Subscribe to Updates
Get the latest creative news from FooBar about art, design and business.
Author: editor.udayarashmi@gmail.com
Udayarashmi kannada daily newspaper
ನಮ್ಮ ನೆರೆ ದೇಶ ಚಂದ್ರನನ್ನು ತಲುಪಿದೆ, ಆದರೆ ಪಾಕ್ ಭೂಮಿಯಿಂದ ಮೇಲೇಳುತ್ತಿಲ್ಲ ಇಸ್ಲಾಮಾಬಾದ್: ನಮ್ಮ ನೆರೆ ದೇಶಗಳು ಚಂದ್ರನನ್ನು ತಲುಪಿವೆ. ಆದರೆ ಪಾಕಿಸ್ತಾನಕ್ಕೆ ಇನ್ನೂ ಭೂಮಿಯಿಂದ ‘ಎದ್ದೇಳಲು’ ಸಾಧ್ಯವಾಗಿಲ್ಲ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಮತ್ತೊಮ್ಮೆ ಭಾರತವನ್ನು ಹೊಗಳಿದ್ದಾರೆ.ಇಸ್ಲಾಮಾಬಾದ್ನಲ್ಲಿ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಕೇಡರ್ ಅನ್ನು ಉದ್ದೇಶಿಸಿ ಮಾತನಾಡಿದ ಷರೀಫ್, ದೇಶದ ಭೀಕರ ಆರ್ಥಿಕ ಸ್ಥಿತಿಯನ್ನು ಸೂಚಿಸಿದ ಪಿಎಂಎಲ್-ಎನ್ ಮುಖ್ಯಸ್ಥರು, ಅದರ ಅವನತಿಗೆ ಪಾಕಿಸ್ತಾನವೇ ಕಾರಣ ಎಂದು ಹೇಳಿದರು.ನಮ್ಮ ನೆರೆಹೊರೆಯವರು ಚಂದ್ರನನ್ನು ತಲುಪಿದ್ದಾರೆ. ಆದರೆ ನಾವು ಇನ್ನೂ ನೆಲದಿಂದ ಮೇಲೇರಲು ಸಹ ಸಾಧ್ಯವಾಗಿಲ್ಲ. ಇದು ಹೀಗೆ ಮುಂದುವರೆಯಲು ಸಾಧ್ಯವಿಲ್ಲ ಎಂದು ಹೇಳಿದರು. ನಮ್ಮ ಅವನತಿಗೆ ನಾವೇ ಕಾರಣ, ಇಲ್ಲದಿದ್ದರೆ ಈ ದೇಶ ಬೇರೆಯದೇ ಸ್ಥಿತಿಗೆ ತಲುಪುತ್ತಿತ್ತು ಎಂದರು.ನಾಲ್ಕನೇ ಬಾರಿಗೆ ಪಾಕಿಸ್ತಾನದ ಪ್ರಧಾನಿ ಹುದ್ದೆಗೆ ಸ್ಪರ್ಧಿಸುತ್ತಿರುವ ನವಾಜ್ ಷರೀಫ್ ಇಂದು ತಮ್ಮ ಭಾಷಣದಲ್ಲಿ, 2013ರಲ್ಲಿ ನಾವು ಭಾರಿ ವಿದ್ಯುತ್ ಕಡಿತವನ್ನು ಎದುರಿಸಿದ್ದೇವು. ನಾನು ಬಂದು ಅದನ್ನು ಕೊನೆಗೊಳಿಸಿದ್ದೇ, ಇಡೀ…
ವಿಜಯಪುರ: ಗುಮ್ಮಟ ನಗರಿಯಲ್ಲಿ ಡಿಸೆಂಬರ್ 24 ರಂದು ರವಿವಾರ ನಡೆಯಲಿರುವ ವೃಕ್ಷೊಥಾನ್ ಹೆರಿಟೇಜ್ ರನ್-2023ಕ್ಕೆ ಎರಡೇ ದಿನ ಬಾಕಿ ಉಳಿದಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಿದ್ಧತೆಗಳು ಭರದಿಂದ ಸಾಗಿವೆ. ಈಗಾಗಲೇ ಪ್ರಶಸ್ತಿ ಮೊತ್ತ, ಮಾರ್ಗ, ಪದಕಗಳನ್ನು ಅಂತಿಮಗೊಳಿಸಲಾಗಿದ್ದು, ಶನಿವಾರ ಬಿಬ್ ಮತ್ತು ಟಿ-ಶರ್ಟ್ ವಿತರಿಸಲಾಗುವುದು.ಈ ಬಾರಿ ಒಟ್ಟು ರೂ. 