Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಆಲಮಟ್ಟಿ ಮಂಜಪ್ಪನ ಸನ್ನಿಧಿಯಲ್ಲಿ ಸ್ನೇಹಿತರ ಸಮ್ಮಿಲನ | ಸ್ನೇಹ ಬಾಂಧವ್ಯದ ಬೆಸುಗೆಯಲ್ಲಿ ಮಿಂದ ಹಳೆ ಮನಸ್ಸುಗಳು ಆಲಮಟ್ಟಿ: ಅಲ್ಲಿ ಬಹು ವರುಷಗಳ ಬಳಿಕ ಹಳೆಯ ಸ್ನೇಹಿತರೆಲ್ಲ ಒಂದೆಡೆ ಸೇರಿದ್ದರು.ಅವರೆಲ್ಲ ಹರುಷದ ಹೊನಲಿನಲ್ಲಿ ಗುರು ಭಕ್ತಿಭಾವದಲ್ಲಿ ತನ್ಮಯರಾಗಿದ್ದರು. ಒಟ್ಟುಗೂಡಿದ ಈ ಸ್ನೇಹ ಬಳಗದ ಸಮ್ಮಿಲನದ ಘಮಲು ವಿಶೇಷಮಯವಾಗಿತ್ತು. ಗುರುಗಳ ಮೇಲಿರಿಸಿದ ಉತ್ಕಟ, ನಿಷ್ಕಲ್ಮಶ ಪ್ರೇಮಭಾವ, ಗೌರವದ ಸೆಂಟಿಮೆಂಟ್ ಶಿಷ್ಯರ ಮನದಾಳದಲ್ಲಿ ನಳನಳಿಸುತ್ತಿತ್ತು. ಪ್ರಾಂಜಲ್ಯ ಮನಸ್ಸಿನ ಮಧುರ ಭಾವಾವರಣ ನಸುನಗೆಯ ಪ್ರಸನ್ನತೆಯಿಂದ ಸೂಸುತ್ತಿತ್ತು. ಗುರು-ಶಿಷ್ಯರ ಪರಮ ಪವಿತ್ರ ಸುಗಂಧಿತ ಭಾವಲೋಕ ಮನೋಜ್ಞವಾಗಿ ಅರಳಿ ನಿಂತಿತ್ತು. ಅದರದ ಅನ್ಯೋನ್ಯತೆ ಪ್ರೀತಿ,ಪ್ರೇಮ,ವಿಶ್ವಾಸಾರ್ಹ ಗೌರವ ಮೊರತವೇ ಎಲ್ಲರ ಉಸಿರಾಗಿ ಸುಗಮತೆಯಿಂದ ಚಲಿಸುತ್ತಿತ್ತು. ಆಧುನಿಕತೆಯ ಸೊಗಡಿನಲ್ಲೂ ಗುರುದೇವತ್ರದ ಭಾವಪುಂಜವೊಂದು ಆ ಹಳೆಯ ವಿದ್ಯಾರ್ಥಿಗಳ ಮಸ್ತಕದಲ್ಲಿ ನಯವಾಗಿ, ಸೊಗಸಾಗಿ ತುಂಬಿತ್ತು. ಗುರುಗಳ ಸಾಮೀಪ್ಯದ ಕಥಾನೋಟದ ಹಂದರಕ್ಕೆ ಓಲ್ಡ್ ಸ್ಟೂಡೆಂಟ್ ಗಳೆಲ್ಲ ಖುಷಿಯಿಂದ ಗೋಲ್ಡ್ ತೋರಣದಲ್ಲಿ ತೇಲಿ ಮಿಂದೆದ್ದರು. ಹೊಸ ಭಾಷ್ಯಕ್ಕೆ ಗುರು-ಶಿಷ್ಯರ ಪವಿತ್ರಬಂಧವುಳ್ಳ ಅಪರೂಪದ ಸನ್ನಿವೇಶ ಸೃಷ್ಟಿವಾಗಿತ್ತು. ಅದು ಭಾವಗಳ ಕಟ್ಟಿದ ಎಲ್ಲಾ…
ಮುದ್ದೇಬಿಹಾಳ: ರೈತರ ಬಗ್ಗೆ ಹಗುರವಾಗಿ ಮಾತನಾಡಿದ ತಮ್ಮ ಪಕ್ಷದ ಮಂತ್ರಿಗಳ ಮೇಲೆ ಸಿಎಂ ಸಿದ್ದರಾಮಯ್ಯನವರು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಸನಗೌಡ ಪಾಟೀಲ ಒತ್ತಾಯಿಸಿದರು.