Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಲು, ಕಲಿಕಾ ವಾತಾವರಣವನ್ನು ಹಬ್ಬದ ರೀತಿಯಲ್ಲಿ ಸೃಷ್ಟಿಸುವುದು ಕಲಿಕಾ ಹಬ್ಬದ ಉದ್ದೇಶ, ಇದು ಸರಕಾರಿ ಶಾಲೆಗಳಲ್ಲಿ ಮಾತ್ರ ಆಚರಿಸುತ್ತಿರುವುದು ವಿಶೇಷ ಎಂದು ಹಿರಿಯ ಶಿಕ್ಷಕ ಆರ್.ವಿ.ಪಾಟೀಲ್ ಹೇಳಿದರು.ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೇವಾಡ ಸರಕಾರಿ ಶಾಲೆಯಲ್ಲಿ ಕಲಿಕಾ ಹಬ್ಬ ಕಾರ್ಯಕ್ರಮದ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.ಮುಖ್ಯ ಅತಿಥಿಗಳಾಗಿ ತಾಳಿಕೋಟೆಯ S.K.ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ S.D. ಕರ್ಜಗಿ ಸರ್ ಭಾಗವಹಿಸಿ ಮಾತನಾಡಿ ಪ್ರತಿಭೆ ಬಡತನದಲ್ಲಿ ಹುಟ್ಟಿ ಅರಮನೆಯಲ್ಲಿ ಪ್ರಜ್ವಲಿಸುತ್ತದೆ. ಹಾಗಾಗಿ ಸರಕಾರಿ ಶಾಲೆಯಲ್ಲಿ ಕಲಿತ ನಿವೆಲ್ಲ ಬಡಕುಟುಂಬದವಾರದೂ ಮುಂದೊಂದು ದಿನ ದೊಡ್ಡ ವ್ಯಕ್ತಿಗಳಾಗಿ ಬೆಳಯುತ್ತಿರಿ ಎಂದು ಅಬ್ರಾಹಂ ಲಿಂಕನ್ ಜೀವನಗಾಥೆಯನ್ನು ಉಲ್ಲೇಖಿಸಿ ಪ್ರೇರಣಾತ್ಮಕ ಮಾತುಗಳನ್ನು ಹೇಳಿದರು.ಶಿಕ್ಷಣ ರತ್ನ ಪ್ರಶಸ್ತಿ ಪಡೆದ ಟ ಬಿ.ವಿ.ಹಿರೇಮಠ ಹಾಗೂ ಜ್ಞಾನಜ್ಯೋತಿ ಪ್ರಶಸ್ತಿ ಪಡೆದ ಎಸ್.ಎಮ್.ಬಿರಾದಾರ ಶಿಕ್ಷಕರಿಗೆ ಅಗರಖೇಡ ಕ್ಲಸ್ಟರ್ ನ ಗುರು ಬಳಗದಿಂದ ಹಾಗೂ ಗುಬ್ಬೇವಾಡ ಶಾಲೆಯ ಶಿಕ್ಷಕ ವೃಂದದಿಂದ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಗುಬ್ಬೇವಾಡ ಶಾಲೆಯ ಮುಖ್ಯ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ಕಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಶಾಲೆ ಹಾಗೂ ಕಾಲೇಜುಗಳು ಮಕ್ಕಳ ಶಿಕ್ಷಣ, ಶಿಸ್ತು ಮತ್ತು ಸಂಸ್ಕಾರಗಳನ್ನು ಬೆಳೆಸುವ ಪವಿತ್ರ ಕೇಂದ್ರಗಳು. ಇಂತಹ ಶಿಕ್ಷಣ ಕೇಂದ್ರಗಳು ಶಾಲಾ ವಾರ್ಷಿಕೋತ್ಸವದಲ್ಲಿ ಮಕ್ಕಳಿಗೆ ಅಶ್ಲೀಲ ಹಾಗೂ ಅಸಭ್ಯ ಗೀತೆಗಳಿಗೆ ನೃತ್ಯ ಮಾಡಿಸುವ ಪ್ರವೃತ್ತಿ ಅತ್ಯಂತ ಖಂಡನೀಯವಾಗಿದೆ ಎಂದು ಕರವೇ ಸ್ವಾಭಿಮಾನಿ ಬಣದ ತಾಲ್ಲೂಕು ಅಧ್ಯಕ್ಷ ನಾಗರಾಜ ಕುಂಬಾರ ಹೇಳಿದರು.ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳಲ್ಲಿ ಅಶ್ಲೀಲ ಗೀತೆಗಳಿಗೆ ನೃತ್ಯ ಮಾಡುವುದನ್ನು ನಿಷೇಧಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ದಿಂದ ತಹಶೀಲ್ದಾರ ಸಂತೋಷ ಮ್ಯಾಗೇರಿ ರವರಿಗೆ ಬುಧವಾರ ಮನವಿ ಸಲ್ಲಿಸಿ ಮಾತನಾಡಿದರು.ಆದರೆ ಕೆಲವು ಶಾಲಾ ಕಾಲೇಜುಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಒಳ್ಳೆಯ ದೇಶ ಭಕ್ತಿ ಗೀತೆ, ಭಾವ ಗೀತೆ, ಕನ್ನಡ ನಾಡ ನುಡಿ ಗೀತೆಗಳ ನೃತ್ಯಗಳಿಗೆ ಆದ್ಯತೆ ನೀಡದೆ ಅಶ್ಲೀಲ ಗೀತೆಗಳಿಗೆ ನೃತ್ಯ ಮಾಡಿಸುತ್ತಿರುವುದು ಪ್ರತಿ ವರ್ಷ ಕಂಡು ಬಂದಿರುತ್ತದೆ. ಕಾರಣ ಈ ವರ್ಷದಿಂದ ಯಾವುದೇ ಶಾಲಾ…
ಲೇಖನ*- *ಡಾ ಶಶಿಕಾಂತ ಪಟ್ಟಣ*ರಾಮದುರ್ಗ – ಪುಣೆ ಉದಯರಶ್ಮಿ ದಿನಪತ್ರಿಕೆ ಇವತ್ತು ರಾಜಕಾರಣ ಮತ್ತು ಪ್ರಾಮಾಣಿಕತೆ ಎಂಬುದು ತದ್ವಿರುದ್ಧ ಪದಗಳು. ಇದಕ್ಕೆ ಮಾದರಿ ಎಂದರೆ ಮಾಜಿ ಸಚಿವ ಶ್ರೀ ಎಸ್ ಕೆ ಕಾಂತಾತನ್ನ ಬದುಕಿನುದ್ದಕ್ಕೂ ಸಂಘರ್ಷ ಸಮನ್ವಯತೆಯ ಸಾಕಾರ ರೂಪದಲ್ಲಿ ತಮ್ಮನ್ನು ತೊಡಗಿಸಿಕೊಂಡ ನಾನು ಕಂಡರ ಅತ್ಯಂತ ಅಪರೂಪದ ಪ್ರಾಮಾಣಿಕ ರಾಜಕಾರಣಿ ಎಂದು ಕರೆದರೆ ತಪ್ಪಾಗಲಾರದು. ಈಗಲೂ ಬಾಡಿಗೆ ಮನೆಯಲ್ಲಿ ಕಾಲ ಕಳೆಯುವ ಸರಳ ಸಜ್ಜನಿಕೆಯ ಸ್ನೇಹ ಜೀವಿ. ಮಂತ್ರಿ ಪದವಿ ಇದ್ದಾಗ ಕಾರ್ಮಿಕರ ಪರವಾಗಿ ನಿಂತ ಶ್ರೀ ಎಸ್ ಕೆ ಕಾಂತಾ ಕರ್ನಾಟಕವು ಕಂಡ ಅಪರೂಪದ ಪ್ರಬುದ್ಧ ಶ್ರೇಷ್ಠ ರಾಜಕಾರಣಿ.ಪ್ರಶಸ್ತಿ ಹಣವನ್ನು ಕಾರ್ಮಿಕ ನಿಧಿಗೆ ಮರಳಿ ನೀಡಿದ ಮಹಾನುಭಾವರುಕಳೆದ ವರ್ಷ ಡಿ ದೇವರಾಜ ಅರಸು ಪ್ರಶಸ್ತಿ ಅವರಿಗೆ ದೊರಕಿತು. ಶ್ರೀ ಸಿದ್ಧರಾಮಯ್ಯ ಶ್ರೀ ಬಸವರಾಜ ಹೊರಟ್ಟಿ ಅಂತಹ ಅನೇಕ ಹಿರಿಯ ನಾಯಕರ ಮಧ್ಯೆ ಸದು ವಿನಯದ ಶ್ರೀ ಎಸ್ ಕೆ ಕಾಂತಾ ಅವರು ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ತಮಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (ಇಗ್ನೋ) ದಿಂದ ಪ್ರಸಕ್ತ ವರ್ಷದ ಪದವಿ ಸ್ನಾತಕೋತ್ತರ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶ ಆರಂಭವಾಗಿದ್ದು ಜನೆವರಿ 31 ಕೊನೆಯ ದಿನವಾಗಿದೆ.