Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಮುದ್ದೇಬಿಹಾಳ: ಡಿ.೨೧ ರಂದು ನಿಡಗುಂದಿ ೧೧೦/೩೩/೧೧ಕೆವಿ ಉಪಕೇಂದ್ರದ ಮೂರನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ನಿರ್ವಹಿಸುತ್ತಿರುವದರಿಂದ ಈ ಉಪಕೇಂದ್ರಗಳ ಮೇಲೆ ಬರುವ ಹುಲ್ಲೂರ, ಹುಲ್ಲೂರ ಎನ್.ಜೆ.ವಾಯ್, ಕಾಶಿನಕುಂಟಿ, ಮುದೂರ, ಹಾಗೂ ಜಟ್ಟಗಿ, ಈ ಎಲ್ಲ ೧೧ಕೆವಿ ಐಪಿಗಳ ಮೇಲೆ ಬರುವ ಸ್ಥಾವರಗಳಿಗೆ ಹಾಗೂ ನೀರಾವರಿ ಪಂಪಸೆಟ್ಟುಗಳಿಗೆ ಬೆಳಿಗ್ಗೆ ೧೦ರಿಂದ ಸಂಜೆ ೬ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.
ಮುದ್ದೇಬಿಹಾಳ: ತಾಲೂಕಿನ ವ್ಯಾಪ್ತಿಯಲ್ಲಿನ ೪ ಖಾಸಗಿ ಆಸ್ಪತ್ರೆಗಳಿಗೆ ತಾಲೂಕು ಆರೋಗ್ಯಾಧಿಕಾರಿ ಸತೀಶ ತಿವಾರಿ ನೇತೃತ್ವದ ಆರೋಗ್ಯ ಇಲಾಖೆಯ ತಂಡ ಭೇಟಿ ನೀಡಿ ಕೆಲ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದರು.ಖಾಸಗಿ ಆಸ್ಪತ್ರೆಗಳಲ್ಲಿ ತಾವು ಹೊಂದಿರುವ ವೈದ್ಯಕೀಯ ಪದವಿಗೆ ವಿರುದ್ಧವಾಗಿ ಬೇರೆ ವೈದ್ಯಕೀಯ ಪದ್ಧತಿಯಲ್ಲಿ ಪ್ರ್ಯಾಕ್ಟೀಸ್ ಮಾಡುತ್ತಿರುವ, ಬ್ಯಾನ್ ಮಾಡಲಾದ ಔಷಧಿಗಳನ್ನು ಉಪಯೋಗಿಸುತ್ತಿರುವ, ಆಸ್ಪತ್ರೆಯ ಒಳಗೆ ಮತ್ತು ಹೊರಗೆ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿಟ್ಟುಕೊಳ್ಳದವರಿಗೆ, ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜಮೆಂಟ್ ನಿರ್ವಹಿಸಿಲ್ಲದ ಬಗ್ಗೆ, ಆಸ್ಪತ್ರೆಯನ್ನು ಕೆಎಂವಿ ಕಾಯ್ದೆಯಡಿ ನೊಂದಣಿ ಮಾಡಿಸಿಕೊಂಡಿರದ, ಚಾರ್ಜ್ ಲೀಸ್ಟ್ ಹಾಕಿರದ, ವಿದ್ಯಾರ್ಹತೆ ದಾಖಲೆ ಪತ್ರಗಳನ್ನು ಮತ್ತು ಕೆಪಿಎಂಇ ಸರ್ಟಿಫಿಕೇಟ್ ಪ್ರದರ್ಶನ ಮಾಡಿಲ್ಲದಿರುವ ಹೀಗೆ ಇವುಗಳಲ್ಲಿನ ಯಾವುದಾದರೊಂದು ಅಥವಾ ಎಲ್ಲ ಅಂಶಗಳ ನ್ಯೂನ್ಯತೆಗಳು ಕಂಡು ಬಂದವರಿಗೆ ನೊಟೀಸ್ ಜಾರಿ ಮಾಡಿದ್ದಾರೆ.