ಪಟ್ಟಣದ ಬಸವೇಶ್ವರ ವೃತ್ತದ ಬಳಿ ಇರುವ ನೂತನ ಕಾಂಪ್ಲೆಕ್ಸ್ನಲ್ಲಿ ಸಿದ್ದೇಶ್ವರ ಲೋಕ ಕಲ್ಯಾಣ ಟ್ರಸ್ಟ್ ವಿಜಯಪುರ ಇವರ ೨೪*೭ ಸಿದ್ದೇಶ್ವರ ಮೆಡಿಕಲ್ ಉದ್ಘಾಟನಾ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ಬರಲಿ ಅಂತಾ ರೈತರು ಬಯಸುತ್ತಾರೆ ಅಂತ ಬೇಜವಾಬ್ದಾರಿ ಹೇಳಿಕೆ ನೀಡಿದ್ದು ದುರಂತ. ಮಳೆಗಾಗಿ ರೈತರು ಮುಗಿಲು ನೋಡುತ್ತಾ ಕುಳಿತರ್ತಾರೆ. ಮಳೆ ಬೆಳೆಗಾಗಿ ರೈತರು ಅದೆಷ್ಟೋ ಹರಕೆ ಹೊರತಾರೆ. ಮಂತ್ರಿಯಾಗಿ ಈ ರೀತಿ ಮಾತನಾಡುವದು ಸರಿ ಅಲ್ಲ. ರೈತರ ಬಗ್ಗೆ ಹಗುರವಾಗಿ ಮಾತನಾಡುವ ಶಿವಾನಂದ ಪಾಟೀಲರಿಗೆ ನಾನು ಕೂಡಲೇ ೫ಕೋಟಿ ರೂಪಾಯಿ ಕೊಡುತ್ತೇನೆ. ಆತ್ಮಹತ್ಯೆ ಮಾಡಿಕೊಳ್ಳುತಾರಾ? ಇಂಥವರ ಮೇಲೆ ಕಾಂಗ್ರೇಸ್ ಹೈಕಮಾಂಡ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಇದೇ ವೇಳೆ ಕರ್ನಾಟಕದ ಬಿಜೆಪಿಯನ್ನ ಯಡಿಯೂರಪ್ಪನವರಿಗೆ ಕೊಟ್ಟು ಬಿಟ್ಟಿದ್ದಾರೆ. ಬೆಂಗಳೂರಿನ ಸಬ್ ರಸಿಸ್ಟರ್ ಆಫೀಸ್ ನಲ್ಲಿ ಬಿಜೆಪಿಯನ್ನ…
ವಿಜಯಪುರ: ಜಿಲ್ಲೆಯ ಝಳಕಿ, ಜಿಗಜಿವಣಗಿ, ಇಂಚಗೇರಿ ಮತ್ತು ಕೆರೂರ ೧೧೦/೧೧ ಕೆವ್ಹಿ ವಿದ್ಯುತ್ ಉಪಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಸದರಿ ವಿದ್ಯುತ್ ಕೇಂದ್ರಗಳಿಗೆ ಹಾಗೂ ಸದರಿ ಉಪ ಕೇಂದ್ರದಿಂದ ಸರಬರಾಜಾಗುವ ಎಲ್ಲ ೧೧ ಕೆವ್ಹಿ ಹಾಗೂ ೩೩ ಕೆವ್ಹಿ ನಿವರ್ಗಿ, ಹೊರ್ತಿ ಹಾಗೂ ಹಲಸಂಗಿ ಕೇಂದ್ರಗಳಿಂದ ಹೊರಹೋಗುವ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಲ್ಲಿ ಡಿ.೨೮ರಂದು ಬೆಳಿಗ್ಗೆ ೯ ಗಂಟೆಯಿಂದ ೪-೩೦ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಇಂಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
ವಿಜಯಪುರ: ಸರ್ಕಾರದ ಮಹತ್ವಾಕಾಂಕ್ಷಿಯೋಜನೆಯಾದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಯುವನಿಧಿ ಯೋಜನೆಯ ನೊಂದಣಿ ಡಿಸೆಂಬರ್ ೨೬ ರಂದು ಪ್ರಾರಂಭವಾಗಿದ್ದು ಯೋಜನೆಗೆ ಅಭ್ಯರ್ಥಿಗಳು ೨೦೨೩-೨೪ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ ೨೦೨೩ರಲ್ಲಿ ತೇರ್ಗಡೆಯಾಗಿ ಫಲಿತಾಂಶ ಪ್ರಕಟಗೊಂಡ ೧೮೦ ದಿವಸದ ಒಳಗಡೆ ಕೆಲಸ ದೊರೆಯದ ನಿರುದ್ಯೋಗ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.