Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಓಂ ಪ್ರಾಥಮಿಕ ಶಾಲೆಯಲ್ಲಿ ಆಧುನಿಕ ಸಂತೆ ಮೇಳ ಉದ್ಘಾಟಿಸಿದ ಶಾಸಕ ವಿಠ್ಠಲ ಕಟಕಧೋಂಡ ಅಭಿಮತ ಚಡಚಣ: ಮಕ್ಕಳಲ್ಲಿ ವ್ಯಾಪಾರ ವ್ಯವಹಾರ ಬೆಳಸಲು ಸಂತೆ ಮೇಳ ಸಹಕಾರಿಯಾಗಲಿದೆ ಎಂದು ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.ಪಟ್ಟಣದ ಓಂ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಲಾದ ಮಕ್ಕಳ ಆಧುನಿಕ ಸಂತೆ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.ಶಾಲೆಯಲ್ಲಿ ಸಂತೆಮೇಳ ಆಯೋಜಿಸುವದರಿಂದ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಯಲ್ಲಿ ವ್ಯವಹಾರ ಬೆಳೆಸಲು ಸಹಾಯವಾಗುತ್ತದೆ. ದಿನನಿತ್ಯ ಸೇವಿಸುವ ಆಹಾರ ವಸ್ತುಗಳು ರಸ್ತೆಮೇಲೆ ಇಟ್ಟು ಮಾರಾಟ ಮಾಡದೇ ಸೂಕ್ತ ಸ್ಥಳ ನಿಯೋಜನೆ ಮಾಡುವುದು ಅವಶ್ಯಕತೆ ಇದೆ. ಇಂದಿನ ಯುಗದಲ್ಲಿ ಇಡಬಾರದ ವಸ್ತುಗಳು ಶೋರೂಮದಲ್ಲಿ ಇಟ್ಟು, ದಿನ ನಿತ್ಯ ಸೇವಿಸುವ ಆಹಾರ ವಸ್ತುಗಳನ್ನು ರಸ್ತೆ ಮೇಲೆ ಇಟ್ಟು ಮಾರಾಟ ಮಾಡುತ್ತಿರುವುದು ದುರದೃಷ್ಠಕರ ಎಂದರು.ಸಂತೆಯಲ್ಲಿ ಮಕ್ಕಳು ಎಲ್ಲಾ ತರಹದ ತರಕಾರಿಗಳನ್ನು, ದವಸ-ಧಾನ್ಯಗಳನ್ನು, ಹಣ್ಣು-ಹಂಪಲುಗಳನ್ನು, ಸ್ಟೇಷನರಿ ವಸ್ತುಗಳನ್ನು, ಇಲೆಕ್ಟ್ರಿಕಲ್ ವಸ್ತುಗಳನ್ನು, ಮಾರಾಟಕ್ಕೆ ಇಟ್ಟಿದ್ದರು, ಸಂತೆಯಲ್ಲಿ ಉಪಜೀವನಕ್ಕಾಗಿ ಕರಡಿ ಆಡಿಸುವವರು, ಡೊಂಬರಾಟದವರು, ಗರದಿ ಗಮ್ಮತ್ತು ಆಡಿಸುವವರು ಹೀಗೆ ವಿವಿಧ…
ಆಲಮೇಲ: ಇಲ್ಲಿಯ ಹಿರಿಯ ಕಾದಂಬರಿಕಾರ,ಸಿದ್ಧರಾಮ ಉಪ್ಪಿನ ಅವರಿಗೆ ಸಮಗ್ರ ಸಾಹಿತ್ಯ ಮತ್ತು ಜೀವಮಾನ ಸಾಧನೆಯ ಗೌರವಾರ್ಥ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ಲಭಿಸಿದೆ.ಇದೇ ಡಿ.30ರಂದು ಸಾಯಂಕಾಲ 5 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ”ದಲ್ಲಿ ಜರುಗುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿದ್ಧರಾಮ ಉಪ್ಪಿನ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಸಂಸ್ಥೆಯ ಅಧ್ಯಕ್ಷ ರಮೇಶ ಸುರ್ವೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವರು.ಸಮಾವೇಶದ ಉದ್ಘಾಟನೆ,ಡಾ ಮಲ್ಲೇಶ್ವರಂ ಜಿ ವೆಂಕಟೇಶ ಹಾಗೂ ಪ್ರಶಸ್ತಿ ವಿತರಣೆ ಡಾ ಸತೀಶಕುಮಾರ, ನಿರ್ದೇಶಕರು ಸಾರ್ವಜನಿಕ ಕೇಂದ್ರ ಗ್ರಂಥಾಲಯ ಇಲಾಖೆ ಬೆಂಗಳೂರ ರವರು ಮಾಡುವರು. ಈ ಸಮಾವೇಶದಲ್ಲಿ ನಾಡಿನ ಹೆಸರಾಂತ ಕಲಾ ತಂಡಗಳ ಕಲಾ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ರಮೇಶ ಸುರ್ವೆ ತಿಳಿಸಿದ್ದಾರೆ.ಸಿದ್ಧರಾಮ ಉಪ್ಪಿನ ಅವರು ಕಾದಂಬರಿ, ಜೀವನ ಚರಿತ್ರೆ, ಆತ್ಮಕಥನ, ಲಲಿತ ಪ್ರಬಂಧ, ವ್ಯಕ್ತಿಚಿತ್ರಣ ಹಾಗೂ ಕಾವ್ಯ ಈಎಲ್ಲ ಪ್ರಕಾರಗಳ ಸಾಹಿತ್ಯ ಸೇರಿ 23 ಗ್ರಂಥ ರಚಿಸಿದ್ದಾರೆ.
ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಸುಕ್ಷೇತ್ರ ಗುರು ವೀರಘಂಟೈ ಮಡಿವಾಳೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಡಿ.೨೪ ರಂದು ಸಂಜೆ ೬ ಗಂಟೆಗೆ ಧಮ೯ಸಭೆ ನಡೆಯಲಿದೆ ಎಂದು ಮಠಾಧ್ಶಕ್ಷ ಗುರುಲಿಂಗಯ್ಶ ಸ್ವಾಮೀಜಿ ತಿಳಿಸಿದ್ದಾರೆ. ಮಾಗಣಗೇರಾ ಬೃಹನ್ಮಠದ ಡಾ.ವಿಶ್ವರಾಧ್ಶ ಶಿವಾಚಾಯ೯ರು, ಯಂಕಂಚಿ ಕುಂಟೋಜಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾಯ೯ರು ಧಮ೯ಸಭೆಯ ದಿವ್ಶ ಸಾನ್ನಿಧ್ಶವಹಿಸುವರು. ಶ್ರೀಮಠದ ಗುರುಲಿಂಗಯ್ಶ ಗದ್ದಗಿಮಠ ಸ್ವಾಮೀಜಿ, ಅಯ್ಶಪ್ಪಯ್ಶ ಸ್ವಾಮೀಜಿ ನೇತೃತ್ವ. ಕುಳಗೇರಾ ದಗಾ೯ದ ಸಯ್ಶದ ಹುಸೇನಪಾಷಾ ಮೋದಿನಪಾಷಾ ಸಜ್ಜಾದೇ ನಶೀನ ದಗಾ೯, ಸಾಗನೂರದ ಗುರುಸಿದ್ದಯ್ಶ ಹಿರೇಮಠ ಉಪಸ್ಥಿತಿ, ಯಂಕನಗೌಡ ಪಾಟೀಲ ಅಧ್ಶಕ್ಷತೆ, ಶಾಸಕ ಅಶೋಕ ಮನಗೂಳಿ ಧಮ೯ಸಭೆ ಉದ್ಘಾಟಿಸುವರು. ಮಾಜಿ ಶಾಸಕ ರಮೇಶ ಭೂಸನೂರ ಜ್ಶೋತಿ ಬೆಳಗಿಸುವರು. ಮಡಿವಾಳಪ್ಪಗೌಡ ಬಿರಾದಾರ ಮಾಗಣಗೇರಾ, ಸಂಗನಗೌಡ ಪಾಟೀಲ ಖಾನಾಪೂರ, ಸಿಂದಗಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಶಕ್ಷ ಸುರೇಶ ಪೂಜಾರಿ ಸೇರಿದಂತೆ ವಿವಿಧ ರಾಜಕೀಯ ಮುಖಂಡರು, ಗಣ್ಶರು, ಪತ್ರಕತ೯ರು, ಗುತ್ತೆಗೆದಾರರು ಭಾಗವಹಿಸಲಿದ್ದಾರೆ.ಡಿ.೨೫ ರಂದು ಸಂಜೆ ೭ ಗಂಟೆಗೆ ಮಹಾ ಪುರಾಣ ಮಂಗಲಗೊಳ್ಳವುದು. ಡಿ.೨೬ ರಂದು ಬೆಳಗ್ಗೆ ೫-೩೦…
ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಟೀಕೆ | ಶಿಕ್ಷಣ ಕ್ಷೇತ್ರ ಕಲುಷಿತಗೊಳಿಸುವ ಕೆಲಸ | ಸಿಎಂ ವಿರುದ್ಧ ವಾಗ್ದಾಳಿ ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಹಿಜಾಬ್ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮತ್ತೆ ಹಿಜಾಬ್ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಕೈಹಾಕಿರುವುದು ಈ ನಾಡಿನ ಒಂದು ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕರಾದ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು.ಈ ಕುರಿತು ದೆಹಲಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಅವರಿಂದ ಇಂಥ ಹೇಳಿಕೆಯನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಕನಿಷ್ಠ ಪಕ್ಷ ಶಾಲಾ, ಕಾಲೇಜುಗಳಿಗೆ ಹೋಗುವ ಮಕ್ಕಳನ್ನಾದರೂ ರಾಜಕೀಯದಿಂದ ದೂರ ಇಡುವ ಕೆಲಸವನ್ನು ರಾಜ್ಯ ಸರಕಾರ ಮಾಡಬೇಕಿತ್ತು ಎಂದು ಆಕ್ಷೇಪಿಸಿದರು.ಮಾತೆತ್ತಿದರೆ ಕಾಂಗ್ರೆಸ್ಸಿಗರು ಅಲ್ಪಸಂಖ್ಯಾತರ ಕುರಿತು ಮಾತ್ರ ಮಾತನಾಡುತ್ತಾರೆ. ಕಾಂಗ್ರೆಸ್ಸಿಗರು, ತುಷ್ಟೀಕರಣ ನೀತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದ ಅವರು, ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯದ ನಂತರ 50ರಿಂದ 60 ವರ್ಷಗಳ ಕಾಲ ದೇಶ,…
ಮುದ್ದೇಬಿಹಾಳ: ನಗರವು ಶರವೇಗದಲ್ಲಿ ಅಭಿವೃದ್ಧಿ ಹೊಂದುತ್ತಿದ್ದು ಜಿಲ್ಲಾ ಕೇಂದ್ರವಾಗಲು ಎಲ್ಲ ಅರ್ಹತೆಗಳನ್ನು ಹೊಂದಿದೆ. ತಾಲೂಕಿನ ನೆರೆಹೊರೆಯ ತಾಲೂಕುಗಳಾದ ನಿಡಗುಂದಿ, ತಾಳಿಕೋಟಿ, ಬಸವನ ಬಾಗೇವಾಡಿ, ಕೋಲ್ಹಾರ ಹಾಗೂ ದೇವರ ಹಿಪ್ಪರಗಿ ಇವೆಲ್ಲವುಗಳನ್ನು ಸೇರಿಸಿ ನೂತನ ಮುದ್ದೇಬಿಹಾಳ ಜಿಲ್ಲೆ ರಚಿಸಿದಲ್ಲಿ ಈ ಭಾಗದ ಎಲ್ಲಾ ಜನರಿಗೆ ಅನುಕೂಲವಾಗುತ್ತದೆ. ಅಲ್ಲದೇ ಮುದ್ದೇಬಿಹಾಳದಿಂದ ವಿಜಯಪುರಕ್ಕೆ ೮೫ ಕಿಮೀ ಅಂತರವಿದ್ದು, ಇಲ್ಲಿಯ ಜನರು ವಿವಿಧ ಕೆಲಸಗಳಿಗಾಗಿ ಜಿಲ್ಲಾ ಕೇಂದ್ರಕ್ಕೆ ಹೋಗಿ ಬರಲು ತುಂಬಾ ತೊಂದರೆ ಆಗುತ್ತಿದ್ದು, ಕೂಡಲೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮುದ್ದೇಬಿಹಾಳ ಜಿಲ್ಲೆ ರಚನೆಗೆ ಕ್ರಮ ಕೈಗೊಳ್ಳಲು ವಿನಂತಿಸಿ ಹಿರಿಯ ನ್ಯಾಯವಾದಿ ಸಂಗಮೇಶ ಹೂಗಾರ ಆಗ್ರಹಿಸಿದ್ದಾರೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ವಿಷಯದ ಫೊನ್ ಇನ್ ಕಾರ್ಯಕ್ರಮ ವಿಜಯಪುರ: ಇಂಗ್ಲೀಷ್ ವಿಷಯದ ವ್ಯಾಕರಣ ಮತ್ತು ಪತ್ರಲೇಖನ ಪ್ಯಾರಾಗ್ರಾಫ್, ಪ್ರಬಂಧ ಬರವಣಿಗೆ ಹಾಗೂ ವಿಷಯ ಕರಗತ ಮಾಡಿಕೊಳ್ಳುವುದೂ ಸೇರಿದಂತೆ ತಮ್ಮ ಶೈಕ್ಷಣಿಕ ಸಮಸ್ಯೆಗಳಿಗೆ ವಿದ್ಯಾರ್ಥಿಗಳು ಸಂಪನ್ಮೂಲ ಶಿಕ್ಷಕರಿಂದ ಪರಿಹಾರ ಪಡೆದುಕೊಂಡರು. ಶಿಕ್ಷಕರು ವಿಷಯ ಸಮಸ್ಯೆ ಸೂಚಿಸುವುದರ ಜೊತೆಗೆ ಆತ್ಮವಿಶ್ವಾಸದ ಪಾಠ ಮಾಡಲಾಯಿತು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರ ತಿಳಿಸಿದ್ದಾರೆ.ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಜಿಲ್ಲೆಯ ಎಸ್ಸೆಸ್ಸೆಲ್ಸಿಯ ವಿದ್ಯಾರ್ಥಿಗಳಿಗಾಗಿ ಶುಕ್ರವಾರ ಸಂಜೆ ೬ ರಿಂದ ರಾತ್ರಿ ೮.೩೦ರವರೆಗೆ ಇಂಗ್ಲೀಷ್ ವಿಷಯದ ಕುರಿತಾಗಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ೨ ಗಂಟೆಗಳ ಅವಧಿಯಲ್ಲಿ ೩೨೫ ವಿದ್ಯಾರ್ಥಿಗಳು ಕೇಳಿದ ೪೫೮ ಪ್ರಶ್ನೆಗಳಿಗೆ ವಿಷಯ ಶಿಕ್ಷಕರು ಪರಿಹಾರ ಸೂಚಿಸಿದರು.ವಿದ್ಯಾರ್ಥಿಗಳು ಕೇಳುವ ಪ್ರಶ್ನೆಗಳಿಂದ ವಿದ್ಯಾರ್ಥಿಗಳಲ್ಲಿ ಕಲಿಕೆಯ ಹಂಬಲ ಹೆಚ್ಚಾಗುತ್ತಿದೆ. ಕೆಲ ಸಣ್ಣ ಪುಟ್ಟ ಸಮಸ್ಯೆಗಳಿಗೆ ಪರಿಹಾರ ಬೋಧನೆಯಿಂದ ಮತ್ತಷ್ಟು ವಿಷಯ ಕರಗತವಾಗಿ ಅವರ ಕಲಿಕಾ ಮಟ್ಟ ಹೆಚ್ಚಾಗುತ್ತದೆ. ಜಿಲ್ಲಾಧಿಕಾರಿಗಳು ಹಾಗೂ…
ಮುದ್ದೇಬಿಹಾಳ: ತಾಲೂಕಿನ ವಿಶ್ವ ಹಿಂದೂ ಪರಿಷದ್ ನ ಕಾರ್ಯದರ್ಶಿಯನ್ನಾಗಿ ರವಿ ಪವಾರ, ಸಹ ಕಾರ್ಯದರ್ಶಿಯನ್ನಾಗಿ ವಿರೇಶ ಢವಳಗಿ ಹಾಗೂ ಚಂದ್ರು ಬಿರಾದಾರ ನಗರ ಕಾರ್ಯದರ್ಶಿಯನ್ನಾಗಿ ಹಣಮಂತ ಕಲ್ಯಾಣಿ ಅವರನ್ನು ಆಯ್ಕೆ ಮಾಡಿ ಜಿಲ್ಲಾ ಕಾರ್ಯದರ್ಶಿ ಸಂತೋಷ ನಾಯಕ ಆದೇಶಿಸಿದ್ದಾರೆ.