ಈ ಬಗ್ಗೆ ಮಾಹಿತಿ ನೀಡಿದ ಅವರು ಮೇಲಾಧಿಕಾರಿಗಳ ಆದೇಶದಂತೆ ವೈದ್ಯರ ನೊಂದಣಿ, ಮೂಲ ಸೌಕರ್ಯ, ಸ್ವಚ್ಛತೆಯ ಬಗ್ಗೆ ಪರಿಶೀಲಿಸಿದ್ದೇವೆ. ಬಯೋಮೆಕಲ್ ತ್ಯಾಜ್ಯವನ್ನು ಎಲ್ಲಂದರಲ್ಲಿ ಎಸೆಯದಂತೆ ತಾಕೀತು ಮಾಡಲಾಗಿದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ವಿದ್ಯಾರ್ಹತೆ…
ವಿಜಯಪುರ: ವಿಜಯಪುರ ಜಿಲ್ಲೆಯ ೧೧೦ಕೆ.ವಿ ನಿಡಗುಂದಿ ಹಾಗೂ ಮುಖರ್ತಿಹಾಳ ಉಪ ಕೇಂದ್ರಗಳ ತ್ರೈಮಾಸಿಕ ದುರಸ್ತಿ ಕಾಮಗಾರಿ ಕೈಗೆತ್ತಿಕೊಲ್ಳಲಾಗಿದೆ. ಈ ವಿದ್ಯುತ್ ಉಪ-ಕೇಂದ್ರಗಳಿಂದ ವಿದ್ಯುತ್ ಸರಬರಾಜು ಹೊಂದುವ ೩೩ಕೆ.ವಿ ಮಾರ್ಗಗಳು ಹಾಗೂ ೧೧ಕೆ.ವಿ ನಿರಂತರ ಜ್ಯೋತಿ ಮಾರ್ಗಗಳು, ಕೃಷಿ ನೀರಾವರಿ ಮಾರ್ಗಗಳು, ನಿಡಗುಂದಿ ಪಟ್ಟಣ, ಆಲಮಟ್ಟಿ ಹಾಗೂ ಬ.ಬಾಗೇವಾಡಿ, ಇಂಗಳೇಶ್ವರ, ಹಂಗರಗಿ, ಹೂವಿನ ಹಿಪ್ಪರಗಿ ಬಹುಹಳ್ಳಿ ಕುಡಿಯುವ ನೀರಿನ ಘಟಕಗಳಿಗೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಡಿ ೨೧ರಂದು ಬೆಳಿಗ್ಗೆ ೧೦ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಬಸವನ ಬಾಗೇವಾಡಿಯ ಹೆಸ್ಕಾಂನ ಕಾರ್ಯನಿವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿಜಯಪುರ: ಜಿಲ್ಲೆಯು ಐತಿಹಾಸಿಕ ಸ್ಮಾರಕಗಳಿಗೆ ಹೆಸರುವಾಸಿಯಾಗಿದ್ದು, ಇದೊಂದು ಪ್ರವಾಸಿ ತಾಣವಾಗಿದೆ. ದೇಶ-ವಿದೇಶದ ಪ್ರವಾಸಿಗರು ಆಗಮಿಸುತ್ತಿದ್ದು, ನಗರದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಲೋಕಾಯುಕ್ತ ಅಧಿಕ್ಷಕ ಹನಮಂತರಾಯ ಅವರು ಹೇಳಿದರು.ಬುಧವಾರ ನಗರದ ಸೆಟ್ಲೈಟ್ ಬಸ್ ನಿಲ್ದಾಣ, ಶಿವಾಜಿ ವೃತ್ತ, ಕೇಂದ್ರ ಬಸ್ ನಿಲ್ದಾಣ, ಕೋರ್ಟ್, ಗಗನ ಮಹಲ್ ಹಾಗೂ ಎ.ಪಿ.ಎಮ್.ಸಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ವೀಕ್ಷಿಸಿದರು.