸವ ದೇವರು, ವಿಪಿಕೆಪಿಎಸ್ ಬ್ಯಾಂಕ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಶ್ರೀಕಾಂತ ಪಟ್ಟಣಶೆಟ್ಟಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ,…

Read More

ಬಸವನಬಾಗೇವಾಡಿ: ತಾಲೂಕಿನ ನರಸಲಗಿ ಗ್ರಾಮದ ಗೌರಿ ಶಂಕರ ಜಾತ್ರೆ ಬುಧವಾರ ವಿಜೃಂಭಣೆಯಿಂದ ಜರುಗಿತು.ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದ ನಂತರ ಮಹಿಳೆಯರು ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದರು. ಗ್ರಾಮದ ಗೌರಿಶಂಕರ ಕಲಾತಂಡದಿಂದ ಮೋಡಿಕಾರ ಆಟ ನಡೆದ ನಂತರ ದ್ಯಾಮವ್ವನ ಸೋಗು, ಶಿವರಾಯನ ಸೋಗು, ಕಳ್ಳ ಬೇಡನ ಸೋಗು, ವಿವಿಧ ಹಾಸ್ಯ ಮನರಂಜನೆ ಸೋಗುಗಳು ಜರುಗಿದವು.ಸಂಜೆ ಶಿವ, ಗೌರಿ, ಗಂಗೆ ಮೂರ್ತಿಗಳ ಮೆರವಣಿಗೆಯು ಡೊಳ್ಳು ಕುಣಿತ, ಗೊಂಬೆ ಕುಣಿತ, ವಿವಿಧ ವಾದ್ಯ ಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳ ಮೂಲಕ ಗಂಗ ಸ್ಥಳಕ್ಕೆ ಕಳುಹಿಸಲಾಯಿತು. ರಾತ್ರಿ ಸಿಡಿದೆದ್ದ ಸೂರ್ಯ ಚಂದ್ರ ನಾಟಕ ಪ್ರದರ್ಶನಗೊಂಡಿತು.ಮೆರವಣಿಗೆಯಲ್ಲಿ ಶಾಂತಗೌಡ ಹೊಸಳ್ಳಿ, ಹಣಮಂತ ಹಾಲಿಹಾಳ, ಸಂಗಯ್ಯ ಮಠ, ಶಾಂತಗೌಡ ಓದಿ, ದೇವೇಂದ್ರ ಗೋನಾಳ, ಶ್ರೀಶೈಲಗೌಡ ಹೊಸಳ್ಳಿ, ಗೋಪಾಲ ಕನಸೆ, ಸೋಮನಗೌಡ ಪಾಟೀಲ, ಪ್ರಶಾಂತ ಛಲವಾದಿ, ಅಶೋಕ ಛಲವಾದಿ, ಅಲ್ಲಾಭಕ್ಷ ಮಕಾನದಾರ, ಗುರುನಾಥ ದಳವಾಯಿ, ಮುತ್ತುರಾಜ ಹಾಲಿಹಾಳ, ಶರಣಗೌಡ ಚೌಧರಿ, ಮಾಂತೇಶ ಹಾಲಿಹಾಳ, ರಾಮನಗೌಡ ಬಿರಾದಾರ, ಮಹದೇವಪ್ಪ ಮಾದರ,…

