Author: editor.udayarashmi@gmail.com

ಸಿಂದಗಿಯಲ್ಲಿ ಗುರು ಸನ್ಮಾನ ಹಾಗೂ ಸ್ನೇಹ ಸಮ್ಮಿಲನ | ೩೦-೪೦ ವರ್ಷಗಳ ಬಳಿಕ ಗುರು-ಶಿಷ್ಯರ ಸಮಾಗಮ *- ಶೈಲಾ ಮಣೂರ*ವಿಜಯಪುರ: ಅದೊಂದು ಅಪರೂಪದ ಹೃದಯಸ್ಪರ್ಶಿ ಸಮಾರಂಭ. ೬೦-೮೦ ರ ಇಳಿ ವಯಸ್ಸಿನ ವೃದ್ದ ಗುರುವೃಂದ ೫೦ ರ ಪ್ರಾಯದ ಹೊಸ್ತಿಲಲ್ಲಿರುವ ಶಿಷ್ಯವೃಂದದ ಅಪರೂಪದ ಸಮಾಗಮ. ಸುಮಾರು ೩೦-೪೦ ವರ್ಷಗಳ ಬಳಿಕ ಇವರು ಪರಸ್ಪರ ಸಂಧಿಸುವ ಸುವರ್ಣಾವಕಾಶ ಒದಗಿಸಿದ್ದು ಈ ಗುರು ಸನ್ಮಾನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ.    ಡಿ.೨೩ ಶನಿವಾರ ಬೆಳಗ್ಗೆ ಎಲ್ಲ ಶಿಷ್ಯ ವೃಂದವು, ಕೂಡಿ ಕಲಿತು ಆಡಿ ನಲಿದ ’ನಮ್ಮ ಗೆಳೆಯರ ಬಳಗ’ ಸ್ಥಾಪಿಸಿ ಆ ಮೂಲಕ ತಮಗೆ ಅಕ್ಷರ ಜ್ಞಾನ ನೀಡಿದ, ಜೀವನ ಮೌಲ್ಯಗಳನ್ನು ತುಂಬಿ ತಮ್ಮ ಬದುಕು ರೂಪಿಸಿದ ಅಂದಿನ ಗುರುವೃಂದವನ್ನು ಸ್ವಾಗತಿಸಲು ಸಿಂದಗಿಯ ಆಶೀರ್ವಾದ ಕಲ್ಯಾಣ ಮಂಟಪದ ದ್ವಾರಬಾಗಿಲಲ್ಲಿ ಶಿಸ್ತಿನ ಸಿಪಾಯಿಗಳಂತೆ ಕಾದು ನಿಂತಿದ್ದರು. ಒಬ್ಬೊಬ್ಬರಾಗಿ ಬಂದ ಗುರುಗಳನ್ನು ಅವರು ಗೌರವ, ಅಭಿಮಾನ, ಕಾಳಜಿಯಿಂದ ಅವರ ಕೈಹಿಡಿದು ನಿಧಾನಕ್ಕೆ ಒಳಗೆ ತೆರಳುತ್ತಿದ್ದರೆ, ಗುರು ವೃಂದ…

