Author: editor.udayarashmi@gmail.com

ಮುದ್ದೇಬಿಹಾಳ: ತಾಲೂಕಿನ ನಾಗರಬೆಟ್ಟ ಗ್ರಾಮದ ಸರಕಾರಿ ಗುಡ್ಡಗಳ ಸರ್ವೆ ನಂ-೫೧ ಹಾಗೂ ೮೯ ಇವುಗಳಿಗೆ ಸಂಬಂಧಿಸಿದಂತೆ ಸರ್ಕಾರದ ಗೆರೆಯ ಕೆಳಗಿರುವ ವ್ಯಕ್ತಿಗಳ ಹೆಸರುಗಳನ್ನು ಕೈಬಿಡುವಂತೆ ಮತ್ತು ಕೆಲ ರೈತರ ಜಮೀನುಗಳಿಗೆ ರಸ್ತೆ ಮಾಡಿಕೊಡುವ ಬೇಡಿಕೆಗಳನ್ನು ಮುಂದಿಟ್ಟು ನಾಗರಬೆಟ್ಟ ಗ್ರಾಮದ ರೈತರು ಸೋಮವಾರ ಅಹೋರಾತ್ರಿ ಧರಣಿ ಆರಂಭಿಸಿದರು.ಈ ವೇಳೆ ತಾಲೂಕು ರೈತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಎಂ.ಎಸ್.ಸಿದರೆಡ್ಡಿ ಮಾತನಾಡಿ, ನಮ್ಮ ಗ್ರಾಮದ ಎರಡೂ ಗುಡ್ಡಗಳ ಸಮಸ್ಯೆಯನ್ನು ಬಗೆಹರೆಸುವಂತೆ ಈಗಾಗಲೇ ತಹಶೀಲ್ದಾರಗೆ ಮನವಿ ಪತ್ರ ಸಲ್ಲಿಸಿದ್ದೇವೆ. ಮತ್ತು ಸಮಸ್ಯೆ ಬಗೆಹರೆಯದಿದ್ದರೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಈ ಮೊದಲೇ ತಿಳಿಸಿದ್ದರೂ ನಮ್ಮ ಸಮಸ್ಯೆ ಬಗೆಹರೆದಿಲ್ಲ. ಹಾಗಾಗಿ ಧರಣಿ ಆರಂಭಿಸಿದ್ದೇವೆ. ಅಧಿಕಾರಿಗಳು ಕೇವಲ ಜನ ಪ್ರತಿನಿಧಿಗಳ ಮಾತನ್ನು ಕೇಳುತ್ತಾರೆ. ರೈತರ ಕಷ್ಟಕ್ಕೆ ಸ್ಪಂದಿಸುವದಿಲ್ಲ ಎಂಬುದು ಮತ್ತೊಮ್ಮೆ ಖಚಿತವಾಗಿದೆ. ಕಳೆದ ಕೆಲ ವರ್ಷಗಳ ಹಿಂದೆ ಬಸರಕೋಡ ಗ್ರಾಮದಲ್ಲಿ ಇಂಥದ್ದೇ ಸಮಸ್ಯೆ ಇದ್ದ ಜುಮೀನೊಂದನ್ನ ಜನಪ್ರತಿನಿಧಿಯ ಆಜ್ಞೆಯಂತೆ ಬದಲಾಯಿಸಿದ್ದಾರೆ. ಆದರೆ ನಮ್ಮ ಮನವಿಗೆ ಯಾವುದೇ ಪ್ರತಿಕ್ರಿಯೆ ಇಲ್ಲ. ಇದು ಸಧ್ಯದ…

