Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ವಿಜಯಪುರ ಜಿಲ್ಲಾ ಘಟಕ ವಿಜಯಪುರ ಅಕ್ಟೋಬರ್ 25/2025 ಶನಿವಾರ ಮಧ್ಯಾಹ್ನ 3 ಗಂಟೆವರೆಗೆ ವಿವಿಧ 25 ಸ್ಥಾನಗಳಿಗೆ ಒಟ್ಟು ಏಳು ನಾಮಪತ್ರ ಸಲ್ಲಿಕೆಯಾಗಿದ್ದು ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಎರಡು, ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ ಒಂದು, ಜಿಲ್ಲಾ ಕಾರ್ಯಕಾರಿಣಿ ಸ್ಥಾನಕ್ಕೆ ನಾಲ್ಕು ಹೀಗೆ ಒಟ್ಟು ಏಳು ನಾಮಪತ್ರ ಸಲ್ಲಿಕೆಯಾಗಿವೆ ಎಂದು ವಿಜಯಪುರ ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ತಿಳಿಸಿದ್ದಾರೆ.ನಾಮಪತ್ರ ಸಲ್ಲಿಸಲು ಅಕ್ಟೋಬರ್ 27 ಮಧ್ಯಾಹ್ನ 3 ಗಂಟೆವರಿಗೆ ಮಾತ್ರ ಕಾಲಾವಕಾಶ, 28 ರಂದು ನಾಮಪತ್ರ ಪರಿಶೀಲನೆ 30/10/2025 ನಾಮಪತ್ರ ವಾಪಸ್ ಪಡೆಯಲು ಕಾಲಾವಕಾಶ ಇದೆ. ನವೆಂಬರ್ 9 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆ ವರಿಗೆ ಮತದಾನ ಅಂದೆ ಮಧ್ಯಾಹ್ನ 3/30 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ ರಾಜ ಋಷಿ ಭಗೀರಥರ ಕಂಚಿನ ಮೂರ್ತಿ ಉದ್ಘಾಟನೆ ಸಮಾರಂಭದಲ್ಲಿ ಡಾ.ಪುರುಷೋತ್ತಮಾನಂದಪುರಿ ಶ್ರೀ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಚಿವ ಎಂ. ಬಿ. ಪಾಟೀಲರ ಕೆಲಸ ಕಾರ್ಯಗಳು ಸದಾ ಶ್ಲಾಘನೀಯವಾಗಿದ್ದು, ಜಲಸಂಪನ್ಮೂಲ ಸಚಿವರಾಗಿ ಅವರು ಮಾಡಿದ ಕೆಲಸಗಳಿಂದಾಗಿ ಆಧುನಿಕ ಭಗೀರಥ ಎನಿಸಿಕೊಂಡಿದ್ದಾರೆ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ವಿದ್ಯಾನಗರ ಚಿನ್ಮೂಲಾದ್ರಿ ಶಿಲಾಪುರಿ ಮಹಾಸಂಸ್ಥಾನ ಭಗೀರಥ ಪೀಠದ ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ಉಪ್ಪಾರ ಸಮಾಜ ಸೇವಾ ಸಂಘ ಆಯೋಜಿಸಿದ್ದ ಶ್ರೀ ರಾಜ ಋಷಿ ಭಗೀರಥರ ಕಂಚಿನ ಮೂರ್ತಿ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.