Read More

ಮಕ್ಕಳ ಹಿರಿಯ ಸಾಹಿತಿ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಹ.ಮ.ಪೂಜಾರ ಅಭಿಮತ ವಿಜಯಪುರ: ಸರಕಾರಗಳು ಬದಲಾದಂತೆ ಪಠ್ಯಪುಸ್ತಕ ನೀತಿ ಬದಲಾಗುತ್ತಿದೆ. ಒಂದು ಸರಕಾರ ಒಬ್ಬನನ್ನು ಕೊಲೆಗಡುಕ ಎಂದು ಬಿಂಬಿಸಿದರೆ ಇನ್ನೊಂದು ಸರಕಾರ ಅವರೊಬ್ಬ ಮಹಾನ್ ದೇಶಪ್ರೇಮಿ ಎಂದು ಹೇಳುತ್ತದೆ. ಇದರಿಂದ ಮಕ್ಕಳು ದ್ವಂದ್ವದಲ್ಲಿ ಸಿಲುಕುತ್ತಿದ್ದಾರೆ. ಕಾರಣ ಪಠ್ಯಪುಸ್ತಕ ಸಲಹಾ ಸಮಿತಿ ಸ್ವಾಯತ್ವ ಸಂಸ್ಥೆಗೆ ವಹಿಸಿದಾಗ ಈ ಗೊಂದಲಗಳಿಗೆ ಪರಿಹಾರ ಸಿಗಲು ಸಾಧ್ಯ ಎಂದು ಮಕ್ಕಳ ಸಾಹಿತಿ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಹ.ಮ.ಪೂಜಾರ ಅಭಿಪ್ರಾಯಪಟ್ಟರು.ಸಿಂದಗಿಯ ಆಶೀರ್ವಾದ ಕಲ್ಯಾಣ ಮಂಟಪದಲ್ಲಿ ಡಿ.೨೩ರಂದು ಸ್ಥಳಿಯ ’ನಮ್ಮ ಗೆಳೆಯರ ಬಳಗ’ ಹಮ್ಮಿಕೊಂಡ ಗುರು ಸನ್ಮಾನ ಹಾಗು ಸ್ನೇಹ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಇದೊಂದು ಭಾವೈಕ್ಯತೆಯ ವಿಶಿಷ್ಠ ಸಮ್ಮೇಳನವಾಗಿದ್ದು, ಇಲ್ಲಿ ಬೋಧಕರೊಂದಿಗೆ ಪೂರಕ ಕಾರ್ಯಗೈದ ಭೋಧಕೇತರ ಸಿಬ್ಬಂದಿಯನ್ನೂ ಗೌರವಿಸಿದ ಗೆಳೆಯರ ಬಳಗದ ಕಾರ್ಯ ಶ್ಲಾಘನೀಯ ಎಂದರು.ಜನ್ಮ ನೀಡಿದ ತಾಯಿ, ಬದುಕು ರೂಪಿಸಿದ ಶಿಕ್ಷಕ ಹಾಗೂ ಇವರಿಗೆ ಸೇತುವೆಯಾದ ತಂದೆ ಈ ಮೂವರನ್ನೂ ಮಕ್ಕಳು ಗೌರವಿಸಿದರೆ ಜೀವನ ಪಾವನ…

Read More

ವಿಜಯಪುರ: ಶಿಷ್ಯಂದಿರು ತಮಗೆ ಕಲಿಸಿದ ಗುರುವಿಗಿಂತ ಹೆಚ್ಚಿನ ಸಾಧನೆ ಮಾಡಿದರೆ, ಅದೇ ಗುರುವಿಗೆ ನೀಡುವ ಮಹತ್ವದ ಗುರುಕಾಣಿಕೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಪತಿ ಡಾ. ಅರುಣ ಇನಾಮದಾರ ಹೇಳಿದ್ದಾರೆ.ವಿವಿಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಹೊಸ ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗದ ಕಟ್ಟಡ ಸಭಾಂಗಣದಲ್ಲಿ ಶನಿವಾರ ನಡೆದ 1993ರಲ್ಲಿ ಎಂಬಿಬಿಎಸ್ ಪ್ರವೇಶಾತಿ ಪಡೆದ ಹಳೆಯ ವಿದ್ಯಾರ್ಥಿಗಳ 30ನೇ ವರ್ಷದ ಸ್ನೇಹ ಸಂಗಮ ಮತ್ತು ಗುರುವಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಯಾವುದೇ ಫಲಾಪೇಕ್ಷೆ ಇಲ್ಲದೇ ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಸೇವೆ ಸಲ್ಲಿಸುದ ಗುರುಗಳಿಗಾಗಿ ಗುರುವಂದನೆ ಕಾರ್ಯಕ್ರಮ ಪ್ರಶಂಸನೀಯ. ಪ್ರತಿ ಸ್ನೇಹ ಸಂಗಮದಲ್ಲೂ ಒಂದೊಂದು ಸಾಮಾಜಿಕ ಕಳಕಳಿಯ ಕಾರ್ಯಕ್ರಮ ಆಯೋಜಿಸಬೇಕು ಎಂದು ಅವರು ಸಲಹೆ‌ ನೀಡಿದರು. ಅಲ್ಲದೇ, ವಿವಿ ಆವರಣದಲ್ಲಿ ಅಲುಮ್ನಿ ಹಾಲ್ ನಿರ್ಮಿಸುವ ಯೋಜನೆಯಿದ್ದು, ಹಳೆಯ ವಿದ್ಯಾರ್ಥಿಗಳೆಲ್ಲರೂ ಉದಾರಿಯಾಗಿ ದೇಣಿಗೆ ನೀಡಿ, ಯೋಜನೆಯ ಯಶಸ್ಸಿಗೆ ಸಹಕರಿಸುವಂತೆ ಡಾ. ಅರುಣ‌ ಇನಾಮದಾರ ಕೋರಿದರು.ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ…