ಮುದ್ದೇಬಿಹಾಳ: ಭಗವದ್ಗೀತೆ ಕೇವಲ ಧರ್ಮಗ್ರಂಥವಲ್ಲ ಅದು ಹಿಂದೂಗಳ ಶಕ್ತಿ ಎಂದು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ನುಡಿದರು.ಪಟ್ಟಣದ ಬಸವನಗರದ ಉದ್ಯಾನ ವನದಲ್ಲಿ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ ಹಾಗೂ ಶ್ರೀ ಭಗವದ್ಗೀತಾ ಅಭಿಯಾನ ತಾಲೂಕಾ ಸಮಿತಿ ಮುದ್ದೇಬಿಹಾಳ ಮತ್ತು ಭಾರತಿ ವಿದ್ಯಾ ಮಂದಿರ ಸಮೂಹ ಶಿಕ್ಷಣ ಸಂಸ್ಥೆ ಮುದ್ದೇಬಿಹಾಳ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಭಗವದ್ಗೀತಾ ಜಯಂತಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.ಭಗವದ್ಗೀತೆ ಆತ್ಮಾಭಿಮಾನ, ಶಿಸ್ತು, ತಾಳ್ಮೆಯ ಜೊತೆಗೆ ಬದುಕಿನ ಪುಟಕ್ಕೆ ಹೊಸ ಜೀವನದ ಪಾಠ ಕಲಿಸುತ್ತದೆ. ರಾಜಕಾರಣಿ, ಸಂಸಾರಿಗಳಿಗೆ ಹೊಸದಾದ ನೀತಿಯನ್ನು ಬೋಧಿಸುತ್ತದೆ. ಮನುಷ್ಯ ಜೀವನದಲ್ಲಿ ಯಾರನ್ನೂ ಯಕಶ್ಚಿತ ಭಾವನೆಯಿಂದ ನೋಡಬಾರದು. ಧರ್ಮದ ಸದಾಚಾರ ವೃತ್ತಿಯನ್ನು ರೂಢಿಸಿಕೊಳ್ಳಬೇಕು. ಗುಣವಂತನಾಗಿರಬೇಕು, ಒಳ್ಳೆಯ ಮತ್ತು ಕೆಡುಕುಗಳನ್ನು ನಿರ್ಧರಿಸುವಲ್ಲಿ ಗೀತೆಯ ವಿಚಾರಗಳು ಪ್ರಧಾನ ಪಾತ್ರವಹಿಸುತ್ತದೆ. ಯಾವುದೇ ಕಾರಣಕ್ಕೂ ಉದಾಸೀನ, ತಾತ್ಸರ ಪ್ರವೃತ್ತಿ ರೂಢಿಸಿಕೊಳ್ಳದೇ ಉತ್ತಮ ಬದುಕನ್ನು ಕಟ್ಟಿಕೊಳ್ಳುವಂತೆ ಕಿವಿಮಾತು ಹೇಳಿದರು.ಮಾಜಿ ಶಾಸಕ ಎ.ಎಸ್.ಪಾಟೀಲ್…
ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆಗೆ ಚಾಲನೆ ಮುದ್ದೇಬಿಹಾಳ: ಶ್ರೀ ರಾಮ ಅಂದರೆ ನಮ್ಮ ದೇಶದ ಸಂಸ್ಕಾರ ಮತ್ತು ಸಂಸ್ಕೃತಿ ಎಂದು ಧಾರವಾಡದ ಉಪ್ಪಿನ ಬೆಟಗೇರಿಯ ಮೂರುಸಾವಿರ ವಿರಕ್ತಮಠದ ಪ.ಪೂ ವಿರೂಪಾಕ್ಷ ಮಹಾಸ್ವಾಮಿಗಳು ಹೇಳಿದರು.