ಎಲ್ಲರೂ ಮುಖ್ಯವಾಹಿನಿಗೆ ಬರಬೇಕು ಎಂಬುದು ಬಸವಾದಿ ಶರಣರ ಆಶಯವಾಗಿತ್ತು. ಅನುಭವ ಮಂಟಪದ ಮೂಲಕ ಸಮಾನತೆಗೆ ಅವಕಾಶ ಕಲ್ಪಿಸಲಾಗಿತ್ತು. ಸಚಿವರು ಈ ತತ್ಚಗಳಡಿ ಕಾಯಕ ಮಾಡುತ್ತಿದ್ದಾರೆ. ಅವರು ಇನ್ನೂ ಉನ್ನತ ಸ್ಥಾನಕ್ಕೇರಿ ಚುಕ್ಕಾಣಿ ಹಿಡಿಯಲಿ ಎಂದು ಆಶೀರ್ವದಿಸಿದರುಬಸವನಾಡಿನಲ್ಲಿ ಜನರು ಜಾತಿಯ ಬದಲು ನೀತಿಯನ್ನು ನೋಡುತ್ತಾರೆ. ಸ್ವಾಮೀಜಿಗಳಿಂದ ಜ್ಞಾನ ಸವಿಯುತ್ತಾರೆ. ಫಲಾಪೇಕ್ಷೆಯಿಲ್ಲದೇ ಗುರುಗಳನ್ನು ಗೌರವಿಸುತ್ತಾರೆ.…
ಕ್ಷಮೆ ಕೋರಿದರೆ ಕನೇರಿ ಶ್ರೀಗಳು ದೊಡ್ಡವರಾಗುತ್ತಿದ್ದರು | ಶ್ರೀಗಳ ಪ್ರವೇಶ ನಿಷೇಧದ ಹಿಂದೆ ನನ್ನ ಯಾವ ಪಾತ್ರವೂ ಇಲ್ಲ | ಸಚಿವ ಡಾ.ಎಂ.ಬಿ. ಪಾಟೀಲ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನೇರಿ ಶ್ರೀಗಳು ತಾವು ಆಡಿರುವ ಮಾತಿಗೆ ಕ್ಷಮೆ ಕೋರಿದರೆ ನಾನೇ ಅವರ ಪಾದ ಮುಟ್ಟಿ ವಿಜಯಪುರಕ್ಕೆ ಕರೆ ತರುವೆ ಎಂದು ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷಮೆ ಕೋರಿದರೆ ಕನೇರಿ ಶ್ರೀಗಳು ದೊಡ್ಡವರಾಗುತ್ತಿದ್ದರು, ಈಗಲೂ ಅವರು ಕ್ಷಮೆ ಕೋರಿದರೆ ನಾನೇ ಅವರಿಗೆ ನಮಸ್ಕರಿಸಿ ಪಾದ ಮುಟ್ಟಿ ಅವರನ್ನು ವಿಜಯಪುರಕ್ಕೆ ಕರೆ ತರುವೆ, ಕನೇರಿ ಶ್ರೀಗಳು ನನಗೂ ಆತ್ಮೀಯರು, ಅವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಶಿಷ್ಯರು, ನಾನು ಸಹ ಶ್ರೀಗಳ ಶಿಷ್ಯನೇ ಎಂದರು.ಆಡುಮಾತಿನಲ್ಲಿ ಅವರು ಪದಪ್ರಯೋಗ ಮಾಡಿದ್ದಾರೆ ಎನ್ನುವ ವಾದರಲ್ಲಿ ಹುರುಳಿಲ್ಲ, ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಅನೇಕ ದಶಕಗಳಿಂದ ಆಡುಭಾಷೆಯಲ್ಲಿಯೇ ಪ್ರವಚನ ಮಾಡಿದವರು, ಅವರು ಎಂದೂ ಈ ರೀತಿಯ ಪದ ಪ್ರಯೋಗ ಒಂದೆಡೆ ಇರಲಿ ಅದರ…
ಬಿಜೆಪಿ ನಾಯಕರಿಗೆ ಮಾಜಿ ಶಾಸಕ ಪ್ರೊ.ರಾಜು ಆಲಗೂರ ಸವಾಲು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾಂಗ್ರೆಸ್ ಪಕ್ಷ ಹಿಂದೂ ಧರ್ಮವನ್ನು ಒಡೆದಿದೆ ಎಂದು ಬಾಯಿಗೆ ಬಂದoತೆ ಮಾತನಾಡುತ್ತಿರುವ ಬಿಜೆಪಿ ನಾಯಕರು ಇದನ್ನು ಸಾಬೀತುಪಡಿಸಲಿ ನೋಡೋಣ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಸವಾಲು ಹಾಕಿದರು.ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಸಂಸದ ರಮೇಶ ಜಿಗಜಿಣಗಿ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ನಾಯಕರು ಕಾಂಗ್ರೆಸ್ ಪಕ್ಷ ಧರ್ಮ ಒಡೆಯುತ್ತಿದೆ ಎಂದು ಆರೋಪಿಸಿದ್ದಾರೆ, ಕಾಂಗ್ರೆಸ್ ನಾಯಕರು ಹಿಂದು ಧರ್ಮ ಎಲ್ಲಿ ಹೇಗೆ ಒಡೆಯುತ್ತಿದ್ದಾರೆ ಎಂದು ಸಾಬೀತುಪಡಿಸಿ ಎಂದು ಸವಾಲು ಹಾಕಿದರು.ಕಾಂಗ್ರೆಸ್ ಸರ್ಕಾರ ಬ್ರಿಟಿಷ್ ಮಾದರಿ ಆಡಳಿತ ಅಳವಡಿಸಿಕೊಂಡಿದೆ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಸಂವಿಧಾನದ ಮೇಲೆ ನಂಬಿಕೆ ಇರಿಸಿದೆ. ಪ್ರಜಾಪ್ರಭುತ್ವ ಮಾದರಿಯಲ್ಲಿ ಸರ್ಕಾರ ನಡೆಸುತ್ತಿದೆ. ಮನುವಾದಿ ಪ್ರಕಾರ ರಾಷ್ಟ್ರ ನಡೆಯಬೇಕೆಂಬ ಬಿಜೆಪಿಗರ ಉದ್ದೇಶ ನಡೆಯಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವ ಮೌಲ್ಯ ಇರಿಸಿಕೊಂಡು ಕಾಂಗ್ರೆಸ್ ನಡೆಸುತ್ತಿದೆ, ಮನುವಾದಿ ಆಧರಿಸಿ ಸರ್ಕಾರ ನಡೆಸಬೇಕು ಎಂಬುದು ಬಿಜೆಪಿಗರ ನಿಲುವು, ಈ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ್ಯತ್ನಾಳ್ ಹಲಾಲ್ ಪ್ರಮಾಣ ಪತ್ರ ಹೊಂದಿರುವ ಸಂಸ್ಥೆಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಎಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಸವಿವರವಾಗಿ ಪತ್ರ ಬರೆದಿದ್ದಾರೆ.ಉತ್ತರ ಪ್ರದೇಶದಲ್ಲಿ ಈಗಾಗಲೇ ಹಲಾಲ್ ಉತ್ಪನ್ನಗಳನ್ನು ನಿಷೇದಿಸಲಾಗಿದೆ, ಇದೆ ರೀತಿ ದೇಶಾದ್ಯಂತ ಹಲಾಲ್ ಉತ್ಪನ್ನಗಳು ಹಾಗೂ ಅದನ್ನು ಪ್ರಮಾಣೀಕರಿಸುವ ಸಂಸ್ಥೆಗಳು ನಿಷೇದವಾಗಬೇಕೆಂದು ಮಾನ್ಯ ಗೃಹ ಸಚಿವರಲ್ಲಿ ಆಗ್ರಹಿಸುತ್ತೇನೆ ಎಂದು ಪತ್ರ ಬರೆಯುವ ಮೂಲಕ ರಾಜ್ಯ ಸರ್ಕಾರಕ್ಕೆ ಟಾಂಗ್ ನೀಡಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ವಚ್ಛ ಭಾರತ ಮಿಷನ್-2.0ರ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಹಾನಗರಪಾಲಿಕೆ ವತಿಯಿಂದ ಅಕ್ಟೋಬರ್ 26 ರಂದು ಸೈಕ್ಲೊಥಾನ್ ಕಾರ್ಯಕ್ರಮ ಆಯೋಜಿಸಲಾಗಿದೆ.