ಸೆಟ್ಲೈಟ್ ಬಸ್ ನಿಲ್ದಾಣ ಹಾಗೂ ಕೇಂದ್ರ ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಗೋಡೆ ಆವರಣ ಸುತ್ತಲೂ ವಿವಿಧ ಗಿಡ ಮರಗಳ ಬೆಳೆಸಬೇಕು. ಹಸಿರು ಹುಲ್ಲು ಬೆಳೆಸುವ ಮೂಲಕ ಬಸ್ ನಿಲ್ದಾಣವನ್ನು ಸುಂದರವಾಗಿಸುವುದರೊಂದಿಗೆ ಸ್ವಚ್ಚತೆ, ಕಸ-ತ್ಯಾಜ್ಯವನ್ನು ದಿನದಲ್ಲಿ ಎರಡು ಸರತಿಗಳಲ್ಲಿ ವಿಲೇವಾರಿಗೆ ಕ್ರಮ ವಹಿಸಬೇಕು. ನಿಲ್ದಾಣದ ಆವರಣದಲ್ಲಿರುವ ಐತಿಹಾಸಿಕ ಬಾವಿಯನ್ನು ಸ್ವಚ್ಚಗೊಳಿಸಿ, ನೀರನ್ನು ಬಳಸಿಕೊಳ್ಳುವಂತೆ, ಬಸ್ ನಿಲ್ದಾಣದ ಸ್ಥಳಗಳಲ್ಲಿ ಸಿ.ಸಿ. ಟಿವಿ ಅಳವಡಿಸಬೇಕು ಎಂದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.ಜಿಲ್ಲೆಯ ಬೇರೆ-ಬೇರೆ ಗ್ರಾಮಗಳಿಂದ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ನಗರಕ್ಕೆ ಆಗಮಿಸುತ್ತಾರೆ. ಶಾಲಾ–ಕಾಲೇಜಿನ ನಿಗದಿತ ಸಮಯಕ್ಕನುಗುಣವಾಗಿ ವಿದ್ಯಾರ್ಥಿಗಳು…
ಕೃಷಿ-ತೋಟಗಾರಿಕೆ ಉತ್ಪನ್ನಗಳ ಖರೀದಿದಾರ-ಮಾರಾಟಗಾರರ ಸಮಾವೇಶಕ್ಕೆ ಚಾಲನೆ ವಿಜಯಪುರ: ನಮ್ಮ ಜಿಲ್ಲೆಯು ಪ್ರಮುಖವಾಗಿ ಕೃಷಿ ಆಧಾರಿತವಾಗಿದೆ. ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ತಮ್ಮ ಆದಾಯ ದ್ವಿಗುಣಗೊಳಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ ಅವರು ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳ ಖರೀದಿದಾರ ಹಾಗೂ ಮಾರಾಟಗಾರರ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರೈತರು ರಾಸಾಯನಿಕ ಗೊಬ್ಬರ ಬಳಸದೇ, ಸಾವಯವ ರಸಗೊಬ್ಬರವನ್ನು ಉಪಯೋಗಿಸಿ ಹೆಚ್ಚಿನ ಇಳುವರಿ ಪಡೆಯಬೇಕು. ರೈತರು ಕೃಷಿಯಲ್ಲಿ ವೈಜ್ಞಾನಿಕ ಹಾಗೂ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಕೃಷಿಯೊಂದಿಗೆ ಉಪ ಕಸುಬನ್ನು ಅಳವಡಿಸಿಕೊಳ್ಳಬೇಕು. ತೋಟಗಾರಿಕೆ ಬೆಳೆಗಳೊಂದಿಗೆ ಮಿಶ್ರ ಬೇಸಾಯಕ್ಕೆ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ರೈತರಿಗೂ ಅನೂಕೂಲವಾಗುವ ನಿಟ್ಟಿನಲ್ಲಿ ಇಂದು ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳ ಖರೀದಿದಾರ ಹಾಗೂ ಮಾರಾಟಗಾರರ ಸಮಾವೇಶವನ್ನು ಏರ್ಪಡಿಸಲಾಗಿದೆ. ಇದರಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಕೃಷಿಗೆ ಸಂಬಂಧಿಸಿದ ಇಂತಹ ಕಾರ್ಯಕ್ರಮವನ್ನು…
ಬೈಕ್-ಆಟೋ ರ್ಯಾಲಿಗೆ ಚಾಲನೆ ನೀಡಿದ ಸಚಿವ ಶಿವಾನಂದ ಪಾಟೀಲ ಅಭಿಮತ ಬಸವನಬಾಗೇವಾಡಿ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ವಿಶ್ವಹಿಂದು ಪರಿಷದ್, ಬಜರಂಗದಳದ ಸಹಯೋಗದಲ್ಲಿ ಡಿ.೨೧ ರಂದು ಹಮ್ಮಿಕೊಂಡಿರುವ ಹನುಮಾಲ ಪಾದುಕೆ ಪಲ್ಲಕ್ಕಿ ಉತ್ಸವ ಹಾಗೂ ಮಾತೃ ಶಕ್ತಿ ದುರ್ಗಾವಾಹಿನಿ ವಾರ್ಷಿಕೋತ್ಸವ ಸಮಾರಂಭದಂಗವಾಗಿ ಬುಧವಾರ ಬೈಕ್ ಹಾಗೂ ಅಟೋ ರ್ಯಾಲಿಗೆ ಸಕ್ಕರೆ ಅಭಿವೃದ್ಧಿ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ರಾಮ ಮತ್ತು ಹನುಮಂತ ನಮ್ಮ ದೇಶದ ಸಾಂಸ್ಕ್ರತಿಕ ಪ್ರತೀಕರಾಗಿದ್ದಾರೆ. ಸನಾತನ ಕಾಲದಿಂದಲೂ ರಾಮ ಮತ್ತು ಹನುಮಂತನ ಪೂಜೆ ನಡೆಯುತ್ತಿದೆ. ಎಲ್ಲರೂ ಒಂದಾಗಿ ಧಾರ್ಮಿಕ ಆಚರಣೆಗಳು ನಡೆಯುವ ಮೂಲಕ ಸಮಾಜ ಜಾಗೃತಿಯಾಗಬೇಕು. ರಾಮ, ಹನುಮಂತನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.ಈ ಸಂದರ್ಭದಲ್ಲಿ ವ್ಹಿಡಿಸಿಸಿ ಬ್ಯಾಂಕಿನ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ, ಬಜರಂಗದಳದ ಜಿಲ್ಲಾ ಸಹ ಸಂಯೋಜಕ ತಮ್ಮಣ್ಣ ಬಡಿಗೇರ, ಮಹೇಶ ಸಾಲವಾಡಗಿ, ಪದ್ಮರಾಜ ಒಡೆಯರ, ಶರಣು ವಾಡೇದ, ರವಿ ಮ್ಯಾಗೇರಿ, ಅಶ್ವಿನಿಕುಮಾರ ಪಟ್ಟಣಶೆಟ್ಟಿ, ಬಸವರಾಜ ಅಳ್ಳಗಿ,…
