Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಅಲ್ಪಸಂಖ್ಯಾತ ಸಮುದಾಯದ ೧ ರಿಂದ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ಪೊರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ : ೩೧-೧೨-೨೦೨೩ ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.ಅರ್ಹ ಅಭ್ಯರ್ಥಿಗಳು ಮೆಟ್ರಿಕ್ ಪೂರ್ವ ಆನ್ಲೈನ್ ವೆಬ್ಸೈಟ್ https://ssp.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https:dom.karnataka.gov.in ನಲ್ಲಿ ಹಾಗೂ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಜಿಪಂ ಸಿಇಓ ರಾಹುಲ್ ಶಿಂಧೆ ಸೂಚನೆ ವಿಜಯಪುರ: ನಗರದ ಹೊರವಲಯದ ಭೂತನಾಳ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ ಸೈಕ್ಲಿಂಗ್ ವೆಲೋಡ್ರೋಂ ಕಾಮಗಾರಿಯನ್ನು ಇದೇ ಜನವರಿ ೧೫ರೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದ್ದಾರೆ.ಗುರುವಾರ ಸೈಕ್ಲಿಂಗ್ ವೆಲೋಡ್ರೋಂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸೈಕ್ಲಿಂಗ್ವೆ ಲೊಡ್ರೊಂ ಕಾಮಗಾರಿಯು ಆರಂಭವಾಗಿ ಬಹಳ ದಿನಗಳಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ಈ ಭಾಗದ ಸೈಕ್ಲಿಸ್ಟ್ ಗಳಿಗೆ ತೊಂದರೆಯಾಗುತ್ತಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಪ್ರಥಮಾಧ್ಯತೆಯಲ್ಲಿ ಬಾಕಿ ಉಳಿದ ಕಾಮಗಾರಿಯನ್ನು ಕೈಗೊಂಡು ಜನೇವರಿ ೧೫ರೊಳಗಾಗಿ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಕಾಮಗಾರಿಯ ಗುಣಮಟ್ಟದಲ್ಲಿ ಯಾವದೇ ರಾಜಿ ಮಾಡಿಕೊಳ್ಳದೇ ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಅವರು ಸೂಚಿಸಿದರು.ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪಿ.ಎಚ್.ಚವ್ಹಾಣ, ಸಹಾಯಕ ಅಭಿಯಂತರ ಎ.ಸಿ.ಮ್ಯಾಗೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಣಕಾಲ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿಜಯಪುರ: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಇಂಗ್ಲೀಷ್ ವಿಷಯದ ಕುರಿತು ಡಿ೨೨ ರಂದು ಸಂಜೆ ೬ ರಿಂದ ೮ ಗಂಟೆವರೆಗೆ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಡಿಪಿಐ ಎನ್.ಎಚ್.ನಾಗೂರ ಅವರು ತಿಳಿಸಿದ್ದಾರೆ.