Author: editor.udayarashmi@gmail.com

ವಿಜಯಪುರ: ನಗರದಲ್ಲಿ ನಾಳೆ ದಿ.24 ರವಿವಾರ ನಡೆಯಲಿರುವ ವೃಕ್ಷೊಥಾನ್ ಹೆರಿಟೇಜ್ ರನ್-2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಗರಾದ್ಯಂತ ಓಟಗಾರರು ಸಾಗುವ ಮಾರ್ಗಗಳಲ್ಲಿ ರವಿವಾರ ಬೆಳಿಗ್ಗೆ 6 ಗಂಟೆಯಿಂದಲೆ ನಾನಾ ಸಾಂಸ್ಕೃತಿಕ ಕಲಾ ತಂಡಗಳಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.ಕರ್ನಾಟಕವೂ ಅಷ್ಟೇ ಅಲ್ಲ, ನಾನಾ ರಾಜ್ಯಗಳು ಹಾಗೂ ವಿದೇಶಗಳಿಂದ ಹೆಸರು ನೋಂದಾಯಿಸಿರುವ ಕ್ರೀಡಾಪಟುಗಳು ಗುಮ್ಮಟ ನಗರಿಗೆ ಆಗಮಿಸಿದ್ದು, ಇಂದು ಶನಿವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಹೆಸರು ನೋಂದಾಯಿಸಿದ ಓಟಗಾರರಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಬ್ ಮತ್ತು ಟಿ ಶರ್ಟ್ ಗಳನ್ನು ವಿತರಿಸಲಾಯಿತು.ಈ ಮಧ್ಯೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಐರಾನ್ಮ್ಯಾನ್, ಹಾಫ್ ಐರಾನ್ಮ್ಯಾನ್, ಅಲ್ಟ್ರಾ ಮ್ಯಾರಾಥಾನ್, ಪುಲ್ ಮ್ಯಾರಾಥಾನ್ ಮತ್ತು ಹಾಫ್ ಮ್ಯಾರಾಥಾನ್ ಗಳಲ್ಲಿ ಪಾಲ್ಗೊಂಡಿರುವವರನ್ನು ಸ್ವಾಗತಿಸಲಾಯಿತು.ನಂತರ ನಡೆದ ನಾನಾ ಗೋಷ್ಠಿಗಳಲ್ಲಿ ಪ್ರಶಾಂತ ಹಿಪ್ಪರಗಿ, ಪ್ರಮೋದ ದೇಶಪಾಂಡೆ, ಕಿರಣ ಬೇಟಗೇರಿ, ಡಾ.ಶಿವಪುತ್ರ ಯಲಗೊಂಡ, ನಿರಂಜನ ಪಾಟೀಲ, ಹರಿನಾಥ, ಡಾ.ಉದಯಕುಮಾರ ಜಾಧವ, ಬರಿಗಾಲ ಓಟಗಾರ್ತಿ ಎಂದೇ ಖ್ಯಾತರಾದ ಸುಲತಾ ಕಾಮತ, ಸೀರೆಯುಟ್ಟ ಬರಿಗಾಲಲ್ಲಿ ಓಡುವ ಖ್ಯಾತಿಯ ಪ್ರೀತಿ ಮನಿಷ, ರಾಜೇಂದ್ರ ಕೌರ,…