ಪಿಎಲ್ಡಿ ಬ್ಯಾಂಕಿನ ಅವ್ಯವಹಾರ ಮತ್ತು ಬ್ಯಾಂಕಿನ ಅಧ್ಯಕ್ಷ, ಹಿರಿಯ ಅಧಿಕಾರಿಗಳ ದುರ್ನಡತೆಗೆ ಖಂಡನೆ ಮುದ್ದೇಬಿಹಾಳ: ಇಲ್ಲಿನ ಬಸ್ ನಿಲ್ದಾಣದ ಎದುರಿಗಿನ ಪಿಎಲ್ಡಿ ಬ್ಯಾಂಕ್ ನಲ್ಲಿ ಅವ್ಯವಹಾರವಾಗಿದೆ ಮತ್ತು ಬ್ಯಾಂಕಿನ ಅಧ್ಯಕ್ಷ ಮತ್ತು ಹಿರಿಯ ಅಧಿಕಾರಿಗಳ ದುರ್ನಡತೆ ಎಂದು ಆರೋಪಿಸಿ ವಿವಿಧ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಧರಣಿ ಸತ್ಯಾಗ್ರಹ ಆರಂಭಿಸಿದರು.ಈ ವೇಳೆ ಮುಖಂಡ ಹರೀಶ ನಾಟೆಕಾರ ಮಾತನಾಡಿ, ರೈತರಿಗೆ ಸಹಾಯವಾಗಬೇಕಾದ ಪಿಎಲ್ಡಿ ಬ್ಯಾಂಕ್ ನಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿವೆ. ಪ್ರತೀ ವರ್ಷ ನಬಾರ್ಡ್ ಬ್ಯಾಂಕ್ ನಿಂದ ಬರುವ ೨ಕೋಟಿ ರೂ ಅನುದಾನವನ್ನು ಅಧ್ಯಕ್ಷರು ಮತ್ತು ವ್ಯವಸ್ಥಾಪಕ ಮಂಡಳಿ ಗುಳುಂ ಮಾಡಿದ್ದಾರೆ. ಬ್ಯಾಂಕ್ ನ ಪಕ್ಕದಲ್ಲಿರುವ ವಾಣಿಜ್ಯ ಮಳಿಗೆಗಳಲ್ಲಿ ಯಾವುದೇ ಮೀಸಲಾತಿಯನ್ನು ಕಲ್ಪಿಸಿಲ್ಲ ಮತ್ತು ಟೆಂಡರ್ ಪ್ರಕ್ರೀಯೆ ಕೂಡ ನಡೆದಿಲ್ಲ. ಬ್ಯಾಂಕ್ ನ ಅಧ್ಯಕ್ಷರು ತಮ್ಮ ಅಧಿಕಾರವನ್ನು ದುರುಪಯೋಗ ಪಡೆದುಕೊಂಡು ತಮ್ಮ ಸಂಬಂಧಿಕರಿಗೆ ಮಾತ್ರ ಸಹಾಯ ಮಾಡುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಕುಮ್ಮಕ್ಕು ನೀಡುತ್ತಿದ್ದು ಈ ಬಗ್ಗೆ ತಾಲೂಕು ದಂಡಾಧಿಕಾರಿಗಳಿಗೆ ಲಿಖಿತ ಮನವಿ…
ಪುರಾಣ ಮಂಗಲ ಹಾಗೂ ಧರ್ಮಸಭೆಯಲ್ಲಿ ಡಾ.ವಿಶ್ವಾರಾಧ್ಯ ಶ್ರೀಗಳ ಅಭಿಮತ ಯಡ್ರಾಮಿ: ಪುರಾಣ-ಪ್ರವಚನದಂತಹ ಸತ್ಸಂಗದಲ್ಲಿ ಭಾಗಿಯಾಗುವುದೆಂದರೆ ಅಪರೂಪದ ಮಾನವ ಜೀವನವನ್ನು ಹಸನುಗೊಳಿಸಿಕೊಳ್ಳುವುದೇ ಆಗಿದೆ ಎಂದು ಮಾಗಣಗೇರಿ ಬ್ರಹನ್ಮಠದ ಡಾ| ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದರು.ತಾಲೂಕಿನ ಮಳ್ಳಿ ಗ್ರಾಮದ ಹಿರೇಮಠದ ಲಿಂ.