ಮಾರ್ಚ್ನಲ್ಲಿ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ವಿಷಯದಲ್ಲಿನ ಕಲಿಕೆ ಸಮಸ್ಯೆಗಳಿಗೆ ಮತ್ತು ಮಕ್ಕಳ ಪಾಲಕರು ಹಾಗೂ ಸಾರ್ವಜನಿಕರು ಪರೀಕ್ಷೆ ವಿಧಾನ ಹಾಗೂ ಇಂಗ್ಲೀಷ್ ವಿಷಯದ ಕುರಿತು ಇರುವ ತಮ್ಮ ಸಮಸ್ಯೆಗಳಿಗೆ ಫೋನ್ ಇನ್ ಕಾರ್ಯಕ್ರಮದಲ್ಲಿ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.ಕರೆ ಮಾಡಲು ಸಂಪರ್ಕಿಸಬೇಕಾದ ಸಂಖ್ಯೆ : ೭೬೭೬೩೧೩೮೦೦, ೯೯೦೨೫೬೯೪೧೦, ೯೮೪೪೬೫೨೭೨೮, ೯೯೦೨೮೩೩೭೯೨, ೯೬೩೨೭೧೦೨೮೪, ೯೮೮೬೯೨೬೧೭೦, ೯೯೦೦೪೮೮೧೪೯, ೯೪೪೯೯೬೮೧೩೨, ೯೮೮೦೪೭೨೩೦೨, ೯೮೪೫೯೧೯೭೦೩ ಸಂಖ್ಯೆಗೆ ಕರೆ ಮಾಡಬಹುದಾಗಿದೆ.ಪ್ರತಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ದೂರವಾಣಿ ನಂಬರಗಳನ್ನು ನೀಡಲಾಗುವುದು. ಎಲ್ಲಾ ವಿಷಯಗಳ ಕುರಿತು ಕರೆ ಮಾಡಲು ಜಿಲ್ಲೆಯ ಎಲ್ಲಾ ಸರಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರ ಹಾಗೂ ಸಹ ಶಿಕ್ಷಕರ ಕಡೆಗೆ ಫೋನ್ ನಂಬರ್ಗಳು ಲಭ್ಯವಿರಲಿದ್ದು, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಈ ಫೋನ್…
ವಿಜಯಪುರ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಶಾರದಾಂಬಾ ಎಜ್ಯುಕೇಶನ್ ಟ್ರಸ್ಟ್ ತಿಕೋಟಾ ಇವರ ಸಹಯೋಗದಲ್ಲಿ ಡಿ.೨೨ರಂದು ತಿಕೋಟಾದ ಕೋಟ್ಯಾಳ ರಸ್ತೆಯ ಶ್ರೀ ಶಾರದಾಂಬಾ ಎಜ್ಯುಕೇಶನ್ ಟ್ರಸ್ಟ್ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ-೨೦೨೩-೨೪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೯ ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ಸೇರಿದಂತೆ ಜಿಲ್ಲೆಯ…
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಪರಿಚಯ ಕುರಿತು ಅಂಬೇಡ್ಕರ್ ಓದು ಕಾರ್ಯಕ್ರಮ ನಗರದ ವಿ.ಬಿ.ದರಬಾರ್ ಸಂಯುಕ್ತ ಪದವಿ ಪೂರ್ವ ಕಾಲೇಜ್ನಲ್ಲಿ ಡಿ.೨೮ ರಂದು ಹಮ್ಮಿಕೊಳ್ಳಲಾಗಿದೆ.ವಿದ್ಯಾರ್ಥಿ-ವಿದ್ಯಾರ್ಥಿಗಳಿಂದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪುಸ್ತಕ ರೂಪದಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ಅಂದು ಬೆಳಿಗ್ಗೆ ೧೧-೩೦ಕ್ಕೆ ಜರುಗಲಿದ್ದು, ಕಾರ್ಯಕ್ರಮವನ್ನು ವಿದ್ಯಾವರ್ಧಕ ಸಂಘದ ಸಂಯೋಜನಾಧಿಕಾರಿ ಡಾ.ವ್ಹಿ.ಬಿ.ಗ್ರಾಮಪುರೋಹಿತ ಉದ್ಘಾಟಿಸಲಿದ್ದಾರೆ. ವ್ಹಿ.ಬಿ.ದರಬಾರ ಸಂಯುಕ್ತ ಪದವಿಪೂರ್ವ ಕಾಲೇಜ್ ಪ್ರಾಚಾರ್ಯ ಟಿ.ಆರ್.ಕುಲಕರ್ಣಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಉಪನ್ಯಾಸಕರಾಗಿ ಕಾಲೇಜಿನ ಉಪನ್ಯಾಸಕ ಎ.ನಾಗರಾಜ್ ಅವರು ಭಾಗವಹಿಸಲಿದ್ದಾರೆ.
ವಿಜಯಪುರ: ಜಿಲ್ಲೆಯಲ್ಲಿ ಖಾಸಗಿ ವೈದ್ಯಕೀಯ ಸೇವೆ ನೀಡುವ ಸಂಸ್ಥೆಗಳು ಕರ್ನಾಟಕ ಖಾಸಗಿ ವೈದ್ಯಕೀಯ ವೃತ್ತಿ ಅಧಿನಿಯಮ ೨೦೦೭ರ ಅಡಿಯಲ್ಲಿ ನೊಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಕೆಪಿಎಂಇಎ ಅಡಿ ನೊಂದಣಿ ಪಡೆಯದೇ ಇರುವ ಸಂಸ್ಥೆಗಳು ಕೂಡಲೇ ಆನ್ಲೈನ್ ಮೂಲಕ ನೊಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ವೈದ್ಯಕೀಯ ಸೇವೆ ನೀಡುತ್ತಿರುವ ಖಾಸಗಿ ವ್ಯಕ್ತಿ-ಸಂಸ್ಥೆಗಳು ಕೆಪಿಎಂಇಎ ಅಧಿನಿಯಮ ೨೦೦೭ರಡಿ ನೊಂದಣಿಯನ್ನು ಪಡೆಯದೇ ವೈದ್ಯಕೀಯ ಸೇವೆ ನೀಡುತ್ತಿರುವುದು ಕಂಡು ಬಂದಿದೆ. ವೈದ್ಯಕೀಯ ಸೇವೆ ನೀಡಲು ಸೂಕ್ತ ವಿದ್ಯಾರ್ಹತೆ ಹೊಂದಿದ್ದರೂ ಸಹ ಕೆಪಿಎಂಇಎ ನೊಂದಣಿ ಪಡೆಯದೇ ಖಾಸಗಿ ವೈದ್ಯಕೀಯ ಸಂಸ್ಥೆಗಳನ್ನು ನಡೆಸುವುದು ಅಥವಾ ವೈದ್ಯಕೀಯ ಸೇವೆ ನೀಡುವುದು ನಿಯಮಬಾಹಿರವಾದ ದಂಡನೀಯ ಅಪರಾಧವಾಗಿರುತ್ತದೆ. ನೊಂದಣಿ ಮಾಡಿಕೊಳ್ಳದೇ ಖಾಸಗಿ ವೈದ್ಯಕೀಯ ಸೇವೆ ಸಂಸ್ಥೆಗಳು ವೈದ್ಯಕೀಯ ಸೇವೆ ಮುಂದುವರೆಸಿದ್ದಲ್ಲಿ ಅಂತಹ ಸಂಸ್ಥೆಗಳ ವಿರುದ್ದ ಕಾನೂನು ರಿತ್ಯ ಕ್ರಮ ಕೈಗೊಳ್ಳಲಾಗುವುದು.ಹಲವು ಖಾಸಗಿ ವೈದ್ಯಕೀಯ ಸಂಸ್ಥೆಗಳು-ವ್ಯಕ್ತಿಗಳು ಆಯುಷ್ ಪದವಿಯನ್ನು ಪಡೆದು ಆಯುಷ ಪದ್ಧತಿಯಲ್ಲಿ ಖಾಸಗಿ ವೈದ್ಯಕೀಯ ಸೇವೆಗಾಗಿ ಕೆಪಿಎಂಇಎ ನೊಂದಣಿ…
ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣ ಪಂಚಾಯತಿಗೆ ಸಾರ್ವತ್ರಿಕ ಚುನಾವಣೆ, ಮುದ್ದೇಬಿಹಾಳ ಪುರಸಭೆಗೆ ವಿವಿಧ ಕಾರಣಗಳಿಂದ ತೆರವಾದ ವಾರ್ಡ ನಂ.೧೮ರ ಸ್ಥಾನಕ್ಕೆ ಉಪ ಚುನಾವಣೆ ಹಾಗೂ ಮನಗೂಳಿ ಪಟ್ಟಣ ಪಂಚಾಯತ್ಗೆ ವಿವಿಧ ಕಾರಣಗಳಿಂದ ತೆರವಾದ ವಾರ್ಡ ಸಂ.೭ರ ಸ್ಥಾನಕ್ಕೆ ಉಪ ಚುನಾವಣೆಗೆೆ ಡಿ.೨೭ ರಂದು ಮತದಾನ ನಡೆಯಲಿರುವುದರಿಂದ ಶಾಂತಿಯುತ ಮತದಾನಕ್ಕಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಮತದಾನದ ಪೂರ್ವ ದಿನ ಹಾಗೂ ಮತದಾನ ದಿನ ಚಡಚಣ, ಮನಗೂಳಿ ಮತ್ತು ಮುದ್ದೇಬಿಹಾಳ ಪಟ್ಟಣಗಳಲ್ಲಿ ನಡೆಯುವ ಸಂತೆ, ಜಾತ್ರೆ ಹಾಗೂ ಉತ್ಸವಗಳನ್ನು ನಿಷೇಧಿಸಿ ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ವಿಜಯಪುರ: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಡಿ.೨೪ ರಂದು ಬೆಳಿಗ್ಗೆ ೬ ಗಂಟೆಗೆ ವೃಕ್ಷೋತ್ಥಾನ ಪಾರಂಪರಿಕ ಓಟ-೨೦೨೩ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೯ ಗಂಟೆಗೆ ಜರುಗುವ ವೃಕ್ಷಥಾನ್ ಸಮಾರೋಪ ಸಮಾರಂಭವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಾನೂನು ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ.ಪಾಟೀಲ, ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಉಪಸ್ಥಿತರಿರಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ…