10 ಲಕ್ಷ ಬಹುಮಾನ ನಿಗದಿ ಪಡಿಸಲಾಗಿದ್ದು, ನಾಲ್ಕು ಕೆಟೆಗರಿಯಲ್ಲಿ ಒಟ್ಟು ತಲಾ 38 ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವೃಕ್ಷೊಥಾನ್ ಹೆರಿಟೇಜ್ ರನ್- 2023 ಕೋರ್ ಕಮಿಟಿ ಪದಕ, ರೂಟ್, ನೋಂದಣಿ ಸಮಿತಿಯ ರಘು ಸಾಲೋಟಗಿ, ಸಂಕೇತ ಬಗಲಿ, ಸೋಮಶೇಖರ ಸ್ವಾಮಿ, ವೀರೇಂದ್ರ ಗುಚ್ಚೆಟ್ಟಿ, ಡಾ. ರಾಜು ಯಲಗೊಂಡ ಹಾಗೂ ಸಂತೋಷ ಔರಸಂಗ ತಿಳಿಸಿದ್ದಾರೆ *ನಾನಾ ವಿಭಾಗಗಳಲ್ಲಿ ಪುರುಷ ಮತ್ತು ಮಹಿಳಾ ಓಟಗಾರರಿಗೆ ನಿಗದಿ ಪಡಿಸಲಾಗಿರುವ ಕೆಟಗರಿ, ವಿಭಾಗಗಳು ಮತ್ತು ನಿಗದಿ ಪಡಿಸಲಾಗಿರುವ ಬಹುಮಾದ ಮೊತ್ತ ಇಲ್ಲಿದೆ.**21 ಕಿ. ಮೀ. ಪುರುಷರು ಮತ್ತು ಮಹಿಳೆಯರ ವಯೋಮಾನ ವಿಭಾಗ ಮತ್ತು ಪ್ರಶಸ್ತಿ…
ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ ವಿನ್ಸೆಂಟ್ ಡಿಸೋಜಾ ಸೂಚನೆ ವಿಜಯಪುರ: ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಕಡಿಮೆ ಫಲಿತಾಂಶ ಬಂದ ಶಾಲೆಗಳನ್ನು ಗುರುತಿಸಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಸಕ್ತ ಸಾಲಿನ ಜಿಲ್ಲೆಯ ಎಸ್.ಎಸ್.ಎಲ್.ಸಿ. ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸುವಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ರಿಚರ್ಡ ವಿನ್ಸೆಂಟ್ ಡಿಸೋಜಾ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಗುರುವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ೨೦೨೩-೨೪ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಜಿಲ್ಲೆಯಾದ್ಯಂತ ಶೈಕ್ಷಣಿಕ ಕಾರ್ಯಾಗಾರ ಹಮ್ಮಿಕೊಂಡು ಕಡಿಮೆ ಫಲಿತಾಂಶ ಬಂದ ಶಾಲೆಗಳಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ, ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಬೇಕು. ಈಗಾಗಲೇ ದತ್ತು ಪಡೆದುಕೊಂಡ ಶಾಲೆಗಳಿಗೆ ಕಡ್ಡಾಯವಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರತಿ ಮಾಹೆ ಎರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಆ…