ಪಟ್ಟಣದ ಹುಡ್ಕೋದಲ್ಲಿರುವ ಹನುಮಾನ ದೇವಸ್ಥಾನದಲ್ಲಿ ಶ್ರೀ ರಾಮನ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ ನ ವತಿಯಿಂದ ಹಮ್ಮಿಕೊಳ್ಳಲಾದ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಶ್ರೀ ರಾಮರಿಗೆ ಮರ್ಯಾದಾ ಪುರಶೋತ್ಥಮ ಎಂದು ಕರೆಯುತ್ತಾರೆ. ಅವರು ಯಾವ ರೀತಿಯಾಗಿ ಉತ್ತಮವಾಗಿ ಬಾಳಿ ಬದುಕಿ ತಮ್ಮ ಸಂದೇಶವನ್ನು ನಾಡಿಗೆ ನೀಡಿದರೋ ಆ ಸಂದೇಶದ ಪ್ರಕಾರ ಪ್ರತಿಯೊಬ್ಬರೂ ನಡೆಯೋಣ. ಕೆಲವೇ ದಿನಗಳಲ್ಲಿ ಶ್ರೀ ರಾಮ ಮಂದಿರದ ಉದ್ಘಾಟನಾ ಸಮಾರಂಭ ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿದ್ದು ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದರು.ಈ ವೇಳೆ ವಿಶ್ವ ಹಿಂದು ಪರಿಷದ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ನಾಯಕ, ಪುರಸಭೆ ಸದಸ್ಯ ಚನ್ನಪ್ಪ ಕಂಠಿ, ಬಿ.ಪಿ.ಕುಲಕರ್ಣಿ, ಕಾಶಿಬಾಯಿ ರಾಂಪೂರ, ಲಿಂಗರಾಜ ಮಹೇಂದ್ರಕರ,…
ಬ್ರಹ್ಮದೇವನಮಡು: ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಶಿಕ್ಷಕರ ಪಾತ್ರ ಎಷ್ಟು ಮುಖ್ಯವೋ ಪಾಲಕರ ಪಾತ್ರವೂ ಅಷ್ಟೇ ಮುಖ್ಯ ಎಂದು ಪ್ರಾಂಶುಪಾಲ ರವೀಂದ್ರ ಬಂಥನಾಳ ಹೇಳಿದರು.ಸಿಂದಗಿ ತಾಲೂಕಿನ ಗುಬ್ಬೇವಾಡ ಗ್ರಾಮದ ಮೊರಾಜಿ೯ ದೇಸಾಯಿ ವಸತಿ ಶಾಲೆಯಲ್ಲಿ ಶನಿವಾರ ನಡೆದ ಪಾಲಕರ ಸಭೆಯ ಅಧ್ಶಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದು ಸಮಾಜದಲ್ಲಿ ಒಳ್ಳೆಯ ಸಾಧನೆ ಮಾಡಲು ಪಾಲಕರು ಸಹಕಾರ ನೀಡಬೇಕು. ಮಕ್ಕಳಲ್ಲಿ ಓದಿನ ಕಡೆ ಹೆಚ್ಚಿನ ಗಮನ ಹರಿಸುವಂತೆ ಮಾಡಬೇಕು. ಪಾಲಕರು ಶಿಕ್ಷಕರಿಗೆ ತಮ್ಮ ಮಗುವಿನ ವಿದ್ಯಾ ಅಭ್ಯಾಸದ ಪ್ರತಿ ತಿಂಗಳ ಅಭಿವೃದ್ಧಿಯ ಬಗ್ಗೆ ಚಚಿ೯ಸಬೇಕು ಎಂದು ಹೇಳಿದರು.ಪಾಲಕರ ಪ್ರತಿನಿಧಿ ರಾಮು ರಾಠೋಡ, ಶಾರದಾ ರಾಠೋಡ, ಸೋಮು ಭಾವಿಮನಿ ಮಾತನಾಡಿ, ಮಕ್ಕಳ ಉನ್ನತ ಶಿಕ್ಷಣದ ಸರ್ವಾಂಗೀಣ ಅಭಿವೃದ್ಧಿಗೆ ನಾವು ನಿಮಗೆ ಸಹಕಾರ ನೀಡುವುದಾಗಿ ಪಾಲಕರು ತಮ್ಮ ಅಭಿಪ್ರಾಯವನ್ನು ವ್ಶಕ್ತಪಡಿಸಿದರು.ಸಂಗೀತ ಶಿಕ್ಷಕ ರಮೇಶ ಗುಬ್ಬೆವಾಡ ನಿರೂಪಿಸಿದರು. ಶಿಕ್ಷಕ ಸುನೀಲ ಬಿರಾದಾರ ವಂದಿಸಿದರು.ವಿದ್ಯಾರ್ಥಿಗಳು, ಪಾಲಕರು, ಶಾಲೆಯ ಎಲ್ಲ ಸಿಬ್ಬಂದಿ ವರ್ಗ…