Read More

ಲೊಯೋಲ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ಮತ್ತು ಕ್ರಿಸ್ಮಸ್ ಹಬ್ಬ ಆಚರಣೆ ವಿಜಯಪುರ: ಕಳೆದ 24 ವರ್ಷಗಳಿಂದ ಸ್ಲಮ್ ಹಾಗೂ ಹಿಂದುಳಿದ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ನಗರದಲ್ಲಿ ಶಿಕ್ಷಣ ಕ್ರಾಂತಿ ಮಾಡುವ ಮೂಲಕ ಹೆಸರುವಾಸಿಯಾಗಿರುವ ವಿಜಯಪುರ ನಗರ ಸ್ಟೇಷನ್ ಬ್ಯಾಕ್ ರಸ್ತೆಯಲ್ಲಿರುವ ಲೊಯೋಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಮತ್ತು ಕ್ರಿಸ್ಮಸ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಮುಖ್ಯ ಅತಿಥಿಯಾಗಿ ಪತ್ರಕರ್ತ ಆಸೀಫ ಬಾಗವಾನ ಮಾತನಾಡಿ, ಲೊಯೋಲ ಶಿಕ್ಷಣ ಸಂಸ್ಥೆಯು ಬಡ ಜನರ ನೋವು ನಲಿವುಗಳನ್ನು ಸ್ಪಂಧಿಸುವ ಜೊತೆಗೆ ಆ ಮಕ್ಕಳಿಗೆ ಮೌಲ್ಯಾದಾರಿತ ಶಿಕ್ಷಣ ನೀಡಿ ಉನ್ನತ ಶಿಕ್ಷಣವನ್ನು ಕೊಡಿಸುವ ಪ್ರಯತ್ನ ಮಾಡುತ್ತಿದ್ದು ಇಲ್ಲಿ ಕಲಿತ ವಿದ್ಯಾರ್ಥಿಗಳನ್ನು ಡಾಕ್ಟರ ಇಂಜನಿಯರ್ ಪೊಲೀಸ್ ಸೇರಿದಂತೆ ಉನ್ನತ ಮಟ್ಟದ ಹುದ್ದೆಗೆ ಹೋಗಲು ಅಡಿಪಾಯ ಹಾಕುತ್ತಿದ್ದು, ಬಡ ವಿಧ್ಯಾರ್ಥಿಗಳಿಗೆ ಲೊಯೋಲಾ ಶಿಕ್ಷಣ ಸಂಸ್ಥೆಯು ಬೆನ್ನೆಲುಬಾಗಿ ನಿಂತಿದೆ ಹೀಗಾಗಿ ಈ ಸಂಸ್ಥೆಗೆ ನಾವು ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.ಕ್ರಿಸಮಸ್ ಹಬ್ಬದ ಸಂದೇಶವನ್ನು ನೀಡಿದ ಸಿಸ್ಟರ್ ನೀತಾ ಆಳ್ವಾ…

Read More

ನಿಷೇಧ ಹಿಂಪಡೆಯಲು ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ | ಬಿಜೆಪಿ ಸರ್ಕಾರದ ಅವಧಿಯಲ್ಲಿ ತರಲಾಗಿದ್ದ ಹಿಜಾಬ್ ನಿಷೇಧ ಮೈಸೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ತರಲಾಗಿದ್ದ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಮೈಸೂರಿನ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಹೇಳಿದರು.ಎಲ್ಲರೂ ಹಿಜಾಬ್ ಧರಿಸಿ ಹೋಗಬಹುದು. ಆದೇಶ ಹಿಂಪಡೆಯಲು ಸೂಚಿಸಿದ್ದೇನೆ. ಉಡುಪು, ಊಟ‌ ಮಾಡುವುದು ನಿಮ್ಮ ಆಯ್ಕೆ. ಅದಕ್ಕೆ ನಾವು ಅಡ್ಡಿಪಡಿಸುವುದಿಲ್ಲ. ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತದೆ. ಇದರಿಂದ ವಿಚಲಿತರಾಗುವ ಪ್ರಶ್ನೆ ಇಲ್ಲ. ರಾಜೀ ಮಾಡಿಕೊಳ್ಳುವ ಪ್ರಶ್ನೆ…