ಸೈಕ್ಲೊಥಾನ್ ಕಾರ್ಯಕ್ರಮವು ಅಂದು ಬೆಳಿಗ್ಗೆ 6.30 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಿಂದ ಆರಂಭಗೊಂಡು, ಗೋಲಗುಮ್ಮಟ, ಡಾ.ಬಿ.ಆರ್.ಅಂಬೇಡ್ಕರ ವೃತ್ತ, ಮಹಾತ್ಮಾ ಗಾಂಧಿ ವೃತ್ತ, ಶಿವಾಜಿ ವೃತ್ತ, ವಾಟರ್ ಟ್ಯಾಂಕ್, ಶ್ರೀ ಬಿ.ಎಮ್.ಪಾಟೀಲ ವೃತ್ತ, ಬಿ.ಎಲ್.ಡಿ.ಇ.ಕ್ಯಾಂಪಸ್ ಲಿಂಗದ ಗುಡಿ, ಶ್ರೀ ಸಿದ್ದೇಶ್ವರ ದೇವಸ್ಥಾನ, ಮಹಾತ್ಮಾ ಗಾಂಧಿ ವೃತ್ತದಿಂದ ಸಂಚರಿಸಿ. ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿ ಮುಕ್ತಾಯಗೊಳ್ಳಲಿದೆ.ನಗರದ ಯುವ ಸಮೂಹ, ಸಾರ್ವಜನಿಕರು ಈ ಸೈಕ್ಲೋಥಾನ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಇಂಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ಪಠ್ಯದ ಲೇಖಕರೊಂದಿಗೆ ಸಂವಾದ’ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಇಂಡಿ: ಕನ್ನಡ ನೆಲದ ಆಸ್ಮಿತೆಯನ್ನು ಗಡಿಭಾಗದ ಶಾಲಾಕಾಲೇಜುಗಳು ನಿರ್ವಹಿಸುತ್ತಿರುವುದು ಅತ್ಯಂತ ಸಮಾಧಾನಕರ ಸಂಗತಿ, ಕನ್ನಡತನ ಮರೆತು ಹೋಗುವ ವಿಷಾಧದ ದಿನಗಳಿವು ಎಂದು ಬೆಂಗಳೂರು ಜೈನ್ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ರಾಜಕುಮಾರ ಬಡಿಗೇರ ಹೇಳಿದರು.ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗ ಹಮ್ಮಿಕೊಂಡಿದ್ದ ” ಪಠ್ಯದ ಲೇಖಕರೊಂದಿಗೆ ಸಂವಾದ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕಾಲೇಜು ವಿದ್ಯಾರ್ಥಿಗಳಲ್ಲಿ ಕನ್ನಡ ಓದು ಮತ್ತು ಬರಹವನ್ನು ಹೆಚ್ಚಿಸುವ ಇಂತಹ ಕಾರ್ಯಕ್ರಮಗಳು ನಡೆಯಬೇಕಾದ ಸಂಗತಿಯಾಗಿದ್ದು, ಲೇಖಕರೊಂದಿಗೆ ವಿದ್ಯಾರ್ಥಿಗಳು ಬೆರೆಯುವ ಮತ್ತು ಪಠ್ಯದ ಜೊತೆಗೆ ಸಾಂಸ್ಕೃತಿಕ ಮುಖಾಮುಖಿಯಾಗುವ ಕೆಲಸ ಇಲ್ಲಿ ನಡೆಯುತ್ತಿರುವುದು ಮಾದರಿಯಾಗಿ ನಾಡಿನ ಶೈಕ್ಷಣಿಕ ವಲಯಗಳಲ್ಲಿ ಅನುಸರಿಸಬೇಕಾದ ಮಹತ್ವದ ಕಾರ್ಯವೆಂದು ಬಣ್ಣಿಸಿದರು.ಪಠ್ಯದ ಲೇಖಕ ಡಾ.ಪ್ರಕಾಶ ಖಾಡೆ ಮಾತನಾಡಿ ‘ ಪಠ್ಯ ಮತ್ತು ಕವಿ’ ಸಮಪಾತಳಿಯ ಭಿನ್ನ ಆಲೋಚನೆಯ ಭಾಗವಾಗಿರುತ್ತಾನೆ, ಸದಾ ಪಠ್ಯದ ಒಂದು ಭಾಗವಾಗಿ ನೆಲೆಯೂರಿರುತ್ತಾನೆ ಎಂದರು.ಇನ್ನೊಬ್ಬ ಕತೆಗಾರ, ಬಿಎ…