ವಿಜಯಪುರ ಸಹಕಾರಿ ಸಂಘಗಳ ಉಪನಿಬಂಧಕರ ಲಿಖಿತ ಭರವಸೆ ಮುದ್ದೇಬಿಹಾಳ: ಇಲ್ಲಿನ ಪಿಎಲ್ಡಿ ಬ್ಯಾಂಕ್ ನಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿವೆ. ಬ್ಯಾಂಕಿನ ಅಧ್ಯಕ್ಷ ಮತ್ತು ಹಿರಿಯ ಅಧಿಕಾರಿಗಳ ದುರ್ನಡತೆ ಎಂದು ಆರೋಪಿಸಿ ಮತ್ತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳ ವತಿಯಿಂದ ಬ್ಯಾಂಕ್ ಎದುರು ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿದ್ದ ಧರಣಿ ವಿಜಯಪುರದ ಸಹಕಾರಿ ಸಂಘಗಳ ಉಪನಿಬಂಧಕರ ಲಿಖಿತ ಭರವಸೆಯ ಮೇರೆಗೆ ಗುರುವಾರ ತಾತ್ಕಾಲಿಕ ಅಂತ್ಯ ಕಂಡಿದೆ.ಸೋಮುವಾರದಿಂದ ಶುರುವಾದ ಧರಣಿ ಸ್ಥಳಕ್ಕೆ ಬ್ಯಾಂಕ್ ನ ಅಧ್ಯಕ್ಷ, ಸ್ಥಳೀಯ ಅಧಿಕಾರಿಗಳು ಧರಣಿ ನಿರತರ ಮನವೊಲಿಸಲು ಸಕಷ್ಟು ಪ್ರಯತ್ನಿಸಿದರೂ ಧರಣಿ ನಿರತರು ತಮ್ಮ ಪಟ್ಟು ಬಿಡದೇ ಹೋರಾಟವನ್ನು ಹಂತ ಹಂತವಾಗಿ ಉಗ್ರವಾಗಿಸಿದ್ದರು. ಗುರುವಾರ ಬೆಳಿಗ್ಗೆ ಬ್ಯಾಂಕ್ ಎದುರಿನ ರಸ್ತೆಯಿಂದ ಆವರಣದಲ್ಲೆಲ್ಲ ಉರುಳುವ ಮೂಲಕ ಪ್ರತಿಭಟಿಸಿ ನಂತರ ತಲೆಯ ಮೇಲೆ ಕಲ್ಲು ಹೊತ್ತು ಧರಣಿ ಮುಂದುವರೆಸಿದ್ದರು. ಧರಣಿ ಸ್ಥಳಕ್ಕೆ ಸಂಜೆ ಆಗಮಿಸಿದ ಅಧಿಕಾರಿ ಭಾಗ್ಯಶ್ರೀ ಎಸ್.ಕೆ ಮತ್ತು ಸಹಾಯಕ ನಿಬಂಧಕ…
ಸಿಂದಗಿ: ಪಟ್ಟಣದ ಸರಕಾರಿ ಆದರ್ಶ ವಿದ್ಯಾಲಯದ ಸಭಾಭವನದಲ್ಲಿ ಸ್ಥಳಿಯ ಮಕ್ಕಳ ಬಳಗ ಸಿಂದಗಿ ಇವರು ಸರಕಾರಿ ಆದರ್ಶ ವಿದ್ಯಾಲಯದ ಸಹಯೋಗದಲ್ಲಿ ಡಿ.೨೨ ರಂದು ಮುಂಜಾನೆ ೧೦ ಗಂಟೆಗೆ ಚಿಣ್ಣರ ನುಡಿ ಸಿರಿ-೪೭ ಕಾರ್ಯಕ್ರಮ ಆಯೋಜಿಸಿದ್ದಾರೆ.ಉದ್ಘಾಟನೆ: ಶಾಸಕ ಅಶೋಕ ಮನಗೂಳಿ ಅವರು ೪೭ನೇ ಚಿಣ್ಣರ ನುಡಿ ಸಿರಿ ಕಾರ್ಯಕ್ರಮದ ಜ್ಯೋತಿ ಬೆಳಗಿಸುವರು. ಸರಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ವರ್ಷಿಣಿ ನಾಯಕ ಸಸಿಗೆ ನೀರುಣಿಸುವರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರವಿ ಬಮ್ಮಣ್ಣಿ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಶಾಲೆಯ ವಿದ್ಯಾರ್ಥಿನಿ ಶರಧಿ ಹಿರೇಮಠ, ವಿಜಯಪುರದ ರಾಮಕೃಷ್ಣ ವಿದ್ಯಾಶಾಲೆಯ ವಿದ್ಯಾರ್ಥಿನಿ ದಾನೇಶ್ವರಿ ಆಲಾಳ ಆಗಮಿಸುವರು.ಗೋಷ್ಠಿ-೧: ಹಳೆಬೇರು ಹೊಸ ಚಿಗುರು.ಸರಕಾರಿ ಆದರ್ಶ ವಿದ್ಯಾಲಯದ ಮುಖ್ಯಾದ್ಯಾಪಕ ಎಸ್.ಕೆ. ಬಿರಾದಾರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಕ್ಕಳ ಸಾಹಿತಿ ಎಸ್.ಎಸ್. ಸಾತಿಹಾಳ ಆಗಮಿಸುವರು. ಮಕ್ಕಳ ಬಳಗದ ಸಂಚಾಲಕ ಹ.ಮ. ಪೂಜಾರ ಉಪಸ್ಥಿತರಿರುವರು. ವಿದ್ಯಾರ್ಥಿನಿ ವೈಷ್ಣವಿ ಲಕ್ಷಾನಟ್ಟಿ ಅವರು ನಾನು ಓದಿದ ಕವನ ಸಂಕಲನ ಕುರಿತು, ವಿದ್ಯಾರ್ಥಿನಿ ಶ್ರೀನಿಧಿ ಹುಲಗಬಾಳ ಅವರು ನಾನು…