ಪ್ರವೇಶಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ನಗರದ ರಾಮಮಂದಿರ ರಸ್ತೆಯ ಬಿ.ಎಲ್. ಡಿ.ಇ.ಸಂಸ್ಥೆಯ ಜೆ.ಎಸ್.ಎಸ್.ಶಿಕ್ಷಣ ಮಹಾವಿದ್ಯಾಲಯ ಆವರಣದಲ್ಲಿರುವ ಇಗ್ನೋ ಅಧ್ಯಯನ ಕೇಂದ್ರ 1307 ರಲ್ಲಿ ಸಂಪರ್ಕಿಸಬಹುದು.ಅಲ್ಲದೆ www.ignouadmission.samarth.edu.in ಕ್ಕೆ ಲಾಗಿನ್ ಆಗಿ ಆನ್ಲೈನ್ ಮೂಲಕ ನೊಂದಣಿ ಪಡೆಯಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9980691291 ಗೆ ಸಂಪರ್ಕಿಸುವಂತೆ ಇಗ್ನೋ ಕೇಂದ್ರ ಸಂಯೋಜಕ ಡಾ. ಮಂಜುನಾಥ ಕೋರಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಲ್ಲ ಸಂಪತ್ತುಗಳಲ್ಲಿ ಜ್ಞಾನ ಸಂಪತ್ತು ಶ್ರೇಷ್ಠವಾಗಿದೆ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದ್ದಾರೆ.ಗುರುವಾರ ನಗರದ ಜ್ಞಾನಯೋಗಾಶ್ರಮದಲ್ಲಿ ಶತಮಾನಂದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ 3ನೇ ಪುಣ್ಯಸ್ಮರಣೆೋತ್ಸವದ ಗುರುನಮನ ಅಂಗವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಗಾಟಿಸಿ ಅವರು ಮಾತನಾಡಿದರು.ನಿಯಮಿತ ವ್ಯಾಯಾಮ, ಆಧ್ಯಾತ್ಮ, ಸತ್ವಯುತ ಸಾವಯವ ಆಹಾರ ಸೇವನೆ, ದುಶ್ಚಟಗಳಿಂದ ದೂರವಿರುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಜ್ಞಾನ ದಾಸೋಹದ ಪ್ರವಚನಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಅವರು ಹೇಳಿದರು.ಶಿಬಿರದ ಸಂಚಾಲಕ ಮತ್ತು ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಮಾತನಾಡಿ, ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಆಶಯದಂತೆ ಪ್ರತಿವರ್ಷ ಗುರುಪೂರ್ಣಿಮೆಯ ದಿನದಂದು ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ…