ಪೂಜ್ಯ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮೀಜಿಗಳ ೨೮ನೇ ವರ್ಷದ ಪುಣ್ಯಸ್ಮರಣೆ ನಿಮಿತ್ತ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಮಂಗಳವಾರ ಆಯೋಜಿಸಿದ್ದ ಶ್ರೀ ಸಿದ್ಧಾರೂಢರ ಪುರಾಣ ಕಾರ್ಯಕ್ರಮದ ಮಂಗಲ ಹಾಗೂ ಶಿವಾನುಭವ ಧರ್ಮಸಭೆಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳ ಜೀವನ ಸಾಧನೆ ಭಕ್ತವೃಂದಕ್ಕೆ ಆದರ್ಶವಾಗಿದೆ. ತಮ್ಮ ಬದುಕಿನುದ್ದಕ್ಕೂ ಶಿಷ್ಯ ಬಳಗದ ಬಾಳನ್ನು ಬೆಳಗಿದವರು. ಪಂಚಭಾಷಾ ಪಂಡಿತರಾಗಿ ಜ್ಞಾನದ ಸಾಗರವೇ ಆಗಿದ್ದ ಸಿದ್ಧಲಿಂಗ ಶ್ರೀಗಳು ಕೇವಲ ಧಾರ್ಮಿಕ ಕರ್ಯಗಳಷ್ಟೇ ಅಲ್ಲದೇ, ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಿಕ, ಸಾಂಸ್ಕೃತಿಕ ರಂಗಗಳಲ್ಲಿಯೂ ಸಾಧನೆ ಮಾಡುವ ಮೂಲಕ ಸದ್ಯದ ಮಠಾಧೀಶರಿಗೆ ಆದರ್ಶವಾಗಿದ್ದಾರೆ ಎಂದರು.ಈ ವೇಳೆ ಇತ್ತೀಚೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಡಾ| ಸಂತೋಷ ನವಲಗುಂದ…
ಸಿಂದಗಿ: ಈ ಹಿಂದೆ ಕೇಂದ್ರದಲ್ಲಿ ಸರಕಾರ ಅಧಿಕಾರಕ್ಕೆ ಬರಲು ನಮ್ಮ ವಿವಿಧ ಬೇಡಿಕೆಗಳನ್ನು ಕೊಡುವುದಾಗಿ ತಿಳಿಸಿತ್ತು. ಆದರೆ ಹಿಂದಿನ ಸರ್ಕಾರಗಳು ಅನುಸರಿಸಿದ ನೀತಿಗಳನ್ನೇ ಬಹಳ ವೇಗವಾಗಿ ಜಾರಿಗೊಳಿಸುತ್ತಾ, ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿರುವುದು ಅತ್ಯಂತ ನೋವಿನ ವಿಚಾರ ಎಂದು ಜಿಲ್ಲಾ ಸದಸ್ಯೆ ಕಾಶಿಬಾಯಿ ಜನಗೊಂಡ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ತಾಲೂಕು ಆಡಳಿತ ಸೌಧದ ಎದುರಿಗೆ ಪ್ರತಿಭಟನೆ ನಡೆಸಿ ಮಾತನಾಡಿ ಅವರು, ಪ್ರಸ್ತುತ ಆಧುನಿಕ ಸಮಾಜದಲ್ಲಿ ಪ್ರತಿಯೊಂದು ವಸ್ತುವಿನ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಅಗತ್ಯ ವಸ್ತುಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. ಕಾರಣ ಸರಕಾರ ಬೇಗ ಎಚ್ಚೆತ್ತುಕೊಂಡು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.