Read More

ಚಡಚಣ: ವಿದ್ಯಾರ್ಥಿಗಳು ಅಪರಾಧ ಪ್ರಕರಣಗಳಲ್ಲಿ ತೊಡಗದೆ ಕಲಿಕೆ ಕೇಂದ್ರವಾಗಿಸಿಕೊಳ್ಳಬೇಕು. ಅಪರಾಧ ಕೃತ್ಯಗಳಲ್ಲಿ ಶಾಮೀಲಾದರೆ ಕಠಿಣ ಶಿಕ್ಷೆ ತಪ್ಪಿದ್ದಲ್ಲ ಎಂದು ಪಟ್ಟಣದ ಜನ ಸ್ನೇಹಿ ಪೊಲೀಸ್ ಠಾಣೆಯ ಪಿಎಸ್ಐ ಸಂಜೀವ ಕಲ್ಲೂರ ಎಚ್ಚರಿಸಿದರು.ಮಂಗಳವಾರ ಪಟ್ಟಣದ ಎಮ್ ಇ ಎಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಅಪರಾಧ ತಡೆ ಮಾಸಾಶನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು.ಎಮ್ ಇ‌ಎಸ್ ಶಾಲೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಿ ಸಿ ಗಚ್ಚಿನಕಟ್ಟಿ ಮಾತನಾಡಿ, ಮಕ್ಕಳು ಕಾನೂನಿನಡಿ ಯಾವುದೇ ತಪ್ಪು ಮಾಡಿದರೆ ಅದು ಅಪರಾಧವಾಗಿ ಪರಿಗಣಿಸಲಾಗುತ್ತದೆ. ಆದ್ದರಿಂದ ತಪ್ಪು ಎಸಗುವ ಮುನ್ನ ಎಚ್ಚರದಿಂದಿರಬೇಕು ಎಂದು ಕಿವಿಮಾತು ಹೇಳಿದರು.ಈ ಸಂದರ್ಭದಲ್ಲಿ ಆಕಾಶ ಭೂಸನೂರ, ಹಿರೇಮಠ ಸರ್. ಮಾಳಿ ಸರ್, ಬೋಧಕ ವರ್ಗ ಮತ್ತು ಪೋಲಿಸ್ ಸಿಬ್ಬಂದಿ ಉಪಸ್ಥಿತರಿದ್ದರು.

Read More

ಇಂಡಿ: ವಿದ್ಯಾರ್ಥಿಗಳ ಮೇಲೆ ಹಲ್ಲೆ, ದೌರ್ಜನ್ಯ ನಡೆದಾಗ ಸುಮ್ನೆ ಕೂಡಬಾರದು, ಕೂಡಲೇ ಪಾಲಕರ ಅಥವಾ ಶಿಕ್ಷಕರ ಗಮನಕ್ಕೆ ತರಬೇಕು, ಕಾನೂನಿನ ಮೂಲಕ ಕೆಟ್ಟ ದುಷ್ಟ ವ್ಯಕ್ತಿಗಳಿಗೆ ಸರಿಯಾದ ಬುದ್ದಿ ಕಲಿಸಲು ಸಾಧ್ಯ ಎಂದು ಪಿಎಸ್ಐ ರೇಣುಕಾ ಹಳ್ಳಿ ಹೇಳಿದರು.ಪಟ್ಟಣದ ಗಾಂಧಿ‌ ಬಜಾರದಲ್ಲಿರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ನಗರ ಪೊಲೀಸ್ ಠಾಣಾ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಕಾನೂನಿನ ಬಗ್ಗೆ ಗೌರವ ಹಾಗೂ ಪ್ರಸ್ತುತ ಸಮಾಜದಲ್ಲಿ ಸ೦ಭವಿಸುತ್ತಿರುವ ಘಟನೆಗಳ ಬಗ್ಗೆ ಮುಂಜಾಗ್ರತೆ ವಹಿಸಿದರೆ ನಡೆಯುತ್ತಿರುವ ಅಪರಾಧಗಳನ್ನು ತಡೆಗಟ್ಟಲು ಸಾಧ್ಯ ಎಂದು ಹೇಳಿದರು.ವಿದ್ಯಾರ್ಥಿ ಸಮೂಹದ ಮೇಲೆ ಅಪರಾಧ ತಡೆಗಟ್ಟುವ ಗುರುತರ ಜವಾಬ್ದಾರಿ ಇದ್ದು, ಮೊದಲು ವಿದ್ಯಾರ್ಥಿಗಳು ಜಾಗೃತಿಗೊಂಡು ಸಾರ್ವಜನಿಕರಿಗೆ ತಿಳಿ ಹೇಳುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.ಮುಖ್ಯಗುರು ಯು ಎಚ್ ಚವ್ಹಾಣ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಇನ್ನು ಪಿಎಸ್ ಐ ಶಶಿಕಲಾ ಹಾಗೂ ಎ ಎಸ್ ಐ…