ಅಭಿಮತ- ಶ್ರೀ ಸದ್ಗುರು ಬಸವಪ್ರಭು ಸ್ವಾಮೀಜಿಕಲ್ಯಾಣ ಮಹಾಮನೆ ಮಹಾಮಠಗುಣತೀರ್ಥವಾಡಿ-ಬಸವಕಲ್ಯಾಣ ಉದಯರಶ್ಮಿ ದಿನಪತ್ರಿಕೆ ಬಸವ ಸಂಸ್ಕೃತಿ ಅಭಿಯಾನದ ವಿರುದ್ಧವಾಗಿ ಬಬಲೇಶ್ವರದಲ್ಲಿ ಆಯೋಜಿಸಿದ್ದ ಬಸವಾದಿ ಶರಣರ ಹಿಂದೂ ಸಮಾವೇಶದಲ್ಲಿ ಅಪ್ರಬುದ್ಧವಾಗಿ ಮಾತನಾಡಿ, ಬಸವಾದಿ ಪ್ರಮಥರ ಮೂಲ ಆಶಯಗಳನ್ನು ತಪ್ಪು ತಪ್ಪಾಗಿ ಅರ್ಥೈಸಿ ಜನಗಳಿಗೆ ಮೂರ್ಖರನ್ನಾಗಿಸುವ ಕನ್ನೇರಿ ಸ್ವಾಮಿಗಳ ಪ್ರತಿಯೊಂದು ಮಾತುಗಳಿಗೆ ಉತ್ತರಿಸಲು ಸವಾಲನ್ನು ಸ್ವೀಕರಿಸಲು ನಾವು ಸದಾ ಸನ್ನದ್ಧರಾಗಿದ್ದೇವೆ.ಕನ್ನೇರಿ ಶ್ರೀಗಳಿಗೆ ವಚನಗಳಲ್ಲಿನ ತತ್ವಜ್ಞಾನ ಮತ್ತು ದಾರ್ಶನಿಕತೆಯ ಕೊರತೆ ಎದ್ದು ಕಾಣುತ್ತಿದೆ. ಅವರ ಪ್ರತಿಯೊಂದು ಮಾತುಗಳು ಪ್ರಚೋದನಾತ್ಮಕ ಮತ್ತು ದ್ವೇಷದಿಂದ ಕೂಡಿವೆ. ‘ಇಲಿಗೆ ಹೊಡೆಯಲು ಹೋಗಿ ಗಣಪನಿಗೆ ಪೆಟ್ಟು ಕೊಟ್ಟಂತೆ’ ಎಂಬಿ ಪಾಟೀಲ, ಭಾಲ್ಕಿ ಶ್ರೀ, ನಿಜಗುಣಾನಂದ ಸ್ವಾಮೀಜಿ ಮತ್ತು ಸಾಣೆಹಳ್ಳಿ ಶ್ರೀಗಳಿಗೆ ವೈಯುಕ್ತಿಕವಾಗಿ ಬೈಯಲು ಹೋಗಿ ಬಸವಣ್ಣನವರ ಜೀವನಕ್ಕೆ ಮತ್ತು ಅವರ ವಚನಗಳ ಅಂಕಿತದ ತಾತ್ವಿಕತೆಗೆ ದಕ್ಕೆಯನ್ನುಂಟು ಮಾಡುತ್ತಿರುವುದು ಅವರ ಅಜ್ಞಾನದ ಪರಮಾವಧಿಯಾಗಿದೆ.ಕನ್ನೇರಿ ಶ್ರೀಗಳ ಮಾತುಗಳ ರೂಪದಲ್ಲಿಯೇ ಸವಾಲಿನ ಪ್ರಶ್ನೆಗಳು ಉದ್ಭವಿಸುತ್ತಿವೆ ಇದಕ್ಕೆ ಉತ್ತರಿಸಿ..1) ಬಸವಣ್ಣನವರ ಯಾವ ವಚನದಲ್ಲಿಯೂ ಲಿಂಗಾಯತ ಧರ್ಮದ ಪದ ಬಂದಿಲ್ಲ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ MES ಪಬ್ಲಿಕ್ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಮ್ಮಿಕೊಂಡ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ ಸಸಿ ನೆಟ್ಟು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪರಿಸರ ಸಂರಕ್ಷಣೆ ಸೇರಿದಂತೆ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು, ಅವರ ಕಾರ್ಯಗಳು ಅತ್ಯಂತ ಶ್ಲಾಘನೀಯವಾಗಿವೆ ಎಂದು ಹೇಳಿದರು.MES ಪಬ್ಲಿಕ್ ಶಾಲೆಯ ಅಧ್ಯಕ್ಷ ಮೋಹನ ಚೋಳಕೆ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿಕೊಂಡಾಗ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯವನ್ನು ನೀಡಲು ಸಾಧ್ಯ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಾ ಬಂದಿದೆ ಎಂದರು.