ಪದವಿಧರರಿಗೆ ರೂ ೩೦೦೦ ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ ೧೫೦೦ ಗಳನ್ನು ಮಾಸಿಕ ನಿರುದ್ಯೋಗ ಭತ್ಯಯನ್ನು ನೀಡಲಾಗುವುದು. ಯುವನಿಧಿ ಯೋಜನೆಯ ಮೂಲಕ ನಿರುದ್ಯೋಗ ಭತ್ಯ ಪಡೆಯಲು ಅರ್ಜಿ ಸಲ್ಲಿಸುವವರು ೨೦೨೨-೨೩ ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮಾ ತೇರ್ಗಡೆಯಾದ ನಿರುದ್ಯೋಗ, ಯುವಕ ಹಾಗೂ ಯುವತಿಯರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ಉದ್ದಯೋಗ, ಸ್ವಯಂ ಉದ್ದಯೋಗ ಮಾಡುತ್ತಿರುವ ಅಭ್ಯರ್ಥಿಗಳು ಹಾಗೂ ಪದವಿ /ಡಿಪ್ಲೋಮಾ ಮುಗಿದ ನಂತರ ಮುಂದಿನ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಬರುವುದಿಲ್ಲ.ಅರ್ಜಿಗಳನ್ನು sevasindhugs.karnataka.gov.in ಲಾಗಿನ್ ಆಗಿ ಅರ್ಜಿಗಳನ್ನು ಸಲ್ಲಿಸಬೇಕು.…
ವಿಜಯಪುರ: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಬೆಲೆ ಸ್ಥಿರೀಕರಣ ಯೋಜನೆಯಡಿ ನ್ಯಾಫೆಡ್ ಸಂಸ್ಥೆಯವರು ತೊಗರಿ ಖರೀದಿಸುವ ಸಲುವಾಗಿ ವಿಜಯಪುರ ವ್ಯಾಪ್ತಿಯಲ್ಲಿ ೫೨ ತೊಗರಿ ಕೇಂದ್ರಗಳನ್ನು ತೆರೆಯಲಾಗಿದ್ದು ೨೦೨೩-೨೪ ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ತೊಗರಿ ಬೆಳೆದ ರೈತರಿಂದ ಮಾರುಕಟ್ಟೆ ದರದಲ್ಲಿ ಮತ್ತು ಎಫ್.ಎ.ಕ್ಯೂ ಗುಣಮಟ್ಟದ ತೊಗರಿಯನ್ನು ಖರಿದಿಸಲಾಗುತ್ತಿದೆ ರೈತರಿಂದ ಖರೀದಿಸಿದ ತೊಗರಿಗೆ, ರೈತರ ಖಾತೆಗೆ ಡಿ.ಬಿ.ಟಿ ಮೂಲಕ ಹಣ ಜಮೆ ಮಾಡಲಾಗುವುದು. ಜಿಲ್ಲೆಯಲ್ಲಿ ತೊಗರಿ ಬೆಳೆದ ರೈತರು ತೊಗರಿ ಮಾರಾಟ ಮಾಡಲು ನಾಫೇಡ್ ಸಂಸ್ಥೆಯವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ವತಿಯಿಂದ ನೊಂದಣಿ ಪ್ರಕೃಯೆ ಪ್ರಾರಂಬಿಸಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿಶಾಖಾ ವ್ಯವಸ್ಥಾಪಕರಾದ ಲಿಂಗರಾಜು .ಡಿ.ಎಮ್ ಮೋ.