Read More

ಸಿಂದಗಿಯ ’ನಮ್ಮ ಗೆಳೆಯರ ಬಳಗ’ವು ಭವಿಷ್ಯದಲ್ಲಿ ಹಲವು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಲು ಯೋಜಿಸಿದೆ ಎಂದು ಬಳಗದ ರಂಗನಾಥ ಥೋರ್ಪೆ ಹೇಳಿದರು.ಸ್ನೇಹ ಸಮ್ಮಿಲನದಲ್ಲಿ ಮಾತನಾಡಿದ ಅವರು, ಈ ದಿಸೆಯಲ್ಲಿ ನಶಿಸುತ್ತಿರುವ ಕನ್ನಡ ಶಾಲೆಗಳ ಉಳಿವಿಗೆ, ಅವುಗಳ ಅಭಿವೃದ್ಧಿಗಾಗಿ ಶ್ರಮಿಸಲಿದೆ. ಅದಕ್ಕಾಗಿ ಕನ್ನಡ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸುವ ಗುರಿ ಹೊಂದಿರುವುದಾಗಿ ಥೋರ್ಪೆ ತಿಳಿಸಿದರು.

Read More

ಸಿಂದಗಿಯಲ್ಲಿ ಗುರು ಸನ್ಮಾನ ಹಾಗೂ ಸ್ನೇಹ ಸಮ್ಮಿಲನ | ೩೦-೪೦ ವರ್ಷಗಳ ಬಳಿಕ ಗುರು-ಶಿಷ್ಯರ ಸಮಾಗಮ – ಶೈಲಾ ಮಣೂರವಿಜಯಪುರ: ಅದೊಂದು ಅಪರೂಪದ ಹೃದಯಸ್ಪರ್ಶಿ ಸಮಾರಂಭ. ೬೦-೮೦ ರ ಇಳಿ ವಯಸ್ಸಿನ ವೃದ್ದ ಗುರುವೃಂದ ೫೦ ರ ಪ್ರಾಯದ ಹೊಸ್ತಿಲಲ್ಲಿರುವ ಶಿಷ್ಯವೃಂದದ ಅಪರೂಪದ ಸಮಾಗಮ. ಸುಮಾರು ೩೦-೪೦ ವರ್ಷಗಳ ಬಳಿಕ ಇವರು ಪರಸ್ಪರ ಸಂಧಿಸುವ ಸುವರ್ಣಾವಕಾಶ ಒದಗಿಸಿದ್ದು ಈ ಗುರು ಸನ್ಮಾನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ.    ಡಿ.೨೩ ಶನಿವಾರ ಬೆಳಗ್ಗೆ ಎಲ್ಲ ಶಿಷ್ಯ ವೃಂದವು, ಕೂಡಿ ಕಲಿತು ಆಡಿ ನಲಿದ ’ನಮ್ಮ ಗೆಳೆಯರ ಬಳಗ’ ಸ್ಥಾಪಿಸಿ ಆ ಮೂಲಕ ತಮಗೆ ಅಕ್ಷರ ಜ್ಞಾನ ನೀಡಿದ, ಜೀವನ ಮೌಲ್ಯಗಳನ್ನು ತುಂಬಿ ತಮ್ಮ ಬದುಕು ರೂಪಿಸಿದ ಅಂದಿನ ಗುರುವೃಂದವನ್ನು ಸ್ವಾಗತಿಸಲು ಸಿಂದಗಿಯ ಆಶೀರ್ವಾದ ಕಲ್ಯಾಣ ಮಂಟಪದ ದ್ವಾರಬಾಗಿಲಲ್ಲಿ ಶಿಸ್ತಿನ ಸಿಪಾಯಿಗಳಂತೆ ಕಾದು ನಿಂತಿದ್ದರು. ಒಬ್ಬೊಬ್ಬರಾಗಿ ಬಂದ ಗುರುಗಳನ್ನು ಅವರು ಗೌರವ, ಅಭಿಮಾನ, ಕಾಳಜಿಯಿಂದ ಅವರ ಕೈಹಿಡಿದು ನಿಧಾನಕ್ಕೆ ಒಳಗೆ ತೆರಳುತ್ತಿದ್ದರೆ, ಗುರು ವೃಂದ…