ಸಿಂದಗಿ: ಪಟ್ಟಣದಲ್ಲಿ ಹಂದಿಗಳ ಹಾವಳಿ ಹೆಚ್ಚಾಗಿದೆ. ಮತ್ತು ಅದರಿಂದ ಸಾರ್ವಜನಿಕರಿಗೆ ಅನೇಕ ತೊಂದರೆಗಳು ಉಂಟಾಗುತ್ತಿದೆ. ಹಾಗೂ ಅವುಗಳಿಂದ ಸ್ವಚ್ಛತೆ ಕೊರತೆಯಾಗಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಹಂದಿಗಳ ಸಾಕಾಣಿಕೆಯ ಮಾಲೀಕರು ತಮ್ಮ ತಮ್ಮ ಹಂದಿಗಳನ್ನು ಬೇರೆಡೆಗೆ ಸಾಗಿಸಬೇಕು. ಅಥವಾ ನಿಮ್ಮ ಮನೆಯಲ್ಲಿ ಬೇರೆ ಜಾಗ ಮಾಡಿ ಕೂಡಿಹಾಕಿಕೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಒಂದು ವೇಳೆ ಹಂದಿಗಳನ್ನು ಕಟ್ಟಿಹಾಕದೇ ಇದ್ದರೆ ಅಥವಾ ಬೇರೆಕಡೆಗೆ ಸಾಗಿಸದೇ ಹೋದಲ್ಲಿ ಪುರಸಭೆ ಕಾಯ್ದೆ ೧೯೬೪ ಕಲಂ, ೨೨೩,೨೩೯,೨೪೨ರ ಪ್ರಕಾರ ಕ್ರಮ ಜರುಗಿಸಲಾಗುವದು ಎಂದು ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.
ಮುದ್ದೇಬಿಹಾಳ: ವಕೀಲ ವೃತ್ತಿಗೆ ಸಮಾಜದಲ್ಲಿ ಹೆಚ್ಚಿನ ಗೌರವ ಇದೆ. ವಕೀಲರು ನಿರಂತರ ಅಧ್ಯಯನ ಮಾಡುವ ಮೂಲಕ ತಮ್ಮ ಪಕ್ಷಗಾರರಿಗೆ ನ್ಯಾಯ ಒದಗಿಸುತ್ತಾ ಸಂವಿಧಾನದ ಆಶಯ ಹಾಗೂ ಹಕ್ಕುಗಳಿಗೆ ಧಕ್ಕೆ ತರದಂತೆ ಇರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಲಕ್ಷ್ಮೀ ನಿಂಗಪ್ಪ ಗರಗ ಹೇಳಿದರು.ಪಟ್ಟಣದ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಕೀಲರ ದಿನಾಚರಣೆಯಲ್ಲಿ ಅವರು ಮಾತನಾಡಿದರು.ಹಿರಿಯ ವಕೀಲರು ಕಿರಿಯ ವಕೀಲರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಕಿರಿಯ ವಕೀಲರು ನಿರಂತರ ಕಲಾಪಗಳಲ್ಲಿ ಭಾಗಿಯಾಗಬೇಕು. ಯಾವ ಕಾರಣಕ್ಕಾಗಿ ಸಮಯ ತೆದುಕೊಳ್ಳುತ್ತಿದ್ದೇವೆ ಎಂಬುದನ್ನ ಮೊದಲು ತಿಳಿದಿರಬೇಕು. ಕಲಾಪಗಳಲ್ಲಿ ಭಾಗಿಯಾಗುವ ಮುನ್ನ ಪ್ರಕರಣವನ್ನು ತಿಳಿದುಕೊಳ್ಳಬೇಕು. ಪ್ರಕರಣದ ಹಂತಗಳ ಬಗ್ಗೆ ಅಭ್ಯಾಸ ಮಾಡಬೇಕು. ಪ್ರಕರಣಗಳಲ್ಲಿ ಸಲ್ಲಿಸ ಬಹುದಾದ ಅರ್ಜಿಗಳನ್ನು ಸ್ವತಃ ನೀವೆ ಟೈಪ್ ಮಾಡಿದಲ್ಲಿ ಬೇಗನೆ ವೃತ್ತಿಯಲ್ಲಿ ನಿಪುಣತೆ ಪಡೆಯಬಹುದು ಎಂದು ಕಿವಿ ಮಾತು ಹೇಳಿದರು.ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ಮಾತನಾಡಿ, ಸಮಾಜದಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದು. ವಕೀಲರು ಎಷ್ಟೇ ಅಧ್ಯಯನ ಮಾಡಿದರೂ ಕಡಿಮೆ ಎಂದರು.ನ್ಯಾಯವಾದಿಗಳ ಸಂಘದ ಅಧ್ಯಕ್ಷ…