ಸಂಖ್ಯೆ ೯೪೪೯೮೬೪೪೫೨ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುದ್ದೇಬಿಹಾಳ: ಭವಿಷ್ಯದಲ್ಲಿ ಇನ್ನು ಎಲ್ಲ ವಾಹನಗಳು ಪೆಟ್ರೋಲಗಳದ್ದಾಗಿರುವುದಿಲ್ಲ. ನರೇಂದ್ರ ಮೋದಿಜೀ ಹಾಗೂ ನಿತಿನ್ ಗಡ್ಕರಿಯವರ ಪ್ರಯತ್ನದಿಂದ ಪೆಟ್ರೋಲ್ ಬದಲಾಗಿ ಎಥಿನಾಲ್ ಎಂಬ ಪೆಟ್ರೋಲ್ ಗೆ ಸಮನಾದ ದ್ರವ ಉಪಯೋಗಿಸುವ ಕಾಲ ಬಹಳ ಹತ್ತಿರದಲ್ಲಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದ ಬಳಿ ಇರುವ ನೂತನ ಕಾಂಪ್ಲೆಕ್ಸ್ನಲ್ಲಿ ಸಿದ್ದೇಶ್ವರ ಲೋಕ ಕಲ್ಯಾಣ ಟ್ರಸ್ಟ್ ವಿಜಯಪುರ ಇವರ ೨೪*೭ ಸಿದ್ದೇಶ್ವರ ಮೆಡಿಕಲ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಮ್ಮ ದೇಶದಲ್ಲಿ ಬೆಳೆಯುವ ಕಬ್ಬು, ಮೆಕ್ಕೆಜೋಳ, ಅಕ್ಕಿಯಿಂದ ತಯಾರಾಗುವ ಎಥೆನಾಲ ತಯಾರಿಸಲಾಗುತ್ತದೆ. ಇದರಿಂದ ಬೇರೆ ದೇಶದಿಂದ ಒಂದು ಲಕ್ಷ ಕೋಟಿ ರೂಪಾಯಿ ಫಾರೆನ್ ಎಕ್ಸ್ಚೇಂಜ್ ಉಳಿತಾಯವಾಗಲಿದೆ ಎಂದರು.ಸಿದ್ಧಸಿರಿ ಮತ್ತು ಸಿದ್ದೇಶ್ವರ ಸಂಸ್ಥೆಗಳಿಂದ ಬರುವ ಲಾಭದಿಂದ ಸಿದ್ದೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್ ಗೆ ವರ್ಗಾಯಿಸಿ ೧೦೮ ಬೆಡ್ಗಳ ಜ್ಞಾನಯೋಗಿ ಸಿದ್ದೇಶ್ವರ ಸೂಪರ್ಸ್ಪೆಷಾಲಿಟಿ ಆಸ್ಪತ್ರೆ ಮಾಡಿದ್ದೇವೆ. ಕಿಡ್ನಿ ಬದಲಾಯಿಸುವ ಸೌಕರ್ಯ ಕೂಡ ಈ ಆಸ್ಪತ್ರೆ ಹೊಂದಿದ್ದು, ಬೇರೆಡೆ ಕಿಡ್ನಿ…
’ರಾಜ್ಯದ ಎಲ್ಲೆಡೆ ಮಾದಿಗ ಮುನ್ನಡೆ’ ಸಮಾವೇಶದಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಠನೆ ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು, ಮಾದಿಗರಿಗೆ ಮಿಸಲಾತಿ ಕೊಡಿಸುವ ಹಾಗೂ ಸಮಾಜಿಕ ನ್ಯಾಯ ಕೊಡಿಸುವ ಹೋರಾಟದಲ್ಲಿ ನಾನು ನಿಮ್ಮ ಜೊತೆಗಿದ್ದೇನೆ ಎಂದು ನಮ್ಮನ್ನು ಅಪ್ಪಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಮುಖ್ಯಮಂತ್ರಿ ನೀವು ನಮ್ಮವರು ಎಂದು ಮಾದಿಗರನ್ನು ಎಂದಿಗೂ ಅಪ್ಪಿಕೊಂಡು ಮಾತನಾಡಿಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಟೀಕಿಸಿದರು.ನಗರದ ಅಥಣಿ ರಸ್ತೆಯ ಇಟಗಿ ಪೆಟ್ರೋಲ್ ಪಂಪ್ ಬಳಿ ಇರುವ ಸಾಯಿ ಗಾರ್ಡನ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ’ರಾಜ್ಯದ ಎಲ್ಲೆಡೆ ಮಾದಿಗ ಮುನ್ನಡೆ’ ಸಮಾವೇಶದಲ್ಲಿ ಮಾತನಾಡಿದ ಅವರು, ಮಾದಿಗರ 30 ವರ್ಷದ ಹೋರಾಟಕ್ಕೆ ಜಯ ಸನಿಹದಲ್ಲಿ ಬಂದಿದೆ. ಕೇವಲ ಮಾದಿಗರಷ್ಟೇ ಅಲ್ಲ. 101 ಜನಾಂಗದವರಿಗೂ ಸಾಮಾಜಿಕ ನ್ಯಾಯ ಒದಗಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸಿದ್ದರಿದ್ದಾರೆ. ಆದರೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ನವರು ಮಿಸಲಾತಿಯಿಂದ ಭಜಂತ್ರಿ, ವಡ್ಡರ, ಲಂಬಾಣಿಗಳನ್ನು ತೆಗೆದು ಹಾಕುತ್ತಾರೆ ಎಂದು ಬಿಜೆಪಿ ವಿರುದ್ಧ ಸುಳ್ಳು ಅಪಪ್ರಚಾರ ಮಾಡಿದರು.…
ಸಿಂದಗಿ: ಕ್ರೈಸ್ತ ಧರ್ಮವು ಜಗತ್ತಿಗೆ ಬಹುದೊಡ್ಡ ಕೊಡುಗೆಯನ್ನು ಕೊಟ್ಟಿದೆ. ಏಸು ಕ್ರಿಸ್ತನು ಶಾಂತಿ ಮತ್ತು ಪ್ರೀತಿಯನ್ನು ಧರೆಗಿಳಿಸಿದ ಮಹಾನ್ ವ್ಯಕ್ತಿ ಎಂದು ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮಿಗಳು ಹೇಳಿದರು.ಪಟ್ಟಣದ ಹೊರವಲಯದ ಲೋಯಲ್ ಶಾಲೆಯಲ್ಲಿ ಹಮ್ಮಿಕೊಂಡ ಅಂತರ್ ಧರ್ಮೀಯ ಕ್ರಿಸ್ಮಸ್ ಸಹಮಿಲನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಜಗತ್ತಿಗೆ ಶಾಂತಿ, ಕ್ಷಮೆ, ಪ್ರೀತಿಯನ್ನು ಬೋಧಿಸಿರುವ ಏಸು ಕ್ರಿಸ್ತರ ತತ್ವಗಳು ಕೇವಲ ಕ್ರೈಸ್ತ ಧರ್ಮಕ್ಕೆ ಮಾತ್ರ ಸೀಮಿತವಾಗಿಲ್ಲ. ಎಲ್ಲರೂ ಅವುಗಳನ್ನು ಅನುಸರಿಸಬೇಕು. ಅವರು ಬಯಸಿದ ಸಮಾಜವನ್ನು ನಿರ್ಮಿಸಬೇಕು ಎಂದರು.ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಪವಿತ್ರಾ ಅಕ್ಕಾಜಿ ಅವರು ಮಾತನಾಡಿ, ಜಗತ್ತಿನ ಜನರು ಅಜ್ಞಾನದ ಹಾದಿ ಹಿಡಿದಾಗ ಸುಜ್ಞಾನವನ್ನು ಬೋಧಿಸಲು ಮಹಾನ್ ವ್ಯಕ್ತಿಗಳು ಜನ್ಮ ತಾಳುತ್ತಾರೆ ಎಂಬಂತೆ, ಜನರಿಗೆ ಸುಜ್ಞಾನವನ್ನು ಬೋಧಿಸಿ ಶಾಂತಿ ಸಾಮ್ರಾಜ್ಯ ನಿರ್ಮಾಣ ಮಾಡಲು ಏಸು ಕ್ರಿಸ್ತನು ಜನಿಸಿ ಬಂದರು. ನಾವೆಲ್ಲರೂ ಅವರ ತತ್ವಗಳನ್ನು ಅಳವಡಿಸಿಕೊಂಡು ಜೀವನವನ್ನು ಪಾವನವಾಗಿರಿಸಿಕೊಳ್ಳೋಣ ಎಂದು ಆಶೀರ್ವದಿಸಿದರು.ವೇದಿಕೆಯ ಮೇಲೆ…