Read More

ಕಲಕೇರಿ: ಗ್ರಾಮದ ಶ್ರೀಗುರುವೀರಘಂಟೈ ಮಡಿವಾಳೇಶ್ವರ ದೇವಸ್ಥಾನದಲ್ಲಿ “ಜಾತ್ರಾ ಮಹೋತ್ಸವದ ವೇಳೆ ಶರಣರು ಬರುತಾರ ಹೋಗೋನ ನಡಿ” ಎಂಬ ಜಾನಪದ ಶೈಲಿಯ ಶ್ರೀಗುರುವೀರಘಂಟೈ ಮಡಿವಾಳೇಶ್ವರರ ಧ್ವನಿಸುರುಳಿಯನ್ನು ಗ್ರಾಮದ ಹಿರಿಯರು ಮತ್ತು ಭಕ್ತ ಬಳಗದ ಸಮ್ಮುಖದಲ್ಲಿ ವೇ.ಮೂ.ಅಭಿಷೇಕ ಗದ್ದಗಿಮಠ ಅವರು ಯಾಂತ್ರಿಕವಾಗಿ ಬಿಡುಗಡೆಗೊಳಿಸಿದರು.ಕಲಕೇರಿಯ ಪ್ರಕಾಶ ರಾ ಯರನಾಳ, ಪ್ರದೀಪ ಶ್ರೀ ವಿಶ್ವಕರ್ಮ, ಹಣಮಂತ.ಬಿ.ಯುಕ್ತಾಪುರ ನಾಗರಳ್ಳಿ ಮತ್ತು ಕಲಕೇರಿ ಗೆಳೆಯರ ಬಳಗ ಇವರ ಸಹಕಾರದೊಂದಿಗೆ ಆನಂದ ಬಿ.ನಾಯ್ಕೋಡಿ ಅವರ ಸಾಹಿತ್ಯ ಮತ್ತು ಯಲ್ಲಪ್ಪ ಎಮ್ ತಿಪ್ಪನಟಗಿ ಅವರ ಧ್ವನಿಯಲ್ಲಿ ಮೂಡಿ ಬಂದ ಈ ಧ್ವನಿಸುರುಳಿಯನ್ನು ಚಾಮನಾಳದ ಜನನಿ ರೆಕಾರ್ಡಿಂಗ್ ಸ್ಟುಡಿಯೋ ಅವರು ಧ್ವನಿ ಮುದ್ರಣದ ಕಾರ್ಯವನ್ನು ಮಾಡಿದೆ.ಈ ವೇಳೆ ರೇವಣಸಿದ್ದೇಶ ಗದ್ದಗಿಮಠ, ಹಿರಿಯರಾದ ಎಸ್.ಬಿ.ಪಾಟೀಲ, ದೇವಿಂದ್ರ ಜಂಬಗಿ, ವಾಯ್.ಬಿ.ಕುಲಕರ್ಣಿ, ಡಿ.ಎನ್.ಚಿಕ್ಕಮಠ, ನಾನಾಗೌಡ ಚೌಧರಿ, ಸುಧಾಕರ ಕವದಿ, ಗಿರೀಶ ಹೆಗ್ಗಣದೊಡ್ಡಿ, ಸುಧಾಕರ ಅಡಕಿ, ಚೇತನ ಶಹಾಪೂರ, ಪ್ರದೀಪ ವಿಶ್ವಕರ್ಮ, ಪ್ರಕಾಶ ಯರನಾಳ ಗಾಯಕ ಯಲ್ಲಪ್ಪ ತಿಪ್ಪನಟಗಿ ಸೇರಿದಂತೆ ಇತರರು ಇದ್ದರು.

