Author: editor.udayarashmi@gmail.com

ವಿಜಯಪುರ: ರಾತ್ರಿಯಿಡಿ ಕರ್ತವ್ಯ ನಿರ್ವಹಿಸುವ ಜೊತೆಗೆ ನಸುಕಿನ ಜಾವ ನಡೆದ ವೃಕ್ಷೊಥಾನ್ ಹೆರಿಟೇಜ್ ರನ್ 2023ರ 21 ಕಿ. ಮೀ. ಓಟದಲ್ಲಿ ಪಾಲ್ಗೊಂಡ ಜಿಲ್ಲಾ ಮೀಸಲು ಪೊಲೀಸ್ ಪಡೆಯ ಪೇದೆಯೊಬ್ಬರು ಕ್ರೀಡಾಭಿಮಾನ ಮೆರೆದಿದ್ದಾರೆ.ಹಳಗುಣಕಿ ಗ್ರಾಮದ ಮತ್ತು ವಿಜಯಪುರ ಮೀಸಲು ಪಡೆ ಪೊಲೀಸ್ ಪೇದೆ ಭೀಮಾಶಂಕರ ಮಾಡಗ್ಯಾಳ(38) ಡಿಸೆಂಬರ್ 23ರಿಂದ ರಾತ್ರಿಯಿಡೀ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೇ, ಮರುದಿನ ಡಿಸೆಂಬರ್ 24 ರಂದು ರವಿವಾರ ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾದ 21 ಕಿ. ಮೀ. ಮ್ಯಾರಾಥಾನ್ ಓಟದಲ್ಲಿ ಪಾಲ್ಗೋಂಡಿದ್ದಾರೆ. ಅಷ್ಟೇ ಅಲ್ಲ, ಈ ಓಟವನ್ನು 2 ಗಂಟೆ 30 ನಿಮಿಷ 39 ಸೆಕೆಂಡುಗಳಲ್ಲಿ ಪೂರ್ಣಗೊಳಿಸುವ ಮೂಲಕ ಅತ್ತಮ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಸಾಕ್ಷಿಯಾಗಿದ್ದಾರೆ ಮತ್ತು ಇತರರಿಗೆ ಸ್ಪೂರ್ತಿಯಾಗಿದ್ದಾರೆ.ಸೇವೆಯ ಜೊತೆಗೆ ಓಡುವ ಹವ್ಯಾಸ ಹೊಂದಿರುವ ಭೀಮಾಶಂಕರ ಮಾಡಗ್ಯಾಳ ಅವರನ್ನು ಇಂದು ಮಂಗಳವಾರ ನಗರದಲ್ಲಿ ವೃಕ್ಷೊಥಾನ್ ಹೆರಿಟೇಜ್ ರನ್- 2023 ಕೋರ್ ಕಮಿಟಿ ವತಿಯಿಂದ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಡಾ. ಮಹಾಂತೇಶ ಬಿರಾದಾರ ಅವರು,…

Read More

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಯಂಬತ್ನಾಳ ಗ್ರಾಮದ ಶ್ರೀ ಗೌರಿಶಂಕರ ಜಾತ್ರಾ ಮಹೋತ್ಸವ ನಿಮಿತ್ತ ಗ್ರಾಮಸ್ಥರ ಸೇವೆಗಾಗಿ ಡಿ.26 ಮಂಗಳವಾರ ಉಚಿತ ವೈದ್ಯಕೀಯ ಶಿಬಿರ ಹಮ್ಮಿಕೊಳ್ಳಲಾಗಿತ್ತು.ಶಿಬಿರದಲ್ಲಿ ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞ ವೈದ್ಯ ಡಾ. ಪ್ರಭುಗೌಡ ಬ ಲಿಂಗದಳ್ಳಿ, ಆರೋಗ್ಯಧಾಮ ಆಸ್ಪತ್ರೆಯ ಹೃದಯ ತಜ್ಞಡಾ.ಗೌತಮ್ ವಗ್ಗರ್, ನರರೋಗ ತಜ್ಞೆ ಡಾ.ಮೋನಿಕಾ ಆರ್ ನಾಯಕ್ ಡಾ. ಡಿ ವನ ಧರಿ ವಿಶೇಷ ಶಿಬಿರದಲ್ಲಿ ಪಾಲ್ಗೊಂಡು, ಸುಮಾರು ಎರಡು ನೂರಕ್ಕೂ ಹೆಚ್ಚು ರೋಗಿಗಳನ್ನು ಪರೀಕ್ಷಿಸಿ ಉಚಿತ ಆರೋಗ್ಯ ಮಾಹಿತಿ ನೀಡಿ ಚಿಕಿತ್ಸೆಯನ್ನು ಒದಗಿಸಿದರು.ಕೊನೆಗೆ ಜಾತ್ರಾ ಸಮಿತಿಯ ಪರವಾಗಿ ಆರೋಗ್ಯ ಸೇವೆ ನೀಡಿದ ಎಲ್ಲ ವೈದ್ಯರನ್ನು ಅಭಿನಂದಿಸಲಾಯಿತು.