ಪ್ರೇಮ ಬರಹ ಕೋಟಿ ತರಹ(ಪ್ರಣಯ ಪಕ್ಷಿಗಳ ಮೋಹಕ ಪದಗಳ ಗುಚ್ಛ) ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಳೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಮಿಂಚು ಕಂಗಳ ಚೆಲುವೆನೀನು ಕಣ್ಣಿಗೆ ಬಿದ್ದಾಗಲಿಂದ ಮನಸ್ಸು ಹಿಡಿತಕೆ ಸಿಗುತಿಲ್ಲ. ಹೊತ್ತು ಗೊತ್ತು ಗೊತ್ತಿಲ್ಲದೇ ಜೀವ ತಿಂತಿದೆ. ಕನಸಿನ ಮುತ್ತುಗಳನು ಪೋಣಿಸುತಿದೆ. ಜಗತ್ತಿನ ಗತ್ತು ಗೊತ್ತಿರದ ಹರೆಯದ ಹೃದಯಕೆ ನಿನ್ನ ಒಡನಾಟವೇ ಬೇಕಂತೆ. ಕಿರು ಬೆರಳಿನಲ್ಲೇ ಜೇನಿನ ಜಾತ್ರೆಗೆ ಕರೆಯುವ ಅಂದಗಾತಿಯ ಮೋಹಕೆ ಸೋತಿದೆ ಈ ಹೃದಯ. ಕಣ್ಣಲ್ಲೇ ಕಚಗುಳಿ ಇಡುವ ನಿನಗಾಗಿಯೇ ರಾಶಿ ರಾಶಿ ಕನಸುಗಳ ಗುಡ್ಡೆ ಹಾಕಿರುವೆ. ನಿನ್ನ ಒಲವಿನ ಪೂಜೆಗೆ ಹೃದಯ ವೇದಿಕೆ ಸಿದ್ಧಗೊಳಿಸಿರುವೆ. ನೂರಾರು ಬಯಕೆಗಳನು ಮನಸ್ಸಿನಲ್ಲಿ ಬೆಚ್ಚಗೆ ಸಾಕುತಿರುವೆ ಕಣೆ. ಕೆಂಪಾದ ಕೆನ್ನೆಗೆ ಗಾಯ ಮಾಡಲು ಕಾದಿರುವೆ. ಅಲೆದಾಡುವ ಮನಸ್ಸಿಗೆ ಮತ್ತಷ್ಟು ಅಲೆದಾಟ ಹಚ್ಚಿರುವ ಚೆಲುವಿ ನೀನು. ಮರುಳಾದ ಹೃದಯಕೆ ನಿನ್ನ ಕೆಂದುಟಿಯ ರಂಗು ಬೇಕಂತೆ. ಮಳೆ ಚಳಿ ಬಿಸಿಲು ಯಾವುದೇ ಇರಲಿ ಅಂತರಂಗ ನಿನ್ನ ಚೆಲುವಿನ ಆಹ್ವಾನಕೆ ಹಂಬಲಿಸುತಿದೆ. ಕಾಮನ ಬಿಲ್ಲಿನ…
ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕದ ಚುನಾವಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಯನಿರತ ಪತ್ರಕರ್ತರ ಸಂಘ (ರಿ) ವಿಜಯಪುರ ಜಿಲ್ಲಾ ಘಟಕದ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಲು “ಉದಯರಶ್ಮಿ” ದಿನಪತ್ರಿಕೆ ಸಂಪಾದಕ ಇಂದುಶೇಖರ ಮಣೂರ ಅವರು ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ಅವರಿಗೆ ನಾಮಪತ್ರ ಸಲ್ಲಿಸಿದರು.