Read More

ವಿಜಯಪುರ: ನಗರದ ಶ್ರೀ ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರಾರಂಭಗೊಂಡ ಸಿದ್ಧೇಶ್ವರ ೨೪/೭ ಮೆಡಿಕಲ್ಸ್ ಪ್ರಾರಂಭಗೊಂಡಾಗಿನಿಂದಲೂ ಲಕ್ಷಾಂತರ ಗ್ರಾಹಕರನ್ನು ತಲುಪುವ ಮೂಲಕ ಗ್ರಾಹಕ ಸ್ನೇಹಿಯಾಗಿ ಗುರುತಿಸಿಕೊಂಡಿದೆ. ಮಧ್ಯರಾತ್ರಿಯಲ್ಲಿ ಅವಶ್ಯಕತೆಯುಳ್ಳ ಜನಗಳ ಮನೆ ಬಾಗಿಲಿಗೆ ಮಾತ್ರೆಗಳನ್ನು ತಲುಪಿಸಿ ಅತ್ಯುತ್ತಮ ಸೇವೆಯ ಮೂಲಕ ಜನರ ಪ್ರೀತಿಗೆ ಪಾತ್ರವಾಗಿದೆ. ವಿಜಯಪುರ ನಗರದಲ್ಲಿ ಪ್ರಾರಂಭಗೊಂಡಿದ್ದ ಮೆಡಿಕಲ್ ಇಂದು ತನ್ನ ಸೇವಾ ಕ್ಷೇತ್ರವನ್ನು ವಿಸ್ತರಿಸಿಕೊಳ್ಳುತ್ತ ವಿಜಯಪುರ ಜಿಲ್ಲೆಯಾದ್ಯಂತ ಔಷಧಿ ಮಳಿಗೆಗಳನ್ನು ತೆರೆಯುತ್ತಿದೆ. ಅದರ ಮೊದಲ ಹೆಜ್ಜೆಯಾಗಿ ಮುದ್ದೆಬಿಹಾಳದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದಲ್ಲಿ ಡಿ.೨೬ರಂದು ಸಿದ್ಧೇಶ್ವರ ೨೪/೭ ಔಷಧಿ ಮಳಿಗೆ ಲೋಕಾರ್ಪಣೆಗೊಳ್ಳಲಿದೆ.ಕುಂಟೋಜಿ ಹಿರೇಮಠ ಸಂಸ್ಥಾನದ ಚನ್ನವೀರ ದೇವರು ಸಾನಿಧ್ಯ ವಹಿಸಿ ಉದ್ಘಾಟಿಸಲಿದ್ದು, ವಿಜಯಪುರ ನಗರದ ಶಾಸಕ ಬಸನಗೌಡ ರಾ, ಪಾಟೀಲ್ ಯತ್ನಾಳ ಅಧ್ಯಕ್ಷತೆವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೀರಶೈವ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ಮೋಟಗಿ, ಚೇರಮನ್ ಮಹಾಂತೇಶ ನಾವದಗಿ, ಖಜಾಂಚಿ ಡಾ.ಎಸ್.ಬಿ.ನಾಗೂರ, ಮಹಾವೀರ ಆಸ್ಪತ್ರೆಯ ಖ್ಯಾತವೈದ್ಯ ಡಾ.ದಲಿಚಂದ ಬಿ. ಓಸವಾಲ್ ಇರಲಿದ್ದು, ವಿಜಯಪುರ ಜಿಲ್ಲಾ ಪಂಚಾಯ್ತಿಯ…

Read More

ವಿಜಯಪುರ: ಅಜಾತಶತ್ರು, ಮಾಜಿ ಪ್ರಧಾನಮಂತ್ರಿಗಳಾದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಅಂಗವಾಗಿ ಸೋಮವಾರ ನಗರದ ಅಟಲ್ ಬಿಹಾರಿ ವಾಜಪೇಯಿ ವೃತ್ತದಲ್ಲಿನ ಪುತ್ಥಳಿಗೆ ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಶೇಖರ ಕವಟಗಿ, ಮಹಾನಗರ ಪಾಲಿಕೆ ಮಾಜಿ ಉಪಮೇಯರ್ ರಾಜೇಶ ದೇವಗಿರಿ, ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ, ರಾಜಶೇಖರ ಕುರಿಯವರ, ಕಿರಣ ಪಾಟೀಲ, ಮಲ್ಲಿಕಾರ್ಜುನ ಗಡಗಿ, ವಿಠ್ಠಲ ಹೊಸಪೇಟ, ಮುಖಂಡರಾದ ಸಾಯಬಣ್ಣ ಬೋವಿ, ವಿಕ್ರಮ ಗಾಯಕವಾಡ, ಚಂದ್ರು ಚೌದರಿ, ಲಕ್ಷ್ಮಣ ಜಾಧವ, ರಾಜಶೇಖರ ಭಜಂತ್ರಿ, ಸಂತೋಷ ತಳಕೇರಿ, ವಿಜಯಕುಮಾರ ಗಚ್ಚಿನಕಟ್ಟಿ, ಲಕ್ಷ್ಮೀ ಕನ್ನೋಳ್ಳಿ, ಮಲ್ಲಮ್ಮ ಜೋಗೂರ ಸೇರಿದಂತೆ ವ್ಯಾಪಾರಸ್ಥರು, ಗುತ್ತಿಗೆದಾರರು, ಅಭಿಮಾನಿಗಳು ಇದ್ದರು.

Read More

ವಿಜಯಪುರ: ನಗರದ ಮಾರುಕಟ್ಟೆ ಪ್ರದೇಶದಲ್ಲಿ ಸುಗಮ ಸಂಚಾರ, ಸ್ವಚ್ಛತೆ, ವ್ಯಾಪಾರಸ್ಥರಿಗೆ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಕೆಲವರು ವ್ಯವಸ್ಥೆ ಕೆಡಿಸುವ ಹುನ್ನಾರ ನಡೆಸಿದ್ದು, ಯಾವುದೇ ಕಾರಣಕ್ಕೂ ಅದು ನಡೆಯದು ಎಂದು ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ಹೇಳಿದರು.ನಗರದಲ್ಲಿ ಸೋಮವಾರ ವ್ಯಾಪಾರಸ್ಥರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಾರುಕಟ್ಟೆಯಲ್ಲಿನ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಬೀದಿ ದೀಪ ಅಳವಡಿಕೆ ಮಾಡಲಾಗಿದೆ, ಸ್ವಚ್ಛತೆಗೂ ಆದ್ಯತೆ ನೀಡಲಾಗಿದೆ. ದೇಶದಲ್ಲಿ ವಿಜಯಪುರ ಅತ್ಯುತ್ತಮ ವಾತಾರಣ ನಗರಗಳ ಪಟ್ಟಿಯಲ್ಲಿ ೬ನೇ ಸ್ಥಾನ ಪಡೆದಿರುವುದೇ ಸಾಕ್ಷಿ ಎಂದು ತಿಳಿಸಿದರು.ಬೀದಿ ಬದಿ ವ್ಯಾಪಾರಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ, ಸೂಕ್ತವಾದ ನಿಗದಿತ ಸ್ಥಳಾವಕಾಶ ಕಲ್ಪಿಸಿ, ಅಂಗಡಿಕಾರರಿಗೆ ಅನುಕೂಲ ಮಾಡಿಕೊಡಲು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಸುಮಾರು ೩೫ ಕಡೆ ಕಾಯಿಪಲ್ಲೆ ಮಾರುಕಟ್ಟೆ ಮಾಡಿದ್ದರಿಂದ ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆ ಆಗಿದ್ದು, ಸಂಚಾರಕ್ಕೆ ಅಡೆತಡೆ ಆಗುತ್ತಿಲ್ಲ. ನಗರದ…