ಕೊರೋನಾ ಸಕ್ರಿಯ ಪ್ರಕರಣಗಳು 105ಕ್ಕೆ ಏರಿಕೆ | ಆಕ್ಸಿಜನ್-ವೆಂಟಿಲೇಟರ್ಗೆ ಕೊರತೆಯಾಗದಂತೆ ಕ್ರಮ ಬೆಂಗಳೂರು: ರಾಜ್ಯದಲ್ಲಿ ಕೋವಿಡ್19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಾಗೂ ಬೆಂಗಳೂರಿನಲ್ಲಿ ಕೋವಿಡ್ನಿಂದಾಗಿ ಕಳೆದ ಮೂರು ದಿನಗಳಲ್ಲಿ ಮೂವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಚರ್ಚಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಲಾಯಿತು.ರಾಜ್ಯದಲ್ಲಿರುವ ಒಟ್ಟು 92 ಸಕ್ರಿಯ ಪ್ರಕರಣಗಳಲ್ಲಿ 80 ಬೆಂಗಳೂರು ನಗರದಲ್ಲಿ ಇದೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಳು ಜನರು ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ. ಅದಾಗ್ಯೂ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.…
ನವದೆಹಲಿ: ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷವು ಎನ್ಡಿಎ ಮೈತ್ರಿಕೂಟದ ಜತೆಗೆ ಅಧಿಕೃತವಾಗಿ ಸೇರ್ಪಡೆಗೊಂಡ ಬಳಿಕ ಇದೇ ಮೊದಲ ಭಾರಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪುತ್ರರ ಜತೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.ನವ ದೆಹಲಿಯ ಪ್ರಧಾನಿ ಕಚೇರಿಯಲ್ಲಿ ಮೋದಿಯನ್ನು ಭೇಟಿ ಮಾಡಲಾಗಿದ್ದು, ದೇವೇಗೌಡರ ಜತೆಗೆ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಸಿ.ಎನ್.ಬಾಲಕೃಷ್ಣ ಇದ್ದರು.ಜೆಡಿಎಸ್ ನಾಯಕರ ಭೇಟಿ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ‘ರಾಷ್ಟ್ರದ ಪ್ರಗತಿಗೆ ದೇವೇಗೌಡರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ. ವೈವಿಧ್ಯಮಯ ನೀತಿ, ವಿಷಯಗಳ ಕುರಿತು ಅವರ ಆಲೋಚನೆ ಹಾಗೂ ಒಳನೋಟ ದೂರದೃಷ್ಠಿಯಿಂದ ಕೂಡಿದೆ’ ಎಂದು ಬರೆದುಕೊಂಡಿದ್ದಾರೆ.ಪ್ರಧಾನಿ ಭೇಟಿ ಕುರಿತು ಸಂಸತಸ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ‘ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡರ ನಡುವಿನ ಬಾಂಧವ್ಯ, ಅವರಿಬ್ಬರೂ ಪರಸ್ಪರ ಇರಿಸಿಕೊಂಡಿರುವ ಪ್ರೀತಿ, ವಿಶ್ವಾಸವನ್ನು ಕಂಡು ನನ್ನ ಮನಸ್ಸು ಉಕ್ಕಿ…