ಸಿಂದಗಿ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ನಡೆದ ಕಲೋತ್ಸವ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಭಾವಗೀತೆಯಲ್ಲಿ ಕಾವ್ಯಾ ನಾಯಕ್ ಪ್ರಥಮ ಸ್ಥಾನ ಹಾಗೂ ಮಧುರಾ ಹಿರೇಮಠ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಅಧ್ಯಕ್ಷ ಆರ್.ಡಿ ಕುಲಕರ್ಣಿ ನಿರ್ದೇಶಕ ಪಿ.ಡಿ ಕುಲಕರ್ಣಿ, ಮುಖ್ಯಗುರುಮಾತೆ ಎಸ್.ಐ. ಅಸ್ಕಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂಧಿ ಹರ್ಷವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಮಕ್ಕಳ ಬಳಗದ ಚಿಣ್ಣರ ನುಡಿಸಿರಿ-೪೭ ಗೆ ಚಾಲನೆ ನೀಡಿದ ಶಾಸಕ ಅಶೋಕ ಮನಗೂಳಿ ಅಭಿಮತ ಸಿಂದಗಿ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಹೊಮ್ಮಿಸಲು ಅವರಿಗೆ ಸೂಕ್ತ ವೇದಿಕೆ ನೀಡಬೇಕು. ಸೂಕ್ತ ವೇದಿಕೆ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳುತ್ತಾರೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಸರಕಾರಿ ಆದರ್ಶ ವಿದ್ಯಾಲಯದ ಸಭಾಭವನದಲ್ಲಿ ಸ್ಥಳಿಯ ಮಕ್ಕಳ ಬಳಗ ಸಿಂದಗಿ ಇವರು ಸರಕಾರಿ ಆದರ್ಶ ವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ಚಿಣ್ಣರ ನುಡಿ ಸಿರಿ-೪೭ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹ.ಮ.ಪೂಜಾರ ಗುರುಗಳು ಶಿಕ್ಷಕ ವೃತ್ತಿಯ ಜೊತೆಗೆ ೧೯೭೬ರಲ್ಲಿ ಮಕ್ಕಳ ಬಳಗ ಕಟ್ಟುವ ಮೂಲಕ ಮಕ್ಕಳಿಗೆ ಸೂಕ್ತ ವೇದಿಕೆ ನೀಡಿ ಅವರ ವ್ಯಕ್ತಿತ್ವ ವಿಕಸನಕ್ಕೆ ಕಾರಣರಾಗಿದ್ದಾರೆ. ಅವರು ಮಕ್ಕಳ ಬಳಗದ ಮೂಲಕ ಚಿಣ್ಣರ ನುಡಿ ಸಿರಿ, ಮಕ್ಕಳ ಹಬ್ಬ, ಮನೆ ಅಂಗಳದಲ್ಲಿ ಚಿಲಿಪಿ, ಶಾಲೆಯ ಆವರಣದಲ್ಲಿ ಮಕ್ಕಳ ಕಲರವ, ವಿಜ್ಞಾನ ಮೇಳ, ಮಕ್ಕಳ ಸಾಹಿತ್ಯ ಸಮ್ಮೇಳನ ಮುಂತಾದ ವೇದಿಕೆ…