Read More

ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ | ಶಾಸಕ ಯಶವಂತ್ರಾಯಗೌಡ ಪಾಟೀಲ ಮಾಹಿತಿ ಇಂಡಿ: ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಿರುವ ಇಂಡಿ ತಾಲೂಕಿಗೆ ನೀರಾವರಿ ಯೋಜನೆಗಳ ಅವಶ್ಯವಿದ್ದು ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಮೂಲಕ ಇಂಡಿ ಹಾಗೂ ನಾಗಠಾಣ ಕ್ಷೇತ್ರಗಳ ೨೮ ಸಾವಿರ ಹೆಕ್ಟೇರ್ ಪ್ರದೇಶ ನೀರಾವರಿಯಾಗಲಿದೆ ಎಂದು ಇಂಡಿ ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.ಸೋಮವಾರ ತಾಲೂಕಿನ ಹೋರ್ತಿ ಗ್ರಾಮದಲ್ಲಿ ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಹೋರ್ತಿ-ರೇವಣಸಿದ್ದೇಶ್ವರ ಏತನೀರಾವರಿ ಯೋಜನೆಯ ಕಾರ್ಯನಿರ್ವಹಿಸುವ ಕಛೇರಿ ಉದ್ಘಾಟಿಸಿ ಅವರು ಮಾತನಾಡಿದರು.ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಮಹಾಸ್ವಾಮಿಗಳು ಸಾವಳಸಂಗ ಗುಡ್ಡಕ್ಕೆ ಭೇಟಿ ನೀಡಿದಾಗ ಈ ಎತ್ತರದ ಪ್ರದೇಶಕ್ಕೆ ನೀರು ಹಾಯಿಸಬೇಕು ಇದರಿಂದ ಈ ಭಾಗದ ರೈತರಿಗೆ ಒಳಿತಾಗುತ್ತದೆ ಎಂಬ ಆಶಾಭಾವನೆ ಹೊಂದಿದ್ದರು. ಅವರ ಆಶಯದಂತೆ ರೇವಣಸಿಧ್ಧೇಶ್ವರ ಏತ ನೀರಾವರಿ ಮೂಲಕ ನೀರು ಹರಿಸಲಾಗುತ್ತದೆ ಎಂದರು.ಇಂಡಿ ಕ್ಷೇತ್ರದ ೩೨ ಹಳ್ಳಿಗಳ ೨೧೫೦೦ ಹೆಕ್ಟೇರ್, ನಾಗಠಾಣ ಕ್ಷೇತ್ರದ ೧೦ ಹಳ್ಳಿಗಳ ೬೫೦೦ ಹೆಕ್ಟೇರ್ ಪ್ರದೇಶ ಈ ಯೋಜನೆಯಿಂದ ನೀರಾವರಿಯಾಗಲಿದೆ ಎಂದರುಇಲ್ಲಿ ಕೆಬಿಜೆಎನ್‌ಎಲ್ ಕಚೇರಿ…

Read More