ಈ ವೇಳೆ ಹಿರಿಯ ಪತ್ರಕರ್ತರಾದ ಅಶೋಕ ಯಡಳ್ಳಿ, ಮಹೇಶ ಶೆಟಗಾರ, ಶರಣು ಮಸಳಿ, ಪ್ರಕಾಶ ಬೆಣ್ಣೂರ, ಮೋಹನ ಕುಲಕರ್ಣಿ, ಕೆ.ಕೆ.ಕುಲಕರ್ಣಿ, ಸಂಗನಗೌಡ ಪಾಟೀಲ, ಗುರು ಗದ್ದನಕೇರಿ, ಶಶಿ ಮೆಂಡೆಗಾರ, ರಾಹುಲ್ ಆಪ್ಟೆ, ಡಿ.ಬಿ.ವಡವಡಗಿ, ಬಸವರಾಜ ಉಳ್ಳಾಗಡ್ಡಿ, ಗೋಪಾಲ ಕನಿಮಣಿ, ಚಿದಂಬರ (ಪುಟ್ಟು) ಕುಲಕರ್ಣಿ, ಶ್ರೀನಿವಾಸ ಸೂರಗೊಂಡ, ಸುನೀಲ ಭಾಸ್ಕರ, ಪವನ ಕುಲಕರ್ಣಿ, ರಾಜೇಂದ್ರಕುಮಾರ ಹಜೇರಿ, ಸುಧೀಂದ್ರ ಕುಲಕರ್ಣಿ ಸೇರಿದಂತೆ ಹಲವರಿದ್ದರು.
ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಅಭಿಮತ ಉದಯರಶ್ಮಿ ದಿನಪತ್ರಿಕೆ ದೇವರ ಹಿಪ್ಪರಗಿ: ಮಕ್ಕಳಿಗೆ ಒಳ್ಳೆ ಶಿಕ್ಷಣದ ಜೊತೆಗೆ ಒಳ್ಳೆ ಸಂಸ್ಕಾರವನ್ನು ನೀಡಿ ಅವರ ಭವಿಷ್ಯ ಉಜ್ವಲ ಆಗುವ ನಿಟ್ಟಿನಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸಲಿ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದಲ್ಲಿ ಗುರುವಾರ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮ್ಯಾಟ್ರಿಕ್ ನಂತರದ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಹಿಂದುಳಿದ ವರ್ಗಗಳ ಮಕ್ಕಳ ಅಭಿವೃದ್ಧಿಗಾಗಿ ಸರಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ವಸತಿ ನಿಲಯಗಳನ್ನು ಮಾಡಿದೆ. ಇದರ ಸದುಪಯೋಗ ಮಕ್ಕಳು ಪಡೆದುಕೊಳ್ಳಬೇಕು. ನನ್ನ ಕ್ಷೇತ್ರದ ಪ್ರತಿಯೊಂದು ವಸತಿ ನಿಲಯಗಳಲ್ಲಿ ಗ್ರಂಥಾಲಯ ಪ್ರಾರಂಭಿಸಬೇಕು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಿ, ನಿಮಗೆ ಬೇಕಾದ ಸಹಕಾರ ನಾನು ನೀಡುತ್ತೇನೆ. ಗ್ರಂಥಾಲಯದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಕ್ಕಳಿಗೆ ಅನುಕೂಲವಾಗುತ್ತದೆ. ನಿಕಟಪೂರ್ವ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಅವಧಿಯಲ್ಲಿ ಮತಕ್ಷೇತ್ರದ ಕಾಮನಕೇರಿ ಗ್ರಾಮದಲ್ಲಿ ೭ ಕೋಟಿ ೭೫ ಲಕ್ಷದ ಕಟ್ಟಡ ಮಂಜೂರಾತಿಯಾಗಿದೆ. ಕೆಲವೇ ದಿನಗಳಲ್ಲಿ ಭೂಮಿಪೂಜೆ ಮಾಡಲಾಗುತ್ತಿದೆ. ಜೊತೆಗೆ…