ಹೊಸ ಪಿಂಚಣಿ ಯೋಜನೆ ವಿರೋಧಿಸಿ, ಹಳೇ ಪಿಂಚಣಿ ಯೋಜನ ಪುನರ್ ಸ್ಥಾಪಿಸಬೇಕೆಂಬ ಬೇಡಿಕೆಯನ್ನು ಕಡೆಗಣಿಸಲಾಗುತ್ತಿದೆ. ಇನ್ನು ಗ್ರಾಮೀಣ ಭಾಗದ ಕೃಷಿ ಕಾರ್ಮಿಕರು, ಕಟ್ಟಡ ಹಾಗೂ ನಿರ್ಮಾಣ ಕಾರ್ಮಿಕರು, ಅಸಂಘಟಿತ ಕಾರ್ಮಿಕರ ಸ್ಥಿತಿ ಶೋಚನೀಯವಾಗಿದೆ. ಇದರಿಂದ ಡಿ.೧೫-೨೧ರವರೆಗೆ ದೇಶವ್ಯಾಪ್ತಿ ಪ್ರತಿಭಟನಾ ಸಪ್ತಾಹಕ್ಕೆ ಕರೆ ನೀಡಲಾಗಿದೆ.ಇದೇ ಸಂದರ್ಭದಲ್ಲಿ ಮನವಿ ಸ್ವೀಕರಿಸಿ ಶಾಸಕ ಅಶೋಕ ಮನಗೂಳಿ ಮಾತನಾಡಿ,…
ಸಿಂದಗಿ: ವಿದ್ಯಾರ್ಥಿಗಳು ಮಹಾವಿದ್ಯಾಲಯದಲ್ಲಿ ದೊರೆಯುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾಧ್ಯಾಪಕರ ಉತ್ತಮ ಮಾರ್ಗದರ್ಶನದಲ್ಲಿ ಅಧ್ಯಯನ ಮಾಡಬೇಕು ಎಂದು ಸಂಸ್ಥೆಯ ಅಧ್ಯಕ್ಷ ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಅಂಗ ಸಂಸ್ಥೆಯಾದ ಸಿ.ಎಂ. ಮನಗೂಳಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಮಹಾವಿದ್ಯಾಯಲದಲ್ಲಿ ನಡೆದ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನ ರೂಪಿಸಿಕೊಳ್ಳಲು ಪದವಿ ಹಂತದ ಶಿಕ್ಷಣವು ಸುಭದ್ರವಾದ ತಳಪಾಯ. ಆದ್ದರಿಂದ ವಿದ್ಯಾರ್ಥಿಗಳು ನಿರಂತರ ಓದಿನತ್ತ ಚಿತ್ತ ಹರಿಸಬೇಕು ಎಂದರು.ಈ ವೇಳೆ ಕಾರ್ಯಕ್ರಮದ ಮುಖ್ಯ ಅತಿಥಿ, ನಿವೃತ್ತ ಪ್ರಾಧ್ಯಾಪಕ ಬಿ.ಎನ್. ಪಾಟೀಲ ಇಬ್ರಾಹಿಂಪೂರ ಮಾತನಾಡಿ, ವಿದ್ಯಾರ್ಥಿಗಳಿಗೆ ಓದಿನ ಮೇಲಿನ ಶ್ರದ್ಧೆ ಹೆಚ್ಚಾಗಬೇಕಾದರೆ ಸಂತರ, ಶರಣರ, ಸತ್ಪುರುಷರ ಬದುಕಿನ ಜೀವನ ಚರಿತ್ರೆಗಳನ್ನು ಅರಿತುಕೊಂಡು ಅವರ ತತ್ವಾದರ್ಶಗಳನ್ನು ನಮ್ಮ ಬದುಕಿನಲ್ಲಿ ಮೈಗೂಡಿಸಿಕೊಂಡಾಗ ಮಾತ್ರ ಸಾಧ್ಯವಾಗುತ್ತದೆ ಎಂದು ಕಿವಿಮಾತು ಹೇಳಿದರು.ಇದೇ ಸಂದರ್ಭದಲ್ಲಿ ಶ್ರೀಕಾಂತ ಕೆಂಧೂಳಿ, ಪ್ರಾಚಾರ್ಯ ಡಾ.ಬಿ.ಜಿ.ಪಾಟೀಲ ಮಾತನಾಡಿದರು.ಕಾರ್ಯಕ್ರಮವನ್ನು ಸಾಂಸ್ಕೃತಿಕ ವಿಭಾಗದ…