Read More

ಆಸ್ಪತ್ರೆಗಳಲ್ಲಿ ಹಣ್ಣು-ಚಹಾ ವಿತರಿಸಿದ ಅಖಿಲ ಭಾರತ ಮಾನವೀಯತೆ ಸಂದೇಶ ವೇದಿಕೆ ಸಿಂದಗಿ: ನಗರದ ತಾಲೂಕಾ ಸರಕಾರಿ ಆಸ್ಪತ್ರೆ ಹಾಗೂ ಜಾಲಗೇರಿ ಆಸ್ಪತ್ರೆಗೆ ಅಖಿಲ ಭಾರತ ಮಾನವೀಯತೆ ಸಂದೇಶ ವೇದಿಕೆ ಪದಾಧಿಕಾರಿಗಳು, ಕಾರ್ಯಕರ್ತರು ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿ ಚಹಾ ಮತ್ತು ಹಣ್ಣು-ಹಂಪಲು ವಿತರಿಸಿದರು.ಈ ಸಂದರ್ಭದಲ್ಲಿ ಮೌಲಾನಾ ದಾವೂದ್ ನದ್ವಿ ಮಾತನಾಡಿ, ನಾವೆಲ್ಲ ಸ್ವಾರ್ಥ ಮತ್ತು ಸ್ವಂತ ಲಾಭದ ಭಾವನೆಯನ್ನು ಮರೆತು ಮಾನವರ ಸೇವೆಗೆ ಮುಂದೆ ಬರುವುದು ಅವಶ್ಯವಾಗಿದೆ. ಸಮಾಜ ಸೇವೆಯ ಹಾಗೂ ದತ್ತಿ ಕಾರ್ಯಗಳ ಮೂಲಕ ಮಾನವರ ಸೇವೆ ಮಾಡುವುದರಿಂದ ಸುಂದರ ಸಮಾಜ ನಿರ್ಮಾಣವಾಗುತ್ತದೆ. ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯ ಜೊತೆ ಸಹಾನುಭೂತಿ ತೊರಬೇಕು. ಮಾನವೀಯ ಮೌಲ್ಯಗಳನ್ನು ಉಳಿಸಿದರೆ ಹಾಗೂ ಸೂಕ್ತವಾದ ಪ್ರಾಯೋಗಿಕ ಕ್ರಮಗಳನ್ನು ಕೈಗೊಂಡರೆ ಮಾತ್ರ ಸಮೃದ್ಧ ದೇಶ ಮತ್ತು ಸಮಾಜವನ್ನು ನಿರ್ಮಿಸಲು ಸಾಧ್ಯ. ನೈತಿಕ ಅಧಃಪತನವನ್ನು ತಡೆಯದೆ ಹೊದರೆ, ದೇಶ ಮತ್ತು ದೇಶದಲ್ಲಿ ವಾಸಿಸುವ ಜನರ ಪರಿಣಾಮ ಕೆಟ್ಟು ಹೋಗುವುದು. ದೇಶದ ಅಖಂಡತೆ ಮತ್ತು ಜನರ ಕಲ್ಯಾಣಕ್ಕಾಗಿ…

Read More

ತಿಕೋಟಾ: ರಾಮಾನುಜನ್ ಅವರು ಸ್ವಯಂ-ಕಲಿಕೆಯ ಗಣಿತಶಾಸ್ತ್ರಜ್ಞರಾಗಿದ್ದು, ಅವರು ಸಂಖ್ಯೆ ಸಿದ್ಧಾಂತ, ಅನಂತ ಸರಣಿಗಳು ಮತ್ತು ವಿಶೇಷ ಕಾರ್ಯಗಳನ್ನು ಒಳಗೊಂಡಂತೆ ಗಣಿತದ ವಿವಿಧ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದು ಪ್ರಾಚಾರ್ಯರಾದ ಎಂ ಎ ಹಿರೇಮಠ ಹೇಳಿದರು.ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ ವಿ ವಿ ಎಸ್ ಪ್ರೌಢ ಶಾಲೆಯಲ್ಲಿ ಗಣಿತಶಾಸ್ತ್ರಜ್ಞ ರಾಮಾನುಜನ್ ಜನ್ಮ ದಿನಾಚರಣೆ ನಿಮಿತ್ತ ಗಣಿತ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ರಾಮಾನುಜನ್ ಅವರ ಜೀವನವನ್ನು ಅತ್ಯಂತ ಬಡತನ ಮತ್ತು ತೊಂದರೆಯಲ್ಲಿ ಕಳೆದರು, ಆದರೆ ಇದರ ಹೊರತಾಗಿಯೂ ರಾಮಾನುಜನ್ ಅವರ ಜೀವನದಲ್ಲಿ ಅನೇಕ ಗಣಿತದ ಸೂತ್ರಗಳು ಮತ್ತು ವಿಧಾನಗಳನ್ನು ನೀಡಿದರು. ಅನೇಕ ಸಂಶೋಧನೆಗಳನ್ನು ಮಾಡಿದರು ಎಂದು ವಿವರಿಸಿದರು.ರಾಮಾನುಜನ್ ಯವರ ಕನಸಿನಲ್ಲಿ ಚಲನೆಯ ಗಣಿತದ ಸಮೀಕರಣಗಳು ದೈವಿಕ ವರದಂತೆ ದೈವಿಕ ಅನುಗ್ರಹವಾಗಿ ಬಂದವು ಎಂದು ಸಹ ಶಿಕ್ಷಕ ಆಯ್ ಕೆ ನದಾಫ್ ಹೇಳಿದರು.ಎಂ ಜಿ ಕುಲಕರ್ಣಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಗಣಿತ ಶಿಕ್ಷಕ ಎಂ ಜಿ ಕುಲಕರ್ಣಿಯವರನ್ನು ಹತ್ತನೇಯ ತರಗತಿ ವಿದ್ಯಾರ್ಥಿಗಳು ಸನ್ಮಾನಿಸಿದರು.ವಿದ್ಯಾರ್ಥಿಗಳು ಗಣಿತದ ಅಂಕಿ…