Read More

“ಸ್ವಚ್ಛತೆ-ಸಮಯ ಪಾಲನೆ-ವ್ಯಸನಮುಕ್ತಿ” ವಿಷಯದ ಗೋಷ್ಠಿಯಲ್ಲಿ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಅಭಿಮತ ವಿಜಯಪುರ: ಯಾರು ಸಮಯಕ್ಕೆ ಬೆಲೆ ಕೊಡುತ್ತಾರೊ ಅಂತಹವರನ್ನು ಇಡೀ ಜಗತ್ತೆ ಗುರುತಿಸುವಂತಹ ಸಮಯ ಬರುತ್ತದೆ ಎಂದು ಶ್ರೀ ಸಿದ್ಧೇಶ್ವರ ಅಪ್ಪನವರು ಸದಾ ಹೇಳುತ್ತಿದ್ದರು ಎಂದು ಖ್ಯಾತ ವಾಗ್ಮಿ ಹಾಗೂ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದರು.ನಗರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳವರ ಗುರುನಮನ ಮಹೋತ್ಸವ ಅಂಗವಾಗಿ “ಸ್ವಚ್ಛತೆ-ಸಮಯ ಪಾಲನೆ-ವ್ಯಸನಮುಕ್ತಿ” ಎಂಬ ವಿಷಯದ ಕುರಿತು ಹಮ್ಮಿಕೊಂಡಿದ್ದ ೪ನೇ ಗೋಷ್ಠಿಯಲ್ಲಿ ತಮ್ಮ ಅನುಭಾವದ ನುಡಿಗಳನ್ನಾಡಿದರು.ಜ್ಞಾನಯೋಗಾಶ್ರಮದಲ್ಲಿ ಮಾತ್ರ ಅಲ್ಲ, ಎಲ್ಲ ಭಕ್ತ ವೃಂದದ ಹೃದಯದಲ್ಲೂ ಶ್ರೀ ಸಿದ್ಧೇಶ್ವರ ಅಪ್ಪನವರು ನೆಲೆಸಿದ್ದಾರೆ. ಅವರು ನಮ್ಮನ್ನು ಅಗಲಿ ಎಷ್ಟು ಬೇಗ ಒಂದು ವರ್ಷ ಉರುಳಿತು ಗೊತ್ತೆ ಆಗಲಿಲ್ಲ. ಅದಕ್ಕೆ ಸಮಯ ಬಹಳ ಮುಖ್ಯವಾದದ್ದು ಅದನ್ನು ನಾವು ಅರಿತುಕೊಳ್ಳಬೇಕು ಎಂದರು.ಅವರ ಸಾನಿಧ್ಯವಹಿಸಿದ್ದಾಗ ಶಾಂತಿಯನ್ನು ಹುಡುಕುವ ಪ್ರಮೇಯ ಇರತಿರಲಿಲ್ಲ ಸಹಜವಾಗಿ ಆ ವಾತಾವರಣ ಶಾಂತವಾಗುತ್ತಿತ್ತು. ಅದು ಅಪ್ಪನವರ ವ್ಯಕ್ತಿತ್ವಕ್ಕೆ ಇದ್ದ ಶಕ್ತಿ. ಅವರ ಜೊತೆ ಐದು ನಿಮಿಷ ಮಾತನಾಡಿದರು ಸಾಕು,…