ಹೊನವಾಡ: ಡಾ.ಬಿ.ಆರ್ ಅಂಬೇಡ್ಕರ ಅವರ ಆಲೋಚನೆಗಳು, ಸಾಮಾಜಿಕ ಅಸಮಾನತೆ, ಲಿಂಗ ತಾರತಮ್ಯ, ರಾಜಕೀಯ, ಆರ್ಥಿಕ ವಿಷಯಗಳ ಬಗ್ಗೆ ಸಂವಿಧಾನದಲ್ಲಿರುವ ಇತರೆ ಪ್ರಮುಖವಾದ ವಿಷಯಗಳ ಮೇಲೆ ಬೆಳಕು ಚೆಲ್ಲುವಂತೆ ಸಂವಿಧಾನದ ಕುರಿತು ನಾಟಕವನ್ನು ಸಿದ್ಧಪಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ಶಾಲೆಗಳಲ್ಲಿ ಪ್ರದರ್ಶನಗೊಳ್ಳುವ ಮೂಲಕ ಸಂವಿಧಾನದ ಕುರಿತು ಗ್ರಾಮೀಣ ಜನರಲ್ಲಿ ಅರಿವನ್ನು ಮೂಡಿಸುವಲ್ಲಿ ಯಶಸ್ವಿಯಾಗಿದೆ ಎಂದು ಪ್ರಾಚಾರ್ಯ ಎಂ.ಎ ಹಿರೇಮಠ ನುಡಿದರು.ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದಲ್ಲಿ ವಿ ವಿ ಎಸ್ ಪ್ರೌಢ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವಿಜಯಪುರ ತಾಲ್ಲೂಕು ಪಂಚಾಯತ್ ತಿಕೋಟಾ ಹಾಗೂ ಸಪ್ತಗಿರಿ ಫೌಂಡೇಶನ್ ವಿಜಯಪುರ ವತಿಯಿಂದ ಪ್ರದರ್ಶನ ಮಾಡಲಾಯಿತು.ಮೊದಮೊದಲಿಗೆ, ಕನ್ನಡದ ಸಾಹಿತಿಗಳ ಪ್ರಖ್ಯಾತ ಕಾದಂಬರಿಗಳ ಕೆಲವು ತುಣುಕುಗಳನ್ನು ಬೀದಿ ನಾಟಕ ರೂಪಕ್ಕೆ ಪರಿವರ್ತಿಸಿ, ಆಯಾ ಸಾಹಿತಿಗಳ ಸಮ್ಮುಖದಲ್ಲಿ, ಪ್ರದರ್ಶನ ನೀಡಿ, ಗೌರವ ಸಮ್ಮಾನ ಮಾಡಿ, ಸಾಹಿತಿಗಳ ಮತ್ತು ಅವರ ಕಾದಂಬರಿಯನ್ನು ಪರಿಚಯಿಸುವ ಕಾರ್ಯಕ್ರಮಗಳಲ್ಲಿ ಬೀದಿ ನಾಟಕ ಬಳಕೆಯಾಗುತಿತ್ತು ಎಂದು ಎಸ್ ಜಿ ಲಕ್ಕುಂಡಿಮಠ ಹೇಳಿದರು.ಕರ್ನಾಟಕದಲ್ಲಿ ಬೀದಿ ನಾಟಕದ ಪ್ರಕಾರವನ್ನು ಪರಿಚಯಿಸಿದವರು ಹಿರಿಯರಾದ…
ಇಂಡಿ: ತಾಲೂಕಿನ ಸಾತಲಗಾಂವ ಪಿಐ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಡಿ. 25 ಮತ್ತು 26 ರಂದು ವಿವಿಧ ಧಾರ್ಮಿಕಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಲಾಗಿದೆ.ಡಿ. 25 ರಂದು ರಾತ್ರಿ 10:00 ಘಂಟೆಗೆ ಅಗ್ನಿಪುಟವ ಕಾರ್ಯಕ್ರಮ ಹಾಗೂ ಭಜನೆ ಮತ್ತು ಡೊಳ್ಳಿನ ಕಾರ್ಯಕ್ರಮ ಜರುಗುತ್ತದೆ. ತದನಂತರ ಬೆಳಿಗ್ಗೆ ಡಿ.26 ರಂದು ಶ್ರೀ ಬಸವೇಶ್ವರ ದೇವಾಲಯದಿಂದ ಪಲ್ಲಕ್ಕಿ ಮತ್ತು ಪುರವಂದರ ಉತ್ಸವ ಸಕಲ ವಾದ್ಯ ವೈಭವಗಳೋಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯುತ್ತದೆ. ತದನಂತರ ವೀರಭದ್ರೇಶ್ವರ ದೇವಸ್ಥಾನಕ್ಕೆ ತಲುಪಿತನಂದರ ಮಧ್ಯಾಹ್ನ 1 ಗಂಟೆಗೆ ಅಗ್ನಿ ಪ್ರವೇಶ ಕಾರ್ಯಕ್ರಮ ನೆರೆವರೆಯುವುದು. ಅದೇ ದಿನ ರಾತ್ರಿ “ಮಗ ಹೋದರು ಮಾಂಗಲ್ಯ ಬೇಕು” ಎಂಬ ಕೌಟುಂಬಿಕ ಸುಂದರ ಸಾಮಾಜಿಕ ನಾಟಕ ಜರುಗುತ್ತದೆಎಂದು ಜಾತ್ರಾ ಕಮೀಟಿಪ್ರಕಟಣೆಯಲ್ಲಿ ತಿಳಿಸಿದೆ.