Read More

ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ರಾಜ್ಯ ಸರಕಾರದ ಕ್ರಮಕ್ಕೆ ಖಂಡನೆ ವಿಜಯಪುರ: ೨೦೨೨-೨೩ ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಹಾಗೂ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡು ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಉತ್ತರ ಪ್ರಾಂತ ರಾಜ್ಯ ಕಾರ್ಯದರ್ಶಿ ಸಚೀನ ಕುಳಗೇರಿ ಮಾತನಾಡಿ, ರಾಜ್ಯದಲ್ಲಿ ಬಡ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಅಪಾಯಕಾರಿ, ಅಸುರಕ್ಷಿತ, ಹಾಗೂ ಅಸಂಘಟಿತ ವಲಯದಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಮತ್ತು ಅವರ ಕುಟುಂಬದ ರಕ್ಷಣೆಗಾಗಿ ಸರಕಾರಗಳು ಬದ್ಧವಾಗಿರಬೇಕು, ಆದರೆ ರಾಜ್ಯ ಸರಕಾರ ೨೦೨೨-೨೩ ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಬಿಡುಗಡೆ ಕಾರ್ಯಕ್ರಮವನ್ನು ನವಂಬರ್ ೦೯ ರಂದು ಮಾಡಿದೆ ಆದರೆ ಇಲ್ಲಿಯವರೆಗೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಜಮೆ ಆಗದೆ ಬಡ ವಿದ್ಯಾರ್ಥಿಗಳ ಜೀವನದ ಜೊತೆ ರಾಜ್ಯ…

Read More

ವಿಜಯಪುರ: ಕರ್ನಾಟಕ ರೈತ ಜಾಗೃತ ವೇದಿಕೆ ತಾಜಪೂರ ಎಚ್ ಹಾಗೂ ಜಿಲ್ಲಾ ಜಲ ಬಿರಾದರಿ ಇವರ ಸಂಯುಕ್ತಾಶ್ರಯದಲ್ಲಿ ತಾಲೂಕಾ ಮಟ್ಟದ ರೈತ ಸಂವಾದ ಕಾರ್ಯಕ್ರಮವನ್ನು ಶನಿವಾರ ಡಿ.೨೩ರಂದು ಸಾಯಂಕಾಲ ೪.೦೦ ಗಂಟೆಗೆ ತಾಜಪೂರ ಎಚ್. ಗ್ರಾಮ ಪಂಚಾಯತ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನವದೆಹಲಿಯ ವಿಶ್ವ ಜಲ ಪುರುಷ ಪ್ರಶಸ್ತಿ ಪುರಸ್ಕೃತ ರಾಜೇಂದ್ರ ಸಿಂಗ್ ರವರು ವಹಿಸುವರು. ಮುಖ್ಯ ಅತಿಥಿಗಳಾಗಿ ಭಾರತ ಸರಕಾರದ ಕೃಷಿ ಮಂತ್ರಾಲಯದ ಅಧಿಕಾರಿ ಅಶೋಕ ದಳವಾಯಿ, ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ಉಪನ್ಯಾಸಕ ಡಾ.ರಾಜೇಂದ್ರ ಪೋತದಾರ, ಜಿಲ್ಲಾ ಜಲ ಬಿರಾದರಿ ಅಧ್ಯಕ್ಷ ಫೀಟರ್ ಅಲೆಕ್ಸಾಂಡರ್, ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಗಮೇಶ ಬಬಲೇಶ್ವರ ವಹಿಸುವರು.ಈ ಕಾರ್ಯಕ್ರಮದಲ್ಲಿ ರೈತರು ಬೆಳೆಯುವ ಬೆಳೆಗೆ ಪರಿಹಾರ, ಔಷಧಿ ಸಂಪರಣೆ, ಆರ್ಥಿಕ ಲಾಭ ಕೊಡುವ ಬೆಳೆಗಳನ್ನು ಹೇಗೆ ಬೆಳೆಯುವುದು? ರೈತರ ಆರ್ಥಿಕ ಮಟ್ಟ ಸುಧಾರಣೆ, ನೀರಿನ ಸದ್ಭಳಕೆ ಹೇಗೆ ಮಾಡುವದು? ಇನ್ನು ಹಲವಾರು ವಿಷಯಗಳ ಕುರಿತು ಮುಕ್ತವಾದ ಸಂವಾದ…