Read More

ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣ ಪಂಚಾಯಿತಿಯ ವಾರ್ಡ್ ನಂ. ೭ರ ಕಾಂಗ್ರೆಸ್ ಸದಸ್ಯ ಮೋದಿನಸಾಬ ಮಕಾನದಾರ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಬುಧವಾರ ಜರುಗಿದ ಉಪಚುನಾವಣೆಯ ಮತದಾನ ಶೇ.೮೮ ರಷ್ಟು ಆಗುವ ಮೂಲಕ ಬಹುತೇಕ ಶಾಂತಿಯುತವಾಗಿ ನಡೆಯಿತು.ಮತದಾನವು ಪಟ್ಟಣದ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕೋಣೆ ಸಂಖ್ಯೆ-೨ ರಲ್ಲಿ ನಡೆಯಿತು.ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸಲೀಂ ಮಕಾನದಾರ, ಬಿಜೆಪಿ ಪಕ್ಷದಿಂದ ಬಸಗೊಂಡಪ್ಪ ಮುತ್ತಪ್ಪನ್ನವರ, ಜೆಡಿಎಸ್ ಪಕ್ಷದಿಂದ ಸಾಹೇಬಫಯಾಬ ತೆಲಸಂಗ, ಪಕ್ಷೇತರರಾಗಿ ವಾಯದಬಾನು ಮಕಾನದಾರ ಸ್ಪರ್ಧಾಕಣದಲ್ಲಿದ್ದಾರೆ. ವಾರ್ಡ್ ನಂ.೭ರಲ್ಲಿ ೨೬೭ ಪುರುಷ ಮತದಾರರು, ೨೬೨ ಮಹಿಳಾ ಮತದಾರರು ಸೇರಿ ಒಟ್ಟು ೫೨೯ ಮತದಾರರಿದ್ದಾರೆ. ಇಂದು ಜರುಗಿದ ಮತದಾನ ಪ್ರಕ್ರಿಯೆಯಲ್ಲಿ ೨೩೮ ಪುರುಷ ಮತದಾರರು, ೨೨೯ ಮಹಿಳಾ ಮತದಾರರು ಸೇರಿ ಒಟ್ಟು ೪೬೭ ಮತದಾರರು ತಮ್ಮ ಮತ ಚಲಾಯಿಸಿದ್ದಾರೆ.ಈ ಉಪಚುನಾವಣೆಯ ಮತದಾನ ಎಣಿಕೆ ಬಸವನಬಾಗೇವಾಡಿಯ ತಹಸೀಲ್ದಾರ ಕಚೇರಿಯಲ್ಲಿ ಡಿ.೩೦ ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ತೋಟಗಾರಿಕೆ ಇಲಾಖೆಯ ಅಧಿಕಾರಿ ಸಿ.ಬಿ.ಪಾಟೀಲ ಮಾಹಿತಿ ನೀಡಿದರು.

Read More

ಬಸವನಬಾಗೇವಾಡಿ: ವಿಜಯಪುರದ ಜ್ಞಾನಯೋಗಾಶ್ರಮದ ನಡೆದಾಡುವ ದೇವರು ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಜ.೨ ಕ್ಕೆ ಲಿಂಗ್ಯೆಕ್ಯರಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಸಮಯದಲ್ಲಿ ಜಿಲ್ಲೆಯ ಪ್ರತಿಯೊಂದು ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸಿದ್ದೇಶ್ವರರ ಭಾವಚಿತ್ರ ನೀಡುವ ಮೂಲಕ ತಾವು ಗುರುನಮನ ಸಲ್ಲಿಸುತ್ತಿರುವುದಾಗಿ ವಿಜಯಪುರ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ಬೋಳಸೂರ ಹೇಳಿದರು.ಪಟ್ಟಣದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಗೆ, ತಾಲೂಕು ಪ್ರಾಥಮಿಕ ಶಿಕ್ಷಕರ ಸಹಕಾರಿ ಸಂಘಕ್ಕೆ ಬುಧವಾರ ಪೂಜ್ಯ ಸಿದ್ದೇಶ್ವರರ ಭಾವಚಿತ್ರ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಶತಮಾನದ ಸಂತ, ದಾರ್ಶನಿಕರಾಗಿದ್ದ ಪೂಜ್ಯ ಸಿದ್ದೇಶ್ವರರು ನಡೆದು ಬಂದ ದಾರಿ, ಅವರ ತತ್ವ-ಸಂದೇಶಗಳು ಎಂದಿಗೂ ಎಲ್ಲರಿಗೂ ಆದರ್ಶ, ಮಾರ್ಗದರ್ಶಿಯಾಗಿದೆ. ಜ.೨ ರಂದು ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಗುರುನಮನ ನಡೆಯುತ್ತಿದೆ. ಅಂದು ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿಯೂ ಗುರುನಮನ ನಡೆಯುವ ಸಂದರ್ಭದಲ್ಲಿ ಪೂಜ್ಯ ಸಿದ್ದೇಶ್ವರರ ಭಾವಚಿತ್ರ ಇದ್ದರೆ ಒಳ್ಳೆಯದು ಅನ್ನುವ ದೃಷ್ಟಿಕೋನದಿಂದ ತಾವು ಜಿಲ್ಲೆಯ ೩ ಸಾವಿರ ಶಾಲೆಗಳಿಗೆ, ಎಲ್ಲ ತಾಲೂಕಿನ ಶಿಕ್ಷಣ ಇಲಾಖೆಯ ಕಚೇರಿಗೆ…

Read More