Read More

“ಜಾಗತಿಕ ಆಧ್ಯಾತ್ಮಿಕ ಚಿಂತನೆ” ವಿಷಯ ಕುರಿತ ಗೋಷ್ಠಿ ಉದ್ಘಾಟಿಸಿದ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ ಅಭಿಮತ ವಿಜಯಪುರ: ಮಾನವ ಕುಲಕ್ಕೆ ಸಿಕ್ಕ ಅತ್ಯಂತ ದೊಡ್ಡ ಕೊಡುಗೆ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ ಈ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿದ್ದು ನನ್ನ ದೊಡ್ಡ ಸೌಭಾಗ್ಯ ಎಂದು ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ ಹೇಳಿದರು.ನಗರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮಿಗಳವರ ಗುರುನಮನ ಮಹೋತ್ಸವ ಅಂಗವಾಗಿ “ಜಾಗತಿಕ ಆಧ್ಯಾತ್ಮಿಕ ಚಿಂತನೆ” ಎಂಬ ವಿಷಯದ ಕುರಿತು ಹಮ್ಮಿಕೊಂಡಿದ್ದ ೩ನೇ ಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರು ನಮ್ಮೊಂದಿಗೆ ಇಲ್ಲ ಎಂದು ನಾನು ಹೇಳುವುದಿಲ್ಲ. ಇಂದು ಅವರು ನಮ್ಮ-ನಿಮ್ಮ ಮನದಲ್ಲಿ ಇದ್ದದ್ದಕ್ಕಾಗಿಯೇ ಇಂದು ನಾವೆಲ್ಲರೂ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಸೇರಿದ್ದೇವೆ. ಸ್ವಾಮೀಜಿಯವರು ಸದಾ ಶಾಂತಿಗೆ ಹೆಚ್ಚು ಒತ್ತನ್ನು ಕೊಟ್ಟಂತವರು. ಆದರೆ ನಾವು ಇಂದು ದ್ವೇಷದ ಸಮಾಜದಲ್ಲಿ ಬದುಕುತ್ತಿದ್ದೇವೆ. ನಮ್ಮ ಗಾಳಿಯಲ್ಲಿ, ಉಸಿರಿನಲ್ಲಿಯೇ ದ್ವೇಷ ತುಂಬಿದೆ. ಇಂತಹ ಈಗಿನ ಸಮಾಜದಲ್ಲಿ ನಾವು ಶ್ರೀ ಸಿದ್ದೇಶ್ವರ ಅಪ್ಪನವರ ಸಂದೇಶಗಳನ್ನು ಮಾತುಗಳನ್ನು ನಾವು ನಮ್ಮ…

Read More

ವಿಜಯಪುರ: ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಡಿ.30 ಹಾಗೂ31 ರಂದು ನಡೆಯಲಿರುವ ಪ್ರಥಮ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಗರದ ಹಿರಿಯ ಸಾಹಿತಿ ಭಾರತಿ ಪಾಟೀಲ ಆಯ್ಕೆಯಾಗಿದ್ದಾರೆ.ಭಾನುವಾರ ನಗರದ ಕಸಾಪ ಭವನದಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀ‌ರ ವಾಲಿಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಪ್ರಮುಖ ಹುದ್ದೆಗಳಿಗೆ ಬಿಜೆಪಿ ನೇಮಕ | ವಿಧಾನಸಭೆ ವಿಪಕ್ಷ ಉಪನಾಯಕರಾಗಿ ಅರವಿಂದ ಬೆಲ್ಲದ ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ರಾಜ್ಯ ಘಟಕದಲ್ಲಿ ಸೋಮವಾರ ಎರಡನೇ ಹಂತದ ಅಧಿಕಾರ ಹಂಚಿಕೆ ಮಾಡಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಮೇಲ್ಮನೆ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಿಸಲಾಗಿದೆ. ಇದೇ ವೇಳೆ ಅವರನ್ನು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕನಾಗಿ ಅರವಿಂದ್‌ ಬೆಲ್ಲದ ಅವರನ್ನು ನೇಮಕ ಮಾಡಲಾಗಿದೆ.ಕೆಲವು ದಿನಗಳ ಹಿಂದಷ್ಟೇ ಬಿ.ವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿ ಉಪಾಧ್ಯಕ್ಷರು, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು ಮತ್ತು ಕೆಲವು ಮೋರ್ಚಾಗಳಿಗೆ ನೇಮಕಾತಿಯನ್ನು ಪ್ರಕಟಿಸಿದ್ದರು. ಇದೀಗ ಎರಡನೇ ಹಂತದಲ್ಲಿ ವಿಧಾನ ಸಭೆ ಮತ್ತು ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.ಆರ್‌. ಅಶೋಕ್‌ ಅವರನ್ನು ವಿಧಾನಭೆಯ ವಿಪಕ್ಷ ನಾಯಕರಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕನ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಕೊಡಬೇಕು ಎಂಬ…