Read More

ದೇವರಹಿಪ್ಪರಗಿ: ಧರ್ಮಗಳು, ಆಚರಣೆಗಳು ಬೇರೆ ಬೇರೆ ಆಗಿರಬಹುದು ಆದರೆ ಎಲ್ಲ ಧರ್ಮಗಳ ತಿರುಳು ಮಾನವ ಕಲ್ಯಾಣವಾಗಿದೆ ಎಂದು ರಂಭಾಪುರಿ ಪೀಠದ ಜಗದ್ಗುರು ಡಾ.ಪ್ರಸನ್ನ್ ರೇಣುಕ ವೀರಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯರು ಹೇಳಿದರು.ಪಟ್ಟಣದ ವೀರಭದ್ರೇಶ್ವರರ ೧೧ನೇ ವರ್ಷದ ಕಾರ್ತಿಕ ದೀಪೋತ್ಸವದ ಅಂಗವಾಗಿ ಸೋಮವಾರ ಜರುಗಿದ ಧರ್ಮಸಭೆಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ಸರ್ವಕಾಲದಲ್ಲಿ, ಸರ್ವ ಸಮುದಾಯಗಳಿಗೆ ಬೆಳಕು ನೀಡುವುದು ಯಾವುದಾದರೂ ಇದ್ದರೆ ಅದುವೇ ಧರ್ಮ. ನಾವು ನುಡಿದಂತೆ ನಡೆಯುವುದೇ ಧರ್ಮ. ನುಡಿಯುವುದು ಒಂದು, ನಡೆಯುವುದು ಇನ್ನೊಂದು ಆದಾಗ ಸಮಾಜದ ಎಲ್ಲ ರಂಗಗಳಲ್ಲಿ ಅವ್ಯವಸ್ಥೆ, ಅರಾಜಕತೆ, ಅತೃಪ್ತಿಯ ಮನೋಭಾವ ಕಂಡು ಬರುತ್ತದೆ. ಧರ್ಮ ಎನ್ನುವುದು ಹಸಿದವನಿಗೆ ಅನ್ನ, ಬಾಯಾರಿದವನಿಗೆ ನೀರು, ಪಕ್ಷಿಗೆ ರೆಕ್ಕೆ, ಕುರುಡನಿಗೆ ಕಣ್ಣು ಇದ್ದ ಹಾಗೇ, ಅಂತೆಯೇ ಭೂಮಿತಾಯಿ, ಗಾಳಿ, ನೀರುಗಳಿಗೆ ಒಂದು ಧರ್ಮ ಹಾಗೂ ಜವಾಬ್ದಾರಿಯಿದೆ. ಒಂದು ವೇಳೆ ಜವಾಬ್ದಾರಿ ಮರೆತು ಭೂಮಿ ಮೈಗೊಡವಿದರೆ, ಗಾಳಿ ಬಿರುಗಾಳಿಯಾದರೆ, ನೀರು ಪ್ರವಾಹವಾದರೆ ನಮ್ಮ ಸ್ಥಿತಿ ಏನಾಗಬಹುದು? ಆದ್ದರಿಂದ ನಮ್ಮ ಧರ್ಮ, ಜವಾಬ್ದಾರಿ ಅರಿತು…

Read More

ವಿಜಯಪುರ: ಮಕ್ಕಳಿಗೆ ಪಾಠಗಳ ಜೊತೆಗೆ ಆಟವೂ ತುಂಬಾ ಮುಖ್ಯ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೋಳ್ಳುವುದರಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಡರಾಗಲು ಸಾಧ್ಯ ಎಂದು ಸೈಕ್ಲಿಂಗ್ ಅಮೇಚೂರ ಸಂಘದ ರಾಜ್ಯಾಧ್ಯಕ್ಷ ರಾಜು ಬಿರಾದಾರ ಹೇಳಿದ್ದಾರೆ.ನಗರದ ಪ್ರತಿಷ್ಟಿತ ಬಿಎಲ್‌ಡಿಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.ಕ್ರೀಡೆಗಳಲ್ಲಿಯೂ ಶ್ರಮವಹಿಸಿ ಶ್ರದ್ದೆಯಿಂದ ತೊಡಗಿಸಿಕೊಂಡರೆ ರಾಷ್ಟ್ರೀಯ ಅಷ್ಟೇ ಅಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಸಾಧನೆ ಮಾಡಿ ಜೀವನ ರೂಪಿಸಿಕೊಳ್ಳಬಹುದು. ಅಲ್ಲದೇ, ದೇಶದ ಕೀರ್ತಿ ಪತಾಕೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿಯಬಹುದು. ಅಲ್ಲದೆ ಕ್ರೀಡಾಪಟುಗಳಿಗೆ ಸರಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಉದ್ಯೋಗ ಮಿಸಲಾತಿ ನೀಡಲಾಗುತ್ತಿದೆ ಎಂದು ತಿಳಿಸಿದ ಅವರು, ಕ್ರೀಡಾ ಸಾಧಕರ ಸಾಧನೆ ಮತ್ತು ಕೊಡುಗೆಯನ್ನು ಉದಾಹರಣೆ ಸಹಿತ ವಿವರಿಸಿದರು.ಬಿ ಎಲ್ ಡಿ ಇ ಸಂಸ್ಥೆಯ ಕ್ರೀಡಾ ನಿರ್ದೇಶಕ ಪ್ರೊ. ಎಸ್. ಎಸ್. ಕೋರಿ ಅವರು ಮಕ್ಕಳ ಕವಾಯತ್ ನಮನವನ್ನು ಸ್ವೀಕರಿಸಿದರು. ಶಾಲಾ ಆಡಳಿತಾಧಿಕಾರಿ ಕೌಶಿಕ್ ಬ್ಯಾನರ್ಜಿ…