Read More

ವಿಜಯಪುರ: ನಗರದ ಜ್ಞಾನಯೋಗಾಶ್ರಮದ ನಡೆದಾಡುವ ದೇವರು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಗುರುನಮನ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಡಿ.೨೩ ರಿಂದ ೩೧ರವರೆಗೆ ಪ್ರತಿದಿನ ಸಂಜೆ ೫ ರಿಂದ ಕವಿಗೋಷ್ಠಿಗಳು ಜರುಗಲಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರತಿದಿನ ಸಂಜೆ ೪ ಗಂಟೆಯಿಂದ ಕವಿಗೊಷ್ಠಿ ಮುಗಿಯುವರೆಗೆ ನಗರದ ವಿವಿಧ ಬಡಾವಣೆಗಳಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವತಿಯಿಂದ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.ಪ್ರಯಾಣಿಕರ ಅನುಕೂಲಕ್ಕಾಗಿ ಗಣೇಶನಗರ, ರೈಲು ನಿಲ್ದಾಣ, ಕೇಂದ್ರ ಬಸ್‌ನಿಲ್ದಾಣ, ಗಾಂಧಿಚೌಕ್, ತೊರವಿ ಸ್ಥಳಗಳಿಂದ ಆಶ್ರಮಕ್ಕೆ ಹೆಚ್ಚುವರಿ ನಗರ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಅದರಂತೆ ಜನವರಿ ೧ ಹಾಗೂ ೨ ರಂದು ಜರುಗುವ ಗುರುನಮನ ಮಹೋತ್ಸವ ಅಂಗವಾಗಿ ಮುಂಜಾನೆಯಿಂದ ಸಾಯಂಕಾಲದವರೆಗೆ ವಿವಿಧ ಬಡಾವಣೆಗಳಿಂದ ಹೆಚ್ಚುವರಿ ನಗರ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಸಾರ್ವಜನಿಕರು ಸಾರಿಗೆ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣ ಪಂಚಾಯತಿಗೆ ಸಾರ್ವತ್ರಿಕ ಚುನಾವಣೆ, ಮುದ್ದೇಬಿಹಾಳ ಪುರಸಭೆಗೆ ವಿವಿಧ ಕಾರಣಗಳಿಂದ ತೆರವಾದ ವಾರ್ಡ ನಂ.೧೮ರ ಸ್ಥಾನಕ್ಕೆ ಉಪ ಚುನಾವಣೆ ಹಾಗೂ ಮನಗೂಳಿ ಪಟ್ಟಣ ಪಂಚಾಯತ್‌ಗೆ ವಿವಿಧ ಕಾರಣಗಳಿಂದ ತೆರವಾದ ವಾರ್ಡ ಸಂ.೭ರ ಸ್ಥಾನಕ್ಕೆ ಉಪ ಚುನಾವಣೆಗೆ ಡಿ.೨೭ ರಂದು ಮತದಾನ ನಡೆಯಲಿರುವುದರಿಂದ ಶಾಂತಿಯುತ ಮತದಾನಕ್ಕಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಡಿ.೨೫ರಂದು ಬೆಳಿಗ್ಗೆ ೭ ರಿಂದ ಡಿ.೨೭ರವರೆಗಿನ ಅವಧಿಯಲ್ಲಿ ಕಲಂ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಚುನಾವಣೆ ನಡೆಯುವ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಮತಗಟ್ಟೆ ವ್ಯಾಪ್ತಿಯಲ್ಲಿ ೫ಕ್ಕಿಂತ ಹೆಚ್ಚು ಜನರು ಗುಂಪುಗೂಡಿ ಓಡಾಡುವುದನ್ನು ನಿಷೇಧಿಸಿದೆ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತçಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಮತಗಟ್ಟೆ ವ್ಯಾಪ್ತಿಯ ೧೦೦ ಮಿಟರ್‌ಗಳ ಒಳಗೆ ಮತಕ್ಕಾಗಿ ಪ್ರಚಾರ ಮಾಡುವುದು,…

Read More