Read More

ದೇವರಹಿಪ್ಪರಗಿ: ಕನ್ನಡಮ್ಮ ಹಾಗೂ ಸಾಹಿತ್ಯದ ಸೇವೆಗೆ ದೊರೆತ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವುದರ ಮೂಲಕ ನಾಡು, ನುಡಿ ಸೇವೆಗೆ ಬದ್ಧರಾಗಬೇಕು ಎಂದು ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್.ವಾಲೀಕಾರ ಹೇಳಿದರು.ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ ಜಿ.ಪಿ.ಬಿರಾದಾರ ಅವರನ್ನು ಅಭಿನಂದಿಸಿ ಮಾತನಾಡಿದರು.ತಾಲ್ಲೂಕು ಘಟಕ ಹಿಂದಿನ ಅಧ್ಯಕ್ಷ ಕೆ.ಆರ್.ಕೊಕಟನೂರ ಸಾರಥ್ಯದಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಾ ಬಂದಿದೆ. ಈಗ ನೂತನ ಅಧ್ಯಕ್ಷರ ನೇತೃತ್ವದಲ್ಲಿ ಸಾಹಿತ್ಯ ಪರಿಷತ್ ವಿನೂತನ ಕನ್ನಡಪರ ಕಾರ್ಯಗಳನ್ನು ಹಮ್ಮಿಕೊಂಡು ಕನ್ನಡ ಉಳಿಸಿ, ಬೆಳೆಸುವ ಕೆಲಸ ನಿರ್ವಹಿಸಲಿ. ಎಲ್ಲರ ಸಹಕಾರವಿದೆ ಎಂದರು.ಪಟ್ಟಣ ಪಂಚಾಯಿತಿ ಸದಸ್ಯ ರಮೇಶ ಮಸಬಿನಾಳ, ಶಿಕ್ಷಕ ಪಿ.ಕೆ.ಕುಲಕರ್ಣಿ, ಪಿ.ಎಸ್.ಮಿಂಚನಾಳ, ರಾಘವೇಂದ್ರ ಕುಲಕರ್ಣಿ ಮಾತನಾಡಿದರು.ಶರಣ ಸಂಗಮ ತಾಲ್ಲೂಕು ಅಧ್ಯಕ್ಷ ಸಂಗಪ್ಪಣ್ಣ ತಡವಲ್, ತಾಲ್ಲೂಕು ಪಂಚಮಸಾಲಿ ಸಂಘದ ಅಧ್ಯಕ್ಷ ಗುರುರಾಜ್ ಆಕಳವಾಡಿ, ಮುಳಸಾವಳಗಿ ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಬಿರಾದಾರ, ಸೋಮು ದೇವೂರ, ಶಿಕ್ಷಕರಾದ ಜಿ.ಬಿ.ಹೊಕ್ಕುಂಡಿ, ಗೊಲ್ಲಾಳ ಬಿರಾದಾರ(ಹಿಟ್ನಳ್ಳಿ), ನಾಗಯ್ಯ ಹಿರೇಮಠ, ಮಹಾಂತಯ್ಯ ಮಠಪತಿ, ಎಸ್.ಜಿ.ತಾವರಖೇಡ, ಮುತ್ತು…

Read More

ಮುದ್ದೇಬಿಹಾಳ: ಕಾಂಗ್ರೆಸ್ ಪಕ್ಷದ ಪ.ಜಾ ವಿಭಾಗದ ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಸಿ.ಜಿ.ವಿಜಯಕರ ಇವರನ್ನು ಆಯ್ಕೆ ಮಾಡಿ ರಾಜ್ಯಾಧ್ಯಕ್ಷ ಆರ್.ಧರ್ಮಸೇನಾ ಅವರ ನಿರ್ದೇಶನದ ಮೇರೆಗೆ ಜಿಲ್ಲಾಧ್ಯಕ್ಷ ರಮೇಶ ಗುಬ್ಬೇವಾಡ ಆದೇಶಿಸಿದ್ದಾರೆ.

Read More

ಮುದ್ದೇಬಿಹಾಳ: ತಾಲೂಕಿನ ಆಲಕೊಪ್ಪರ ಬಳಿ ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಜೆ ಸಂಭವಿಸಿದೆ.ಮೃತ ದುರ್ದೈವಿಯನ್ನು ತಾಲೂಕಿನ ಕಣಕಾಲ ಗ್ರಾಮದ ಸೋಮಪ್ಪ ಮಾದರ(೫೦) ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಜಾವೀದ ಶೇಖ ಮತ್ತು ಚನ್ನಮ್ಮ ಪಾಟೀಲರನ್ನ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.ಘಟನಾ ಸ್ಥಳಕ್ಕೆ ಪಿಎಸ್‌ಐ ಸಂಜೀವ ತಿಪರೆಡ್ಡಿ ಭೇಟಿ ನೀಡಿ ಕಾನೂನು ಕ್ರಮ ಕೈಗೊಂಡಿದ್ದಾರೆ

Read More