ಶಿಕ್ಷಕರಾದ ರಮೇಶ ಮಲ್ಲಾಡಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಹೆಸರಿನಲ್ಲಿ ಒಂದು ಗಿಡವನ್ನು ನೆಟ್ಟು ಅದನ್ನು ಸಂರಕ್ಷಿಸಿದರೆ ಪರಿಸರ ಉಳಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.ವಲಯದ ಮೇಲ್ವಿಚಾರಕರಾದ ಮಹಾಂತೇಶ ವಿ.ಎ. ಮಾತನಾಡಿ, ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ…
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಟಾಕಳಿ ಗ್ರಾಮದ ಪ್ರಕಾಶ ಲವಟೆ ವಸ್ತಿಯ ಅಂಗನವಾಡಿ ಕೇಂದ್ರದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳಿಲ್ಲದೆ ಮಕ್ಕಳ ಶಿಕ್ಷಣ ಹಾಗೂ ಪೋಷಣೆಗೆ ತೊಂದರೆಯಾಗುತ್ತಿದೆ ಎಂದು ಲವಟೆ ವಸ್ತಿ ಪಾಲಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್, ತೂಕ ಯಂತ್ರ, ಅಡುಗೆ ಪಾತ್ರೆಗಳು ಹಾಗೂ ಅಗತ್ಯ ದಾಖಲೆಗಳು ಇಲ್ಲದೆ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಈ ಹಿಂದೆ ಕಾರ್ಯನಿರ್ವಹಿಸಿದ್ದ ಅಂಗನವಾಡಿ ಕಾರ್ಯಕರ್ತೆಯ ಸ್ಥಾನಕ್ಕೆ ನೇಮಕಗೊಂಡ ಅಂಗನವಾಡಿ ಕಾರ್ಯಕರ್ತೆ ಗೆ ಆವೇಳೆ, ಹಸ್ತಾಂತರಿಸದೆ ಅಂಗನವಾಡಿಗೆ ಸಂಬಂಧಿಸಿದ ದಾಖಲೆಗಳು, ಅಡುಗೆ ಸಾಮಗ್ರಿಗಳು ಹಾಗೂ ಮಕ್ಕಳ ಆಟಿಕೆಗಳನ್ನು ಪಂಚಾಕ್ಷರಿ ಲವಟೆ ಅವರ ವಸ್ತಿಯಲ್ಲಿ ಇಟ್ಟು ಹೋಗಿದ್ದು, ಹೊಸದಾಗಿ ನೇಮಕಗೊಂಡ ಕಾರ್ಯಕರ್ತೆಗೆ ಯಾವುದೇ ಸಾಮಗ್ರಿ ಹಾಗೂ ದಾಖಲೆಗಳನ್ನು ಹಸ್ತಾಂತರಿಸಿಲ್ಲ ಎಂದು ಪಾಲಕರು ಆರೋಪಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ವಾಲಿ ಅವರು, ಸರಕಾರದ ಆದೇಶದಂತೆ 2023ರಲ್ಲಿ ಪ್ರಕಾಶ ಲವಟೆ ವಸ್ತಿಯಲ್ಲಿ ಹೊಸ ಅಂಗನವಾಡಿ ಕೇಂದ್ರ ಪ್ರಾರಂಭಿಸಲಾಗಿತ್ತು. ಆದರೆ, ಮೇಲ್ವಿಚಾರಕಿಯ ಸೂಚನೆಯ ಮೇರೆಗೆ ಆಗಿನ ಚಾರ್ಜ್ ತೆಗೆದುಕೊಂಡ ಕಾರ್ಯಕರ್ತೆ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಭಾರತದ ಪ್ರತಿಯೊಂದು ಭಾಷೆಯೂ ದೇಶದ ಅಮೂಲ್ಯ ಸಂಪತ್ತಾಗಿದ್ದು, ಎಲ್ಲ ಭಾಷೆಗಳನ್ನು ಗೌರವದಿಂದ ಕಾಣಬೇಕು. ಭಾಷೆಗಳ ನಡುವೆ ಶ್ರೇಷ್ಠತೆ ಎಂಬ ಭೇದಭಾವ ಸಲ್ಲದು. ಎಲ್ಲರೂ ಸಾಮರಸ್ಯದಿಂದ ಬದುಕಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮಹಾರಾಷ್ಟ್ರ ರಾಜ್ಯದ ಮಡ್ಡಿ ಸಂಖ ಗ್ರಾಮದ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಮಹಾರಾಷ್ಟ್ರದ ಜತ್ತ ತಾಲೂಕಿನ ಸಂಖ ಗ್ರಾಮದಲ್ಲಿ ಆಯೋಜಿಸಿದ್ದ ಗಡಿನಾಡು ಕನ್ನಡ ಸಾಹಿತ್ಯ–ಸಂಸ್ಕೃತಿ ಸಂಭ್ರಮ ಹಾಗೂ ನಲಿ–ಕಲಿ ಸಾಮಗ್ರಿ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗಡಿನಾಡು ಪ್ರದೇಶದ ಕನ್ನಡಿಗರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ಸರ್ಕಾರಗಳು ಸೇರಿ ಬಗೆಹರಿಸಬೇಕು. ಈ ಭಾಗದ ಕನ್ನಡ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರತಿ ವರ್ಷ ಕನಿಷ್ಠ 1೦೦ ಕೋಟಿ ರೂ. ಅನುದಾನ ನೀಡಬೇಕೆಂದು ಅವರು ಕರ್ನಾಟಕ ಸರ್ಕಾರವನ್ನು ಮನವಿ…
ನಾಡು ಕಂಡ ಶ್ರೇಷ್ಟ ಶತಮಾನದ ವಿಶ್ವ ಸಂತ, ಅಲ್ಲಮನ ವಾರಸುದಾರ ನಡೆ-ನುಡಿಗಳನ್ನೊಂದಾಗಿಸಿದ ನಮ್ಮೆಲ್ಲರ ದೈವ ಶ್ರೀ ಸಿದ್ದೇಶ್ವರ ಶ್ರೀ ಗಳ ಪುಣ್ಯಸ್ಮರಣೆಯ ನಿಮಿತ್ತ ಪ್ರತಿ ವರ್ಷ ಜನೇವರಿ 1 ಹಾಗೂ 2 ರಂದು ನಡೆಯಲಿರುವ ಗುರುನಮದ ನಿಮಿತ್ಯ ಈ ಶಬ್ದ ನಮನ ಲೇಖನ- ಜಿ.ಬಿ.ಸಾಲಕ್ಕಿವಿಜಯಪುರ ಉದಯರಶ್ಮಿ ದಿನಪತ್ರಿಕೆ “ಸತ್ಯವೂ ಇಲ್ಲ, ಅಸತ್ಯವೂ ಇಲ್ಲ, ಸಹಜವೂ ಇಲ್ಲ, ಅಸಹಜವೂ ಇಲ್ಲ, ಇಲ್ಲ, ಇಲ್ಲವೆಂಬುದು ತಾನಿಲ್ಲ ಗುಹೇಶ್ವರ ನೆಂಬುದು ತಾ ಬಯಲು”ಎಂಬ ಅಂತಿಮ ಅಭಿವಂದನೆ ಯೊಂದಿಗೆ ವಿಶ್ವದ ದಾರ್ಶನಿಕರಾದ ಸಾಕ್ರೆಟಿಸ ಪ್ಲ್ಯಾಟೊ , ಅರಿಸ್ಟಾಟಲ, ಝೆನ್, ಅಲ್ಲಮ, ಅಣ್ಣ ಬಸವಣ್ಣರಂತ ರವರ ಸಾಲಿಗೆ ಸೇರಿದ ನಡೆ-ನುಡಿಗಳನ್ನು ಒಂದಾಗಿಸಿದ ವಿಶ್ವಸಂತ ಶ್ರೀ ಸಿದ್ದೇಶ್ವರ ಶ್ರೀಗಳು ಕಾಯಿ-ಕರ್ಪೂರ, ಹಾರ-ತುರಾಯಿ, ಪಲ್ಲಕ್ಕಿಗಳಿಂದ ಅತೀ ದೂರವಿದ್ದ ಈ ಶತಮಾನ ಕಂಡ ಬ್ರಹ್ಮ ಖು(ರು)ಷಿ ತಮ್ಮ ಅಗಲುವಿಕೆಯ ನಂತರ.. “ಯಾವ ಗದ್ದುಗೆ, ಸ್ಮಾರಕಗಳೂ ಬೇಡ, ದೇಹವನ್ನು ಬೆಂಕಿಗೆ ಅರ್ಪಿಸಿ ಬಿಡಿ ನಾನು ಆವಿ, ಭಸ್ಮವಾಗಿ ಆಶ್ರಮದ ಗಿಡಗಳ ಹೂ ಎಲೆಗಳ ಮೇಲೆ…