Read More

ವಿಜಯಪುರ: ಕರ್ನಾಟಕ ರಾಜ್ಯ ಟೇನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ವತಿಯಿಂದ ಉತ್ತರ ಪ್ರದೇಶದಲ್ಲಿ ಡಿ.೨೭ ರಿಂದ ೩೦ ರವರೆಗೆ ಜರಗುವ ೨೦೨೩ನೇ ಸಾಲಿನ ೨ನೇ ಜ್ಯೂನಿಯರ್ ನ್ಯಾಷನಲ್ ಟೆನಿಸ್‌ ಬಾಲ್ ಕ್ರಿಕೆಟ್ ಚಾಂಪಿಯನ್‌ಶಿಪ್ ನಡೆಯುತ್ತಲಿದ್ದು, ಅಭಿಷೇಕ ತಂ. ವಾಸು ಚವ್ಹಾಣ ಈತನು ನಮ್ಮ ಅಸೋಸಿಯೇಶನ್ ವತಿಯಿಂದ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾನೆಂದು ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷೆ ಶಾಹೀದಾಬೇಗಂ, ಕಾರ್ಯದರ್ಶಿ ಡಾ. ಅಶೋಕಕುಮಾರ ಜಾಧವ ಹಾಗೂ ಕೋಟ್ ಸಲೀಮ ಬೇಪಾರಿ, ಮ್ಯಾನೇಜರ್ ಮೋಹನ ಚವ್ಹಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಎಬಿವ್ಹಿಪಿ ೬೯ನೇ ರಾಷ್ಟ್ರೀಯ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮೀತ್ ಷಾ ಸ್ಪಷ್ಠನೆ ವಿಜಯಪುರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ೬೯ನೇ ರಾಷ್ಟ್ರೀಯ ಅಧಿವೇಶನವು ದೆಹಲಿಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಸಲಾಯಿತು ಎಂದು ಕರ್ನಾಟಕ ಉತ್ತರ ಪ್ರಾಂತದ ರಾಜ್ಯ ಕಾರ್ಯದರ್ಶಿ ಸಚೀನ ಕುಳಗೇರಿ ತಿಳಿಸಿದರು.ಈ ಕುರಿತು ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.ವೈಭವದ ರಾಷ್ಟ್ರೀಯ ಅಧಿವೇಶನದಲ್ಲಿ ಭಾರತಾದ್ಯಂತದಿಂದ ೧೦,೦೦೦ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು. ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷರಾಗಿ ರಾಜಶರಣ್ ಶಾಯಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಯಜ್ಞವಲ್ಕ್ಯ ಶುಕ್ಲಾ ರವರು ಮರು ಆಯ್ಕೆಯಾದರು ಎಂದು ತಿಳಿಸಿದರು.೬೯ನೇ ರಾಷ್ಟ್ರೀಯ ಅಧಿವೇಶನದ ಉದ್ಘಾಟನೆಯನ್ನು ಭಾರತ ಸರ್ಕಾರದ ಗೃಹ ಮಂತ್ರಿ ಅಮಿತ್ ಷಾ ಉದ್ಘಾಟಿಸಿ, ಜಮ್ಮು ಮತ್ತು ಕಾಶ್ಮೀರ ಭಾರತ ದೇಶದ ಅವಿಭಾಜ್ಯ ಅಂಗವೆಂದು ವಿದ್ಯಾರ್ಥಿ ಪರಿಷತ್ ಮೊದಲಿನಿಂದಲೂ ಹೇಳಿಕೊಂಡು ಬಂದಿತ್ತು. ಆದರೆ ಜಮ್ಮು ಮತ್ತು ಕಾಶ್ಮೀರ ಮಾತ್ರವಲ್ಲದೇ ಪಿ.ಓ.ಕೆ.ಯೂ ಕೂಡಾ ನಮ್ಮದೇ ಎಂದು ಸ್ಪಷ್ಠಪಡಿಸಿದ್ದಾರೆ ಎಂದರು.ಪತ್ರಿಕಾ ಗೋಷ್ಠಿಯಲ್ಲಿ ವಿಭಾಗ ಸಹ ಪ್ರಮುಖ ಅಮೀತಕುಮಾರ…

Read More

ವಿಜಯಪುರ: ಗುಮ್ಮಟ ನಗರಿಯಲ್ಲಿ ಈ ಬಾರಿ ನಡೆಯುತ್ತಿರುವ ವೃಕ್ಷೊಥಾನ್ ಹೆರಿಟೇಜ್ ರನ್-2023ಕ್ಕೆ 8200ಕ್ಕೂ ಹೆಚ್ಚು ಜನರು ತಮ್ಮ ಹೆಸರು ನೋಂದಾಯಿಸಿದ್ದು, ಡಿ. 23 ರಂದು ಶನಿವಾರ ಸ್ಥಳದಲ್ಲಿಯೇ ಹೆಸರು ನೋಂದಾವಣಿಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ. ಅಷ್ಟೇ ಅಲ್ಲ, ನಾನಾ ವಿಭಾಗಗಳಲ್ಲಿ ನಡೆಯಲಿರುವ ಈ ಓಟದ ರೂಟ್ ಮ್ಯಾಪ್ ಕೂಡ ಸಿದ್ಧವಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ, ಜನಜಾಗೃತಿ ಹಾಗೂ ಶತಮಾನದ ಸಂತ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಗೌರವಾರ್ಥ ಆಯೋಜಿಸಲಾಗಿರುವ ಈ ಓಟಕ್ಕೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಪುರುಷ ಮತ್ತು ಮಹಿಳಾ ಓಟಗಾರರು ಸೇರಿದಂತೆ ಈ ಬಾರಿ 8200ಕ್ಕೂ ಹೆಚ್ಚು ಓಟಗಾರರು ಆನಲೈನ್ ಮೂಲಕ ಹೆಸರು ನೋಂದಾಯಿಸಿದ್ದಾರೆ. 21 ಕಿ. ಮಿ. ವಿಭಾಗದಲ್ಲಿ 525 ಜನ, 10 ಕಿ. ಮೀ. ವಿಭಾಗದಲ್ಲಿ 250 ಜನ, 5 ಕಿ. ಮೀ. ವಿಭಾಗದಲ್ಲಿ 1200 ಜನ, 3.50 ಕಿ. ಮೀ ವಿಭಾಗದಲ್ಲಿ…

Read More

ವಿಜಯಪುರ: ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಹಾಗೂ ಅರಣ್ಯೀಕರಣಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಕನಸಿನ ವೃಕ್ಷೋಥಾನ್ ಹೆರಿಟೇಜ್ ರನ್-2023ನ್ನು ಯಶಸ್ವಿಗೊಳಿಸಲು ಎಲ್ಲರೂ ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ.ವೃಕ್ಷೋಥಾನ್ ಹೆರಿಟೇಜ್ ರನ್-2023ರ ಅಂಗವಾಗಿ ಇಂದು ಮಂಗಳವಾರ ನಗರದ ಐತಿಹಾಸಿಕ ಗಗನ ಮಹಲ್ ನಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರೌಢಶಾಲೆಗಳ ಬಾಲಕ ಮತ್ತು ಬಾಲಕಿಯರಿಗಾಗಿ ಆಯೋಜಿಸಿದ್ದ ಐತಿಹಾಸಿಕ ಸ್ಮಾರಕಗಳ ಹಾಗೂ ಪರಿಸರ ರಕ್ಷಣೆ ಕುರಿತು ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಸ್ವತಃ ಗೋಳಗುಮ್ಮಟ ಚಿತ್ರ ಬಿಡಿಸುವ ಮೂಲಕ ಅವರು ಉದ್ಘಾಟಿಸಿ ಮಾತನಾಡಿದರು.ವಿಜಯಪುರ ಜಿಲ್ಲೆಯಲ್ಲಿ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಸ್ಮಾರಕಗಳು, ದೇವಾಲಯಗಳು, ಜೈನ ಬಸದಿಗಳಿವೆ. ಮುಂದಿನ ಪೀಳಿಗೆಗಾಗಿ ಇವುಗಳನ್ನು ಪೋಷಿಸಿ ರಕ್ಷಣೆ ಮಾಡುವುದ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ನಮ್ಮ ಜಿಲ್ಲೆಯಲ್ಲಿ ಅರಣ್ಯೀಕರಣದ ಕೊರತೆ ಇರುವ ಹಿನ್ನೆಲೆಯಲ್ಲಿ ಸಚಿವ ಎಂ. ಬಿ. ಪಾಟೀಲ ಅವರು ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ಈಗಾಗಲೇ ಮರಗಳನ್ನು ಬೆಳೆಸಿದ್ದಾರೆ.…

Read More